Tag: ಕರ್ನಾಟಕ ಹೈಕೋರ್ಟ್

  • ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀಠ

    ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀಠ

    ಬೀದರ್: ಕೋರ್ಟ್‌ಗೆ ಹಾಜರಾಗಲು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್‌ನ (Karnataka Highcourt) ಕಲಬುರಗಿ ಪೀಠ (Kalaburagi Bench) ಔರಾದ್ (Aurad) ಶಾಸಕ ಪ್ರಭು ಚೌಹಾಣ್‌ಗೆ  (Prabhu Chauhan) 1 ಲಕ್ಷ ರೂ. ದಂಡ ವಿಧಿಸಿದೆ.

    ಶಾಸಕ ಪ್ರಭು ಚೌಹಾಣ್ ವಿರುದ್ಧ ಜಾತಿ ವಿವಾದಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೀಠದಲ್ಲಿ ವ್ಯಕ್ತಿಯೊಬ್ಬರು ದಾವೆ ಹೂಡಿದ್ದರು. ಈ ಸಂಬಂಧ ಕೋರ್ಟ್‌ಗೆ ಹಾಜರಾಗಲು ಚೌಹಾಣ್ ಪರ ವಕೀಲರು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ದಂಡ ವಿಧಿಸಲಾಗಿದೆ.ಇದನ್ನೂ ಓದಿ: ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಸವಾರಿ

    ಕಳೆದ ಬಾರಿಯೂ ಕೋರ್ಟ್‌ಗೆ ಹಾಜರಾಗದೆ ಚೌಹಾಣ್ ಪರ ವಕೀಲರು ಸಮಯ ಕೇಳಿದ್ದರು. ಈ ಬಾರಿಯೂ ಮತ್ತೆ ಸಮಯ ಕೇಳಿದ್ದಕ್ಕೆ 1 ಲಕ್ಷ ದಂಡ ರೂ. ವಿಧಿಸಿ, ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಬೀದರ್‌ನ (Bidar) ಕಮಲ ನಗರ ತಾಲೂಕಿನ ನಿವಾಸಿ ನರಸಿಂಗ್ ಎಂಬುವವರು ಶಾಸಕ ಪ್ರಭು ಚೌಹಾಣ್ ಪರಿಶಿಷ್ಟ ಜಾತಿಯವರಲ್ಲ, ಅವರು ಪರಿಶಿಷ್ಟ ಪಂಗಡದವರು ಎಂದು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ದಾವೆ ಹೂಡಿದ್ದರು.

    ಚೌಹಾಣ್ ಅವರು ಮೂಲತಃ ಮಹಾರಾಷ್ಟ್ರದಲ್ಲಿ (Maharashtra) ಜನಿಸಿದ್ದು, ಕರ್ನಾಟಕ (Karnataka) ನಿವಾಸಿಯಲ್ಲ. ಅವರು ಮಹಾರಾಷ್ಟ್ರದಲ್ಲಿ ಲಂಬಾಣಿ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿದ್ದಾರೆ. ಹೀಗಾಗಿ ಶಾಸಕ ಚೌಹಾಣ್ ಅವರ ಎಸ್ಸಿ (SC) ಜಾತಿ ಪ್ರಮಾಣ ಪತ್ರ ರದ್ದುಗೊಳಿಸಬೇಕು ಎಂದು ಉಲ್ಲೇಖಿಸಿದ್ದರು.ಇದನ್ನೂ ಓದಿ: ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ ಭವಿಷ್ಯ ಇಂದು ನಿರ್ಧಾರ

     

  • ರೇಣುಕಾಸ್ವಾಮಿ ಕೇಸ್ – ಜಾಮೀನಿನ ಮೇಲೆ ಹೊರಗಿರುವ 5 ಆರೋಪಿಗಳಿಗೂ ಶುರುವಾದ ಸಂಕಷ್ಟ

    ರೇಣುಕಾಸ್ವಾಮಿ ಕೇಸ್ – ಜಾಮೀನಿನ ಮೇಲೆ ಹೊರಗಿರುವ 5 ಆರೋಪಿಗಳಿಗೂ ಶುರುವಾದ ಸಂಕಷ್ಟ

    -ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನರ ಅರೆಸ್ಟ್ ಬಳಿಕ ಕ್ರಮಕ್ಕೆ ಮುಂದಾದ ಪೊಲೀಸರು

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ಲ್ಲಿ ಜಾಮೀನಿನ ಮೇಲೆ ಹೊರಗಿರುವ 5 ಆರೋಪಿಗಳಿಗೂ ಇದೀಗ ಸಂಕಷ್ಟ ಶುರುವಾಗಿದೆ.ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ – ನಿವೃತ್ತ ಲೋಕೋಪೈಲೆಟ್ ಅರೆಸ್ಟ್

    ಇತ್ತೀಚಿಗಷ್ಟೇ ಆ.14ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗಳಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪೊಲೀಸರು ಮತ್ತೆ 5 ಆರೋಪಿಗಳ ಜಾಮೀನು ರದ್ದು ಮಾಡೋದಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಪೂರ್ವಾನುಮತಿ ಕೇಳಿದ್ದರು. ಅದರಂತೆ ಸರ್ಕಾರ ಅನುಮತಿ ನೀಡಿದೆ.

