Tag: ಚಂದನವನ

  • ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    – ಸಲಗ, ಕೋಟಿಗೊಬ್ಬ3 ನಡುವೆ ಪೈಟ್

    ಬೆಂಗಳೂರು: ಚಂದನವನದಲ್ಲಿ ಈಗ ಸ್ಟಾರ್‌ವಾರ್‌ ಶುರುವಾಗಿದೆ. ಒಂದೇ ದಿನ ತೆರೆ ಮೇಲೆ ಬರಲು ಬಿಗ್ ಬಜೆಟ್ ಸಿನಿಮಾಗಳಾದ ಸಲಗ, ಕೋಟಿಗೊಬ್ಬ-3 ಬಿಡುಗಡೆ ಸಿದ್ಧವಾಗಿದೆ.

    ದಸಾರ ಹಬ್ಬದ ದಿನ ಸಲಗ ಸವಾರಿ ಆರಂಭವಾಗಲಿದೆ. ದುನಿಯ ವಿಜಿ ನಿರ್ದೇಶಿಸಿ ನಟಿಸಿರುವ ಸಲಗ ಆ.14ಕ್ಕೆ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಅದೇ ದಿನ ತೆರೆಗೆ ಬರೋದು ಪಕ್ಕಾ ಅಂತಿದೆ ಸುದೀಪ್ ನಟನೆಯ ಸೂರಪ್ಪ ಬಾಬು ನಿರ್ಮಾಣದ ಚಿತ್ರ ಕೋಟಿಗೊಬ್ಬ 3 ಸಿನಿಮಾ. ವಿಜಯ ದಶಮಿಯಂದು ವಿಜಯದ ಮಾಲೆ ಯಾರಿಗೆ ಹಾಕಲಿದ್ದಾರೆ ಸಿನಿ ಪ್ರೇಕ್ಷಕರು ಎಂಬುದನ್ನು ಕಾದುನೋಡಬೇಕಾಗಿದೆ.

    actor duniya vijay

    ಇದು  ಸ್ಟಾರ್‌ವಾರ್‌ ಅಲ್ಲ, ಇಬ್ಬರೂ ಒಟ್ಟಿಗೆ ಬರ್ತಿದ್ದೀವಿ ಅಷ್ಟೇ. ಎರಡೂ ಸಿನಿಮಾಗಳಿಗೂ ಕನ್ನಡಿಗರು ಆರ್ಶೀವಾದ ಮಾಡುತ್ತಾರೆ. ಎರಡೂ ಸಿನಿಮಾಗಳ ನಿರ್ಮಾಪಕರ ನಡುವೆ ಸಮಸ್ಯೆ ಇಲ್ಲ. ಒಟ್ಟಿಗೆ ರಿಲೀಸ್ ಆಗ್ತಿರುವುದರಿಂದ ಎಲ್ಲಾ ಕಡೆ ಕನ್ನಡ ಸಿನಿಮಾಗಳು ನೋಡಲು ಸಿಗುತ್ತದೆ. ಪರಭಾಷ ಸಿನಿಮಾಗಳ ಸಮಸ್ಯೆಗೆ ಅವಕಾಶ ಇರೋದಿಲ್ಲ ಎಂದು ಪಬ್ಲಿಕ್ ಟಿವಿಗೆ ಸಲಗ ನಿರ್ಮಾಪಕ ಕೆ ಪಿ ಶ್ರೀಕಾಂತ್ ಹೇಳಿದ್ದಾರೆ. ಇದನ್ನೂ ಓದಿ:  ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ

    ನಮಗೊಂದು ಒಳ್ಳೆಯ ದಿನ ಸಿಕ್ಕಿದೆ. ದಸರಾ ಹಬ್ಬ, ಚಾಮುಂಡೇಶ್ವರಿ ದಯೆ ಎಲ್ಲವೂ ಇದೆ ಎಂದು ಪಬ್ಲಿಕ್ ಟಿವಿಗೆ ನಟ ದುನಿಯಾ ವಿಜಯ್ ಹೇಳಿಕೆ ನೀಡಿದ್ದಾರೆ.

    sudeep 6

    ಅಕ್ಟೋಬರ್ 14ರಂದೇ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಲಿದೆ. ಮಾತುಕತೆ ಆಡಿದ್ದು ನಿಜ, ಶ್ರೀಕಾಂತ್ ಅವರದ್ದು ತಪ್ಪಿಲ್ಲ. ಅಕ್ಟೋಬರ್ 1, 14, 29 ಅಂತ ಇತ್ತು. ಅಕ್ಟೋಬರ್ 14ರಂದು ಬಿಟ್ಟುಕೊಡಲು ರೆಡಿ ಇದ್ದೇನೆ ಎಂದು ಹೇಳಿದ್ದೇನೆ. ಅಕ್ಟೋಬರ್ 29ರಂದು ಡೇಟ್ ಸಿಗೋದಾದರೆ ಬಿಟ್ಟುಕೊಡಲು ಒಪ್ಪಿದೆ. ಆದರೆ ಅಕ್ಟೋಬರ್ 29ರಂದು ಜಯಣ್ಣ ಅವರು ಭಜರಂಗಿ-2 ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ.

