Tag: ಇಳಯರಾಜ

  • ಅಜಿತ್ ಸಿನಿಮಾ ವಿರುದ್ಧ ಇಳಯರಾಜ ಕಾನೂನು ಸಮರ- 5 ಕೋಟಿ ಪರಿಹಾರ ಕೋರಿ ನೋಟಿಸ್

    ಅಜಿತ್ ಸಿನಿಮಾ ವಿರುದ್ಧ ಇಳಯರಾಜ ಕಾನೂನು ಸಮರ- 5 ಕೋಟಿ ಪರಿಹಾರ ಕೋರಿ ನೋಟಿಸ್

    ಜಿತ್ ಕುಮಾರ್ (Ajith Kumar) ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಚಿತ್ರ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣ್ತಿದೆ. ಈ ಬೆನ್ನಲ್ಲೇ ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ. ತನ್ನ ಸಂಯೋಜನೆಯ 3 ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿದ್ದಕ್ಕಾಗಿ ಚಿತ್ರತಂಡಕ್ಕೆ ಇಳಯರಾಜ 5 ಕೋಟಿ ರೂ. ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಇದನ್ನೂ ಓದಿ:ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

    ajith kumar

    ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ಏ.10ರಂದು ರಿಲೀಸ್ ಆಗಿತ್ತು. ಈ ಚಿತ್ರದಲ್ಲಿ ಹಳೆಯ ತಮಿಳು ಸಿನಿಮಾಗಳ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಾರೆ. ಒತ್ತಾ ರುಪಾಯುಮ್ ಥಾರೆನ್, ಇಲಮೈ ಇಧೊ ಇಧೋ, ಎನ್ ಜೋಡಿ ಮಂಜಾ ಕುರುವಿ ಹಾಡುಗಳನ್ನು ಮರುಬಳಕೆ ಮಾಡಿಕೊಳ್ಳಲಾಗಿದೆ. ಈ ಎಲ್ಲಾ ಹಾಡುಗಳನ್ನು ಸಂಗೀತ ಸಂಯೋಜನೆ ಮಾಡಿರೋದು ಇಳಯರಾಜ. ಆದರೆ ಈ ಹಾಡುಗಳನ್ನು ಬಳಕೆ ಮಾಡಿಕೊಳ್ಳಲು ಚಿತ್ರತಂಡ ಇಳಯರಾಜ ಬಳಿ ಯಾವುದೇ ಅನುಮತಿಯನ್ನು ಪಡೆದುಕೊಂಡಿಲ್ಲ.

    ilayaraja 1

    ಹಾಗಾಗಿ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ವಿರುದ್ಧ ಇಳಯರಾಜ (Ilayaraja) ಕಾನೂನು ಸಮರ ಸಾರಿದ್ದಾರೆ. ತಮ್ಮ ಅನುಮತಿ ಪಡೆಯದೆ ಹಾಡು ಬಳಸಿದ್ದಕ್ಕೆ ಚಿತ್ರತಂಡಕ್ಕೆ 5 ಕೋಟಿ ರೂ. ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಾಗಾದ್ರೆ ಚಿತ್ರತಂಡ ಮುಂದಿನ ನಡೆಯೇನು ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ:‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಗೌಡ ಎಂಗೇಜ್‌ಮೆಂಟ್ ಫೋಟೋ ಗ್ಯಾಲರಿ

    ajith kumar

    ಈ ಸಿನಿಮಾದಲ್ಲಿ ಅಜಿತ್ ಜೊತೆ ತ್ರಿಷಾ, ಪ್ರಿಯಾ ವಾರಿಯರ್ ನಟಿಸಿದ್ದರು. ಈ ಸಿನಿಮಾ ಆಗಿ 5 ದಿನಗಳಲ್ಲಿ 100 ಕೋಟಿ ರೂ. ಗಳಿಕೆ ಮಾಡಿದೆ. ಈ ಸಿನಿಮಾದ ಯಶಸ್ಸಿಗೆ ಈ ಹಾಡುಗಳು ಪ್ಲಸ್ ಆಗಿತ್ತು.

