Tag: ವಿಧಾನ ಸೌಧ

  • ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೇನು ಸಂತೆಯಲ್ಲಿರುವ ಕುರಿಯಲ್ಲ – ಸ್ಪೀಕರ್ ಕಿಡಿ

    ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೇನು ಸಂತೆಯಲ್ಲಿರುವ ಕುರಿಯಲ್ಲ – ಸ್ಪೀಕರ್ ಕಿಡಿ

    ಬೆಂಗಳೂರು: ನನ್ನನ್ನು ಯಾರೂ ಸಂಪರ್ಕಿಸಿಲ್ಲ ನಾನೇನು ಸಂತೆಯಲ್ಲಿರುವ ಕುರಿಯಲ್ಲ ಎಂದು ರಾಜೀನಾಮೆ ಕೊಡುತ್ತೇವೆ ಎಂಬ ಶಾಸಕರ ಮೇಲೆ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದಾರೆ.

    ಇಂದು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಚಾರಕ್ಕೆ ವಿಧಾನಸೌಧಲ್ಲಿ ಪ್ರತಿಕ್ರಿಯಿಸಿದ ರಮೇಶ್ ಕುಮಾರ್ ಅವರು, ಇಲ್ಲಿಯವರೆಗೆ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಇದೆಲ್ಲ ಪುಕಾರು, ಕೆಲವು ಶಾಸಕರು ಅವರವರ ಬಿಸಿನೆಸ್ ಮಾಡಿಕೊಳ್ಳಲು ತಂತ್ರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

    re

    ಸ್ಪೀಕರ್ ಅಂದರೆ ಹುಡುಗಾಟಿಕೆ ಮಾತಲ್ಲ. ಬರುವುದಾದರೆ ಶಾಸಕರು ಬರಲಿ ನಾನು ಇಲ್ಲಿಯೇ ಇರುತ್ತೇನೆ. 13 ಜನರಲ್ಲಿ ಯಾರು ನನ್ನ ಸಂಪರ್ಕ ಮಾಡಿಲ್ಲ. ಇದೆಲ್ಲ ಹೆದರಿಸುವ ತಂತ್ರ. ಮಾಧ್ಯಮದರು ದಾರಿ ತಪ್ಪಿಸುತ್ತಿದ್ದಾರೆ. ನಾನು ಯಾರಿಗೂ ಕಾಯುತ್ತಾ ಕೂರುವುದಿಲ್ಲ. ಈ ರೀತಿಯ ಘಟನೆಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದ್ದಾರೆ. ಇದನ್ನು ಓದಿ: ಇಂದು 13 ಮಂದಿ ಶಾಸಕರು ರಾಜೀನಾಮೆ?

    ramesh

    ಈ ಮಹಾನುಭಾವರ ಬರುತ್ತಾರೆ ಎಂದು ನಾನು ಕಾಯುತ್ತ ಕುಳಿತುಕೊಳ್ಳಬೇಕಾ? ಅವರು ಪುಕಾರು ಹಬ್ಬಿಸಿ ಅವರ ಬಿಸಿನೆಸ್ ಮಾಡಿಕೊಳ್ಳುತ್ತಿದ್ದಾರೆ. ಎಲ್ಲದಕ್ಕೂ ಒಂದು ನಿಯಮ ಇದೆ. ಮೂರಲ್ಲ ಮೂವತ್ತು ಮಂದಿ ಬರಲಿ ನಾನೇನು ಬೇಡ ಅಂದಿದ್ದೇನಾ ಇಲ್ಲಿ ತನಕ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ವಿಧಾನಸೌಧದೊಳಗೆ ನಿಂಬೆ ಹಣ್ಣು ಬ್ಯಾನ್

    ವಿಧಾನಸೌಧದೊಳಗೆ ನಿಂಬೆ ಹಣ್ಣು ಬ್ಯಾನ್

    ಬೆಂಗಳೂರು: ಸಿಗರೇಟ್, ಪಾನ್ ಹಾಗೂ ಗುಟ್ಕಾ ಲಿಸ್ಟ್ ಗೆ ನಿಂಬೆಹಣ್ಣು ಸೇರಿದ್ದು, ಇನ್ನು ಮುಂದೆ ವಿಧಾನ ಸೌಧದೊಳಗೆ ನಿಂಬೆ ಹಣ್ಣು ತೆಗೆದುಕೊಂಡು ಹೋಗುವಂತಿಲ್ಲ.

