Tag: ಕೆ.ಆರ್ ಆಸ್ಪತ್ರೆ

  • ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    – ಎಂಎಲ್‌ಎ ಪ್ರಶ್ನಿಸಿದ್ದಕ್ಕೆ ರಾಜೀನಾಮೆ ಕೊಡ್ತೀನಿ ಎಂದ ಆಸ್ಪತ್ರೆ ಸೂಪರಿಂಟೆಂಡೆಂಟ್
    – ಆಸ್ಪತ್ರೆ ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವ‌ರು ಜಿಲ್ಲೆಯ ದೊಡ್ಡಾತ್ರೆಯಲ್ಲೇ ವ್ಹೀಲ್‌ ಚೇರ್‌ ಅವ್ಯವಸ್ಥೆ ಕಂಡುಬಂದಿದೆ. 4 ಜಿಲ್ಲೆಗಳ ಕೇಂದ್ರಬಿಂದು ಆಗಿರುವ ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲೇ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ. ವ್ಹೀಲ್‌ ಚೇರ್‌ ಇಲ್ಲದೇ ಪ್ಲಾಸ್ಟಿಕ್ ಚೇರ್‌ನಲ್ಲಿ ಚಿಕಿತ್ಸೆಗಾಗಿ ವೃದ್ಧೆಯೊಬ್ಬರನ್ನ ಕರೆದೊಯ್ದಿರುವ ದೃಶ್ಯ ಮನ ಕಲುಕುವಂತೆ ಮಾಡಿದೆ.

    KR Hospital 3

    ಹೌದು. ನಾಲ್ಕು ಜಿಲ್ಲೆಗಳಿಗೆ ಆಧಾರವಾಗಿರುವ ಪ್ರತಿಷ್ಠಿತ ಕೆ.ಆರ್ ಆಸ್ಪತ್ರೆಯಲ್ಲಿ ರೋಗಿಯನ್ನ ಚೇರ್‌ನಲ್ಲಿ ಕೂರಿಸಿಕೊಂಡು ಕರೆದೊಯ್ದಿರುವ ದೃಶ್ಯ ʻಪಬ್ಲಿಕ್‌ ಟಿವಿʼ ಕ್ಯಾಮೆರಾದಲ್ಲಿ ಸೆರೆಯಾಗಿದೆ. ʻಪಬ್ಲಿಕ್‌ ಟಿವಿʼ ಈ ಅವ್ಯವಸ್ಥೆಯನ್ನು ಬಯಲಿಗೆಳೆಯುತ್ತಿದ್ದಂತೆ ಸ್ಥಳೀಯ ಶಾಸಕ ಹರೀಶ್‌ ಗೌಡ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ವ್ಹೀಲ್‌ ಚೇರ್‌ ಇಟ್ಟಿದ್ದ ಕೊಠಡಿಯ ಬೀಗ ಒಡೆಸಿದ್ದಾರೆ. ದುಸ್ಥಿತಿಯಲ್ಲಿದ್ದ ವ್ಹೀಲ್‌ ಚೇರ್‌ಗಳನ್ನು ಕಂಡ ಶಾಸಕರು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಶೋಭಾರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಾನೇ ರಾಜೀನಾಮೆ ಕೊಡ್ತಿನಿ ಅಂತ ಸೂಪರಿಂಟೆಂಡೆಂಟ್ ಅಲ್ಲಿಂದ ತೆರಳಿದ್ದಾರೆ.

    ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ:
    ಬಳಿಕ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಶಾಸಕ ಹರೀಶ್‌ ಗೌಡ, ಪ್ರಕರಣದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣ್ತಿದೆ. ಈ ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ ಜರುಗಿಸುತ್ತೇನೆ. ಕ್ರಮಕ್ಕೆ ಆಗ್ರಹಿಸಿ ಸಚಿವರಿಗೂ ಪತ್ರ ಬರೆಯುತ್ತೇನೆ ಎಂದು ಜೋರು ದನಿಯಲ್ಲಿ ಮಾತನಾಡಿದರು.

    ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರಿತೀನಿ:
    ಕೆ.ಆರ್ ಆಸ್ಪತ್ರೆಯ ಆಡಳಿತಾಧಿಕಾರಿ ದ್ರಾಕ್ಷಾಯಿಣಿ ಪ್ರತಿಕ್ರಿಯಿಸಿ, ಘಟನೆಗೆ ಸಂಬಂಧಪಟ್ಟ ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಇವತ್ತೇ ಎಲ್ಲರಿಗೂ ನೋಟಿಸ್ ಕೊಡ್ತೀನಿ. ಸಂಜೆಯೊಳಗೆ ಕೆಟ್ಟು ಹೋಗಿರುವ ಲಿಫ್ಟ್ ರಿಪೇರಿ ಮಾಡಿಸುತ್ತೇನೆ, ಮೂರು ದಿನಗಳಲ್ಲಿ ಮುರಿದಿರುವ ಎಲ್ಲಾ ವ್ಹೀಲ್‌ ಚೇರ್‌ಗಳನ್ನ ದುರಸ್ತಿ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.

    KR Hospital 4

    ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ:
    ಕೆ.ಆರ್ ಆಸ್ಪತ್ರೆ ಮೇಲ್ವಿಚಾರಕಿ ಶೋಭಾ ಈ ವಿಚಾರ ಕುರಿತು ಮಾತನಾಡಿ, ನನಗೆ ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ. 10 ತಿಂಗಳಿಂದ ಕೆಲಸ ಮಾಡುತ್ತಿದ್ದೇನೆ. ಸೆಕ್ಯೂರಿಟಿ ಸೇರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ. ಇದರ ಬಗ್ಗೆ ಪತ್ರ ಬರೆದರೆ 20ಕ್ಕೂ RTI ಕಾರ್ಯಕರ್ತರು ಬಂದು ಪ್ರಶ್ನೆ ಮಾಡ್ತಾರೆ. ಇಲ್ಲಿ ವ್ಯವಸ್ಥೆ ಮೊದಲಿನಿಂದ ಹಾಳಾಗಿದೆ. ಡೀನ್ ಸೇರಿದಂತೆ ಎಲ್ಲರಿಗೂ ಮಾಹಿತಿ ಕೊಟ್ಟಿದ್ದೇನೆ. ಎಲ್ಲರಿಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

    KR Hospital 2

    ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್:
    ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳ ಪರದಾಟವನ್ನು ಕಂಡ ಶಾಸಕ ಹರೀಶ್‌ಗೌಡ ಕೆಳ ಹಂತದ ಸಿಬ್ಬಂದಿ ವಿರುದ್ಧ ರೇಗಾಡಿದರು. ಆದ್ರೆ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ಇಲ್ಲಿ ಡೀನ್ ಮತ್ತು ಸೂಪರಿಂಟೆಂಡೆಂಟ್ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿ ಅಧಿಕಾರಿಗಳ ಮಾತು ಕೇಳುತ್ತಿಲ್ಲ ಎಂದು ಅಲ್ಲಿಂದ ಹೊರಟ್ಟಿದ್ದಾರೆ.

  • ನಾದಿನಿ ಜೊತೆ ಅಶ್ಲೀಲ ವರ್ತನೆ – ಪ್ರಶ್ನಿಸಿದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

    ನಾದಿನಿ ಜೊತೆ ಅಶ್ಲೀಲ ವರ್ತನೆ – ಪ್ರಶ್ನಿಸಿದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

    ಮೈಸೂರು: ನಾದಿನಿ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುತ್ತಿದ್ದ ಅಂಬುಲೆನ್ಸ್‌ ಡ್ರೈವರ್‌ನನ್ನ (Ambulance Driver) ಪ್ರಶ್ನೆ ಮಾಡಿದ ಆಕೆಯ ಬಾವನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ಮೈಸೂರು ಮೆಡಿಕಲ್ ಕಾಲೇಜು ಆಸ್ಪತ್ರೆ (Mysuru Medical College Hospital) ಟ್ರಾಮಾ ಸೆಂಟರ್ ಬಳಿ ನಡೆದಿದೆ.

