Tag: ಉಗ್ರ ಸಂಘಟನೆ

  • ಸಿರಿಯಾ ಘರ್ಷಣೆಯಲ್ಲಿ ಐಸಿಸ್ ನಾಯಕ ಸಾವು

    ಸಿರಿಯಾ ಘರ್ಷಣೆಯಲ್ಲಿ ಐಸಿಸ್ ನಾಯಕ ಸಾವು

    ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಗ್ರೂಪ್ ಗುರುವಾರ ತನ್ನ ನಾಯಕ ಅಬು ಹುಸೇನಿ ಅಲ್ ಖುರೇಶಿ (Abu al-Hussein al-Husseini al-Qurashi) ಸಾವನ್ನಪ್ಪಿರುವುದಾಗಿ ದೃಢಪಡಿಸಿದೆ. ವಾಯುವ್ಯ ಸಿರಿಯಾದಲ್ಲಿ (Syria) ನಡೆದ ಘರ್ಷಣೆಯಲ್ಲಿ ಐಸಿಸ್ ನಾಯಕ (ISIS Leader) ಸಾವನ್ನಪ್ಪಿರುವುದಾಗಿ ತಿಳಿಸಿದೆ.

    ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಂಘಟನೆ ವಕ್ತಾರರು, ಇಡ್ಲಿಬ್ ಪ್ರಾಂತ್ಯದಲ್ಲಿ ಜಿಹಾದಿ ಗುಂಪು ಹಯಾತ್ ತಹ್ರೀರ್ ಅಲ್ ಶಾಮ್‌ನೊಂದಿಗೆ ನಾಯಕ ನೇರ ಸಂರ್ಘರ್ಷ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಗೆ ಕೊಲ್ಲಲ್ಪಟ್ಟಿರುವುದಾಗಿ ತಿಳಿಸಿದ್ದಾರೆ.

    ISIS 2

    ನಾಯಕನ ಸಾವಿನ ಬಳಿಕ ಉಗ್ರ ಸಂಘಟನೆ ಹೊಸ ನಾಯಕನನ್ನು ಘೋಷಿಸಿದೆ. ಅಬು ಹಫ್ಸನ್ ಅಲ್ ಹಶಿಮಿ ಅಲ್ ಖುರೇಶಿ ಸಂಘಟನೆಯ 5ನೇ ನಾಯಕನಾಗಿ ಮುಂದುವರಿಯಲಿದ್ದಾನೆ ಎಂದು ಹೇಳಿದೆ. ಇದನ್ನೂ ಓದಿ: Expressway ರೂಲ್ಸ್ ಬ್ರೇಕ್ – ಚಾಲಕರಿಂದ 7 ಲಕ್ಷ ರೂ. ದಂಡ ವಸೂಲಿ

    ಅಬು ಹುಸೇನಿ ಅಲ್ ಖುರೇಶಿ ಸಾವಿಗೂ ಮುನ್ನ ಇನ್ನೂ ಮೂವರು ಐಸಿಸ್ ನಾಯಕರು ಸಾವನ್ನಪ್ಪಿದ್ದಾರೆ. ಅಬು ಹಸನ್ ಅಲ್ ಹಶಿಮಿ ಅಲ್ ಖುರೇಶಿ ಕಳೆದ ನವೆಂಬರ್‌ನಲ್ಲಿ, ಅಬು ಇಬ್ರಾಹಿಂ ಅಲ್ ಖುರೇಶಿಯನ್ನು 2022ರ ಏಪ್ರಿಲ್‌ನಲ್ಲಿ ಹಾಗೂ ಅಬು ಬಕರ್ ಅಲ್ ಬಗ್ದಾದಿ 2019ರ ಅಕ್ಟೋಬರ್‌ನಲ್ಲಿ ಕೊಲ್ಲಲಾಗಿತ್ತು. ಇದನ್ನೂ ಓದಿ: ಪೊಲೀಸ್‌ ವರ್ಗಾವಣೆ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರಿಗೆ ಏನು ಕೆಲಸ? – ಹೆಚ್‌ಡಿಕೆಯಿಂದ ಮಿಡ್‌ನೈಟ್‌ ಬಾಂಬ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಗ್ರ ಸಂಘಟನೆಗೆ ಯುವಕರ ನೇಮಕ – ವ್ಯಕ್ತಿಗೆ 5 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂ. ದಂಡ

    ಉಗ್ರ ಸಂಘಟನೆಗೆ ಯುವಕರ ನೇಮಕ – ವ್ಯಕ್ತಿಗೆ 5 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂ. ದಂಡ

    ತಿರುವನಂತಪುರಂ: ಉಗ್ರ ಸಂಘಟನೆಗೆ ಯುವಕರನ್ನು ನೇಮಿಸುತ್ತಿದ್ದ ವ್ಯಕ್ತಿಗೆ ರಾಷ್ಟ್ರೀಯ ತನಿಖಾ ದಳ(NIA) ವಿಶೇಷ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ (Jail) ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ

    ನ್ಯಾಯಾಧೀಶ ಅನಿಲ್ ಕೆ. ಭಾಸ್ಕರ್ ಈ ತೀರ್ಪು ಪ್ರಕಟಿಸಿದ್ದಾರೆ. ವಂಡೂರ್ ಇಸ್ಲಾಮಿಕ್ ಸ್ಟೇಟ್(Islamic State) ನೇಮಕಾತಿ ಪ್ರಕರಣದಲ್ಲಿ ಕೇರಳದ ಕೋಝಿಕೋಡ್‍ನ ಕೊಡುವಳ್ಳಿ ಮೂಲದ ಶೈಬು ನಿಹಾರ್‌ನನ್ನು ಕೊಚ್ಚಿಯ ವಿಶೇಷ ಎನ್‍ಐಎ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