    ಹೌದು. ವಿಧಾನಸೌಧ ಮುಂಭಾಗ ಸೆಕ್ಯುರಿಟಿಯವರು ಚೆಕ್ ಮಾಡುತ್ತಿದ್ದಾರೆ. ಈ ವೇಳೆ ನಿಂಬೆ ಹಣ್ಣು ಸಿಕ್ಕರೆ ಸೆಕ್ಯುರಿಟಿಯವರು ಅದನ್ನು ತೆಗೆದುಕೊಳ್ಳುತ್ತಿರುವ ವಿಚಾರವೊಂದು ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್ ವೇಳೆ ಬೆಳಕಿಗೆ ಬಂದಿದೆ.

    lemon e1562234983546

    ಸಾರ್ವಜನಿಕರು ತಮ್ಮ ಕೆಲಸ ಆಗಲೆಂದು ನಿಂಬೆ ಹಣ್ಣು ಹಿಡಿದುಕೊಂಡು ಬರುತ್ತಾರೆ. ಆದರೆ ಮಾಟ ಮಂತ್ರದ ಭೀತಿಗೆ ಈಗ ಮತ್ತೆ ನಿಂಬೆ ಹಣ್ಣು ಬ್ಯಾನ್ ಮಾಡಲಾಗಿದೆ. ಹೀಗಾಗಿ ಹೊರಗಡೆ ನಿಂಬೆಹಣ್ಣು ಟ್ರೇನಲ್ಲಿ ಇಟ್ಟು ವಿಧಾನ ಸೌಧಕ್ಕೆ ಹೋಗಬೇಕು. ಈ ಹಿಂದೆಯೂ ಬಿಜೆಪಿ ಸರ್ಕಾರ ಇರುವಾಗ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದೀಗ ಮತ್ತೆ ಕಟ್ಟುನಿಟ್ಟಾಗಿ ಪೊಲೀಸರು ಜನರನ್ನು ತಪಾಸಣೆ ಮಾಡುತ್ತಿದ್ದಾರೆ. ಆದರೆ ಈ ನಿಯಮ ನಿಂಬೆಹಣ್ಣು ಹಿಡಿದುಕೊಂಡು ಓಡಾಡೋ ಸಚಿವ ರೇವಣ್ಣನವರಿಗೆ ಅನ್ವಯವಾಗುತ್ತಾ ಎನ್ನುವ ಪ್ರಶ್ನೆಯನ್ನು ಜನ ಕೇಳುತ್ತಿದ್ದಾರೆ.

    ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಿಂಬೆ ಹಣ್ಣು ಭಾರೀ ಫೇಮಸ್ ಆಗಿತ್ತು. ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ನಿಂಬೆಹಣ್ಣು ಹಿಡಿದುಕೊಂಡು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದರು. ಈ ವಿಚಾರ ರಾಜ್ಯಾದ್ಯಂತ ಸಖತ್ ಸುದ್ದಿಯಾಗಿತ್ತು.

    vlcsnap 2019 07 04 15h29m49s234

  • ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬಿಜೆಪಿಯೇ ಬೆಸ್ಟ್, ಮನೆ ಬಾಗಿಲಿಗೆ ಬಂದಿದ್ದ ಕಾಂಗ್ರೆಸ್‍ನಿಂದ ಉಲ್ಟಾ – ಸಚಿವ ಪುಟ್ಟರಾಜು ಗರಂ

    ಬೆಂಗಳೂರು: ನಾವೇನು ಅಧಿಕಾರ ಬೇಕೆಂದು ಯಾರ ಮನೆ ಬಳಿಯೂ ಹೋಗಿಲ್ಲ. ನೀವು ಸಿಎಂ ಆಗಿ ಎಂದು ಕಾಂಗ್ರೆಸ್ಸಿಗರು ದೇವೇಗೌಡರ ಮನೆ ಬಳಿ ಬಂದಿದ್ದರು. ಬೇಷರತ್ ಬೆಂಬಲ ಎಂದು ಓಡಿ ಬಂದಿದ್ದ ಕಾಂಗ್ರೆಸ್ ನವರು ಈಗ ಉಲ್ಟಾ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಸಚಿವ ಸಿ.ಎಸ್.ಪುಟ್ಟರಾಜು ಕೈ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ವಿಧಾನಸೌಧದಲ್ಲಿ ಸಿಎಂ ರಾಜೀನಾಮೆ ಹೇಳಿಕೆ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು. ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಹೇಳಬೇಕಾದರೆ ಎಷ್ಟು ನೋವಿದೆ ಅವರಿಗೆ ಎಂದು ಜನರೇ ಗಮನಿಸಲಿ. ಬಿಜೆಪಿ ಜೊತೆ ನಡೆಸಿದ ಆ 20 ತಿಂಗಳ ಅಧಿಕಾರ ಇಡೀ ರಾಜ್ಯದ ಜನತೆಯೇ ಮೆಚ್ಚುವಂತಿತ್ತು. ಈಗ ಹೆಜ್ಜೆಹೆಜ್ಜೆಗೂ ತಕರಾರು. ನಮ್ಮ ಪ್ರತಿ ರಕ್ತದ ಕಣದಲ್ಲೂ ಎಚ್ ಡಿಕೆ ಸಿಎಂ, ದೇವೇಗೌಡರು ನಮ್ಮ ಮೇರು ನಾಯಕರಾಗಿರುತ್ತಾರೆ. ಕಾಂಗ್ರೆಸ್ ನವರು ಇದೇ ರೀತಿ ಮಾತು ಮುಂದುವರಿಸಿದರೆ ಮುಂದಿನ ಪರಿಣಾಮ ಬೇರೆಯೇ ಆಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ರು.