    ಇದೀಗ ಸೆಷನ್ ಕೋರ್ಟ್‌ನಲ್ಲಿ ಜಾಮೀನು ಪಡೆದುಕೊಂಡಿದ್ದ ಐದು ಆರೋಪಿಗಳಾದ ಪವನ್, ರಾಘವೇಂದ್ರ, ವಿನಯ್, ಧನ್‌ರಾಜ್ ಮತ್ತು ನಂದೀಶ್ ಜಾಮೀನು ರದ್ದುಗಳಿಸುವಂತೆ ಪೊಲೀಸರು ಶುಕ್ರವಾರ (ಆ.21) ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಿದ್ದಾರೆ.ಇದನ್ನೂ ಓದಿ: ಚಿತ್ರದುರ್ಗ ವರ್ಷಿತಾ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್

  • ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ

    ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ

    ಬೆಂಗಳೂರು: ಮತ್ತೆ ಜೈಲು ಸೇರಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಢವಢವ ಶುರುವಾಗಿದೆ. ಏಕೆಂದ್ರೆ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ (Fasttrack Court) ಮನವಿ ಸಲ್ಲಿಸಲು ಪೊಲೀಸರು (Bengaluru Police) ತಯಾರಿ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

    ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ (Supreme Court) ತ್ವರಿತಗತಿಯಲ್ಲಿ ಕೇಸ್‌ ಇತ್ಯರ್ಥಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ರೇಣುಕಾ ಕೊಲೆ ಹಠಾತ್‌ ಪ್ರಚೋದನೆಯಿಂದಾಗಿಲ್ಲ, ಪೂರ್ವಯೋಜಿತ – ದರ್ಶನ್‌ ಪಾತ್ರದ ಬಗ್ಗೆ ಸುಪ್ರೀಂ ಅಭಿಪ್ರಾಯ

    supreme Court 1

    6 ತಿಂಗಳ ಒಳಗೆ ಟ್ರಯಲ್‌ ಮುಗಿಸಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡುವುದಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪೊಲೀಸರು ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಇಲಾಖೆ (Law Department) ಜೊತೆಗೆ ಚರ್ಚಿಸಿ ಸೋಮವಾರ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿಗೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

    ಜಾಮೀನು ರದ್ದುಗೊಳಿಸಿದ್ದ ಸುಪ್ರೀಂ
    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎ-2 ದರ್ಶನ್, ಎ-1 ಪವಿತ್ರಾಗೌಡ (Darshan And Pavithra Gowda) ಸೇರಿದಂತೆ, 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕೊಟ್ಟಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ರದ್ದುಗೊಳಿಸಿತ್ತು. ಎಲ್ಲಾ ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಬೇಕು ಅಂತ ಸುಪ್ರೀಂ (Supreme Court) ಸೂಚನೆ ನೀಡಿದ್ದರಿಂದ ಪೊಲೀಸರು ಬಂಧಿಸಿದ್ದರು. ಐವರು ಆರೋಪಿಗಳಿಗೆ ಠಾಣೆಯಲ್ಲೇ ವೈದ್ಯಕೀಯ ಪರೀಕ್ಷೆ (Medical test) ನಡೆಸಿದ್ದರು. ವೈದ್ಯಕೀಯ ತಪಾಸಣೆ ಬಳಿಕ ಡಿಗ್ಯಾಂಗ್‌ನ ಐವರು ಆರೋಪಿಗಳನ್ನು ಕೋರಮಂಗಲದಲ್ಲಿರುವ ಜಡ್ಜ್‌ ನಿವಾಸದ ಎದುರು ಹಾಜರುಪಡಿಸಿ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.

  • ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

    ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

    – ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟ್‌, ಮದ್ಯ ಸೇವಿಸಿದ್ರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಗ್ಯಾರಂಟಿ
    – ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡಕೂಡದು ಅಂತ ಎಚ್ಚರಿಕೆ

    ಬೆಂಗಳೂರು: ದರ್ಶನ್, ಪವಿತ್ರಾ ಸೇರಿ ಆರೋಪಿಗಳ ಬೇಲ್ ರದ್ದು ಮಾಡಿರುವ ಸುಪ್ರೀಂ ಕೋರ್ಟ್ (Supreme Court), ಈ ಹಿಂದೆ ಕರ್ನಾಟಕ ಹೈಕೋರ್ಟ್ (Karnataka Highcourt) ಆದೇಶದ ಹುಳುಕುಗಳನ್ನು ಎತ್ತಿ ತೋರಿದೆ. ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ಸಕಾರಣಗಳನ್ನು ನೀಡಿಲ್ಲ. ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ. ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ ಅಂತ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.

