Tag: ಅಜ್ಮೀರ್

  • ರೈಲು ಹಳಿ ಮೇಲೆ ಸಿಮೆಂಟ್ ಬ್ರಿಕ್ಸ್ – ಮತ್ತೊಂದು ದುಷ್ಕೃತ್ಯಕ್ಕೆ ಸಂಚು

    ರೈಲು ಹಳಿ ಮೇಲೆ ಸಿಮೆಂಟ್ ಬ್ರಿಕ್ಸ್ – ಮತ್ತೊಂದು ದುಷ್ಕೃತ್ಯಕ್ಕೆ ಸಂಚು

    – ರಾಜಸ್ಥಾನ ಅಜ್ಮೀರ್ ಬಳಿ ದೃಷ್ಕೃತ್ಯ

    ರಾಜಸ್ಥಾನ: ಕಾನ್ಪುರದ ಬಳಿಕ ರಾಜಸ್ಥಾನದ (Rajasthan) ಅಜ್ಮೇರ್‌ನಲ್ಲಿ (Ajmer) ಹಳಿ ಮೇಲೆ ವಸ್ತುಗಳನ್ನು ಇರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಘಟನೆ ಬೆಳಕಿಗೆ ಬಂದಿದೆ.

    ಅಜ್ಮೀರ್‌ನಿಂದ ಅಹಮದಾಬಾದ್‌ಗೆ (Ahmedabad) ಹೋಗುವ ಮಾರ್ಗ ಮಧ್ಯೆ ಹಳಿಯ ಎರಡು ಬದಿಗಳಲ್ಲಿ ಸಿಮೆಂಟ್ ಇಟ್ಟಿಗೆ ಇರಿಸಲಾಗಿತ್ತು. ಸಿಮೆಂಟ್ ಇಟ್ಟಿಗೆಗೆ ಡಿಕ್ಕಿ ಹೊಡೆದರೂ ಗೂಡ್ಸ್ ರೈಲಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಬಳಿಕ ರೈಲ್ವೆ ಚಾಲಕರು ದೂರು ನೀಡಿದ್ದಾರೆ. ಇದನ್ನೂ ಓದಿ: ಹಳಿ ಮೇಲಿದ್ದ ಸಿಲಿಂಡರ್‌ಗೆ ಗುದ್ದಿದ ರೈಲು – ಕಾನ್ಪುರದಲ್ಲಿ ರೈಲು ದುರಂತಕ್ಕೆ ಸಂಚು!

    ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ (Gujarat) ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೇಲೂರು ಬಿಕ್ಕೋಡಿನಲ್ಲಿ ಜಲಕ್ರೀಡೆಯಾಡಿದ 20ಕ್ಕೂ ಹೆಚ್ಚು ಕಾಡಾನೆಗಳು

    ತಪಾಸಣೆ ನಡೆಸಿದಾಗ, ರೈಲನ್ನು ಹಳಿತಪ್ಪಿಸುವ ಪ್ರಯತ್ನದಲ್ಲಿ 100 ಕಿಲೋಗ್ರಾಂಗಳಷ್ಟು ತೂಕದ ದೊಡ್ಡ ಕಾಂಕ್ರೀಟ್ ಇಟ್ಟಿಗೆ ಇಡಲಾಗಿತ್ತು. ಈ ಸಂಬಂಧ ಮಾಂಗಲ್ಯವಾಸ್ ಠಾಣೆಯಲ್ಲಿ ಆರ್‌ಪಿಎಫ್ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

    ಭಾನುವಾರವಷ್ಟೇ ಕಾನ್ಪುರದಲ್ಲಿ (Kanpur) ಕಾಳಿಂದಿ ಎಕ್ಸ್ಪ್ರೆಸ್ ರೈಲನ್ನು ಹಳಿ ತಪ್ಪಿಸಲು ಹಳಿ ಮೇಲೆ ಎಲ್‌ಪಿಜಿ ಸಿಲಿಂಡರ್ ಇರಿಸಿದ್ದು, ರೈಲು ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ಭಾರೀ ಅನಾಹುತ ತಪ್ಪಿದೆ. ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ (ಆರ್‌ಪಿಎಫ್) ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ರೈಲು ಅಪಘಾತವನ್ನು ತಪ್ಪಿಸಲಾಯಿತು. ಇದನ್ನೂ ಓದಿ: ಕಾರ್ಕಳ ರೇಪ್‌ ಕೇಸ್ ತನಿಖೆ ಚುರುಕು – ಮಾದಕ ವಸ್ತುಗಳ ಜಾಲದ ಬೆನ್ನು ಬಿದ್ದ ಖಾಕಿ

  • ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಮಾವ

    ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಮಾವ

    ಜೈಪುರ: ಜಮೀನಿನಲ್ಲಿ ಮಣ್ಣು ತೆಗೆಯುವುದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಘಟನೆ ರಾಜಸ್ಥಾನದ (Rajasthan) ಅಜ್ಮೀರ್ (Ajmer) ಜಲ್ಲೆಯ ಬೇವಾರ್‌ನಲ್ಲಿ ನಡೆದಿದೆ.

    JAIPUR SHOT

    ಆರೋಪಿಯನ್ನು ಭ್ಗಾಗ ಎಂದು ಗುರುತಿಸಲಾಗಿದೆ. ಆರೋಪಿಯ ಸೋದರಳಿಯ ಹಮೀದ್‍ನ ಜಮೀನಿನಲ್ಲಿ ಮಣ್ಣು ತೆಗೆಯುತ್ತಿದ್ದ. ಇದನ್ನು ಪ್ರಶ್ನಿಸಿದ ಸೋದರಳಿಯನ ಮೇಲೆ ಆರೋಪಿ ತನ್ನ ಬಳಿ ಇದ್ದ ಡಬಲ್ ಬ್ಯಾರೆಲ್ ರೈಫಲ್‍ನಿಂದ (Double Barrel Rifle) ಗುಂಡು ಹಾರಿಸಿದ್ದಾನೆ. ತಕ್ಷಣವೇ ಗಾಯಗೊಂಡಿದ್ದ ಹಮೀದ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದಿಶಾ ಪಟಾನಿ ಜಿಪ್ ಲೆಸ್ ಪ್ಯಾಂಟ್ : ನೆಟ್ಟಿಗರಿಂದ ನಟಿಗೆ ಮಂಗಳಾರತಿ ಗುಂಡು ಹಾರಿಸುವ ದೃಶ್ಯವನ್ನು ಸಂತ್ರಸ್ತನೇ ಸೆರೆಹಿಡಿದಿದ್ದು, ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಓಟಿಪಿ ಬರದೇ ವೋಟಿಲ್ಲ- ಮೊಬೈಲ್ ಟವರ್‌ಗೆ ಆಗ್ರಹಿಸಿ ಗ್ರಾಮಸ್ಥರಿಂದ ವಿನೂತನ ಅಭಿಯಾನ

  • ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್

    ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್

    ಜೈಪುರ: ಸಹಜವಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಥವಾ ಜೈಲಿನಲ್ಲಿರುವ ಕೈದಿಗಳಿಗೆ ತುರ್ತು ಅಥವಾ ಅನಿವಾರ್ಯ ಕಾರಣಗಳಿಗೆ ಪೆರೋಲ್ ನೀಡಲಾಗುತ್ತದೆ. ಆದರೆ, ಇಲ್ಲೊಬ್ಬ ಕೈದಿಗೆ ಹೆಂಡತಿಯನ್ನು ಗರ್ಭಿಣಿ ಮಾಡಲು ರಾಜಸ್ಥಾನ್ ಹೈಕೋರ್ಟ್ 15 ದಿನ ಪೆರೋಲ್ ಮಂಜೂರು ಮಾಡಿದೆ.

    pregnent woman

    ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ಫರ್ಜಂದ್ ಅಲಿ ಅವರ ದ್ವಿಸದಸ್ಯ ಪೀಠವು ಅಜ್ಮೀರ್ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 34 ವರ್ಷದ ನಂದ್‌ಲಾಲ್ (ಕೈದಿ) ಅವರ ಪತ್ನಿ ರೇಖಾ ಅವರ ಸಂತಾನದ ಹಕ್ಕು ಆಧಾರದ ಮೇಲೆ ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. ಇದನ್ನೂ ಓದಿ: ಚಾಮರಾಜನಗರದ ಲಿಪ್‌ಲಾಕ್ ಪ್ರೇಮಿಗಳಿಗೆ ಶಾಕ್ ಕೊಟ್ಟ ಪೊಲೀಸರು 