    jail

    ವಂದೂರು ಪೊಲೀಸ್ ಠಾಣೆಯಲ್ಲಿ ಶೈಬು ನಿಹಾರ್ ವಿರುದ್ಧ 2017ರ ನವೆಂಬರ್ 6ರಲ್ಲಿ ಪ್ರಕರಣ ದಾಖಲಾಗಿತ್ತು. 2015 ಹಾಗೂ 2017ರಲ್ಲಿ 7 ಜನ ಐಸಿಸ್ ಸಂಘಟನೆ ಸೇರುವಲ್ಲಿ ಈತನ ಪಾತ್ರ ಇರುವುದು ಬಹಿರಂಗವಾದ ಬಳಿಕ ಈ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ಗಾಂಧಿ ಕುಟುಂಬದವರೆಲ್ಲಾ ಬಂದರೂ ಏನೂ ಪರಿವರ್ತನೆ ಆಗಲ್ಲ: HDK

    court getty

    ಘಟನೆಗೆ ಸಂಬಂಧಿಸಿ ತನಿಖೆ ನಡೆಸಲು 2018ರ ಮೇನಲ್ಲಿ ಗೃಹ ಸಚಿವಾಲಯವು ಎನ್‍ಐಗೆ ಸೂಚಿಸಿತ್ತು. ಪ್ರಕರಣ ದಾಖಲಾದ ಬಳಿಕ 6 ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಲ್ಲದ್ ಮನೆ ಬಳಿಯಿದ್ದ ಬಾವಿ ನಾಪತ್ತೆ- ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಮುಖಂಡ

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನ ಶಂಕಿತ ಉಗ್ರರ ಕೇಸ್: ಭಾರತದ ಮೇಲೆ ವಿಧ್ವಂಸಕ ದಾಳಿಗೆ ಅಲ್‌ಖೈದಾದಿಂದ ಟ್ರೈನಿಂಗ್‌

    ಬೆಂಗ್ಳೂರಿನ ಶಂಕಿತ ಉಗ್ರರ ಕೇಸ್: ಭಾರತದ ಮೇಲೆ ವಿಧ್ವಂಸಕ ದಾಳಿಗೆ ಅಲ್‌ಖೈದಾದಿಂದ ಟ್ರೈನಿಂಗ್‌

    ಬೆಂಗಳೂರು: ಸಿಸಿಬಿಯಿಂದ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ.

    ಇತ್ತೀಚೆಗೆಷ್ಟೇ ಬೆಂಗಳೂರಿನಲ್ಲಿ ಅಲ್‌ಖೈದಾ ಉಗ್ರ ಸಂಘಟನೆಗಳ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ಕುರಿತು ತನಿಖೆ ನಡೆಯುತ್ತಿದ್ದ ವೇಳೆ ಶಂಕಿತರು ಸ್ಫೋಟಕ ಮಾಹಿತಿಯನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಮಹದಾಯಿ ವಿಷಯದಲ್ಲಿ ಮತ್ತೆ ಗೋವಾ ಕ್ಯಾತೆ – ಕರ್ನಾಟಕದ ವಿರುದ್ಧ ತುರ್ತು ತನಿಖೆಗೆ ಶಾಸಕ ಮನವಿ

    TERROR 3

    ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ: 2015ರಲ್ಲಿ ಅಲ್ ಖೈದಾ ತನ್ನ ಅಂತಿಮ ಬ್ಯಾಚ್‌ಗೆ ತರಬೇತಿ ನೀಡಿತ್ತು. ನಂತರ ಅಲ್‌ಖೈದಾ ಹೊಸ ಬ್ಯಾಚ್‌ಗೆ ಟ್ರೈನಿಂಗ್‌ ನೀಡಲು ಹುಟುಕಾಟ ನಡೆಸಿತ್ತು. ಇದೇ ವೇಳೆ ಸಂಘಟನೆಯ ಹೆಡ್ಲರ್‌ಗಳು ಅಖ್ತರ್ ಹುಸೇನ್ ಅನ್ನು ಸಂಪರ್ಕಿಸಿದ್ದರು. ಇವನಿಗೆ ಅಲ್‌ಖೈದಾ ಸಂಘಟನೆಗೆ ಹುಡುಗರನ್ನ ಸೇರಿಸುವಂತೆ ಸೂಚನೆ ನೀಡಿದ್ದರು. ಅದಕ್ಕಾಗಿ ಕಾಶ್ಮೀರದಲ್ಲಿ ಕೋಮು ಗಲಭೆ ನಡೆಸಿ ಅಲ್ಲಿಂದ ಅಫ್ಘಾನಿಸ್ತಾನಕ್ಕೆ ತೆರಳಲು ಪ್ಲಾನ್ ಮಾಡಿದ್ದರು. ಅಫ್ಘಾನಿಸ್ತಾನದಲ್ಲಿ ಉಗ್ರ ಸಂಘಟನೆಗಳಿಂದ ತರಬೇತಿ ಪಡೆಯಲೂ ಯೋಜನೆ ರೂಪಿಸಿದ್ದರು.

    TERROR

    ಉಗ್ರ ಸಂಘಟನೆಗಳಿಂದ ತರಬೇತಿ ಪಡೆದು ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಬೆಂಗಳೂರಿನಲ್ಲಿ ಗೇಮ್ ಪ್ಲ್ಯಾನ್ ಮಾಡಿಕೊಂಡಿದ್ದರು. ಇದಕ್ಕಾಗಿ ಅಖ್ತರ್ ಹುಸೇನ್ ಲಸ್ಕರ್ ಹಾಗೂ ಎಂ.ಡಿ ಹುಸೇನ್ ಹೆಸರಿನಲ್ಲಿ ಎರಡು ಫೇಸ್‌ಬುಕ್ ನಕಲಿ ಖಾತೆಗಳನ್ನು ಓಪನ್ ಮಾಡಿದ್ದರು. ಇದನ್ನೂ ಓದಿ: ನಾಲ್ವರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ತಾಯಿ

    TERROR 2

    ಅಖ್ತರ್ ಎಂ.ಡಿ.ಹುಸೇನ್ ಹೆಸರಿನ ಖಾತೆ ಮೂಲಕ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಪ್ರಚೋದನೆ ನೀಡುವ ಪೋಸ್ಟ್ಗಳನ್ನು ಹಾಕುತ್ತಿದ್ದನು. ಜೊತೆಗೆ ಅಲ್‌ಖೈದಾ ಉಗ್ರ ಸಂಘಟನೆಯ ಪ್ರಚೋದನಕಾರಿ ಹೇಳಿಕೆಗಳ ವೀಡಿಯೋ, ಉಗ್ರರ ಫೋಟೋಗಳು ಸೇರಿದಂತೆ ಪ್ರತಿಯೊಂದು ಚಟುವಟಿಕೆಗಳ ವೀಡಿಯೋಗಳನ್ನ ಅಪ್ಲೋಡ್ ಮಾಡುತ್ತಿದ್ದ.