    Darshan 3

    ಸುಪ್ರೀಂ ಆಕ್ಷೇಪಣೆಗಳೇನು? (ಆದೇಶ ಓದಿದ ನ್ಯಾ. ಮಹದೇವನ್)
    * ಹೈಕೋರ್ಟ್ ಆದೇಶವು ವಿಕ್ಷಿಪ್ತ ದೋಷಗಳಿಂದ ಕೂಡಿದೆ.
    * ಹೈಕೋರ್ಟ್ ಆದೇಶವು ಗಂಭೀರ ವೈರುಧ್ಯಗಳಿಂದ ಕೂಡಿದೆ.
    * ಜಾಮೀನು ನೀಡಲು ಹೈಕೋರ್ಟ್ ಆದೇಶದಲ್ಲಿ ವಿಶೇಷ ಅಥವಾ ಸಕಾರಣಗಳನ್ನು ನೀಡಲಾಗಿಲ್ಲ.
    * ನ್ಯಾಯಾಲಯವು ಯಾಂತ್ರಿಕವಾಗಿ ತನ್ನ ಅಧಿಕಾರ ಬಳಕೆ ಮಾಡಿದೆ.
    * ಕಾನೂನಾತ್ಮಕವಾಗಿ ಬಹುಮುಖ್ಯವಾದ ವಾಸ್ತವಾಂಶಗಳನ್ನ ಕೈಬಿಟ್ಟಿದೆ.
    * ವಿಚಾರಣಾ ಹಂತದಲ್ಲಿರುವ ಪ್ರಕರಣದ ಸಾಕ್ಷ್ಯಗಳನ್ನು ಬಹುಮುಖ್ಯವಾಗಿ ಪರಿಗಣಿಸಿದೆ.
    * ಸಾಕ್ಷಿಗಳ ಪ್ರಾಮಾಣಿಕತೆ, ನಂಬಲರ್ಹತೆಯನ್ನು ನಿರ್ಧರಿಸಬೇಕಿರುವುದು ವಿಚಾರಣಾ ನ್ಯಾಯಾಲಯ ಮಾತ್ರ.
    * ಇಂಥ ಗಂಭೀರವಾದ ಪ್ರಕರಣದ ಸ್ವರೂಪ ಮತ್ತು ಆರೋಪಿಗಳ ಪಾತ್ರವನ್ನು ಪರಿಗಣಿಸಬೇಕು.
    * ಪರಿಗಣಿಸದೇ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವುದು ಅನಗತ್ಯವಾಗಿ ವ್ಯಾಪ್ತಿ ಮೀರಿದ ಚಟುವಟಿಕೆ.
    * ಸಕ್ಷಮ ಪ್ರಾಧಿಕಾರಿಗಳು ತಕ್ಷಣ ಆರೋಪಿಗಳನ್ನ ವಶಕ್ಕೆ ಪಡೆಯಬೇಕು.
    * ತುರ್ತಾಗಿ ವಿಚಾರಣೆ ನಡೆಸಿ, ಮೆರಿಟ್ ಮೇಲೆ ಪ್ರಕರಣವನ್ನ ವಿಚಾರಣಾ ನ್ಯಾಯಾಲಯ ನಿರ್ಧರಿಸಬೇಕು.
    * ಇಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಜಾಮೀನಿಗೆ ಸೀಮಿತವಾಗಿದೆ.

    ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿದೆ. ಆರೋಪಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಿರೋದಾಗಿ ಹೇಳಿದೆ. ಅಲ್ಲದೇ, ಫೈವ್ ಸ್ಟಾರ್ ಟ್ರೀಟ್‌ಮೆಂಟ್‌ಗೂ ವಾರ್ನಿಂಗ್ ಕೊಟ್ಟಿದೆ. ಮಹಾದೇವನ್ ಆದೇಶದ ಬಳಿಕ ಅದಕ್ಕೆ ಪೂರಕವಾಗಿ ನ್ಯಾ. ಪಾರ್ದಿವಾಲಾ… ನನ್ನ ಗೌರವಾನ್ವಿತ ಸಹೋದರ, ನ್ಯಾಯಮೂರ್ತಿ ಆರ್ ಮಹಾದೇವನ್ ಪ್ರೌಢಿಮೆಯಿಂದ ಕೂಡಿರುವ ತೀರ್ಪು ನೀಡಿದ್ದು, ಇದು ಅಮೋಘವಾದದ್ದಾಗಿದೆ ಅಂತ ಇದಕ್ಕೆ ಹೆಚ್ಚುವರಿ ಆದೇಶ ಸೇರ್ಪಡೆ ಮಾಡಿದ್ದಾರೆ.

    ನ್ಯಾ. ಪಾರ್ದಿವಾಲಾ ಪ್ರಸ್ತಾಪಿಸಿದ ಅಂಶಗಳೇನು…?
    * ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು/ಅವಳು ಕಾನೂನಿಗಿಂತ ಮೇಲಲ್ಲ.
    * ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ.
    * ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಹಂತದಲ್ಲಿ ಯಾವುದೇ ಬೆಲೆ ತೆತ್ತಾದರೂ ಕಾನೂನಾತ್ಮಕ ಆಡಳಿತವನ್ನು ಎತ್ತಿಹಿಡಿಯಬೇಕು.
    * ಎಲ್ಲಾ ಸಮಯದಲ್ಲೂ ಕಾನೂನಾತ್ಮಕ ಆಡಳಿತವನ್ನ ಕಾಪಾಡಿಕೊಳ್ಳುವುದು ಇಂದಿನ ಅಗತ್ಯ.
    * ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿದ್ದು ನಮಗೆ ತಿಳಿದಿದೆ.
    * ಈ ಸಂಬಂಧ ಜೈಲು ಮೇಲ್ವಿಚಾರಕರು ಸೇರಿ ಎಲ್ಲರ ಅಮಾನತು ಕೂಡ ಗೊತ್ತಾಗಿದೆ.
    * ಇದು ಮತ್ತೆ ಪುನರಾವರ್ತನೆ ಆಗಬಾರದು.
    * ಆರೋಪಿಗಳು ಜೈಲು ಆವರಣದಲ್ಲಿ ಸಿಗರೇಟು, ಮದ್ಯಸೇವನೆ ಮಾಡಿದರೆ ರಾಜ್ಯ ಸರ್ಕಾರಕ್ಕೆ ಸಮನ್ಸ್ ಕೊಡ್ತೇವೆ

