Tag: ಚೆನ್ನೈ

  • ಮಾಜಿ ಹಣಕಾಸು ಸಚಿವ ಚಿದಂಬರಂ, ಪುತ್ರ ಕಾರ್ತಿ ಮನೆ ಮೇಲೆ ಸಿಬಿಐ ದಾಳಿ

    ಮಾಜಿ ಹಣಕಾಸು ಸಚಿವ ಚಿದಂಬರಂ, ಪುತ್ರ ಕಾರ್ತಿ ಮನೆ ಮೇಲೆ ಸಿಬಿಐ ದಾಳಿ

    – ಸರ್ಕಾರ ನನ್ನ ಮಗನನ್ನ ಟಾರ್ಗೆಟ್ ಮಾಡ್ತಿದೆ ಎಂದ ಚಿದಂಬರಂ

    ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ.

    ಚೆನ್ನೈನಲ್ಲಿರುವ ಪಿ. ಚಿದಂಬರಂ ಅವರ ಮನೆ ಹಾಗೂ ಕಾರೈಕುಡಿಯಲ್ಲಿರುವ ಕಾರ್ತಿ ಅವರ ಮನೆ ಸೇರಿದಂತೆ ಒಟ್ಟು 14 ಕಡೆ ಸಿಬಿಐ ದಾಳಿ ನಡೆಸಿದೆ. ಕಾರ್ತಿ ಚಿದಂಬರಂ ಮೇಲೆ ಅಕ್ರಮ ಹಣ ಸಂಪಾದನೆಯ ಆರೋಪವಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

    ಏನಿದು ಪ್ರಕರಣ?: 2008ರಲ್ಲಿ ಐಎನ್‍ಎಕ್ಸ್ ಮೀಡಿಯಾ ಕಾರ್ತಿ ಅವರ ಅಡ್ವಾಂಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಸಂಸ್ಥೆ ಹಾಗೂ ಅದರ ಸಹ ಸಂಸ್ಥೆಗಳಿಗೆ ಹಣ ಪಾವತಿಸಿ ಶೇರ್‍ಗಳನ್ನ ನೀಡಿತ್ತು. ಪೀಟರ್ ಮುಖರ್ಜಿ ಅವರ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆ ಹಲವು ಕಂತುಗಳಲ್ಲಿ ಹಣವನ್ನ ಪಾವತಿಸಿತ್ತು. ಅಲ್ಲದೆ 60 ಶೇರುಗಳನ್ನು ಲಂಡನ್ ಮೂಲದ ಆರ್ಟಿವಿಯಾ ಡಿಜಿಟಲ್ ಯುಕೆ ಲಿಮಿಟಡ್ ಕಂಪೆನಿಯಿಂದ ಕಾರ್ತಿ ಅವರ ಸಂಸ್ಥೆಗೆ ವರ್ಗಾಯಿಸಲಾಗಿತ್ತು ಎಂದು ವರದಿಯಾಗಿದೆ.

    ಈ ಹಿಂದೆ ಕಾರ್ತಿ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಕಾರ್ತಿ ಅವರ ಸಂಸ್ಥೆಯ ಬಗ್ಗೆ ಮಾಹಿತಿವುಳ್ಳ ಹಾರ್ಡ್ ಡಿಸ್ಕ್‍ಗಳನ್ನ ಜಪ್ತಿ ಮಾಡಲಾಗಿತ್ತು. ಕಾರ್ತಿ ಅವರು ಐಎನ್‍ಎಕ್ಸ್ ಮೀಡಿಯಾದಿಂದ ಕಿಕ್‍ಬ್ಯಾಕ್ ಪಡೆದಿದ್ದಾರೆಂಬುದು ತನಿಖೆಯಿಂದ ಬಹಿರಂಗವಾಗಿತ್ತು. 2008 ಸೆಪ್ಟೆಂಬರ್ 22ರಂದು ಎಫ್‍ಐಪಿಬಿ(ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ) ಂದ 220 ಮಿಲಿಯನ್ ಡಾಲರ್ ಕ್ಲಿಯರೆನ್ಸ್‍ಗಾಗಿ ಅರ್ಜಿ ಹಾಕಿದ್ದ ಐಎನ್‍ಎಕ್ಸ್ ಮೀಡಿಯಾ ಕಾರ್ತಿ ಅವರ ಸಂಸ್ಥೆಗೆ 35 ಲಕ್ಷ ರೂ. ನೀಡಿದೆ ಎನ್ನುವ ಆರೋಪ ಕೇಳಿ ಬಂಧೀತ್ತು.