  • ಇಳಯರಾಜ ಹಾಡಿನ ಮೋಡಿಗೆ ತಲೆದೂಗಿದ ಸಾಂಸ್ಕೃತಿಕ ನಗರಿ ಜನ

    ಇಳಯರಾಜ ಹಾಡಿನ ಮೋಡಿಗೆ ತಲೆದೂಗಿದ ಸಾಂಸ್ಕೃತಿಕ ನಗರಿ ಜನ

    – ಮೈಸೂರು ಯುವ ದಸರಾಗೆ ಅದ್ದೂರಿ ತೆರೆ
    – ರೆಟ್ರೋ, ಮೆಲೋಡಿ ಕಾಂಬಿನೇಷನ್‌ಗೆ ಯುವಸಮೂಹ ಫಿದಾ

    ಮೈಸೂರು: ಮೈಸೂರು ದಸರಾದಲ್ಲಿ ಕಳೆದ 5 ದಿನದಿಂದ ಯುವ ಸಮೂಹವನ್ನ ರಂಜಿಸಿದ ಯುವ ದಸರಾ ಕಾರ್ಯಕ್ರಮಕ್ಕೆ ಅದ್ದೂರಿ ತೆರೆ ಬಿದ್ದಿದ್ದು, ಕೊನೆಯ ದಿನವಾದ ಗುರುವಾರ ಕೂಡ ಸ್ವರ ಮಾಂತ್ರಿಕ ಇಳಯರಾಜ ಮೋಡಿಗೆ ಮೈಸೂರಿಗರು ತಲೆ ದೂಗಿದರು.

    ಕಳೆದ 5 ದಿನದಿಂದ ದಸರಾ ಮೆರುಗನ್ನ ಡಬಲ್ ಮಾಡಿದ್ದ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಅದ್ದೂರಿ ತೆರೆ ಬಿದ್ದಿದೆ. ಕೊನೆಯ ದಿನವಾದ ನಿನ್ನೆ ಇಳಯರಾಜರ ಮೋಡಿ ಮೈಸೂರಿಗರನ್ನ ಸ್ವರ ಸಾಲುಗಳಲ್ಲಿ ಮಿಂದೆಳಿಸುವ ಮೂಲಕ ಸಾವಿರಾರು ಸಂಖ್ಯೆಯ ಜನರನ್ನ ರಂಜಿಸಿತು.

    ನಗರದ ಹೊರ ವಲಯದ ನಡೆದ ಕಾರ್ಯಕ್ರಮದ ಕೊನೆಯ ದಿನವಾದ ಗುರುವಾರ ಇಳಿಯರಾಜ್ ಮೂಸಿಕಲ್ ನೈಟ್ ಆರಂಭವಾಗುತ್ತಿದ್ದಂತೆ ಜನ ಕುಳಿತಲ್ಲೇ ಸಂಗೀತದಲ್ಲಿ ತೇಲಿದರು. ಮೊದಲ ಬಾರಿಗೆ ತಾವು ಕೊಲ್ಲೂರು ಮೂಕಾಂಬಿಕ ಬಗ್ಗೆ ಹಾಡಿದ ಮೊದಲ ಹಾಡದ ಅಮ್ಮ ಎಂದೂ ಕೂಗಿದರೆ ಹಾಡಿನ ಮೂಲಕ ನೆರದಿದ್ದವರನ್ನ ಭಕ್ತಿಯಲ್ಲಿ ತೇಲುವಂತೆ ಮಾಡಿದರು. ಬಳಿಕ ಡಾ. ರಾಜಕುಮಾರ್ ಅಭಿನಯದ ನನ್ನ ನೀನು ಗೆಲ್ಲಲಾರೆ, ಜೀವ ಹೂವಾಗಿದೆ ಹಾಡು ಸೇರಿದಂತೆ ಡಾ. ವಿಷ್ಣುವರ್ಧನ್ ಅಭಿನಯದ ಹಾಡುಗಳನ್ನ ಹಾಡುವ ಮೂಲಕ ರಂಚಿಸಿದರು. ಅಲ್ಲದೇ ಶಂಕರ್ ನಾಗ್ ನಟನೆಯ ಗೀತಾ ಚಿತ್ರದ ಹಾಡಾದ ಸಂತೋಷಕ್ಕೆ ಹಾಡು ಸಂತೋಷಕ್ಕೆ ಹಾಡನ್ನ ದಿವಂಗತ ಡಾ. ಎಸ್.ಪಿ ಬಾಲಸುಬ್ರಹ್ಮಣ್ಯಂ ಪುತ್ರ ಎಸ್‌.ಬಿ ಚರಣ್ ಹಾಡುವ ಮೂಲಕ ನೆರದಿದ್ದವರನ್ನ ಕುಣಿದು ಕುಪ್ಪಳಿಸುಂತೆ ಮಾಡಿದ್ರು. ಅಲ್ಲದೇ ಅನೇಕ ಕನ್ನಡದ ಪ್ರಖ್ಯಾತ ರೆಟ್ರೋ, ಮತ್ತು ಮೆಲೋಡಿ ಹಾಡುಗಳನ್ನ ಹಾಡುವ ಮೂಲಕ ಜಿಟಿ ಜಿಟಿ ಮಳೆಯ ನಡುವೆಯೂ ಜನ ಸಂಗೀತಕ್ಕೆ ತಲೆದೂಗುವಂತೆ ಮಾಡಿದ್ರು.