    ಇದಕ್ಕೆ ರಾಜ್ಯ ಸರ್ಕಾರಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು ಪೂರಕ ತೀರ್ಪಿನಲ್ಲಿ ನೀವು ಪ್ರಸ್ತಾಪಿಸಿರುವ ವಿಚಾರಗಳು ದೇಶಾದ್ಯಂತ ಪರಿಣಾಮ ಬೀರಲಿದ್ದು, ಈ ತೀರ್ಪನ್ನ ದೇಶದ ಎಲ್ಲಾ ಜೈಲುಗಳಿಗೆ ಕಳುಹಿಸಿಕೊಡಬೇಕಿದೆ. ಗಂಭೀರ ವಿಚಾರ ಇದಾಗಿದೆ ಅಂದ್ರು. ಅದಕ್ಕೆ ಪೀಠವು ಜೈಲು ಆತಿಥ್ಯದ ಫೋಟೊ, ವಿಡಿಯೋಗಳನ್ನ ನಾವು ನೋಡಿದ್ರೆ ನಿಮಗೆ ಮೊದಲು ಸಮನ್ಸ್ ನೀಡಲಾಗುತ್ತದೆ ಅಂದರು. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆ ಮಾತನಾಡಿ, ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ರವಾನಿಸಲಾಗುವುದು ಅಂತ ಲೂಥ್ರಾ ಪೀಠಕ್ಕೆ ಹೇಳಿದರು.

  • ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ (ಜು.22) ತೀರ್ಮಾನವಾಗಲಿದೆ. ಸರ್ಕಾರದ ಪರ ವಿಚಾರಣೆ ಕೇಳಿರುವ ಸುಪ್ರಿಂ ಕೋರ್ಟ್ (Supreme Court) ನಾಳೆ ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ. ಇದನ್ನೂ ಓದಿ:  ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    Pavithra Gowda 1

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಮುಂದುವರಿಯಲಿದೆ. ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ನಾಳೆ ಆರೋಪಿಗಳ ಪರ ವಕೀಲರ ವಾದ ಮಂಡನೆಯನ್ನು ಕೇಳಲಿದ್ದು, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ:  SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

    ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದು, ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು ಮಂಗಳವಾರ ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

    ಇನ್ನು ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಜಾಮೀನು ನೀಡಲು ಹೇಗಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ, ಹೈಕೋರ್ಟ್‌ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.

    ಮಂಗಳವಾರ ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ನಾಳೆಯೇ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗೀ ಕೊಲೆ ಕೇಸ್‌ನ ಆರೋಪಿ ಎ1 ಪವಿತ್ರಾ, ಎ2 ದರ್ಶನ್ ಮತ್ತೆ ಜೈಲಿಗೆ ಹೋಗ್ತಾರಾ ಅಥವಾ ಸೇಫ್ ಆಗ್ತಾರಾ ಅಂತ ಗೊತ್ತಾಗಲಿದೆ.

  • ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

    ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

    ಬೆಳಗಾವಿ: 30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ನೀಡಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಬೆಳಗಾವಿಯ ಜಿಲ್ಲಾಧಿಕಾರಿ (Belagavi DC) ಮೊಹಮ್ಮದ್ ರೋಷನ್ ಅವರು ಓಡಾಡ್ತಿದ್ದ ಕಾರು ಜಪ್ತಿ ಮಾಡಲಾಗಿದೆ.

    ದೂದಗಂಗಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸಣ್ಣ ನೀರಾವರಿ ಇಲಾಖೆ ಅಡಿಯಲ್ಲಿ ಕಾಮಗಾರಿಯೊಂದನ್ನ ದಿ.ನಾರಾಯಣ್ ಕಾಮತ್ ಎಂಬವರಿಗೆ ಗುತ್ತಿಗೆ ನೀಡಲಾಗಿತ್ತು. 1992-93ರಲ್ಲಿ ಚಿಕ್ಕೋಡಿ ತಾಲೂಕಿನಲ್ಲಿ ಕಾಮಗಾರಿ ಮಾಡಲಾಗಿತ್ತು. ಕಾಮಗಾರಿ ಮುಗಿದು 2 ವರ್ಷ ಕಳೆದಿದ್ದರೂ ಬಿಲ್‌ ಪಾವತಿ ಆಗಿರಲಿಲ್ಲ. ಹೀಗಾಗಿ ಬಿಲ್‌ಗಾಗಿ 1995ರಲ್ಲಿ ಗುತ್ತಿಗೆದಾರ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

    03 NEWS

    ಈ ವೇಳೆ ಬೆಳಗಾವಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ 34 ಲಕ್ಷ ರೂ. ಪರಿಹಾರಕ್ಕೆ ಆದೇಶಿಸಿತ್ತು. ಸ್ಥಳೀಯ ಕೋರ್ಟ್‌ ಆದೇಶ ಪ್ರಶ್ನಿಸಿ ಸಣ್ಣ ನೀರಾವರಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ 2024ರ ಜೂನ್ ಒಳಗಾಗಿ ಗುತ್ತಿಗೆದಾರನಿಗೆ ಬಡ್ಡಿ ಸಮೇತ ಅರ್ಧ ಬಿಲ್ ಪಾವತಿ ಮಾಡುವಂತೆ ಹೈಕೋರ್ಟ್ ಕೂಡ ಸೂಚನೆ ನೀಡಿತ್ತು.

