Tag: ಅಂತ್ಯ ಸಂಸ್ಕಾರ

  • ರಸ್ತೆ ಪಕ್ಕದಲ್ಲೇ ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ

    ರಸ್ತೆ ಪಕ್ಕದಲ್ಲೇ ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ

    – ಜಿಲ್ಲಾಡಳಿತದ ವಿರುದ್ಧ ಆಕ್ರೋಶ

    ಕೊಪ್ಪಳ: ಕಳೆದ ಜೂನ್ 17 ರಂದು ಕೋವಿಡ್-19 ನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರವನ್ನು ಬೇಕಾ ಬಿಟ್ಟಿಯಾಗಿ ರಸ್ತೇ ಪಕ್ಕದಲ್ಲೇ ನೆರವೇರಿಸಿದ್ದು, ಈಗ ಆ ವಿಡಿಯೋ ವೈರಲ್ ಆಗಿದೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದ 50 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪಳ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕಳೆದ ಜೂನ್ 17 ರಂದು ಮಹಿಳೆ ಮೃತಪಟ್ಟಿದ್ದರು.

    KPL ROAD CREMATION AV 1

    ಸರ್ಕಾರದ ನಿರ್ದೇಶನದಂತೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಕೊಪ್ಪಳ ಜಿಲ್ಲಾಡಳಿತ ಅಧಿಕಾರಿಗಳು, ಬೇಕಾಬಿಟ್ಟಿಯಾಗಿ ಜೂನ್ 18 ರಂದು ಮರಳಿಯ ಗ್ರಾಮದಲ್ಲಿರುವ ರುದ್ರಭೂಮಿಯಲ್ಲಿ ಶವವನ್ನ ಜನರು ಸಂಚರಿಸುವ ರಸ್ತೇ ಪಕ್ಕದಲ್ಲೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಜೆಸಿಬಿ ಮೂಲಕ ಶವವನ್ನ ಮಣ್ಣು ಮಾಡಿದ್ದಾರೆ. ಆ ವಿಡಿಯೋ ಇದೀಗ ಜಿಲ್ಲೆಯಾದ್ಯಂತ ವೈರಲ್ ಆಗಿದ್ದು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    vlcsnap 2020 07 02 11h00m27s31

  • ಬೆಂಗ್ಳೂರಿಗರೇ ಹುಷಾರ್- ನಿಮ್ಮ ಮನೆ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿಯೇ ಅಂತ್ಯಸಂಸ್ಕಾರ ಮಾಡ್ಬೋದು!

    ಬೆಂಗ್ಳೂರಿಗರೇ ಹುಷಾರ್- ನಿಮ್ಮ ಮನೆ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿಯೇ ಅಂತ್ಯಸಂಸ್ಕಾರ ಮಾಡ್ಬೋದು!

    ಬೆಂಗಳೂರು: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಿದೆ. ಈ ಮಧ್ಯೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟವರ ಶವಸಂಸ್ಕಾರವನ್ನು ರಸ್ತೆಯ ಪಕ್ಕದಲ್ಲಿ, ಮನೆ ಪಕ್ಕ ಇರುವ ಖಾಲಿ ಜಾಗದಲ್ಲೇ ಮಾಡುತ್ತಿರುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೀಗಾಗಿ ಮೃತ ಸೋಂಕಿತರನ್ನ ನಿಮ್ಮ ಮನೆ ಪಕ್ಕದ ಖಾಲಿ ಜಾಗದಲ್ಲಿಯೇ ಅಂತ್ಯ ಸಂಸ್ಕಾರ ಮಾಡಬಹುದು ಹುಷಾರಾಗಿರಿ.

    ಬೌರಿಂಗ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ಸೋಂಕಿತರ ಅಂತ್ಯ ಸಂಸ್ಕಾರ ರಾಮಸ್ವಾಮಿಪಾಳ್ಯ ವಾರ್ಡಿನಲ್ಲಿ ನಡೆಯುತ್ತಿದೆ. ಜೆಸಿ ರಸ್ತೆ – ನಂದಿದುರ್ಗ ರಸ್ತೆ ಮಧ್ಯೆ ಬರುವ ಸ್ಮಾಶನವೊಂದರಲ್ಲಿ ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ನಡೆಯುತ್ತಿದೆ. ಮುಸ್ಲಿಂ ಸಮುದಾಯದ ನಂದಿದುರ್ಗ ಪೆರಲ್ ಗ್ರೌಂಡ್ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ. ಆದರೆ ಮೃತ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸ್ಥಳೀಯರ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    FUNERAL 2

    ಕಳೆದ ಒಂದು ವಾರದಿಂದ ಇದುವರೆಗೆ 16 ಮೃತ ಸೊಂಕಿತರ ಅಂತ್ಯ ಸಂಸ್ಕಾರದ ಈ ಸ್ಮಶಾನದಲ್ಲಿ ಆಗಿದೆ. ಅಷ್ಟೇ ಅಲ್ಲದೇ ಅಂತ್ಯ ಸಂಸ್ಕಾರದಲ್ಲೂ ಸಿಬ್ಬಂದಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಕೇವಲ ಮೂರು ಅಡಿ ಗುಂಡಿ ತೋಡಿ ಅಂತ್ಯ ಸಂಸ್ಕಾರ ಮಾಡಲಾಗುತ್ತೆ. ಸ್ಮಶಾನದ 50 ಮೀಟರ್ ಅಂತರದಲ್ಲಿಯೇ ಮನೆಗಳಿವೆ. ಪಿಪಿಇ ಕಿಟ್‍ಗಳನ್ನೂ ಗುಂಡಿಗಳ ಬಳಿಯೇ ಬಿಸಾಡುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    vlcsnap 2020 07 01 08h52m49s249 copy