    ಇದೇ ಸಂದರ್ಭದಲ್ಲಿ ವೇದಿಕೆ ಮೇಲೆಯೇ ಇಳಯರಾಜ ಕನ್ನಡನಾಡು ಮತ್ತು ಕನ್ನಡದ ಹಿರಿಯ ನಟ, ನಿರ್ದೇಶಕರು, ಬರಹಗಾರರ ಜೊತೆಗಿನ ಹಲವು ಇಂಟ್ರೆಸ್ಟಿಂಗ್ ವಿಚಾರಗಳನ್ನ ಹಂಚಿಕೊಂಡ್ರು. 1974 ರಲ್ಲಿ ಮೊದಲ ಬಾರಿಗೆ ಮೈಸೂರಿಗೆ ಬಂದಿದ್ದ ಇಳಯರಾಜ ಮೈಸೂರಿನ ಕಾರ್ಯಕ್ರಮದಲ್ಲಿ ಕೀಬೋರ್ಡ್ ವಾದಕರಾಗಿ ಭಾಗಿಯಾಗಿದ್ರಂತೆ. ಕಾರ್ಯಕ್ರಮ ಮುಗಿಸಿ ಬಳಿಕ ಕೊಲ್ಲೂರು ಮೂಕಾಂಬಿಕಾ ದರ್ಶನ ಮಾಡಿದ್ದ ಅನುಭವ ಹಂಚಿಕೊಂಡರು. ಅಲ್ಲದೇ ಮೊದಲ ಬಾರಿಗೆ ಖುದ್ದು ನಟ ಸಾರ್ವಭೌಮ ರಾಜಕುಮಾರ್ ಅವರ ಬಳಿ ಹಾಡಿಸಿದ್ದು ಕೂಡ ಇದೇ ಇಳಯರಾಜರೇ ಯಂತೆ. ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ ಹಾಡಿನ ಸಂಯೋಜನೆ ಸಂಧರ್ಭದ ಘಟನೆ ನೆನಪು ಮಾಡಿಕೊಂಡ ಅವರು, ಆ ಸಮಯದಲ್ಲಿ ಬೇರೆ ಅವರು ಹಾಡೋದು ಬೇಡ, ರಾಜಕುಮಾರ್ ಅವರೇ ಹಾಡಲಿ ಎಂದು ಹೇಳಿದ್ದ ಅನುಭವದ ಬಗ್ಗೆ ವೇದಿಕೆಯಲ್ಲಿ ಹಂಚಿಕೊಳ್ಳುವ ಮೂಲಕ ಕರ್ನಾಟಕ ಮತ್ತು ಕನ್ನಡದ ನಟರ ಜೊತೆಗಿನ ಬಾಂಧ್ಯವ ಬಗ್ಗೆ ಹೇಳಿಕೊಂಡರು.

  • ದುಬಾರಿ ದಂಡ ತೆತ್ತ ಚಿತ್ರತಂಡ- ಇಳಯರಾಜಗೆ 60 ಲಕ್ಷ ನೀಡಿದ ‘ಮಂಜುಮ್ಮೆಲ್ ಬಾಯ್ಸ್’

    ದುಬಾರಿ ದಂಡ ತೆತ್ತ ಚಿತ್ರತಂಡ- ಇಳಯರಾಜಗೆ 60 ಲಕ್ಷ ನೀಡಿದ ‘ಮಂಜುಮ್ಮೆಲ್ ಬಾಯ್ಸ್’

