Tag: ಅಗ್ನಿಶಾಮಕ ಸಿಬ್ಬಂದಿ

  • ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು- ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ

    ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು- ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ

    ಚಿಕ್ಕೋಡಿ/ಬೆಳಗಾವಿ: ಠಾಣೆಯ ಆವರಣದಲ್ಲಿ ಹಾಡಹಗಲೇ ಗುಂಡು, ತುಂಡು ಸೇವಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ.

    ಅಥಣಿಯ ಅಗ್ನಿಶಾಮಕ ದಳದ ಠಾಣೆಯಲ್ಲಿ ಘಟನೆ ನಡೆದಿದೆ. ಅಥಣಿಯ ಅಗ್ನಿಶಾಮಕ ದಳದ ಸಿಬ್ಬಂದಿ ಠಾಣೆಯ ಆವರಣದಲ್ಲೆ ಗುಂಡು, ತುಂಡಿನ ಮೋಜುಮಸ್ತಿಯಲ್ಲಿ ತೊಡಗಿರುವ ದೃಶ್ಯಗಳು ಈಗ ಎಲ್ಲೆಡೆ ವೈರಲ್ ಆಗುತ್ತಿವೆ. ಈ ದೃಶ್ಯವನ್ನು ಚಿತ್ರೀಕರಿಸಲು ಮುಂದಾಗುತ್ತಿದ್ದಂತೆ ಕ್ಯಾಮೆರಾ ಕಂಡ ಸಿಬ್ಬಂದಿ ಮದ್ಯ ಮುಚ್ಚಿಡಲು ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಏನು ಇಲ್ಲ ಊಟ ಮಾಡುತ್ತಿದ್ದೇವೆ ಅಷ್ಟೇ ಎಂದು ಸಮಾಜಾಯಿಸಿ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಂಗಾರದ ಮೋಹದ ರಾಣಿಯ ಮಹಾವಂಚನೆಯ ಕಥೆ – RBI ಹೆಸರಿನಲ್ಲಿ ನಕಲಿ ದಾಖಲೆ

    ckd fire drink

    ಅಥಣಿ ತಾಲೂಕಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದರೆ ಏನು ಗತಿ, ಸಿಬ್ಬಂದಿ ಬರುತ್ತಾರೆಂಬ ವಿಶ್ವಾಸದಲ್ಲಿರುವ ಜನರ ಗತಿ ಏನು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಠಾಣೆಯ ಆವರಣದಲ್ಲೇ ಗುಂಪಾಗಿ ಕುಳಿತು ಭರ್ಜರಿ ಎಣ್ಣೆ ಸವಿಯುತ್ತ, ಮಾಂಸಹಾರ ಊಟ ಮಾಡಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗಿದೆ.

  • ಪೆಟ್ರೋಲ್ ಹಾಕುವಾಗ ಓಮ್ನಿಗೆ ಹೊತ್ತಿಕೊಂಡ ಬೆಂಕಿ

    ಪೆಟ್ರೋಲ್ ಹಾಕುವಾಗ ಓಮ್ನಿಗೆ ಹೊತ್ತಿಕೊಂಡ ಬೆಂಕಿ

    – ಇಂಡಿ ಪಂಪ್ ಪೆಟ್ರೋಲ್ ಬಂಕ್ ನಲ್ಲಿ ಅವಘಡ

    ಹುಬ್ಬಳ್ಳಿ: ಪೆಟ್ರೋಲ್ ಹಾಕುವ ವೇಳೆ ಮಾರುತಿ ಓಮ್ನಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಇಂಡಿಪಂಪ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.

    vlcsnap 2021 04 10 21h25m03s554 e1618070154939

    ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಯ ವಾಹನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

    vlcsnap 2021 04 10 21h25m17s595 e1618070185271

    ಬೆಂಕಿ ಕಾಣುತ್ತಿದಂತೆಯೇ ಜನರು ಆತಂಕಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿನ ನಂದಿಸಿದ ನಂತರ ಸ್ಥಳೀಯರು ನಿರಾಳರಾದರು.