    ಹೈಕೋರ್ಟ್ ಆದೇಶ ಬಳಿಕವೂ ಬಾಕಿ ಬಿಲ್ ನೀಡಲು ವಿಫಲವಾದ ಹಿನ್ನೆಲೆ ಇಂದು (ಜು.18) ಡಿಸಿ ಕಾರು ಜಪ್ತಿ ಮಾಡಲಾಗಿದೆ. ಗುತ್ತಿಗೆದಾರನ ಪರ ಹಿರಿಯ ವಕೀಲ ಓ.ಬಿ ಜೋಶಿ ವಾದಿಸಿದ್ದರು. ಇದನ್ನೂ ಓದಿ: ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

  • ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

    – ಜು.22ಕ್ಕೆ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ

    ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜಾಮೀನು ಪಡೆದು ಶೂಟಿಂಗ್, ವಿದೇಶ ಪ್ರವಾಸ ಅಂತಾ ಜಾಲಿ ಮೂಡ್‌ನಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ (Supreme Court) ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಮಂಗಳವಾರ (ಜು.22) ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು ಅಂದು ದರ್ಶನ ಪವಿತ್ರಾಗೌಡ (Pavithra Gowda) ಸೇರಿ ಏಳು ಮಂದಿಯ ಭವಿಷ್ಯ ನಿರ್ಧಾರವಾಗಲಿದೆ.

    Pavithra Gowda 1

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ಜಾಮೀನು ಪಡೆದು ಸದ್ಯ ಶೂಟಿಂಗ್‌ಗಾಗಿ ವಿದೇಶಿ ಪ್ರವಾಸ ಅಂತಾ ಬ್ಯುಸಿಯಾಗಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಡುವ ಸಾಧ್ಯತೆ ಇದೆ. ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾ.ಪರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯಗಳನ್ನ ವ್ಯಕ್ತಪಡಿಸಿದೆ.

    darshan renukaswamy pavithra gowda

    ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾ. ಪರ್ದಿವಾಲಾ. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಹೈಕೋರ್ಟ್ ಆದೇಶವನ್ನ ಹೇಗೆ ನೀಡಿದೆ ಅನ್ನೋದನ್ನ ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಹೇಳಿದ ನ್ಯಾಯಾಲಯ ಕೇಳಿತು. ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

    22ಕ್ಕೆ ಜಾಮೀನು ಭವಿಷ್ಯ ನಿರ್ಧಾರ
    ಇದಕ್ಕೆ ಪ್ರತಿಯಾಗಿ ದರ್ಶನ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾಗಿದ್ದರು. ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾ. ಪರ್ದಿವಾಲಾ ಮಂಗಳವಾರ ಅಂತಿಮವಾದ ಮಂಡಿಸಿ, ಅಂದೇ ಈ ಬಗ್ಗೆ ತೀರ್ಪು ನೀಡಲಾಗುವುದು ಎಂದು ಹೇಳಿದರು. ಹೀಗಾಗೀ ಅಂದು ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

    ಮಂಗಳವಾರವೇ ಪವಿತ್ರಾ ಗೌಡ ಸೇರಿ ಇತರ ಐವರ ಭವಿಷ್ಯ 
    ಇನ್ನೂ ಮಂಗಳವಾರ ನಟ ದರ್ಶನ ಮಾತ್ರವಲ್ಲ, ಆಪ್ತೆ ಪವಿತ್ರಾ ಗೌಡ ಸೇರಿ ಇತರೆ ಐವರು ಆರೋಪಿಗಳ ಭವಿಷ್ಯವೂ ನಿರ್ಧಾರವಾಗಲಿದೆ. ದರ್ಶನ ಪರ ವಾದ ಆಲಿಸಿದ ಬಳಿಕ ಉಳಿದ ಆರೋಪಿಗಳ ಪರ ವಾದವನ್ನೂ ಕೋರ್ಟ್ ಆಲಿಸಲಿದೆ. ಇದಾದ ಬಳಿಕ ಕೋರ್ಟ್ ತನ್ನ ಅಂತಿಮ ಆದೇಶ ನೀಡಲಿದೆ. ಇದನ್ನೂ ಓದಿ: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್‌: ವಾಣಿಜ್ಯ ತೆರಿಗೆ ಇಲಾಖೆ

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ತನಿಖೆ ಮಾಡಿ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಹೀಗಾಗಿ ಜಾಮೀನು ಸಿಗಬಹುದು ಮುಂದುವರಿಸಬಹುದು ಎನ್ನುವುದು ದರ್ಶನ ಮತ್ತು ಇತರೆ ಆರೋಪಿಗಳ ಪರ ವಕೀಲರ ಲೆಕ್ಕಾಚಾರ. ಆದ್ರೆ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿರುವ ಸುಪ್ರೀಂ ಕೋರ್ಟ್ ದರ್ಶನ್ ಗೆ ಜಾಮೀನು ನೀಡಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದೆ. ಹೀಗಾಗೀ ಜಾಮೀನು ರದ್ದಾಗುವ ಸಾಧ್ಯತೆ ಇದೆ ಅಂತಾರೆ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಚಂದ್ರಕಾಂತ್ ಅಂಗಡಿ.

  • ಎಂಎಲ್‌ಸಿ ರವಿಕುಮಾರ್‌ಗೆ ʻಹೈʼ ರಿಲೀಫ್‌ – ಜು.8ರ ವರೆಗೆ ಬಂಧಿಸದಂತೆ ಆದೇಶ

    ಎಂಎಲ್‌ಸಿ ರವಿಕುಮಾರ್‌ಗೆ ʻಹೈʼ ರಿಲೀಫ್‌ – ಜು.8ರ ವರೆಗೆ ಬಂಧಿಸದಂತೆ ಆದೇಶ

    ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ (BJP MLC Ravikumar) ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

    ಜೂನ್‌ 8ರ ವರೆಗೆ ಬಂಧಿಸಂದಂತೆ ಆದೇಶ ನೀಡಿರುವ ಕೋರ್ಟ್‌ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಶಾಲಿನಿ ರಜನೀಶ್‌ ವಿರುದ್ಧ ರವಿಕುಮಾರ್ ಮಾತಾಡಿದ್ದು ಸರಿ ಅಲ್ಲ: ಬಿಜೆಪಿ ಶಾಸಕ ಸುರೇಶ್ ಗೌಡ

    ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂ.66/2025 ಸಂಖ್ಯೆಯ ಎಫ್‌ಐಆರ್‌ ರದ್ದು ಮಾಡುವಂತೆ ರವಿಕುಮಾರ್‌ ಸಲ್ಲಿಸಿದ್ದ ಅರ್ಜಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಪೀಠದಲ್ಲಿ ವಿಚಾರಣೆ ನಡೆಯಿತು. ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಎಂಎಲ್‌ಸಿ ರವಿಕುಮಾರ್ ಅವರು ವಿಧಾನಸೌಧ ಬಳಿ ಪ್ರತಿಭಟನೆ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ. ಟಿವಿಯಲ್ಲಿ ಮಾತನಾಡಿದ್ದಾರೆ ಎಂದು ದೂರುದಾರರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ರವಿಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಇದು ರಾಜಕೀಯ ದುರುದ್ದೇಶದ ಪ್ರಕರಣವಾಗಿದ್ದು, ಪೀಠಕ್ಕೆ ರವಿಕುಮಾರ್ ಏನು ಮಾತನಾಡಿದ್ದಾರೆ ಎಂಬುದರ ವಿಡಿಯೊವನ್ನು ಟ್ಯಾಬ್ ಮೂಲಕ ತೋರಿಸಿದ್ರು. ಇದನ್ನೂ ಓದಿ: ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದ್ರು.

    ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ಎಂಎಲ್‌ಸಿ ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಬಂಧನ ಭೀತಿಯಲ್ಲಿದ್ದ ರವಿಕುಮಾರ್‌ಗೆ ಎರಡೂ ಕೋರ್ಟ್ ಗಳ ಆದೇಶ ನಿರಾಳತೆ ತಂದಿದೆ. ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌
  • ಬೆಂಗಳೂರು ಕಾಲ್ತುಳಿತಕ್ಕೆ ರಾಹುಲ್ ಗಾಂಧಿ ಅತೃಪ್ತಿ – ಕ್ರೆಡಿಟ್ ಲೆಕ್ಕಾಚಾರದಲ್ಲಿ ಅವಸರದ ತೀರ್ಮಾನ?

    ಬೆಂಗಳೂರು ಕಾಲ್ತುಳಿತಕ್ಕೆ ರಾಹುಲ್ ಗಾಂಧಿ ಅತೃಪ್ತಿ – ಕ್ರೆಡಿಟ್ ಲೆಕ್ಕಾಚಾರದಲ್ಲಿ ಅವಸರದ ತೀರ್ಮಾನ?

    – ವಿಧಾನಸೌಧ ಕಾರ್ಯಕ್ರಮ ಆಯೋಜಿಸಿದ್ದೇ ಸರ್ಕಾರ; ರಾಜಭವನ
    – 2 ದಿನದಲ್ಲಿ ವರದಿ ಕೊಡಲು ಹೈಕೋರ್ಟ್ ಕಟ್ಟಾಜ್ಞೆ

    ನವದೆಹಲಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಭೀಕರ ಕಾಲ್ತುಳಿತ ಪ್ರಕರಣ (Stampede Case), ಸರ್ಕಾರ ನಿರ್ವಹಿಸಿದ ಬಗೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ರಾಹುಲ್ ಭೇಟಿಯಾಗಿರುವ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ವರದಿ ಕೊಟ್ಟಿದ್ದಾರೆ.

    ಕ್ರೆಡಿಟ್ ಕ್ಲೈಮ್‌ ಲೆಕ್ಕಾಚಾರದಲ್ಲಿ ಅವಸರದ ತೀರ್ಮಾನವೇ ಘಟನೆಗೆ ಕಾರಣ ಆಗಿದೆ. ನಮ್ಮ ಜವಾಬ್ದಾರಿಯೂ ಇದೆ ಎಂದು ಸಿಎಂ-ಡಿಸಿಎಂ ತಪ್ಪೊಪ್ಪಿಕೊಂಡಿದ್ದಾರೆ ಅನ್ನೋದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