    ಅಂಬುಲೆನ್ಸ್‌ ಡ್ರೈವರ್‌ ಸಂದೇಶ್‌ನಿಂದ ವಿಕೃತಿ ನಡೆದಿದ್ದು, ಅದೇ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಮಹೇಶ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಸದ್ಯ ಮಹೇಶ್ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂದೇಶ್ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ (Devaraja Police Station) ದೂರು ದಾಖಲಾಗಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ನಡ್ವೆ ಇಂದಿನಿಂದ ಕದನ ವಿರಾಮ – 13 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಸಿದ್ಧತೆ

    kr hospital a Copy

    ಸಂದೇಶ್‌ ಈ ಹಿಂದೆ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಯುವತಿಯರು, ಆಸ್ಪತ್ರೆ ನರ್ಸ್‌ಗಳ ವೀಡಿಯೋ ಮಾಡಿ ಸಿಕ್ಕಿಬಿದ್ದಿದ್ದ. ಆಗ ಕೆ.ಆರ್‌ ಆಸ್ಪತ್ರೆಯಲ್ಲಿ (KR Hospital) ಕೆಲಸದಿಂದ ತೆಗೆಯಲಾಗಿತ್ತು. ನಂತರ ಟ್ರಾಮಾ ಕೇರ್‌ಸೆಂಟರ್‌ಗೆ ಕೆಲಸಕ್ಕೆ ಸೇರಿದ್ದ. ಅಲ್ಲಿಯೂ ಇದೇ ರೀತಿಯ ಆಟಟೋಪ ಮುಂದುವರಿಸಿದ್ದಾನೆ. ಇದನ್ನೂ ಓದಿ: ಬೀದಿ ನಾಯಿಗಳಿಗೆ ಊಟ ನೀಡುವ ಕಾಯಕ – BCCI ಅಧ್ಯಕ್ಷರ ಶ್ವಾನ ಪ್ರೀತಿಗೆ ಜನರ ಮೆಚ್ಚುಗೆ

    ಸಂದೇಶ್‌ ಹಲ್ಲೆಗೊಳಗಾದ ಮಹೇಶ್ ನಾದಿನಿಯ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುದ್ದ ಎಂದು ಹೇಳಲಾಗಿದೆ. ಮಹೇಶ್‌ ಇದನ್ನ ಪ್ರಶ್ನೆ ಮಾಡಿದ್ದ, ಜೊತೆಗೆ ಆಸ್ಪತ್ರೆ ಅಧಿಕಾರಿಗಳಿಗೂ ಸಂದೇಶ್‌ ವಿರುದ್ಧ ದೂರು ನೀಡಿದ್ದ. ಇದರಿಂದ ಕೋಪಗೊಂಡಿದ್ದ ಸಂದೇಶ್‌ ಇದೇ ಸೋಮವಾರ ಆಸ್ಪತ್ರೆ ಕೆಲಸಕ್ಕೆ ಬರುತ್ತಿದ್ದ ಮಹೇಶ್ ನನ್ನ ಮೈಸೂರಿನ ಹೊರವಲಯದ ಬಂಡೀಪಾಳ್ಯದ ಬಳಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನ ಸ್ನೇಹಿತರ ಜೊತೆಗೂಡಿ ಮಹೇಶ್ ತಲೆಯ ಭಾಗಕ್ಕೆ ಹೊಡೆದು ಹಾಗೂ ಕೈ ಮುರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

    ಅಷ್ಟೇ ಅಲ್ಲದೇ ಮಹೇಶ್ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ‌ ಮೆರೆದಿದ್ದಾರೆ. ಬಳಿಕ ಮಹೇಶ್‌ ಅಲ್ಲಿಯೇ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹೇಶ್‌ ನನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

  • ಮಗುವಿಗೆ ಚಿಕಿತ್ಸೆ ಕೊಡದ ವೈದ್ಯರು – ಮೊಬೈಲಿನಲ್ಲಿ ಶೂಟ್ ಮಾಡೋ ವೇಳೆ ಲೈಟ್ ಆಫ್

    ಮಗುವಿಗೆ ಚಿಕಿತ್ಸೆ ಕೊಡದ ವೈದ್ಯರು – ಮೊಬೈಲಿನಲ್ಲಿ ಶೂಟ್ ಮಾಡೋ ವೇಳೆ ಲೈಟ್ ಆಫ್

    ಮೈಸೂರು: ಚಿಕಿತ್ಸೆಗಾಗಿ ಬಂದಿದ್ದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರನ್ನು ಮಗುವಿನ ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ.

    ಭಾನುವಾರದಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಗುವನ್ನು ತಾಯಿ ಆಸ್ಪತ್ರೆಗೆ ಕರೆತಂದಿದ್ದರು. ಆದ್ರೆ ಈ ವೇಳೆ ವೈದ್ಯರು ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಸತತ 2 ಗಂಟೆಗಳ ಕಾಲ ರೋಗಿಗೆ ಚಿಕಿತ್ಸೆ ನೀಡದೇ ಕೆ.ಆರ್.ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯಿಸಿದ್ದಾರೆ. ಅಲ್ಲದೆ ವೈದ್ಯರು ಚಿಕಿತ್ಸೆ ನೀಡಲು ಆಗಲ್ಲ ಎನ್ನುತ್ತಿರುವುದನ್ನ ಮಗುವಿನ ಸಂಬಂಧಿಕರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    mys akrosha 1

    ವಿಡಿಯೋದಲ್ಲಿ ಮಗುವನ್ನು ತಾಯಿ ಎತ್ತುಕೊಂಡು ಚಿಕಿತ್ಸೆ ಕೊಡದ ವೈದ್ಯರ ನಡೆಯಿಂದ ಕಂಗಾಲಾಗಿ ನಿಂತಿರುವುದು ಕೂಡ ಸೆರೆಯಾಗಿದೆ. ಜೊತೆಗೆ ವೈದ್ಯರು, ನಾವು ಚಿಕಿತ್ಸೆ ನೀಡಲ್ಲ, ಹೊರಗಡೆ ಹೋಗಿ ಎಂದಿದ್ದಾರೆ. ಆಗ ಯಾಕೆ ನಾವು ಹೋಗಬೇಕು? ಚಿಕಿತ್ಸೆ ನೀಡಲು ಆಗಲ್ಲ ಎಂದು ಬರೆದು ಕೊಡಿ ಎಂದು ಮಗುವಿನ ಸಂಬಂಧಿಕರು ವೈದ್ಯರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿಯನ್ನು ಕರೆಸಿ ಅವರನ್ನು ಹೊರಗೆ ಕಳಿಹಿಸುವಂತೆ ವೈದ್ಯರು ಹೇಳಿದ್ದಾರೆ.

    mys akrosha 2

    ವಿಡಿಯೋ ಸೆರೆಹಿಡಿಯುವ ವೇಳೆ ಕ್ಯಾಮೆರಾ ಕಿತ್ತುಕೊಳ್ಳಲು ಸ್ಥಳದಲ್ಲಿದ್ದ ಮಹಿಳಾ ಸಿಬ್ಬಂದಿ ಮುಂದಾಗಿದ್ದಾರೆ. ಇದ್ಯಾವುದ್ದಕ್ಕೂ ರೋಗಿಯ ಸಂಬಂಧಿಕರು ಕೇಳದ ಹಿನ್ನೆಲೆಯಲ್ಲಿ ಕೊಠಡಿಯ ಲೈಟ್ ಆಫ್ ಮಾಡಿ ಏನಾದರೂ ಮಾಡಿಕೊಳ್ಳಿ ಎಂದು ತಮ್ಮ ಪಾಡಿಗೆ ವೈದ್ಯರು ಹಾಗೂ ಸಿಬ್ಬಂದಿ ಹೋಗಿದ್ದಾರೆ. ಈ ಏಲ್ಲಾ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

    ಆರೋಗ್ಯ ಸಚಿವರೇ ಕೆ.ಆರ್.ಆಸ್ಪತ್ರೆಯತ್ತ ನೋಡಿ, ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮಗುವಿನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

    ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

    ಮೈಸೂರು: ನಗರದ ಕೆ.ಆರ್. ಆಸ್ಪತ್ರೆ ಎಂದರೆ ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗೆ ದೊಡ್ಡಾಸ್ಪತ್ರೆ ಎಂದೇ ಹೆಸರುವಾಸಿ. ಆದರೆ ಈ ಆಸ್ಪತ್ರೆಯೇ ದೀರ್ಘಕಾಲದ ರೋಗದಿಂದ ಬಳಲುತ್ತಿದೆ.

    kr hospital a Copy

    ಹೌದು. ಚಾಮರಾಜನಗರ ಜಿಲ್ಲೆಯ ಹನೂರಿನ ಸುಳ್ವಾಡಿ ವಿಷಹಾರ ದುರಂತ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ದುರಂತ ನಡೆದ ದಿನ ನೂರಾರು ರೋಗಿಗಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ಆದರೆ ಅಂದು ಆಸ್ಪತ್ರೆಯಲ್ಲಿ ಸಾಕಷ್ಟು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಮೈಸೂರಿನ ಬೇರೆ ಬೇರೆ ಖಾಸಗಿ ಆಸ್ಪತ್ರೆಗೆ ಅಸ್ವಸ್ಥರನ್ನು ದಾಖಲಿಸಲಾಗಿತ್ತು. ಆಗ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಕೆ.ಆರ್. ಆಸ್ಪತ್ರೆಗೆ ಆಗತ್ಯವಿರುವಷ್ಟು ವೆಂಟಿಲೇಟರ್ ಮಂಜೂರು ಮಾಡೋದಾಗಿ ಹೇಳಿತ್ತು. ಆದರೆ ಘಟನೆ ನಡೆದು 7 ತಿಂಗಳಾದರೂ ಟೆಂಡರ್ ಪ್ರಕ್ರಿಯೆ ವಿಳಂಬವಾಗಿ ವೆಂಟಿಲೇಟರ್‍ಗಳು ಮಾತ್ರ ಆಸ್ಪತ್ರೆಗೆ ಸೇರಿಲ್ಲ ಎಂದು ಆಸ್ಪತ್ರೆ ಸೂಪರಿಡೆಂಟ್ ನಂಜುಂಡಸ್ವಾಮಿ ಹೇಳಿದ್ದಾರೆ.

    kr hospital Copy

    ಆಸ್ಪತ್ರೆಯಲ್ಲಿ ಸದ್ಯ 15 ವೆಂಟಿಲೇಟರ್ ಕಾರ್ಯನಿರ್ವಹಿಸುತ್ತಿದ್ದು, 7 ಹೊಸ ವೆಂಟಿಲೇಟರ್‍ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಕೆ.ಆರ್ ಆಸ್ಪತ್ರೆಯಲ್ಲಿ ಇರುವ ಯಾವುದೇ ಅಂಬುಲೆನ್ಸ್ ಗಳಿಗೂ ವೆಂಟಿಲೇಟರ್ ವ್ಯವಸ್ಥೆ ಇಲ್ಲ. ಇದರಿಂದ ಅಂಬುಲೆನ್ಸ್‍ಗಳಿಗೂ ವೆಂಟಿಲೇಟರ್ ಅಳವಡಿಸುವ ಬೇಡಿಕೆ ಸಹ ಇದೆ. ಆದರೂ ಸರ್ಕಾರ ಮಾತ್ರ ಇನ್ನು ಯಾವುದೇ ಕ್ರಮ ವಹಿಸಿಲ್ಲ.

    ಮೈಸೂರು ಜಿಲ್ಲೆಯಲ್ಲಿ ಜಿ.ಟಿ. ದೇವೇಗೌಡ, ಸಾರಾ ಮಹೇಶ್ ಇಬ್ಬರು ಸಚಿವರಿದ್ದಾರೆ. ಅದಾಗ್ಯೂ, ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ವೆಂಟಿಲೇಟರ್ ಒದಗಿಸುವಲ್ಲಿ ಇವರಿಗೂ ಕೂಡ ಕಾಳಜಿ ಇಲ್ಲದಂತಿದೆ.