    ಈ ಹಿಂದೆ ಐಎನ್‍ಎಕ್ಸ್ ಮೀಡಿಯಾದ ಮಲೀಕರಾಗಿದ್ದ ಪೀಟರ್ ಮುಖರ್ಜಿ ಮತ್ತು ಪತ್ನಿ ಇಂದ್ರಾಣಿ ಮುಖರ್ಜಿ ಸದ್ಯ ತಮ್ಮ ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಕೊಲೆ ಪ್ರಕರಣದ ತನಿಖೆ ವೇಳೆ ಮುಖರ್ಜಿ ಅವರ ಹಣಕಾಸು ವ್ಯವಹಾರಗಳನ್ನ ಪರೀಶಿಲನೆಗೆ ಒಳಪಡಿಸಿದಾಗ ಐಎನ್‍ಎಕ್ಸ್ ಮೀಡಿಯಾ ಡೀಲ್ ಬಗ್ಗೆ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ. 2009ರಲ್ಲಿ ಮುಖರ್ಜಿ ಐಎನ್‍ಎಕ್ಸ್ ಮೀಡಿಯಾದಿಂದ ಹೊರಬಂದಿದ್ದರು ಎಂದು ಎನ್‍ಡಿಟಿವಿ ವರದಿ ಮಾಡಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಚಿದಂಬರಂ, ಸರ್ಕಾರ ಸಿಬಿಐ ಹಾಗೂ ಇತರೆ ಸಂಸ್ಥೆಗಳಗಳನ್ನ ಬಳಸಿಕೊಂಡು ನನ್ನ ಮಗ ಹಾಗೂ ಆತನ ಸ್ನೇಹಿತರನ್ನೇ ಟಾರ್ಗೆಟ್ ಮಾಡುತ್ತಿದೆ. ನನ್ನನ್ನು ಸುಮ್ಮನಾಗಿಸಬೇಕು, ನನ್ನ ಬರವಣಿಗೆಯನ್ನ ನಿಲ್ಲಿಸಬೇಕು ಎಂಬುದೇ ಸರ್ಕಾರದ ಉದ್ದೇಶ. ವಿರೋಧ ಪಕ್ಷದ ನಾಯಕರು, ಪತ್ರಕರ್ತರು, ಅಂಕಣಕಾರರು ಹಾಗೂ ಎನ್‍ಜಿಓಗಳ ವಿಷಯದಲ್ಲೂ ಸರ್ಕಾರ ಇದೇ ಪ್ರಯತ್ನ ಮಾಡಿದೆ. ನಾನು ಹೇಳೋದು ಇಷ್ಟೇ, ನಾನು ಮಾತನಾಡುವುದು ಹಾಗೂ ಬರೆಯುವುದನ್ನ ಮುಂದುವರೆಸುತ್ತೇನೆ ಎಂದಿದ್ದಾರೆ.

  • ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

    ರಾಜಕೀಯಕ್ಕೆ ಎಂಟ್ರಿ ಕೊಡ್ತೀರಾ? ಅಭಿಮಾನಿಗಳ ಪ್ರಶ್ನೆಗೆ ರಜನೀಕಾಂತ್ ಉತ್ತರಿಸಿದ್ದು ಹೀಗೆ

    ಚೆನ್ನೈ:ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ರಾಜಕೀಯ ಹೈಡ್ರಾಮದ ವೇಳೆ ರಜನೀಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಈಗ ರಾಜಕೀಯಕ್ಕೆ ಸೇರುವ ಬಗ್ಗೆ ನನ್ನ ನಿಲುವು ಏನು ಎನ್ನುವುದನ್ನು ಅಭಿಮಾನಿಗಳಿಗೆ ಸೂಪರ್ ಸ್ಟಾರ್ ತಿಳಿಸಿದ್ದಾರೆ.

    9 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಸಂವಾದ ನಡೆಸಿದ ರಜನಿಕಾಂತ್ ಸದ್ಯಕ್ಕೆ ರಾಜಕೀಯಕ್ಕೆ ಬರುವುದನ್ನು ಅಲ್ಲಗಳೆದಿದ್ದಾರೆ. ರಾಜಕೀಯ ರಂಗಕ್ಕೆ ಕಾಲಿಡುವ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತಾನಾಡಿದ ಅವರು, ಭವಿಷ್ಯದಲ್ಲಿ ದೇವರು ಬಯಸಿದ್ರೆ ರಾಜಕೀಯಕ್ಕೆ ಕಾಲಿಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

    ಸದ್ಯಕ್ಕೆ ದೇವರು ನಟನಾಗಲು ಸೂಚಿಸಿದ್ದಾರೆ. ಮುಂದೇನಾಗುತ್ತದೆ ಎನ್ನುವುದು ಗೊತ್ತಿಲ್ಲ ಎಂದ ಅವರು ರಾಜಕೀಯ ಪಕ್ಷಗಳಿಗೆ ಸೇರ್ಪಡೆ ವದಂತಿಗಳನ್ನ ಅಲ್ಲಗೆಳೆದು, ಪಕ್ಷಗಳು ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    1996ರಲ್ಲಿ ತಮಿಳುನಾಡಿನಲ್ಲಿ ಜಯಲಲಿತಾ ವಿರುದ್ಧ ಪ್ರಚಾರ ನಡೆಸಿದ್ದನ್ನು ರಾಜಕೀಯ ಅಪಘಾತಕ್ಕೆ ಹೋಲಿಸಿದ ಅವರು, 21 ವರ್ಷಗಳ ಹಿಂದೆ ನಾನು ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ. ಈ ಘಟನೆಯಿಂದ ರಾಜಕೀಯ ಪಕ್ಷಗಳನ್ನು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡವು. ಆದರೆ ಈಗ ರಾಜಕೀಯಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ ಎಂದು ಅಭಿಮಾನಿಗಳಿಗೆ ತಿಳಿಸಿದರು.