    HDK HDD

    2006-07 ರಲ್ಲಿ ಬಿಜೆಪಿಯ ಜೊತೆ ಸೇರಿ ಸರ್ಕಾರ ನಡೆಸಿದ್ದೇ ಚೆನ್ನಾಗಿತ್ತು. ಅಂದು ಎಚ್ ಡಿ ಕುಮಾರಸ್ವಾಮಿಯವರು ಒಳ್ಳೆಯ ಆಡಳಿತ ನಡೆಸಿ ಮೆಚ್ಚುಗೆ ಪಡೆದಿದ್ದರು. ಯಾರಿಂದ ಬೆರಳು ತೋರಿಸಿಕೊಳ್ಳದೇ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದ್ದರು. ಈಗ ಕಾಂಗ್ರೆಸ್ ನವರಿಂದ ಬರೀ ತಕರಾರು ಎಂದು ಸಚಿವರು ತಮ್ಮ ಆಕ್ರೋಶ ಹೊರಹಾಕಿದ್ರು.

    ರಾಜೀನಾಮೆ ನೀಡುವ ಕುರಿತು ಸಿಎಂ ಎಚ್ಡಿಕೆ ಹೇಳಿಕೆ ಹಿನ್ನೆಲೆಯಲ್ಲಿ ಇನ್ಮುಂದೆಯಾದರೂ ಕಾಂಗ್ರೆಸ್ಸಿನವರು ಸರಿ ಹೋಗಲಿಲ್ಲ ಅಂದರೆ ಸಿಎಂ ಏನ್ ಹೇಳಿದ್ದಾರೋ ಅದರ ಬಗ್ಗೆ ತೀರ್ಮಾನ ಆಗುತ್ತೆ ಎಂದು ತಿಳಿಸಿದರು.

    https://www.youtube.com/watch?v=8ldpuc1F85w

    https://www.youtube.com/watch?v=OflAzK4wALY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಪುಟ್ಟರಂಗಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್..!

    ಸಚಿವ ಪುಟ್ಟರಂಗಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್..!

    – ಪ್ರತಿಭಟನೆಗೆ ಬಿಜೆಪಿ ಕರೆ

    ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ವಿಧಾನಸೌಧದಲ್ಲಿ ಪತ್ತೆಯಾದ ಅಕ್ರಮ ಹಣ ಸಚಿವ ಪುಟ್ಟರಂಗಶೆಟ್ಟಿಯದ್ದು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನ್ನನ್ನು ಭೇಟಿ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ರು.

    MONEY

    ಹೀಗಾಗಿ ಶನಿವಾರ ರಾತ್ರಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಪುಟ್ಟರಂಗಶೆಟ್ಟಿ ಒಂದು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಮುಖ ಸಪ್ಪಗೆ ಮಾಡಿಕೊಂಡು ಹೊರ ಬಂದ ಪುಟ್ಟರಂಗ ಶೆಟ್ಟಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತಮ್ಮ ಕಾರಿನಲ್ಲಿ ತೆರಳಿದ್ರು. ಒಂದು ಗಂಟೆಗಳ ಕಾಲ ನಡೆದ ಮಾತು ಕತೆಯಲ್ಲಿ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ:  ಯಾವುದೇ ತನಿಖೆಗೂ ಸಿದ್ಧ, ನನ್ನ ವಿರುದ್ಧ ಷಡ್ಯಂತ್ರ: ಪುಟ್ಟರಂಗಶೆಟ್ಟಿ