    MYS MINISTERS Copy

  • ಜೀವ ಉಳಿಸಿದ ವೈದ್ಯರು ಜೀವ ತೆಗೆದವನ ಸುಳಿವು ಕೊಟ್ಟರು!

    ಜೀವ ಉಳಿಸಿದ ವೈದ್ಯರು ಜೀವ ತೆಗೆದವನ ಸುಳಿವು ಕೊಟ್ಟರು!

    ಮೈಸೂರು: ಕೆ.ಆರ್. ಆಸ್ಪತ್ರೆ ವೈದ್ಯರ ಕಾಮನ್ ಸೆನ್ಸ್‍ನಿಂದ ವಿಷ ಪ್ರಸಾದ ಪ್ರಕರಣವನ್ನು ಶೀಘ್ರವೇ ಬೇಧಿಸಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

    ಹೌದು, ವಿಷ ಪ್ರಸಾದ ಪ್ರಕರಣದ ಮೊದಲ ಸುಳಿವನ್ನು ಪೊಲೀಸರ ಕೆ.ಆರ್ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಆರೋಪಿ ನಾಗರಕೊಯಿಲು ದೇವಾಲಯದ ಅರ್ಚಕ ದೊಡ್ಡಯ್ಯ ಪ್ರಕರಣ ನಡೆದ ಸಂಜೆ ಎಲ್ಲಾ ಅಸ್ವಸ್ಥರ ಜೊತೆ ತಾನೂ ಕೂಡ ವಿಷ ಆಹಾರ ಸೇವಿಸಿದ್ದೇನೆ ಎಂದು ಕೆ.ಆರ್. ಆಸ್ಪತ್ರೆಗೆ ದಾಖಲಾಗುತ್ತಾನೆ.

    MYS K.R.Hospital 1

    ಆಸ್ಪತ್ರೆಗೆ ದಾಖಲಾದ ದೊಡ್ಡಯ್ಯ ವೈದ್ಯರು ಪರೀಕ್ಷೆಗೆ ಬರುವಾಗ ನರಳಾಡುತ್ತಿದ್ದ ಬಳಿಕ ಸುಮ್ಮನಾಗುತ್ತಿದ್ದ. ಇದ್ದನ್ನು ಗಮನಿಸಿದ ವೈದ್ಯರಿಗೆ ದೊಡ್ಡಯ್ಯನ ಮೇಲೆ ಅನುಮಾನ ಬಂದು ಕೂಡಲೇ ರಕ್ತ ಪರೀಕ್ಷೆ ಮಾಡಿದ್ದಾರೆ. ಆಗ ಆತನ ದೇಹದಲ್ಲಿ ಹನಿಯಷ್ಟು ವಿಷದ ಅಂಶ ಇರಲಿಲ್ಲ ಎನ್ನುವ ವಿಚಾರ ಗೊತ್ತಾಗಿದೆ.

    ದೊಡ್ಡಯ್ಯ ವಿಷ ಸೇವಿಸಿದ ಹಾಗೆ ನಾಟಕ ಮಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ತಕ್ಷಣ ವೈದ್ಯರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಬಳಿಕ ರಾತ್ರೋರಾತ್ರಿ ಆಸ್ಪತ್ರೆಗೆ ಬಂದ ಪೊಲೀಸರು ದೊಡ್ಡಯ್ಯನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಆಗಲೇ ಪ್ರಸಾದಕ್ಕೆ ವಿಷ ಹಾಕಿದ ಅಸಲಿ ಕಹಾನಿಯನ್ನು ದೊಡ್ಡಯ್ಯ ಹೇಳಿದ್ದಾನೆ.

    kr hospital mysore

    ದೊಡ್ಡಯ್ಯನ ಹೇಳಿಕೆ ನಂತರ ಅಂಬಿಕಾ, ಆಕೆಯ ಪತಿ ಕೊನೆಯದಾಗಿ ಸಾಲೂರು ಮಠದ ಕಿರಿಯ ಸ್ವಾಮೀಜಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv