Tag: ಕೆನಡಾ

  • ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ಬಂದ್‌! ಪರಿಣಾಮವೇನು?

    ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ಬಂದ್‌! ಪರಿಣಾಮವೇನು?

    ಸಾಮಾನ್ಯವಾಗಿ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ದೇಶಗಳಿಗೆ ತೆರಳಲು ಚಿಂತಿಸುತ್ತಾರೆ. ಅಂತಹ ದೇಶಗಳ ಪೈಕಿ ಅಮೆರಿಕ, ಕೆನಡಾ (Canada) ಸೇರಿದಂತೆ ಇನ್ನಿತರ ದೇಶಗಳು ಈ ಪಟ್ಟಿಯಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅಮೆರಿಕ ಸರ್ಕಾರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಂತಹ ವೀಸಾ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಏನಿದರ ಹಿಂದಿನ ಕಾರಣ ಹಾಗೂ ಈ ವೀಸಾ ಸಂಖ್ಯೆಗಳ ಕಡಿಮೆ ಮಾಡುವುದರಿಂದ ಭಾರತೀಯ ವಿದ್ಯಾರ್ಥಿಗಳ ಮೇಲಾಗುವ ಪರಿಣಾಮವೇನು? ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

    ಕಳೆದ ವರ್ಷ 2024ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಭಾರತೀಯರಿಗೆ 64,008 ವಿದ್ಯಾರ್ಥಿ ವೀಸಾಗಳನ್ನು (Student Visa) ನೀಡಲಾಗಿದೆ. ಅದೇ ರೀತಿ 2023ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ 1.03 ಲಕ್ಷ ವೀಸಾಗಳನ್ನು ನೀಡಲಾಗಿತ್ತು. ಕಳೆದೆರಡು ವರ್ಷಗಳಲ್ಲಿ ಭಾರತೀಯರಿಗೆ ನೀಡಿರುವ ವಿದ್ಯಾರ್ಥಿ ವೀಸಾಗಳ ತುಲನೆ ಮಾಡಿದಾಗ, ಅಮೆರಿಕ ಸರ್ಕಾರ ಶೇ.41 ರಷ್ಟು ವೀಸಾಗಳನ್ನು ತಿರಸ್ಕರಿಸಿದೆ. ಇದು ದಶಕದಲ್ಲಿ ಅತಿ ಹೆಚ್ಚು ವೀಸಾಗಳನ್ನು ತಿರಸ್ಕರಿಸಿದೆ ಎಂದು ವಿದೇಶಾಂಗ ಇಲಾಖೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಯುಕೆ, ಕೆನಡಾ ಮತ್ತು ಆಸ್ಟ್ರೇಲಿಯಾದಂತಹ ಹಲವಾರು ದೇಶಗಳು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಂತಹ ವೀಸಾ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಿವೆ. ಇದೇ ಸಮಯದಲ್ಲಿ ಅಮೆರಿಕ ಸರ್ಕಾರವು (America Government) ಕೂಡ ವಿದ್ಯಾರ್ಥಿ ವೀಸಾ ತಿರಸ್ಕರಿಸುವುದನ್ನು ಹೆಚ್ಚಿಸಿದೆ.

    VISA

    2023ರ ಅಕ್ಟೋಬರ್‌ನಿಂದ 2024ರ ಸೆಪ್ಟೆಂಬರ್‌ವರೆಗೆ ಅಮೆರಿಕ ಸರ್ಕಾರ ಒಟ್ಟು 6.79 ಲಕ್ಷ ವಿದ್ಯಾರ್ಥಿ ವೀಸಾಗಳನ್ನು ಸ್ವೀಕರಿಸಿದೆ. ಈ ಪೈಕಿ ಒಟ್ಟು 2.79 ಲಕ್ಷ ತಿರಸ್ಕರಿಸಿದೆ. ಇದಕ್ಕೂ ಮುನ್ನ 2022 ಮತ್ತು 2023ರಲ್ಲಿ ಒಟ್ಟು 6.99 ಲಕ್ಷ ಅರ್ಜಿಗಳನ್ನು ಸ್ವೀಕರಿಸಿ, 2.53 ಲಕ್ಷ ಅರ್ಜಿಗಳನ್ನು ತಿರಸ್ಕರಿಸಿತ್ತು. ಈ ಪೈಕಿ ಶೇ.36ರಷ್ಟು ಏರಿಕೆಯಾಗಿದೆ.