    ಮದ್ಯಪಾನ ಮಾಡಬೇಡಿ: ನಿಮ್ಮ ಮಕ್ಕಳು ಮತ್ತು ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಿ. ಧೂಮಪಾನ ಮತ್ತು ಮದ್ಯಪಾನದಿಂದ ನಿಮ್ಮ ಜೀವನವನ್ನು ನೀವು ಹಾಳು ಮಾಡಬೇಡಿ. ಧೂಮಪಾನ ಮತ್ತು ಮದ್ಯಪಾನ ನಿಮ್ಮ ಆರೋಗ್ಯವನ್ನು ಹಾಳು ಮಾತ್ರ ಮಾಡುವುದಿಲ್ಲ ಬದಲಾಗಿ ನಿಮ್ಮ ನಿರ್ಧಾರ ಕೈಗೊಳ್ಳುವ ಸಾಮಥ್ರ್ಯವನ್ನು ಕಡಿಮೆ ಮಾಡುತ್ತದೆ. ಇದರಿಂದ ನಾನು ತುಂಬಾ ತೊಂದರೆಯನ್ನು ಅನುಭವಿಸಿದ್ದೇನೆ. ಹೀಗಾಗಿ ನನ್ನ ಸಲಹೆಯನ್ನು ನೀವು ಗಂಭೀರವಾಗಿ ಸ್ವೀಕರಿಸಿ ಎಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದರು.

    ಮೇ 28ರಿಂದ ಪ ರಂಜೀತ್ ಅವರ ನಿರ್ದೇಶನದಲ್ಲಿ ಮುಂದಿನ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ ಎಂದು ರಜನೀಕಾಂತ್ ತಿಳಿಸಿದರು.

  • ಮೆಡಿಕಲ್  ಶಾಪ್ ಆಯ್ತು, ಈಗ ದೇವಾಲಯದಲ್ಲೇ ಅಕ್ರಮ ಮದ್ಯ ಮಾರಾಟ!

    ಮೆಡಿಕಲ್ ಶಾಪ್ ಆಯ್ತು, ಈಗ ದೇವಾಲಯದಲ್ಲೇ ಅಕ್ರಮ ಮದ್ಯ ಮಾರಾಟ!

    ಚೆನ್ನೈ: ಕೇರಳದ ಮೆಡಿಕಲ್ ಶಾಪ್‍ನಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದರೆ, ಈಗ ತಮಿಳುನಾಡಿನಲ್ಲಿ ದೇವಸ್ಥಾನದಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.

    ಕಡಲೂರು ಸಮೀಪದ ವಿರುಧಗಿರಿಶ್ವರರ್ ದೇವಾಲಯದ ಆವರಣದಲ್ಲಿ ಮದ್ಯ ಮಾರಾಟವಾಗುತ್ತಿರುವ ದೃಶ್ಯವನ್ನು ತಮಿಳುವಾಹಿನಿಯೊಂದು ಪ್ರಸಾರಮಾಡಿದೆ.

    ಪುದಿಯ ಥಲೈಮುರೈ ವಾಹಿನಿ ಈ ಸುದ್ದಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ಅವಧಿಯಲ್ಲಿ ದೇವಾಲಯದ ಕೆರೆಯ ಸಮೀಪದಲ್ಲಿ ವ್ಯಕ್ತಿಯೊಬ್ಬ ಮದ್ಯವನ್ನು ಮಾರಾಟ ಮಾಡುತ್ತಿರುವ ದೃಶ್ಯವನ್ನು ತೋರಿಸಿದೆ.

    illegal liquor sales
    ಫೋಟೋ ಕೃಪೆ: ಪುದಿಯ ಥಲೈಮುರೈ

    ಆವರಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಷ್ಟೇ ಅಲ್ಲದೇ ಮದ್ಯ ಮಾರಾಟ ಮಾಡುತ್ತಿರುವುದರಿಂದ ಭಕ್ತರು ಸಹ ಈ ಕರೆಯ ಹತ್ತಿರ ಬರುತ್ತಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

    ವಾಹಿನಿಯಲ್ಲಿ ಸುದ್ದಿ ಪ್ರಸಾರವಾದ ಬಳಿಕ ಕಡಲೂರು ಜಿಲ್ಲೆಯ ಎಸ್‍ಪಿ ವಿಜಯ್‍ಕುಮಾರ್ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

    ಸುಪ್ರೀಂ ಹೇಳಿದ್ದು ಏನು?
    ಮದ್ಯಪಾನದಿಂದಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2017ರ ಏಪ್ರಿಲ್ 1ರ ಒಳಗಡೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಎರಡೂ ಬದಿಯ 500 ಮೀಟರ್ ವ್ಯಾಪ್ತಿಯಲ್ಲಿನ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿತ್ತು. ಅಷ್ಟೇ ಅಲ್ಲದೇ ಈ ಮದ್ಯದ ಅಂಗಡಿಗಳ ಪರಾವನಗಿಗಳನ್ನು ಮಾರ್ಚ್ 31ರ ಬಳಿಕ ನವೀಕರಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ಪೀಠ ಹೇಳಿತ್ತು.

    ಇದನ್ನೂ ಓದಿ:  ಹೈವೇಯಲ್ಲಿದ್ದ ಬಾರ್ ಕ್ಲೋಸ್ ಆದ್ರೇನು ಮೆಡಿಕಲ್ ಶಾಪಲ್ಲಿ ಮದ್ಯ ಸಿಗ್ತಿತ್ತು!