    ಹೈಕಮಾಂಡ್‌ಗೆ ಸಿದ್ದರಾಮಯ್ಯ ರಿಪೋರ್ಟ್‌ ಏನು?
    ಆರ್‌ಸಿಬಿಗೆ ಅತಿ ಹೆಚ್ಚು ಫ್ಯಾನ್ (RCB Fans) ಫಾಲೋವರ್ಸ್ ಇದ್ದಾರೆ. 18 ವರ್ಷದ ನಂತರ ಕಪ್ ಗೆದ್ದಿದ್ದರಿಂದ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ್ದ ಸಂಭ್ರಮವಿತ್ತು. ಫ್ರಾಂಚೈಸಿಯೊಂದರ ಗೆಲುವಷ್ಟೇ ಅಂತ ಪರಿಗಣಿಸಿ ಸುಮ್ಮನಾಗುವ ಪರಿಸ್ಥಿತಿ ಇರಲಿಲ್ಲ. ಸರ್ಕಾರ ಸುಮ್ಮನಿದ್ದರೆ ಸರ್ಕಾರಕ್ಕೆ ಅದೇ ನೆಗೆಟಿವ್ ಆಗುವ ಸಾಧ್ಯತೆ ಇತ್ತು. ಯುವ ಸಮುದಾಯದ ಪಾಲಿಗೆ ಸರ್ಕಾರವೂ ನಮ್ಮ ಜೊತೆಗೆ ಕೈಜೋಡಿಸಿತು ಎಂಬ ಖುಷಿ ಇರುತ್ತಿತ್ತು. ಹಾಗಾಗಿ, ಆರ್‌ಸಿಬಿ ಆಟಗಾರರ ಸನ್ಮಾನಕ್ಕೆ ಸರ್ಕಾರ ಮುಂದಾಯಿತು. ಇದು ಸಹಜವಾಗಿಯೇ ಸರ್ಕಾರದ ಇಮೇಜ್ ಹೆಚ್ಚಳಕ್ಕೂ ಸಹಕಾರಿ ಆಗ್ತಿತ್ತು. ಕಾಲ್ತುಳಿತಕ್ಕೆ ಪೊಲೀಸರ ವೈಫಲ್ಯವೇ ಕಾರಣ, ಸರಿಯಾದ ಸಿದ್ಧತೆ ಮಾಡದ ಕಾರಣ ಅಧಿಕಾರಿಗಳ ಅಮಾನತು ಆಗಿದೆ. ಘಟನೆ ಗೊತ್ತಾಗುತ್ತಿದ್ದಂತೆ ನಾನೇ ಆಸ್ಪತ್ರೆಗೆ ಹೋಗಿ ಪರಿಸ್ಥಿತಿ ನಿಭಾಯಿಸಲು ಸೂಚಿಸಿದ್ದೇನೆ. ಮಾಹಿತಿ ಇಲ್ಲದ ಕಾರಣ ಡಿಸಿಎಂ ಕ್ರೀಡಾಂಗಣಕ್ಕೆ ಹೋಗಿದ್ದಾರೆ ಎಂದು ಸಿಎಂ ರಾಹುಲ್‌ ಗಾಂಧಿ ಅವರಿಗೆ ರಿಪೋರ್ಟ್‌ ನೀಡಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

    ಡಿಕೆಶಿ ವರದಿ ಏನು…?
    ಕಾಲ್ತುಳಿತಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ವಿಧಾನಸೌಧ ಮುಂದೆ ಅಹಿತಕರ ಘಟನೆ ನಡೆದಿಲ್ಲ. ನಿರೀಕ್ಷೆಗೂ ಮೀರಿದ ಜನ ಸೇರಿದ್ದಕ್ಕೆ ಸಮಸ್ಯೆ ಆಯ್ತು. ಪೂರ್ವ ಸಿದ್ಧತೆ ಮಾಡದೇ ಇರೋದು ಘಟನೆಗೆ ಕಾರಣ.. ಗೌರವ ಉದ್ದೇಶದಿಂದ ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ್ದು, ಸ್ಟೇಡಿಯಂ ಸಂಭ್ರಮಾಚರಣೆ ವೇಳೆ ಸಾವಾಗಿರುವ ಬಗ್ಗೆ ಗೊತ್ತಿರಲಿಲ್ಲ. ಹೀಗಾಗಿ ನಾನು ಸಮಾರಂಭದಲ್ಲಿ ಭಾಗಿಯಾಗಿದ್ದೆ. ದುರಂತ ಗೊತ್ತಾದ ಕೂಡಲೇ ಬೇಗ ಮುಗಿಸಲು ತಿಳಿಸಿದೆ. ಸ್ಟೇಡಿಯಂ ಒಳಗೆ ಸಾವಿರಾರು ಅಭಿಮಾನಿಗಳಿದ್ದರು. ಕಾರ್ಯಕ್ರಮ ಮಾಡದಿದ್ರೆ ಆಕ್ರೋಶ ಜಾಸ್ತಿ ಆಗ್ತಿತ್ತು. ಕೂಡಲೇ ಆಸ್ಪತ್ರೆಗೆ ಹೋಗಿ ಗಾಯಾಳುಗಳನ್ನು ವಿಚಾರಿಸಿದ್ದೇವೆ ಎಂದು ತಿಳಿಸಿರುವುದಾಗಿ ತಿಳಿದುಬಂದಿದೆ.

    ಕೊನೆಗೂ ಮೌನ ಮುರಿದ ರಾಜಭವನ
    ವಿಧಾನಸೌಧ ಗ್ರ್ಯಾಂಡ್‌ ಸ್ಟೆಪ್ಸ್ ಮೇಲೆ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲರಿಗೆ ಆಹ್ವಾನಿಸಿದ್ಯಾರು..? ನಮಗೆ ಗೊತ್ತಿಲ್ಲ ಅವರನ್ನೇ ಕೇಳಿ ಅಂತ ಸಿಎಂ, ಡಿಸಿಎಂ ಹೇಳಿದ್ದರು. ಇದೀಗ, ರಾಜಭವನ ಖುದ್ದು ವಿವಾದಕ್ಕೆ ತೆರೆ ಎಳೆದಿದೆ. ಸರ್ಕಾರದ ಆಹ್ವಾನದ ಮೇರೆಗೆ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿದ್ದರು. ಆರ್‌ಸಿಬಿ ಆಟಗಾರರಿಗೆ ರಾಜಭವನದಲ್ಲೇ ಸನ್ಮಾನಿಸಲು ರಾಜ್ಯಪಾಲರು ಬಯಸಿದ್ದರು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ರಾಜ್ಯಪಾಲರು ಮಾಹಿತಿ ಕೊಟ್ಟಿದ್ದರು. ಆದ್ರೆ, ಸಿಎಂ ಸಿದ್ದರಾಮಯ್ಯ ಖುದ್ದು ರಾಜ್ಯಪಾಲರಿಗೆ ಕರೆ ಮಾಡಿ.. ವಿಧಾನಸೌಧದ ಬಳಿಯೇ ನಾವು ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದೇವೆ. ನೀವು ಕೂಡ ಇದರಲ್ಲಿ ಭಾಗವಹಿಸಿ ಎಂದು ಆಹ್ವಾನವಿತ್ತಿದ್ದರಂತೆ. ಸಿಎಂ ಕರೆಯೋಲೆ ಮೇಲೆಯೇ ಗವರ್ನರ್ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ ಆಗಿದ್ರು ಅಂತ ರಾಜಭವನ ಸ್ಪಷ್ಟಪಡಿಸಿದೆ.