    ಏನಿದು F-1 ವೀಸಾ?
    F-1 ಎಂಬುದು ಶಾಲಾ ಕಾಲೇಜು ಅಥವಾ ಇನ್ನಿತರ ಅಧ್ಯಯನಕ್ಕಾಗಿ ನಿರ್ದಿಷ್ಟ ಅವಧಿಯವರೆಗೆ ಅಮೆರಿಕದಲ್ಲಿ ವಾಸಿಸಲು ಈ ವೀಸಾವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. F1 ವೀಸಾ ಎನ್ನುವುದು ವಿದೇಶಿ ವಿದ್ಯಾರ್ಥಿಗಳಿಗೆ ನೀಡಲಾಗುವ ಅಮೆರಿಕಾ ವೀಸಾ ಆಗಿದ್ದು, ಇದನ್ನು ಮುಖ್ಯವಾಗಿ ವಿದ್ಯಾರ್ಥಿಗಳು ಅಮೆರಿಕಾದಲ್ಲಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಬಳಸುತ್ತಾರೆ. ಈ ವೀಸಾ ಮೂಲಕ, ವಿದ್ಯಾರ್ಥಿಗಳು ಅಮೆರಿಕಾದಲ್ಲಿ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‍ಗಳನ್ನು ಪೂರ್ಣಗೊಳಿಸಬಹುದು. ಈ ವೀಸಾ ಅನ್ನು ಪಡೆಯಲು ವಿದ್ಯಾರ್ಥಿಗಳು ತಾವು ಸೇರ ಬಯಸುವ ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ I-20 ಫಾರ್ಮ್ ಪಡೆದು, ಆಧಾರಿತ ದಾಖಲೆಗಳನ್ನು ಸಲ್ಲಿಸಿ, ಬಳಿಕ ವೀಸಾ ಪಡೆಯಲು ಸಂದರ್ಶನ ನೀಡಬೇಕಾಗುತ್ತದೆ.

    visa

    ವೀಸಾ ನಿರಾಕರಣೆಗೆ ಕಾರಣವೇನು?
    ಕಳೆದ 2-3 ವರ್ಷಗಳಲ್ಲಿ ಕೆನಡಾ ಹಾಗೂ ಅಮೆರಿಕ ದೇಶಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಹೀಗಾಗಿ 2024ರಲ್ಲಿ ಕೆನಡಾ ಹಾಗೂ ಅಮೆರಿಕ ದೇಶಗಳು ವಿದೇಶಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೊಸ ನಿಯಮವನ್ನು ರೂಪಿಸಿಕೊಂಡಿದ್ದು, ಇಂತಿಷ್ಟು ವಿದ್ಯಾರ್ಥಿಗಳಿಗೆ ಮಾತ್ರ ವೀಸಾ ನೀಡುವಂತೆ ನಿರ್ಧರಿಸಿದ್ದು, ವಸತಿ, ಆರೋಗ್ಯ, ರಕ್ಷಣೆ ಹಾಗೂ ಸಾರ್ವಜನಿಕ ಸೇವೆಗಳ ಮೇಲಿನ ಒತ್ತಡ ನಿಯಂತ್ರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೀಸಾಗಳನ್ನು ತಿರಸ್ಕರಿಸಿದೆ.

    ಪ್ರತಿಯೊಂದು ದೇಶದಲ್ಲಿಯೂ ಹೊಸ ನಿವಾಸಿಗಳ ಒಳಹರಿವು ಹೆಚ್ಚಾದಂತೆ ದೇಶದ ಮೂಲಸೌಕರ್ಯ ಮತ್ತು ಸಂಪನ್ಮೂಲಗಳಲ್ಲಿ ಹೆಚ್ಚಿನ ಬೇಡಿಕೆ ಉಂಟಾಗುತ್ತದೆ. ಹೀಗಾಗಿ ಅಲ್ಲಿನ ಪ್ರಜೆಗಳು ಇದರ ಸಮಸ್ಯೆಯನ್ನು ಅನುಭವಿಸುವ ಪರಿಸ್ಥಿತಿ ಉಂಟಾಗುತ್ತದೆ.

    CANADA VISA

    ವಸತಿ ಬೇಡಿಕೆ:
    ಬೇರೆ ದೇಶಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾದಾಗ ಹೆಚ್ಚಿನ ಜನರಿಗೆ ವಸತಿಯ ಅವಶ್ಯಕತೆ ಇರುತ್ತದೆ. ಹೀಗಿರುವಾಗ ವಸತಿ ಕೊರತೆ, ಬಾಡಿಗೆಯಲ್ಲಿನ ಹೆಚ್ಚಳ ಹಾಗೂ ಸೂಕ್ತ ವಾಸ ಸ್ಥಳಗಳನ್ನು ಹುಡುಕುವಲ್ಲಿ ತೊಂದರೆ ಉಂಟಾಗುತ್ತದೆ.

    ಆರೋಗ್ಯ ಸೇವೆ:
    ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾದಾಗ ಆಸ್ಪತ್ರೆ, ಚಿಕಿತ್ಸೆ ಹಾಗೂ ಔಷಧಾಲಯಗಳು ಸೇರಿದಂತೆ ಇನ್ನಿತರ ಆರೋಗ್ಯ ಸೌಲಭ್ಯಗಳ ಮೇಲೆ ಒತ್ತಡ ಉಂಟುಮಾಡುತ್ತದೆ. ಆರೋಗ್ಯ ಸೇವೆ ಎನ್ನುವುದು ಅಗತ್ಯವಾದ ಮೂಲಸೌಕರ್ಯವಾಗಿದ್ದು, ಎಲ್ಲರಿಗೂ ಅವಶ್ಯಕವಾದ ವೈದ್ಯಕೀಯ ನೆರವು ಸಿಗಲೇಬೇಕಾಗಿರುತ್ತದೆ.

    ಆರ್ಥಿಕ ಪರಿಣಾಮ:
    ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳು ಬೋಧನಾ ಶುಲ್ಕ ಮತ್ತು ಖರ್ಚಿನಿಂದಾಗಿ ದೇಶಕ್ಕೆ ಆರ್ಥಿಕ ಕೊಡುಗೆಯನ್ನು ನೀಡುತ್ತಾರೆ. ಆದರೆ ವಸತಿ ಮತ್ತು ಇನ್ನಿತರ ಸೇವೆಗಳ ಬೇಡಿಕೆ ಹೆಚ್ಚಾದಂತೆ ಜೀವನದ ಖರ್ಚು ಹೆಚ್ಚಾಗುತ್ತದೆ. ಹೀಗಾಗಿ ದೇಶಿಯ ಮತ್ತು ಅಂತರಾಷ್ಟ್ರೀಯ ನಿವಾಸಿಗಳ ಮೇಲೆ ಇದು ಪರಿಣಾಮ ಬೀರುತ್ತದೆ. ಹೀಗಾಗಿ ಕೆನಡಾ, ಅಮೆರಿಕ ಸೇರಿದಂತೆ ಇನ್ನಿತರ ದೇಶಗಳು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿ ವೀಸಾಗಳನ್ನು ತಿರಸ್ಕರಿಸುವಲ್ಲಿ ಮುಂದಾಗಿದೆ.

  • ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಒಟ್ಟಾವಾ: ಅಮೆರಿಕ ದೇಶಗಳಿಗೆ ಆಮದಾಗುವ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ ಬೆನ್ನಲ್ಲೇ, ಅಮೆರಿಕ ಜೊತೆಗಿನ ಹಳೆಯ ಆರ್ಥಿಕ ಮತ್ತು ರಕ್ಷಣಾ ಸಂಬಂಧಗಳು ಕೊನೆಗೊಂಡಿದೆ ಎಂದು ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ (Mark Carney) ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

    Mark Carney 1

    ಈ ಕುರಿತು ಮಾತನಾಡಿದ ಅವರು, ಅಮೆರಿಕದ ಸುಂಕ (US Tariff) ವಿಧಿಸುವ ಕ್ರಮವು ಕೆನಡಾದ ಆರ್ಥಿಕತೆಯ ಮೇಲಿನ ನೇರ ದಾಳಿಯಾಗಿದೆ. ಇದು ಕೆನಡಾದ 5 ಲಕ್ಷ ಆಟೋಮೊಬೈಲ್‌ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಭದ್ರತೆ ಮತ್ತು ವ್ಯಾಪಾರ ಸಂಬಂಧಗಳ ಮಾತುಕತೆಗೆ ಮತ್ತೆ ಸಮಯ ಬರುತ್ತದೆ ಎಂದು ಕಾರ್ನಿ ಹೇಳಿದ್ದಾರೆ. ಇದನ್ನೂ ಓದಿ: ಮೂರು ವರ್ಷಗಳಿಂದ ಪಾಕ್‌ ಜೈಲಲ್ಲಿದ್ದ ಭಾರತದ ಮೀನುಗಾರ ನೇಣಿಗೆ ಶರಣು

    donald trump

    ಟ್ರಂಪ್‌ ಅವರ ಸುಂಕ ವಿಧಿಸುವ ಕ್ರಮವು ಅನ್ಯಾಯದ ಕ್ರಮ. ಈ ಮೂಲಕ ಟ್ರಂಪ್ ದೇಶಗಳ ನಡುವೆ ಅಸ್ತಿತ್ವದಲ್ಲಿರುವ ವ್ಯಾಪಾರ ಒಪ್ಪಂದಗಳನ್ನು ಉಲ್ಲಂಘಿಸುತ್ತಿದ್ದಾರೆ. ಯುನೈಟೆಡ್‌ ಸ್ಟೇಟ್ಸ್‌ನೊಂದಿಗಿನ ಸಂಬಂಧವನ್ನು ಶಾಶ್ವತವಾಗಿ ಬದಲಾಯಿಸುತ್ತಿದ್ದಾರೆ. ಭವಿಷ್ಯದ ವ್ಯಾಪಾರ ಸಂಬಂಧಗಳನ್ನು ಲೆಕ್ಕಿಸುತ್ತಿಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    ನಮ್ಮ ಆರ್ಥಿಕತೆ, ಮಿಟರಿ ಸಹಕಾರ ಮತ್ತು ಭದ್ರತೆಯ ಆಧಾರದ ಮೇಲೆ ಅಮೆರಿಕದ ಜೊತೆಗಿನ ಹಳೆಯ ಸಂಬಂಧಗಳನ್ನು ಮುಗಿಸುತ್ತಿದ್ದೇವೆ. ಟ್ರಂಪ್‌ ಸುಂಕದ ವಿರುದ್ಧ ಹೋರಾಡುವುದು ಆರ್ಥಿಕತೆ ರಕ್ಷಿಸುವುದು ನಮ್ಮ ಮುಂದಿನ ಉದ್ದೇಶ. ಪ್ರತೀಕಾರದ ವ್ಯಾಪಾರ ಕ್ರಮಗಳೊಂದಿಗೆ ಹೋರಾಡುತ್ತೇವೆ, ಇದರಿಂದ ಹೆಚ್ಚು ಪರಿಣಾಮ ಬೀರುವುದು ಅಮೆರಿಕದ ಮೇಲೆಯೇ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ ಆಮದು ಮೇಲಿನ ಸುಂಕ ಕಡಿತ – ಭಾರತದಿಂದ ಮೊದಲ ಹಂತದ ವ್ಯಾಪಾರ ಒಪ್ಪಂದ

  • ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಒಟ್ಟಾವಾ: ಕೆನಡಾದಲ್ಲಿ(Canada Election) ಅಧಿಕಾರದಲ್ಲಿರುವ ಲಿಬರಲ್ ಪಾರ್ಟಿ ಭಾರತದ (India) ಮೇಲೆ ದ್ವೇಷ ಮುಂದುವರಿಸಿದೆ. ಖಲಿಸ್ತಾನಿಗಳ (Khalistan) ವಿರುದ್ಧ ಕಠಿಣ ನಿಲುವು ತಾಳಿದ್ದ ತುಮಕೂರು ಮೂಲದ ಸಂಸದ ಚಂದ್ರ ಆರ್ಯಗೆ (Chandra Arya) ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಲು ನಿರಾಕರಿಸಿದೆ. ಇದನ್ನೂ ಓದಿ: ಓಲಾ, ಊಬರ್ ಕ್ಯಾಬ್‍ಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್ – ಸಹಕಾರ್ ಟ್ಯಾಕ್ಸಿ ಲೋಕಾರ್ಪಣೆಗೆ ಸಿದ್ಧತೆ

     

    ಕಳೆದ ವರ್ಷ ಭಾರತ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಮಾಡಿದ್ದ ಬಗ್ಗೆ ಸರ್ಕಾರಕ್ಕೆ ಚಂದ್ರ ಆರ್ಯ ಮಾಹಿತಿ ನೀಡಿಲ್ಲ ಎಂಬ ನೆಪ ಹೇಳಿ ಟಿಕೆಟ್ ಕೊಟ್ಟಿಲ್ಲ. ಕೆನಡಾ ಮತ್ತು ಭಾರತ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹದೆಗೆಟ್ಟ ಕಾರಣವನ್ನೂ ನೀಡಲಾಗಿದೆ. ಇದನ್ನೂ ಓದಿ : ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ತಮ್ಮ ಮೇಲೆ ಭಾರತ ಸರ್ಕಾರದ ಪ್ರಭಾವವಿದೆ ಎಂಬ ಆರೋಪಗಳನ್ನು ಚಂದ್ರ ಆರ್ಯ ತಿರಸ್ಕರಿಸಿದ್ದಾರೆ. ಏಪ್ರಿಲ್ 28ಕ್ಕೆ ಕೆನಡಾ ಸಂಸತ್ ಚುನಾವಣೆ ನಡೆಯಲಿದೆ.

     

  • ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಒಟ್ಟಾವಾ: ಕೆನಡಾದ 24ನೇ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ (Mark Carney) ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಆಕಾರದಲ್ಲಾಗಲಿ, ರೂಪದಲ್ಲಾಗಲಿ ಕೆನಡಾ (Canada), ಅಮೆರಿಕದ ಭಾಗವಾಗುವುದಿಲ್ಲ ಎಂದರಲ್ಲದೇ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಸುಂಕ ವಿಧಿಸುವ ಕ್ರಮವನ್ನು ಎದುರಿಸುವುದೇ ನಮ್ಮ ಪ್ರಮುಖ ಆದ್ಯತೆ ಎಂದು ಗುಡುಗಿದ್ದಾರೆ.