    ಇತ್ತೀಚೆಗೆ ಕಾಶ್ಮೀರದಲ್ಲಿ ಮುಸ್ಲಿಮರ ಮುಂದೆ ರೂಟ್ ಮಾರ್ಚ್ ಮಾಡುವ ಫೋಟೋ ಸಹ ಅಪ್ಲೋಡ್ ಮಾಡಿ ಪ್ರಚೋದನೆ ನೀಡಿದ್ದ. ಈ ವೇಳೆ ಅಲ್ ಖೈದಾ ಹ್ಯಾಂಡ್ಲರ್‌ಗಳ ಸಂಪರ್ಕ ಹೆಚ್ಚಾಗಿದೆ ಎಂದು ಸಿಸಿಬಿ ವಿಚಾರಣೆ ವೇಳೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾನೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಗ್ರರ ಮೂವರು ಸಹಚರರು ಅರೆಸ್ಟ್

    ಉಗ್ರರ ಮೂವರು ಸಹಚರರು ಅರೆಸ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮಿರದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯನ್ನು ಪೊಲೀಸರು ಭೇದಿಸಿದ್ದು, ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ.

    ಪೊಲೀಸರು ನೀಡಿದ ಹೇಳಿಕೆಯ ಪ್ರಕಾರ, ಪುಲ್ವಾಮಾ ಪೊಲೀಸರು 55 ಆರ್‍ಆರ್ ಮತ್ತು 182/183 ಬಿಎನ್ ಸಿಆರ್‍ಪಿಎಫ್ ಜೊತೆಗೆ ಜೆಎಂನ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ. ಬಂಧಿತ ಸಹಚರರನ್ನು ಜಂಡ್ವಾಲ್‍ನ ಓವೈಸ್ ಅಲ್ತಾಫ್, ಗುಡೂರಿನ ಅಕಿಬ್ ಮಂಜೂರ್, ಕರಿಮಾಬಾದ್ ಪುಲ್ವಾಮಾದ ವಸೀಮ್ ಅಹ್ಮದ್ ಪಂಡಿತ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

    FotoJet 5 8

    ಈ ಮೂವರು ಜೆಇಎಂ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದು, ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಬೆಂಬಲ ಮತ್ತು ಸಾರಿಗೆಯನ್ನು ಒದಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 01 ಎಕೆ ರೈಫಲ್ 03 ನಿಯತಕಾಲಿಕೆಗಳು, 69 ಎಕೆ ಗುಂಡುಗಳು ಮತ್ತು 01 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

    INDIAN ARMY 1

    ಎಫ್‍ಐಆರ್ ನಂ. 77/2022 ಕಾನೂನಿನ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ಪುಲ್ವಾಮಾ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ವರ್ಷ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯ ವಿವಿಧ ಭಾಗಗಳಿಂದ ಜನವರಿಯಿಂದ 162 ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ.

  • ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಶಿರಸಿಯ ಮೌಲ್ವಿ ಹೆಸರಿನಲ್ಲಿ ಉಗ್ರ ಸಂಘಟನೆಯಿಂದ ಸಿಮ್ ಬಳಕೆ- ಎನ್‍ಐಎಯಿಂದ ತನಿಖೆ

    ಕಾರವಾರ: ಉಗ್ರ ಸಂಘಟನೆಗೆಗಳ ಸಂಘಟನೆಗಾಗಿ ಶಿರಸಿ ತಾಲೂಕಿನ ಬನವಾಸಿಯ ಮೌಲ್ವಿ ಹೆಸರಿನಲ್ಲಿ ಸಿಮ್ ಬಳಕೆಯಾಗಿದೆ. ಈ ಕುರಿತು ಶಿರಸಿ ತಾಲೂಕಿನ ಬನವಾಸಿ ಮೂಲದ ಮೌಲ್ವಿ ಅಬ್ದುಲ್ ಮತೀನ್‍ನನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ತನಿಖೆ ನಡೆಸಿ ಬಿಡುಗಡೆಗೊಳಿಸಿದ್ದಾರೆ.

    ಅಬ್ದುಲ್ ಮತೀನ್ ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಅಧ್ಯಯನ ಮಾಡುತ್ತಿದ್ದ, ಈ ವೇಳೆಯಲ್ಲಿ ಈತನೊಂದಿಗೆ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳು ಸಹ ಮದರಸಾದಲ್ಲಿ ಓದುತ್ತಿದ್ದು, ಈ ವೇಳೆ ಶಿರಸಿಯ ಅಬ್ದುಲ್ ಮತೀನ್ ತನ್ನ ಸಹಪಾಠಿಗಳಾದ ಪಶ್ಚಿಮ ಬಂಗಾಳದ ವಿದ್ಯಾರ್ಥಿಗಳಿಗೆ ತನ್ನದೇ ಹೆಸರಿನ ದಾಖಲೆಗಳಲ್ಲಿ ಸಿಮ್ ಕೊಡಿಸಿದ್ದ.

    sim card nano sim micro sim mini sim

    ಈತ ವಿದ್ಯಾಭ್ಯಾಸ ಮುಗಿಸಿ ಮಂಗಳೂರಿನ ಮದರಸಾ ಒಂದರಲ್ಲಿ ಸಹಾಯಕ ಮೌಲ್ವಿಯಾಗಿ ಕಾರ್ಯ ನಿರ್ವಹಿಸುತಿದ್ದ. ಆದರೇ ಈತ ತನ್ನ ಸ್ನೇಹಿತರಿಗೆ ತನ್ನ ಹೆಸರಿನಲ್ಲಿ ಸಿಮ್ ಕೊಡಿಸಿದ್ದು, ಈ ಸಿಮ್‍ಗಳು ಪಶ್ಚಿಮ ಬಂಗಾಳ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಬಳಕೆಯಾಗುತ್ತಿವೆ. ಈತನ ಹೆಸರಿನಲ್ಲಿರುವ ಸಿಮ್ ನಿಷೇಧಿತ ಜೆ.ಎಮ್.ಬಿ ಸಂಘಟನೆಯ ಸಂಘಟನೆಗೂ ಬಳಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿ.ಸಿ.ಬಿ, ಇಡಿ, ಎನ್.ಐ.ಎ ಕೂಡ ಈತನನ್ನು ಕರೆಯಿಸಿ ಹೆಚ್ಚಿನ ತನಿಖೆ ಕೈಗೊಂಡಿದೆ.