    ಈ ಮೂಲಕ, ವಿಧಾನಸೌಧ ಕಾರ್ಯಕ್ರಮವನ್ನು ಆಯೋಜಿಸಿದ್ದೇ ಸರ್ಕಾರ ಅಂತ ದೃಢಪಟ್ಟಿದೆ. ಈ ಮಧ್ಯೆ, ಕಾಂಗ್ರೆಸ್ ಶಾಸಕ ಗಣಿಗ ರವಿ ಮಾತಾಡಿ, ಕೆಎಸ್‌ಸಿಎ, ಆರ್‌ಸಿಬಿ ಅವರು ಸಿಎಂ ಬಳಿ ಬಂದು 18 ವರ್ಷ ಬಳಿಕ ಗೆದ್ದಿದ್ದೇವೆ. ವಿಧಾನಸೌಧ ಮುಂದೆ ಸನ್ಮಾನ ಮಾಡಿ ಎಂದು ಕೇಳಿಕೊಂಡರು. ಅದಕ್ಕೆ ಸಿಎಂ ಅವರು ಒಪ್ಪಿಕೊಂಡಿದ್ದಾರೆ. ಭದ್ರತೆಯನ್ನು ಕಾಪಾಡಿಕೊಳ್ಳಬೇಕಾಗಿದ್ದು ಪೊಲೀಸ್ ಇಲಾಖೆಯದ್ದು. ಬಲವಂತವಾಗಿ ಯಾರಿಗೂ ಸನ್ಮಾನ ಮಾಡಿಲ್ಲ ಅಂದಿದ್ದಾರೆ.

    2 ದಿನದಲ್ಲಿ ವರದಿ ಕೊಡಲು ಹೈಕೋರ್ಟ್ ಕಟ್ಟಾಜ್ಞೆ
    ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಇವತ್ತು ಕೂಡ ವಿಚಾರಣೆ ನಡೆದಿದೆ. ಈಗಾಗಲೇ ತನಿಖೆ ನಡೆಯುತ್ತಿದ್ದು, ವರದಿ ಸಲ್ಲಿಕೆಗೆ ಎಜಿ ಶಶಿಕಿರಣ್ ಶೆಟ್ಟಿ 1 ತಿಂಗಳ ಕಾಲಾವಕಾಶ ಕೋರಿದ್ರು. ಇದಕ್ಕೆ ಅವಕಾಶ ಕೊಡದ ಹೈಕೋರ್ಟ್, ಜೂನ್ 12ಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತೆ ಸೂಚನೆ ಕೊಟ್ಟಿದೆ. ಅಲ್ಲದೇ ವಿಕ್ಟರಿ ಪರೇಡ್ ಬಗ್ಗೆ ಯಾರು.. ಯಾವಾಗ.. ನಿರ್ಧಾರ ತೆಗೆದುಕೊಂಡಿದ್ದರು..? ಸಾರ್ವಜನಿಕರು/ಜನಸಂದಣಿ ನಿಯಂತ್ರಣಕ್ಕೆ ಏನು ಕ್ರಮ ಆಗಿತ್ತು..? ಗಾಯಾಗಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು ಎಷ್ಟು ಸಮಯ ಬೇಕಾಯಿತು..? 50 ಸಾವಿರಕ್ಕಿಂತ ಮೇಲ್ಪಟ್ಟು ಸೇರುವ ಜನಸಂದಣಿಗೆ ಎಸ್‌ಓಪಿ ಮಾಡಲಾಗಿತ್ತಾ..? ಅಂತಲೂ ಪ್ರಶ್ನೆ ಮಾಡಿದ್ದು, ನಾಡಿದ್ದು ವರದಿ ಸಲ್ಲಿಸುವಂತೆ ಸೂಚಿಸಿದೆ.

  • ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    ಕರ್ನಾಟಕದ ನಾಲ್ವರು ಜಡ್ಜ್‌ಗಳ ವರ್ಗಾವಣೆಗೆ ಶಿಫಾರಸು

    ನವದೆಹಲಿ: ಕರ್ನಾಟಕ ಹೈಕೋರ್ಟ್‌ನ (Karnataka High Court) ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ (Collegium) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಡಿಶಾ, ನ್ಯಾ. ಕೆ.ನಟರಾಜನ್ ಅವರನ್ನು ಕೇರಳ, ನ್ಯಾ. ಎನ್.ಎಸ್ ಸಂಜಯ್ ಗೌಡ ಅವರನ್ನು ಗುಜರಾತ್, ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಿಲು ಕೊಲಿಜಿಯಂ ಶಿಫಾರಸು ಮಾಡಿದೆ.

    ಅಲ್ಲದೆ, ತೆಲಂಗಾಣ ನ್ಯಾಯಮೂರ್ತಿ ಪೆರುಗು ಶ್ರೀಸುಧಾ ಮತ್ತು ಆಂಧ್ರ ಪ್ರದೇಶದ ಡಾ. ಕುಂಭಜದಲ ಮನ್ಮಧ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆಯೂ ಶಿಫಾರಸು ಮಾಡಲಾಗಿದೆ.