  • ಮೊಬೈಲ್ ಕಸಿದುಕೊಂಡಿದ್ದಕ್ಕೆ ಫಜೀತಿ ಸೃಷ್ಟಿಸಿದ ವಿದ್ಯಾರ್ಥಿ

    ಮೊಬೈಲ್ ಕಸಿದುಕೊಂಡಿದ್ದಕ್ಕೆ ಫಜೀತಿ ಸೃಷ್ಟಿಸಿದ ವಿದ್ಯಾರ್ಥಿ

    – ಗಾಜು ಒಡೆದು ಬಾತ್ ರೂಮಿಗೆ ಎಂಟ್ರಿ

    ಉಡುಪಿ: ದಿನಪೂರ್ತಿ ಇಂಟರ್ನೆಟ್ ನಲ್ಲಿ ಇರಬೇಡ ಎಂದು ತಾಯಿ ಬೈದರೆಂದು ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಬಾಗಿಲು ಹಾಕಿಕೊಂಡು ಗಂಟೆಗಟ್ಟಲೆ ಹೊರಗೆ ಬಾರದೆ ಅವಾಂತರ ಸೃಷ್ಟಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

    WhatsApp Image 2021 01 02 at 3.38.11 PM 2

    ಮಣಿಪಾಲದ ಎಂಐಟಿ ಕ್ಯಾಂಪಸ್ ಪಕ್ಕದ ಎಒನ್ ಅಪಾರ್ಟ್‍ಮೆಂಟ್‍ನಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಾಯಿ ಮೊಬೈಲ್ ಕಿತ್ತುಕೊಂಡರು ಎಂದು ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಸೇರಿಕೊಂಡು ಒಳಗಿಂದ ಬಾಗಿಲು ಹಾಕಿಕೊಂಡಿದ್ದ. ಎಷ್ಟೇ ಬಾಗಿಲು ತಟ್ಟಿದರೂ, ಮನವಿ ಮಾಡಿದರೂ ಬಾಗಿಲು ತೆರೆಯದಿದ್ದಾಗ ದಿಕ್ಕುತೋಚದೆ ಅಮ್ಮ ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮಣಿಪಾಲಕ್ಕೆ ತೆರಳಿ ಬಾಗಿಲು ತೆರೆಯುವಂತೆ ವಿನಂತಿ ಮಾಡಿಕೊಂಡಿದ್ದಾರೆ.

    WhatsApp Image 2021 01 02 at 3.38.12 PM

    ವಿದ್ಯಾರ್ಥಿ ಬಾಗಿಲು ತೆರೆಯದಿದ್ದಾಗ ಅಗ್ನಿಶಾಮಕ ಸಿಬ್ಬಂದಿ ಅಪಾರ್ಟ್‍ಮೆಂಟ್‍ನ ಟೆರಸ್ ಹತ್ತಿ, ಕಿಟಕಿ ಪಕ್ಕ ಇಳಿದು ಬಾತ್ ರೂಮ್ ನ ಕಿಟಕಿ ಗಾಜು ಮುರಿದು ಒಳಗೆ ಪ್ರವೇಶಿಸಿದ್ದಾರೆ. 17 ವರ್ಷದ ವಿದ್ಯಾರ್ಥಿಯನ್ನು ಹೊರಗೆ ತಂದಿದ್ದಾರೆ. ಫೈರ್ ಡಿಎಫ್‍ಒ ವಸಂತ್ ಕುಮಾರ್ ನೇತೃತ್ವದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಪ್ರಭುದೇವ ಮಾಣೆ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.