  • ಅಪಾರ್ಟ್‍ಮೆಂಟ್‍ನಲ್ಲಿ ಭಾರೀ ಅಗ್ನಿ ಅವಘಡ – ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

    ಅಪಾರ್ಟ್‍ಮೆಂಟ್‍ನಲ್ಲಿ ಭಾರೀ ಅಗ್ನಿ ಅವಘಡ – ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

    ಚೆನ್ನೈ: ಬೆಳ್ಳಂಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

    ಇಲ್ಲಿನ ವಡಪಲನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ಇಂದು ಬೆಳಿಗ್ಗೆ 5.30ರ ವೇಳೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಿಯಂತ್ರಿಸಿದ್ದಾರೆ.

    ಆದ್ರೆ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದ 7 ಜನರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅವರು ಸಾಕಷ್ಟು ಹೊಗೆ ಕುಡಿದಿದ್ದರಿಂದ ಸಾವು ಸಂಭವಿಸಿದೆ. ಯಾರಿಗೂ ಸುಟ್ಟ ಗಾಯಗಳಾಗಿರಲಿಲ್ಲ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಪಾರ್ಟ್‍ಮೆಂಟ್‍ನ ಪಾರ್ಕಿಂಗ್ ಜಾಗದಲ್ಲಿ ವಿದ್ಯುತ್ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಗ್ನಿಶಾಮಕ ಸಳದ ಅಧಿಕಾರಿಗಳು ಶಂಕಿಸಿದ್ದಾರೆ. ಕಟ್ಟಡದಲ್ಲಿ ನಿಲ್ಲಿಸಲಾಗಿದ್ದ 10ಕ್ಕೂ ಹೆಚ್ಚು ಬೈಕ್‍ಗಳು ಸಹ ಸುಟ್ಟು ಭಸ್ಮವಾಗಿವೆ.

    chennai fire 1

    house fire

    chennai apartment fire

  • ಅಭಿಮಾನಿಗಳೇ ಕನ್‍ಫ್ಯೂಸ್ ಆಗ್ಬೇಡಿ, ಅಪಘಾತದಲ್ಲಿ ಮೃತಪಟ್ಟಿರುವುದು ರೇಖಾ ಕೃಷ್ಣಪ್ಪ ಅಲ್ಲ, ರೇಖಾ ಸಿಂಧು

    ಅಭಿಮಾನಿಗಳೇ ಕನ್‍ಫ್ಯೂಸ್ ಆಗ್ಬೇಡಿ, ಅಪಘಾತದಲ್ಲಿ ಮೃತಪಟ್ಟಿರುವುದು ರೇಖಾ ಕೃಷ್ಣಪ್ಪ ಅಲ್ಲ, ರೇಖಾ ಸಿಂಧು

    ಚೆನ್ನೈ: ಕಾರು ಅಪಘಾತದಲ್ಲಿ ನಟಿ ಹಾಗೂ ಮಾಡೆಲ್ ಆಗಿದ್ದ ರೇಖಾ ಸಿಂಧು ಸಾವನ್ನಪ್ಪಿದ್ದಾರೆ.

    ಚೆನ್ನೈ- ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 22 ವರ್ಷದ ರೇಖಾ ಸಿಂಧು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ

    ರೇಖಾ ತನ್ನ ಸ್ನೇಹಿತರ ಜೊತೆಯಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಪೇರಣಂಬಟ್ ಬಳಿಯ ಸುಣ್ಣಂಪುಕುಟ್ಟೈ ಬಳಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

    ಅಪಘಾತದಲ್ಲಿ ಮೃತಪಟ್ಟ ಇತರರನ್ನು ಅಭಿಷೇಕ್ ಕುಮಾರನ್(22), ಜಯಂಚಂದ್ರನ್(23) ಹಾಗೂ ರಕ್ಷಣ್(20) ಎಂದು ಗುರುತಿಸಲಾಗಿದೆ. ಮೃತರನ್ನು ತಿರುಪಟ್ಟೂರ್ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನೆ ಬಗ್ಗೆ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

    ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದ ರೇಖಾ ಸಿಂಧು ಹಲವು ಜಾಹೀರಾತುಗಳಲ್ಲಿ ಹಾಗೂ ತಮಿಳು ಮತ್ತು ಕನ್ನಡ ಟಿವಿ ಕಾರ್ಯಕ್ರಮಗಳಲ್ಲಿ ಅಭಿನಯಿಸಿದ್ದರು.

