Tag: ಅನ್ನಭಾಗ್ಯ

  • ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಬೆಂಗಳೂರು: ಅನ್ನಭಾಗ್ಯ ಯೋಜನೆ (Annabhagya Scheme) ಅಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಅಂತ ಆಹಾರ ಸಚಿವ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. 5 ಕೆ.ಜಿ ಅಕ್ಕಿ ಮತ್ತು 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ 170 ರೂ. ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಕೂಡಲೇ ಕರ್ನಾಟಕದಿಂದ ಕಾವೇರಿ ನೀರು ಬಿಡುವಂತೆ ನಿರ್ದೇಶಿಸಿ – ಮೋದಿಗೆ ಸ್ಟಾಲಿನ್‌ ಪತ್ರ

    ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ (Ration Card) ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಅಂತ ಮಾಹಿತಿ ನೀಡಿದರು.

    ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಅಂತ ಮಾಹಿತಿ ನೀಡಿದರು.

    ಆಂಧ್ರ (Andhrapradesh) ಮತ್ತು ತೆಲಂಗಾಣ (Telangana) ರಾಜ್ಯಗಳು ಅಕ್ಕಿ ಕೊಡೋಕೆ ಈಗ ಮುಂದೆ ಬಂದಿದೆ. 34 ರೂ. ಮೇಲೆ ಹೆಚ್ಚು ಹಣ ಕೊಡೊಲ್ಲ ಅಂತ ಹೇಳಿದ್ದೇವೆ. ಎರಡು ರಾಜ್ಯಗಳ ಜೊತೆ ಮಾತಾಡುತ್ತಿದ್ದೇವೆ. ಸೆಪ್ಟೆಂಬರ್ ನಲ್ಲಿ ಅಕ್ಕಿ ಕೊಡೋ ಚಿಂತನೆ ಮಾಡಿದ್ದೇವೆ. ಹೆಚ್ಚು ದಿನ ಹಣ ಕೊಡೊಲ್ಲ. ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಪಡೆಯೋ ಪ್ರಕ್ರಿಯೆ ನಡೆಸುತ್ತೇವೆ. ಆದಷ್ಟು ಬೇಗ ಅಕ್ಕಿ ಕೊಡ್ತೀವಿ ಎಂದರು.

    ಹೊಸ ಪಡಿತರ ಚೀಟಿಗೆ ಜುಲೈ ಅಂತ್ಯಕ್ಕೆ 2,95,986 ಅರ್ಜಿ ಬಂದಿವೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಡ್ ನೀಡುವ ಪ್ರಕ್ರಿಯೆ ನಿಂತಿತ್ತು. ಈಗ ಫಲಾನುಭವಿಗಳ ಮಾಹಿತಿಯನ್ನ ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆ ಅನುಮತಿ ಪಡೆದು ಕಾರ್ಡ್ ವಿವರಣೆ ಮಾಡ್ತೀವಿ ಅಂತ ತಿಳಿಸಿದರು. ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆ ಮಾಡಿಸಿದ ಬಳಿಕವೇ ಹಣ ಹಾಕೋದಾಗಿ ಸಚಿವರು ತಿಳಿಸಿದರು.

    ಅಕ್ಕಿ ಜೊತೆ ರಾಗಿ ಮತ್ತು ಜೋಳ ಕೊಡಲು ಸರ್ಕಾರ ಚಿಂತನೆ ಮಾಡಿದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಂದ ರಾಗಿ, ಬಿಳಿ ಖರೀದಿಗೆ ಸರ್ಕಾರದ ನಿರ್ಧಾರ ಮಾಡಿದೆ. 8 ಲಕ್ಷ ಟನ್ ರಾಗಿ, 3 ಲಕ್ಷ ಜೋಳ ಖರೀದಿ ಮಾಡ್ತೀವಿ. ಅಕ್ಕಿ ಜೊತೆ ಜೋಳ,ರಾಗಿ ಕೂಡಾ ಪಡಿತರದಲ್ಲಿ ಕೊಡ್ತೀವಿ ಅಂತ ಸಚಿವರು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಧಿವೇಶನದಲ್ಲಿ ಸಿದ್ದರಾಮಯ್ಯ ಪರ ಜಿಟಿಡಿ ಬ್ಯಾಟಿಂಗ್ – ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಶಾಸಕ

    ಅಧಿವೇಶನದಲ್ಲಿ ಸಿದ್ದರಾಮಯ್ಯ ಪರ ಜಿಟಿಡಿ ಬ್ಯಾಟಿಂಗ್ – ಅನ್ನಭಾಗ್ಯಕ್ಕೆ ಜೈ ಎಂದ ಜೆಡಿಎಸ್ ಶಾಸಕ

    – ಕೇಂದ್ರ ಸರ್ಕಾರ, ಬಿಜೆಪಿ ನಾಯಕರ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ

    ಬೆಂಗಳೂರು: ಕೆಲ ದಿನಗಳ ಹಿಂದೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಪರಸ್ಪರ ವಾಗ್ಯುದ್ಧವನ್ನೇ ನಡೆಸಿದ್ದರು. ಆದರೆ ಜೆಡಿಎಸ್ (JDS) ಕೆಲ ನಾಯಕರು, ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್‌ಕಾರ್ನರ್‌ ಹೊಂದಿದಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ (G.T.Devegowda) ಅವರು ಸದನದಲ್ಲಿ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿಗಳ ಪರವಾಗಿ ಬ್ಯಾಟಿಂಗ್ ಮಾಡಿದರು.

    g.t.devegowda session

    ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಮೇಲೆ ಮಾತನಾಡಿದ ಜಿ.ಟಿ. ದೇವೇಗೌಡ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಬೆಂಬಲಿಸಬೇಕಿತ್ತು. ಕೇಂದ್ರ ಅಕ್ಕಿ ಕೊಡಬೇಕಿತ್ತು, ಆದರೆ ಕೊಡಲಿಲ್ಲ. ರಾಜ್ಯ ಸರ್ಕಾರದ ತೆರಿಗೆ ಸಂಗ್ರಹದಿಂದ ಕೇಂದ್ರ ಸರ್ಕಾರ ನಡೆಯುತ್ತಿದೆ. ಅನ್ನಭಾಗ್ಯಕ್ಕೆ ಕೇಂದ್ರ ಬೆಂಬಲ ನೀಡದೆ ಇರುವುದು ಖಂಡನೀಯ. ಐದು ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಬಿಜೆಪಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ, ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದಿದೆ. ತಿಂಗಳಿಗೆ ಒಂದೊಂದು ಮಾಡಲಿ. ಎಲ್ಲಾ ಕಾರ್ಯಕ್ರಮ ಜಾರಿಗೆ ತರಲಿ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ

    ಸಿಎಂ ಸಿದ್ದರಾಮಯ್ಯ ಪರವಾಗಿಯೂ ಜಿ.ಟಿ.ದೇವೇಗೌಡರು ಮಾತನಾಡಿದ್ದಾರೆ. ಅನ್ನಭಾಗ್ಯ ಯೋಜನೆ ಪರವಾಗಿ ಮಾತನಾಡುವಾಗ ಜಿಟಿಡಿ, ಅನ್ನಭಾಗ್ಯ ಯೋಜನೆಯ ಹಿಂದೆ ಸಿದ್ದರಾಮಯ್ಯ ಅವರ ಅನುಭವ ಇದೆ. ಬಡತನದ ಹಿನ್ನೆಲೆಯ ಸಿದ್ದರಾಮಯ್ಯ ಕುಟುಂಬದ ಬಗ್ಗೆ ನನಗೆ ಗೊತ್ತಿದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಅನ್ನಭಾಗ್ಯ ತಂದಿದ್ದಾರೆ. ಅದಕ್ಕಾಗಿ ನಾನು ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ಅವರ ಕುಟುಂಬ, ಹೊಲ, ಗದ್ದೆ ನನಗೆ ಗೊತ್ತು. ಅವರ ತುಂಬು ಕುಟುಂಬದ ಬಗ್ಗೆಯೂ ನನಗೆ ಗೊತ್ತು ಎಂದು ಹೇಳಿದರು.

    ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲ್ಲ ಅನ್ನೋದು ಸರಿಯಲ್ಲ. ಗಾಂಧೀಜಿ ಸಹ ಅನ್ನದ ಮಹತ್ವದ ಬಗ್ಗೆ ಹೇಳಿದ್ದಾರೆ. ಹಾಗಾಗಿ ಅನ್ನಭಾಗ್ಯ ಯೋಜನೆ ಸರಿಯಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದ ಹಣ ವರ್ಗಾವಣೆ – ಷರತ್ತು ವಿಧಿಸಿದ ಸರ್ಕಾರ