    ಅಲ್ಲದೇ ಗುಂಡಿ ತೋಡುವ ವ್ಯಕ್ತಿಗಳು ಕೂಡ ಮಾಸ್ಕ್ ಹಾಕಲ್ಲ. ಸ್ಮಶಾನದ ಪಕ್ಕದ ರಸ್ತೆಗೆ ಬಂದು ಟೀ ಕುಡಿಯುತ್ತಾರೆ, ಜನರೊಂದಿಗೆ ಓಡಾಡುತ್ತಾರೆ. ಸ್ಮಶಾನದ ಹತ್ತಿರ ಬೀಸಾಡಿದ ಪಿಪಿಇ ಕಿಟ್‍ಗಳನ್ನ ನಾಯಿಗಳು ರಸ್ತೆಗೆ ಎಳೆದು ತರುತ್ತವೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೆ ಬಿಬಿಎಂಪಿಗೆ ದೂರು ಕೊಡಿ ಅಂತ ನಿರ್ಲಕ್ಷ್ಯ ಮಾಡುತ್ತಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಜೊತೆಗೆ ಇದರಿಂದ ಸ್ಥಳೀಯರು ಭಾರೀ ಆತಂಕಕ್ಕೆ ಒಳಗಾಗಿದ್ದಾರೆ.

    FUNERAL 3

    ಈ ಬಗ್ಗೆ ಕಾರ್ಪೋರೇಟರ್ ನೇತ್ರಾವತಿ ಕೃಷ್ಣೆಗೌಡ ಪತಿ ಪಬ್ಲಿಕ್ ಟಿವಿ ವರದಿಗಾರರೊಂದಿಗೆ ಮಾತನಾಡಿದ್ದಾರೆ.
    ವರದಿಗಾರ: ನಿಮ್ಮ ವಾರ್ಡಿನಲ್ಲಿ ಒಂದು ಸ್ಮಶಾನದಲ್ಲಿ ಬೌರಿಂಗ್ ಮತ್ತು ವಿಕ್ಟೋರಿಯಾದಿಂದ ಮೃತ ಸೋಂಕಿತರ ಹುಳುತ್ತಿದ್ದಾರೆ ಅಂತ ಸುದ್ದಿ ಇದೆ ಹೌದ ಸರ್?
    ಕಾರ್ಪೋರೇಟರ್ ಪತಿ: ತಂದು ಹುಳುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಸ್ಟೇಷನ್‍ಗೂ ಹೇಳಿದ್ದೀವಿ. ಯಾರು ನ್ಯಾಚುರಲ್ ಡೆತ್ ಆಗಿದಾರೋ ಅವರನ್ನು ಮಾತ್ರ ಹುಳಬೇಕು. ಹೊರಗಡೆಯಿಂದ ತಂದು ಹುಳಬಾರದು ಅಂತ ಇನ್ಸ್‌ಪೆಕ್ಟರ್‌ಗೂಹೇಳಿದ್ದೀವಿ, ಬಿಬಿಎಂಪಿ ಕಮಿಷನರ್ ಜೊತೆಯೂ ಮಾತನಾಡಿದ್ದೀವಿ.
    ವರದಿಗಾರ: ಯಾವ ಸ್ಮಶಾನ ಸರ್, ಜೆಸಿ ರೋಡ್- ನಂದಿದುರ್ಗ ರೋಡ್ ಮದ್ಯೆನಾ?

    FUNE
    ಕಾರ್ಪೋರೇಟರ್ ಪತಿ: ನಂದಿದುರ್ಗ ರೋಡ್ ಬರುತ್ತೆ
    ವರದಿಗಾರ: ಸ್ಮಶಾನ ಹೆಸರು ಏನು ಸರ್.
    ಕಾರ್ಪೋರೇಟರ್ ಗಂಡ: ನಂದಿದುರ್ಗ ಪರೇಲ್ ಗ್ರೌಂಡ್
    ವರದಿಗಾರ: ನೀವೆನಾದರೂ ಆಪೋಸ್ ಮಾಡಿದ್ರಾ? ಸ್ಥಳೀಯರು ಆಪೋಸ್ ಮಾಡುತ್ತಿದ್ದಾರೆ
    ಕಾರ್ಪೋರೇಟರ್ ಗಂಡ: ನಾವು ಎಲ್ಲರಿಗೂ ಹೇಳಿದ್ದೀವಿ, ಪೊಲೀಸರು ಕರೆದು ಈ ತರ ಮಾಡಬಾರದು ಅಂತ ಹೇಳಿದ್ದಾರೆ. ಈ ಬಗ್ಗೆ ಕಮಿಷನರ್ ಜೊತೆ ಮಾತ ನಾಡಿದ್ದೇನೆ. ನಾವು ಚೆಕ್ ಮಾಡಿ, ಕ್ರಮ ಕೈಗೊಳ್ಳುತ್ತೇವೆ ಅಂದಿದ್ದಾರೆ. ಸ್ಥಳೀಯ ಶಾಸಕ ರಿಜ್ವಾನ್‍ ಬಳಿ ಮಾತನಾಡೋಣ ಅಂತ ಹೋಗಿದ್ದೆ. ಆದರೆ ಅವರು ಸಿಕ್ಕಿಲ್ಲ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವ ಸಂಸ್ಕಾರ ಮಾಡಿದವರು ಅಮಾನತು

    – ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್

    ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ- ಸಿಎಂ

    Public Tv IMPACTಈ ಬಗ್ಗೆ ಸಚಿವ ಶ್ರೀರಾಮು ಟ್ವೀಟ್ ಮಾಡಿದ್ದು, ಶವ ಸಂಸ್ಕಾರ ಮಾಡಿದ್ದ 8 ಜನರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮೊದಲಿಗೆ, “ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ” ಎಂದು ಶವ ಸಂಸ್ಕಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    mdk sriramulu

    ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತ ಈ ಘಟನೆ ಖಂಡಿಸಿ ಕ್ಷಮೆ ಯಾಚಿಸಿದೆ. ಕೋವಿಡ್-19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು, ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ. ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ ಎಂದು ಶ್ರೀರಾಮುಲು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಸೋಮವಾರ ಒಂದೇ ದಿನ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯವನ್ನು ಕಂಡರೆ ಎಂಥವರಿಗೂ ಕರುಳು ಹಿಂಡುವಂತಿತ್ತು. ಒಂದೇ ಬಾರಿ ಶವ ಸಂಸ್ಕಾರ ಮಾಡಬೇಕಾದರೆ ಆರೋಗ್ಯ ಇಲಾಖೆಯ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು.

    ಜಿಲ್ಲಾಧಿಕಾರಿ ಕ್ಷಮೆ
    ಪ್ರಕರಣದ ಕುರಿತು ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

    ಅಮಾನವೀಯ ಘಟನೆ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಸಹ ಬೇಸರ ವ್ಯಕ್ತಪಡಿಸಿ, ಬಹಿರಂಗವಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್ ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.

  • ಅಂತ್ಯಸಂಸ್ಕಾರಕ್ಕೆ ಬಿಡದ ಗ್ರಾಮಸ್ಥರು- ಗರ್ಭಿಣಿ ಶವವನ್ನ ಕಾಡಿನಲ್ಲಿ ಮರಕ್ಕೆ ಕಟ್ಟಿ ಹೋದ ಕುಟುಂಬಸ್ಥರು

    ಅಂತ್ಯಸಂಸ್ಕಾರಕ್ಕೆ ಬಿಡದ ಗ್ರಾಮಸ್ಥರು- ಗರ್ಭಿಣಿ ಶವವನ್ನ ಕಾಡಿನಲ್ಲಿ ಮರಕ್ಕೆ ಕಟ್ಟಿ ಹೋದ ಕುಟುಂಬಸ್ಥರು

    – ಪೊಲೀಸರಿಂದಲೇ ಗರ್ಭಿಣಿಯ ಅಂತ್ಯಕ್ರಿಯೆ

    ಹೈದರಾಬಾದ್: ಒಂಬತ್ತು ತಿಂಗಳ ಗರ್ಭಿಣಿ ಮೃತದೇಹವನ್ನು ಕುಟುಂಬದವರೇ ಅರಣ್ಯದಲ್ಲಿ ಮರವೊಂದಕ್ಕೆ ಕಟ್ಟಿ ಬಿಟ್ಟು ಹೋಗಿದ್ದ ಅಮಾನವೀಯ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಲಾವಣ್ಯ ಮೃತ ಗರ್ಭಿಣಿ. ಸ್ಥಳೀಯರು ಗ್ರಾಮದ ಮಹಿಳೆಯ ಅಂತಿಮ ವಿಧಿ-ವಿಧಾನಗಳನ್ನು ಮಾಡಲು ತಡೆದಿದ್ದಾರೆ. ನಂತರ ಕುಟುಂಬದರು ರುದ್ರವರಂನ ಅರಣ್ಯ ಪ್ರದೇಶದಲ್ಲಿ ಆಕೆಯ ಶವವನ್ನು ಮರಕ್ಕೆ ಕಟ್ಟಿ ಬಿಟ್ಟು ಹೋಗಿದ್ದರು.

    GIRL PREGNANT

    ಏನಿದು ಪ್ರಕರಣ?
    ಮೃತ ಲಾವಣ್ಯ ಜಿಲ್ಲೆಯ ಬಿ.ನಾಗಿರೆಡ್ಡಿಪಲ್ಲೆ ಗ್ರಾಮದ ಧರ್ಮೇಂದ್ರನ ಜೊತೆ ಮದುವೆಯಾಗಿದ್ದಳು. ಈಕೆಯ ಪತಿ ದೈನಂದಿನ ಕೂಲಿ ಕಾರ್ಮಿಕನಾಗಿದ್ದು, ಲಾವಣ್ಯ ತುಂಬು ಗರ್ಣಿಣಿಯಾಗಿದ್ದು, ಹೆರಿಗೆಗಾಗಿ ಪಕ್ಕದ ಸಿರಿವೆಲ್ಲಾ ಮಂಡಲದಲ್ಲಿರುವ ತನ್ನ ತವರು ಮನೆಗೆ ಹೋಗಿದ್ದಳು. ಪೋಷಕರು ಶುಕ್ರವಾರ ಗರ್ಭಿಣಿಯನ್ನು ನಂದ್ಯಾಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆರಿಗೆಯ ಸಮಯದಲ್ಲಿ ತೊಂದರೆಯಾಗಿ ಶನಿವಾರ ಲಾವಣ್ಯ ಮೃತಪಟ್ಟಿದ್ದಾಳೆ.

    ಆಕೆಯ ಅಂತ್ಯ ಸಂಸ್ಕಾರಕ್ಕಾಗಿ ಕುಟುಂಬದವರು ಮೃತದೇಹವನ್ನು ನಾಗಿರೆಡ್ಡಿಪಲ್ಲೆಗೆ ತೆಗೆದುಕೊಂಡು ಬಂದಿದ್ದಾರೆ. ಅಲ್ಲಿ ಆಚರಣೆಗಳ ಪ್ರಕಾರ ಮೃತದೇಹವನ್ನು ಸಮಾಧಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಇದೇ ವೇಳೆ ಗ್ರಾಮಸ್ಥರು ಬಂದು ಗರ್ಭಿಣಿಯ ಅಂತಿಮ ವಿಧಿ-ವಿಧಾನಗಳನ್ನು ಗ್ರಾಮದಲ್ಲಿ ನೆರವೇರಿಸುವುದರಿಂದ ಗ್ರಾಮಕ್ಕೆ ಒಳಿತಾಗುವುದಿಲ್ಲ. ಅಲ್ಲದೇ ಶವಸಂಸ್ಕಾರ ಮಾಡಿದರೆ ಗ್ರಾಮಕ್ಕೆ ಮಳೆ ಬರುವುದಿಲ್ಲ ಎಂದು ಅಂತ್ಯಸಂಸ್ಕಾರ ಮಾಡಲು ಅವಕಾಶ ಮಾಡಿಕೊಡಲಿಲ್ಲ.

    Capture 10

    ಕುಟುಂವದರು ಮನವಿ ಮಾಡಿಕೊಂಡು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಕೊನೆಗೆ ಬೇರೆ ದಾರಿಯಿಲ್ಲದೆ ಕುಟುಂಬದವರು ಮೃತದೇಹವನ್ನು ಹತ್ತಿರದ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಮರಕ್ಕೆ ಕಟ್ಟಿ ವಾಪಸ್ಸಾಗಿದ್ದಾರೆ. ಮರುದಿನ ಕಾಡಿನಲ್ಲಿ ಕಟ್ಟಿಗೆ ಸಂಗ್ರಹಿಸಲು ಹೋದಾಗ ನೆರೆಹೊರೆಯ ಗ್ರಾಮಸ್ಥರು ನೋಡಿ ರುದ್ರವರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

    ವಿಚಾರಣೆಯ ನಂತರ ನಾವು ಮೃತ ಮಹಿಳೆಯ ಕುಟುಂಬದವರನ್ನು ಪತ್ತೆ ಹಚ್ಚಿದ್ದೇವೆ. ಗ್ರಾಮದಲ್ಲಿ ಮಹಿಳೆಯ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಅವಕಾಶ ನೀಡಲಿಲ್ಲ. ಹೀಗಾಗಿ ಕುಟುಂಬದರು ಕಾಡಿನಲ್ಲಿ ಮೃತದೇಹವನ್ನು ಮರಕ್ಕೆ ಕಟ್ಟಿ ಬಿಟ್ಟು ಹೋಗಿದ್ದಾರೆ. ನಾವು ಗ್ರಾಮಸ್ಥರ ಮನವೊಲಿಸಲು ಪ್ರಯತ್ನ ಮಾಡಿದೆವು ಎಂದು ಸಬ್ ಇನ್ಸ್ ಪೆಕ್ಟರ್ ರಾಮಮೋಹನ್ ರೆಡ್ಡಿ ತಿಳಿಸಿದರು.

    ಗ್ರಾಮಸ್ಥರು ಗ್ರಾಮದಲ್ಲಿ ಮಹಿಳೆಯ ಅಂತ್ಯಕ್ರಿಯೆ ಮಾಡಲು ಆಕ್ಷೇಪ ವ್ಯಕ್ತಪಡಿಸಿದರು. ಕೊನೆಗೆ ಪೊಲೀಸರೇ ಲಾವಣ್ಯ ಅಂತಿಮ ವಿಧಿ-ವಿಧಾನಗಳನ್ನು ಮಾಡಿದ್ದಾರೆ. ನಂತರ ಈ ಕುರಿತು 15 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಪಿಪಿಇ ಕಿಟ್ ಧರಿಸದೇ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಖಾದರ್

    ಪಿಪಿಇ ಕಿಟ್ ಧರಿಸದೇ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರ ನಡೆಸಿದ ಖಾದರ್

    ಮಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧರೊಬ್ಬರ ಅಂತ್ಯಸಂಸ್ಕಾರವನ್ನು ಪಿಪಿಇ ಕಿಟ್ ಧರಿಸದೇ ಶಾಸಕ ಯು.ಟಿ. ಖಾದರ್ ನಡೆಸಿದ್ದಾರೆ.

    ಮಂಗಳೂರಿನ ಬೋಳಾರ ಮಸೀದಿಯ ದಫನ ಭೂಮಿಯಲ್ಲಿ ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಜೊತೆ ಶಾಸಕ ಖಾದರ್ ಕೂಡ ಅಂತ್ಯಸಂಸ್ಕಾರ ಕಾರ್ಯ ಮಾಡಿದ್ದಾರೆ. ಖಾದರ್ ಮಸೀದಿ ಭೂಮಿಯಲ್ಲಿ ಗುಂಡಿ ತೆಗೆದು ಸ್ವತಃ ಮೃತದೇಹವನ್ನು ಗುಂಡಿಯಲ್ಲಿಟ್ಟು ಮಣ್ಣು ಮುಚ್ಚುವ ಕೆಲಸ ಮಾಡಿದ್ದಾರೆ. ಆದರೆ ಈ ವೇಳೆ ಪಿಪಿಇ ಕಿಟ್ ಧರಿಸದೇ ಅಂತ್ಯ ಸಂಸ್ಕಾರ ಕಾರ್ಯ ನಡೆಸಿದ್ದಾರೆ.

    MNG KHADAR DONOT CARE AV 2

    ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ಮಾಡುವಾಗ ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರು. ಆದರೆ ಶಾಸಕ ಖಾದರ್ ಪಿಪಿಇ ಕಿಟ್ ಧರಿಸಿಲ್ಲ. ಹೀಗಾಗಿ ಖಾದರ್ ಡೆಡ್ಲಿ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

    ಮಂಗಳವಾರ 70 ವರ್ಷದ ವೃದ್ಧ, ರೋಗಿ 6282 ರೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ವೃದ್ಧ ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದು, ಜೂನ್ 12 ರಂದು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಅಂತ್ಯಸಂಸ್ಕಾರ ಮಾಡಲಾಗಿದೆ.