    ಆದ್ರೆ ಕೆಲವರು ರೇಖಾ ಸಿಂಧು ಸಾವಿನ ಸುದ್ದಿ ಕೇಳಿ ಮತ್ತೊಬ್ಬ ನಟಿ ರೇಖಾ ಕೃಷ್ಣಪ್ಪ ಎಂದು ತಪ್ಪು ತಿಳಿದಿದ್ದರು. ಈ ಬಗ್ಗೆ ರೇಖಾ ಕೃಷ್ಣಪ್ಪ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ನಾನು ಚೆನ್ನಾಗಿದ್ದೇನೆ. ದೇವಸ್ಥಾನದಲ್ಲಿದ್ದೇನೆ. ರೇಖಾ ಸಿಂಧು ಎಂಬವರು ಸಾವನ್ನಪ್ಪಿದ್ದಾರೆ. ಆದ್ರೆ ಕೆಲವರು ಅದು ನಾನು ಎಂದು ತಪ್ಪು ತಿಳಿದಿದ್ದಾರೆ. ಬೆಳಗ್ಗಿನಿಂದ ತುಂಬಾ ಕರೆಗಳು ಬರ್ತಿವೆ. ನನಗೆ ಏನೂ ಆಗಿಲ್ಲ ಎಂದು ಹೇಳಿದ್ದಾರೆ.

    https://www.facebook.com/rekha.krishnappa.7/videos/1445445648847641/

    rekha sindhu 5

    rekha sindhu 4

    rekha

    rekha sindhu 1

    rekha sindhu

  • ಪ್ರಧಾನಿ ಭೇಟಿಗೆ ಅವಕಾಶ ಕೊಟ್ಟಿಲ್ಲವೆಂದು ದೆಹಲಿಯಲ್ಲಿ ಬೆತ್ತಲೆಯಾಗಿ ಬೀದಿಗಿಳಿದ ತಮಿಳು ರೈತರು!

    ಪ್ರಧಾನಿ ಭೇಟಿಗೆ ಅವಕಾಶ ಕೊಟ್ಟಿಲ್ಲವೆಂದು ದೆಹಲಿಯಲ್ಲಿ ಬೆತ್ತಲೆಯಾಗಿ ಬೀದಿಗಿಳಿದ ತಮಿಳು ರೈತರು!

    ಚೆನ್ನೈ: ಸಾಲ ಮನ್ನಾ ಮತ್ತು ಬರ ಪ್ಯಾಕೇಜ್‍ಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರೋ ತಮಿಳುನಾಡು ರೈತರ ಅಕ್ರೋಶದ ಕಟ್ಟೆ ಒಡೆದಿದೆ.

    TAMIL

    ಕಳೆದ 28 ದಿನಗಳಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಕೆಲವು ಮಂದಿಯ ನಿಯೋಗವೊಂದು ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಮನವಿ ಮಾಡಲು ಮುಂದಾಗಿದ್ದಾರೆ. ಆದರೆ ಪ್ರಧಾನಿ ಭೇಟಿಗೆ ಅವಕಾಶ ನೀಡಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಪ್ರಧಾನಿ ಕಚೇರಿಯಿರುವ ಸೌತ್‍ಬ್ಲಾಕ್‍ನಲ್ಲಿ ರಸ್ತೆಯಲ್ಲೇ ಬೆತ್ತಲೆಯಾಗಿ ಪ್ರತಿಭಟಿಸಿದ್ದಾರೆ.

    TAMIL 2

    ನಗ್ನವಾಗಿ ಉರುಳು ಸೇವೆ ಮಾಡುತ್ತಾ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ನೀವು ಎಚ್ಚೆತ್ತುಗೊಳ್ಳವವರೆಗೆ ಪ್ರತಿಭಟನೆ ಮಾಡುತ್ತೇವೆ. ದಯವಿಟ್ಟು ನಮ್ಮ ನೆರವಿಗೆ ಧಾವಿಸಿ. ತುಂಬಾ ಹಸಿದಿದ್ದೇವೆ. ಹಸಿದ ಹೊಟ್ಟೆಗೆ ಅನ್ನ ಹಾಕಿ. ಸಾಯ್ತಾ ಇದ್ದೀವಿ ಎಂದು ಬೊಬ್ಬೆ ಹೊಡೆದ್ರು. ರೈತರ ತಲೆಬುರುಡೆಗಳನ್ನಿಟ್ಟುಕೊಂಡು, ಬಳಿಕ ಸತ್ತ ಹಾವನ್ನು ಕಚ್ಚುವುದರ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ರು.

    TAMIL 4

    ಕೂಡಲೇ ಮಧ್ಯ ಪ್ರವೇಶ ಮಾಡಿದ ಪೊಲೀಸರು ಬೆತ್ತಲೆ ಪ್ರತಿಭಟನೆ ಮಾಡ್ತಿದ್ದವರನ್ನು ವಶಕ್ಕೆ ಪಡೆದ್ರು. ರಾಜ್ಯಕ್ಕೆ 40 ಸಾವಿರ ಕೋಟಿ ರುಪಾಯಿ ಬರಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ರೈತರು ಕಳೆದ 28 ದಿನಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    TAMIL 5

    tamil farmers protest

    delhi farmers protest 041017034409

  • ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನ ಬಳಿಕ ತೆರವಾಗಿದ್ದ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬುಧವಾರ ನಡೆಯಬೇಕಿದ್ದು, ಆದ್ರೆ ಕೇಂದ್ರ ಚುನಾವಣಾ ಆಯೋಗ ಇದನ್ನು ರದ್ದುಗೊಳಿಸಿದೆ.

