Tag: ಎಚ್ ಡಿ ರೇವಣ್ಣ

  • ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಬೆಂಗಳೂರು: ಬಂಡೀಪುರದಲ್ಲಿ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದು ಸುಳ್ಳು, ಸುಮ್ಮನೆ ಈ ಕುರಿತು ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಬಂಡೀಪುರದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೂ ಏಕೆ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ವೇಳೆ ರಸ್ತೆ ಸಂಚಾರ ಪುನರಾರಂಭಕ್ಕೆ ಅವಕಾಶ ನೀಡುವುದು ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಫ್ಲೈ ಓವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ಮಾಹಿತಿ ಎಂದು ಹೇಳಿದರು.

    BANDIPUR 2

    ರೇವಣ್ಣ ಹೇಳಿದ್ದು ಏನು?
    ಬಂಡೀಪುರ ರಕ್ಷಿತಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಗುರುವಾರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ಸಚಿವ ರೇವಣ್ಣ, ಈ ಕುರಿತು ಕೇರಳ ಸರ್ಕಾರ ಸುಪ್ರೀಂಗೆ ಹೋಗಿದೆ. ಅದನ್ನು ಗಮನದಲ್ಲಿಟ್ಟು ಇದರ ಕುರಿತು ಸೂಕ್ತವಾಗಿ ಕ್ರಮ ಕೈಗೊಳ್ಳುತ್ತೇವೆ. ಬಂಡೀಪುರ ಅರಣ್ಯದಲ್ಲಿಯೂ ಕೆಲವೆಡೆಗಳಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಕಾಡು ಪ್ರಾಣಿಗಳ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಕಾಮಗಾರಿ ಮಾಡುವ ಕುರಿತು ಚರ್ಚಿಸಲಾಗುವುದು. ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಮುಖ್ಯ ಕಾರ್ಯದರ್ಶಿ ಜೊತೆ ಈ ಕುರಿತು ಸಭೆಯ ನಂತರ ಓಡಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಅಂತ ಅವರು ತಿಳಿಸಿದ್ದರು. ಇದನ್ನು ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಬಂಡೀಪುರದಲ್ಲಿ ರಾತ್ರಿ 9 ಗಂಟೆಗೆ 6 ವಾಹನ ಸಂಚಾರ ನಿಷೇಧಿಸಲಾಗಿದ್ದು, ಜುಲೈ 18ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಡೆದ ಸಭೆಯ ವೇಳೆ ಸಿಎಂ ಹಾಗೂ ಸಚಿವ ರೇವಣ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಕಾರ್ಯದರ್ಶಿ ವೈ.ಎಸ್ ಮಲ್ಲಿಕ್ ಜು.21 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಕರಣ ಈಗ ಸುಪ್ರೀಂಕೋರ್ಟ್‍ನಲ್ಲಿದ್ದರೂ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ವನ್ಯಜೀವಿ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

  • ಪ್ರತಿದಿನ ನಮ್ಮ ಹೆಸರು ಹಾಕ್ತೀರಲ್ಲ ನಿಮಗೆ ಧನ್ಯವಾದ: ಮಾಧ್ಯಮಗಳಿಗೆ ಎಚ್ ಡಿ ರೇವಣ್ಣ

    ಪ್ರತಿದಿನ ನಮ್ಮ ಹೆಸರು ಹಾಕ್ತೀರಲ್ಲ ನಿಮಗೆ ಧನ್ಯವಾದ: ಮಾಧ್ಯಮಗಳಿಗೆ ಎಚ್ ಡಿ ರೇವಣ್ಣ

    ಹಾಸನ: ಒಳ್ಳೆಯದ್ದೋ ಕೆಟ್ಟದ್ದೊ ಪ್ರತಿ ದಿನ ನಮ್ಮ ಹೆಸರು ಹಾಕ್ತೀರಲ್ಲ. ನಿಮಗೆ ಧನ್ಯವಾದಗಳೆಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಶ್ರವಣಬೆಳಗೊಳದಲ್ಲಿ ಏರ್ಪಟ್ಟಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ್ಳೆಯದ್ದೋ ಕೆಟ್ಟದ್ದೊ ದಿನಾ ಮಾಧ್ಯಮದಲ್ಲಿ ನಮ್ಮ ಹೆಸರು ಹಾಕ್ತೀರಲ್ಲಾ ನಿಮಗೆಲ್ಲಾ ಧನ್ಯವಾದಗಳು. ಇದರಿಂದಾಗಿ ಜನರು ನಿತ್ಯ ನಮ್ಮ ಬಗ್ಗೆ ಮಾತನಾಡುವಂತೆ ಮಾಡುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ಕಿಚಾಯಿಸಿದರು.

    ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಆರೋಪಗಳಿಗೂ ಕಾಲ ಬಂದಾಗ ಉತ್ತರ ಕೊಡುತ್ತೇನೆ. ನಾನು ವಾಸ್ತು ಪ್ರಕಾರ ಮನೆ ಮಾಡಿಸಿಕೊಂಡ ವಿಚಾರವನ್ನು ತೋರಿಸುತ್ತೀರಿ. ಕೆಲವು ಕೆಲಸಗಳು ಆಗಬೇಕಿತ್ತು ಅದನ್ನು ನಾವು ಮಾಡಿಸಿಕೊಂಡ್ರೆ ತಪ್ಪಾ? ಹಾಗೆ ನಾವು ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಸಹ ತೋರಿಸಿ ಎಂದು ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

    ಪ್ರತ್ಯೇಕ ರಾಜ್ಯ ಕುರಿತು ಪ್ರತಿಕ್ರಿಯಿಸಿ, ನಮಗೆ ಅಖಂಡ ಕರ್ನಾಟಕ ಒಂದಾಗಿ ಇರಬೇಕು. ಇದರ ಕುರಿತು ನೇರ ಚರ್ಚೆಗೆ ನನ್ನ ಮುಂದೆ ಬನ್ನಿ ಎಂದು ಬಿಜೆಪಿ ನಾಯಕರುಗಳಿಗೆ ಸವಾಲು ಹಾಕಿದ ಅವರು ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಏನು ಮಾಡಿದ್ದಾರೆ? ಅವರು ಅಧಿಕಾರದಲ್ಲಿದ್ದಾಗ ನಾವೇನು ಹಿಡ್ಕೊಂಡಿದ್ದೀವಾ ಎಂದು ಪ್ರಶ್ನಿಸಿದರು.

    H D REVANNA

    ರಾಜ್ಯದಲ್ಲಿ ನೀರಾವರಿ ಕಾಮಗಾರಿಗಳಿಗೆ ದೇವೇಗೌಡರ ಕೊಡುಗೆ ಸಾಕಷ್ಟಿದೆ. ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಏನೇನು ಕೆಲಸಗಳಾಗಿವೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ದಿನ ಬೆಳಿಗ್ಗೆ ಮಾಧ್ಯಮಗಳನ್ನು ಇಟ್ಟುಕೊಂಡು ಎಷ್ಟು ದಿನ ಈ ರೀತಿ ಮಾಡುತ್ತೀರಿ ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

    ಉಮೇಶ್ ಕತ್ತಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ತಮ್ಮ ತಮ್ಮ ಅಧ್ಯಕ್ಷರಾಗಿದ್ದಾಗ ಬೆಳಗಾವಿಯ ಡಿ.ಸಿ.ಸಿ. ಬ್ಯಾಂಕಿನಲ್ಲಿ ಎಷ್ಟು ಸಾಲಮನ್ನಾ ಆಗಿದೆ. ಆ ಸಾಲ ಯಾರಿಗೆ ಕೊಟ್ಟಿದ್ದರು. ಅಲ್ಲದೇ ರಾಜಕಾರಣ ಯಾವತ್ತು ಸುಳ್ಳಿನಿಂದ ಆಗಲ್ಲ. ಓಟಿಗಾಗಿ ಬಡವರನ್ನು ಯಾಕೆ ಹಾಳು ಮಾಡುತ್ತೀರಿ. ನಿಮಗೆ ನಾಚಿಕೆಯೇ ಇಲ್ಲ. ಮಹದಾಯಿ ವಿಚಾರವನ್ನು ಇಷ್ಟು ದಿನಗಳಿಂದ ಯಾಕೆ ಪರಿಹರಿಸಿಲ್ಲ ಎಂದು ಹರಿಹಾಯ್ದರು.

    ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಪ್ರಥಮ ದರ್ಜೆ ಕಾಲೇಜುಗಳಿರಲಿಲ್ಲ. ಅದನ್ನ ಮಾಡೋದಕ್ಕೆ ಕುಮಾರಸ್ವಾಮಿಯವರೇ ಬರಬೇಕಿತ್ತಾ? ಇದರಲ್ಲಿ ಯಾರ ಮಕ್ಕಳು ಓದುತ್ತಾರೆ? ಇದರಲ್ಲಿ ಓದೋದು ಬಡವರ ಮಕ್ಕಳಲ್ಲವೇ? ಕುಮಾರಣ್ಣ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಯಾರ್ರಿ ದಿನದ 20 ಗಂಟೆ ಕೆಲ್ಸ ಮಾಡೊದು ಈ ದೇಶದಲ್ಲಿ. ಕುಮಾರಸ್ವಾಮಿ 49 ಸಾವಿರಕೋಟಿ ಸಾಲಾಮನ್ನಾ ಮಾಡಿದ್ದಾರೆ. ಕೇಂದ್ರ ಸರ್ಕಾರವೂ 50 ಸಾವಿರಕೋಟಿ ಸಾಲಮನ್ನಾ ಮಾಡಿಸಲಿ ಎಂದು ಬಿಜೆಪಿ ಹಾಗು ಯಡಿಯೂರಪ್ಪನವರಿಗೆ ಸವಾಲು ಹಾಕಿದರು.