    MNG

  • ಅನಾಥ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಬಾಂಧವರು

    ಅನಾಥ ಹಿಂದೂ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಬಾಂಧವರು

    ಮಂಗಳೂರು: ಅನಾಥ ಹಿಂದೂ ವೃದ್ಧ ಮಹಿಳೆಯ ಶವ ಸಂಸ್ಕಾರ ಮಾಡಿ ಸ್ಥಳೀಯ ಮುಸ್ಲಿಂ ಸಮುದಾಯದವರು ಮಾನವೀಯತೆ ಮೆರೆದಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ನಾಗರಿಕರು ಈ ಕಾರ್ಯ ಮಾಡಿದ್ದಾರೆ. ಕೊಡಾಜೆ ಮಸೀದಿಯ ಹತ್ತಿರದ ಒಂದು ಮನೆಯಲ್ಲಿ ಬಡ ವೃದ್ಧ ಮಹಿಳೆಯು ಅಸುನೀಗಿದ್ದರು. ವೃದ್ಧೆಯು ಕೆಲವು ಸಮಯದಿಂದ ಅನಾರೋಗ್ಯದಿಂದಿದ್ದು ಇವರಿಗೆ ಇನ್ನೊಬ್ಬ ಅನಾರೋಗ್ಯ ಪೀಡಿತ ವೃದ್ಧೆ ಅಕ್ಕ ಮಾತ್ರ ಇದ್ದರು. ಹೀಗಾಗಿ ಕುಟುಂಬಸ್ಥರು ಯಾರೂ ಇಲ್ಲ ಎಂದರಿತ ಊರಿನವರು ತಕ್ಷಣ ಕಾರ್ಯ ಪ್ರವೃತ್ತರಾದರು.

    mng muslim

    ಕೊಡಾಜೆ ಜುಮ್ಮಾ ಮಸೀದಿಯ ಅಧ್ಯಕ್ಷರು ಸೇರಿದಂತೆ ಊರಿನ ನಾಗರೀಕರು ವೃದ್ಧ ಮಹಿಳೆಯ ಶವ ಸಂಸ್ಕಾರಕ್ಕೆ ಹಣ ಒಟ್ಟುಗೂಡಿಸಿದ್ದಾರೆ. ಸುಮಾರು ಐದು ಸಾವಿರ ರೂಪಾಯಿಯನ್ನು ಸೇರಿಸಿ ಅಂತ್ಯಸಂಸ್ಕಾರಕ್ಕೆ ಬೇಕಾದಂತಹ ವ್ಯವಸ್ಥೆಯನ್ನು ಮಾಡಿದ್ದಾರೆ.

    mng muslim 3

    ಅಂಬುಲೆನ್ಸ್ ಕರೆಸಿ ಪುತ್ತೂರಿನ ವೃದ್ಧೆಯ ಶವವನ್ನು ಶವಾಗಾರಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಆ ಬಳಿಕ ಶವ ಸಂಸ್ಕಾರ ಮಾಡಲಾಗಿದೆ. ಈ ಕಾರ್ಯ ಮಾಡುವ ಮೂಲಕ ಧರ್ಮದ ಭೇದಭಾವ ಇಲ್ಲದೆ ಮಾನವೀಯತೆಯ ಕೊಂಡಿ ಈಗಲೂ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದ್ದಾರೆ.

  • ಸಾವಿರಾರು ಜನರು, ಗಣ್ಯರ ಸಮ್ಮುಖದಲ್ಲಿ ವೀರ ಯೋಧನ ಅಂತ್ಯಸಂಸ್ಕಾರ

    ಸಾವಿರಾರು ಜನರು, ಗಣ್ಯರ ಸಮ್ಮುಖದಲ್ಲಿ ವೀರ ಯೋಧನ ಅಂತ್ಯಸಂಸ್ಕಾರ

    – ತಾಯಿ ಕಣ್ಣೀರು, ಜಿಲ್ಲಾಡಳಿತದಿಂದ ಸಹಾಯ ಹಸ್ತದ ಭರವಸೆ

    ಕೋಲಾರ: ಸಾವಿರಾರು ಜನರು ಮತ್ತು ಗಣ್ಯರ ಸಮ್ಮುಖದಲ್ಲಿ ಕೋಲಾರದ ವೀರ ಯೋಧ ಪ್ರಶಾಂತ್, ಅಮರ್ ರಹೇ ಅನ್ನೋ ಜನರ ಜಯ ಘೋಷಗಳ ನಡುವೆ ಮಣ್ಣಲ್ಲಿ ಮಣ್ಣಾಗಿದ್ದಾರೆ.

    ರಸ್ತೆಯುದ್ದಕ್ಕೂ ರಸ್ತೆಯ ಎರಡೂ ಬದಿಗಳಲ್ಲೂ ಸೇರಿರುವ ಜನಸಾಗರ, ವೀರ ಯೋಧನ ಪಾರ್ಥಿವ ಶರೀರಕ್ಕೆ ಹೂಮಳೆ ಸುರಿಸುತ್ತಾ, ಎಲ್ಲರ ಬಾಯಲ್ಲೂ ಪ್ರಶಾಂತ್ ಅಮರ್ ರಹೇ.. ಅಮರ್ ರಹೇ ಅನ್ನೋ ಜಯಘೋಷ ಮೊಳಗಿತು. ಅದ್ಧೂರಿಯಾಗಿ ತ್ರಿವರ್ಣ ದ್ವಜದ ನಡುವೆ ವೀರ ಯೋಧನ ಪಾರ್ಥಿವ ಶರೀರದ ಮೆರವಣಿಗೆ, ಮತ್ತೊಂದೆಡೆ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.