    ನಧಿಕೃತವಾಗಿ ಹಾಡು ಬಳಸಿದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ ಇದೀಗ ಇಳಯರಾಜಗೆ 60 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇಳಯರಾಜ (Ilaiyaraaja) ಸಂಗೀತ ಸಂಯೋಜನೆಯ ‘ಕಣ್ಮಣಿ’ ಹಾಡನ್ನು ಬಳಸಿದಕ್ಕೆ ಇದೀಗ ದುಬಾರಿ ಹಣವನ್ನು ದಂಡ ತೆತ್ತಿದ್ದಾರೆ. ಇದನ್ನೂ ಓದಿ:ಸತತ ಸಿನಿಮಾಗಳ ಸೋಲಿನ ಬೆನ್ನಲ್ಲೇ ಬಿಗ್ ಚಾನ್ಸ್ ಬಾಚಿಕೊಂಡ ಕೃತಿ ಶೆಟ್ಟಿ

    Manjummel Boys 2

    ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಸಿದ ಹಿನ್ನೆಲೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಇಳಯರಾಜ ಕೇಳಿದ್ದರು. ಬಳಿಕ ಅವರನ್ನು ಚಿತ್ರದ ನಿರ್ಮಾಪಕರು ವೈಯಕ್ತಿಕವಾಗಿ ಭೇಟಿಯಾಗಿ ಮಾತಕತೆಯ ಬಳಿಕ ಒಪ್ಪಂದದಂತೆ 60 ಲಕ್ಷ ರೂ. ಇಳಯರಾಜಗೆ ಪಾವತಿಸಿದ್ದಾರೆ.

    ಅಂದಹಾಗೆ, ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೋಡು’ ಹಾಡು ಗಮನ ಸೆಳೆದಿತ್ತು. ಈ ಹಾಡನ್ನು ‘ಮಂಜುಮ್ಮೆಲ್ ಬಾಯ್ಸ್’ ತಂಡ ಅನುಮತಿ ಇಲ್ಲದೇ ಚಿತ್ರದಲ್ಲಿ ಬಳಸಿದ್ದರು. ಈ ಬೆನ್ನಲ್ಲೇ ಚಿತ್ರತಂಡಕ್ಕೆ ಇಳಯರಾಜ ನೋಟಿಸ್ ನೀಡಿದ್ದರು.

  • ಇಳಯರಾಜ ಬಯೋಪಿಕ್ ಹೊಸ ಪೋಸ್ಟರ್ ರಿಲೀಸ್ ಮಾಡಿದ ಧನುಷ್

    ಇಳಯರಾಜ ಬಯೋಪಿಕ್ ಹೊಸ ಪೋಸ್ಟರ್ ರಿಲೀಸ್ ಮಾಡಿದ ಧನುಷ್

    ಸಂಗೀತ ಮಾಂತ್ರಿಕ ಇಳಯರಾಜ (Ilaiyaraaja) ಅವರಿಗೆ ಇಂದು (ಜೂನ್ 2) 81ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಳಯರಾಜ ಜೀವನದ ಕಥೆ ಸಿನಿಮಾ ರೂಪದಲ್ಲಿ ಬರುತ್ತಿದ್ದು, ಚಿತ್ರದ ಪೋಸ್ಟರ್ ಅನ್ನು ಧನುಷ್ (Dhanush) ರಿಲೀಸ್ ಮಾಡಿ ಸಂಗೀತ ಮಾಂತ್ರಿಕ ಇಳಯರಾಜಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಮದುವೆಯಾದ್ರೂ ಮಕ್ಕಳಾಗಲ್ಲ- ಆರೋಗ್ಯ ಸಮಸ್ಯೆ ಬಗ್ಗೆ ಬಾಯ್ಬಿಟ್ಟ ಶ್ರುತಿ ಹಾಸನ್

    ಕಾಲಿವುಡ್ ನಟ ಧನುಷ್ ಅವರು ಇಳಯರಾಜ ಅವರ ಬಯೋಪಿಕ್‌ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇಳಯರಾಜ್ ಬರ್ತಡೇಗೆ ಧನುಷ್ & ಚಿತ್ರತಂಡ ವಿಶೇಷವಾಗಿ ಶುಭಕೋರಿದೆ. ಸಾವಿರಾರು ಜನರ ಮುಂದೆ ಹಾರ್ಮೋನಿಯಂ ಹಿಡಿದು ವೇದಿಕೆಯಲ್ಲಿ ನಿಂತಿರುವ ಪೋಸ್ಟರ್ ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಮೇಷ್ಟ್ರೇ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.


