Tag: ಏಸುಕ್ರಿಸ್ತ

  • ಏಸು ಭೇಟಿಗಾಗಿ ಉಪವಾಸ – 400ಕ್ಕೂ ಹೆಚ್ಚು ಮಂದಿ ಸಾವು, 610 ಜನ ನಾಪತ್ತೆ

    ಏಸು ಭೇಟಿಗಾಗಿ ಉಪವಾಸ – 400ಕ್ಕೂ ಹೆಚ್ಚು ಮಂದಿ ಸಾವು, 610 ಜನ ನಾಪತ್ತೆ

    ನೈರೋಬಿ: ಉಪವಾಸ ಮಾಡಿದರೆ ಏಸು ಕ್ರಿಸ್ತನನ್ನು (Jesus) ಭೇಟಿಯಾಗಬಹುದು ಎಂಬ ನಕಲಿ ಧಾರ್ಮಿಕ ಬೋಧಕನ ಮಾತನ್ನು ಕೇಳಿ ಉಪವಾಸ (Fasting) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 403ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 12 ಜನರ ಶವ ಕೀನ್ಯಾದ (Kenya) ಶಕಹೊಲ (Shakahola) ಅರಣ್ಯದಲ್ಲಿ ಪತ್ತೆಯಾಗಿದೆ.

    ಮೃತಪಟ್ಟವರಲ್ಲಿ ಹೆಚ್ಚಿನವರು ಗುಡ್ ನ್ಯೂಸ್ ಇಂಟರ್‌ನ್ಯಾಷನಲ್ ಚರ್ಚ್‌ನ ಸಂಸ್ಥಾಪಕ, ಬೋಧಕ ಪೌಲ್ ಮೆಕೆಂಜಿ ಅನುಯಾಯಿಗಳಾಗಿದ್ದರು. ಉಪವಾಸ ಮಾಡಿದರೆ ಏಸುಕ್ರಿಸ್ತನನ್ನು ಸೇರಬಹುದು ಎಂಬ ಆತನ ಮಾತನ್ನು ನಂಬಿದ ಅನುಯಾಯಿಗಳು ಉಪವಾಸ ಮಾಡಿದ್ದು, 403ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 610ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ನಾಪತ್ತೆ

    CRIME

    ಸದ್ಯ ಉಪವಾಸ ಮಾಡಲು ಸಲಹೆ ನೀಡಿದ ಆರೋಪಿ ಪೌಲ್ ಮೆಕೆಂಜಿ ಮತ್ತು ಇನ್ನಿತರ 36 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಪತ್ತೆಯಾದ 610ಕ್ಕೂ ಹೆಚ್ಚು ಜನರು ಅರಣ್ಯದ ಸುತ್ತಲಿನ ಗ್ರಾಮದವರಾಗಿದ್ದಾರೆ. ಇದುವರೆಗೆ ಹೊರತೆಗೆದ 403 ಮೃತದೇಹಗಳ ಪೈಕಿ 253 ದೇಹಗಳಲ್ಲಿ ಡಿಎನ್‌ಎ ಹೊಂದಾಣಿಕೆಯನ್ನು ನಡೆಸಲಾಗಿದೆ. ಇದನ್ನೂ ಓದಿ: ಚಂದ್ರನ ವೀಕ್ಷಣೆಗೆ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ: ಚಂದ್ರಯಾನ-3 ಲೇವಡಿ ಮಾಡಿದ ಪಾಕಿಸ್ತಾನ ಮಾಜಿ ಸಚಿವ

    ಆರೋಪಿ ಪಾದ್ರಿ 2017ರಲ್ಲಿ ಮಕ್ಕಳಿಗೆ ಶಾಲೆಗೆ ಹೋಗಬೇಡಿ, ಬೈಬಲ್ ಶಿಕ್ಷಣವನ್ನು ಮಾನ್ಯ ಮಾಡುವುದಿಲ್ಲ ಎಂದು ಪ್ರಚಾರ ಮಾಡಿದ್ದ. ಅಲ್ಲದೇ ಜನರಿಗೆ ಏಸುಕ್ರಿಸ್ತನ ಭೇಟಿ ಮಾಡಲು ಅವಕಾಶ ಕಲ್ಪಿಸುವುದಾಗಿ ಹೇಳಿ ಜನರನ್ನು ಅರಣ್ಯಕ್ಕೆ ಕರೆಸಿ ಅಲ್ಲಿ ಉಪವಾಸ ಮಾಡಿಸುತ್ತಿದ್ದ. ಇದನ್ನೂ ಓದಿ: ಭಾರತಕ್ಕೆ ಸಂಬಂಧಿಸಿದ 105 ಪ್ರಾಚೀನ ವಸ್ತುಗಳನ್ನು ವಾಪಸ್ ನೀಡಿದ ಅಮೆರಿಕ