    MONEY 3

    ಬಿಜೆಪಿ ಪ್ರತಿಭಟನೆ:
    ಇತ್ತ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಜಾಪ್ರಭುತ್ವದ ದೇವಸ್ಥಾನದಲ್ಲಿ ಸಿಕ್ಕಿ ಹಾಕಿಕೊಂಡ ಹಣಕ್ಕೆ ಯಾರು ಜವಾಬ್ದಾರರು ಎಂಬುದು ಪ್ರಶ್ನೆ ಮಾಡಿದ್ದಾರೆ.  ಇದನ್ನೂ ಓದಿ: ವಿಧಾನಸೌಧದಲ್ಲಿ ಹಣ ಸಿಕ್ಕಿರುವುದು ಕಾಂಗ್ರೆಸ್‍ಗೆ ಪುಟುಗೋಸಿ ಡೀಲ್- ಪ್ರತಾಪ್ ಸಿಂಹ ಲೇವಡಿ

    money 2

    ಸಂಬಂಧಪಟ್ಟ ಸಚಿವರು, ಸರ್ಕಾರದ ಮುಖ್ಯಸ್ಥ ಕುಮಾರಸ್ವಾಮಿ, ಸಮನ್ವಯ ಸಮಿತಿ ಮುಖ್ಯಸ್ಥ ಸಿದ್ದರಾಮಯ್ಯ, ಪುಟುಗೋಸಿ ಅಂತ ಬಿಟ್ಟು ಬಿಡಬೇಕಾ ದಿನೇಶ್ ಗುಂಡೂರಾವ್..? ಹುಚ್ಚರ ಮದುವೆಯಲ್ಲಿ ಉಂಡವನೇ ಜಾಣ.. ನಾಚಿಕೆ ಇಲ್ಲದ ಮದುವೆ ಎಂದು ದೋಸ್ತಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಹುಚ್ಚನ ಮನೇಲಿ ಉಂಡವನೇ ಜಾಣ ಅನ್ನುವಂತೆ ಸರ್ಕಾರವಿದೆ- ಶಾಸಕ ಸಿಟಿ ರವಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಧಾನಸೌಧದ ಬಳಿ ಹಣ ಸಿಕ್ಕಿದ್ದು ಭ್ರಷ್ಟರ ಧೈರ್ಯಕ್ಕೆ ಸಾಕ್ಷಿ: ಸಂತೋಷ್ ಹೆಗ್ಡೆ

    ವಿಧಾನಸೌಧದ ಬಳಿ ಹಣ ಸಿಕ್ಕಿದ್ದು ಭ್ರಷ್ಟರ ಧೈರ್ಯಕ್ಕೆ ಸಾಕ್ಷಿ: ಸಂತೋಷ್ ಹೆಗ್ಡೆ

    ಧಾರವಾಡ: ವಿಧಾನ ಸೌಧದ ವೆಸ್ಟ್ ಗೇಟ್ ಬಳಿಯ ರಕ್ಷಣಾ ಸಿಬ್ಬಂದಿಗೆ ತಪಾಸಣೆ ವೇಳೆ ಭಾರೀ ಮೊತ್ತದ ಹಣ ಸಿಕ್ಕಿರುವುದು ಭ್ರಷ್ಟಾಚಾರಿಗೆ ಎಷ್ಟು ಧೈರ್ಯವಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸೌಧದ ಬಳಿ ಹಣ ಸಿಕ್ಕಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಇಂತಹ ಘಟನೆ ನಡೆದಿತ್ತು. ಆದರೆ ಇದು ಭ್ರಷ್ಟಾಚಾರದ ವಿಚಾರವಲ್ಲ. ಭ್ರಷ್ಟಾಚಾರಿಗಳಿಗೆ ಎಷ್ಟು ಧೈರ್ಯವಿದೆ ಎನ್ನುವುದು ತೋರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    MONEY 3

    ಮಂತ್ರಿಗಳ ಆಪ್ತ ಸಹಾಯಕರೇ ಘಟನೆಯಲ್ಲಿ ಸಿಕ್ಕಿಹಾಕಿಕೊಂಡಿದ್ದು. ಇದರಲ್ಲಿ ಮಂತ್ರಿಗಳದ್ದು ಎಷ್ಟಿದೆ ಎಂಬುವುದು ಹೇಳುವುದಕ್ಕೆ ಹೋಗುವುದಿಲ್ಲ. ಆದರೆ ಮಂತ್ರಿಗಳ ಪಿಎ ಗಳಿಗೆ ಅಷ್ಟು ಹಣ ಯಾರು ಕೊಡೋದಿಲ್ಲ. ಇದರಲ್ಲಿ ದೊಡ್ಡವರ ಕೈವಾಡವಿದೆ ಎಂದು ಅನ್ನಿಸುತ್ತದೆ. ಈ ಕುರಿತು ಸಮಗ್ರ ತನಿಖೆಯಾಗಬೇಕು. ಯಾರ ಕೈವಾಡವಿದೆ ಎನ್ನುವುದು ತಿಳಿಯಬೇಕಿದೆ ಆಗ್ರಹಿಸಿದರು. ಇದನ್ನು ಓದಿ: ವಿಧಾನಸೌಧದ ಗೇಟ್ ಬಳಿ ಹಣ ಸಿಕ್ಕ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