  • ಬಿಎಸ್‍ವೈ ಮೇಲೆ ನನಗೆ ಅನುಕಂಪ ಇದೆ, ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ: ರೇವಣ್ಣ

    ಬಿಎಸ್‍ವೈ ಮೇಲೆ ನನಗೆ ಅನುಕಂಪ ಇದೆ, ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ: ರೇವಣ್ಣ

    ಬೆಂಗಳೂರು: ಉತ್ತರ ಕರ್ನಾಟಕ ಕಡೆಗಣಿಸಲಾಗಿದೆ ಎನ್ನುವ ಯಡಿಯೂರಪ್ಪನವರ ಮೇಲೆ ನನಗೆ ಅನುಕಂಪವಿದೆ, ಅವರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ ಎಂದು ಸೂಪರ್ ಸಿಎಂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಉತ್ತರ ಕರ್ನಾಟಕ ಕಡೆಗಣಿಸಲಾಗಿ ಅನ್ನುವ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಕುರಿತು ನಾನು ಮಾತಾಡಲ್ಲ. ಯಡಿಯೂರಪ್ಪ ಬಗ್ಗೆ ಮಾತಾಡಿದರೆ ನಾನು ಪೊಳ್ಳಾಗುತ್ತೇನೆ. ಯಡಿಯೂರಪ್ಪನವರು ಹಿರಿಯರು ಅವರ ಮೇಲೆ ನನಗೆ ಅನುಕಂಪ ಇದೆ. ಅವರಿಂದ ಸರಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂಥ ಸಂದರ್ಭದಲ್ಲಿ ಅವರ ಬಗ್ಗೆ ನಾನು ಮಾತಾಡಲ್ಲ ಎಂದು ಹೇಳಿ ಟಾಂಗ್ ನೀಡಿದರು.

    ಶಾಸಕ ಶ್ರೀರಾಮುಲು ಹೇಳಿಕೆ ಬಗ್ಗೆ ನಾನೇನು ಮಾತಾಡೊಲ್ಲ. ಶ್ರೀರಾಮುಲು ಬಗ್ಗೆ ಮಾತಾಡಿದರೆ ನನ್ನನ್ನು ನಾನೇ ಅಗೌರವ ಮಾಡಿಕೊಂಡಂತೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅವಧಿಗಳಲ್ಲಿ ಏನೇನಾಗಿದೆ ಅಂತ ಬಹಿರಂಗ ಚರ್ಚೆ ಆಗಲಿ. ಬಹಿರಂಗ ಚರ್ಚೆಗೆ ನಾವು ಸಿದ್ದ. ಮಠಾಧೀಶರು ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರು ಹಾಗೂ ಮಠಾಧೀಶರಿಗೆ ಸವಾಲು ಹಾಕಿ ಪ್ರತ್ಯೇಕ ರಾಜ್ಯ ರಚನೆಗಾಗಿ ಬಂದ್ ಮಾಡುತ್ತಿರೋರಿಗೆ ಸಚಿವ ರೇವಣ್ಣ ತಿರುಗೇಟು ನೀಡಿದರು.

    ಯಾರ ಅವಧಿಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಅಂತ ಚರ್ಚೆ ನಡೆಯಲಿ. ಮಠಾಧೀಶರ ಪ್ರತಿಭಟನೆ ಕುರಿತು ನಾನು ಮಾತಾಡಲ್ಲ. ಉತ್ತರ ಕರ್ನಾಟಕದವರಿಗೆ ಸಚಿವ ಸಂಪುಟದಲ್ಲಿ ಅನ್ಯಾಯವಾಗಿದೆ ಅನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಸಿಎಂ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸುತ್ತೇನೆ ಅಂತ ತಿಳಿಸಿದರು.

  • ಸೂಪರ್ ಸಿಎಂ ಪವರ್: ರಾತ್ರೋ ರಾತ್ರಿ 206 ಎಂಜಿನಿಯರ್ ಗಳ ಎತ್ತಂಗಡಿ!

    ಸೂಪರ್ ಸಿಎಂ ಪವರ್: ರಾತ್ರೋ ರಾತ್ರಿ 206 ಎಂಜಿನಿಯರ್ ಗಳ ಎತ್ತಂಗಡಿ!

    ಬೆಂಗಳೂರು: ಸೂಪರ್ ಸಿಎಂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರು ಒಂದೇ ದಿನ ರಾತ್ರಿ ಬರೋಬ್ಬರಿ 206 ಎಂಜಿನಿಯರ್ ಗಳನ್ನು ಎತ್ತಂಗಡಿ ಮಾಡಿ ಮತ್ತೊಮ್ಮೆ ತಮ್ಮ ಸಾರ್ವಭೌಮ ಮೆರೆದಿದ್ದಾರೆ.

    ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಖ್ಯಾತಿ ಹೊಂದಿರುವ ಎಚ್.ಡಿ ರೇವಣ್ಣನವರು, ಲೋಕೋಪಯೋಗಿ ಇಲಾಖೆಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಅವರು ಮಾಡಿದ್ದೇ ರೂಲ್ಸ್, ಹೇಳಿದ್ದೆ ಫೈನಲ್ ಆಗಿದೆ. ಅಧಿಕಾರ ಪಡೆದ ಎರಡೇ ತಿಂಗಳಲ್ಲಿ ಲೋಕೋಪಯೋಗಿ ಇಲಾಖೆಗಳ ಎಂಜಿನಿಯರ್‍ಗಳು ಎತ್ತಂಗಡಿಯಾಗಿದ್ದು. ಇದೀಗ ಮತ್ತೆ ರಾತ್ರೋ ರಾತ್ರಿ ಎಂಜಿನಿಯರ್ ಗಳ ಎತ್ತಂಗಡಿ ಮಾಡಿದ್ದಾರೆ.

    REVANNA TRANSFER 1

    ರೇವಣ್ಣನವರು ಕಳೆದ ಬುಧವಾರ ಇಲಾಖೆಯಲ್ಲಿ ಬಿಗ್ ಆಪರೇಷನ್ ಮಾಡಿದ್ದು, ಒಂದೇ ದಿನ ರಾತ್ರೋ ರಾತ್ರಿ ಬರೋಬ್ಬರಿ 206 ಎಂಜಿನಿಯರುಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಅವರ ಆಪ್ತ ಎಂಜಿನಿಯರ್ ಗಳು ಆಯಾ ಕಟ್ಟಿನ ಸ್ಥಳಗಳಿಗೆ ವರ್ಗಾವಣೆ ಭಾಗ್ಯ ಹೊಂದಿ ನಿಯೋಜನೆಗೊಂಡಿದ್ದಾರೆ ಎಂದು ತಿಳಿಬಂದಿದೆ.

    ಲೋಕೋಪಯೋಗಿ ಇಲಾಖೆ ಸೇರಿದಂತೆ ಒಳನಾಡು ಬಂದರು ಸಾರಿಗೆ ಇಲಾಖೆಯಿಂದ ಆದೇಶ ರವಾನೆಯಾಗಿದ್ದು, ಈ ಹಿನ್ನೆಲೆಯಲ್ಲಿ 206 ಎಂಜಿನಿಯರ್ ಗಳನ್ನು ಏಕ ಕಾಲಕ್ಕೆ ವರ್ಗಾವಣೆ ಮಾಡಿದೆ. ವಿವಿಧ ಇಲಾಖೆಗಳಿಗೆ ನೇಮಕವಾಗಿದ್ದ ಎಂಜಿನಿಯರ್ ಗಳು, ಪ್ರಸ್ತುತ ಇಲಾಖೆಯಿಂದ ವಿವಿಧ ಸ್ಥಳಗಳಿಗೆ ವರ್ಗಾವಣೆಗೊಂಡಿದ್ದಾರೆ. ಇದನ್ನೂ ಓದಿ: ಅವಧಿ ಮುಗಿದ್ರೂ 115ಕ್ಕೂ ಹೆಚ್ಚು ಎಂಜಿನಿಯರ್ ಗಳು ಬೆಂಗ್ಳೂರಲ್ಲೆ ಠಿಕಾಣಿ!

    REVANNA TRANSFER 2

    ಮಾಧ್ಯಮಗಳಿಗೆ ವರ್ಗಾವಣೆ ವಿಷಯ ಗೊತ್ತಾಗದಂತೆ ರೇವಣ್ಣ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ಮಾಧ್ಯಮಗಳಿಂದ ಮಾಹಿತಿ ಮುಚ್ಚಿಟ್ಟಿದೆ. ಅಲ್ಲದೇ ಇನ್ನುಮುಂದೆ ಮಾಧ್ಯಮಗಳಿಗೆ ಯಾರು ಮಾಹಿತಿ ಕೊಡೋ ಹಾಗಿಲ್ಲ. ಮಾಹಿತಿ ಕೊಟ್ಟರೆ, ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲಿಖಿತ ಆದೇಶ ಹೊರಡಿಸಿ ಸೂಪರ್ ಸಿಎಂ ಎಚ್ಚರಿಸಿರುವುದಾಗಿ ತಿಳಿದುಬಂದಿದೆ.

  • ಸಿಎಂ ಹೆಚ್‍ಡಿಕೆ ಆಡಳಿತದಲ್ಲಿ ಸೂಪರ್ ಸಿಎಂ ರೇವಣ್ಣ ಅವರ ಫೋಟೋ ಮಾಯ!

    ಸಿಎಂ ಹೆಚ್‍ಡಿಕೆ ಆಡಳಿತದಲ್ಲಿ ಸೂಪರ್ ಸಿಎಂ ರೇವಣ್ಣ ಅವರ ಫೋಟೋ ಮಾಯ!