    ಇದಕ್ಕಾಗಿ 50 ಸಾವಿರ ರೂ.ಗಳ ವೈಯಕ್ತಿಕ ಜಾಮೀನು ಬಾಂಡ್ ಹಾಗೂ ತಲಾ 25,000ಕ್ಕೆ ಎರಡು ಜಾಮೀನು ಬಾಂಡ್‌ಗಳನ್ನು ಪೆರೋಲ್‌ಗೆ ನೀಡಿದ್ದು, ಏಪ್ರಿಲ್ 20ರಿಂದ 15 ದಿನಗಳವರೆಗೆ ಕೈದಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: 13 ವರ್ಷದ ಬಾಲಕಿ ಮೇಲೆ 80 ಮಂದಿ 8 ತಿಂಗಳಿಂದ ಅತ್ಯಾಚಾರ

    court order law

    ಅಪರಾಧಿಯ ಜೈಲುವಾಸ ಆತನ ಹೆಂಡತಿಯ ಲೈಂಗಿಕ ಅಪೇಕ್ಷೆಗಳು ಮತ್ತು ಭಾವನಾತ್ಮಕ ಅಗತ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಋಗ್ವೇದ ಸೇರಿದಂತೆ ಹಿಂದೂ ಧರ್ಮಗ್ರಂಥಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಕೈದಿಗಳಿಗೆ 15 ದಿನಗಳ ಪೆರೋಲ್ ನೀಡಲು ಅವರು ಜುದಾಯಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮದ ಸಿದ್ಧಾಂತಗಳನ್ನು ಪರಿಗಣಿಸಲಾಗಿದೆ. 16 ಸಂಸ್ಕಾರಗಳಲ್ಲಿ ಮಗುವನ್ನು ಗರ್ಭಧರಿಸುವುದು ಮಹಿಳೆಯ ಮೊದಲ ಮತ್ತು ಅಗತ್ಯ ಹಕ್ಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿ ಕೈದಿಗೆ ಪೆರೋಲ್ ನೀಡಿದೆ.

  • ನಮಗೆ ರಾಜಸ್ಥಾನದಲ್ಲಿ ಗಂಟಲು ದ್ರವದ ಪರೀಕ್ಷೆ ಮಾಡಿಲ್ಲ: ಅಜ್ಮೀರ್ ಯಾತ್ರಿ

    ನಮಗೆ ರಾಜಸ್ಥಾನದಲ್ಲಿ ಗಂಟಲು ದ್ರವದ ಪರೀಕ್ಷೆ ಮಾಡಿಲ್ಲ: ಅಜ್ಮೀರ್ ಯಾತ್ರಿ

    ಬೆಂಗಳೂರು: ನಮಗೆ ಗಂಟಲು ದ್ರವದ ಪರೀಕ್ಷೆಯನ್ನು ರಾಜಸ್ಥಾನ ಸರ್ಕಾರ ಮಾಡಿಲ್ಲ ಎಂದು ಅಜ್ಮೀರ್ ದರ್ಗಾಕ್ಕೆ ಹೋಗಿದ್ದ ಯಾತ್ರಿ ದಾವಲ್ ಅವರು ಹೇಳಿದ್ದಾರೆ.

    ರಾಜಸ್ಥಾನದ ಅಜ್ಮೀರ್‍ನಲ್ಲಿರುವ ದರ್ಗಾಕ್ಕೆ ಹೋಗಿ ರಾಜ್ಯಕ್ಕೆ ವಾಪಸ್ ಅದ ಸುಮಾರು 38 ಜನರ ಪೈಕಿ 31 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ಈ ಯಾತ್ರಿಗಳ ಗಂಟಲು ದ್ರವನ್ನು ಪರೀಕ್ಷೆ ಮಾಡದೇ ಕೇವಲ ಬ್ಲಡ್ ಟೆಸ್ಟ್ ಮಾಡಿ ರಾಜಸ್ಥಾನ ಸರ್ಕಾರ ನೆಗೆಟಿವ್ ಎಂದು ರೀಪೋರ್ಟ್ ನೀಡಿರುವ ಭಯಾನಕ ವಿಚಾರ ತಿಳಿದು ಬಂದಿದೆ.