    ಅನ್ನಭಾಗ್ಯದ ಹಣ ವರ್ಗಾವಣೆ – ಷರತ್ತು ವಿಧಿಸಿದ ಸರ್ಕಾರ

    ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಐದು ಗ್ಯಾರಂಟಿಗಳಿಗೆ ಸರ್ಕಾರ ಷರತ್ತುಗಳನ್ನು ಹಾಕುತ್ತಿರುವುದಕ್ಕೆ ಈಗಾಗಲೇ ಬಿಜೆಪಿ (BJP) ವಿರೋಧ ವ್ಯಕ್ತಪಡಿಸಿತ್ತು. ಆದರೆ ಈಗ ಮತ್ತೆ ಅನ್ನಭಾಗ್ಯದ (Anna Baghya) ಹಣ ವರ್ಗಾವಣೆಗೆ ಹೊಸ ಷರತ್ತು ವಿಧಿಸಿದೆ.

    ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿದ್ದರೆ ಅನ್ನಭಾಗ್ಯದ ನಗದು ವರ್ಗಾವಣೆಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಕುಟುಂಬಸ್ಥರು ಶೀಘ್ರವೇ ಮುಖ್ಯಸ್ಥರು ಯಾರು ಎನ್ನುವುದನ್ನು ನಿರ್ಧರಿಸಬೇಕು. ಅಲ್ಲದೇ ಹಿರಿಯ ಮಹಿಳೆಯನ್ನೇ ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕು ಎಂದು ಸರ್ಕಾರ ಹೊಸ ನಿಯಮ ವಿಧಿಸಿದೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಶಾಲೆಗಳಿಗೆ ರಜೆ ಘೋಷಣೆ

    BPL APL Card

    ಈಗಾಗಲೇ ಎರಡನೇ ಮುಖ್ಯಸ್ಥರ ಹೆಸರಿದ್ದರೆ ಆ ಹೆಸರನ್ನು ನಿಷ್ಕ್ರಿಯಗೊಳಿಸಬೇಕು. ನಂತರ ಈ ಮಾಹಿತಿ ಸಲ್ಲಿಸಿದ ಮೇಲೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಯ ಕುಟುಂಬಸ್ಥರಿಗೆ ಹಣ ವರ್ಗಾವಣೆ ಸೌಲಭ್ಯದಿಂದ ಹೊರಗಿರಿಸಲಾಗುತ್ತದೆ. ಕೂಡಲೇ ಇದನ್ನು ಸರಿ ಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

    ಆಧಾರ್ ಸಂಖ್ಯೆ ಹಾಗೂ ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಿರುವ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ. ಆಧಾರ್ ಸಂಖ್ಯೆ ಲಿಂಕ್ ಮಾಡದವರಿಗೆ ಲಿಂಕ್ ಮಾಡಿಸುವಂತೆ ಉತ್ತೇಜಿಸಲಾಗುತ್ತದೆ. ತಾಂತ್ರಿಕ ಅಥವಾ ಆರೋಗ್ಯ ಕಾರಣಗಳಿಂದ ಆಧಾರ್ ಸಂಖ್ಯೆ ಪಡಿತರ ಚೀಟಿಯೊಂದಿಗೆ ಸೇರಿಸಲು ಸಾಧ್ಯವಾಗದೇ ಇರುವಂತಹ ಫಲಾನುಭವಿಗಳಿಗೆ ಇತರೆ ಮಾರ್ಗೋಪಾಯಗಳ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ.

    ಕುಟುಂಬದ ಮುಖ್ಯಸ್ಥರು ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡದಿದ್ದರೆ, ಖಾತೆಯನ್ನು ಚಾಲ್ತಿ ಮಾಡಿದ ಬಳಿಕ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟೊಮೆಟೊ ಆಯ್ತು.. ಈಗ ಶುಂಠಿ, ಹಸಿರು ಮೆಣಸಿನಕಾಯಿ ಬೆಲೆಯಲ್ಲೂ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Annabhagya Scheme: ಜುಲೈ 10 ರೊಳಗೆ ಅಕೌಂಟ್‍ಗೆ ಹಣ?

    Annabhagya Scheme: ಜುಲೈ 10 ರೊಳಗೆ ಅಕೌಂಟ್‍ಗೆ ಹಣ?

    ಬೆಂಗಳೂರು: ಕೊನೆಗೂ ಅನ್ನಭಾಗ್ಯದ (Congress Annabhagya Scheme) ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 9, 10 ಕ್ಕೆ ಅಕೌಂಟ್‍ಗೆ ಹಣ ಹಾಕಲು ಸರ್ಕಾರ ಮುಂದಾಗಿದೆ. ವಿರೋಧ ಪಕ್ಷಗಳ ಪಟ್ಟು ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  (State Government) ಈ ನಿರ್ಧಾರಕ್ಕೆ ಬಂದಿದೆ.

    ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ (Congress manifesto) 10 ಕೆ.ಜಿ ಅಕ್ಕಿ ಕೊಡುವ ಭರವಸೆ ನೀಡಿದರು. ಆದರೆ ಕಾಲಕ್ರಮೇಣ ಕೇಂದ್ರ ಸರ್ಕಾರ ತಮ್ಮ ಪಾಲಿನ ಅಕ್ಕಿಯನ್ನಷ್ಟೇ ನೀಡುತ್ತೇವೆ ಎಂದು ಹೇಳಿ ಕೈತೊಳೆದುಕೊಂಡಿತ್ತು. ಈಗ 5 ಕೆ.ಜಿ ಅಕ್ಕಿ ಜೊತೆ 5 ಕೆ.ಜಿಗೆ ಹಣ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.

    ಈ ನಡುವೆ ಅಕ್ಕಿ ಹಣ ನೀಡುವುದು ಮತ್ತಷ್ಟು ವಿಳಂಬ ಅನ್ನೋದನ್ನ ಸ್ಪಷ್ಟವಾಗಿ ಹೇಳ್ತಿದೆ. ಸರ್ಕಾರದಿಂದ ಈಗ ಅಕೌಂಟ್‍ಗೆ ಹಣ ಹಾಕಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜುಲೈ 15ರಂದು ಹಣಹಾಕುವ ಚಿಂತನೆಯಲ್ಲಿದ್ದರು. ಇದೀಗ ಜುಲೈ 10ರೊಳಗೆ ಹಣ ಹಾಕುವಂತೆ ಸರ್ಕಾರ ಸೂಚಿಸಿದ್ದು, ಜುಲೈ 9ರಂದೇ ಅಕೌಂಟ್‍ಗೆ ಹಣಹಾಕಲು ಆಹಾರ ಇಲಾಖೆಯಿಂದ ಚಿಂತನೆ ನಡೆಸಲಾಗ್ತಿದೆ ಎಂದು ಹೇಳಲಾಗುತ್ತಿದೆ.

    ಅನ್ನ `ಹಣ’ಭಾಗ್ಯ ಸಿದ್ಧತೆ ಹೇಗಿದೆ?: ಜುಲೈ 9 ಅಥವಾ 10ರಂದೇ ಅಕೌಂಟ್‍ಗೆ ಹಣ ಹಾಕುವ ಸಾಧ್ಯತೆಗಳಿದ್ದು, ಜಿಲ್ಲಾವಾರು ಖಾತೆಗೆ ಹಣ ಹಾಕಲು ತಯಾರಿ ನಡೆಸಲಾಗುತ್ತಿದೆ. ಪ್ರತಿನಿತ್ಯ 2 ಜಿಲ್ಲೆ ಆಯ್ಕೆ ಮಾಡಿ ಹಣ ಹಾಕಲು ಚಿಂತನೆ ನಡೆಯುತ್ತಿದೆ. ಇದನ್ನೂ ಓದಿ: ಹನುಮಂತನಿಗೆ ಅಪಮಾನ ಮಾಡಿದ ಆರೋಪ- ಶಪಥ ಮಾಡಿ ನದಿಯಲ್ಲೇ ಕುಳಿತ ಸ್ವಾಮೀಜಿ

    ಆರಂಭಿಕ ಹಂತದಲ್ಲಿ ಮೈಸೂರು, ಕೋಲಾರ ಜಿಲ್ಲೆಗಳಿಗೆ ಹಣ ಜಮೆ ಹಾಗೂ ಹಂತ ಹಂತವಾಗಿ ಎರೆಡೆರಡು ಜಿಲ್ಲೆಗಳಿಗೆ ಹಣ ಹಾಕಲು ನಿರ್ಧಾರ ಮಾಡಲಾಗುತ್ತದೆ. 3 ತಿಂಗಳು ಪಡಿತರ ಅಕ್ಕಿ ತೆಗೆದುಕೊಳ್ಳದೇ ಇರೋರಿಗೆ ಅಕ್ಕಿ ಹಣ ಅನುಮಾನವಿದೆ. ಏಪ್ರಿಲ್, ಮೇ, ಜೂನ್‍ನಲ್ಲಿ ಅಕ್ಕಿ ತೆಗೆದುಕೊಳ್ಳದಿದ್ರೆ ಹಣ ನೀಡೋದು ಡೌಟು ಎನ್ನಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಸರ್ಕಾರ, ಅದರ ಬುದ್ಧಿ ಎರಡೂ ಹ್ಯಾಕ್: ಪ್ರಲ್ಹಾದ್ ಜೋಶಿ