    TAMILNADU

    ಯಾಕಂದ್ರೆ ಈ ಕ್ಷೇತ್ರದಲ್ಲಿ ಉಪ ಚುನಾವಣೆಗಾಗಿ ಹಣದ ಹೊಳೆಯೇ ಹರಿದಿತ್ತು. ಈ ಸಂಬಂಧ ಮಹತ್ವದ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

    rk nagar chenna by polls

    ಶುಕ್ರವಾರವಷ್ಟೇ ಆದಾಯ ತೆರಿಗೆ ಇಲಾಖೆ ಅಣ್ಣಾ ಡಿಎಂಕೆ ಸರ್ಕಾರದ ಆರೋಗ್ಯ ಸಚಿವ ವಿಜಯ್ ಭಾಸ್ಕರ್ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕೈಗೊಂಡಿತ್ತು. ಈ ವೇಳೆ ಪಕ್ಷದ ಪರವಾಗಿ ಒಬ್ಬೊಬ್ಬ ಮತದಾರನಿಗೆ ತಲಾ 4 ಸಾವಿರ ರೂಪಾಯಿ ಹಂಚಿರುವ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯವಾಗಿತ್ತು.

    vlcsnap 2017 04 10 08h56m51s142

    ಬರೋಬ್ಬರೀ 89 ಕೋಟಿ ರೂಪಾಯಿಯಷ್ಟು ಹಣವನ್ನು ಚೆಲ್ಲಿದ್ದಾರೆ ಅನ್ನೋದ್ರ ಬಗ್ಗೆ ದಾಖಲೆಗಳು ಲಭ್ಯವಾಗಿದ್ದವು. ಸಚಿವರ ಆಪ್ತರ ಬಳಿಯಿಂದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿದ ಆಯೋಗ ಉಪ ಚುನಾವಣೆ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಈ ನಡುವೆ ವಿಚಾರಣೆಗೆ ಹಾಜರಾಗಿ ಖುದ್ದು ವಿವರಣೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಸಚಿವ ವಿಜಯ್ ಭಾಸ್ಕರ್‍ಗೆ ಸಮನ್ಸ್ ಜಾರಿ ಮಾಡಿದೆ.

    ಕ್ಷೇತ್ರದಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 62 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

  • ಚೆನ್ನೈನಲ್ಲಿ ಬಾಯಿಬಿಟ್ಟ ಭೂಮಿ: ರಸ್ತೆಯಲ್ಲಿ ಸಿಲುಕಿದ ಬಸ್, ಕಾರು

    ಚೆನ್ನೈನಲ್ಲಿ ಬಾಯಿಬಿಟ್ಟ ಭೂಮಿ: ರಸ್ತೆಯಲ್ಲಿ ಸಿಲುಕಿದ ಬಸ್, ಕಾರು

    ಚೆನ್ನೈ: ತಮಿಳುನಾಡು ರಾಜಧಾನಿ ಚೆನೈನ ಅಣ್ಣಾ ಸಾಲೈ, ಅಮೆರಿಕ ರಾಯಭಾರಿ ಕಚೇರಿ ಬಳಿ ಮೆಟ್ರೋ ಸುರಂಗ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ 2 ಗಂಟೆಯ ವೇಳೆ ಭೂ ಕುಸಿತ ಉಂಟಾಗಿದೆ.

    ಇದರಿಂದಾಗಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಹೊಂಡಾ ಸಿಟಿ ಕಾರು ರಸ್ತೆಯಲ್ಲಿ ಸಿಲುಕಿದೆ. ಜನರು ಅಪಾಯದಿಂದ ಪಾರಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.

    ಮೆಟ್ರೊ ಕಾಮಗಾರಿ ವೇಳೆ ಕಂಪನದಿಂದ ರಸ್ತೆಯಲ್ಲಿ ಮಣ್ಣು ಸಡಿಲಗೊಂಡು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಘಟನೆಯಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಆತಂಕ ಮೂಡಿತ್ತು.

    ಟ್ರಾಫಿಕ್ ಪೊಲೀಸರು ಈಗ ರಸ್ತೆಯ ಮಾರ್ಗವನ್ನು ಬದಲಾಯಿಸಿದ್ದು, ಸಂಚಾರ ಸುಗಮವಾಗಿದೆ. ತಮಿಳುನಾಡು ಸಾರಿಗೆ ಸಚಿವ ಡಿ ಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ. ನಂತರ ಪ್ರತಿಕ್ರಿಯಿಸಿದ ಅವರು, 2009ರಿಂದ ಮೆಟ್ರೋ ಕಾಮಗಾರಿ ನಗರದಲ್ಲಿ ಆರಂಭಗೊಂಡಿದ್ದು, ಮೊದಲ ಬಾರಿಗೆ ಈ ರೀತಿ ಕುಸಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಕ್ರೇನ್ ಸಹಾಯದಿಂದ ಬಸ್ ಮತ್ತು ಕಾರನ್ನು ಈಗ ಮೇಲಕ್ಕೆ ಎತ್ತಲಾಗಿದೆ.