    terrorist

    ಶಿರಸಿಯ ಬನವಾಸಿ ಮೌಲ್ವಿ ಹೆಸರಿನಲ್ಲಿ ಒಂಬತ್ತಕ್ಕೂ ಹೆಚ್ಚು ಸಿಮ್ ಬಳಕೆಯಾಗುತ್ತಿವೆ. ಇತನ ಹೆಸರಿನಲ್ಲಿ ಬಳಕೆಯಾಗುತ್ತಿರುವ ಸಿಮ್‍ಗಳು ಪಶ್ಚಿಮ ಬಂಗಾಳ, ಜಮ್ಮು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಕ್ರಿಯವಾಗಿವೆ. ತನಿಖೆ ವೇಳೆ ತಾನು ಉಡುಪಿ ಜಿಲ್ಲೆಯ ಬೈಂದೂರಿನ ಮದರಸಾದಲ್ಲಿ ಕಲಿಯುತಿದ್ದಾಗ ತನ್ನ ಸ್ನೇಹಿತರಿಗೆ ತನ್ನ ದಾಖಲೆ ಮೂಲಕ ಅಬ್ದುಲ್ ಮತೀನ್ ಸಿಮ್ ಖರೀದಿಸಿ ನೀಡಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಯಾರು ಯಾರಿಗೆ ಸಿಮ್ ನೀಡಿದ್ದೇನೆ ಎಂಬುವ ಮಾಹಿತಿಯನ್ನು ಕೇಂದ್ರ ತನಿಖಾ ಸಂಸ್ಥೆಗೆ ಮಾಹಿತಿ ನೀಡಿದ್ದಾನೆ.

    Police Jeep 1

    ಕಳೆದ ಆರು ತಿಂಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ-ಅಂಕೋಲ ಗಡಿಯಲ್ಲಿ ನಿಷೇಧಿತ ಸೆಟಲೈಟ್ ಫೋನ್‍ಗಳು ಸಕ್ರಿಯವಾಗಿದ್ದು, ಐದಕ್ಕೂ ಹೆಚ್ಚು ಬಾರಿ ಬಳಸಲಾಗಿದೆ. ಈ ಕುರಿತು ಸಹ ಜಿಲ್ಲಾ ಪೊಲೀಸರು, ಸಿಸಿಬಿ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ಕಾರವಾರ, ಯಲ್ಲಾಪುರ ಭಾಗದ ಕಾಡುಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಆದರೇ ಇದರ ಬಗ್ಗೆ ಹೆಚ್ಚಿನ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಬರಿಗೈಯಲ್ಲಿ ಹಿಂತಿರುಗುವಂತಾಗಿತ್ತು.

  • ದಾವೂದ್ ನಮ್ಮಲ್ಲೇ ಇದ್ದಾನೆ – ಒಪ್ಪಿಕೊಂಡ ಪಾಕ್

    ದಾವೂದ್ ನಮ್ಮಲ್ಲೇ ಇದ್ದಾನೆ – ಒಪ್ಪಿಕೊಂಡ ಪಾಕ್

    ಇಸ್ಲಾಮಾಬಾದ್: ಭೂಗತ ಲೋಕದ ಪಾತಾಕಿ ದಾವೂದ್ ಇಬ್ರಾಹಿಂ ನಮ್ಮಲ್ಲೇ ಇದ್ದಾನೆ ಎಂದು ಪಾಕಿಸ್ತಾನ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ.

    ಭಾರತದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡು ಪಾಕಿಸ್ತಾನದಲ್ಲಿ ಅವಿತು ಕೂತಿದ್ದಾನೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಮಾತನ್ನು ಪಾಕಿಸ್ತಾನ ತಳ್ಳಿ ಹಾಕಿಕೊಂಡು ಬಂದಿತ್ತು. ಆದರೆ ಇದೀಗ ಸ್ವತಃ ಪಾಕಿಸ್ತಾನವೇ ದಾವೂದ್ ನಮ್ಮ ಕರಾಚಿಯಲ್ಲೇ ಇದ್ದಾನೆ ಎಂದು ಒಪ್ಪಿಕೊಂಡಿದೆ.

    DAWOOD

    ಆರ್ಥಿಕ ನಿರ್ಬಂಧದಿಂದ ಹೊರ ಬರಲು ಪಾಕಿಸ್ತಾನ ತಮ್ಮ ದೇಶದಲ್ಲಿ ಸಕ್ರಿಯವಾಗಿರುವ 88 ಉಗ್ರ ಸಂಘಟನೆಗಳನ್ನು ಬ್ಯಾನ್ ಮಾಡುವುದಾಗಿ ಹೇಳಿಕೊಂಡಿತ್ತು. ಇದರ ಭಾಗವಾಗಿ ದಾವೂದ್ ನಮ್ಮಲ್ಲಿಯೇ ಇದ್ದಾನೆ ಎಂದು ಒಪ್ಪಿಕೊಂಡಿದ್ದು, ಪಾಕಿಸ್ತಾನ ಸೇರಿದಂತೆ 14 ರಾಷ್ಟ್ರಗಳ ಪಾಸ್‍ಪೋರ್ಟ್‍ಗಳು ದಾವೂದ್ ಬಳಿ ಇವೆ ಎಂದು ಮಾಹಿತಿ ನೀಡಿದೆ. ಅಲ್ಲದೆ ದಾವೂದ್ ಆಸ್ತಿ, ಬ್ಯಾಂಕ್ ಅಕೌಂಟ್ ಸೀಜ್ ಮಾಡಿ ಆರ್ಥಿಕ ದಿಗ್ಬಂಧನ ಹೇರುತ್ತೇವೆ ಎಂದೂ ಕೂಡ ಹೇಳಿದೆ.