    smg corona

    ಈ ವಿಚಾರವಾಗಿ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ದಾವಲ್ ಅವರು, ನಾವು 38 ಮಂದಿ ಒಟ್ಟಿಗೆ ಮಾರ್ಚ್ 19 ರಂದು ಅಜ್ಮೀರ್ ಗೆ ಹೋಗಿದ್ದೇವು. ಜೊತೆಗೆ ನಾವು ಮಾರ್ಚ್ 22ರಂದು ವಾಪಸ್ ಬರಬೇಕಿತ್ತು. ಆದರೆ ಲಾಕ್‍ಡೌನ್ ಆದ ಕಾರಣ ಅಲ್ಲೇ ಸಿಕ್ಕಿ ಹಾಕಿಕೊಂಡಿವೆ. ಆ ದರ್ಗಾಗೆ ವಿವಿಧ ರಾಜ್ಯದ ಸುಮಾರು 4 ಸಾವಿರ ಮಂದಿ ಬಂದಿದ್ದರು. ನಮ್ಮ ರಾಜ್ಯದಿಂದಲೂ ಸುಮಾರು 400 ರಿಂದ 500 ಜನ ಹೋಗಿದ್ದೇವು ಎಂದು ಹೇಳಿದ್ದಾರೆ.

    coronavirus alert

    ಲಾಕ್‍ಡೌನ್ ಆದ ನಂತರ ನಾವು ಅಲ್ಲೇ ಉಳಿದಿದ್ದೇವು. ರಾಜಸ್ಥಾನದಲ್ಲಿ ಆ ಜಿಲ್ಲೆಯ ಜಿಲ್ಲಾಧಿಕಾರಿಗಳು ನಮ್ಮನ್ನು ಪರೀಕ್ಷೆ ಮಾಡಿದರು. ಥರ್ಮಲ್ ಟೆಸ್ಟ್ ಮತ್ತು ಬ್ಲಡ್ ಪರೀಕ್ಷೆ ಮಾಡಿದರು. ಗಂಟಲು ದ್ರವದ ಪರೀಕ್ಷೆ ಮಾಡಲಿಲ್ಲ. ನಂತರ ನಮಗೆ ವರದಿ ನೀಡಿದ್ದು, ನಮ್ಮೆಲ್ಲರ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ ನಾವು ನಮ್ಮ ಸ್ವಂತ ಹಣದಿಂದ ಬಸ್ಸನ್ನು ಮಾಡಿಕೊಂಡು ರಾಜ್ಯಕ್ಕೆ ವಾಪಸ್ ಬಂದಿದ್ದೇವೆ ಎಂದು ದಾವಲ್ ತಿಳಿಸಿದ್ದಾರೆ.

    CORONA 11

    ನಾವು ರಾಜಸ್ಥಾನದಿಂದ ಬರುವಾಗ ಮಧ್ಯೆ ಎಲ್ಲಿಯೂ ಕೆಳಗೆ ಇಳಿದಿಲ್ಲ. ನೇರವಾಗಿ ರಾಜ್ಯಕ್ಕೆ ಬಂದಿದ್ದೇವೆ. ಅಲ್ಲಿಂದ ನಮ್ಮನ್ನು ಕ್ವಾರಂಟೈನ್ ಮಾಡಲಾಗಿದೆ. ಆದರೆ ಈ ನಡುವೆ ನಮಗೆ ಕೊರೊನಾ ಹೇಗೆ ಬಂತು ಎಂದು ಗೊತ್ತಿಲ್ಲ. ಕರ್ನಾಟಕಕ್ಕೆ ಬಂದ ನಂತರ ನಮ್ಮ ಗಂಟಲು ದ್ರವವನ್ನು ಪರೀಕ್ಷೆ ಮಾಡಲಾಯಿತು. ಆದರೆ ರಾಜಸ್ಥಾನದಲ್ಲಿ ಮಾಡಿರಲಿಲ್ಲ. ಈ ಕಾರಣದಿಂದ ಬಂದಿರಬಹುದು ಎಂದು ದಾವಲ್ ಒಪ್ಪಿಕೊಂಡಿದ್ದಾರೆ.

  • ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ, ಫೋಟೋ ತೆಗೆದರೆ ಎಫ್‍ಐಆರ್

    ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ, ಫೋಟೋ ತೆಗೆದರೆ ಎಫ್‍ಐಆರ್

    ಜೈಪುರ: ನಿರ್ಗತಿಕರಿಗೆ ಆಹಾರ ನೀಡುವಾಗ ಸೆಲ್ಫಿ ತೆಗೆಯುವುದು ವಿಡಿಯೋ ಮಾಡುವುದು ಮಾಡಿದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಂಡು ಎಫ್‍ಐಆರ್ ದಾಖಲಿಸಲಾಗುವುದು ಎಂದು ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಕೊರೊನಾ ವೈರಸ್ ಭೀತಿಗೆ ದೇಶ ಲಾಕ್‍ಡೌನ್ ಆಗಿ 15ಕ್ಕೂ ಹೆಚ್ಚಿನ ದಿನಗಳಾಗಿವೆ. ಈ ನಡುವೆ ಕೆಲವರಿಗೆ ಊಟ ನೀರು ಸಿಗದೆ ಪರಾದಾಡುತ್ತಿದ್ದಾರೆ. ಈ ರೀತಿಯ ನಿರ್ಗತಿಕರಿಗೆ ಕೆಲವರು ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಬಾರದು ಎಂದು ಅಜ್ಮೀರ್ ಜಿಲ್ಲೆಯ ಡಿಸಿ ವಿಶ್ವ ಮೋಹನ್ ಶರ್ಮಾ ಆದೇಶ ಮಾಡಿದ್ದಾರೆ.

    distributing food

    ಈ ವಿಚಾರವಾಗಿ ಮಾತನಾಡಿರುವ ಡಿಸಿ ವಿಶ್ವ ಮೋಹನ್ ಶರ್ಮಾ, ಲಾಕ್‍ಡೌನ್ ಸಮಯದಲ್ಲಿ ನಿರ್ಗತಿಕರಿಗೆ ಬಡವರಿಗೆ ಆಹಾರ ನೀಡುವುದು ಒಳ್ಳೆಯ ಕೆಲಸ. ದೇಶ ಈ ರೀತಿಯ ಸಂಕಷ್ಟಕ್ಕೆ ಸಿಲುಕಿದ ಪರಿಸ್ಥಿತಿಯಲ್ಲಿ ಸಹಾಯ ಮಾಡುವ ಜನರಿಗೆ ನಾವು ಪ್ರೋತ್ಸಾಹ ನೀಡುತ್ತೇವೆ. ಆದರೆ ಇದನ್ನೇ ಮುಂದೆ ಇಟ್ಟುಕೊಂಡು ಬಡವರಿಗೆ ಸಹಾಯ ಮಾಡಿ ಅದರ ಫೋಟೋ ತಗೆದುಕೊಳ್ಳುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

    corona lockdown 660 300320123756

    ಊಟವಿಲ್ಲದವರಿಗೆ ಆಹಾರ ನೀಡಿ ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಬಾರದು. ಇದರಿಂದ ಅವರಿಗೇ ಅವಮಾನ ಮಾಡಿದ ರೀತಿಯಲ್ಲಿ ಆಗುತ್ತದೆ. ಆದ್ದರಿಂದ ಈ ರೀತಿಯ ಪ್ರಕರಣಗಳು ನಮ್ಮ ಜಿಲ್ಲೆಯಲ್ಲಿ ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳಲಾಗುವುದು ಜೊತೆಗೆ ಎಫ್‍ಐಆರ್ ಕೂಡ ಹಾಕಲಾಗುವುದು ಎಂದು ಡಿಸಿ ವಾರ್ನಿಂಗ್ ನೀಡಿದ್ದಾರೆ.

    selfie 2

    ಕಳೆದ 16 ದಿನಗಳಿಂದ ದೇಶದಲ್ಲಿ ಹಲವಾರು ಜನರು ಸಂಸ್ಥೆಗಳು ಸೆಲೆಬ್ರಿಟಿಗಳು ಹಸಿದವರಿಗೆ ಆಹಾರ ನೀಡುವ ಕೆಲಸ ಮಾಡುತ್ತಿವೆ. ಆದರೆ ಇದರ ಜೊತೆ ಕೆಲ ಜನರು ಮಾಡಿರುವ ಸಹಾಯವನ್ನು ಫೋಟೋದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅಜ್ಮೀರ್ ಜಿಲ್ಲೆಯಲ್ಲಿ ಆಹಾರವಿಲ್ಲದವರಿಗೆ ಎರಡು ಬಾಳೆಹಣ್ಣು ನೀಡಿ ಫೋಟೋ ತೆಗದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಕಾರಣದಿಂದ ಡಿಸಿ ಈ ಆದೇಶ ಹೊರಡಿಸಿದ್ದಾರೆ.

