ಶ್ರೀನಗರ: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾನುವಾರ (ಅ.24) ನಡೆದ ಪಂದ್ಯದಲ್ಲಿ ಭಾರತ ಸೋತಿದ್ದಕ್ಕೆ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಕೆಲವರು ಕಾಶ್ಮೀರಿ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.
ಪಂಜಾಬ್ನ ಸಂಗ್ರೂರ್ ಜಿಲ್ಲೆಯ ಭಾಯ್ ಗುರ್ದಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಮೊಹಲಿ ಜಿಲ್ಲೆಯ ಖಾರರ್ನ ರಾಯತ್ ಬಹರ ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
- Advertisement 2
- Advertisement 3
ಘಟನೆಯಲ್ಲಿ ರಾಯತ್ ಬಹರ ವಿವಿಯ ನಾಲ್ವರು ಸೇರಿದಂತೆ 10 ಕಾಶ್ಮೀರಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆಂದು ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಾಸ್ಟೆಲ್ನಲ್ಲಿ ಹಲ್ಲೆ ನಡೆದ ವೇಳೆ ಮುರಿದ ಕುರ್ಚಿಗಳು, ಬೆಡ್ಗಳು ಹಾಗೂ ಗಾಯಗೊಂಡ ವಿದ್ಯಾರ್ಥಿಗಳಿರುವ ದೃಶ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಲಾಗಿದೆ.
- Advertisement 4
ಟಿ20 ವಿಶ್ವಕಪ್ ಪಂದ್ಯಾವಳಿ ನಡೆಯುತ್ತಿದ್ದು, ಭಾನುವಾರ ಭಾರತ-ಪಾಕಿಸ್ತಾನ ನಡುವೆ ಮ್ಯಾಚ್ ನಡೆಯಿತು. ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಹೀನಾಯ ಸೋಲನುಭವಿಸಿತು. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಪಾಕಿಸ್ತಾನಕ್ಕೆ 10 ವಿಕೆಟ್ ಜಯ