  • ವಿಕ್ರಾಂತ್ ರೋಣ ಡಿಸೆಂಬರ್​ನಲ್ಲಿ ಬಿಡುಗಡೆ ಸಾಧ್ಯತೆ

    ವಿಕ್ರಾಂತ್ ರೋಣ ಡಿಸೆಂಬರ್​ನಲ್ಲಿ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

    ನಿರ್ಮಾಪಕ ಜಾಕ್ ಮಂಜು ‘ವಿಕ್ರಾಂತ್ ರೋಣ’ ಸಿನಿಮಾ ಕುರಿತು ಮಾತನಾಡಿದ್ದು, ಪರಿಸ್ಥಿತಿ ಸರಿಯಾಗಿದ್ದರೆ ಡಿಸೆಂಬರ್‍ನಲ್ಲಿ ಚಿತ್ರವನ್ನು ರಿಲೀಸ್ ಮಾಡುತ್ತೇವೆ. ಡಿಸೆಂಬರ್‍ನಲ್ಲಿ ರಿಲೀಸ್ ಮಾಡುವ ಉದ್ದೇಶ ಇಟ್ಟುಕೊಂಡು ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಆದರೆ ದಿನಾಂಕವನ್ನು ನಾವು ಘೋಷಿಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್

    VIKRANTH RONA

    ದಿನಾಂಕ ಹೇಳಿ ಮತ್ತೆ ಮುಂದೆ ಹೋಗುವುದು ನಮಗೆ ಇಷ್ಟವಿಲ್ಲ. ಸಿನಿಮಾ ಬಿಡುಗಡೆಗೆ ಇನ್ನೂ 10 ದಿನ ಇದೆ ಎಂದಾಗ ದಿನಾಂಕ ಕುರಿತು ನಾವು ಹೇಳುತ್ತೇವೆ ಎಂದು ಹೇಳಿದ್ದಾರೆ.

    FotoJet 1 10

    ಈ ಸಮಯಕ್ಕೆ ಬೇರೆ ರಾಜ್ಯಗಳ ಚಿತ್ರರಂಗದಸ್ಥಿತಿಯನ್ನ ನೋಡಿ ಆ ಭಾಷೆಗಳಲ್ಲಿ ರಿಲೀಸ್ ಮಾಡುವುದರ ಬಗ್ಗೆ ನಾವು ಯೋಚಿಸುತ್ತೇವೆ. ಅಂಧ್ರದಲ್ಲಿ 100% ಸೀಟು ಭರ್ತಿಗೆ ಆದೇಶ ಬರಲಿದೆ. ಅದು ಅಲ್ಲದೇ ಬೇರೆ ಭಾಷೆಗಳಲ್ಲಿ ರಿಲೀಸ್ ಮಾಡಲು ಸಾಕಷ್ಟು ಖರ್ಚು ಮಾಡಬೇಕು. ಇವೆಲ್ಲ ಸೇರಿ ಸಿನಿಮಾದ ಬಜೆಟ್ 100 ಕೋಟಿ ರೂ. ಆಗಬಹುದು ಎಂದಿದ್ದಾರೆ. ಇದನ್ನೂ ಓದಿ: ಮಗನಿಗೆ 6 ತಿಂಗಳು ತುಂಬಿರೋ ಸಂಭ್ರಮ- ಮುಯೂರಿ ಫೋಟೋಶೂಟ್

    ಓಟಿಟಿಗಳಿಂದ ನಮಗೆ ಸಾಕಷ್ಟು ಆಫರ್ ಬರುತ್ತಿದೆ. ಆದರೆ ನಾವು ಅಲ್ಲಿ ಈ ಸಿನಿಮಾವನ್ನು ಬಿಡುವುದಿಲ್ಲ. ಮೊದಲು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತೇವೆ. ಬಳಿಕ ಜನರ ಪ್ರತಿಕ್ರಿಯೆ ನೋಡಿಕೊಂಡು ಓಟಿಟಿಯಲ್ಲಿ ಬಿಡುಗಡೆ ಮಾಡುತ್ತೇವೆ. ಸುದೀಪ್ ಅವರು ಈಗಾಗಲೇ ಕನ್ನಡದಲ್ಲಿ ಡಬ್ಬಿಂಗ್ ಮುಗಿಸಿದ್ದಾರೆ. ಮಲಯಾಳಂ ಬಿಟ್ಟು, ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಕಿಚ್ಚ ಅವರೇ ಧ್ವನಿ ನೀಡುತ್ತಿದ್ದಾರೆ ಎಂದರು. ಇದನ್ನೂ ಓದಿ:  ಆಹಾರ, ಸೆಕ್ಸ್ ಯಾವುದನ್ನ ಆಯ್ಕೆ ಮಾಡಿಕೊಳ್ಳುತ್ತೀರಾ..?: ಶೃತಿ ಕೊಟ್ರು ಬೋಲ್ಡ್ ಆನ್ಸರ್

  • ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್

    ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್

    ಬೆಂಗಳೂರು: ನಿಮ್ಮ ವಯಸ್ಸಿಗೆ ನಾನು ಬಂದಾಗ ಹೀಗೇ ಇರಲು ಸಾಧ್ಯನಾ ಎಂದು ಚಂದನವನದ ಸಿಂಡ್ರೆಲಾ ರಾಧಿಕಾ ಪಂಡಿತ್ ತನ್ನ ತಾಯಿಯನ್ನು ಪ್ರಶ್ನಿಸಿ ಹಾಡಿ ಹೊಗಳಿದ್ದಾರೆ.

    ರಾಧಿಕಾ ಸಿನಿಮಾ ಕ್ಷೇತ್ರಕ್ಕೆ ಬ್ರೇಕ್ ಕೊಟ್ಟು ಈಗ ತಮ್ಮ ವೈಯಕ್ತಿಕ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದಾರೆ. ಇಂದು ಅವರು ತಮ್ಮ ತಾಯಿ ಜೊತೆಗಿನ ಫೋಟೋವನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಾಕಿ, ನನ್ನ ಅಮ್ಮ ಏನು ಮಾಡುತ್ತಾರೆ. ಮನೆಯನ್ನು ಹೇಗೆ ನಿರ್ವಹಿಸುತ್ತರೆ ಎಂದು ನಾನು ಆಗಾಗ ಆಶ್ಚರ್ಯ ಪಡುತ್ತೇನೆ. ಎಲ್ಲಾ ಮನೆಯ ಕೆಲಸ, ಅಡುಗೆ, ನನ್ನ ಮಕ್ಕಳನ್ನು ಮಾತ್ರವಲ್ಲದೆ ನಾನು ಮತ್ತು ನನ್ನ ತಂದೆಯನ್ನೂ ಸಹ ನೋಡಿಕೊಳ್ಳುತ್ತರೆ. ಇಷ್ಟು ಕೆಲಸ ಅಲ್ಲದೇ ಬೇರೆ ಕೆಲಸವನ್ನು ಮಾಡಲು ಶಕ್ತಿಯನ್ನು ಹೊಂದಿರುತ್ತಾರೆ. ಆ ವಯಸ್ಸಿನಲ್ಲಿ ನಾನು ಅವರಂತೆ ಇರಬಹುದೇ? ಅದು ಅನುಮಾನ. ನನ್ನ ಸೂಪರ್ ವುಮೆನ್, ನನ್ನ ಅಮ್ಮ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಆಹಾರ, ಸೆಕ್ಸ್ ಯಾವುದನ್ನ ಆಯ್ಕೆ ಮಾಡಿಕೊಳ್ಳುತ್ತೀರಾ..?: ಶೃತಿ ಕೊಟ್ರು ಬೋಲ್ಡ್ ಆನ್ಸರ್