    pakistan 2

    ಪ್ಯಾರಿಸ್ ಮೂಲದ ಎಫ್‍ಎಟಿಎಫ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್) ಉಗ್ರರನ್ನು ಮಟ್ಟಹಾಕದೇ ಇದ್ದರೆ, ನಿಮ್ಮನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಈ ಹಿಂದೆ ಎಚ್ಚರಿಕೆ ನೀಡಿತ್ತು. ಇದರಿಂದ ಹೆದರಿದ ಪಾಕಿಸ್ತಾನ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜೆಯುಡಿಯ ಹಫೀಜ್ ಸಯೀದ್, ಜೆಇಎಂನ ಮಸೂದ್ ಅಜರ್ ಮತ್ತು ದಾವೂದ್ ಇಬ್ರಾಹಿಂ ಸೇರಿದಂತೆ 88 ಉಗ್ರ ಸಂಘಟನೆಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಲು ನೋಟಿಸ್ ನೀಡಿದೆ.

    dawood ibrahim

    ಉಗ್ರ ಸಂಘಟನೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಪ್ಯಾರೀಸ್ ಮೂಲದ ಎಫ್‍ಎಟಿಎಫ್ 2019ರಲ್ಲಿ ಪಾಕಿಸ್ತಾನಕ್ಕೆ ಡೆಡ್‍ಲೈನ್ ವಿಧಿಸಿತ್ತು. ಆದರೆ ಈ ಡೆಡ್‍ಲೈನ್ ಅನ್ನು ಕೊರೊನಾ ಕಾರಣದಿಂದಾಗಿ ಮುಂದಕ್ಕೆ ಹಾಕಲಾಗಿತ್ತು. ಈಗ ಈ ಗಡುವು ಮುಗಿದಿದ್ದು, ಕಪ್ಪುಪಟ್ಟಿಗೆ ಸೇರುವ ಭಯದಲ್ಲಿ ಪಾಕಿಸ್ತಾನ ತನ್ನ ಉದರದಲ್ಲಿ ಬಚ್ಚಿಟ್ಟಿಕೊಂಡಿದ್ದ ಉಗ್ರಕ್ರಿಮಿಗಳಿಗೆ ನೋಟಿಸ್ ನೀಡಿದೆ.

  • ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಬೆಂಗಳೂರು ಗಲಭೆ ಹಿಂದೆ ಉಗ್ರ ಸಂಘಟನೆಯ ನಂಟು – ಏನಿದು ಅಲ್ ಹಿಂದ್?

    ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಇಡೀ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದ್ದು, ಗಲಭೆಯ ಹಿಂದೆ ಉಗ್ರಗಾಮಿ ಸಂಘಟನೆಯ ಪಾತ್ರವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್‌ ಭೈರಸಂದ್ರದ ಗಲಭೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಮೀವುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಸಮೀವುದ್ದೀನ್‍ಗೆ ಆಲ್ ಹಿಂದ್ ಭಯೋತ್ಪಾದಕ ಸಂಘಟನೆಯ ನಂಟು ಇರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: 4 ತಿಂಗಳ ಅಂತರದಲ್ಲಿ ಎರಡು ಮಕ್ಕಳು ಹೇಗೆ ಸಾಧ್ಯ – ಪ್ರಥಮ್‌ ವಿರುದ್ಧ ಕೇಸ್‌ ದಾಖಲು

    DJ HALLI KG HALLI ACCUSED medium

    ಡಿಜೆ ಹಳ್ಳಿ ಗಲಭೆ ವೇಳೆ ಸಮೀವುದ್ದೀನ್ ಸ್ಥಳದಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸಮೀವುದ್ದೀನ್‍ನನ್ನು ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು, ಗಲಭೆ ಹಿಂದೆ ಉಗ್ರಗಾಮಿ ಸಂಘಟನೆ ಆಲ್ ಹಿಂದ್ ಪಾತ್ರವಿದೆಯಾ ಎಂಬ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.

    ಶಿವಾಜಿನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡ ರುದ್ರೇಶ್ ಕೊಲೆ ಆರೋಪಿಗಳ ಜೊತೆಗೂ ಸಮೀವುದ್ದೀನ್‍ಗೆ ನಿಕಟ ನಂಟಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

    CM BSY DJ HALLI KG HALLI medium

    ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಪಿಗಳು ಉಗ್ರ ಸಂಘಟನೆಗಳ ಜೊತೆಗೂ ಲಿಂಕ್ ಇಟ್ಕೊಂಡಿದ್ದಾರಾ ಅಂತ ಪರಿಶೀಲನೆ ನಡೆಸಲಾಗ್ತಿದೆ. ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಈಗಲೇ ಏನು ಹೇಳಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

    DJ HALLI 4

    ಏನಿದು ಅಲ್ ಹಿಂದ್?
    ಐಸಿಸ್ ಸಂಘಟನೆಯಿಂದ ಪ್ರೇರಣೆಗೊಂಡು ಸ್ಥಾಪನೆಯಾದ ಸಂಘಟನೆಯೇ ಅಲ್ ಹಿಂದ್. ಉಗ್ರರಾದ ಮೆಹಬೂಬ್ ಪಾಷಾ, ಮೊಯಿದ್ದೀನ್ ಕ್ವಾಜಾ ಈ ಸಂಘಟನೆಯನ್ನು ಸ್ಥಾಪಿಸಿದ್ದು, ದಕ್ಷಿಣ ಭಾರತದಲ್ಲಿ (ಕರ್ನಾಟಕ, ಕೇರಳ) ಸಕ್ರಿಯವಾಗಿದೆ. 200-250 ಉಗ್ರರು ಈ ಸಂಘಟನೆಯಲ್ಲಿ ಇರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದಷ್ಟೇ ಅಲ್ ಹಿಂದ್ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ ನೀಡಿತ್ತು.

    DJ HALLI 11

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಉಗ್ರರು ಹರಡಿರುವ ಶಂಕೆ ವ್ಯಕ್ತವಾಗಿದ್ದು, 2019ರಲ್ಲಿ ಬೆಂಗಳೂರಿನ ಗುರಪ್ಪನ ಪಾಳ್ಯದಲ್ಲಿ ನಡೆದಿದ್ದ ಹಲವು ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಹಿಂದೂ ನಾಯಕರ ಹತ್ಯೆಯಲ್ಲಿ ಅಲ್ ಹಿಂದ್ ಪಾತ್ರವಿದೆ. ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಲ್ ಹಿಂದ್‍ನ ಉಗ್ರ ಶಿವಮೊಗ್ಗದ ಅಬ್ದುಲ್ ಮತೀನ್ ಬಗ್ಗೆ ಮಾಹಿತಿ ನೀಡಿದರೆ 3 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ತೀರ್ಥಹಳ್ಳಿ ಉಗ್ರನ ಪತ್ತೆ ಮಾಡ್ಕೊಟ್ಟರೆ 3 ಲಕ್ಷ ಬಹುಮಾನ- ಎನ್‍ಐಎ ಘೋಷಣೆ

  • ಕರಾವಳಿ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆ ಕೆಲಸ ಮಾಡುತ್ತಿರುವುದು ಸತ್ಯ: ಶೋಭಾ ಕರಂದ್ಲಾಜೆ

    ಕರಾವಳಿ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆ ಕೆಲಸ ಮಾಡುತ್ತಿರುವುದು ಸತ್ಯ: ಶೋಭಾ ಕರಂದ್ಲಾಜೆ

    ಬೆಳಗಾವಿ: ಕರಾವಳಿಯ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಗಳು ಕೆಲಸ ಮಾಡುತ್ತಿರುವುದು ಸತ್ಯ. ಕೇರಳ ಹಾಗೂ ಬೇರೆ ಬೇರೆ ಭಾಗಗಳಿಂದ ಬಂದವರು ಸಮಾಜ ದ್ರೋಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಬಾಂಬ್ ಪತ್ತೆಯಾದ ಪ್ರಕರಣ ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

    ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಬಗ್ಗೆ ಯಾರು? ಏಕೆ? ಇಟ್ಟಿದ್ದಾರೆ. ಹೇಗೆ ಅಲ್ಲಿಗೆ ಬಂತು ಎಂಬ ಕುರಿತಾಗಿ ತನಿಖೆ ನಡೆಯಬೇಕಿದೆ. ಈಗಲೇ ಏನು ಹೇಳಲು ಸಾಧ್ಯವಿಲ್ಲ ಎಂದರು.

    MNG BLAST a copy

    ಕರಾವಳಿಯ ಭಾಗದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರೀಯವಾಗಿ ತೊಡಗಿಕೊಂಡಿವೆ. ಅಲ್ಲದೇ ಸ್ಥಳೀಯ ಮಂಗಳೂರಿಗರನ್ನು ಕೆಲವರು ದುರುಪಯೋಗ ಮಾಡುತ್ತಿದ್ದಾರೆ. ಯಾವ ಸಂಘಟನೆಯ ಜೊತೆ ಯಾರು? ಯಾವುದರಲ್ಲಿ ಶಾಮಿಲಾಗಿದ್ದಾರೆ. ಇಷ್ಟು ದಿನ ಕಾಶ್ಮೀರ, ಸಿರಿಯಾ, ಪಿಓಕೆಯಲ್ಲಿ ಕಾರ್ಯಾಚರಣೆ ಮಾಡುತ್ತಿರುವಂಥ ಸಂಘಟನೆಯೊಂದಿಗೆ ಶಾಮೀಲಾಗಿದ್ದಾರೆ ಎನ್ನುವುದನ್ನು ತನಿಖೆ ಮಾಡಬೇಕಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿಕೊಂಡು ತನಿಖೆಯನ್ನು ಚುರುಕುಗೊಳಿಸುತ್ತದೆ. ಭಯೋತ್ಪಾದಕ ಚುಟುವಟಿಕೆಯಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಕೊಡಿಸಿ ತಪ್ಪಿತಸ್ಥರ ಮುಖವಾಡ ಕಳಚುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.

    Mangaluru Airport Bomb Aropi Suspect copy

    ಪಿಎಫ್‍ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರ ಮಾಹಿತಿಯನ್ನು ಕಲೆ ಹಾಕುತ್ತಿದೆ. ಎಸ್‍ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧ ಮಾಡಬೇಕು. ಕಾರಣ ಈ ಸಂಘಟನೆಯ ಹಲವರು ಸಮಾಜ ದ್ರೋಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಕಷ್ಟು ಕೊಲೆ ಪ್ರಕರಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಮಾಜಿ ಸಚಿವ ತನ್ವಿರ್ ಸೇಠ್ ಅವರಿಗೂ ಕೂಡ ಚೂರಿ ಹಾಕಿ ಹತ್ಯೆ ಮಾಡುವ ಸಂಚು ರೂಪಿಸಿದ್ದ ಇಂಥ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು ಎಂದರು.

  • ಬಾಗ್ದಾದಿ ಹತ್ಯೆ ಬೆನ್ನಲ್ಲೇ ಐಸಿಸ್‍ಗೆ ಹೊಸ ನಾಯಕ ನೇಮಕ

    ಬಾಗ್ದಾದಿ ಹತ್ಯೆ ಬೆನ್ನಲ್ಲೇ ಐಸಿಸ್‍ಗೆ ಹೊಸ ನಾಯಕ ನೇಮಕ

    ವಾಷಿಂಗ್ಟನ್: ಅಬು ಬಕರ್ ಅಲ್ ಬಾಗ್ದಾದಿ ಹತ್ಯೆ ಬೆನ್ನಲ್ಲೇ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಗೆ ನೂತನ ಮುಖ್ಯಸ್ಥನನ್ನು ನೇಮಕ ಮಾಡಲಾಗಿದೆ.

