Tag: ಕೇಂದ್ರ ಸಚಿವ ನಿತಿನ್ ಗಡ್ಕರಿ

  • ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ಸದನದಲ್ಲಿ ಕಾಂಗ್ರೆಸ್ ಸಂಸದರ ಕ್ಷಮೆ ಕೋರಿದ ನಿತಿನ್ ಗಡ್ಕರಿ

    ನವದೆಹಲಿ: ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಲೋಕಸಭಾ ಸದನದ ವೇಳೆ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲಿ ಕ್ಷಮೆ ಕೇಳಿದ್ದಾರೆ.

    ಮಧ್ಯಪ್ರದೇಶದ ಗುನಾ ಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಣ ಮಾಡಿಲ್ಲ ಹಾಗೂ ಕಾರ್ಯಕ್ರಮಕ್ಕೆ ತಮಗೇ ಆಹ್ವಾನ ನೀಡಿಲ್ಲ. ಯಾವುದೇ ಯೋಜನೆಯ ಉದ್ಘಾಟನೆಗೆ ಆ ಕ್ಷೇತ್ರದ ಜನಪ್ರತಿನಿಧಿಯನ್ನು ಆಹ್ವಾನಿಸುವುದು ಶಿಷ್ಟಾಚಾರ. ಆದರೆ ರಾಜ್ಯ ಸರ್ಕಾರ ತಮಗೇ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದೆ. ಅದ್ದರಿಂದ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸದನದಲ್ಲಿ ಹೇಳಿದರು.

    Jyotiraditya Scindia 1

    ಸಿಂಧಿಯಾ ಆರೋಪದ ಬಳಿಕ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪ್ಮೂಲ ಸಚಿವ ನಿತಿನ್ ಗಡ್ಕರಿ ಮಾತನಾಡಿ, ಈ ತಪ್ಪಿನ ಕುರಿತು ನನಗೆ ಅರಿವಾಗಿದೆ. ಮುಂದೇ ಇಂತಹ ತಪ್ಪುಗಳು ನಡೆಯದಂತೆ ಎಚ್ಚರವಹಿಸಲಾಗುವುದು. ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಅದ್ದರಿಂದ ತಾನು ಈ ತಪ್ಪಿನ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಸಂಸದರ ಹೆಸರು ಕಡ್ಡಾಯವಾಗಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಬೇಕಿತ್ತು. ಅಲ್ಲದೇ ಅವರಿಗೆ ಆಹ್ವಾನ ನೀಡಬೇಕಿತ್ತು. ಅದ್ದರಿಂದ ಸದನದಲ್ಲಿ ನಾನು ಕ್ಷಮೆ ಕೇಳುವುದಾಗಿ ಹೇಳಿದರು.

    ಗಡ್ಕರಿ ಅವರ ಮಾತಿಗೆ ಸಮಾಧಾನಗೊಳ್ಳದ ಸಿಂಧಿಯಾ, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್ ಗಡ್ಕರಿ ಅವರು ಈಗಾಗಲೇ ಸಭೆಯಲ್ಲಿ ಕ್ಷಮೆ ಕೇಳಿದ್ದರೆ ಎಂದರು. ಲೋಕಸಭಾ ಸದನ ವಿರೋಧಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಸಂಸದರನ್ನು ಈ ರೀತಿ ನಡೆಸಿಕೊಳ್ಳುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಈ ವೇಳೆ ಮಧ್ಯಪ್ರವೇಶ ಮಾಡಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ಸದನದಲ್ಲಿ ಈಗಾಗಲೇ ಹಿರಿಯ ಸಚಿವರು ಕ್ಷಮೆ ಕೇಳಿದ್ದಾರೆ. ಯುಪಿಎ ಅವಧಿಯಲ್ಲೂ ಬಿಜೆಪಿ ಸಂಸದರಿಗೆ ಆಹ್ವಾನ ನೀಡದೆ ಹಲವು ಕಾರ್ಯಕ್ರಮ ನಡೆಸಲಾಗಿದೆ ಎಂದು ಹೇಳಿ ಈ ಚರ್ಚೆಗೆ ಪೂರ್ಣವಿರಾಮ ಹಾಕಿದರು.

  • ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ಲೀಟರ್ ಮೂತ್ರಕ್ಕೆ 1 ರೂ. ಕೊಡ್ತಾರಂತೆ- ಮೂತ್ರ ಬ್ಯಾಂಕ್ ಸ್ಥಾಪನೆಗೆ ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಯೂರಿಯಾ ಉತ್ಪಾದಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಯೊಂದು ತಾಲೂಕು ಕೇಂದ್ರದಲ್ಲಿ ಮೂತ್ರ ಬ್ಯಾಂಕ್ ಸ್ಥಾಪಿಸಲು ಮುಂದಾಗಿದ್ದು, ಆ ಮೂಲಕ ಯೂರಿಯಾ ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಹೊರಟಿದ್ದಾರೆ.

    ಮನುಷ್ಯನ ಮೂತ್ರದಲ್ಲಿ ಸಾಕಷ್ಟು ನೈಟ್ರೋಜನ್ ಇದೆ. ಆದರೆ ಇದನ್ನು ವ್ಯರ್ಥ ಮಾಡುತ್ತಿದ್ದೇವೆ. ಕಸದಿಂದ ರಸ ತೆಗೆಯೋದು ನನ್ನ ಪ್ಯಾಶನ್. ಇದನ್ನ ಪ್ರಯತ್ನಿಸೋದ್ರಲ್ಲಿ ಯಾವುದೇ ಹಾನಿ ಇಲ್ಲ. ಈಗಾಗಲೇ ಫಾಸ್ಫರಸ್ ಮತ್ತ ಪೊಟಾಷಿಯಂಗೆ ಬದಲಿ ಸಾವಯವ ಇದೆ. ನೈಟ್ರೋಜನ್ ಕೂಡ ಸೇರಿಸಿದರೆ ಇನ್ನೂ ಹೆಚ್ಚು ಸಹಾಯಕವಾಗುತ್ತದೆ ಎಂದು ಗಡ್ಕರಿ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ .

    Nitin Gadkari Road

    ಈ ಯೋಜನೆ ಇನ್ನೂ ಪ್ರಾಥಮಿಕ ಹಂತದ ಪ್ರಸ್ತಾಪವಾಗಿದೆ. ಇದನ್ನ ವಾಸ್ತಚಿಕವಾಗಿ ಜಾರಿಗೆ ತರಲು ಸ್ವೀಡನ್ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ಈ ಯೋಜನೆಯನ್ನು ಪ್ರಯೋಗಿಕವಾಗಿ ಗ್ರಾಮೀಣ ಭಾಗದಲ್ಲಿ ಆರಂಭ ಮಾಡಲಾಗುತ್ತದೆ. ಒಂದು ಬಾರಿಗೆ ಪ್ಲಾಸ್ಟಿಕ್ ಕ್ಯಾನ್ ನಲ್ಲಿ ಸಂಗ್ರಹಿಸಿದ 10 ಲೀಟರ್ ಮೂತ್ರ ತರಬೇಕು. ಪ್ರತಿ ಲೀಟರ್ ಮೂತ್ರಕ್ಕೆ 1 ರೂ. ನೀಡಲಾಗುತ್ತೆ. ಸರ್ಕಾರದಿಂದಲೇ ಪ್ಲಾಸ್ಟಿಕ್ ಕ್ಯಾನ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಮೂತ್ರವನ್ನ ಶುದ್ಧೀಕರಣ ಮಾಡಿ ಸಾವಯವ ಗೊಬ್ಬರ ತಯಾರು ಮಾಡಲಾಗುತ್ತದೆ ಎಂದು ವಿವರಿಸಿದರು.

    ಈ ಯೋಜನೆಗೆ ತಗಲುವ ಆರ್ಥಿಕ ವೆಚ್ಚದ ಕುರಿತು ಮತ್ತು ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಖಚಿತವಾಗಿಲ್ಲ. ಈ ಕುರಿತು ನಾಗ್ಪುರದ ಸಮೀಪದ ಧಪೇವಾಡಾ ಗ್ರಾಮದ ಪ್ರಯೋಗಲಯದಲ್ಲಿ ಆರಂಭಿಕ ಪರೀಕ್ಷೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

    urine banks