    Donald Trump 3

    ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾರ್ಕ್‌ ಕಾರ್ನಿ, ಕೆನಡಾ ಆಕಾರ – ಗಾತ್ರದಲ್ಲಿ, ಯಾವುದೇ ರೀತಿಯಲ್ಲಾಗಲಿ ಅಮೆರಿಕದ ಭಾಗವಾಗುವುದಿಲ್ಲ. ಆದ್ರೆ ನಮ್ಮ ಸರ್ಕಾರ ಎರಡೂ ದೇಶದ ಹಿತಾಸಕ್ತಿಯನ್ನು ಹೆಚ್ಚಿಸಲು ವಾಷಿಂಗ್ಟನ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಭರವಸೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಇದೇ ವೇಳೆ ಟ್ರಂಪ್‌ ಅವರನ್ನು ಭೇಟಿಯಾಗುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಕೆನಡಾ ಅನುಭವಿ ಕ್ಯಾಬಿನೆಟ್‌ ಹೊಂದಿದ್ದು, ಅತ್ಯಂತ ವೇಗವಾಗಿ ಕೆಲಸ ಮಾಡುತ್ತದೆ. ಅಲ್ಲದೇ ಭವಿಷ್ಯವನ್ನು ರಕ್ಷಿಸುತ್ತಾ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುತ್ತದೆ. ಕೆನಡಾದ ಸಾರ್ವಭೌಮತ್ವಕ್ಕೆ ಗೌರವ ಕೊಡುವುದಾದರೇ ಟ್ರಂಪ್‌ ಅವರನ್ನು ಭೇಟಿಯಾಗಲು ಒಪ್ಪುತ್ತೇನೆ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ಕಳೆದ ಜನವರಿಯಲ್ಲಿ ಟ್ರಂಪ್‌ ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟಾವ ಗಡಿಯಾಚೆಗಿನ ಸಂಬಂಧಗಳು ಕುಸಿದಿವೆ. ಅಲ್ಲದೇ ಕೆನಡಾವನ್ನು 51ನೇ ರಾಜ್ಯವಾಗಿ ಮಾಡಿಕೊಳ್ಳುವ ಚಿಂತನೆ ಹಾಗೂ ಕೆನಡಾ ಉತ್ಪನ್ನಗಳ ಮೇಲೆ ಸುಂಕ ವಿಧಿಸುವ ಟ್ರಂಪ್‌ ಅವರ ನಿರ್ಧಾರಗಳು ಉಭಯ ದೇಶಗಳ ಸಂಬಂಧ ಮತ್ತಷ್ಟು ಹಳಸುವಂತೆ ಮಾಡಿದೆ. ‌ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

  • ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ (Mark Carney) ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

    ಈ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಜನವರಿಯಲ್ಲಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡಿದ್ದ ಹಿನ್ನೆಲೆ ಇತ್ತೀಚಿಗಷ್ಟೆ ಕಾರ್ನಿ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಇದೀಗ ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

    ಈ ಕುರಿತು ಮಾತನಾಡಿರುವ ಕಾರ್ನಿ, ತಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದು, ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲಿದ್ದೇವೆ. ವೇಗವಾಗಿ ಚಲಿಸುವ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುವ ಮತ್ತು ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದಿದ್ದಾರೆ.

    2013ರಲ್ಲಿ ಲಿಬರಲ್ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದ ಜಸ್ಟಿನ್ ಟ್ರುಡೋ, 2025ರ ಜನವರಿ 6 ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ – ಸೀಟ್‌ ಬೆಲ್ಟ್‌ ಹಾಕಿದ್ದಕ್ಕೆ ಬಚಾವ್‌

     

  • ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!

    ಲ್ಯಾಂಡಿಂಗ್‌ ವೇಳೆ ರನ್‌ ವೇಯಲ್ಲಿ ಪಲ್ಟಿಯಾಗಿ ಹೊತ್ತಿ ಉರಿದ ವಿಮಾನ!

    ಟೊರೊಂಟೋ: ಲ್ಯಾಂಡ್‌ ಆಗಿ ರನ್‌ ವೇಯಲ್ಲಿ ಸಾಗುವಾಗ ವಿಮಾನ ಪಲ್ಟಿಯಾಗಿ ಹೊತ್ತಿ ಉರಿದ (Plane Crash) ಘಟನೆ ಕೆನಡಾದ (Canada) ರಾಜಧಾನಿ ಟೊರೊಂಟೋದಲ್ಲಿ (Toronto) ನಡೆದಿದೆ.