    yash radhika pandit engagement 2

    ರಾಧಿಕಾ ಸಿನಿಮಾಗಳಿಂದ ದೂರ ಉಳಿದಿದ್ದರೂ ಅಭಿಮಾನಿಗಳಿಂದ ಮಾತ್ರ ದೂರವಾಗಿಲ್ಲ. ಅವರು ತಮ್ಮ ಎಲ್ಲ ಅಪ್ಟೇಡ್‍ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದು, ಅಭಿಮಾನಿಗಳಿಗೆ ಸ್ಪಂದಿಸುತ್ತಿರುತ್ತಾರೆ. ಐರಾ ಮತ್ತು ಯಥರ್ವ್ ಆಟ, ತಮ್ಮ ಮನೆಯಲ್ಲಿ ನಡೆಯುವ ವಿಶೇಷ ಘಟನೆಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ

    RADHIKA 1 medium

    ಇತ್ತೀಚೆಗೆ ತಮ್ಮ ಮಕ್ಕಳು ಗಣೇಶನ ಹಬ್ಬದಲ್ಲಿ ಮಾಡಿದ ತುಂಟಾಂಟಗಳನ್ನು ಹಾಕಿದ್ದು, ಇದಕ್ಕೆ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ಅದು ಮಾತ್ರವಲ್ಲ ಐರಾ ಮತ್ತು ಯಥರ್ವ್‍ಗೆ ಅಭಿಮಾನಿಗಳು ಆಗಿದ್ದಾರೆ. ಇದನ್ನೂ ಓದಿ: ರೌಡಿಶೀಟರ್​ನಿಂದ ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ

  • ನೀನಿಲ್ಲದೆ ಇರಲು ಸಾಧ್ಯವಿಲ್ಲ ಎಂದು ಅಣ್ಣನನ್ನ ನೆನೆದ ಧ್ರುವ

    ನೀನಿಲ್ಲದೆ ಇರಲು ಸಾಧ್ಯವಿಲ್ಲ ಎಂದು ಅಣ್ಣನನ್ನ ನೆನೆದ ಧ್ರುವ

    ಬೆಂಗಳೂರು: ನೀನಿಲ್ಲದೆ ಇರಲು ಸಾಧ್ಯವಿಲ್ಲ ಎಂದು ಚಂದನವನದ ನಟ ಧ್ರುವ ಸರ್ಜಾ ಅಣ್ಣ ಚಿರಂಜೀವಿ ಸರ್ಜಾನನ್ನು ನೆನೆದು ಸೋಶಿಯಲ್ ಮೀಡಿಯಾದಲ್ಲಿ ಮನಮಿಡಿಯುವಂತೆ ಪೋಸ್ಟ್ ಮಾಡಿದ್ದಾರೆ.

    FotoJet 3 3

    ಚಿರು ಅಗಲಿ 1 ವರ್ಷವಾದರೂ ಅಣ್ಣನನ್ನು ಮರೆಯಲು ಧ್ರುವನಿಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಚಿರುವನ್ನು ನೆನೆದು ಇನ್‍ಸ್ಟಾಗ್ರಾಮ್ ನಲ್ಲಿ, ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನಿಲ್ಲದೆ ಇರಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಚಿರು ಜೊತೆ ಕಳೆದ ಕ್ಷಣಗಳನ್ನು ವೀಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಇವರ ಅಭಿಮಾನಿಗಳು ಧ್ರುವಗೆ ಧೈರ್ಯ ತುಂಬುವ ರೀತಿ ಕಮೆಂಟ್ ಮಾಡುತ್ತಿದ್ದು, ಅವರು ನಿಮ್ಮ ಜೊತೆಯಲ್ಲೇ ಇರುತ್ತಾರೆ, ಧೈರ್ಯವಾಗಿರಿ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ:  ಅಕ್ಷಯ್ ತಾಯಿಯ ಸಾವಿಗೆ ಮಿಡಿದ ಮೋದಿ ಹೃದಯ

     

    View this post on Instagram

     

    A post shared by Dhruva Sarja (@dhruva_sarjaa)

    ಈ ವೀಡಿಯೋದಲ್ಲಿ ಧ್ರುವ ಚಿರುಗೆ ಊಟ ಮಾಡಿಸುತ್ತಿವುದು, ಇಬ್ಬರು ಚೆಸ್ ಆಡುತ್ತಿರುವುದು ಮತ್ತು ಚಿರು ಧ್ರುವ ತಲೆಗೆ ಎಣ್ಣೆ ಹಚ್ಚುತ್ತಿರುವ ವೀಡಿಯೋ ಇದೆ. ಈಗೇ ಚಿಕ್ಕವಯಸ್ಸಿನಿಂದ ಚಿರು ಬದುಕಿರುವವರೆಗೂ ಕಳೆದ ಸಂತೋಷದ ಫೋಟೋಗಳನ್ನು ಮತ್ತು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಧ್ರುವ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರ 