    WhatsApp Image 2021 01 02 at 3.38.11 PM

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಎಫ್‍ಒ ವಸಂತ್ ಕುಮಾರ್, ಫೋನ್ ಕರೆ ಬಂದ 10 ನಿಮಿಷಕ್ಕೆ ನಮ್ಮ ತಂಡ ತೆರಳಿತ್ತು. ಯಾವುದೇ ಸಮಸ್ಯೆ ಆಗದಂತೆ ಆಪರೇಷನ್ ಮಾಡಿದ್ದೇವೆ. ಕುಟುಂಬ ನಿಟ್ಟುಸಿರು ಬಿಟ್ಟಿದೆ ಎಂದರು. ಮಣಿಪಾಲ ಸೆಕ್ಯೂರಿಟಿ ಮುಖ್ಯಸ್ಥ ಪ್ರಭುದೇವ ಮಾಣೆ ಮಾತನಾಡಿ, ಎಲ್ಲ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯಾಚರಣೆಗೆ ಸಹಕರಿಸಿದೆವು. ಅಗ್ನಿಶಾಮಕ ಸಿಬ್ಬಂದಿ ಬಾತ್ ರೂಮ್ ಪ್ರವೇಶಿಸಿದಾಗ ವಿದ್ಯಾರ್ಥಿ ತಬ್ಬಿಬ್ಬಾಗಿದ್ದಾನೆ. ಆಮೇಲೆ ನಾವೆಲ್ಲ ಬುದ್ಧಿವಾದ ಹೇಳಿದ್ದೇವೆ. ಸಂಪೂರ್ಣವಾಗಿ ಇಂಟರ್ನೆಟ್ ಗೆ ಒಗ್ಗಿಕೊಂಡಾಗ ಹೀಗಾಗುತ್ತದೆ. ಪೋಷಕರು ಮಕ್ಕಳನ್ನು ಪ್ರೀತಿಯಿಂದ ಮಾತನಾಡಿಸುವುದು ಕೂಡ ಬಹಳ ಮುಖ್ಯವಾಗುತ್ತದೆ ಎಂದರು.

  • ಜೀವದ ಹಂಗು ತೊರೆದು ಸಮವಸ್ತ್ರದಲ್ಲೇ ನೀರಿಗಿಳಿದು ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ಜೀವದ ಹಂಗು ತೊರೆದು ಸಮವಸ್ತ್ರದಲ್ಲೇ ನೀರಿಗಿಳಿದು ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    – ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

    ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವನ್ನ ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿರೋ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ.

    ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯುದ್ಧಕ್ಕೂ ಎಲ್ಲೂ ಸರ್ಕಾರ ಬೇಲಿಯನ್ನು ನಿರ್ಮಿಸಿಲ್ಲ. ಆದ್ದರಿಂದ ಮೇಯುವಾಗ ಆಯಾ ತಪ್ಪಿ ಬಿದ್ದ ಹುಸು ಜೀವ ಉಳಿಸಿಕೊಳ್ಳಲು ಹೋರಾಡುತ್ತಿತ್ತು. ವೇಗವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಲೇ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಹಸುವನ್ನು ಕಂಡು ಸ್ಥಳೀಯರು ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳ ಗಮನಕ್ಕೆ ತಂದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಮವಸ್ತ್ರದ್ಲಲಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ನೀರಿನಲ್ಲಿ ಧುಮುಕಿ ಹಸುವನ್ನ ರಕ್ಷಿಸಿದ್ದಾರೆ.

    Chikkamagaluru

    ಸುಮಾರು ಅರ್ಧಗಂಟೆಗಳ ಕಾಲ ನೀರಿನಲ್ಲಿಯೇ ಹಸುವಿಗೆ ಹಗ್ಗ ಕಟ್ಟಿ ಅದನ್ನು ಕಾಲುವೆಯ ಒಂದು ಬದಿಗೆ ಎಳೆತಂದು ಬಳಿಕ ಸ್ಥಳೀಯರ ಸಹಾಯದಿಂದ ಹುಸುವನ್ನು ರಕ್ಷಿಸಿ ಮೇಲೆ ತಂದಿದ್ದಾರೆ. ಆದರೆ ಕಳೆದ ಮೂರು ದಿನಗಳ ಹಿಂದೆ ಇದೇ ರೀತಿ ಅಜ್ಜಂಪುರದ ಸಮೀಪ ಇದೇ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಿದ್ದಿದ್ದ ಹಸುವೊಂದನ್ನು ಸ್ಥಳೀಯರು ರಕ್ಷಿಸಲು ಮುಂದಾಗಿದ್ದರು. ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಹಸುವನ್ನ ಜೆಸಿಬಿ ಮೂಲಕವೂ ರಕ್ಷಿಸಲು ಮುಂದಾಗಿದ್ದರು. ಆದರೆ ಸ್ಥಳೀಯರ ಕೆಲಸ ಫಲ ಕೊಡಲಿಲ್ಲ. ಹಸು ಕೊಚ್ಚಿ ಹೋಗಿ ಸಾವನ್ನಪ್ಪಿತು. ಅಷ್ಟೆ ಅಲ್ಲದೇ ಕಳೆದ ಎರಡು ದಿನಗಳ ಹಿಂದಷ್ಟೆ ಈಜಲು ಹೋಗಿದ್ದ 22 ವರ್ಷದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ.