    ಐಸಿಸ್‍ಗೆ ನೂತನ ನಾಯಕನಾಗಿ ಅಬ್ದುಲ್ಲಾ ಖಾರ್ಡಾಶ್ ನೇಮಕಕೊಂಡಿದ್ದಾನೆ. ಖಾರ್ಡಾಶ್ ಇರಾಕಿನ ಮಾಜಿ ಅಧ್ಯಕ್ಷ, ಸರ್ವಾಧಿಕಾರಿ ಸದ್ದಾಂ ಹುಸೇನ್ ಸೈನ್ಯದಲ್ಲಿ ಅಧಿಕಾರಿಯಾಗಿದ್ದಾನೆ. ಖಾರ್ಡಾಶ್‍ನನ್ನು ಪ್ರಾಧ್ಯಾಪಕನೆಂದು ಕರೆಯಲಾಗುತ್ತಿದೆ. ಈಗಾಗಲೇ ಅವನು ಐಸಿಸ್‍ನ ದಿನನಿತ್ಯದ ಕಾರ್ಯವನ್ನು ನಿಯಂತ್ರಿಸುತ್ತಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸುರಂಗದೊಳಗೆ ಅಳುತ್ತಾ ಓಡಿ ಸತ್ತ ಬಾಗ್ದಾದಿ: ನರಹಂತಕನ ಸಾವಿನ ರಹಸ್ಯ

    saddam hussein

    ಸ್ಥಳೀಯ ಗುಪ್ತಚರ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ ಪ್ರಕಾರ, ಖಾರ್ಡಾಶ್ ಈಗ ಐಸಿಸ್‍ನ ಹೊಸ ಕಿಂಗ್‍ಪಿನ್ ಆಗಲಿದ್ದಾನೆ. ಬಾಗ್ದಾದಿಯ ವಾಯುದಾಳಿಯಲ್ಲಿ ಗಾಯಗೊಂಡ ನಂತರ ಆಗಸ್ಟ್‌ನಲ್ಲಿ ಖಾರ್ಡಾಶ್‍ನನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿತ್ತು. ಆ ಸಮಯದಲ್ಲಿ ಬಾಗ್ದಾದಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ. ಅನಾರೋಗ್ಯದ ಕಾರಣ ಬಾಗ್ದಾದಿ ಕೆಲಸದಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಸಿಸ್ ನಾಯಕ ಬಾಗ್ದಾದಿನನ್ನ ನಾಯಿಯಂತೆ ಕೊಂದಿದ್ದೇವೆ: ಟ್ರಂಪ್

    ಖಾರ್ಡಾಶ್ ಬಾಗ್ದಾದಿಗೆ ಅತ್ಯಂತ ಆಪ್ತರಾಗಿದ್ದಾನೆಂದು ನಂಬಲಾಗಿದೆ. ಜೊತೆಗೆ 2003ರಲ್ಲಿ ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಇರಾಕ್‍ನ ಬಾಸ್ರಾದಲ್ಲಿರುವ ಜೈಲಿನಲ್ಲಿ ಇಬ್ಬರೂ ಒಟ್ಟಿಗೆ ಇದ್ದರು. ಈ ಹಿಂದೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಬು ಬಕರ್ ಅಲ್-ಬಾಗ್ದಾದಿ ಯುಎಸ್ ಮಿಲಿಟರಿಯಿಂದ ಸುತ್ತುವರಿದ ನಂತರ ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ ಎಂದು ಘೋಷಿಸಿದ್ದರು. ಬಾಗ್ದಾದಿನನ್ನು 2014ರಲ್ಲಿ ಮಸೀದಿಯಲ್ಲಿ ನೋಡಲಾಗಿತ್ತು. ಈ ವೇಳೆ ಭಾಷಣದಲ್ಲಿ ತನ್ನನ್ನು ಇರಾಕ್ ಮತ್ತು ಸಿರಿಯಾದ ಖಲೀಫ್ ಎಂದು ಘೋಷಿಸಿಕೊಂಡಿದ್ದ.

    Baghdadi 1

  • ಪಾಕ್‍ನಲ್ಲಿ 40 ಉಗ್ರ ಸಂಘಟನೆಗಳಿವೆ, ಈಗ ನಮಗೆ ದುಬಾರಿಯಾಗಿದೆ – ಇಮ್ರಾನ್ ಖಾನ್

    ಪಾಕ್‍ನಲ್ಲಿ 40 ಉಗ್ರ ಸಂಘಟನೆಗಳಿವೆ, ಈಗ ನಮಗೆ ದುಬಾರಿಯಾಗಿದೆ – ಇಮ್ರಾನ್ ಖಾನ್

    ವಾಷಿಂಗ್ಟನ್: ಅಮೆರಿಕ ಪ್ರವಾಸಕ್ಕೆ ತೆರೆಳಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ಉಗ್ರ ಸಂಘಟನೆಗಳಿವೆ ಎಂಬ ಸತ್ಯವನ್ನು ಕೊನೆಗೂ ಒಪ್ಪಿಕೊಂಡಿದ್ದಾರೆ.

    ಪಾಕಿಸ್ತಾನದಲ್ಲಿ ಕಳೆದ 15 ವರ್ಷಗಳಿಂದ ಈವರೆಗೆ ಆಡಳಿತ ನಡೆಸಿದ ಸರ್ಕಾರಗಳು ಜಗತ್ತಿನ ಮುಂದೆ ಉಗ್ರರಿಗೆ ನೆಲೆ ನೀಡಿರುವ ಬಗ್ಗೆ ಸತ್ಯವನ್ನು ಹೇಳಿರಲಿಲ್ಲ. ಆದ್ರೆ ಇಮ್ರಾನ್ ಖಾನ್ ಅವರು ಈ ಬಗ್ಗೆ ಬಾಯಿಬಿಟ್ಟಿದ್ದಾರೆ. ಪಾಕಿಸ್ತಾನದಲ್ಲಿ 40 ವಿವಿಧ ಉಗ್ರಗಾಮಿ ಸಂಘಟನೆಗಳು ನೆಲೆಯೂರಿದೆ ಎಂಬ ನಿಜಾಂಶವನ್ನು ಬಿಚ್ಚಿಟ್ಟಿದ್ದಾರೆ.