  • ಬೆಳಗಾವಿಯಿಂದ ಇಂದೋರ್, ಅಜ್ಮೀರ್‌ಗೆ ಮತ್ತೊಂದು ವಿಮಾನ ಹಾರಾಟ

    ಬೆಳಗಾವಿಯಿಂದ ಇಂದೋರ್, ಅಜ್ಮೀರ್‌ಗೆ ಮತ್ತೊಂದು ವಿಮಾನ ಹಾರಾಟ

    ಬೆಳಗಾವಿ: ರಾಷ್ಟ್ರೀಯ ವಿಮಾನ ಹಾರಾಟಗಳಲ್ಲಿ ಒಂದಾದ ಸ್ಟಾರ್ ಏರ್ ಬೆಳಗಾವಿ, ಇಂದೋರ್‍ನಿಂದ ಅಜ್ಮೀರ್ ಕಿಶನ್‍ಘಡಿಗೆ ಅಧಿಕೃತವಾಗಿ ಸೋಮವಾರ ತನ್ನ ಹಾರಾಟವನ್ನು ಪ್ರಾರಂಭಿಸಿದೆ.

    ಸೋಮವಾರ, ಮಂಗಳವಾರ ಮತ್ತು ಗುರುವಾರ ಎರಡೂ ಕಡೆಯಿಂದ ಹಾರಾಟ ನಡೆಯಲಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಇಂದೋರ್‍ಗೆ ಮತ್ತು ನಂತರ ಕಿಶನ್‍ಘಡಿಗೆ ಹಾರಾಟ ನಡೆಸುತ್ತದೆ. ಸೋಮವಾರ ಈ ಮಾರ್ಗದಿಂದ ಚಾಲನೆ ನೀಡಲಾಗಿದೆ.

    ಬೆಳಗಾವಿ ಪ್ರಯಾಣಿಕರು ಕಿಶನ್‍ಗಡಿ ಮದ್ಯದಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಉಡಾನ್ 3ರ ಅಡಿಯಲ್ಲಿ ಸ್ಟಾರ್ ಏರ್‍ಗೆ ನೀಡಲಾಗಿರುವ ಯೋಜನೆಯಿಂದ ಬೆಳಗಾವಿಯಿಂದ ಅದೆಷ್ಟೂ ಪ್ರಯಾಣಿಕರು ರಾಜಸ್ಥಾನ ಪ್ರವಾಸ ಕೈಗೊಳ್ಳ ಅನುಕೂಲವಾಗಿದೆ. ಬೆಳಗಾವಿಯಿಂದ 1550 ಕಿಲೋಮೀಟರ್ ಅಂತರವಿರುವ ಕಿಶನ್‍ಘಡಿಗೆ ವೇಗವಾಗಿ ಸಂಚರಿಸಲು ನೇರ ವಿಮಾನ ಸೇವೆ ಲಭ್ಯವಿರಲಿಲ್ಲ. ಇದರಿಂದ ತುಂಬಾ ಅನುಕೂಲವಾಗಿದೆ ಪ್ರಯಾಣಿಕರ ಮನದಾಳ ಮಾತಾಗಿದೆ.

    ಇಂದೋರ್ ಮತ್ತು ಕಿಶನ್‍ಘಡ ನಡುವಿನ ಸಂಚಾರ 550 ಕಿಲೋಮೀಟರ್ ಮತ್ತು ಜನರು ಇಂದೋರ್‍ನಿಂದ ರಸ್ತೆ ಮೂಲಕ ಕಿಶನ್‍ಘಡ ತಲುಪಲು 10 ಗಂಟೆಗಳಿಗಿಂತ ಹೆಚ್ಚು ಸಮಯಕ್ಕೆ ಸದ್ಯ ವಿಮಾನಯಾನ ಹಾರಾಟ ಮೂಲಕ ಮುಕ್ತಿ ಸಿಕ್ಕಂತಾಗಿದೆ.

    ಈಗಾಗಲೇ ಬೆಳಗಾವಿಯಿಂದ ಇಂದೋರ್‍ಗೆ ನೇರ ವಿಮಾನ ಹಾರಾಟವಿದೆ ಮತ್ತೊಂದು ಮಾರ್ಗವಾಗಿ ರಾಜಸ್ಥಾನದವರೆಗೆ ‘ದಿ ಲ್ಯಾಂಡ್ ಆಫ್ ಕಲರ್ಸ್’ ವರೆಗೆ ವಿಸ್ತರಿಸಲಿದೆ ಎನ್ನಲಾಗಿದೆ.