    ಬೆಂಗಳೂರು: ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಫೋಟೋ ಮಾಯವಾಗಿದೆ.

    ಜೆಡಿಎಸ್ ಅಪ್ಪ, ಮಕ್ಕಳ ಪಕ್ಷ ಎಂದು ಅನೇಕ ಬಿಜೆಪಿ ನಾಯಕರು ಹಿಂದಿನಿಂದ ಆರೋಪಿಸುತ್ತಲೇ ಬಂದಿದ್ದಾರೆ. ಮುಂದೆ ಈ ಆರೋಪ ಮಾಡದೇ ಇರಲಿ ಎಂದು ಪಕ್ಷದ ಕೊಠಡಿಯಲ್ಲಿದ್ದ ಸಚಿವ ಎಚ್.ಡಿ.ರೇವಣ್ಣ ಅವರ ಫೋಟೋವನ್ನು ದೇವೇಗೌಡರು ಸಿಬ್ಬಂದಿಗೆ ಹೇಳಿ ತೆಗೆಸಿದ್ದಾರೆ ಎನ್ನಲಾಗಿದೆ.

    ಪಕ್ಷದ ಕೊಠಡಿಯಲ್ಲಿ ಹಲವು ವರ್ಷಗಳಿಂದಲೂ ರೇವಣ್ಣ ಅವರ ಫೋಟೋವನ್ನು ಹಾಕಲಾಗಿತ್ತು. ಆದರೆ ಈಗ ಜಯಪ್ರಕಾಶ್ ನಾರಾಯಣ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಫೋಟೋ ಮಾತ್ರ ಕೊಠಡಿಯಲ್ಲಿ ಕಾಣುತ್ತಿದೆ.

  • ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.

    ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.

    SIDDU BSY

    ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.

    ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.

  • ನನ್ನ ಇಲಾಖೆಯಲ್ಲಿ ಲಂಚ ನಡೆಯಲ್ಲ, ಇದ್ದರೆ ಹೇಳಿ ಬಲಿ ಹಾಕ್ತೀನಿ: ರೇವಣ್ಣ

    ನನ್ನ ಇಲಾಖೆಯಲ್ಲಿ ಲಂಚ ನಡೆಯಲ್ಲ, ಇದ್ದರೆ ಹೇಳಿ ಬಲಿ ಹಾಕ್ತೀನಿ: ರೇವಣ್ಣ

    ಬೆಂಗಳೂರು: ನನ್ನ ಇಲಾಖೆಯಲ್ಲಿ ಯಾವುದೇ ಲಂಚ ಕೊಡುಕೊಳ್ಳುವಿಕೆ ನಡೆಯುದಿಲ್ಲ. ಯಾವುದಾದರು ಅಂತಹ ಪ್ರಕರಣ ಇದ್ದರೆ ಹೇಳಿ, ಅವರಿಗೆ ಬಲಿ ಹಾಕುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಹೇಮಾವತಿ ಮತ್ತು ಯಗಚಿ ನೀರಾವರಿ ಯೋಜನೆಯ ಸಭೆ ಬಳಿಕ ಮಾತನಾಡಿದ ಸಚಿವರು, ಲೋಕೋಪಯೋಗಿ ಇಲಾಖೆಯಲ್ಲಿ ವರ್ಗಾವಣೆಗೆ ಯಾವುದೇ ಲಂಚ ಪ್ರಕ್ರಿಯೆ ನಡೆದಿಲ್ಲ. ಒಂದು ವೇಳೆ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಪಾಂಡವಪುರ, ಕೆ.ಆರ್.ಪೇಟೆ ನಾಗಮಂಗಲ ನಾಲೆಗಳಿಗೆ ನೀರು ಬಿಡಲು ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಜುಲೈ 30 ರೊಳಗೆ ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಆದೇಶಿಸಲಾಗಿದೆ ಎಂದರು.

    ತಮ್ಮ ಮನೆ ನವೀಕರಣ ವಿಚಾರಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿದ ಸಚಿವರು, ಯಾವುದೇ ವಾಸ್ತುವಿಗಾಗಿ ಮನೆ ನವೀಕರಣ ಮಾಡಿಲ್ಲ. ನಾನು ಹೊಲದಲ್ಲಿ ಮಲಗುವುದಕ್ಕೂ ಸಿದ್ಧ. ನಾವೇನು ಫೈಸ್ಟಾರ್ ಹೋಟೆಲ್‍ನಲ್ಲಿ ಇರಬೇಕು ಅಂತಾ ಇಲ್ಲ ಎಂದು ಹೇಳಿದರು.

