Tag: ಅತ್ಯಾಚಾರ

  • ಆಶ್ರಮದಲ್ಲಿ ತಂಗಿದ್ದ ಯುಎಸ್ ಮಹಿಳೆ ಮೇಲೆ ಗ್ಯಾಂಗ್‌ರೇಪ್- ಇಬ್ಬರ ಬಂಧನ

    ಆಶ್ರಮದಲ್ಲಿ ತಂಗಿದ್ದ ಯುಎಸ್ ಮಹಿಳೆ ಮೇಲೆ ಗ್ಯಾಂಗ್‌ರೇಪ್- ಇಬ್ಬರ ಬಂಧನ

    ತಿರುವನಂತಪುರ: ಇತ್ತೀಚೆಗೆ ಅಮೆರಿಕಾದಿಂದ (America) ಭಾರತಕ್ಕೆ ಆಗಮಿಸಿ ಕೇರಳದ (Kerala) ಆಶ್ರಮವೊಂದರಲ್ಲಿ (Ashram) ತಂಗಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ದುಷ್ಕೃತ್ಯ ನಡೆಸಿದ ಇಬ್ಬರು ಆರೋಪಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 376 (2) (ಎನ್) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹರಿಯಾಣದಲ್ಲಿ ಕೋಮು ಸಂಘರ್ಷ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, 70 ಮಂದಿಗೆ ಗಾಯ, ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ

    CRIME

    ಜುಲೈ 31ರಂದು ಘಟನೆ ನಡೆದಿದ್ದು, 44 ವರ್ಷದ ಯುಎಸ್ ಮಹಿಳೆ ಕಡಲ ತೀರದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದ ಸಂದರ್ಭ ಆರೋಪಿಗಳು ಈ ದುಷ್ಕೃತ್ಯ ನಡೆಸಿದ್ದಾರೆ. ಮೊದಲಿಗೆ ಆರೋಪಿಗಳು ಸಿಗರೇಟ್ ಹಂಚಿಕೊಳ್ಳುವ ನೆಪದಲ್ಲಿ ಮಹಿಳೆಯ ಬಳಿ ಬಂದಿದ್ದಾರೆ. ಆಕೆ ಸಿಗರೇಟ್ ನಿರಾಕರಿಸಿದ ಸಂದರ್ಭ ಆಕೆಗೆ ಮದ್ಯ (Alcohol) ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೊಬೈಲ್ ಚಾರ್ಜರ್ ಪಿನ್‌ಗೆ ಬಾಯಿ ಹಾಕಿ 8 ತಿಂಗಳ ಕಂದಮ್ಮ ಸಾವು

    ಮದ್ಯ ಸೇವಿಸಿದ ಬಳಿಕ ಮಹಿಳೆಗೆ ನಶೆ ಏರಿದ್ದು, ಈ ವೇಳೆ ಆರೋಪಿಗಳು ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗಿ ಸಮೀಪದ ಖಾಲಿ ಮನೆಯಲ್ಲಿ ಪದೇ ಪದೇ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು – 9 ಕ್ಕೇರಿದ ಸಾವಿನ ಸಂಖ್ಯೆ

    ಆಗಸ್ಟ್ 1ರಂದು ರಾತ್ರಿ ಸಂತ್ರಸ್ತೆ ದೂರನ್ನು ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಆಗಸ್ಟ್ 22ರಂದು ಕೇರಳಕ್ಕೆ ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Odisha Train Accident – 2 ತಿಂಗಳಾದರೂ ಪತ್ತೆಯಾಗದ 29 ಶವಗಳ ಗುರುತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೀದರ್‌ನಲ್ಲಿ ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ

    ಬೀದರ್‌ನಲ್ಲಿ ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ

    ಬೀದರ್‌: ತಂದೆಯಿಂದಲೇ 12 ವರ್ಷ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ಬೀದರ್‌ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.

    ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ ಮೇಲೆ ವ್ಯಕ್ತಿ ತನ್ನ ಮಗಳ ಮೇಲೆಯೇ ಅತ್ಯಾಚಾರ‌ ಮಾಡುತ್ತಿದ್ದ‌. ಸತತ ಒಂದು ವರ್ಷಗಳಿಂದ‌‌‌ ನಿರಂತರ ಅತ್ಯಾಚಾರ ಮಾಡುತ್ತಿದ್ದ. ಈ ವಿಚಾರ ಯಾರಿಗಾದರು ಹೇಳಿದರೆ ಕೊಲ್ಲುವುದಾಗಿ ಮಗಳಿಗೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

    Stop Rape Crime

    ಬಾಲಕಿಯ ಅಜ್ಜಿ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಜೈಲಿಗಟ್ಟಿದ್ದಾರೆ.