    ಇಳಯರಾಜ ಬರೋಪಿಕ್‌ನಲ್ಲಿ ಧನುಷ್ ನಟಿಸೋದು ಅಧಿಕೃತವಾಗಿದೆ. ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಕೂಡ ಶುರುವಾಗಲಿದೆ. ಈ ಸಿನಿಮಾ ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ.

  • ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

    ಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಇದೀಗ ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ (Ilaiyaraja) ಕಾನೂನು ಸಮರ ಸಾರಿದ್ದಾರೆ. ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ.

    Ilaiyaraja

    ಕಮಲ್‌ ಹಾಸನ್‌ ನಟನೆಯ ‘ಗುಣ’ (Guna) ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊದು’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ಇದನ್ನೂ ಓದಿ:ಮತ್ತೆ ಡೈರೆಕ್ಟರ್‌ ಶಶಾಂಕ್‌ ಜೊತೆ ಕೈಜೋಡಿಸಿದ ಡಾರ್ಲಿಂಗ್ ಕೃಷ್ಣ

    Manjummel Boys 3

    ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ‘ಕಣ್ಮಣಿ ಅನ್ಬೋದು ಕಾದಲನ್’ ಹಾಡಿನ ಹಕ್ಕು ನಮ್ಮದು ಎಂದು ಅವರು ಹೇಳಿದ್ದಾರೆ. ಕಣ್ಮಣಿ ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

    ಈ ಎಲ್ಲಾ ಸಂಗೀತ ಕೃತಿಗಳ ಮೇಲೆ ನೈತಿಕ ಹಕ್ಕುಗಳನ್ನು ಒಳಗೊಂಡಂತೆ ಸಂಪೂರ್ಣ ಹಕ್ಕುಗಳನ್ನು ಹೊಂದಿದ್ದಾರೆ. ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಸಂಗೀತ ಸಂಯೋಜಕರ ಅನುಮತಿ ಪಡೆಯಿರಿ ಅಥವಾ 15 ದಿನಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಜೊತೆಗೆ ಚಿತ್ರದಿಂದ ಹಾಡನ್ನು ತೆಗೆದು ಹಾಕುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ ಇಳಯರಾಜ ಪರ ವಕೀಲರು. ಎರಡು ಆಯ್ಕೆಯಲ್ಲಿ ಒಂದನ್ನು ಪಾಲಿಸದಿದ್ದರೆ ಅವರ ವಿರುದ್ಧ ನೋಟಿಸ್ ನೀಡೋದಾಗಿ ಎಚ್ಚರಿಕೆ ನೀಡಿದ್ದಾರೆ.

  • ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

    ರಜನಿಕಾಂತ್ ಸಿನಿಮಾಗೆ ನೋಟಿಸ್ ಕೊಟ್ಟ ಸಂಗೀತ ನಿರ್ದೇಶಕ ಇಳಯರಾಜ

    ಕ್ಷಿಣದ ಹೆಸರಾಂತ ನಟ ರಜನಿಕಾಂತ್ (Rajinikanth) ನಟನೆಯ ಕೂಲಿ (Coolie) ಸಿನಿಮಾ ತಂಡಕ್ಕೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ನೋಟಿಸ್ (Notice) ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಸಂಗೀತ ಸಂಯೋಜನೆಯನ್ನು ಅನುಮತಿ ಇಲ್ಲದೇ ಬಳಸಿದ್ದಾರೆ ಎಂದು ನೋಟಿಸ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

    Ilayaraja Rajinikanth 1

    ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ವಾ ವಾ ಪಾಕಂ ವಾ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ತಮ್ಮ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

     

    ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

  • ಕನ್ನಡದಲ್ಲೂ ಬರಲಿದೆ ಇಳಯರಾಜ ಬಯೋಪಿಕ್: ಚಿತ್ರದಲ್ಲಿ ಇರಲಿದೆ ಕನ್ನಡದ ನಂಟು

    ಕನ್ನಡದಲ್ಲೂ ಬರಲಿದೆ ಇಳಯರಾಜ ಬಯೋಪಿಕ್: ಚಿತ್ರದಲ್ಲಿ ಇರಲಿದೆ ಕನ್ನಡದ ನಂಟು

    ನಿನ್ನೆಯಷ್ಟೇ ಸಂಗೀತ ಮಾಂತ್ರಿಕ ಇಳಯರಾಜ ಅವರ ಬಯೋಪಿಕ್‍ ಚಿತ್ರಕ್ಕೆ ಚಾಲನೆ ದೊರೆತಿದೆ. ಮೂಲ ಅದು ತಮಿಳಿನಲ್ಲಿ ನಿರ್ಮಾಣವಾಗುತ್ತಿದ್ದರೂ, ಕನ್ನಡದಲ್ಲೂ ಈ ಚಿತ್ರವನ್ನು ತರುವ ಯೋಜನೆ ಹಾಕಿಕೊಂಡಿದೆ ಚಿತ್ರತಂಡ. ಕನ್ನಡದಲ್ಲೂ (Kannada) ಇಳಯರಾಜ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಸಾಕಷ್ಟು ಚಿತ್ರಗಳಿವೆ. ಕನ್ನಡದೊಂದಿಗೆ ಅವರ ಜೀವನ ಬೆಸೆದುಕೊಂಡಿದೆ. ಹಾಗಾಗಿ ಕನ್ನಡದಲ್ಲೂ ಚಿತ್ರವನ್ನು ಡಬ್ ಮಾಡುತ್ತಾರಂತೆ. ಈ ಸಿನಿಮಾದ ಕಥೆಯಲ್ಲಿ ಕನ್ನಡಿಗರು ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    ilayaraja biopic 2

    ನಿನ್ನೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಚಿತ್ರದ ಫಸ್ಟ್ ಲುಕ್ ಅನ್ನು ಕಮಲ್ ಹಾಸನ್ (Kamal Haasan) ಮತ್ತು ಇಳಯರಾಜ ಅವರೇ ಬಿಡುಗಡೆ ಮಾಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಈ ಚಿತ್ರಕ್ಕೆ ಇಳಯರಾಜ ಅವರೇ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

    ilayaraja biopic 1

    ಇಳಯರಾಜ ಅವರ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಸಹಜ ಕುತೂಹಲ ಎಲ್ಲರಲ್ಲೂ ಇತ್ತು. ನಟ ಧನುಷ್ (Dhanush) ಅವರು ಆ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದು ಕೂಡ ನಿಜವಾಗಿದೆ. ಧನುಷ್ ಅವರೇ ಇಳಯರಾಜ ಪಾತ್ರವನ್ನು ಮಾಡಲಿದ್ದಾರೆ. ಇಂದು ಅವರು ಕೂಡ ಸಮಾರಂಭಕ್ಕೆ ಆಗಮಿಸಿದ್ದರು.

    ilayaraja 1

    ತಮ್ಮ ತಂದೆಯ ಜೀವನವನ್ನು ಆಧರಿಸಿದ ಸಿನಿಮಾ ಮಾಡುವುದಾದರೆ, ಆ ಪಾತ್ರದಲ್ಲಿ ನಾನು ಧನುಷ್ ಅವರನ್ನು ಕಾಣಲು ಬಯಸುತ್ತೇನೆ ಎಂದು ಈ ಹಿಂದೆಯೇ ಇಳಯರಾಜ (Ilayaraja) ಅವರ ಪುತ್ರ ಯುವನ್ ಶಂಕರ್ ರಾಜ್ ಹೇಳಿದ್ದರು. ತಮ್ಮ ತಂದೆಯನ್ನು ಧನುಷ್ ಅವರಲ್ಲಿ ಕಾಣಲು ಹೆಚ್ಚು ಉತ್ಸುಕನಾಗಿದ್ದೇನೆ ಎಂದೂ ಅವರು ಹೇಳಿಕೊಂಡಿದ್ದರು. ಅದು ಈಗ ನಿಜವಾಗಿದೆ.

     

    ಈ ಚಿತ್ರಕ್ಕೆ ಇಳಯರಾಜ ಎಂದು ಹೆಸರಿಡಲಾಗಿದ್ದು, ಅರುಣ್ ಮಾದೇಶ್ವರನ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ನೀರವ್ ಶಾ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪಿಕೆ ಪ್ರೈಮ್ ಪ್ರೊಡಕ್ಷನ್ ಮತ್ತು ಮರ್ಕ್ಯೂರಿ ಮೂವಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