    ಕಾಂಗ್ರೆಸ್ ಸರ್ಕಾರ, ಅದರ ಬುದ್ಧಿ ಎರಡೂ ಹ್ಯಾಕ್: ಪ್ರಲ್ಹಾದ್ ಜೋಶಿ

    ಹುಬ್ಬಳ್ಳಿ: ಕಾಂಗ್ರೆಸ್ (Congress) ಸರ್ಕಾರ ಹಾಗೂ ಅದರ ಬುದ್ಧಿ ಎರಡೂ ಹ್ಯಾಕ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವ್ಯಂಗ್ಯವಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್‍ನಲ್ಲಿ ಮಹಿಳೆಯರಿಗೆ ಫ್ರೀ ಅನ್ನೋ ವಿಚಾರ ಬಿಟ್ಟರೆ ಉಳಿದ ಎಲ್ಲಾ ವಿಚಾರದಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಅಕ್ಕಿ ಕೊಡುತ್ತಿರುವುದು ಮೋದಿಯವರು. ಆದರೆ ಕೆಲವರು ಯುಪಿಎ ಈ ಕಾನೂನು ಮಾಡಿದ್ದು ಎನ್ನುತ್ತಿದ್ದಾರೆ. ಅವರು ಯಾವ ಕಾನೂನು ರೂಲ್ಸ್ ಮಾಡಿರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಇಂಪ್ಲಿಮೆಂಟ್ ಮಾಡಿ ರೂಲ್ಸ್ ಮಾಡಿದ್ದೇವೆ. ದೇಶದ 80 ಕೋಟಿ ಜನರಿಗೆ ಅಕ್ಕಿ ಕೊಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಒಪ್ಪಿತ ಸೆಕ್ಸ್ ವಯೋಮಿತಿ 18 ರಿಂದ 16 ಕ್ಕೆ ಇಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಒತ್ತಾಯ

    ಅಲ್ಲದೇ ಗ್ಯಾರಂಟಿ ವಿಚಾರವಾಗಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಸುಳ್ಳು ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಾಂಗ್ರೆಸ್‍ನ ಜನ್ಮಸಿದ್ದ ಹಕ್ಕು ಸುಳ್ಳು ಹೇಳುವುದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

    ದೇಶದಲ್ಲಿ ಈಗ ಬರಗಾಲ ಆವರಿಸುತ್ತಿದೆ. ಇದರಿಂದ ಭತ್ತದ ಕೊರತೆ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಇಂತಹ ನೈಸರ್ಗಿಕ ವಿಕೋಪಗಳು ಆದಾಗ ಅಕ್ಕಿ ಬೇಕು. ಕೇಂದ್ರದಲ್ಲಿ ಅಕ್ಕಿ ಸ್ಟಾಕ್ ಇದೆ ಅನ್ನೋದು ಶುದ್ಧ ಸುಳ್ಳು. 10 ಕೆ.ಜಿ ಅಕ್ಕಿ ಎಂದು ಭಾಷಣ ಮಾಡಿದವರು, ಯಾವಾಗಲೂ ಭಾರತ ಸರ್ಕಾರದ ಹೆಸರು ಹೇಳಲಿಲ್ಲ. ಎಲ್ಲಾ ನಿರುದ್ಯೋಗಿಗಳಿಗೆ ದುಡ್ಡು ಎಂದು ಕಾಂಗ್ರೆಸ್ ಹೇಳಿತ್ತು ಈಗ ಏನಾಗುತ್ತಿದೆ. ಈಗಾಗಲೇ ಜನ ಕಾಂಗ್ರೆಸ್‍ನ ಸುಳ್ಳುಗಳಿಂದ ಭ್ರಮನಿರಸನಗೊಂಡಿದ್ದಾರೆ ಎಂದಿದ್ದಾರೆ.