    ಈ ಸಂಬಂಧ ಬಸವಕಲ್ಯಾಣ ನಗರ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಮಹಿಳೆಯ ಅತ್ಯಾಚಾರ

    ಸಾಲ ವಾಪಸ್ ಕೊಟ್ಟಿಲ್ಲ ಅಂತ ಪತಿಯೆದುರೇ ಮಹಿಳೆಯ ಅತ್ಯಾಚಾರ

    ಮುಂಬೈ: ಸಾಲ (Loan) ತೆಗೆದುಕೊಂಡು ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಪತಿಯೆದುರೇ ಮಹಿಳೆಯ ಮೇಲೆ ಅತ್ಯಾಚಾರ (Rape) ಎಸಗಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

    ಘಟನೆ ಈ ವರ್ಷ ಫೆಬ್ರವರಿಯಲ್ಲಿ ನಡೆದಿದೆ. ಆದರೆ ಈಗ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ವ್ಯಕ್ತಿಯೊಬ್ಬ 40,000 ರೂ. ಸಾಲ ಪಡೆದಿದ್ದು, ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಸಾಲ ನೀಡಿದಾತ ಆತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

    RApe 1

    ಆರೋಪಿ ಮಹಿಳೆಯ ಪತಿಗೆ ಚಾಕು ತೋರಿಸಿ, ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯದ ವೀಡಿಯೋವನ್ನು ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

    ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಅವಘಡ – ಕೊಟ್ಟಿಗೆಯಲ್ಲಿದ್ದ 7 ಹಸುಗಳು ಸಜೀವ ದಹನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವಕ ಸೇರಿ ಇಬ್ಬರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

    ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವಕ ಸೇರಿ ಇಬ್ಬರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

    – ಮತ್ತು ಬರುವ ಆಹಾರ ನೀಡಿ ಕೃತ್ಯ
    – ವೀಡಿಯೋ ಮಾಡಿ ಬೆದರಿಕೆ

    ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ (Rape) ಎಸಗಿರುವ ಘಟನೆ ದೆಹಲಿಯ (Delhi) ಸೆಕ್ಟರ್ 50 (Sector 50) ಪ್ರದೇಶದಲ್ಲಿ ನಡೆದಿದೆ.

    ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್‌ಗೆ ಬರುವಂತೆ ಹೇಳಿದ್ದ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಗಿ ತಿಳಿಸಿದ್ದಾಳೆ.

    mobile video

    ತನ್ನ ಪ್ರಜ್ಞಾಹೀನ ಸ್ಥಿತಿಯ ಲಾಭ ಪಡೆದು ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ತನಗೆ ಪ್ರಜ್ಞೆ ಬಂದ ಬಳಿಕ ನಡೆದ ಘಟನೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ ಆರೋಪಿಗಳು ತನ್ನ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾಳೆ. ಇದನ್ನೂ ಓದಿ: ಕೌಟುಂಬಿಕ ಕಲಹ ಸರಿ ಮಾಡ್ತೀನಿ ಅಂತ ಬಂದ ಜ್ಯೋತಿಷಿ – ಚಿನ್ನ, ಹಣ ದೋಚಿ ಬೀರುವಿನಲ್ಲಿ ನಿಂಬೆಹಣ್ಣು ಇಟ್ಟು ಹೋದ

    ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಬಗ್ಗೆ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕದ್ದು ತಂದಿದ್ದ ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2021ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳ – NWC

    2021ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳ – NWC

    ನವದೆಹಲಿ: 2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ (Women) ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ (NWC) ವರದಿ ನೀಡಿದೆ. ಮಣಿಪುರ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಬಳಿಕ ದೇಶದ್ಯಾಂತ ಮಹಿಳೆಯರ ಸುರಕ್ಷತೆ ಬಗ್ಗೆ ಚರ್ಚೆ ಶುರುವಾಗಿರುವ ಹೊತ್ತಲ್ಲೇ ಬಿಡುಗಡೆಯಾಗಿರುವ ಈ ಅಂಕಿ ಅಂಶಗಳು ದೊಡ್ಡ ಆಘಾತ ಮೂಡಿಸಿದೆ.