  • ಇಳಯರಾಜ ಬಯೋಪಿಕ್: ಚಿತ್ರಕ್ಕೆ ಚಾಲನೆ ನೀಡಿದ ಕಮಲ್ ಹಾಸನ್

    ಇಳಯರಾಜ ಬಯೋಪಿಕ್: ಚಿತ್ರಕ್ಕೆ ಚಾಲನೆ ನೀಡಿದ ಕಮಲ್ ಹಾಸನ್

    ಸಂಗೀತದ ಜೀವಂತ ದಂತಕಥೆ ಇಳಯರಾಜ ಅವರ ಬಯೋಪಿಕ್ (Biopic) ಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಫಸ್ಟ್ ಲುಕ್ ಅನ್ನು ಕಮಲ್ ಹಾಸನ್ (, Kamal Haasan) ಮತ್ತು ಇಳಯರಾಜ ಅವರೇ ಬಿಡುಗಡೆ ಮಾಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಈ ಚಿತ್ರಕ್ಕೆ ಇಳಯರಾಜ ಅವರೇ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

    ilayaraja biopic 1

    ಇಳಯರಾಜ ಅವರ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಸಹಜ ಕುತೂಹಲ ಎಲ್ಲರಲ್ಲೂ ಇತ್ತು. ನಟ ಧನುಷ್ (Dhanush) ಅವರು ಆ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದು ಕೂಡ ನಿಜವಾಗಿದೆ. ಧನುಷ್ ಅವರೇ ಇಳಯರಾಜ ಪಾತ್ರವನ್ನು ಮಾಡಲಿದ್ದಾರೆ. ಇಂದು ಅವರು ಕೂಡ ಸಮಾರಂಭಕ್ಕೆ ಆಗಮಿಸಿದ್ದರು.

    dhanush

    ತಮ್ಮ ತಂದೆಯ ಜೀವನವನ್ನು ಆಧರಿಸಿದ ಸಿನಿಮಾ ಮಾಡುವುದಾದರೆ, ಆ ಪಾತ್ರದಲ್ಲಿ ನಾನು ಧನುಷ್ ಅವರನ್ನು ಕಾಣಲು ಬಯಸುತ್ತೇನೆ ಎಂದು ಈ ಹಿಂದೆಯೇ ಇಳಯರಾಜ (Ilayaraja) ಅವರ ಪುತ್ರ ಯುವನ್ ಶಂಕರ್ ರಾಜ್ ಹೇಳಿದ್ದರು. ತಮ್ಮ ತಂದೆಯನ್ನು ಧನುಷ್ ಅವರಲ್ಲಿ ಕಾಣಲು ಹೆಚ್ಚು ಉತ್ಸುಕನಾಗಿದ್ದೇನೆ ಎಂದೂ ಅವರು ಹೇಳಿಕೊಂಡಿದ್ದರು. ಅದು ಈಗ ನಿಜವಾಗಿದೆ.

    ಈ ಚಿತ್ರಕ್ಕೆ ಇಳಯರಾಜ ಎಂದು ಹೆಸರಿಡಲಾಗಿದ್ದು, ಅರುಣ್ ಮಾದೇಶ್ವರನ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ನೀರವ್ ಶಾ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪಿಕೆ ಪ್ರೈಮ್ ಪ್ರೊಡಕ್ಷನ್ ಮತ್ತು ಮರ್ಕ್ಯೂರಿ ಮೂವಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

  • ಇಳಯರಾಜ ಬಯೋಪಿಕ್: ನಾಳೆಯಿಂದ ಚಿತ್ರಕ್ಕೆ ಚಾಲನೆ

    ಇಳಯರಾಜ ಬಯೋಪಿಕ್: ನಾಳೆಯಿಂದ ಚಿತ್ರಕ್ಕೆ ಚಾಲನೆ

    ಭಾರತೀಯ ಸಿನಿಮಾ ರಂಗದ ಹೆಸರಾಂತ ಸಂಗೀತ ನಿರ್ದೇಶಕ ಇಳಯರಾಜ ಅವರ ಬಯೋಪಿಕ್ ಸದ್ದಿಲ್ಲದೇ ಸೆಟ್ಟೇರುತ್ತಿದೆ. ನಾಳೆಯಿಂದ ಚಿತ್ರಕ್ಕೆ ಚಾಲನೆ ಸಿಗಲಿದೆ ಎಂದು ಹೇಳಲಾಗುತ್ತಿದ್ದು, ಮುಹೂರ್ತದ ದಿನದಿಂದಲೇ ಚಿತ್ರೀಕರಣಕ್ಕೂ ಹೊರಡಲಿದೆಯಂತೆ ಚಿತ್ರತಂಡ. ಇಳಯರಾಜ ಅವರ ಪಾತ್ರವನ್ನು ಧನುಷ್ (Dhanush) ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಧಿಕೃತವಾಗಿ ಮಾಹಿತಿ ಲಭ್ಯವಿಲ್ಲ.