    ಲುಂಗಿ ಪಾಲಿಟಿಕ್ಸ್ ವಿಚಾರವಾಗಿ, ಇದು ಕಾಂಗ್ರೆಸ್‍ನ ಲೋ ಲೆವೆಲ್ ಭಾಷೆಯಾಗಿದೆ. ಇದಕ್ಕೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ ಆ ಭಾಷೆ ಬಳಸುವುದಿಲ್ಲ. ಇದಕ್ಕೆ ನಮ್ಮ ಪಕ್ಷದ ಬೇರೆ ಬೇರೆಯವರು ಮಾತಾಡಿದ್ದಾರೆ. ಸಿದ್ದರಾಮಯ್ಯ ಲುಂಗಿ ಲೀಡರ್ ಎಂಬುದನ್ನು ಮರೆಯಬಾರದು ಎಂದಿದ್ದಾರೆ.

    ನಾನು ಸಭ್ಯತೆಯಿಂದ ಮಾತಾನಾಡುತ್ತೇನೆ. ಅಸಭ್ಯ ಭಾಷೆ ಬಳಸೋದು ಸರಿ ಅಲ್ಲ. ನಮಗೂ ಅದೇ ಭಾಷೆ ಬರುತ್ತದೆ. ಅದನ್ನೆಲ್ಲ ಬಿಟ್ಟು ವಿದ್ಯುತ್ ವಿಚಾರವಾಗಿ ಸರ್ಕಾರ ಗಮನಹರಿಸಬೇಕು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಮುನಿಯಪ್ಪ ಇದೇ ತಿಂಗಳು ಅಕ್ಕಿ ಜೊತೆ ದುಡ್ಡು ಕೊಡುವುದಾಗಿ ಹೇಳಿದ್ದರು ಅದು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇದರ ವಿರುದ್ಧ ಯಡಿಯೂರಪ್ಪ ನೇತೃತ್ವದಲ್ಲಿ ಜು.4 ರಂದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದ್ವಿಪಕ್ಷೀಯ ಸಂಬಂಧಗಳು ಹಾಳಾಗಲು ಚೀನಾ ಕಾರಣ: ಜೈಶಂಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದಿಂದ ಹೊರಗುಳಿಯುತ್ತಾರಾ 6 ಲಕ್ಷ ಜನ?

    ಅನ್ನಭಾಗ್ಯದಿಂದ ಹೊರಗುಳಿಯುತ್ತಾರಾ 6 ಲಕ್ಷ ಜನ?

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Guarantee) ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಸದ್ಯ ಸದ್ದು ಮಾಡುತ್ತಿದೆ. ಇದೀಗ ಅನ್ನಭಾಗ್ಯದಿಂದ (Annabhagya Scheme)  6 ಲಕ್ಷ ಜನ ಹೊರಗುಳಿಯುತ್ತಾರಾ ಎಂಬ ಪ್ರಶ್ನೆಯೊಂದು ಎದ್ದಿದೆ.

    6 ಲಕ್ಷ ಜನರ ದಾಖಲೆ ಇಲ್ಲದಿರುವುದು ಆಹಾರ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಲಿಂಕ್ ಮಾಡದವರ ಖಾತೆಗಳಿಗೆ ಹಣ ಸಿಗುವುದಿಲ್ಲ. ಇದನ್ನೂ ಓದಿ: ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಯಾರಿಗೆಲ್ಲ ಸಿಗಲ್ಲ ದುಡ್ಡು..?: ರಾಜ್ಯದಲ್ಲಿ 6 ಲಕ್ಷ ಜನ ಬಿಪಿಎಲ್ ಕಾರ್ಡ್‍ದಾರರ (BPL Card) ಬ್ಯಾಂಕ್ ಖಾತೆ ಆಧಾರ್ ಗೆ ಲಿಂಕ್ (Aadhaar Card Link to Bank Account) ಆಗಿಲ್ಲ. ಇವರು ಲಿಂಕ್ ಮಾಡಿಸುವವರೆಗೆ ದುಡ್ಡು ಬರಲ್ಲ. ಈಗ ಲಿಂಕ್ ಮಾಡಿದ್ದರೆ ಜುಲೈ 2ನೇ ವಾರದಲ್ಲಿ ಹಣ ಬರುವ ಸಾಧ್ಯತೆಗಳಿವೆ.

    ಇಂದು ದುಡ್ಡು ಬರಲ್ಲ ಯಾಕೆ?: ಅಧಿಕಾರಿಗಳು ಪ್ರತಿ ಅಕೌಂಟ್‍ನ ಡೇಟಾ ಪರಿಶೀಲಿಸಬೇಕು. ಕುಟುಂಬದ ಸದಸ್ಯರು ಎಷ್ಟು ಜನ, ಎಷ್ಟು ದುಡ್ಡು ಕಳಿಸಬೇಕು ಅಂತಾ ಪರಿಶೀಲಿಸಬೇಕು. ಆಧಾರ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಪರಿಶೀಲಿಸಬೇಕು. ಖಾತೆ ನಿಷ್ಕ್ರಿಯವಾದರೆ ದುಡ್ಡು ಬೌನ್ಸ್ ಆಗಿ ವಾಪಸ್ ಬರುತ್ತೆ. ಹೀಗಾಗಿ ಕೆಲ ಸಮಯ ಬೇಕಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ (BPL Card) ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ.