    ಮೃತಪಟ್ಟವರ ಶವಗಳನ್ನು ಅಧಿಕೃತವಾಗಿ ಪರೀಕ್ಷೆ ನಡೆಸಿದಾಗ ಹೆಚ್ಚಿನವರು, ಅಪೌಷ್ಟಿಕತೆ, ಉಸಿರುಗಟ್ಟುವಿಕೆ ಮುಂತಾದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಶೋಧನೆಗಳನ್ನು ಮುಖ್ಯ ಸರ್ಕಾರಿ ರೋಗಶಾಸ್ತ್ರಜ್ಞ ಜೋಹಾನ್ಸೆನ್ ಓಡುರ್ ದೃಢಪಡಿಸಿದ್ದಾರೆ. ಇದರಲ್ಲಿ ಹೆಚ್ಚಿನವರು ಹಸಿವಿನಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆಗೆ ಮತ್ತೆ ಹಾನಿ; ರಷ್ಯಾ-ಕ್ರಿಮಿಯಾ ಸಂಪರ್ಕ ಕಡಿತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ

    ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ

    ರಾಮನಗರ: ಹಲಾಲ್, ಹಿಜಬ್ ಗಲಾಟೆ ನಡುವೆ ರಾಮನಗರ (Ramanagara) ಜಿಲ್ಲೆಯಲ್ಲಿ ಮತ್ತೊಂದು ವಿವಾದ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ಪಡಿತರ ಚೀಟಿ (Ration Card) ಹಿಂಭಾಗ ಏಸು ಕ್ರಿಸ್ತ (Jesus Christ), ಲಕ್ಷ್ಮಿ ದೇವಿ ಫೋಟೋ ಮುದ್ರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ. ಈ ಫೋಟೋ ವೈರಲ್ (Photo Viral) ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಅಷ್ಟೇ ಅಲ್ಲದೇ ಸರ್ಕಾರದಿಂದ ನೀಡಲಾಗುವ ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತ, ಲಕ್ಷ್ಮಿ ದೇವಿ ಫೋಟೋ ಮುದ್ರಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಲು ಶ್ರೀರಾಮ ಸೇನೆ (Sri Rama Sene) ಮುಂದಾಗಿದೆ. ಇದನ್ನೂ ಓದಿ: ಹೈಕಮಾಂಡ್ ಕೈ ಕಾಲು ಕಟ್ಟಿ ಹಾಕಿ, ಖರ್ಗೆ ಕೈಯಲ್ಲಿ ಕೆಲಸ ಮಾಡಿಸ್ತಾರೆ: ಸುಧಾಕರ್

    Jesus Christ photo on a ration card ramanagar 1

    ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ರಮ್ಯಾ ಮಾತನಾಡಿ, ಇದು ಸರ್ಕಾರದಿಂದ ಮುದ್ರಣವಾಗಿರುವ ಕಾರ್ಡ್ ಅಲ್ಲ, ಸ್ಥಳೀಯ ಸೈಬರ್‌ನಲ್ಲಿ ಮುದ್ರಣ ಮಾಡಲಾಗಿದೆ. ಆದರೆ ರೇಷನ್ ಕಾರ್ಡ್‍ನಲ್ಲಿ ಪ್ರಿಂಟ್ ಮಾಡಲಾಗಿಲ್ಲ. ಲ್ಯಾಮಿನೇಷನ್ ಮಾಡುವವರು ಈ ರೀತಿ ಪ್ರಿಂಟ್ ಮಾಡಿದ್ದಾರೆ. ನಮಗೆ ಈ ಬಗ್ಗೆ ದೂರು ಬಂದಿದೆ. ಈ ಕುರಿತು ಸೈಬರ್ ಸೆಂಟರ್‌ಗಳ ಮೇಲೆ ನಿಗಾ ವಹಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಹಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಕೇಸ್ ಕಾಂಗ್ರೆಸ್ ಸಾಬೀತು ಮಾಡಲಿ- ಅಶ್ವಥ್ ನಾರಾಯಣ ಸವಾಲ್