    Dhanush 1

    ತಮ್ಮ ತಂದೆಯ ಜೀವನವನ್ನು ಆಧರಿಸಿದ ಸಿನಿಮಾ ಮಾಡುವುದಾದರೆ, ಆ ಪಾತ್ರದಲ್ಲಿ ನಾನು ಧನುಷ್ ಅವರನ್ನು ಕಾಣಲು ಬಯಸುತ್ತೇನೆ ಎಂದು ಈ ಹಿಂದೆಯೇ ಇಳಯರಾಜ (Ilayaraja) ಅವರ ಪುತ್ರ ಯುವನ್ ಶಂಕರ್ ರಾಜ್ ಹೇಳಿದ್ದರು. ತಮ್ಮ ತಂದೆಯನ್ನು ಧನುಷ್ ಅವರಲ್ಲಿ ಕಾಣಲು ಹೆಚ್ಚು ಉತ್ಸುಕನಾಗಿದ್ದೇನೆ ಎಂದೂ ಅವರು ಹೇಳಿಕೊಂಡಿದ್ದರು.

    dhanush

    ಇದೀಗ ಸಿಗುತ್ತಿರುವ ಮಾಹಿತಿಯ ಪ್ರಕಾರ, ಇಳಯರಾಜ ಅವರ ಬಯೋಪಿಕ್ ಅನ್ನು ಸ್ವತಃ ಯುವನ್ ಶಂಕರ್ ರಾಜ್ (Yuvan Shankar Raj) ಅವರೇ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ನಾನಾ ನಿರ್ದೇಶಕರ ಜೊತೆಯೂ ಯುವನ್ ಮಾತನಾಡಿದ್ದಾರೆ ಎನ್ನುವುದು ವರ್ತಮಾನ.

     

    ಈಗಾಗಲೇ ಧನುಷ್ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರೇ ಒಂದು ಸಿನಿಮಾವನ್ನೂ ನಿರ್ದೇಶನ ಮಾಡುತ್ತಿದ್ದಾರೆ. ಜೊತೆಗೆ ಅದೇ ಸಿನಿಮಾದಲ್ಲೂ ಅವರು ನಟಿಸುತ್ತಿದ್ದಾರೆ. ಈ ನಡುವೆಯೇ ಅವರು ಇಳಯರಾಜ ಅವರ ಚಿತ್ರಕ್ಕೂ ಕಾಲ್ ಶೀಟ್ ನೀಡಲಿದ್ದಾರಂತೆ.

  • ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ಗಾಯಕಿ ವಿಧಿವಶ

    ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ಗಾಯಕಿ ವಿಧಿವಶ

    ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ಭವತಾರಿಣಿ (Bhavatarini) ಜನವರಿ 25ರಂದು ವಿಧಿವಶರಾಗಿದ್ದಾರೆ (Passed away). ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

    Bhavatarini 1

    ಚಿಕಿತ್ಸೆ ಪಡೆಯುವುದಕ್ಕಾಗಿ ಅವರು ಶ್ರೀಲಂಕಾಗೆ ತೆರಳಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಶ್ರೀಲಂಕಾದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಪಾರ್ಥಿವ ಶರೀರವನ್ನು ಚೆನ್ನೈಗೆ ತರಲಾಗುತ್ತಿದೆ ಎಂದು ಅವರ ಪತಿ ಬಾಲಾಜಿ ತಿಳಿಸಿದ್ದಾರೆ.

     

    ಇಳಯರಾಜ ಅವರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದು ಯುವನ್ ಶಂಕರ್ ರಾಜಾ ಮತ್ತು ಭವತಾರಿಣಿ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಯುವನ್ ಶಂಕರ್ ಸಂಗೀತ ನಿರ್ದೇಶಕರಾಗಿದ್ದರೆ ಭವತಾರಿಣಿ ಗಾಯಕಿ. ಮಾಯಿಲ್ ಪೋಲ ಪೊನ್ನು ಒನ್ನು ಚಿತ್ರಕ್ಕಾಗಿ ಇವರಿಗೆ ರಾಷ್ಟ್ರೀಯ ಪುರಸ್ಕಾರ ಕೂಡ ಲಭಿಸಿತ್ತು.