    FotoJet 2 5

    ಇತ್ತೀಚೆಗಷ್ಟೇ ಚಿರು ಮತ್ತು ಮೇಘನಾ ರಾಜ್ ಮಗನ ನಾಮಕರಣ ನಡೆದಿದ್ದು, ಈ ವೇಳೆಯು ಧ್ರುವ ಸುದ್ದಿಗೋಷ್ಠಿಯಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದರು. ಈ ವೇಳೆ, ನಮ್ಮ ಅಣ್ಣನ ಮಗನ ಹೆಸರು ರಾಯನ್ ರಾಜ್ ಸರ್ಜಾ. ಆ ಒಂದು ಹೆಸರಿನಲ್ಲಿಯೇ ಸುಂದರ್ ರಾಜ್ ಅವರ ಫ್ಯಾಮಿಲಿ ಹಾಗೂ ಸರ್ಜಾ ಕುಟುಂಬ ಯಾವಾಗಲೂ ಒಂದಾಗಿಯೇ ಇರುತ್ತದೆ. ಕೆಲವು ಯೂಟ್ಯೂಬ್ ಅಥವಾ ಬೇರೆ ಯಾವುದಾದರ ಮೂಲಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದರೆ ದಯವಿಟ್ಟು ಮಾಡಬೇಡಿ. ನಾವು ಯಾವತ್ತಿಗೂ ಭಿನ್ನಾಭಿಪ್ರಾಯಗಳನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ:  ನೀಟ್ ಪರೀಕ್ಷೆ – ಲಾಠಿ ಹಿಡಿದು ಪೋಷಕರನ್ನು ಚದುರಿಸಿದ ಪೊಲೀಸರು

  • ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಬೆಂಗಳೂರು: ನಾನು ಫುಲ್ ಥ್ರಿಲ್ ಆಗಿದ್ದೇನೆ ಎಂದು ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಆ ವೀಡಿಯೋ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    rachitha ram nithya ram

    ಆ ಪೋಸ್ಟ್‍ನಲ್ಲಿ ಏನಿದೆ?
    ರಚಿತಾ ರಾಮ್ ಅವರ ಸಹೋದರಿ ನಿತ್ಯ ರಾಮ್ ಮದುವೆಯಾಗಿ ವಿದೇಶಕ್ಕೆ ಹೋಗಿದ್ದರು. ಇದರಿಂದ ರಚಿತಾ ತನ್ನ ಸಹೋದರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಮತ್ತೆ ಇವರಿಬ್ಬರು ಒಂದಾಗಿದ್ದಾರೆ. ರಚಿತಾ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ, ನಾನು ಎಷ್ಟು ಥ್ರಿಲ್ ಆಗಿದ್ದೇನೆ ಎಂದು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ನಾವಿಬ್ಬರು ಒಂದಾಗಿದ್ದೇವೆ. ಈ ಖುಷಿಯಿಂದ ನನ್ನ ಹೃದಯ ಕರಗಿದೆ ಎಂದು ಬರೆದು ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

    ಈ ವೀಡಿಯೋದಲ್ಲಿ ರಚಿತಾ ಮತ್ತು ನಿತ್ಯ ತುಂಬಾ ಕ್ಯೂಟ್ ಆಗಿ ಕಾಣುತ್ತಿದ್ದು, ವೈ ದಿಸ್ ಕೊಲವೆರಿ ಡಿ ಸಾಂಗ್ ಗೆ ಇಬ್ಬರು ಕ್ಯೂಟ್ ಆಗಿ ಎಕ್ಸ್ ಪ್ರೆಶನ್ ಕೊಟ್ಟಿದ್ದಾರೆ. ಇದನ್ನೂ ಓದಿ:   ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

    ಇತ್ತೀಚೆಗೆ ರಚಿತಾ ನಟನೆಯ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದರು. ಈ ದುರಂತಕ್ಕೆ ಚಿತ್ರತಂಡದ ನಿರ್ಲಕ್ಷ್ಯವೇ ಕಾರಣ ಎಂದು ರಚಿತಾ ಮತ್ತು ಚಿತ್ರತಂಡವನ್ನು ಬಿಡದಿ ಪೊಲೀಸರು ವಿಚಾರಣೆಯನ್ನು ಸಹ ಮಾಡಿದ್ದರು. ಪ್ರಸ್ತುತ ಚಿತ್ರತಂಡಕ್ಕೆ ನ್ಯಾಯಾಲಯ ಜಾಮೀನು ನೀಡಿದೆ.

  • ಯುವನಟನಿಗೆ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟ ಜೋಗಿ

    ಯುವನಟನಿಗೆ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟ ಜೋಗಿ

    ಬೆಂಗಳೂರು: ಚಂದನವನದಲ್ಲಿ ಲಾಂಗ್ ಎಂದರೆ ನಮಗೆ ತಕ್ಷಣ ನೆನೆಪಿಗೆ ಬರುವುದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್. ಈಗ ಅವರು ಯುವನಟ ಶ್ರೇಯಸ್ ಖುಷ್‍ಗೆ ಲಾಂಗ್ ಹಿಡಿಯುವುದನ್ನು ಹೇಳಿಕೊಡುತ್ತಿದ್ದಾರೆ.

    ಚಂದನವನಕ್ಕೆ ಸ್ಟೈಲಿಶ್ ಆಗಿ ಲಾಂಗ್ ಹೇಗೆ ಹಿಡಿಯಬೇಕು ಎಂದು ತೋರಿಸಿದವರು ಶಿವಣ್ಣ. ಅವರು ಲಾಂಗ್ ಹಿಡಿಯುವ ಸ್ಟೈಲ್‍ನ ಇಷ್ಟಪಡದ ಜನರಿಲ್ಲ. ಈಗ ಯುವನಟ ಶ್ರೇಯಸ್ ಖುಷ್‍ಗೆ ಲಾಂಗ್ ಹಿಡಿಯುವುದನ್ನು ಹೇಳಿಕೊಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.ಇದನ್ನೂ ಓದಿ:ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    shreyas and shivanna

    ಯಾರಿದು ನಟ?
    ‘ರಾಣ’ ಚಿತ್ರದ ಮೂಲಕ ಹೊಸದಾಗಿ ಕನ್ನಡಿಗರಿಗೆ ಶ್ರೇಯಸ್ ಖುಷ್ ಪರಿಚಯವಾಗುತ್ತಿದ್ದು, ಈ ಸಿನಿಮಾದ ಶೂಟಿಂಗ್ ಸೆಟ್‍ಗೆ ಶಿವಣ್ಣ ಹೋಗಿದ್ದಾರೆ. ಆ ಸಮಯದಲ್ಲಿ ಖುಷ್ ಅವರ ಆಸೆಯಂತೆ ಶಿವಣ್ಣ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ. ಇದಕ್ಕೆ ಖುಷ್ ಫುಲ್ ಖುಷ್ ಆಗಿದ್ದಾರೆ.ಇದನ್ನೂ ಓದಿ:ಚಂದನವನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರ ವಿಹಾನ್ ಎಂಟ್ರಿ

    bajrangi 2 harsha shivaraj kumar

    ಸದ್ಯಕ್ಕೆ ಶಿವಣ್ಣ ಸಾಲು ಸಾಲು ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಲಾಂಗ್ ಹಿಡಿಯುವ ಸಿನಿಮಾಗಳನ್ನು ಸ್ವಲ್ಪ ದೂರವಿಟ್ಟಿದ್ದಾರೆ. ಅವರ 125ನೇ ಸಿನಿಮಾ ಗೀತಾ ಬ್ಯಾನರ್‍ನಲ್ಲಿ ಸಿದ್ಧವಾಗುತ್ತಿದೆ. ಈಗ ಆ ಸಿನಿಮಾದ ಪ್ರಿ ಪ್ರೊಡಕ್ಷನ್ ನಡೆಯುತ್ತಿದ್ದು, ಅರ್ಜುನ್ ಜನ್ಯಾ ಅವರ ಸ್ಟುಡಿಯೋದಲ್ಲಿ ಹಾಡುಗಳ ರೆಕಾರ್ಡಿಂಗ್ ನಡೆಯುತ್ತಿದೆ. ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ ಹರ್ಷ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಇದನ್ನೂ ಓದಿ:ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

  • ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?
    ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

    ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

    ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
    ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

    ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

    ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಯೋಗ ಟೀಚರ್ ಈಗ ಕನ್ನಡದ ಬ್ಯುಸಿಯೆಸ್ಟ್ ನಟಿ.. ಇದು ಐಶ್ವರ್ಯ ರಾವ್ ಸಿನಿಮಾ ಜರ್ನಿಯ ನೋಟ..

    ಯೋಗ ಟೀಚರ್ ಈಗ ಕನ್ನಡದ ಬ್ಯುಸಿಯೆಸ್ಟ್ ನಟಿ.. ಇದು ಐಶ್ವರ್ಯ ರಾವ್ ಸಿನಿಮಾ ಜರ್ನಿಯ ನೋಟ..

    ಚಂದನವನದ ಅಂಗಳಕ್ಕೆ ದಿನ ಕಳೆದಂತೆ ಚೆಂದದ ನಟಿಯರು ಎಂಟ್ರಿಯಾಗುತ್ತಲೇ ಇದ್ದಾರೆ. ಕಪ್ಪು ಬಿಳಿ ಕಣ್ಣಲ್ಲಿ ಕಲರ್ ಫುಲ್ ಕನಸುಗಳನ್ನು ಹೊತ್ತು ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿಯುತ್ತಾರೆ. ಇಲ್ಲಿ ಗ್ಲಾಮರ್ ಜೊತೆಗೆ ಪ್ರತಿಭೆ ಹಾಗೂ ಅದೃಷ್ಟ ಇದ್ದವರು ಮಾತ್ರ ಗಟ್ಟಿಯಾಗಿ ನೆಲೆಯೂರುತ್ತಾರೆ. ಕೊಟ್ಟ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವಿನ ಹಾದಿ ತುಳಿಯುತ್ತಾರೆ. ಇಂತಹ ನಟಿಯರ ಪೈಕಿ ಸದ್ಯ ಸ್ಯಾಂಡಲ್‍ವುಡ್ ನಲ್ಲಿ ಸಖತ್ ಸದ್ದು-ಸುದ್ದಿ ಮಾಡುತ್ತಿರುವ ನಟಿ ಐಶ್ವರ್ಯ ರಾವ್.

    Aishwarya Rao2

    ಐಶ್ವರ್ಯ ರಾವ್ ಅಪ್ಪಟ ಕನ್ನಡದ ಹುಡುಗಿ, ಮೂಲತಃ ಉಡುಪಿಯವರಾದರು ಹುಟ್ಟಿ ಬೆಳೆದಿದ್ದೆಲ್ಲವೂ ಅರಮನೆ ನಗರಿ ಮೈಸೂರಿನಲ್ಲಿ. ಅಂತರಾಷ್ಟ್ರೀಯ ನೃತ್ಯಪ್ರಕಾರಗಳಲ್ಲಿ ಪರಿಣಿತಿ ಹೊಂದಿರುವ ಐಶ್ವರ್ಯ ಡ್ಯಾನ್ಸ್ ನೋಡಿದವರು ಸಿನಿಮಾ ಒಂದಕ್ಕೆ ಅವಕಾಶ ನೀಡಿದರು. ಮೈಮ್ ರಮೇಶ್ ಬಳಿಕ ನಟನೆ ಕಲಿಯುತ್ತಿದ್ದ ಐಶ್ವರ್ಯ, ಸಿಕ್ಕ ಅವಕಾಶ ಕೈ ಚೆಲ್ಲದೆ ಬಣ್ಣ ಹಚ್ಚಲು ಒಪ್ಪಿಕೊಂಡರು. ಅಲ್ಲಿಂದ ಶುರುವಾದ ಐಶ್ವರ್ಯ ಬಣ್ಣದ ಬದುಕು ಇಂದು ಸಖತ್ ಕಲರ್ ಫುಲ್ ಆಗಿದೆ. ಒಂದರ ಹಿಂದೊಂದೆ ಅವಕಾಶಗಳು ಇವರನ್ನು ಹರಸಿ ಬರುತ್ತಿವೆ.

    ಪವನ್ ಪ್ರಸಾದ್ ನಿರ್ದೇಶನ ಬಡ್ಡಿ ಮಗನ್ ಲೈಫು ಸಿನಿಮಾದ ಮೂಲಕ ಐಶ್ವರ್ಯ ರಾವ್ ನಟಿಯಾಗಿ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದರು. ಮೊದಲ ನಟನೆಯಲ್ಲಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಐಶ್ವರ್ಯಗೆ ನಟ ಬಲರಾಜ್ ವಾಡಿ ಅವರಿಂದ ಮತ್ತೊಂದು ಸಿನಿಮಾದ ಅವಕಾಶ ಒದಗಿ ಬಂತು. ಮಧುಚಂದ್ರ ನಿರ್ದೇಶನದ ಭೂಗತ ಲೋಕ ಹಂದರ ಹೊಂದಿರುವ ಸಿನಿಮಾ ರವಿ ಹಿಸ್ಟರಿಯಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದರು. ಆ ಬಳಿಕ ಹಳ್ಳಿಸೊಗಡಿನ ಕಥೆಹೊಂದಿರುವ ರಣಹೇಡಿ ಸಿನಿಮಾದಲ್ಲಿ ಕರ್ಣ ಕುಮಾರ್ ಗೆ ಜೋಡಿಯಾಗಿ ಮಿಂಚಿದರು.

    Aishwarya Rao3

    ಆ ಬಳಿಕ ಧನಂಜಯ್ ರಂಜನ್ ನಿರ್ದೇಶನ ಮೈಸೂರ್ ಡೈರೀಸ್ ಸಿನಿಮಾದಲ್ಲಿ ನಟಿಸಿದರು. ಸದ್ಯ ಮಂಜೇಶ್ ಬಾಗಾವತ್ ನಿರ್ದೇಶನದ ಕ್ರೀಡಾ ಆಧಾರಿತ ಸಹರ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದ ಶೂಟಿಂಗ್ ಮುಕ್ತಾಯ ಹಂತಕ್ಕೆ ಬಂದಿದೆ. ಇದರ ಜೊತೆಗೆ ಶಿವ ಪ್ರಭು ನಿರ್ದೇಶನದ ನಿಮ್ಮ ಕರೆ ನಿರೀಕ್ಷಣೆಯಲ್ಲಿದೆ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

    ಸದ್ಯ ಐಶ್ವರ್ಯ ನಟನೆಯ ಎರಡು ಮೂರು ಸಿನಿಮಾಗಳು ರಿಲೀಸ್‍ಗೆ ರೆಡಿಯಾಗಿವೆ. ಈ ನಡುವೆ ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡಲಿರುವ ಇಲಾಖೆ ಸಿನಿಮಾಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರಂತೆ ಐಶ್ವರ್ಯ.

    ಐಶ್ವರ್ಯ ನಟನೆ ಒಂದು ಕಡೆಯಾದರೆ ಅವರು ಯೋಗ ಶಿಕ್ಷಕಿ. ಮೈಸೂರಿಗೆ ಬರುವ ವಿದೇಶಿ ಪ್ರವಾಸಿಗರಿಗೆ ಉಚಿತವಾಗಿ ಅಷ್ಟಾಂಗ ವಿನ್ಯಾಸ ಎಂಬ ಯೋಗ ಹೇಳಿಕೊಡುತ್ತಾರೆ. ಅದೇನೆ ಇರಲಿ ಇಂದು ಐಶ್ವರ್ಯ ರಾವ್ ಕನ್ನಡದ ಸಿನಿಮಾ ಲೋಕದಲ್ಲಿ ಭರವಸೆ ನಟಿಯಾಗಿ ಮಿಂಚುತ್ತಿದ್ದಾರೆ. ಅಲ್ಲದೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಯಾವುದೇ ಪಾತ್ರ ಕೊಟ್ಟರು ನಟಿಸುತ್ತೇನೆ ಎನ್ನುವ ಐಶ್ವರ್ಯ ಸ್ಟಾರ್ ಹೀರೋಗಳ ಜೊತೆ ಮಿಂಚಬೇಕು ಎಂಬ ಹಂಬಲವಿದೆ. ಪ್ರತಿಭಾನ್ವಿತೆಯಾಗಿರುವ ಐಶ್ವರ್ಯ ರಾವ್‍ಗೆ ಕಮರ್ಷಿಯಲ್ ಸಿನಿಮಾ ಸೇರಿದಂತೆ ಒಳ್ಳೊಳ್ಳೆ ಸಿನಿಮಾಗಳು ಅವರನ್ನು ಹರಸಿ ಬರಲಿ.

  • ಚಂದನವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭಾವಂತ ನಿರ್ದೇಶಕ ಅಂಬರೀಶ್

    ಚಂದನವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭಾವಂತ ನಿರ್ದೇಶಕ ಅಂಬರೀಶ್

    ಬೆಂಗಳೂರು: ಸಿನಿಮಾ ನಿರ್ದೇಶಕನಾಗಬೇಕು ಎಂಬ ಕನಸ್ಸನ್ನು ಹೊತ್ತು ರೈತ ಕುಟುಂಬದಿಂದ ಗಾಂಧಿನಗರಕ್ಕೆ ಬಂದ ಪ್ರತಿಭಾವಂತ ಹುಡುಗ ಇಂದು ತನ್ನ ಕನಸಿನಂತೆ ಡೈರೆಕ್ಟರ್ ಕ್ಯಾಪ್ ತೊಟ್ಟು ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ.