    Live Tv
    [brid partner=56869869 player=32851 video=960834 autoplay=true]

  • ದೇವಾಲಯಗಳ ನಗರಿಯಲ್ಲಿ ಮಾತೆ ಮೇರಿಯ ಜನ್ಮದಿನ ಸಂಭ್ರಮ

    ದೇವಾಲಯಗಳ ನಗರಿಯಲ್ಲಿ ಮಾತೆ ಮೇರಿಯ ಜನ್ಮದಿನ ಸಂಭ್ರಮ

    ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಇಂದು ಮಾತೆ ಮೇರಿಯಮ್ಮನ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

    ಏಸುಕ್ರಿಸ್ತನ ತಾಯಿ ಮೇರಿಯನ್ನು ತೊಟ್ಟಿಲಿನಲ್ಲಿ ತೂಗಿ, ಬಣ್ಣ ಬಣ್ಣದ ಹೂವು ಎಸೆದು ಭೂಮಿಗೆ ಸ್ವಾಗತಿಸಲಾಯಿತು. ಮಾತೆ ಮೇರಿಯ ಜನ್ಮದಿನದ ಶುಭದಿನವನ್ನು ಕರಾವಳಿಯಲ್ಲಿ ತೆನೆ ಹಬ್ಬ ಅಂತಾನೂ ಕರೆಯುತ್ತಾರೆ.

    ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್‍ನಲ್ಲಿ ಅದ್ಧೂರಿಯಾಗಿ ಮೋತಿ ಫೆಸ್ಟ್ ನಡೆಯಿತು. ಉಡುಪಿ ಧರ್ಮಗುರುಗಳು ಮಾತೆ ಮೇರಿಯನ್ನು ತೊಟ್ಟಿಲಿನಲ್ಲಿ ಹೊತ್ತು ತರುವ ಮೆರವಣಿಗೆಯ ನೇತೃತ್ವವನ್ನ ವಹಿಸಿದ್ದರು. ಶಿಸ್ತುಬದ್ಧ ವಾದ್ಯಗೋಷ್ಠಿಯ ಹಿನ್ನೆಲೆಯಲ್ಲಿ ಪೂಜಾವಿಧಿ ನಡೆಯಿತು.

    ಚರ್ಚ್‍ಗೆ ಬರುವ ಭಕ್ತರು ಮನೆಯಲ್ಲೇ ಬೆಳೆದ ಹೂವನ್ನು ತರುತ್ತಾರೆ. ಪೂಜಾವಿಧಿ ಸಂದರ್ಭ ಭಕ್ತರು ಮಾತೆ ಮೇರಿಯನ್ನು ಮಲಗಿಸಿದ ತೊಟ್ಟಿಲಿನತ್ತ ಬಣ್ಣಬಣ್ಣದ ಹೂವು ಎಸೆಯುತ್ತಾರೆ. ವಿವಿಧ ಬಣ್ಣದ ಹೂವುಗಳು ತೊಟ್ಟಿಲಿನತ್ತ ತೂರಿಬರುವ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳುವುದೇ ಚೆಂದ.

    ಮಾಂಸಪ್ರಿಯ ಕ್ರೈಸ್ತ ಸಮುದಾಯದವರು ಇಂದು ಶುದ್ಧ ಸಸ್ಯಾಹಾರಿಗಳು. ಮನೆಯಲ್ಲೇ ಬೆಳೆದ ಹೂವುಗಳನ್ನು, ತರಕಾರಿಗಳನ್ನು ಚರ್ಚ್‍ಗೆ ತಂದು ಪೂಜಿಸುತ್ತಾರೆ. ಧರ್ಮಗುರುಗಳು ಚರ್ಚ್‍ಗೆ ಬಂದ ಭಕ್ತರಿಗೆ ತೆನೆಗಳನ್ನು ವಿತರಿಸುತ್ತಾರೆ.

    UDP Tene Habba 10

    UDP Tene Habba 9

    UDP Tene Habba8

    UDP Tene Habba7

    UDP Tene Habba6

    UDP Tene Habba 5

    UDP Tene Habba 4

    UDP Tene Habba 3

    UDP Tene Habba 2

    UDP Tene Habba 1