    ಪ್ರತಿ ಕೆಜಿಗೆ 34 ರೂ. ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂ. ಸಿಗಲಿದೆ. ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ಕಿ ಬದಲು ಹಣ ಕೊಟ್ಟರೆ ಹೋರಾಟ ಮಾಡ್ತೀವಿ – ಸರ್ಕಾರಕ್ಕೆ ಪಡಿತರ ವಿತರಕರ ಸಂಘ ಎಚ್ಚರಿಕೆ

    ಅಕ್ಕಿ ಬದಲು ಹಣ ಕೊಟ್ಟರೆ ಹೋರಾಟ ಮಾಡ್ತೀವಿ – ಸರ್ಕಾರಕ್ಕೆ ಪಡಿತರ ವಿತರಕರ ಸಂಘ ಎಚ್ಚರಿಕೆ

    ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನ (Anna Bhagya Scheme) ಇಂದಿನಿಂದ ಜಾರಿಗೆ ತಂದಿದೆ. ‘ಕೈ’ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಗ್ಯಾರಂಟಿಯಲ್ಲಿ ಪ್ರಮುಖವಾಗಿದ್ದ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿಕೊಂಡಿತ್ತು.

    ಕೇಂದ್ರ ಸರ್ಕಾರದಿಂದ ಬರುವ 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ ಇನ್ನೂ 5 ಕೆಜಿ‌ ಅಕ್ಕಿ ನೀಡುತ್ತೇವೆ ಅಂತ ಹೇಳಿತ್ತು. ‌ಅನೇಕ ಕಾರಣಗಳಿಂದ‌ ಕೇಂದ್ರ ಸರ್ಕಾರಕ್ಕೆ‌ ರಾಜ್ಯ ಸರ್ಕಾರ ಅಕ್ಕಿಗೆ ಹಣ ನೀಡುತ್ತೇವೆ. ಅಕ್ಕಿ ನೀಡಿ ಅಂದ್ರೂ ಅಕ್ಕಿಯನ್ನ ನೀಡಲು ಮುಂದಾಗಿಲ್ಲ. ಇದನ್ನೂ ಓದಿ: ಈಗಿರುವ ಯಾರೂ ಬಿಜೆಪಿ ಕಟ್ಟಿಲ್ಲ: ಸ್ವಪಕ್ಷೀಯರ ವಿರುದ್ಧವೇ ಮತ್ತೆ ಗುಡುಗಿದ ರೇಣುಕಾಚಾರ್ಯ

    anna bhagya free rice BPL Card 1

    ಬೇರೆ ರಾಜ್ಯಗಳಿಂದಲೂ ಅಕ್ಕಿ ಖರೀದಿಸಲು ಸರ್ಕಾರ ಕಸರತ್ತು ಮಾಡಿತ್ತು. ‌ಅಲ್ಲೂ ಅಕ್ಕಿ ಸಿಗದ ಕಾರಣರಿಂದ‌ ಪಡಿತರ ಚೀಟಿ ಹೊಂದಿದರವರಿಗೆ 5 ಕೆಜಿ ಅಕ್ಕಿಯ ಹಣ ನೀಡಲು ಮುಂದಾಗಿದೆ.