    klr yoda2

    ಬಂಗಾರಪೇಟೆ ತಾಲೂಕು ಕಣಿಂಬೆಲೆ ಗ್ರಾಮದ ನಾರಾಯಣಪ್ಪ ಹಾಗೂ ಲಕ್ಷ್ಮಮ್ಮ ದಂಪತಿಯ ಪುತ್ರ ಪ್ರಶಾಂತ್ ಕಳೆದ ಐದು ವರ್ಷಗಳಿಂದ ಗಡಿಭದ್ರತಾ ಪಡೆಯ 17ನೇ ಮದ್ರಾಸ್ ರೆಜ್‍ಮೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಫೆ.26 ರ ಬುಧವಾರ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದರು. ಶುಕ್ರವಾರ ಮಧ್ಯರಾತ್ರಿ ಸುಮಾರಿಗೆ ವಿಮಾನದ ಮೂಲಕ ಯೋಧನ ಪಾರ್ಥಿವ ಶರೀರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಅಲ್ಲಿಂದ ನೇರ ಬಂಗಾರಪೇಟೆ ಪಟ್ಟಣಕ್ಕೆ ತರಲಾಗಿತ್ತು, ಈ ವೇಳೆ ಜನರು ಮಧ್ಯರಾತ್ರಿಯಲ್ಲೂ ಯೋಧನ ಪಾರ್ಥಿವ ಶರೀರವನ್ನು ಸ್ವಾಗತ ಮಾಡಿಕೊಂಡಿದ್ದರು.

    klr soldier 1

    ಇಂದು ಬೆಳಗ್ಗೆ 7 ಗಂಟೆಯಿಂದ ವೀರ ಯೋಧ ಪ್ರಶಾಂತ್ ಪಾರ್ಥಿವ ಶರೀರವನ್ನು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಮಾಲೂರು ಶಾಸಕ ನಂಜೇಗೌಡ, ಸಂಸದ ಮುನಿಸ್ವಾಮಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಸೇರಿದಂತೆ ಹಲವು ಗಣ್ಯರು ಪಕ್ಷ ಭೇದ ಮರೆತು ಹುತಾತ್ಮ ಯೋಧ ಪ್ರಶಾಂತ್‍ಗೆ ಹೂಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು. ಹೊಸ ಮನೆ ಕಟ್ಟಿಸಲು ಸಾಲ ಮಾಡಿ ಹಣ ನೀಡಿ ಈ ಬಾರಿ ಬಂದಾಗ ಗೃಹಪ್ರವೇಶ ಮಾಡೋಣ ಎಂದು ಹೇಳಿ ಹೋಗಿದ್ದ ಮಗ ನಮ್ಮನ್ನೆಲ್ಲಾ ಅಗಲಿದನ್ನು ನೆನೆದು ತಾಯಿ ಲಕ್ಷ್ಮಮ್ಮ ಕಣ್ಣೀರಾಕಿದರು.

    klr yoda3

    10.30ರ ಸುಮಾರಿಗೆ ಯೋಧನ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬಂಗಾರಪೇಟೆ ಪಟ್ಟಣದ ಪ್ರಮುಖ ಬೀದಿ ಬೀದಿಗಳಲ್ಲಿ ಸಾವಿರಾರು ಸಂಖ್ಯೆಯ ಜನಸ್ತೋಮದ ನಡುವೆ ವೀರ ಯೋಧನ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು. ಈ ವೇಳೆ ರಸ್ತೆಯ ಎರಡೂ ಬದಿಗಳಲ್ಲಿ ಜನರು ಅಮರ್ ರಹೇ ಅಮರ್ ರಹೇ ಪ್ರಶಾಂತ್ ಎಂದು ಜಯಘೋಷಗಳನ್ನು ಕೂಗುತ್ತಾ ಪಾರ್ಥಿವ ಶರೀರಕ್ಕೆ ಹೂಮಳೆ ಸುರಿಸಿದರು. ಪಾರ್ಥಿವ ಶರೀರ ಸಾಗಿದ ನಾಲ್ಕು ಕಿಲೋಮೀಟರ್ ದೂರಕ್ಕೂ ಜನ ಸಾಗರ ತುಂಬಿತ್ತು.

    klr soldier 2

    ಸಂಸದರು, ಶಾಸಕರುಗಳು ಪಾರ್ಥಿವ ಶರೀರದ ಜೊತೆಗೆ ನಡೆದೇ ಸಾಗಿದರು. ವೀರಯೋಧ ಪ್ರಶಾಂತ್ ಓದಿದ್ದ ಶಾಲೆಯಲ್ಲಿ ತ್ರಿವರ್ಣದ್ವಜವನ್ನು ಅರ್ಧಕ್ಕೆ ಹಾರಿಸಿ ಶಾಲೆಗೆ ರಜೆ ನೀಡಿ ಗೌರವ ಸಲ್ಲಿಸಲಾಯಿತು. ಗ್ರಾಮದ ಹೊರಗಡೆ ಸರ್ಕಾರಿ ಜಾಗದಲ್ಲಿ ಯೋಧನ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿ ಸಾವಿರಾರು ಜನರ ನಡುವೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಪ್ರಶಾಂತ್ ಪಾರ್ಥಿವ ಶರೀರದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಆಗ ಮಗನನ್ನು ನೆನೆದು ಕಣ್ಣೀರಾಕುತ್ತಿದ್ದ ಕುಟುಂಬಸ್ಥರಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಧೈರ್ಯ ಹೇಳಿ ನಿಮ್ಮ ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

    klr yoda1

    ದೇಶಸೇವೆ ಮಾಡುತ್ತೇನೆ ಎಂದು ಕನಸು ಕಟ್ಟಿಕೊಂಡು ಸೇನೆಗೆ ಸೇರಿದ್ದ ಯುವಕ ಪ್ರಶಾಂತ್, ಇಂದು ದೇಶದ ಮಗನಾಗಿ ಮಣ್ಣಲ್ಲಿ ಮಣ್ಣಾದರು. ಆದರೆ ಅವನನ್ನೇ ನಂಬಿದ್ದ ಯೋಧ ಪ್ರಶಾಂತ್ ಕುಟುಂಬ ನಾವಿಕನನ್ನು ಕಳೆದು ಕೊಂಡ ದೋಣಿಯಂತಾಗಿದ್ದು, ಸರ್ಕಾರಗಳು ಯೋಧನ ಕುಟುಂಬಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಿದೆ.