    ಬಸ್ಸಿನ ಟಯರ್ ಪಂಚರ್ ಆಗಿರಬಹುದು ಎಂದು ನಾನು ಭಾವಿಸಿದ್ದೆ. ಕೆಳಗೆ ಇಳಿದು ನೋಡಿದಾಗ ಬಸ್ ರಸ್ತೆಯಲ್ಲಿ ಸಿಲುಕಿತ್ತು. ಕೂಡಲೇ ಈ ಪ್ರಯಾಣಿಕರಿಗೆ ತಿಳಿಸಿದೆ. ಅವರೆಲ್ಲರೂ ಕೆಳಗಡೆ ಇಳಿದರು ಎಂದು ಬಸ್ ಚಾಲಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

    Chennai road caves in 1

    Chennai road caves in 2

    Chennai road caves in 3

    Chennai road caves in 4

    Chennai road caves in 5

    Chennai road caves in 6 main 1

    Chennai road caves in 7

     

    Chennai road caves in 9

    Chennai road caves in 10

    Chennai road caves in 11

    Chennai road caves in 12

    Chennai road caves in 13

    Chennai road caves in 14

    bus 2

  • ಚೆನ್ನೈನ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಪಾರಾದ ನಟ ಕಮಲ್ ಹಾಸನ್

    ಚೆನ್ನೈನ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಪಾರಾದ ನಟ ಕಮಲ್ ಹಾಸನ್

    ಚೆನ್ನೈ: ಬಹುಭಾಷಾ ನಟ ಕಮಾಲ್ ಹಾಸನ್ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಳೆದ ರಾತ್ರಿ ಚೈನ್ನೈ ನಗರದ ಆಳ್ವಾರ್‍ಪೇಟ್‍ನಲ್ಲಿರೋ ಕಮಾಲ್ ಹಾಸನ್ ರವರ ಮನೆಯಲ್ಲಿ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ಯಾವುದೇ ಅಪಾಯವಾಗಿಲ್ಲ.

    ಘಟನೆಯಿಂದಾಗಿ ಕೆಲ ಪುಸ್ತಕಗಳು ಸುಟ್ಟಿದ್ದು ಹೊರತುಪಡಿಸಿದರೆ ಮನೆಯಲ್ಲಿ ದೊಡ್ಡ ನಷ್ಟವೇನೂ ಆಗಿಲ್ಲ. ಈ ವಿಷಯವನ್ನು ಕಮಲ್ ಹಾಸನ್ ಅವರೇ ಟ್ವಿಟ್ಟರ್‍ನಲ್ಲಿ ಹೇಳಿಕೊಂಡಿದ್ದಾರೆ.

    ನನ್ನ ಸಿಬ್ಬಂದಿಗೆ ಧನ್ಯವಾದ. ಮನೆಯಲ್ಲಿ ನಡೆದ ಅಗ್ನಿ ಅವಘಡದಿಂದ ಪಾರಾಗಿದ್ದೇನೆ. ಮನೆ ಹೊಗೆಯಿಂದ ಆವೃತ್ತವಾಗಿತ್ತು. ಶ್ವಾಸಕೋಶದ ತುಂಬಾ ಹೊಗೆ. ನಾನು ಮೂರನೇ ಮಹಡಿಯಿಂದ ಇಳಿದು ಬಂದೆ. ಈಗ ಸುರಕ್ಷಿತವಾಗಿದ್ದೇನೆ. ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಗುಡ್ ನೈಟ್ ಎಂದು ಕಮಲ್ ಹಾಸನ್ ಶುಕ್ರವಾರ ರಾತ್ರಿ ಟ್ವೀಟ್ ಮಾಡಿದ್ದರು.

    ಅಗ್ನಿ ಅವಘಡದ ಕುರಿತು ಕಮಲ್ ಹಾಸನ್ ಅವರ ಟ್ವೀಟ್ ನೋಡಿ ನೂರಾರು ಅಭಿಮಾನಿಗಳು ಹಾಗೂ ಹಿತೈಷಿಗಳು ಕಮಲ್ ಹಾಸನ್ ಅವರು ಬಚಾವಾಗಿದ್ದಕ್ಕೆ ಕಾಳಜಿಯಿಂದ ಟ್ವೀಟ್‍ಗಳನ್ನ ಮಾಡಿದ್ದಾರೆ. ನಂತರ ಕಮಲ್ ಹಾಸನ್, ನನ್ನ ಮೇಲಿನ ನಿಮ್ಮಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದ. ಈಗ ನಿದ್ದೆ ಮಾಡಲು ಹೋಗ್ತಾ ಇದ್ದೀನಿ ಎಲ್ಲರಿಗೂ ಶುಭರಾತ್ರಿ’ ಅಂತಾ ಮತ್ತೊಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

  • ದೇಶದ ಮೊದಲ ಮಂಗಳಮುಖಿ ಎಸ್‍ಐ ಪ್ರೀತಿಕಾ

    ದೇಶದ ಮೊದಲ ಮಂಗಳಮುಖಿ ಎಸ್‍ಐ ಪ್ರೀತಿಕಾ

    ಚೆನ್ನೈ: ಉದ್ಯೋಗಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಮಂಗಳಮುಖಿ ಪ್ರೀತಿಕಾ ಯಾಶಿನಿ ಈಗ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕವಾಗುವ ಮೂಲಕ ದೇಶದ ಮೊದಲ ಮಂಗಳಮುಖಿ ಎಂಬ ಹೆಗ್ಗಳಿಕೆಗೆ ಪ್ರೀತಿಕಾ ಪಾತ್ರರಾಗಿದ್ದಾರೆ.