    Imran Khan

    ಭಯೋತ್ಪಾದನೆ ವಿರುದ್ಧ ಅಮೆರಿಕ ಸಾರಿದ ಸಮರದಲ್ಲಿ ನಾವು ಹೋರಾಡುತ್ತಿದ್ದೇವೆ. 9/11 ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ. ಅಲ್ ಖೈದಾ ಅಫ್ಘಾನಿಸ್ತಾನದ ಉಗ್ರ ಸಂಘಟನೆ. ಅಲ್ಲದೆ ತಾಲಿಬಾನ್ ಉಗ್ರ ಸಂಘಟನೆ ಪಾಕಿಸ್ತಾನದಲ್ಲಿ ಇಲ್ಲ. ಆದರೂ ಕೂಡ ನಾವು ಅಮೆರಿಕದ ಯುದ್ಧದಲ್ಲಿ ಭಾಗಿಯಾದೆವು. ಆದರೆ ದುರದೃಷ್ಟವಶಾತ್ ನಮ್ಮ ಪ್ರಯತ್ನಗಳು ವಿಫಲವಾದಾಗ ನಾವೇ ನಮ್ಮ ಸರ್ಕಾರವನ್ನು ದೂಷಿಸಬೇಕಾದ ಪರಿಸ್ಥಿತಿ ಬಂದಿದೆ. ವಾಸ್ತವಿಕ ಸತ್ಯಾಂಶವನ್ನು ನಾವು ಅಮೆರಿಕದ ಮುಂದೆ ಹೇಳಲಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

    ಅಮೆರಿಕನ್ ಕಾಂಗ್ರೆಸ್ ಸದಸ್ಯರ ಪೈಕಿ ಪಾಕ್ ಪರ ಅಧ್ಯಕ್ಷೆಯಾಗಿರುವ ಶೈಲಾ ಜಾಕ್ಸನ್ ಲೀ ಆತಿಥ್ಯವನ್ನು ಆಯೋಜಿಸಿದ್ದರು. ಈ ಆತಿಥ್ಯದಲ್ಲಿ ಇಮ್ರಾನ್ ಖಾನ್ ಅವರು ಕೂಡ ಭಾಗಿಯಾಗಿದ್ದರು. ಈ ವೇಳೆ ಮಾತನಾಡುತ್ತಾ ದೇಶದಲ್ಲಿ ನಡೆಯುವ ಕೆಲವೊಂದು ವಿಷಯಗಳು ಪಾಕ್ ಸರ್ಕಾರದ ನಿಯಂತ್ರಣದಲ್ಲಿಲ್ಲ ಎನ್ನುವುದನ್ನು ಒಪ್ಪಿಕೊಂಡರು.

    Imran Khan 4

    ದೇಶದ ಒಳಗೆ 40 ಉಗ್ರ ಸಂಘಟನೆಗಳಿವೆ. ದಶಕಗಳ ಕಾಲ ಪಾಕ್ ಈ ಸಂಘಟನೆಗಳಿಗೆ ಆಶ್ರಯ ನೀಡಿದೆ. ಆದರೆ ಈಗ ಅದು ನಮಗೆ ದುಬಾರಿಯಾಗಿದೆ. ಉಗ್ರರನ್ನು ಮಟ್ಟಹಾಕುವ ಸಮರದಲ್ಲಿ ಅಮೆರಿಕ ಗೆಲ್ಲಬೇಕು. ಹೀಗಾಗಿ ಅಮೆರಿಕ ಪಾಕ್ ಉಗ್ರರನ್ನು ಮಟ್ಟಹಾಕಲು ಇನ್ನಷ್ಟು ಶ್ರಮವಹಿಸಬೇಕೆಂದು ಹೇಳುತ್ತಿದೆ. ಆದರೆ ಪಾಕಿಸ್ತಾನ ಸ್ವತಃ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ ಎಂದು ತಿಳಿಸಿದ್ದಾರೆ.

    ಪಾಕಿಸ್ತಾನ ಶಾಂತಿಯನ್ನು ಕಾಪಾಡುವುದರಲ್ಲಿ ನಿಯತ್ತಿನಿಂದ ಇರುತ್ತದೆ. ಅಲ್ಲದೆ ಎರಡು ದೇಶಗಳ ನಡುವೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳುತ್ತದೆ. ತಾಲಿಬಾನ್ ಸಂಘಟನೆಯ ಬಗ್ಗೆ ತಿಳಿಯಲು ಪಾಕಿಸ್ತಾನ ತನ್ನ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆದರೆ ಈ ಕೆಲಸ ಬಹಳ ಕಷ್ಟಕರವಾಗಿದೆ. ಯಾಕೆಂದರೆ ಇದು ಅಫ್ಘಾನಿಸ್ತಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟುಮಾಡುತ್ತದೆ. ಆದರೂ ಕೂಡ ಈ ಬಗ್ಗೆ ಕ್ರಮಕೈಗೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ. ಇಡೀ ದೇಶವೇ ನಮ್ಮ ಬೆನ್ನ ಹಿಂದೆ ನಿಂತಿದೆ. ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲಸಬೇಕು ಎಂದು ಅಮೆರಿಕ ಗುರಿ ಹೊಂದಿದೆ. ಅಮೆರಿಕದ ಹಾದಿಯಲ್ಲೇ ನಾವು ಸಾಗುತ್ತಿದ್ದೇವೆ ಎಂದು ಖಾನ್ ಹೇಳಿದ್ದಾರೆ.

    terrorist

    ಸದ್ಯ ಪಾಕಿಸ್ತಾನ ಪ್ರಧಾನಿ ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ದೇಶಕ್ಕೆ ವಾಪಸ್ ಹೋಗಿದ್ದಾರೆ. ಅಲ್ಲದೆ ಈ ಬಾರಿ ಅಮೆರಿಕ ಭೇಟಿ ಪಾಕ್- ಅಮೆರಿಕ ಸಂಬಂಧವನ್ನು ಉತ್ತಮಗೊಳಿಸಿ, ಗಟ್ಟಿಗೊಳಿಸಲಿದೆ ಎಂಬ ನಂಬಿಕೆಯನ್ನು ಪಾಕಿಸ್ತಾನ ಹೊಂದಿದೆ.