  • ಸಿಪಿಐ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ- ಮಗ ತಪ್ಪು ಮಾಡಿದ್ರೆ ಶಿಕ್ಷೆ ನೀಡಿ ಅಂದ್ರು ರೇವಣ್ಣ

    ಸಿಪಿಐ ವರ್ಗಾವಣೆಯಲ್ಲಿ ನನ್ನ ಪಾತ್ರವಿಲ್ಲ- ಮಗ ತಪ್ಪು ಮಾಡಿದ್ರೆ ಶಿಕ್ಷೆ ನೀಡಿ ಅಂದ್ರು ರೇವಣ್ಣ

    ಹಾಸನ: ಚನ್ನರಾಯಪಟ್ಟಣ ಗ್ರಾಮಾಂತರ ಸಿಪಿಐ ಹರೀಶ್ ಬಾಬು ವರ್ಗಾವಣೆ ವಿಚಾರದಲ್ಲಿ ನಾನು ಪ್ರಭಾವ ಬೀರಿಲ್ಲ ಅಂತ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಖಡಕ್ ಆಗಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗರಂ ಆದ ಅವರು, ನಾನು ಯಾರ ಮೇಲೂ ಪ್ರಭಾವ ಬೀರಲು ಹೋಗಿಲ್ಲ. ಚನ್ನರಾಯಪಟ್ಟಣ ಸಿಪಿಐ ವರ್ಗಾವಣೆ ಪ್ರಕರಣಕ್ಕೂ ನಮಗೂ ಸಂಬಂಧ ಇಲ್ಲ. ಆ ಬಗ್ಗೆ ಎಸ್ಪಿ ಹಾಗೂ ಆ ಇನ್ಸ್ ಪೆಕ್ಟರ್ ಅವರನ್ನೇ ಕೇಳಿ. ಈ ಬಗ್ಗೆ ಬೇಕಿದ್ದರೆ ತನಿಖೆ ನಡೆಸಲಿ. ತಪ್ಪು ಮಾಡಿದ್ರೆ ರೇವಣ್ಣ ಆದ್ರೇನು ಅವರ ಮಗನಾದ್ರೇನು ಎಂದು ಕಿಡಿಕಾರಿದ್ರು.

    ಆ ಇನ್ಸ್ ಪೆಕ್ಟರ್ ಜೆಡಿಎಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕ್ತಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕೋದಿಲ್ಲ. ನನ್ನ ಮಗ ಡಾ. ಸೂರಜ್ ಆ ಗಲಾಟೆಯಲ್ಲಿ ಇದ್ನಾ ಎಂದು ಪ್ರಶ್ನೆ ಮಾಡಿದ್ರು. ವಿನಾಕಾರಣ ಎಫ್.ಐ.ಆರ್ ಹಾಕಿದ್ದಾರೆ. ಆ ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲು ಜಿಲ್ಲಾಧಿಕಾರಿ ಹೊರಟಿದ್ದರು. ಆವಾಗ ನಾನೇ ಬೇಡ ಎಂದಿದ್ದೆ. ನನ್ನ ಮಗ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಅಂದ್ರು. ಇದನ್ನೂ ಓದಿ: ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    REVANNA 1

    ಹಾಸನ-ಬೇಲೂರು ರೈಲು ಮಾರ್ಗ ಸರ್ವೇ ಕಾರ್ಯ ಶೀಘ್ರ ಆರಂಭವಾಗಲಿದೆ. ರಾಜ್ಯದ ಶೇ.50 ರಷ್ಟು ಸಹಭಾಗಿತ್ವದಲ್ಲಿ ಯೋಜನೆ ಆರಂಭವಾಗಲಿದೆ. ಬೇಲೂರು-ಚಿಕ್ಕಮಗಳೂರು ನಡುವಿನ ಕಾಮಗಾರಿಗೆ ಭೂಸ್ವಾಧೀನ ಆಗಿಲ್ಲ. ಈ ಸಂಬಂಧ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಹಾಸನ ಮಾರ್ಗವಾಗಿ ಎಕ್ಸ್ ಪ್ರೆಸ್ ಸೇರಿ ಇನ್ನೂ ಹೆಚ್ಚಿನ ರೈಲು ಓಡಿಸಲು ಮನವಿ ಮಾಡಲಾಗಿದೆ. ಬಹು ನಿರೀಕ್ಷಿತ ರೈಲ್ವೆ ಮೇಲ್ಸೇತುವೆ ಯೋಜನೆ ಮುಂದಿನ ಸಂಪುಟದ ಮುಂದೆ ಬರಲಿದೆ. ಕಾಮಗಾರಿಗೆ ಶೀಘ್ರ ಅನುಮೋದನೆ ಸಿಗಲಿದೆ ಅಂತ ಅವರು ತಿಳಿಸಿದ್ರು.