    Chikkamagaluru Cow 3

    ಕಳೆದ ಮೂರು ತಿಂಗಳಲ್ಲಿ ಸುಮಾರು ನಾಲ್ಕೈದು ಜನ ಇದೇ ಭದ್ರಾ ಮೇಲ್ದಂಡೆ ಯೋಜನೆಗೆ ಬಲಿಯಾಗಿದ್ದಾರೆ. ಹಾಗಾಗಿ ಸ್ಥಳೀಯರು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿ, ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನೂರಾರು ಕಿ.ಮೀ. ಸಾಗಿದೆ. ಎಲ್ಲೂ ಕೂಡ ನಾಲೆಯ ಎರಡೂ ಬದಿಗೆ ತಂತಿ ಬೇಲೆ ನಿರ್ಮಿಸಿಲ್ಲ. ಹಾಗಾಗಿ ಸಾವು-ನೋವುಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ನಾಲೆಯ ಎರಡು ಬದಿಗೆ ತಂತಿ ಬೇಲಿ ನಿರ್ಮಿಸಿಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

  • ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    blr fire

    ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.

    blr fire 5

    ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿರುವುದರಿಂದ ಹರಸಾಹಸ ಪಡುವಂತಾಗಿದೆ. ಈಗಾಗಲೇ ಅಕ್ಕ ಪಕ್ಕದ ಮನೆಯವರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಸಾವು, ನೋವಿನ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

    blr fire 2

  • ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದವನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ವಿಜಯಪುರ: ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದವನನ್ನು ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.

    ವಿಜಯಪುರ ತಾಲೂಕಿನ ಅತ್ತಾಲಟ್ಟಿ ಬಳಿ ಘಟನೆ ನಡೆದಿದ್ದು, ಅತ್ತಾಲಟ್ಟಿ ನಿವಾಸಿ ಬಂದೇನವಾಜ್ ಮೊಕಾಶಿಯವರನ್ನು ರಕ್ಷಣೆ ಮಾಡಲಾಗಿದೆ. ಸಕಾಲಕ್ಕೆ ತೆರಳಿ ಅಗ್ನಿಶಾಮಕ ದಳದ ಸಿಬ್ಬಂದಿ ವ್ಯಕ್ತಿಯ ಪ್ರಾಣ ಉಳಿಸಿದ್ದಾರೆ.

    vlcsnap 2020 10 12 13h58m32s380 e1602491885205

    ಸಾರವಾಡದಿಂದ ಅತ್ತಾಲಟ್ಟಿಗೆ ಹೊರಟಿದ್ದ ವೇಳೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗಿದ್ದ. ಕಳೆದ ರಾತ್ರಿ ನಡೆದ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಹಳ್ಳದಲ್ಲಿನ ಮುಳ್ಳಿನ ಕಂಟಿಗೆ ಸಿಲುಕಿಕೊಂಡಿದ್ದ ವ್ಯಕ್ತಿ ಬಂದೇನವಾಜ್, ಬಳಿಕ ತನ್ನ ಮೊಬೈಲ್ ನಿಂದ ಮನೆಯವರಿಗೆ ವಿಷಯ ಮುಟ್ಟಿಸಿದ್ದ. ನಂತರ ಮನೆಯವರು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

    vlcsnap 2020 10 12 13h59m49s066 e1602491809656

    ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗದ ಸಹಾಯದಿಂದ ಬಂದೇನವಾಜ್ ಅವರನ್ನು ರಕ್ಷಣೆ ಮಾಡಿದ್ದಾರೆ. ನೀರಿನ ರಭಸಕ್ಕೆ ಹಳ್ಳದಲ್ಲಿ ಸುಮಾರು 200 ಅಡಿಯಷ್ಟು ದೂರದ ವರೆಗೆ ಕೊಚ್ಚಿಹೋಗಿ ಬಂದೇನವಾಜ್ ಮುಳ್ಳಿಕ ಕಂಟಿಗೆ ಸಿಲುಕಿದ್ದರು.

  • ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

    ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

    ಮಂಗಳೂರು: ಲಾಕ್‍ಡೌನ್ ಹಿನ್ನೆಲೆ ಜನದಟ್ಟಣೆ ಕಡಿಮೆಯಾಗಿರುವುದರಿಂದ ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ನಂತರ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.

    vlcsnap 2020 04 22 07h46m46s158

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಘಟನೆ ನಡೆದಿದ್ದು, ಮಜಿ ಮೋನಪ್ಪ ಅವರ ಜಮೀನಿನಲ್ಲಿರುವ ಸುಮಾರು 6 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಆತಂಕ ಸೃಷ್ಟಿಸಿತ್ತು. ಬಾವಿಯಿಂದ ಮೇಲಕ್ಕೆ ಬರಲು ಸಾಧ್ಯವಾಗದೆ ಹೊರಳಾಡುತ್ತಿತ್ತು. ರಾತ್ರಿ ವೇಳೆ ಕಾಣದೆ ಚಿರತೆ ಬಾವಿಯಲ್ಲಿ ಬಿದ್ದಿದ್ದು, ಬೆಳಗ್ಗೆ ಹೊಲದ ಮಾಲೀಕರ ಗಮನಕ್ಕೆ ಬಂದಿದೆ.

    vlcsnap 2020 04 22 07h47m24s18 e1587522130270

    ಬಳಿಕ ಮನೆಯವರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ, ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಪೋಲೀಸರು ಜಂಟಿ ಕಾರ್ಯಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಿದ್ದಾರೆ. ಸುಮಾರು ಎರಡು ವರ್ಷ ಪ್ರಾಯದ ಮರಿ ಚಿರತೆ ಇದಾಗಿದ್ದು, ಚಿರತೆಯನ್ನು ರಕ್ಷಿಸಿದ ಬಳಿಕ ಸುರಕ್ಷಿತವಾಗಿ ಪಶ್ಚಿಮಘಟ್ಟದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

  • ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್‍ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ.

    ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ರಕ್ಷಿಸಿದ್ದಾರೆ.

    nlm rescue 1

    ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಒಟ್ಟು ಒಬ್ಬರು ಪೇಂಟರ್ಸ್ ಸಂಪ್‍ಗೆ ಇಳಿದಿದ್ದರು. ಒಬ್ಬರು ಹೇಗೋ ಮೇಲಕ್ಕೆ ಬಂದಿದ್ದಾರೆ. ಆದರೆ ಓರ್ವ ಸಂಪ್‍ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. ಉಸಿರಾಟದ ತೊಂದರೆಯಿಂದ ಪೇಂಟರ್ ಅಸ್ವಸ್ಥರಾಗಿದ್ದಾರೆ. ಪೇಂಟರ್ ರಕ್ಷಣೆ ಮಾಡಲು ಇಬ್ಬರು ಸಂಪ್‍ಗೆ ಇಳಿದಿದ್ದರೂ ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಸಹ ರಕ್ಷಣೆಗಾಗಿ ಇಳಿದಿದ್ದ ಇಬ್ಬರ ಪೈಕಿ ಒಬ್ಬರು ಸಂಪ್ ನಲ್ಲಿ ಸಿಲುಕಿದ್ದರು. ಮತ್ತೊಬ್ಬರು ಮೇಲಕ್ಕೆ ಬಂದಿದ್ದರು.

    ವಿಷಯ ತಿಳಿದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ನೀರಿನ, ಸಂಪ್‍ಗೆ ಹಿಳಿದು ಇಬ್ಬರನ್ನೂ ರಕ್ಷಿಸಿದ್ದಾರೆ. ಪ್ರಾಣದ ಹಂಗು ತೊರೆದು ಕಿರಿದಾದ ನೀರಿನ ಸಂಪ್‍ಗೆ ಇಳಿದು ಇಬ್ಬರನ್ನೂ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಹೀರೋ ಹಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ರೇವಣ್ಣ, ಆಕ್ಸಿಜನ್ ಅಳವಡಿಸಿಕೊಂಡು ಧೈರ್ಯದಿಂದ ನೀರಿನ ಸಂಪ್‍ಗೆ ಇಳಿದು ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

    nlm rescue 4

    ರಕ್ಷಿಸಿದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಪ್ಲಾಸ್ಟಿಕ್ ಪೈಪ್ ಸಂಗ್ರಹಿಸಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ

    ಪ್ಲಾಸ್ಟಿಕ್ ಪೈಪ್ ಸಂಗ್ರಹಿಸಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ

    – ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಪೈಪ್‍ಗಳು ಬೆಂಕಿಗಾಹುತಿ

    ಬೆಂಗಳೂರು: ಕೊರೊನಾ ಲಾಕ್‍ಡೌನ್ ನಿಂದ ಬಾಗಿಲು ಮುಚ್ಚಿದ್ದ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇದರಿಂದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಪೈಪ್‍ಗಳು ಬೆಂಕಿಗಾಹುತಿಯಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಮಾದವರದ ನೈಸ್ ರಸ್ತೆಯ ಸಮೀಪದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಅಗ್ನಿ ಅವಘಡ ಉಂಟಾಗಿದೆ ಎನ್ನಲಾಗಿದೆ.

    ba2dee4b fd6a 4663 8755 b5f8470ece64

    ಪ್ಲಾಸ್ಟಿಕ್ ಪೈಪ್‍ಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಬೆಂಕಿ ಗಂಟೆಗಟ್ಟಲೆ ಧಗಧಗಿಸಿದೆ. ಸ್ಥಳಕ್ಕೆ ಬಂದ ಎರಡು ಅಗ್ನಿಶಾಮಕ ವಾಹನದಿಂದ ಬೆಂಕಿನಂದಿಸುವ ಕಾರ್ಯ ನಡೆದಿದೆ. ಆದರೆ ಪ್ಲಾಸ್ಟಿಕ್ ಹಾಗೂ ಬಿಸಿಲು ಹೆಚ್ಚಾಗಿದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿನಂದಿಸಲು ಹರಸಾಹಸ ಪಟ್ಟಿದ್ದರು.

    ಲಾಕ್‍ಡೌನ್ ಆದೇಶದಿಂದ ಮನೆಯಲ್ಲಿದ್ದ ಜನರು ಗೋದಾಮಿಗೆ ಬೆಂಕಿ ಬಿದ್ದಿರುವ ವಿಚಾರ ಕೇಳಿ ಕೊರೊನಾ ಆತಂಕ ಹಾಗೂ ಸಾಮಾಜಿಕ ಅಂತರವನ್ನೂ ಮರೆತು ನೂರಾರು ಜನರು ಗುಂಪುಗೂಡಿದ್ದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • 40 ಅಡಿಗೂ ಹೆಚ್ಚು ಆಳದ ಪಾಳುಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

    40 ಅಡಿಗೂ ಹೆಚ್ಚು ಆಳದ ಪಾಳುಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

    ನೆಲಮಂಗಲ: ನೀರಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದ ವ್ಯಕ್ತಿನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುನಲ್ಲಿ ಘಟನೆ ನಡೆದಿದ್ದು, ಗ್ರಾಮದ ಹೊಸ ಕಾಲೋನಿಯ ಕುಮಾರ್ ಬಾವಿಗೆ ಬಿದ್ದ ವ್ಯಕ್ತಿ. ಪೊಲೀಸ್ ಠಾಣೆಯ ಬಳಿಯಿರುವ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯ ಪುರಾತನ ದೇವಾಲಯದ ಬಾವಿ ಇದಾಗಿದೆ. ಇದು ಸುಮಾರು 40 ಅಡಿಗೂ ಹೆಚ್ಚು ಆಳವಿದ್ದು, ನೀರಿಲ್ಲದೆ ಪಾಳು ಬಿದ್ದಿದೆ.

    vlcsnap 2020 03 09 13h24m59s77

    ವ್ಯಕ್ತಿ ಭಾನುವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು, ತ್ಯಾಮಗೊಂಡ್ಲು ಗ್ರಾಮದ ಹೊಸ ಕಾಲೋನಿಯ ಕುಮಾರ್ ಅವರನ್ನು ಏಣಿ ಸಹಾಯದಿಂದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಾವಿಯ ಕಟ್ಟೆಯ ಮೇಲೆ ಕೂರಲು ಹೋದಾಗ ಜಾರಿ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.

    ಆಳದ ಬಾವಿಗೆ ಬಿದ್ದ ಕಾರಣ ರಭಸಕ್ಕೆ ಕುಮಾರ್ ಅವರ ತೋಡೆಯ ಭಾಗಕ್ಕೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಪಟ್ಟಣದ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಬಾವಿಗೆ ಕಬ್ಬಿಣದ ಮೆಷ್ ನಿರ್ಮಾಣ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.