    ಈ ಘಟನೆಯ ಮೂಲಕ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಎಂಬುವುದು ತಿಳಿಯುತ್ತದೆ. ವಿಚಾರಣೆ ಮಾಡದೇ ಇದ್ದರೆ, ಅದು ಬೇರೆ ಆರ್ಥ ಪಡೆದುಕೊಳ್ಳುತ್ತೆ ಎಂದರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿ ಹೈ ಅಲರ್ಟ್- ಖಾಕಿ ಸರ್ಪಗಾವಲಿನಲ್ಲಿ ಜಯಂತಿ ಆಚರಣೆ

    ಬೆಂಗ್ಳೂರಲ್ಲಿ ಹೈ ಅಲರ್ಟ್- ಖಾಕಿ ಸರ್ಪಗಾವಲಿನಲ್ಲಿ ಜಯಂತಿ ಆಚರಣೆ

    ಬೆಂಗಳೂರು: ಟಿಪ್ಪುಜಯಂತಿ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ಸಿಟಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ವಿಧಾನಸೌಧ ಸುತ್ತಮುತ್ತಾ ಭದ್ರತೆಗೆ 500 ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಕೇಂದ್ರ ವಿಭಾಗ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಧಾನಸೌಧ ಬ್ಯಾಂಕ್ವೇಟ್ ಹಾಲ್ ಬಳಿ ಭದ್ರತೆ ಒದಗಿಸಲಾಗಿದೆ. ಪಶ್ಚಿಮ ವಿಭಾಗ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡಿಜೆ ಹಳ್ಳಿ, ಕೆ.ಜೆಹಳ್ಳಿ, ಶಿವಾಜಿನಗರ, ಫ್ರೆಜರ್ ಟೌನ್, ತಿಲಕನಗರ, ವಿವೇಕ್‍ನಗರ, ಮೆಜೆಸ್ಟಿಕ್, ಮಾರ್ಕೆಟ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    vlcsnap 2018 11 10 07h02m56s208

    ಟ್ರಾಫಿಕ್ ಜಾಮ್ ಸಮಸ್ಯೆ ನಿಯಂತ್ರಿಸಲು ಕಬ್ಬನ್ ಪಾರ್ಕ್ ಸುತ್ತಮುತ್ತಾ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಂಚಾರ ಆಯುಕ್ತ ಹರಿಶೇಖರನ್ ನೇತೃತ್ವದಲ್ಲಿ ಟ್ರಾಫಿಕ್ ಕಂಟ್ರೊಲ್ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸುವಂತೆ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ವರದಿಯಾದಲ್ಲಿ ನೀವೇ ಹೊಣೆಯಾಗುತ್ತೀರಿ ಎಂದು ಡಿಸಿಪಿಗಳಿಗೆ ಸೂಚಿಸಿದ್ದಾರೆ.

    vlcsnap 2018 11 10 07h02m47s111

    2 ಸಾವಿರ ಜನರಿಗೆ ಪಾಸ್:
    ತೀವ್ರ ವಿರೋಧ ನಡುವೆಯೂ ಟಿಪ್ಪು ಸುಲ್ತಾನ್ ಜಯಂತಿಯನ್ನ ಇಂದು ಸರ್ಕಾರ ಆಚರಣೆ ಮಾಡ್ತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಇಂದು ಬೆಳಗ್ಗೆ 11.30 ಕ್ಕೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಪರಮೇಶ್ವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಯಕ್ರಮ ನಡಯುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು 2 ಸಾವಿರ ಜನರಿಗೆ ಪಾಸ್ ನೀಡಲಾಗಿದೆ.