    ಮಾಧ್ಯಮಕ್ಕೆ ಶಾಪ:
    ಇದೇ ವೇಳೆ ಮಾಧ್ಯಮದ ವಿರುದ್ಧ ಕಿಡಿಕಾರಿದ ರೇವಣ್ಣ, ವಾರ ಪತ್ರಿಕೆವೂಂದರಲ್ಲಿ ಐದು ಬಾರಿ ನನ್ನ ಬಗ್ಗೆ ಬರೆದಿದ್ದಾರೆ. ನಾನು ಐದು ಬಾರಿ ಶಾಸಕನಾದೆ. ಟಿವಿ ಮಾಧ್ಯಮಗಳು ನನ್ನ ಬಗ್ಗೆ ದಿನಾ ತೋರಿಸಲಿ. ನಮಗೆ ದೇವರ ಹಾಗು ಜನರ ಆಶೀರ್ವಾದ ಇದೆ. ನಿಮಗೆಲ್ಲಾ ದೇವರೇ ಶಿಕ್ಷೆಕೊಡ್ತಾನೆ ಎಂದು ಮಾಧ್ಯಮ ವಿರುದ್ಧ ಶಾಪ ಹಾಕಿದ್ರು.

     

  • ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ನವದೆಹಲಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿದ್ದಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರು ಸಹ ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಕುಮಾರಸ್ವಾಮಿಯವರು ಎಲ್ಲಿಗೆ ಹೋದರು, ಬಂದರೂ ಅಲ್ಲಿ ರೇವಣ್ಣ ಜೊತೆಯಾಗುತ್ತಿದ್ದಾರೆ.

    ಇಂದು ದೆಹಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರ ಜೊತೆಗೆ ಸೂಪರ್ ಸಿಎಂ ರೇವಣ್ಣ ಅವರದ್ದೇ ಫುಲ್ ಹವಾ. ಸಿಎಂ ಕಾರ್ಯಕ್ರಮ, ಭೇಟಿ, ಸಭೆ ಎಲ್ಲದರಲ್ಲಿಯೂ ರೇವಣ್ಣ ಭಾಗವಹಿಸಿದ್ರು. ಮಂಗಳವಾರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಇಂದು ಕೃಷಿ ಸಚಿವ ರಾಧಮೋಹನ್ ಸಿಂಗ್, ರೈಲ್ವೆ ಸಚಿವ ಪಿಯೂಷ್ ಗೊಯೇಲ್ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಐದು ಜನ ಸಚಿವರ ಪೈಕಿ ಮೂವರನ್ನು ಭೇಟಿ ಮಾಡುವ ವೇಳೆ ಸಿಎಂಗೆ ರೇವಣ್ಣ ಸಾಥ್ ನೀಡಿದ್ದರು.

    ಕೃಷಿ ಸಚಿವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ರಾಜ್ಯದ ಕೃಷಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕೊಟ್ಟ ಮನವಿಗಳಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಹಲವು ಜಿಲ್ಲೆಗಳಲ್ಲಿ ಮೆಗಾ ಡೈರಿ ಆರಂಭಕ್ಕೆ 900 ಕೋಟಿ ರೂ. ನೆರವು ನೀಡಲು ಕೇಂದ್ರ ಒಪ್ಪಿಗೆ ನೀಡಿದೆ. ದೆಹಲಿ ಭೇಟಿ ಫಲ ಕೊಟ್ಟಿದೆ ಎಂಬ ತೃಪ್ತಿಯಿದೆ ಎಂದರು.

    HDK Reavanna 1

    ನವದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಕಚೇರಿಯಲ್ಲಿ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು, ರಕ್ಷಣಾ ಇಲಾಖೆಗೆ ಸೇರಿದ ಬೆಂಗಳೂರಿನ ಭೂಮಿಯನ್ನು ಮೆಟ್ರೋ ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು ಅನುಮತಿ ಕೇಳಿದ್ದಾರೆ.

    ಐಫೋನ್ ಗಿಫ್ಟ್ ನೀಡಲು ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆ ಮಾಡಿಲ್ಲ. ನನ್ನ ಗಮನಕ್ಕೆ ಬಾರದೆ ಹಣ ಬಿಡುಗಡೆ ಆಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೆ ಇದರಲ್ಲಿ ನನ್ನ ಪಾತ್ರವಿಲ್ಲ. ಐಫೋನ್ ಕೊಡುವ ಅವಶ್ಯಕತೆ ಇತ್ತೇ ಅಂತಾ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‍ಗೆ ಕೇಳಿದ್ದೆ. ಅವರು ಕಳೆದ ವರ್ಷವೂ ಕೊಟ್ಟಿದ್ದೆ, ಅದಕ್ಕೆ ಈ ಬಾರಿಯೂ ಕೊಟ್ಟಿದ್ದೇನೆ. ಆದರೆ ಕಳೆದ ಬಾರಿ ಗಿಫ್ಟ್ ನೀಡಿದಾಗ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಹೀಗಾಗಿ ಕೊಟ್ಟಿರುವುದಾಗಿ ಅವರು ಹೇಳಿರುವರು ಎಂದು ಕುಮಾರಸ್ವಾಮಿ ತಿಳಿಸಿದರು.

  • ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಗೆ ಕಿರುಕುಳ?