    ಚೆನ್ನೈ ಸಮೀಪದ ವಂಡಲೂರಿನಲ್ಲಿ 1028 ಮಂದಿ ಅಭ್ಯರ್ಥಿಗಳ ಜೊತೆ ಪ್ರೀತಿಕಾ 1 ವರ್ಷ ತರಬೇತಿಯನ್ನು ಪಡೆದು ಈಗ ಉದ್ಯೋಗಕ್ಕೆ ಸೇರಿದ್ದಾರೆ. ಮೊದಲ ದಿನ ನಾನು ಭಾವೋದ್ವೇಗಕ್ಕೆ ಒಳಗಾಗಿದ್ದೆ, ಹಿರಿಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ಸಹಕಾರ ನೀಡಿದರು ಎಂದು ಪ್ರೀತಿಕಾ ಹೇಳಿದ್ದಾರೆ.

    ಸಬ್ ಇನ್ಸ್ ಪೆಕ್ಟರ್ ಉದ್ಯೋಗ ಕೊನೆಗೂ ಸಿಕ್ಕಿದೆ. ಮುಂದೆ ಯುಪಿಎಸ್‍ಸಿ ಪರೀಕ್ಷೆ ಬರೆದು ಐಪಿಎಸ್ ಆಗಿ ಆಯ್ಕೆಯಾಗಬೇಕೆಂಬ ಕನಸು ಇದೆ ಎಂದು ಪ್ರೀತಿಕಾ ತಿಳಿಸಿದ್ದಾರೆ.

    ಗಂಡು ಮಗುವಾಗಿ ಹುಟ್ಟಿ ಬೆಳೆದ ಪ್ರದೀಪ್ ಕುಮಾರ್ ಕಂಪ್ಯೂಟರ್ ಅಪ್ಲಿಕೇಷನ್ಸ್ ಪದವಿ ಓದಿದ್ದರು. ನಂತರ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮೂಲಕ ಪ್ರೀತಿಕಾ ಆಗಿ ಬದಲಾದರು. ಮಗ ಲಿಂಗಪರಿವರ್ತನೆಯಾಗಿದ್ದನ್ನು ನೋಡಿ ಪೋಷಕರು ಶಾಕ್ ಆಗಿದ್ದರು. ತಂದೆ ತಾಯಿ ಮಗನಾಗಿ ಬದಲಾಗಲು ವಿವಿಧ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ತನ್ನ ಜೀವನವನ್ನು ರೂಪಿಸಿಕೊಳ್ಳಲು ಪ್ರೀತಿಕಾ ತನ್ನ ಹೆತ್ತವರನ್ನೂ ತೊರೆದು ಬಂದಿದ್ದರು. ಮಂಗಳಮುಖಿಯರ ಜೊತೆ ಸೇರಿಕೊಂಡಿದ್ದ ಇವರು ಆರಂಭದಲ್ಲಿ ಮಹಿಳೆಯರ ಹಾಸ್ಟೆಲ್‍ನಲ್ಲಿ ವಾರ್ಡನ್ ಉದ್ಯೋಗ ಮಾಡಿಕೊಂಡಿದ್ದರು.

    ಏನಾಗಿತ್ತು?
    2015ರಲ್ಲಿ ಪ್ರೀತಿಕಾ ಪೊಲೀಸ್ ಹುದ್ದೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೆಣ್ಣು ಅಥವಾ ಗಂಡು ವಿಭಾಗಕ್ಕೆ ಸೇರದೇ ಇರುವ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು. ಅರ್ಜಿ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಪ್ರೀತಿಕಾ ಮದ್ರಾಸ್ ಹೈಕೋರ್ಟ್ ಮೆಟ್ಟಲು ಹತ್ತಿದರು. ಮದ್ರಾಸ್ ಹೈಕೋರ್ಟ್ ಮುಂಗಳಮುಖಿಯರಿಗೆ ಅವಕಾಶ ನೀಡಬೇಕೆಂದು ಹೇಳಿ ತಮಿಳುನಾಡು ಸರ್ಕಾರಕ್ಕೆ ಆದೇಶ ನೀಡಿತ್ತು. ದೈಹಿಕ ಪರೀಕ್ಷೆಯಲ್ಲಿ ನೂರು ಮೀಟರ್ ಓಟವನ್ನು ಪೂರ್ಣಗೊಳಿಸಬೇಕಾಗಿದ್ದ ನಿಗದಿತ ಅವಧಿಗಿಂತಲೂ 1.1 ಸೆಕೆಂಡ್ ಹಿಂದೆ ಇದ್ದ ಕಾರಣ ಅನರ್ಹರಾಗಿದ್ದರು. ಈ ಸಮಯದಲ್ಲೂ ಕೋರ್ಟ್ ಪ್ರೀತಿಕಾ ಪರವಾಗಿ ಆದೇಶ ನೀಡಿತ್ತು.

    ಈ ಆದೇಶದ ಪ್ರಕಾರ 2016 ಫೆ. 15ರಂದು ಸಿಟಿ ಪೊಲೀಸ್ ಕಮಿಷನರ್ ಸ್ಮಿತ್ ಸರನ್ ಪ್ರೀತಿಕಾ ಸೇರಿದಂತೆ 22 ಮಂಗಳಮುಖಿಯರಿಗೆ ಎಸ್ ಐ ಹುದ್ದೆಗೆ ನೇಮಕವಾಗುವಂತೆ ಸೂಚನೆ ನೀಡಿದ್ದರು.

    Prithika first transgender 5

    Prithika first transgender 3

    Prithika first transgender 2