    2021 ರಲ್ಲಿ ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗದಲ್ಲಿ 23,700 ಪ್ರಕರಣಗಳು ದಾಖಲಾಗಿದ್ದವು, 2022 ರಲ್ಲಿ ಇದು 30,957ಕ್ಕೆ ಏರಿಕೆಯಾಗಿದೆ. 2014ರಲ್ಲಿ 33,906 ಪ್ರಕರಣಗಳು ದಾಖಲಾಗಿರುವುದು ಈವರೆಗೂ ಅತಿ ಹೆಚ್ಚಿನ ಸಂಖ್ಯೆಯಾಗಿದೆ ಎಂದು ಆಯೋಗ ಬಿಡುಗಡೆ ಮಾಡಿರುವ ಮಾಹಿತಿ ಹೇಳಿದೆ.

    stop rape

    2022 ರಲ್ಲಿ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ಒಟ್ಟು ಪ್ರಕರಣಗಳ ಪೈಕಿ 54.5% ರಷ್ಟು (16,872) ಪ್ರಕರಣಗಳು ಉತ್ತರ ಪ್ರದೇಶದಿಂದ ದಾಖಲಾಗಿದೆ. ದೆಹಲಿಯಿಂದ 3,004 (10%), ಮಹಾರಾಷ್ಟ್ರದಿಂದ 1,381 (5%), ಬಿಹಾರದಿಂದ 1,368 (4.4%), ಹರಿಯಾಣದಲ್ಲಿ 1,362 (4.4%), ರಾಜಸ್ಥಾನ 1,030 (3.3%), ತಮಿಳುನಾಡು 668 (2.2%), ಪಶ್ಚಿಮ ಬಂಗಾಳ 621 (2%), ಕರ್ನಾಟಕದಿಂದ 554 (1.8%) ಮತ್ತು ಉಳಿದ ರಾಜ್ಯಗಳು 2,955 (9.5%) ಪ್ರಕರಣಗಳು ದಾಖಲಾಗಿವೆ.

    ಈ ದೂರುಗಳಲ್ಲಿ ಹೆಚ್ಚಿನವು ಭಾವನಾತ್ಮಕ ನಿಂದನೆ ಮತ್ತು ಕೌಟುಂಬಿಕ ಹಿಂಸಾಚಾರದ ಹಿನ್ನೆಲೆಯದಾಗಿದೆ. ಘನತೆಯಿಂದ ಬದುಕುವ ಹಕ್ಕು (ಭಾವನಾತ್ಮಕ ನಿಂದನೆ) ವಿಭಾಗದಲ್ಲಿ ಒಟ್ಟು 9,710 ದೂರುಗಳು, 6,970 ದೂರುಗಳು ಮಹಿಳೆಯರ ರಕ್ಷಣೆ, ಕೌಟುಂಬಿಕ ದೌರ್ಜನ್ಯದ ವಿರುದ್ಧ ಮತ್ತು 4,600 ದೂರುಗಳು ವಿವಾಹಿತ ಮಹಿಳೆಯರ ಕಿರುಕುಳ/ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ದಾಖಲಾಗಿವೆ. ಉತ್ತರ ಪ್ರದೇಶದ ಹೆಚ್ಚಿನ ದೂರುಗಳು ಕೌಟುಂಬಿಕ ಹಿಂಸಾಚಾರ ಮತ್ತು ಭಾವನಾತ್ಮಕ ನಿಂದನೆಯ ಹಿನ್ನಲೆಯದಾಗಿವೆ ಎಂದು ಆಯೋಗದ ಅಂಕಿ ಅಂಶಗಳು ಹೇಳಿದೆ.

    STOP RAPE CRIME 2

    2,500 ಕ್ಕೂ ಹೆಚ್ಚಿನ ದೂರುಗಳನ್ನು ‘ಮಹಿಳೆ ಅಥವಾ ಕಿರುಕುಳದ ದೌರ್ಜನ್ಯ’ ವಿಭಾಗದ ಅಡಿಯಲ್ಲಿ ದಾಖಲಿಸಿದೆ. 1,701 ದೂರುಗಳು ‘ಅತ್ಯಾಚಾರ/ಅತ್ಯಾಚಾರದ ಪ್ರಯತ್ನ’ ಅಡಿಯಲ್ಲಿ, 1,623 ದೂರುಗಳು ‘ಮಹಿಳೆಯರ ಪ್ರಕರಣದಲ್ಲಿ ಪೊಲೀಸ್ ನಿರಾಸಕ್ತಿ’ ಅಡಿಯಲ್ಲಿ ಮತ್ತು 924 ದೂರುಗಳು ‘ಸೈಬರ್ ಅಪರಾಧಗಳ’ ಅಡಿಯಲ್ಲಿ ದಾಖಲಾಗಿವೆ. ಇದನ್ನೂ ಓದಿ: ಸಾಂವಿಧಾನಿಕ ಜವಾಬ್ದಾರಿ, ಹೊಣೆಗಾರಿಕೆಯಿಂದ ಮೋದಿ ಸರ್ಕಾರ ಓಡಿ ಹೋಗುವಂತಿಲ್ಲ: ಖರ್ಗೆ ಟೀಕೆ

    ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, 2022 ರಲ್ಲಿ ‘ವಿವಾಹಿತ ಮಹಿಳೆಯರಿಗೆ ಕಿರುಕುಳ/ವರದಕ್ಷಿಣೆ ಕಿರುಕುಳ’ ಅಡಿಯಲ್ಲಿ 357 ದೂರುಗಳ ಡೇಟಾವನ್ನು ಪ್ರಸ್ತುತಪಡಿಸಿದರು. 2021 ರಲ್ಲಿ 341 ಮತ್ತು 2020 ರಲ್ಲಿ 330 ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದರು. 2022 ರಲ್ಲಿ 1,710, 2021 ರಲ್ಲಿ 1,681 ಮತ್ತು 2020 ರಲ್ಲಿ 1,236 ದೂರುಗಳು ‘ಅತ್ಯಾಚಾರ/ಅತ್ಯಾಚಾರ ಯತ್ನ’ ಅಡಿಯಲ್ಲಿ ದಾಖಲಾಗಿವೆ. ಕಳೆದ 3 ವರ್ಷ ಹಾಗೂ ಪ್ರಸುತ್ತ ವರ್ಷದಲ್ಲಿ ಆಯೋಗದಲ್ಲಿ ‘ವರದಕ್ಷಿಣೆ’ ಮತ್ತು ‘ಅತ್ಯಾಚಾರ ಅಥವಾ ಅತ್ಯಾಚಾರ ಯತ್ನ’ ವಿಭಾಗಗಳ ಅಡಿಯಲ್ಲಿ ದಾಖಲಾದ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಕೇಂದ್ರ ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

    ಸಚಿವರ ಅಂಕಿ ಅಂಶಗಳ ಪ್ರಕಾರ ಜನವರಿ 2023ರ ವೇಳೆಗೆ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 411 ಇ-ಪೋಕ್ಸೊ ನ್ಯಾಯಾಲಯಗಳು ಸೇರಿದಂತೆ 764 ತ್ವರಿತ ವಿಶೇಷ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಈ ನ್ಯಾಯಾಲಯಗಳು 1,44,000 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಿದೆ, 1,98,000 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ. ಇದನ್ನೂ ಓದಿ: ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ- ಆರೋಪಿಗಳಲ್ಲಿ ಓರ್ವ ಬಿಜೆಪಿ ನಾಯಕನ ಮಗ!

    ಭೋಪಾಲ್: ಮಧ್ಯ ಪ್ರದೇಶದ (Madhya Pradesh) ದತಿಯಾ (Datia) ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ (Student) ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ (BJP Leader) ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ.

    ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಸಂತ್ರಸ್ತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಸಿಟ್ಟಿನಿಂದ ಮಾವನನ್ನು ಗೋಡೆಗೆ ತಳ್ಳಿ ಕೊಂದ ಅಳಿಯ!

    CRIME

    ಸಂತ್ರಸ್ತ ವಿದ್ಯಾರ್ಥಿನಿಯರು ಅಲ್ಲದೇ ನಾಲ್ವರು ಆರೋಪಿಗಳು ಸಹ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ವಿಚ್ಛೇದನಕ್ಕೆ ಒಪ್ಪದ ಪತ್ನಿಯ ಕೊಲೆಗೆ ಸ್ಕೆಚ್- ಅಪಘಾತಕ್ಕೆ ಯತ್ನಿಸಿ ಸಿಕ್ಕಿಬಿದ್ದ ಪತಿ