    DIRECTER AMBARISH 3

    ಸ್ವಂತಿಕೆ, ಸ್ವಾಭಿಮಾನ, ಸತತ ಪರಿಶ್ರಮದಿಂದ ನಿರ್ದೇಶಕನಾಗಿ ಬೆಳೆಯುತ್ತಿರುವ ಈ ಹುಡುಗನ ಹೆಸರು ಅಂಬರೀಶ್. ಚಿತ್ರರಂಗದಲ್ಲಿ ಯಾರ ನೆರವೂ, ಬೆಂಬಲ ಇಲ್ಲದೆ ಕೇವಲ ಪ್ರತಿಭೆಯಿಂದ ಗುರುತಿಸಿಕೊಳ್ಳುತ್ತಿರುವ ಅಂಬರೀಶ್ ಚಿತ್ರರಂಗದಲ್ಲಿ ಹಂತ ಹಂತವಾಗಿ ಹೆಸರು ಮಾಡುತ್ತಿದ್ದಾರೆ. ಚಿಕ್ಕಂದಿನಿಂದಲೂ ತಾನೊಬ್ಬ ನಿರ್ದೇಶಕನಾಗಬೇಕು ದೇಸಿ ಸೊಬಗು ಒಳಗೊಂಡಿರುವ ಒಳ್ಳೆಯ ಕಥೆ, ಕಂಟೆಟ್ ಇರುವ ಸಿನಿಮಾ ನಿರ್ದೇಶನ ಮಾಡಿ ಮನರಂಜನೆ ನೀಡಬೇಕು ಎಂಬುದು ಅಂಬರೀಶ್ ಅವರ ಕನಸು. ಕಾಲೇಜು ದಿನಗಳಲ್ಲೇ ನಾಟಕಗಳಿಗೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದ ಅಂಬರೀಶ್, ರಂಗಭೂಮಿ ಕಲಾವಿದನಾಗಿ ರಂಗಭೂಮಿ ನಾಟಕಗಳನ್ನೂ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು.

    ನಿರ್ದೇಶನದ ಜೊತೆ ರಂಗಭೂಮಿ ನಾಟಕ ಹಾಗೂ ಬೀದಿ ನಾಟಕಗಳಲ್ಲಿಯೂ ಅಭಿನಯಿಸಿರುವ ಅಂಬರೀಶ್, ವಿದ್ಯಾಭ್ಯಾಸದ ಬಳಿಕ ಜಾಹೀರಾತುಗಳಲ್ಲಿ ಸ್ಕ್ರಿಪ್ಟ್ ಹಾಗೂ ಕಂಟೆಂಟ್ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಧಾರಾವಾಹಿ ಹಾಗೂ ಅನೇಕ ಸಿನಿಮಾಗಳಿಗೆ ಬರಹಗಾರನಾಗಿ ಅಂಬರೀಶ್ ಅನುಭವ ಪಡೆದಿದ್ದಾರೆ. ಆ ಅನುಭವದ ಶಕ್ತಿಯಿಂದಲೇ `ಜ್ವಲಂತ’, `ಕಾಲಂತಕ’ ಹಾಗೂ `ಹೋಪ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಚಿತ್ರರಂಗದಲ್ಲಿ ಯಾರ ಸಪೋರ್ಟ್ ಇಲ್ಲದೆ ಸ್ವಂತ ಪ್ರತಿಭೆ, ಸ್ವಾಭಿಮಾನದಿಂದ ಇಂದು ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ ಅಂಬರೀಶ್.

    2016ರಲ್ಲಿ ತೆರೆಕಂಡ `ಜ್ವಲಂತ’ ಸಿನಿಮಾ ಮೂಲಕ ಚಂದನವನದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟ ಅಂಬರೀಶ್, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ `ಜ್ವಲಂತ’ ನಂತರ `ಕಾಲಂತಕ’ ಎಂಬ ಥ್ರಿಲ್ಲರ್ ಸಿನಿಮಾ ಕೂಡ ನಿರ್ದೇಶನ ಮಾಡಿದ್ದಾರೆ. ಯಶ್ ಶೆಟ್ಟಿ, ಅರ್ಚನಾ ಜೋಯಿಸ್ ಅಭಿನಯದ ಈ ಚಿತ್ರ ಬಿಡುಗಡೆಯ ಹಂತದಲ್ಲಿದೆ.

    DIRECTER AMBARISH 4

    ಇದೀಗ `ಹೋಪ್’ ಎನ್ನುವ ಹೊಸ ಪ್ರಾಜೆಕ್ಟ್ ಚಿತ್ರೀಕರಣ ಕಂಪ್ಲೀಟ್ ಮಾಡಿ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಅಂಬರೀಶ್ ಬ್ಯುಸಿಯಾಗಿದ್ದಾರೆ. ಇದರ ನಡುವೆ ಹೊಸ ಪ್ರಾಜೆಕ್ಟ್ ಒಂದನ್ನು ಕೈಗೆತ್ತಿಕೊಂಡಿದ್ದು ಸ್ಟಾರ್ ನಟನಿಗೆ ಆಕ್ಷನ್ ಕಟ್ ಹೇಳುವ ಆಲೋಚನೆಯಲ್ಲಿರುವ ಅಂಬರೀಶ್ ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿದ್ದಾರೆ. ಕನಸುಗಳನ್ನು ಕಾಣೋದಲ್ಲ ಅವುಗಳನ್ನು ನಿರಂತರ ಪರಿಶ್ರಮದಿಂದ ಸಾಕಾರಗೊಳಿಸಬೇಕು ಎನ್ನುವ ಅಂಬರೀಶ್, ಪ್ರತಿ ಕೆಲಸದಲ್ಲೂ ಸ್ವಂತಿಕೆ ಎನ್ನುವುದು ತುಂಬಾ ಮುಖ್ಯ ಅದುವೇ ನನ್ನ ಮೂಲಮಂತ್ರ ಎನ್ನುತ್ತಾರೆ.