  • 246 ಪ್ರಕರಣಗಳಲ್ಲಿ ಭಾಗವಹಿಸಿದ್ದ ರೂಬಿ ಇನ್ನಿಲ್ಲ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    246 ಪ್ರಕರಣಗಳಲ್ಲಿ ಭಾಗವಹಿಸಿದ್ದ ರೂಬಿ ಇನ್ನಿಲ್ಲ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

    ರಾಯಚೂರು: ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ 13 ವರ್ಷ ಕಾಲ ಸೇವೆ ಸಲ್ಲಿಸಿ ಸಾವನ್ನಪ್ಪಿರುವ ಶ್ವಾನ ರೂಬಿಗೆ ಸಕಲ ಸರ್ಕಾರಿ ಗೌರವ ವಂದನೆಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.

    ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ ವೇದಮೂರ್ತಿ ಅಂತಿಮ ಸಂಸ್ಕಾರ ನೆರವೇರಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.

    vlcsnap 2019 12 06 12h41m32s227

    ಬೆಂಗಳೂರಿನ ಆಡಗೋಡಿಯಲ್ಲಿ ತರಬೇತಿ ಪಡೆದ ಡಾಬರಮನ್ ತಳಿಯ ರೂಬಿ ಮೂರು ತಿಂಗಳು ಇದ್ದಾಗಿನಿಂದ ರಾಯಚೂರು ಜಿಲ್ಲಾ ಶ್ವಾನದಳದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ. 2006ರಿಂದ ಇದುವರೆಗೆ 13 ವರ್ಷಗಳ ಸೇವಾ ಅವಧಿಯಲ್ಲಿ 246 ಪ್ರಕರಣಗಳಲ್ಲಿ ಕೆಲಸ ಮಾಡಿದ ರೂಬಿ 18 ಪ್ರಕರಣಗಳಲ್ಲಿ ಆರೋಪಿಗಳನ್ನ ಸ್ವತಃ ಪತ್ತೆ ಹಚ್ಚಿದೆ.

    ಪೊಲೀಸ್ ಇಲಾಖೆಗೆ ತಲೆ ನೋವಾಗಿದ್ದ ಶಕ್ತಿನಗರದ ಇಂಜಿನಿಯರ್ ಕೊಲೆ ಪ್ರಕರಣವನ್ನು ರೂಬಿ ಭೇದಿಸಿತ್ತು. ಅನಾರೋಗ್ಯದಿಂದ ರೂಬಿ ಸಾವನ್ನಪ್ಪಿರುವುದು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಶ್ವಾನದಳ ಘಟಕಕ್ಕೆ ತುಂಬಲಾರದ ನಷ್ಟವಾಗಿದೆ. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೂಬಿ ಅಗಲಿಕೆ ನೋವನ್ನ ತಂದಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಹೇಳಿದ್ದಾರೆ.

  • ಮಾವನ ಅಂತ್ಯ ಸಂಸ್ಕಾರಕ್ಕೆ ಹೊರಟು ಸ್ಮಶಾನ ಸೇರಿದ ಅಳಿಯ

    ಮಾವನ ಅಂತ್ಯ ಸಂಸ್ಕಾರಕ್ಕೆ ಹೊರಟು ಸ್ಮಶಾನ ಸೇರಿದ ಅಳಿಯ

    ಚಿಕ್ಕಮಗಳೂರು: ಮಾವನ ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಅಳಿಯನೂ ಸಾವನಪ್ಪಿರೋ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸುರೇಶ್ (47) ಮೃತ ದುರ್ದೈವಿ. ಪತ್ನಿ ತಂದೆಯ ಸಾವಿಗೆ ಹೋಗಲು ರಸ್ತೆ ಬದಿಯಲ್ಲಿ ಸುರೇಶ್, ಪತ್ನಿ ಸುನಂದಾ ಹಾಗೂ ಮಕ್ಕಳು ಬಸ್ಸಿಗಾಗಿ ಕಾಯುತ್ತಿದರು. ಈ ವೇಳೆ ಏಕಾಏಕಿ ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಶ್ ಕುಟುಂಬಸ್ಥರ ಮೇಲೆ ಕಾರು ನುಗ್ಗಿದೆ. ಕೂದಲೆಳೆ ಅಂತರದಲ್ಲಿ ಕಾರು ಡಿಕ್ಕಿಯಿಂದ ಪತ್ನಿ ಸುನಂದಾ ಹಾಗೂ ಮಕ್ಕಳು ಪಾರಾಗಿದ್ದಾರೆ.