    ಬೆಂಗಳೂರು: ಚುನಾವಣಾ ಸಮಯದಲ್ಲಿ ಸಚಿವ ರೇವಣ್ಣ ಪುತ್ರನ ವಿರುದ್ಧ ದೂರು ದಾಖಲಿಸಿಕೊಂಡಿದ್ದಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ಗೆ ಕಿರುಕುಳ ನೀಡಿದಲ್ಲದೇ, ಠಾಣೆಗೆ ಬಾರದಂತೆ ಆದೇಶ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

    ಚುನಾವಣಾ ಸಮಯದಲ್ಲಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಿಸಿದ್ದ ಚನ್ನರಾಯಪಟ್ಟಣ ಇನ್ಸ್ ಪೆಕ್ಟರ್ ಹರೀಶ್ ಬಾಬುರವರಿಗೆ ಕಿರುಕುಳ ನೀಡುತ್ತಿದ್ದಲ್ಲದೇ ಠಾಣೆಗೆ ಬಾರದಂತೆ ಮೌಖಿಕ ಆದೇಶ ನೀಡಿದ್ದಾರೆ ಎಂದು ದೂರುದಾರ ಶ್ರೇಯಸ್ ಆರೋಪಿಸಿದ್ದಾರೆ.

    revanna son police chennarayapatna

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ದೂರುದಾರ ಶ್ರೇಯಸ್, ಸಚಿವರು ಅಧಿಕಾರ ದುರಪಯೋಗಪಡಿಸಿಕೊಂಡು ಅಧಿಕಾರಿಯನ್ನು ವರ್ಗಾಯಿಸಿದ್ದಾರೆ. ಧಕ್ಷ ಅಧಿಕಾರಿಯನ್ನು ಎತ್ತಂಗಡಿ ಮಾಡಿಸುವಲ್ಲಿ ಸಚಿವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಸಚಿವ ರೇವಣ್ಣರ ಒತ್ತಡಕ್ಕೆ ಮಣಿದ ಹಾಸನ ಎಸ್ಪಿ, ಲಿಖಿತ ಆದೇಶವಿಲ್ಲದೆ ಫೋನ್ ಮೂಲಕವೇ ಠಾಣೆಗೆ ಬಾರದಂತೆ ಇನ್ಸ್ ಪೆಕ್ಟರ್ ಹರೀಶ್ ಬಾಬುಗೆ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್ ರವರು ಕಳೆದ 20 ದಿನಗಳಿಂದ ಠಾಣೆಗೆ ಬರುತ್ತಿಲ್ಲ ಎಂದು ಶ್ರೇಯಸ್ ಆರೋಪಿಸಿದರು.

    ಮಗನ ಮೇಲೆ ಕೇಸು ಹಾಕಿದ್ದಕ್ಕೆ ಪ್ರತೀಕಾರಕ್ಕಿಳಿದ ಸಚಿವ ರೇವಣ್ಣರವರು, ಹಾಸನ ಎಸ್ಪಿ ರಾಹುಲ್ ಕುಮಾರ್ ಮೇಲೆ ಒತ್ತಡ ಹೇರಿದ್ದಾರೆ. ಅಲ್ಲದೇ ಆ ಇನ್ಸ್ ಪೆಕ್ಟರ್ ನನ್ನ ಮಗನ ತಂಟೆಗೆ ಬಂದಿದ್ದಾನೆ. ಅವನು ಯಾವುದೇ ಕಾರಣಕ್ಕೂ ಚನ್ನರಾಯಪಟ್ಟಣ ಠಾಣೆಗೆ ಕಾಲಿಡುವಂತಿಲ್ಲ, ಅವನು ಎತ್ತಂಗಡಿ ಆಗೋವರೆಗೂ ಚನ್ನರಾಯಪಟ್ಟಣಕ್ಕೆ ಬರುವಂತಿಲ್ಲ ಎಂದು ಇನ್ಸ್ ಪೆಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನುವ ಮಾತು ಈಗ ಹಾಸನದಲ್ಲಿ ಹರಿದಾಡುತ್ತಿದೆ.

    revanna son police chennarayapatna 2

    ಏನಿದು ಪ್ರಕರಣ?
    2018ರ ಏಪ್ರಿಲ್ 29 ರಂದು ಸೂರಜ್ ರೇವಣ್ಣ ಚುನಾವಣಾ ಪ್ರಚಾರ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯ ಶ್ರೇಯಸ್ ಎಂ ಪಾಟೀಲ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಶ್ರೇಯಸ್ ರವರು ಚನ್ನರಾಯಪಟ್ಟಣದಲ್ಲಿ ದೂರು ದಾಖಲಿಸಿದ್ದರು. ಹರೀಶ್ ರವರು ದೂರು ದಾಖಲಿಸಿ, ಸೂರಜ್ ರೇವಣ್ಣರನ್ನು ಆರೋಪಿ ಎ-1 ಒನ್ ಆಗಿ ಉಲ್ಲೇಖಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.

     

    revanna son police chennarayapatna 3

    https://www.youtube.com/watch?v=WOBnwsWmA1Y

    https://www.youtube.com/watch?v=fH9Sveg85r8