    vlcsnap 2018 11 10 07h02m33s220

    ಟಿಪ್ಪು ಜಯಂತಿಗೆ ಸಿಎಂ ಕುಮಾರಸ್ವಾಮಿ ವೈಯಕ್ತಿಕ ಕಾರಣಗಳಿಂದ ಗೈರಾಗುತ್ತಿದ್ದು, ಸಿಎಂ ಬದಲಿಗೆ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ. ಸಿಎಂ ಪರವಾಗಿ ಜೆಡಿಎಸ್ ಸಚಿವ ವೆಂಕಟ್ ರಾವ್ ನಾಡಗೌಡ ಭಾಗವಹಿಸಿ ಸಿಎಂ ಅವರ ಸಂದೇಶ ಓದಲಿದ್ದಾರೆ. ಇನ್ನು ಟಿಪ್ಪು ಜಯಂತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇಂದಿನ ಕಾರ್ಯಕ್ರಮಕ್ಕೆ ಯಾವ ಬಿಜೆಪಿ ಶಾಸಕರು ಬರೋದಿಲ್ಲ. ಅಲ್ಲದೆ ಆಹ್ವಾನ ಪತ್ರಿಕೆಯಲ್ಲೂ ಬಿಜೆಪಿ ನಾಯಕರ ಹೆಸರು ಇಲ್ಲ. ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮಗುರು ಅಮೀರ್ -ಎ-ಷರಿಯತ್ ನ ಹಜರತ್ ಮೌಲಾನ ಸಗೀರ್ ಅಹ್ಮದ್ ಸಾಹೇಬ್ ರಷಾದಿ ಸೇರಿದಂತೆ, ಜಮೀರ್ ಅಹಮದ್, ಮೇಯರ್ ಗಂಗಾಭಿಕೆ ಸೇರಿದಂತೆ ಕಾಂಗ್ರೆಸ್ ನ ಸಚಿವರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

    vlcsnap 2018 11 10 07h03m31s43

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ವಿಧಾನಸೌಧದಲ್ಲಿ ಇನ್ನೂ ಬದಲಾಗಿಲ್ಲ ಸಿಎಂ ಬೋರ್ಡ್!

    ವಿಧಾನಸೌಧದಲ್ಲಿ ಇನ್ನೂ ಬದಲಾಗಿಲ್ಲ ಸಿಎಂ ಬೋರ್ಡ್!

    ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು..? ಎಚ್‍ಡಿಕೆನಾ…? ಸಿದ್ದರಾಮಯ್ಯನಾ..? ಎಂಬ ಗೊಂದಲ ಮೂಡುತ್ತದೆ. ಯಾಕಂದ್ರೆ ವಿಧಾನಸೌಧದಲ್ಲಿ ಇನ್ನೂ ಬೋರ್ಡ್ ಬದಲಾಗಿಲ್ಲ.

    ಯಾಕಂದ್ರೆ ವಿಧಾನಸೌಧದಲ್ಲಿನ ಮೊದಲ ಮಹಡಿಯಲ್ಲಿ ಕೊಠಡಿ ನಂಬರ್ 112ರ ಎದುರುಗಡೆ ಇರುವ ಬೋರ್ಡ್ ನಲ್ಲಿ ಇನ್ನೂ ಏನೂ ಅಪ್‍ಡೇಟ್ ಆಗಿಲ್ಲ. ಈ ಬೋರ್ಡ್ ನೋಡೋರಿಗೆ ಫುಲ್ ಕನ್‍ಫ್ಯೂಶನ್ನು ಆಗುತ್ತೆ.

    BOARD 1

    ರಾಜ್ಯದ ಮುಖ್ಯಮಂತ್ರಿಗಳ ಹೆಸರು ಹಾಗೂ ಅಧಿಕಾರವಧಿ ಮಾಹಿತಿಯುಳ್ಳ ಬೋರ್ಡ್ ನಲ್ಲಿ ಈಗಲೂ ಸಿದ್ದರಾಮಯ್ಯನೇ ಮುಖ್ಯಮಂತ್ರಿ. ಮೂರು ದಿನ ಸಿಎಂ ಆಗಿದ್ದ ಯಡಿಯೂರಪ್ಪನವರ ಹೆಸರೂ ಇಲ್ಲ. ಹಾಲಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೆಸರೂ ಕೂಡ ಇಲ್ಲ. ಅದೂ ಅಲ್ಲದೇ ಆಡಳಿತ ಭಾಷೆ ಕನ್ನಡದಲ್ಲೇ ಮುಖ್ಯಮಂತ್ರಿಗಳ ಹೆಸರಿಲ್ಲ. ಈ ಬಗ್ಗೆ ಸಿಎಸ್, ಕನ್ನಡ ಪ್ರಾಧಿಕಾರಕ್ಕೆ ಸಾಮಾಜಿಕ ಕಾರ್ಯಕರ್ತ ನರಸಿಂಹಮೂರ್ತಿ ದೂರು ನೀಡಿದ್ದಾರೆ.