    01 ckm death death av 5

    ಈ ಘಟನೆಯಲ್ಲಿ ತಪ್ಪಿಸಿಕೊಳ್ಳಲು ಮುಂದಾದ ಸುರೇಶ್ ಮೇಲೆ ಕಾರು ಹರಿದ ಪರಿಣಾಮ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದ್ದು, ಒಂದೆಡೆ ತಂದೆ ಸಾವು, ಮತ್ತೊಂದೆಡೆ ಪತಿಯ ಸಾವಿನಿಂದ ಮೃತ ಸುರೇಶ್ ಪತ್ನಿ ಸುನಂದಾ ಕಂಗಾಲಾಗಿದ್ದಾರೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಿಥಿ ನಡೆದು 2 ದಿನದ ನಂತ್ರ ವ್ಯಕ್ತಿ ಪ್ರತ್ಯಕ್ಷ – ಕೊನೆ ದರ್ಶನ ಮಾಡಲಾಗದೆ ಪತ್ನಿ, ಪುತ್ರ ಕಣ್ಣೀರು

    ತಿಥಿ ನಡೆದು 2 ದಿನದ ನಂತ್ರ ವ್ಯಕ್ತಿ ಪ್ರತ್ಯಕ್ಷ – ಕೊನೆ ದರ್ಶನ ಮಾಡಲಾಗದೆ ಪತ್ನಿ, ಪುತ್ರ ಕಣ್ಣೀರು

    ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲೂಕು ಶಂಖ ಗ್ರಾಮದಲ್ಲಿ ನಡೆದಿತ್ತು. ತನ್ನದೇ ಪತಿಯ ಮೃತದೇಹ ಎಂದು ತಿಳಿದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಆತನ ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ ಈಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗ ಅಂತಿಮ ದರ್ಶನ ಪಡೆಯುವುದಕ್ಕೆ ಆಗಲಿಲ್ಲ ಎಂದು ಸಮಾಧಿ ಮುಂದೆ ಕಣ್ಣೀರು ಹಾಕಿದ್ದಾರೆ.

    ರಾಜಣ್ಣ (60) ಮೃತ ವ್ಯಕ್ತಿ. ರಾಜಣ್ಣ ಚಿಕ್ಕಮಗಳೂರು ಜಿಲ್ಲೆಯ ಭೈರಾಪುರ ಗ್ರಾಮದವರಾಗಿದ್ದು, ಅವರ ಶರ್ಟ್ ನಿಂದ ಪುತ್ರ ಹಾಗೂ ಪತ್ನಿ ಅವರ ಗುರುತು ಪತ್ತೆ ಹಚ್ಚಿದ್ದಾರೆ. ರಾಜಣ್ಣ ಅವರ ಪುತ್ರ ಮತ್ತು ಪತ್ನಿ ತಮ್ಮ ಸಂಬಂದಿಕರೊಂದಿಗೆ ಶಂಖ ಗ್ರಾಮಕ್ಕೆ ಬಂದಿದ್ದರು. ತನ್ನ ಪತಿಯನ್ನು ಕೊನೆ ಸಮಯದಲ್ಲಿ ದರ್ಶನ ಮಾಡಲು ಸಾಧ್ಯವಾಗದೇ ಅಂತಿಮ ವಿಧಿವಿಧಾನವನ್ನು ಮಾಡಲಾಗದೆ ಅಸಹಾಯಕರಾಗಿ ಸಮಾಧಿ ಮುಂದೆ ಕಣ್ಣೀರು ಹಾಕಿದರು. ಶವವನ್ನು ಹೊರಕ್ಕೆ ತೆಗೆದುಕೊಂಡು ಹೋಗಲು ಕೂಡ ಸಾಧ್ಯವಾಗದೇ ಅದೇ ಸಮಾಧಿಯ ಮಣ್ಣನ್ನು ತೆಗೆದುಕೊಂಡು ವಾಪಸಾಗಿದ್ದಾರೆ.

    hsn dead man alive 2

    ನಡೆದಿದ್ದೇನು?
    ಶಿವಣ್ಣ ಎಂಬವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡು ನಾಪತ್ತೆಯಾಗಿದ್ದರು. ಶಿವಣ್ಣ ಮನೆಗೆ ಬರದೇ ಇರುವುದರಿಂದ ಕುಟುಂಬಸ್ಥರು ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರು ನೀಡಿದ್ದರು. ಕುಟುಂಬಸ್ಥರು ಶಿವಣ್ಣನ ಮಿಸ್ಸಿಂಗ್ ಕೇಸ್ ದಾಖಲಿಸಿದ 2 ದಿನಗಳ ಬಳಿಕ ಹಾಸನದ ಹೊಸ ಬಸ್ ನಿಲ್ದಾಣ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಸಿಕ್ಕಿತ್ತು. ಈ ಮೃತದೇಹ ನೋಡಲು ಮೇಲ್ನೋಟಕ್ಕೆ ಶಿವಣ್ಣನ ರೀತಿ ಹೋಲುತ್ತಿತ್ತು. ಹಾಗಾಗಿ ಕುಟುಂಬಸ್ಥರು ಇದು ಶಿವಣ್ಣದೇ ಮೃತದೇಹ ಎಂದು ಭಾವಿಸಿದ್ದರು.

    hsn dead man alive 1 1

    ಕುಟುಂಬದ ಸದಸ್ಯರು ಶಿವಣ್ಣನ ಮೃತದೇಹ ಎಂದು ಮನೆಗೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಿದ್ದರು. ಅಲ್ಲದೆ ಶವ ಸಂಸ್ಕಾರ ಮಾಡಿ ತಿಥಿ ಕೂಡ ಮಾಡಿದ್ದರು. ಆದರೆ ತಿಥಿ ಮಾಡಿದ ಎರಡು ದಿನದ ಬಳಿಕ ಶಿವಣ್ಣ ತನ್ನ ಮನೆಗೆ ಹಿಂದಿರುಗಿದ್ದರು. ಶಿವಣ್ಣ ದಿಢೀರ್ ಎಂದು ಮನೆಯಲ್ಲಿ ಪ್ರತ್ಯಕ್ಷ ಆಗಿರುವುದು ನೋಡಿ ಜನರಲ್ಲಿ ಅಚ್ಚರಿ ಮೂಡಿತ್ತು. ಶಿವಣ್ಣ ಬದುಕಿದ್ದಾರೆ ಎಂಬ ವಿಷಯ ತಿಳಿದು ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿತ್ತು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.