    ಆದರೇ ಪಡಿತರ ವಿತರಕರು ಇದನ್ನ ವಿರೋಧಿಸಿದ್ದಾರೆ. ಇದರಿಂದ ನಮ್ಮ ಕಮಿಷನ್‌ಗೆ ಬ್ರೇಕ್ ಬೀಳಲಿದೆ. ಸರ್ಕಾರ ಹಣವನ್ನ ನೀಡದೇ ಅದರ ಬದಲು ಇತರೆ ದಿನಸಿ ಪದಾರ್ಥಗಳನ್ನ ನೀಡಬೇಕು. ರಾಜ್ಯದಲ್ಲೇ ಬೆಳೆಯುವ ಬೆಳೆಕಾಳು, ಸಕ್ಕರೆ, ಉಪ್ಪು, ಬೆಲ್ಲ, ಹೀಗೆ ಬೇರೆ ಪದಾರ್ಥಗಳನ್ನ ಕೊಡಿ. ಹಣ ನೀಡುವುದರಿಂದ ಸರ್ಕಾರಕ್ಕೂ ಹೊರೆ ಆಗಲಿದೆ ಎಂಬ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಲು ಪಡಿತರ ವಿತರಕರ ಸಂಘ ನಿರ್ಧರಿಸಿದೆ. ಇದನ್ನೂ ಓದಿ: ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಈ ಸಂಬಂಧ ಇದೇ ಜುಲೈ 4 ಸಭೆ ಮಾಡಲು ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ. ಸರ್ಕಾರ‌ ಹಣ ನೀಡಲು ಮುಂದಾದರೆ ನಾವೂ ಹೋರಾಟ ಮಾಡಬೇಕಾಗುತ್ತದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ಸಹ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯ ಯೋಜನೆ- ಜುಲೈ 2ನೇ ವಾರದಲ್ಲಿ ಹಣ..!

    ಅನ್ನಭಾಗ್ಯ ಯೋಜನೆ- ಜುಲೈ 2ನೇ ವಾರದಲ್ಲಿ ಹಣ..!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಅನ್ನಭಾಗ್ಯ ಹಣ ಜುಲೈ 1 ರಂದೇ ಕೊಡ್ತೀವಿ ಅಂತಾ ಹೇಳಿಲ್ಲ – ಸಿಎಂ ಸ್ಪಷ್ಟನೆ

    ಬೆಂಗಳೂರು: ಅನ್ನಭಾಗ್ಯ ಯೋಜನೆಯ (Anna Bhagya Scheme) ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಜಿ ಹಾಕದಿದ್ರೆ ವಿದ್ಯುತ್‌ ಉಚಿತ ಇಲ್ಲ – ಸಚಿವ ಕೆ.ಜೆ.ಜಾರ್ಜ್

    anna bhagya gruhajyothi

    ಇನ್ನೂ ಗೃಹಜ್ಯೋತಿ (Gruhajyothi Scheme) ಯೋಜನೆಯ ಕುರಿತು ಮಾತಾಡಿದ ಸಿಎಂ, ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್‌ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದೆ, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಿಹಾದಿ ಮನಸ್ಥಿತಿಗಳು ನಮ್ಮ ಮನೆಗೆ ಬಂದ್ರೆ, ಕೋವಿ ಹೊರಬರುತ್ತೆ ಎಂದಿದ್ದ VHP ಮುಖಂಡನ ವಿರುದ್ಧ ಕೇಸ್

    ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ, ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಅನ್ನಭಾಗ್ಯ, ಗೃಹಜ್ಯೋತಿ ಇಂದಿನಿಂದ ಜಾರಿ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ (Anna Bhagya) ಮತ್ತು ಗೃಹಜ್ಯೋತಿ (Gruhajyothi) ಯೋಜನೆಗೆ ಚಾಲನೆ ದೊರೆಯಲಿದೆ.

    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ – ಟ್ವೀಟ್‌ನಲ್ಲೇ ಕಾಲೆಳೆದ ಕಾಂಗ್ರೆಸ್‌

    siddaramaiah anna bhagya

    ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂಪಾಯಿ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಅಕೌಂಟ್‌ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

    ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಇಂದಿನಿಂದ ಈ ಯೋಜನೆಯೂ ಆರಂಭವಾಗಲಿದೆ. ಈ ಯೋಜನೆ ಸೌಲಭ್ಯಕ್ಕಾಗಿ ಇಲ್ಲಿವರೆಗೆ ಒಟ್ಟು 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ 1.15 ಕೋಟಿಗೂ ಅಧಿಕ ಜನರು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿಲ್ಲ. ಇದನ್ನೂ ಓದಿ: ತಡವಾಗಿ ಬಂದ ಬಸ್ ಅಡ್ಡಗಟ್ಟಿ ಡ್ರೈವರ್‌ಗೆ ಕ್ಲಾಸ್‌ ತೆಗೆದುಕೊಂಡ ಮಹಿಳೆಯರು

    ಜುಲೈ ತಿಂಗಳಲ್ಲಿ ಬಳಸಿದ ವಿದ್ಯುತ್ ಆಗಸ್ಟ್ 1 ರಿಂದ ನೀಡುವ ಬಿಲ್‌ಗೆ ಸೇರ್ಪಡೆಯಾಗುವ ರೀತಿಯಲ್ಲಿ ಯೋಜನೆ ಜಾರಿಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]