    BOARD 3

  • ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಗೂಳಿಹಟ್ಟಿ ಭಾಗಿ: ಸ್ಪಷ್ಟನೆ ಕೊಟ್ಟ ಆರ್.ಅಶೋಕ್

    ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಗೂಳಿಹಟ್ಟಿ ಭಾಗಿ: ಸ್ಪಷ್ಟನೆ ಕೊಟ್ಟ ಆರ್.ಅಶೋಕ್

    ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ಜೊತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಭೋಜನ ಮಾಡಿರುವುದಕ್ಕೆ ಶಾಸಕ ಆರ್ ಅಶೋಕ್ ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಗೂಳಿಹಟ್ಟಿ ಶೇಖರ್, ಸುಧಾಕರ್ ಅವರನ್ನು ಡ್ರಾಪ್ ಮಾಡಲು ಖಾಸಗಿ ಹೋಟೆಲ್ ಗೆ ಹೋಗಿದ್ದಾರೆ. ನಾನು ಅವರ ಜೊತೆ ಮಾತಾಡಿದ್ದೇನೆ. ಹೋಟೆಲ್ ನಲ್ಲಿ ಶಾಸಕರಿಗೆ ಪಾರ್ಟಿ ನಡೆಯುತ್ತಿದ್ದ ವೇಳೆಯೇ ಅವರು ಹೋಗಿದ್ದು ಬೇರೆ ರೀತಿಯ ಅರ್ಥಕ್ಕೆ ಕಾರಣವಾಗಿದೆ ಅಂತ ಹೇಳಿದ್ರು.

    ಶೇಖರ್ ಅವರು ಯಾವುದೇ ರೀತಿಯಲ್ಲಿ ಬಿಜೆಪಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುಮ್ಮನೆ ಕಾಂಗ್ರೆಸ್ ನವರು ಈ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಅವರು ನಾಯಿ ನರಿಗಳ ರೀತಿ ಕಚ್ಚಾಡುತ್ತಿದ್ದಾರೆ ಅಂತ ಅವರು ಹೇಳಿದ್ದಾರೆ.

    ಏನಿದು ಘಟನೆ?:
    ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಕಾರಿನಲ್ಲಿ ಸುಧಾಕರ್ ಜೊತೆ ಗೂಳಿಹಟ್ಟಿ ಶೇಖರ್ ಇರುವುದನ್ನು ನೋಡಿದ ಜೆಡಿಎಸ್, ಕಾಂಗ್ರೆಸ್ ಶಾಸಕರು ಬನ್ನಿ ಬನ್ನಿ ಊಟ ಮಾಡೋದಕ್ಕೆ ಯಾವ ಪಕ್ಷ ಆದರೇನು? ಊಟ ಮಾಡಿ ಅಂತಾ ಹೇಳಿ ಗೂಳಿಹಟ್ಟಿಯನ್ನು ಪೇಚಿಗೆ ಸಿಲುಕಿಸಿದ್ರು. ನಂತರ ಊಟ ಮಾಡಿದ ಗೂಳಿಹಟ್ಟಿ ಸುಧಾಕರ್ ಅವರ ಕಾರಿನಲ್ಲೆ ವಾಪಾಸಾಗಿದ್ದಾರೆ ಎಂದು ವರದಿಯಾಗಿತ್ತು.

  • ಲೋಕಾಯುಕ್ತರ ಮೇಲೆ ಚೂರಿ ಇರಿತದ ಬಳಿಕ ಎಚ್ಚೆತ್ತು ಭದ್ರತೆ ಬಿಗಿಗೊಳಿಸಿದ ಸರ್ಕಾರ

    ಲೋಕಾಯುಕ್ತರ ಮೇಲೆ ಚೂರಿ ಇರಿತದ ಬಳಿಕ ಎಚ್ಚೆತ್ತು ಭದ್ರತೆ ಬಿಗಿಗೊಳಿಸಿದ ಸರ್ಕಾರ

    ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಇರಿತ ಪ್ರಕರಣದವಾದ ಬಳಿಕ ಎಚ್ಚೆತ್ತು ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ.

    ಈ ಸಂಬಂಧ ಭದ್ರತೆಯನ್ನು ಬಿಗಿಗೊಳಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ

    CM REDDY

    ಸುತ್ತೋಲೆಯಲ್ಲಿ ಏನಿದೆ?
    ಪ್ರಸ್ತುತ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಿಗೆ ಪ್ರವೇಶ ಬಯಸುವ ಸಾರ್ವಜನಿಕರನ್ನು ತಪಾಸಣೆಗೊಳಪಡಿಸಿ ಅವರುಗಳ ಬ್ಯಾಗ್ ಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತಿದೆ. ಮಾರ್ಚ್ 7ರಂದು ಲೋಕಾಯುಕ್ತರ ಕಛೇರಿಯಲ್ಲಿ ನಡೆದ ಘಟನೆಯಿಂದಾಗಿ ಭದ್ರತಾ ವ್ಯವಸ್ಥೆಯಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಆದ್ದರಿಂದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿನ ಸಚಿವಾಲಯದ ಎಲ್ಲ ಕಛೇರಿಗಳೂ ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಗಧಿತ ಸಂದರ್ಶಕರ ಭೇಟಿ ಸಮಯಕ್ಕೆ ಮಿತಿಗೊಳಿಸತಕ್ಕದ್ದು. ಅಷ್ಟೇ ಅಲ್ಲದೇ ಭೇಟಿ ಪಡೆಯುವ ಪ್ರತಿಯೊಬ್ಬ ಸಾರ್ವಜನಿಕರನ್ನು ಕೂಲಂಕುಷ ತಪಾಸಣೆಗೊಳಪಡಿಸಿ ಹಾಗೂ ಅವರುಗಳ ಬ್ಯಾಗೇಜ್ ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಲೋಹ ತಪಾಸಣಾ ಯಂತ್ರದ ಮೂಲಕ ಹಾದು ಹೋಗಲೇಬೇಕೆಂಬ ಪದ್ಧತಿಯನ್ನು ಅನುಸರಿಸಬೇಕು. ಈ ಬಗ್ಗೆ ಯಾವುದೇ ಲೋಪವಾದಲ್ಲಿ ಪೊಲೀಸ್ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಲಾಗುವುದು ಎಂದು ಈ ಮೂಲಕ ಸೂಚನೆಗಳಮನ್ನು ನೀಡಲಾಗಿದೆ. ಇದನ್ನೂ ಓದಿ: ದೂರುಗಳ ಮೇಲೆ ದೂರು ಕೊಟ್ಟರೂ ಪ್ರಯೋಜನ ಆಗಿಲ್ಲ- ಪೊಲೀಸ್ ಮುಂದೆ ತಪ್ಪೊಪ್ಪಿಕೊಂಡ ತೇಜರಾಜ್

    gove new ciruclar

    LOKAYUKTHA

     

  • ವಿಧಾನಸೌಧದಲ್ಲೇ ಸಿಬ್ಬಂದಿಗೆ ಹೃದಯಾಘಾತ- ಆಸ್ಪತ್ರೆಗೆ ಸಾಗಿಸಲು ಪರದಾಟ

    ವಿಧಾನಸೌಧದಲ್ಲೇ ಸಿಬ್ಬಂದಿಗೆ ಹೃದಯಾಘಾತ- ಆಸ್ಪತ್ರೆಗೆ ಸಾಗಿಸಲು ಪರದಾಟ

    ಬೆಂಗಳೂರು: ಸಿಬ್ಬಂದಿಗೆ ವಿಧಾನಸೌಧದಲ್ಲೇ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸಲು ಅಲ್ಲಿನ ಸಿಬ್ಬಂದಿ ಪರದಾಡಿದ ಘಟನೆ ನಡೆದಿದೆ.

    ಸಚಿವಾಲಯ ಸಿಬ್ಬಂದಿ ಅಮ್ಜದ್ ಪಾಶಾ ಅವರು ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬಂದಿದ್ದ ವೇಳೆ ವಿಧಾನ ಸೌಧದ ಒಳಗಡೆಯೇ ಅಸ್ವಸ್ಥರಾಗಿ ಬಿದ್ದಿದ್ದಾರೆ. ಆದ್ರೆ ಆ ಕೂಡಲೇ ಅವರಿಗೆ ತುರ್ತು ಚಿಕಿತ್ಸಾ ಸೌಲಭ್ಯವಿಲ್ಲದೇ ಸಿಬ್ಬಂದಿ ಗಲಿಬಿಲಿಗೊಂಡಿದ್ದಾರೆ.

    BNG 5

    ಹೃದಯಾಘಾತ ಸಂಭವಿಸಿ ಪಾಶಾ ಬಿದ್ದಿದ್ದರೂ ಒಂದೆಡೆ ಸ್ಟ್ರೆಚರ್ ವ್ಯವಸ್ಥೆಯೂ ಇರಲಿಲ್ಲ. ಇನ್ನೊಂದೆಡೆ ಆಂಬುಲೆನ್ಸ್ ಕೂಡ ತಡವಾಗಿ ಬಂದಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಕಚೇರಿ ಕುರ್ಚಿಯ ಮೂಲಕವೇ ಅವರನ್ನು ಸಚಿವಾಲಯ ಕಚೇರಿಯಿಂದ ಹೊರಗಡೆ ಕರೆತಂದಿದ್ದು, ಬಳಿಕ ಆಂಬುಲೆನ್ಸ್ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

    ಸದ್ಯ ಪಾಶಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ ಎಂದು ತಿಳಿದುಬಂದಿದೆ.

    BNG 1

    BNG 2

    BNG 3

    BNG 4

    BNG 6

    BNG 7

    BNG 8

    BNG 9

    BNG 10

    BNG 11

    BNG 12