    ಅತ್ಯಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂಗಿ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾಳೆ. ಆಕೆ ನೀಡಿದ ದೂರಿನಲ್ಲಿ, ನಾನು ಮತ್ತು ನನ್ನ ಅಕ್ಕನನ್ನು ನಾಲ್ವರು ಆರೋಪಿಗಳು ಅಪಹರಿಸಿ ಅವರ ಮನೆಗೆ ಕರೆದೊಯ್ದು ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಪ್ರೀತಿ ವಿಚಾರಕ್ಕೆ ಕಿರಿಕ್ – ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

    ಘಟನೆಯ ಬಳಿಕ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದು, ಅಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಆಕೆಯನ್ನು ನೆರೆಯ ಉತ್ತರ ಪ್ರದೇಶದ (Uttar Pradesh) ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ತವರು ಮನೆ ಸೇರಿದ್ದ ಪತ್ನಿಯನ್ನು ಚುಚ್ಚಿ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ (Rape) ಆಘಾತಕಾರಿ ಘಟನೆ ಕಲಬುರಗಿ (Kalaburagi) ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್‌ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗರ್ಲ್‌ಫ್ರೆಂಡ್ಸ್‌ ನಿಭಾಯಿಸಿ, ಶೋಕಿ ಮಾಡಲು ಹೈಟೆಕ್ ಬೈಕ್‌ಗಳ ಕಳ್ಳತನ

    ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಟೆರರಿಸ್ಟ್‌ಗಳು ಬಾಂಬ್ ಇಟ್ಟಿದ್ದಾರೆ – ಪೊಲೀಸ್ರ ನಿದ್ದೆಗೆಡಿಸಿದ ಫೇಕ್‌ ಕಾಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಂದೆಯ ಲೈಂಗಿಕ ಕಿರುಕುಳದಿಂದ ರಕ್ಷಿಸುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ರೇಪ್

    ತಂದೆಯ ಲೈಂಗಿಕ ಕಿರುಕುಳದಿಂದ ರಕ್ಷಿಸುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ರೇಪ್

    ಜೈಪುರ: ತಂದೆ ನೀಡುತ್ತಿದ್ದ ಲೈಂಗಿಕ ಕಿರುಕುಳದಿಂದ (Sexual Harassment) ರಕ್ಷಿಸುವುದಾಗಿ ನಂಬಿಸಿ ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ (Gang Rape) ಘಟನೆ ರಾಜಸ್ಥಾನದ (Rajasthan) ಕೋಟಾದಲ್ಲಿ (Kota) ನಡೆದಿದೆ.

    ತಂದೆ ತನ್ನ 13 ವರ್ಷ ವಯಸ್ಸಿನ ಮಗಳಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ರಕ್ಷಿಸುವುದಾಗಿ ಹೇಳಿದ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯನ್ನು ತನ್ನ ಜೊತೆಯಲ್ಲಿ ಕರೆದೊಯ್ದಿದ್ದಲ್ಲದೇ ತನ್ನ ಸ್ನೇಹಿತನ ಜೊತೆಗೂಡಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜೂನ್ 26ರಂದು ಆರೋಪಿ ತಂದೆ ತನ್ನ 13 ವರ್ಷದ ಮಗಳು ಜೂನ್ 22ರಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ದುಷ್ಟರಿಂದ ರಕ್ಷಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

    CRIME

    ಘಟನೆಯ ಕುರಿತು ಬಾಲಕಿಯನ್ನು ವಿಚಾರಿಸಿದಾಗ ಆಕೆ, ತನ್ನ ತಾಯಿ ತೀರಿಕೊಂಡು 5 ವರ್ಷಗಳಾಗಿವೆ. ತಾಯಿಯ ನಿಧನದ ಬಳಿಕ ತಾನು ತಂದೆಯೊಂದಿಗೆ ವಾಸಮಾಡುತ್ತಿದ್ದು, ಸುಮಾರು ಒಂದೂವರೆ ವರ್ಷದಿಂದ ತಂದೆ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಈ ಕುರಿತು ಯಾರ ಬಳಿಯಾದರೂ ಮಾತನಾಡಿದರೆ ಕೊಲೆ ಮಾಡುವುದಾಗಿ ಜೀವಬೆದರಿಕೆ ಹಾಕಿದ್ದರು ಎಂದು ನಿಜಾಂಶ ಹೇಳಿದ್ದಾಳೆ. ಇದನ್ನೂ ಓದಿ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    ಇಷ್ಟು ಮಾತ್ರವಲ್ಲದೇ 29 ವರ್ಷದ ವ್ಯಕ್ತಿಯೋರ್ವ ಬಾಲಕಿಗೆ ಪರಿಚಯವಾಗಿದ್ದು, ಜೂನ್ 22ರಂದು ತಂದೆಯಿಂದ ರಕ್ಷಿಸುವುದಾಗಿ ಹೇಳಿ ಅಪ್ರಾಪ್ತೆಯನ್ನು ಆತನ ಜೊತೆಯಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ತನ್ನ ಸ್ನೇಹಿತನ ಜೊತೆ ಸೇರಿಕೊಂಡು ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅತ್ಯಾಚಾರವೆಸಗಿರುವುದು ಸಾಬೀತಾದ ಬಳಿಕ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Maharashtra Accident: ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಸಾವು

    ಬಾಲಕಿಯ ಮಾಹಿತಿಯ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ತೆಗೆದುಕೊಂಡ ಪೊಲೀಸರು ಆರೋಪಿ ತಂದೆಯ ವಿರುದ್ಧ ಐಪಿಸಿ ಮತ್ತು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೇ ಇನ್ನಿಬ್ಬರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದವನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

    ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದವನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

    ಗದಗ: ಅಪ್ರಾಪ್ತೆಯೋರ್ವಳನ್ನು (Minor) ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿ, ಜೀವ ಬೆದರಿಕೆ ಹಾಕಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ (Gadag) ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು (Court) ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಸವದತ್ತಿ (Savadatti) ತಾಲೂಕಿನ ತೆರದಕೊಪ್ಪ ಗ್ರಾಮದ ಮೌಲಾಸಾಬ್ ದೊಡ್ಡಮನಿ ಅತ್ಯಾಚಾರವೆಸಗಿದ ಅಪರಾಧಿ. ಬಾಲಕಿ ನರಗುಂದ (Naragunda) ತಾಲೂಕಿನ ನಿವಾಸಿಯಾಗಿದ್ದು, ಆಕೆ ಅಪ್ರಾಪ್ತೆಯೆಂದು ತಿಳಿದಿತ್ತು. ಹೀಗಿದ್ದರೂ ಮೌಲಾಸಾಬ್ ಅವಳನ್ನು ಒತ್ತಾಯ ಪೂರ್ವಕವಾಗಿ ಬೈಕ್‌ನಲ್ಲಿ ಹತ್ತಿಸಿಕೊಂಡು ಹೋಗಿದ್ದ. ನರಗುಂದ- ಮುನವಳ್ಳಿ ರಸ್ತೆಯ ಸಿಂದೋಗಿ ಕ್ರಾಸ್ ಬಳಿಯ ಮನೆಗೆ ಕರೆದುಕೊಂಡು ಹೋದ ಆತ ಅಲ್ಲಿ ಅವಳ ಪ್ರಜ್ಞೆ ತಪ್ಪಿಸಿ ಅತ್ಯಾಚಾರ (Rape) ನಡೆಸಿದ್ದ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ನಂತರ ಬಾಲಕಿ ಈ ಬಗ್ಗೆ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಈ ಕುರಿತು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 15ರ ರೇಪ್ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್

    ಸದ್ಯ ಈ ಪ್ರಕರಣವನ್ನು ಇನ್ಸ್ಪೆಕ್ಟರ್ ಶ್ರೀನಿವಾಸ್ ಮೇಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. 2018ರ ಜುಲೈ 27 ರಂದು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಸ್ತುತ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೌಲಾಸಾಬ್‌ಗೆ ಕಲಂ 366 ರಡಿ 5 ವರ್ಷ ಜೈಲು ಶಿಕ್ಷೆ, 10,000 ರೂ. ದಂಡ ವಿಧಿಸಲಾಗಿದೆ. ಅಲ್ಲದೇ ಕಲಂ 506ರ ಅಡಿ 3 ವರ್ಷ ಜೈಲುಶಿಕ್ಷೆ ಹಾಗೂ 5 ಸಾವಿರ ರೂ. ದಂಡ, ಕಲಂ 376(ಎಬಿ) ರೆ/ವಿ ಕಲಂ 5(ಹೆಚ್)(ಎಂ), ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ (Penalty) ಕಟ್ಟಲು ಆದೇಶ ನೀಡಲಾಗಿದೆ. ಇದನ್ನೂ ಓದಿ: ಚೆಕ್‌ ಬೌನ್ಸ್‌ ಕೇಸ್‌ – ಮಾಜಿ ಸಚಿವ ಜಾಲಪ್ಪ ಪುತ್ರಗೆ ಜೈಲು ಶಿಕ್ಷೆ