    80 ಜನರನ್ನು ಹೊತ್ತಿದ್ದ ಡೆಲ್ಟಾ ಏರ್ ಲೈನ್ಸ್ ವಿಮಾನ ಲ್ಯಾಂಡ್‌ ಆಗಿ ರನ್‌ವೇಯಲ್ಲಿ ಮುಂದಕ್ಕೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ವಿಮಾನ ದುರಂತದಲ್ಲಿ ಕನಿಷ್ಠ 18 ಜನರಿಗೆ ಗಾಯಗಳಾಗಿವೆ. ಇದರಲ್ಲಿ ಒಂದು ಮಗು ಸೇರಿದಂತೆ, ಓರ್ವ ವ್ಯಕ್ತಿ ಹಾಗೂ ಮಹಿಳೆಯೊಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ವಿಮಾನ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಬಿಜೆಪಿ ಸಿಎಂಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ? – ಡಿಕೆಶಿ ಫುಲ್‌ ಗರಂ

    76 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದ ವಿಮಾನ ಅಮೆರಿಕದ ಮಿನ್ನೇಸೋಟದ ಮಿನ್ನಿಯಾಪೋಲಿಸ್‌ನಿಂದ ಕೆನಡಾದ ಅತಿದೊಡ್ಡ ಮಹಾನಗರ ಟೊರೊಂಟೊಕ್ಕೆ ಬಂದಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ವಿಮಾನ ಪಲ್ಟಿಯಾಗುತ್ತಿದ್ದಂತೆ ನಿಲ್ದಾಣದಲ್ಲಿದ್ದ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಗಾಯಗಳುಗಳನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಘಟನೆಯ ನಂತರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು ಎರಡು ಗಂಟೆಗಳ ಬಳಿಕ ವಿಮಾನ ನಿಲ್ದಾಣದಿಂದ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗೆ ಉತ್ತರ ಅಮೆರಿಕದಲ್ಲಿ ವಾಷಿಂಗ್ಟನ್‌ನಲ್ಲಿ ಯುಎಸ್ ಸೇನಾ ಹೆಲಿಕಾಪ್ಟರ್ ಮತ್ತು ಪ್ಯಾಸೆಂಜರ್ ಜೆಟ್ ನಡುವೆ ಆಕಾಶದಲ್ಲಿ ಡಿಕ್ಕಿ ಸಂಭವಿಸಿ 67 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

  • ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕನ್ನಡದಲ್ಲಿ (Kannada) ಮಾತನಾಡಿ ಚಂದ್ರ ಆರ್ಯ (Indian-origin MP Chandra Arya) ಗಮನ ಸೆಳೆದಿದ್ದಾರೆ.

    ಸದನವನ್ನು ಉದ್ದೇಶಿಸಿ ಆರ್ಯ ಅವರು ತಮ್ಮ ಪರಂಪರೆಯ ಬಗ್ಗೆ ಅಪಾರ ಹೆಮ್ಮೆಯಿಂದ ಮಾತನಾಡಿದರು. ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು, ಈಗ ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದರು.

    ಭಾಷಣದ ಕೊನೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲನ್ನು ಹೇಳಿದರು. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು. ಈ ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು.

    family Chandra Arya 5

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

     

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಒಟ್ಟಾವಾ: ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.

    ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ ನೀಡಿದ್ದಾರೆ. ಇನ್ನೂ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ ನಂತರ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕ ಮತ್ತು ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಜಸ್ಟಿನ್ ಟ್ರುಡೊ ಸೋಮವಾರ ನಿರ್ಧಾರ ಪ್ರಕಟಿಸಿದ್ದರು. ಇದಾದ ಬಳಿಕ ಈ ಬೆಳವಣಿಗೆಯಾಗಿದೆ.

    ಆರ್ಯ ಚಂದ್ರ ಅವರು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ತೇನ್‌ನ್ನು ಒಂದು ರಾಜ್ಯವಾಗಿ ಗುರುತಿಸುವುದು ಸೇರಿದಂತೆ ಮಹತ್ವಾಕಾಂಕ್ಷೆಯ ನೀತಿ ಪ್ರಸ್ತಾಪಗಳನ್ನು ಉಮೇದುವಾರಿಕೆ ಬಳಿಕ ವಿವರಿಸಿದ್ದಾರೆ.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ  ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್‌ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್‌ ಕುಕ್‌

    Canadian PM Justin Trudeau Narendra Modi

    ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.

    ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.

    JustinTrudeauswife

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು  ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

     

  • ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ.

    ಉಪಪ್ರಧಾನಿ ಹುದ್ದೆಯೊಂದಿಗೆ ಹಣಕಾಸು ಖಾತೆಯನ್ನು ಹೊಂದಿದ್ದ ಫ್ರೀಲ್ಯಾಂಡ್ ಟ್ರುಡೋ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ಸಚಿವರಾಗಿದ್ದರು. ಕಳೆದ 4 ವರ್ಷಗಳಲ್ಲಿ ಸರ್ಕಾರದಿಂದ ಹೊರಬಂದ ಎರಡನೇ ಹಣಕಾಸು ಸಚಿವೆ ಇವರಾಗಿದ್ದಾರೆ.

    Chrystia Freeland Canada

    ಟ್ರುಡೋ ರಾಜೀನಾಮೆ ನೀಡಲು ಚಿಂತನೆ ಮಾಡಿದ್ದಾರೆ ಮತ್ತು ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಡಾ ಮಾಧ್ಯಮವೊಂದು ವರದಿ ಮಾಡಿದೆ.

    ಕೆನಡಾದಿಂದ ಅಕ್ರಮವಾಗಿ ವಲಸಿಗರು ಅಮೆರಿಕಕ್ಕೆ ನುಸುಳುತ್ತಿದ್ದಾರೆ. ನುಸುಳುಕೋರರ ವಿರುದ್ಧ ಕೆನಡಾ ಕ್ರಮ ಕೈಗೊಳ್ಳುತ್ತಿಲ್ಲ. ತಾನು ಅಧಿಕಾರಕ್ಕೆ ಏರಿದ ಬಳಿಕ ಕೆನಡಾದಿಂದ ಆಮದಾಗುವ ವಸ್ತುಗಳ ಮೇಲೆ 25% ಆಮದು ತೆರಿಗೆ ವಿಧಿಸುವುದಾಗಿ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಸ್ಟಿನ್‌ ಟ್ರುಡೋ ಕೆನಡಾದ ಗವರ್ನರ್‌ ಎಂದು ಟ್ರಂಪ್‌ ವ್ಯಂಗ್ಯವಾಡಿದ್ದಾರೆ. ಅಮೆರಿಕ ಕೆನಡಾದ ಸಂಬಂಧ ಹಾಳಾಗುತ್ತಿರುವ ಬೆನ್ನಲ್ಲೇ ಟ್ರುಡೋ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ.

    Canadian PM Justin Trudeau Narendra Modi

    ಕೆನಡಾದ ಪ್ರಮುಖ ವ್ಯಾಪಾರ ಪಾಲುದಾರ ಅಮೆರಿಕವಾಗಿದ್ದು ಪ್ರತಿ ವರ್ಷ ಅದರ ರಫ್ತಿನ 75 ಪ್ರತಿಶತವು ಅಮೆರಿಕಕ್ಕೆ ಹೋಗುತ್ತಿದೆ. ಕೆಲ ದಿನಗಳ ಹಿಂದೆ ಜಸ್ಟಿನ್‌ ಟ್ರುಡೋ ಟ್ರಂಪ್‌ ಅವರನ್ನು ಫ್ಲೋರಿಡಾದಲ್ಲಿ ಭೇಟಿಯಾಗಿ ಮಾತನಾಡಿದ್ದರು. ಆಮದು ಸುಂಕದ ಬಗ್ಗೆ ಟ್ರುಡೋ ಮಾತುಕತೆ ನಡೆಸಿದ್ದರೂ ಟ್ರಂಪ್‌ ಕಡೆಯಿಂದ ಯಾವುದೇ ಧನಾತ್ಮಕ ನಿರ್ಧಾರ ಪ್ರಕಟವಾಗಿಲ್ಲ.

    ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಆದರೆ ಅ.16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಕೆ ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.