Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?

Public TV
Last updated: November 22, 2019 7:33 pm
Public TV
Share
2 Min Read
Nithyananda
SHARE

ನವದೆಹಲಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾನೆ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ನಿತ್ಯಾನಂದ ದೇಶದಲ್ಲಿ ಅಡಗಿ ಕುಳಿತಿರಬಹುದು ಅಥವಾ ನೇಪಾಳ ಮೂಲಕ ಭಾರತವನ್ನು ತೊರೆದಿರಬಹುದು ಎಂದು ವರದಿಗಳು ತಿಳಿಸಿವೆ.

ನಿತ್ಯಾನಂದನಿಗೆ ಸೇರಿದ ಅಹಮದಾಬಾದ್‍ನ ಆಶ್ರಮದಿಂದ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಅಪ್ರಾಪ್ತ ಮಕ್ಕಳನ್ನು ಅಪಹರಿಸಲಾಗಿದೆ ಎಂದು ಮಕ್ಕಳ ಪೋಷಕರು ಗುಜರಾತ್ ಪೊಲೀಸರು ದೂರು ನೀಡಿದ್ದಾರೆ. ಈ ಸಂಬಂಧ ನಿತ್ಯಾನಂದನ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅಪಹರಣ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.  ಇದನ್ನೂ ಓದಿ: ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ, ಇದು ನನ್ನ ಬದುಕು – ತಂದೆಗೆ ಮಗಳ ಖಡಕ್ ಉತ್ತರ

nithyananda 1

2010ರಲ್ಲಿ ನಿತ್ಯಾನಂದನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದ ಸಂಬಂಧ 2011ರಲ್ಲಿ ನಿತ್ಯಾನಂದನ ಪಾಸ್‍ಪೋರ್ಟ್ ವಶಕ್ಕೆ ಪಡೆಯಲಾಗಿತ್ತು. ಆದಾಗ್ಯೂ, ಧ್ಯಾನ ಮತ್ತು ಯೋಗ ಶಿಬಿರಗಳನ್ನು ನಡೆಸಲು ಮಾನಸರೋವರ್ ಹಾಗೂ ಇತರ ಸ್ಥಳಗಳಿಗೆ ಪ್ರಯಾಣಿಸಲು ನಿತ್ಯಾನಂದ ತನ್ನ ಪಾಸ್‍ಪೋರ್ಟ್ ಕೇಳಿದ್ದ. ಇದರಿಂದಾಗಿ ಪಾಸ್‍ಪೋರ್ಟ್ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ನಾನು ಹೇಳಿದ್ದಕ್ಕೆ ತಡವಾಗಿ ಉದಯಿಸಿದ – ಸೂರ್ಯನಿಗೆ ನಿತ್ಯಾನಂದ ಆರ್ಡರ್

ವರದಿಗಳ ಪ್ರಕಾರ, ನಿತ್ಯಾನಂದ 2018ರ ಆಗಸ್ಟ್  ನಿಂದ ಯಾವುದೇ ಆಶ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ನೇಪಾಳದ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ನಿತ್ಯಾನಂದನ ಪಾಸ್‍ಪೋರ್ಟ್ ಅವಧಿ ಸೆಪ್ಟೆಂಬರ್ 2018ರಲ್ಲಿ ಮುಕ್ತಾಯಗೊಂಡಿದ್ದು, ಅತ್ಯಾಚಾರ ಪ್ರಕರಣದಿಂದಾಗಿ ನವೀಕರಿಸಲಾಗಿಲ್ಲ. ಹೀಗಾಗಿ ನೇಪಾಳದ ಮೂಲಕ ಈಕ್ವೆಡಾರ್‍ಗೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಈ ಮಧ್ಯೆ ತನ್ನ ಯೂಟ್ಯೂಬ್ ಚಾನೆಲ್‍ನಲ್ಲಿ ಕಾಣಿಸಿಕೊಂಡ ನಿತ್ಯಾನಂದ, ಭಾರತದಲ್ಲಿಯೇ ಇದ್ದೇನೆ ಎಂದು ಹೇಳಿದ್ದಾನೆ. ಆದರೆ ಸ್ಥಳದ ಬಗ್ಗೆ ಸ್ಪಷ್ಟನೆ ನೀಡಿಲ್ಲ.

NITHYANANDA 3

2010ರಲ್ಲಿ ನಿತ್ಯಾನಂದನನ್ನು ಒಳಗೊಂಡ ಸೆಕ್ಸ್ ಟೇಪ್ ಬಿಡುಗಡೆಯಾದಾಗ ಆತನು ಪರಾರಿಯಾಗಿದ್ದ. ಆದರೆ ಕೆಲ ದಿನಗಳ ಬಳಿಕ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪತ್ತೆಯಾಗಿದ್ದ. ಹೀಗಾಗಿ ಈಗಲೂ ಭಾರತದಲ್ಲಿರಬಹುದು ಎಂಬ ಊಹಾಪೋಹಗಳಿಗೆ ಕೇಳಿ ಬರುತ್ತಿವೆ.

ನಿತ್ಯಾನಂದನ ಆಶ್ರಮಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವುದು ಇದೇ ಮೊದಲಲ್ಲ. 2008ರಲ್ಲಿ ಅಪ್ರಾಪ್ತ ಬಾಲಕನೊಬ್ಬ ಅನಾರೋಗ್ಯಕ್ಕೆ ಬಳಲುತ್ತಿದ್ದಾಗ ಆತನನ್ನು ನಿತ್ಯಾನಂದನ ಅನುಯಾಯಿಗಳು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಬಾಲಕ, ತನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಎಂದು ವೈದ್ಯರಿಗೆ ಮಾಹಿತಿ ನೀಡಿದ್ದ.

Swami Nithyananda

ನಿತ್ಯಾನಂದ ಪ್ರಸ್ತುತ ಎಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಗುರುವಾರ ವಿದೇಶಾಂಗ ಸಚಿವಾಲಯ ಹೇಳಿದೆ. ಆತನ ಬಗ್ಗೆ ಗುಜರಾತ್ ಪೊಲೀಸರಿಂದ ಹಾಗೂ ಗೃಹ ವ್ಯವಹಾರ ಸಚಿವಾಲಯದಿಂದ (ಎಂಎಚ್‍ಎ) ಯಾವುದೇ ಮಾಹಿತಿ ಬಂದಿಲ್ಲ. ಅಹಮದಾಬಾದ್‍ನ ಹೊರವಲಯದಲ್ಲಿರುವ ನಿತ್ಯಾನಂದನ ಹಿರಾಪುರ ಆಶ್ರಮದಿಂದ ಮೂವರು ಅಪ್ರಾಪ್ತ ಮಕ್ಕಳನ್ನು (ಒಬ್ಬ ಹುಡುಗ ಮತ್ತು ಇಬ್ಬರು ಹುಡುಗಿಯರು) ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ. ನಿತ್ಯಾನಂದ ವಿರುದ್ಧ ಗುಜರಾತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

TAGGED:Kailash ParvatPassportPublic TVSwami Nithyanandaಈಕ್ವೇಡಾರ್ನಿತ್ಯಾನಂದನೇಪಾಳಪಬ್ಲಿಕ್ ಟಿವಿಪಾಸ್‍ಪೋರ್ಟ್ಬಿಡದಿ
Share This Article
Facebook Whatsapp Whatsapp Telegram

You Might Also Like

Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
4 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
5 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
5 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
6 hours ago
TIGER
Chamarajanagar

ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

Public TV
By Public TV
6 hours ago
Ramagara Murder
Court

ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?