    ಒಂದು ವೇಳೆ ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 2 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಅಮರೇಶ್ ಹಿರೇಮಠ ವಾದ ಮಂಡಿಸಿದ್ದರು. ಇದನ್ನೂ ಓದಿ: ಹೆಲ್ಮೆಟ್‌ ಧರಿಸದೇ ಅಪ್ರಾಪ್ತ ಬಾಲಕ ಬೈಕ್‌ ಚಲಾಯಿಸಿದ್ದಕ್ಕೆ ಬಿತ್ತು 20 ಸಾವಿರ ರೂ. ದಂಡ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • 15ರ ರೇಪ್ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್

    ಮುಂಬೈ: 15 ವರ್ಷದ ಅಪ್ರಾಪ್ತ ಅತ್ಯಾಚಾರ (Rape) ಸಂತ್ರಸ್ತೆಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಲು ಬಾಂಬೆ ಹೈಕೋರ್ಟ್ (Bombay Highcourt) ಔರಂಗಬಾದ್ ಪೀಠ ನಿರಾಕರಿಸಿದೆ.

    28 ವಾರಗಳ ಹಂತದಲ್ಲಿ ಬಲವಂತವಾಗಿ ಹೆರಿಗೆ ಮಾಡಿಸಿದರೆ ಮಗು ಜೀವಂತವಾಗಿ ಜನಿಸುತ್ತದೆ. ನವಜಾತ ಶಿಶುವಿಗೆ ಆರೈಕೆಯ ಅಗತ್ಯವಿರುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಗರ್ಭಪಾತಕ್ಕೆ (Abortion) ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾಧೀಶರಾದ ಆರ್‌ವಿ ಘುಗೆ (R.V.Ghuge) ಮತ್ತು ವೈಜಿ ಖೋಬ್ರಗಡೆ (Y.G.Khobragade) ಅವರ ಪೀಠವು ಜೂನ್ 20ರಂದು ಈ ಆದೇಶವನ್ನು ನೀಡಿದೆ. ಇದನ್ನೂ ಓದಿ: 16ನೇ ವಯಸ್ಸಿನವ್ರಿಗೆ ಲೈಂಗಿಕ ವಿಚಾರದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವಿದೆ: ಮೇಘಾಲಯ ಹೈಕೋರ್ಟ್

    ಅತ್ಯಾಚಾರಕ್ಕೆ ಒಳಗಾದ ಬಾಲಕಿಯ 28 ವಾರಗಳ ಗರ್ಭಪಾತಕ್ಕೆ ಅನುಮತಿ ಕೋರಿ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. 2023ರ ಫೆಬ್ರವರಿಯಲ್ಲಿ ತನ್ನ ಮಗಳು ನಾಪತ್ತೆಯಾಗಿದ್ದು, 3 ತಿಂಗಳ ಬಳಿಕ ರಾಜಸ್ಥಾನದಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಪತ್ತೆಯಾಗಿದ್ದಾಳೆ ಎಂದು ಮಹಿಳೆ ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸೌಜನ್ಯ ರೇಪ್‌, ಮರ್ಡರ್‌ ಕೇಸ್‌- ಆರೋಪಿ ಸಂತೋಷ್‌ ರಾವ್‌ ಖುಲಾಸೆ

    ಘಟನೆಯ ಕುರಿತು ವ್ಯಕ್ತಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿದ ಬಳಿಕ ಮಗು ಜೀವಂತವಾಗಿ ಜನಿಸುತ್ತದೆ ಮತ್ತು ನವಜಾತ ಶಿಶುವನ್ನು ಆರೈಕೆ ಮಾಡಬೇಕಾಗುತ್ತದೆ. ಅಲ್ಲದೇ ಸಂತ್ರಸ್ತೆಗೆ ಅಪಾಯವಾಗುವ ಸಾಧ್ಯತೆಗಳಿವೆ ಎಂದು ವೈದ್ಯರು ಕೋರ್ಟ್ ಗಮನಕ್ಕೆ ತಂದಿದ್ದರು. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