    ನಿರ್ದೇಶಕನಾಗಿ ಉತ್ತಮ ಸಿನಿಮಾಗಳನ್ನು ನಿರ್ದೇಶನ ಮಾಡಬೇಕು, ಸಿನಿಮಾಗಳ ಮೂಲಕವೇ ಗುರುತಿಸಿಕೊಳ್ಳಬೇಕು ಎಂಬುದು ಅಂಬರೀಶ್ ಅವರ ಆಸೆ. ನಿರ್ದೇಶಕನಾಗಿ ಅಂಬರೀಶ್ ಇನ್ನೂ ಹೆಚ್ಚು ಹೆಸರು ಮಾಡಲಿ, ಉತ್ತಮ ಸಿನಿಮಾಗಳನ್ನು ಚಂದನವನಕ್ಕೆ ನೀಡಲಿ ಎಂಬುದೇ ನಮ್ಮ ಆಶಯ.

  • ಸುಪ್ರೀಂ ಹೀರೋ ಪುತ್ರನಿಗೆ ಒಲಿದು ಬಂದ ಅದೃಷ್ಟ – ಬಿಗ್ ಬಜೆಟ್ ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್!

    ಸುಪ್ರೀಂ ಹೀರೋ ಪುತ್ರನಿಗೆ ಒಲಿದು ಬಂದ ಅದೃಷ್ಟ – ಬಿಗ್ ಬಜೆಟ್ ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್!

    ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಚಂದನವನಕ್ಕೆ ಎಂಟ್ರಿ ಕೊಟ್ಟಿರೋದು ಎಲ್ಲರಿಗೂ ಗೊತ್ತಿರೋ ವಿಷ್ಯ. ಸೀತಾಯಣ ಸಿನಿಮಾ ಮೂಲಕ ಸಿನಿ ಜರ್ನಿ ಆರಂಭಿಸಿರುವ ಅಕ್ಷಿತ್ ಗೆ ಮೊದಲ ಸಿನಿಮಾ ಬಿಡುಗಡೆಗೂ ಮುನ್ನವೇ ಹಲವು ಸಿನಿಮಾ ಆಫರ್ ಗಳು ಅರಸಿ ಬರುತ್ತಿವೆ. ಇದೀಗ ಅಕ್ಷಿತ್ ಶಶಿಕುಮಾರ್ ಬಿಗ್ ಬಜೆಟ್ ಸಿನಿಮಾವೊಂದಕ್ಕೆ ಸಹಿ ಹಾಕಿದ್ದು, ಚಿತ್ರದ ಅದ್ಧೂರಿ ಫೋಟೋ ಶೂಟ್‍ನಲ್ಲೂ ಭಾಗಿಯಾಗಿದ್ದಾರೆ.

    AKSHIT 1

    ಹೌದು, ಬಳ್ಳಾರಿ ದರ್ಬಾರ್ ಸಿನಿಮಾ ಖ್ಯಾತಿಯ ನಿರ್ದೇಶಕ ಸ್ಮೈಲ್ ಶ್ರೀನು ನಿರ್ದೇಶನದ `ಓ ಮೈ ಲವ್’ ಸಿನಿಮಾದಲ್ಲಿ ಅಕ್ಷಿತ್ ನಟಿಸುತ್ತಿದ್ದಾರೆ. ಚಿತ್ರಕ್ಕಾಗಿ ಅದ್ಧೂರಿ ಫೋಟೋ ಶೂಟ್ ಕೂಡ ನಡೆಯುತ್ತಿದ್ದು, ಅಕ್ಷಿತ್ ಶಶಿಕುಮಾರ್ ಜೋಡಿಯಾಗಿ ನಟಿ ಕೀರ್ತಿ ಕಲಕೇರಿ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

    AKSHIT 2

    ಹದಿ ಹರೆಹಯದ ವಯಸ್ಸಿನ ಯುವಕ-ಯುವತಿಯರ ಪ್ರೀತಿ ಪುರಾಣ, ತಳಮಳಗಳನ್ನು ಓ ಮೈ ಲವ್ ಸಿನಿಮಾ ಹೇಳ ಹೊರಟಿದ್ದು, ಫ್ಯಾಮಿಲಿ ಸೆಂಟಿಮೆಂಟ್ ಕೂಡ ಸಿನಿಮಾದಲ್ಲಿದೆ. ನಿರ್ದೇಶಕ ಸ್ಮೈಲ್ ಶ್ರೀನು ರೆಗ್ಯೂಲರ್ ಜಾನರ್ ಹೊರತುಪಡಿಸಿ ಡಿಫ್ರೆಂಟ್ ಆದ ನಿರೂಪಣೆ ಮೂಲಕ ‘ಓ ಮೈ ಲವ್’ ಸಿನಿಮಾ ಕಟ್ಟಿಕೊಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಸಿನಿಮಾ ತಯಾರಾಗಲಿದ್ದು, ಮೇಕಿಂಗ್, ಸಾಂಗ್ಸ್, ಸ್ಟಾರ್ ಕಾಸ್ಟ್ ಎಲ್ಲದರಲ್ಲೂ ಸಿನಿಮಾ ಅದ್ಧೂರಿತನ ಮೇರೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

    AKSHIT 3

    ಜಿಸಿಬಿ ಪ್ರೊಡಕ್ಷನ್ಸ್ ಮೂಲಕ ಸಿನಿಮಾ ನಿರ್ಮಾಣವಾಗುತ್ತಿದ್ದು, ಜಿಸಿಬಿ ರಾಮಾಂಜಿನಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಚರಣ್ ಅರ್ಜುನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಬೆಂಗಳೂರು, ಮಂಗಳೂರು, ಹೈದ್ರಾಬಾದ್ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ‘ಓ ಮೈ ಲವ್’ ಸಿನಿಮಾ ಚಿತ್ರೀಕರಣ ನಡೆಯಲಿದೆ.

    AKSHIT 4