    ಈ ಕುರಿತು ಹೈಕೋರ್ಟ್ ಬಲತ್ಕಾರವಾಗಿ ಹೆರಿಗೆಯಾದರೆ ಮಗುವಿನ ಆರೋಗ್ಯದಲ್ಲಿ ಅಥವಾ ಬೆಳವಣಿಗೆಯಲ್ಲಿ ಸಮಸ್ಯೆ ಕಾಣಿಸುವ ಸಾಧ್ಯತೆಯಿದೆ. ಒಂದು ವೇಳೆ ಸಾಮಾನ್ಯ ಹೆರಿಗೆಗೆ 12 ವಾರಗಳ ಮುನ್ನ ಮಗುವಿನ ಜನನವಾದರೆ ಅದರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಪರಿಗಣಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

    ಮಗು ಜೀವಂತವಾಗಿ ಜನಿಸುವ ಕಾರಣ 12 ವಾರಗಳ ನಂತರ ವೈದ್ಯರ ಸಲಹೆಯ ಮೇರೆಗೆ ಮಗು ಹುಟ್ಟಲು ಅವಕಾಶ ಮಾಡಿಕೊಡಬಹುದು. ಮಗುವಿನ ಜನನವಾದ ಬಳಿಕ ಸಂತ್ರಸ್ತೆ ಆ ಶಿಶುವನ್ನು ಅನಾಥಾಶ್ರಮಕ್ಕೆ (Orphanage) ಕೊಡಲು ಬಯಸುವುದಾದರೆ ಸಂತ್ರಸ್ತೆಗೆ ಈ ಕುರಿತು ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ. ಬಲವಂತದ ಹೆರಿಗೆಗೆ ಅನುಮತಿ ನೀಡುವುದರಿಂದ ಅವಧಿ ಪೂರ್ವ ಹಂತದಲ್ಲಿ ಮಗುವನ್ನು ಈ ಜಗತ್ತಿಗೆ ತರಬೇಕಾಗುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: 14ರ ಹಿಂದೂ ಬಾಲಕಿ ಕಿಡ್ನ್ಯಾಪ್‌ ಮಾಡಿ ಇಸ್ಲಾಂಗೆ ಮತಾಂತರ – ಪೋಷಕರ ಜೊತೆ ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಣೆ

    ಮಗು ಸಂಪೂರ್ಣ ಬೆಳವಣಿಗೆಯಾಗಿ ಸ್ವಾಭಾವಿಕ ಹೆರಿಗೆಯಾದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ ಮತ್ತು ದತ್ತು ಪಡೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಕೋರ್ಟ್ ತಿಳಿಸಿದೆ. ಬಳಿಕ ಸಂತ್ರಸ್ತೆಯ ತಾಯಿ ಬಾಲಕಿ ಮಗುವಿಗೆ ಜನ್ಮ ನೀಡುವವರೆಗೂ ಯಾವುದಾದರೂ ಎನ್‌ಜಿಒ ಅಥವಾ ಆಸ್ಪತ್ರೆಯಲ್ಲಿ ಆಕೆಯನ್ನು ಇರಿಸಿಕೊಳ್ಳಲು ಅನುಮತಿ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಮನವಿಯನ್ನು ಆಲಿಸಿದ ಬಳಿಕ ಸಂತ್ರಸ್ತೆಯನ್ನು ನಾಸಿಕ್‌ನಲ್ಲಿರುವ (Nashik) ಗರ್ಭಿಣಿಯರನ್ನು ಆರೈಕೆ ಮಾಡುವ ಆಶ್ರಯ ಮನೆ ಅಥವಾ ಔರಂಗಬಾದ್‌ನಲ್ಲಿ ಮಹಿಳೆಯರಿಗಾಗಿ ಇರುವ ಸರ್ಕಾರಿ ಆಶ್ರಯ ಮನೆಗಳಲ್ಲಿ ಇರಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ- ಯುವಕನಿಗೆ 20 ವರ್ಷ ಜೈಲು, 1 ಲಕ್ಷದ 10 ಸಾವಿರ ರೂ. ದಂಡ

    ಅಷ್ಟು ಮಾತ್ರವಲ್ಲದೇ ಹೆರಿಗೆಯ ಬಳಿಕ ಮಗುವನ್ನು ಇಟ್ಟುಕೊಳ್ಳುವ ಅಥವಾ ದತ್ತು ನೀಡುವ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಹಕ್ಕು ಸಂತ್ರಸ್ತೆಗೆ ಇದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಲಿಂಗಾಯತ ಅವಹೇಳನ ಕೇಸಲ್ಲಿ ಸಿದ್ದರಾಮಯ್ಯಗೆ ರಿಲೀಫ್