Tag: ಚಂದ್ರಚೂಡ್‌

  • ಸಿಜೆಐ ಚಂದ್ರಚೂಡ್‌ ಮನೆಯಲ್ಲಿ ಗಣೇಶನಿಗೆ ಮೋದಿ ಆರತಿ – ಸಂಜಯ್‌ ರಾವತ್‌ ಆಕ್ಷೇಪ

    ಸಿಜೆಐ ಚಂದ್ರಚೂಡ್‌ ಮನೆಯಲ್ಲಿ ಗಣೇಶನಿಗೆ ಮೋದಿ ಆರತಿ – ಸಂಜಯ್‌ ರಾವತ್‌ ಆಕ್ಷೇಪ

    ಮುಂಬೈ: ಸುಪ್ರೀಂ ಕೋರ್ಟ್‌ (Supreme Court) ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ (CJI Chandrachud) ನಿವಾಸಕ್ಕೆ ಪ್ರಧಾನಿ ಮೋದಿ (PM Narendra Modi) ತೆರಳಿದ್ದಕ್ಕೆ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ನಾಯಕ ಸಂಜಯ್‌ ರಾವತ್‌ (Sanjay Raut) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಗಣೇಶೋತ್ಸವ ಸಮಯದಲ್ಲಿ ಸಿಜೆಐ ನಿವಾಸಕ್ಕೆ ಆಗಮಿಸಿದ ಮೋದಿ ಗಣಪತಿಗೆ ಆರತಿ ಎತ್ತಿದ್ದರು. ಈ ವಿಚಾರವನ್ನು ರಾವತ್‌ ಪ್ರಸ್ತಾಪ ಮಾಡಿ ಹಲವು ಪ್ರಶ್ನೆ ಎತ್ತಿದ್ದಾರೆ.

    ಗಣಪತಿ ಹಬ್ಬ (Ganesh Festival) ನಡೆಯುತ್ತಿದೆ, ಜನರು ಪರಸ್ಪರರ ಮನೆಗೆ ಭೇಟಿ ನೀಡುತ್ತಾರೆ. ಪ್ರಧಾನಿ ಇದುವರೆಗೆ ಎಷ್ಟು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ಆದರೆ ಪ್ರಧಾನಮಂತ್ರಿಯವರು ಸಿಜೆಐ ಮನೆಗೆ ತೆರಳಿ ಆರತಿ ಬೆಳಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಆಕಸ್ಮಿಕ ಪದ ಬಳಸಿ ಅನ್ಯಕೋಮಿನವರಿಗೆ ಬೆಂಬಲ – ಬೇಹುಗಾರಿಕೆ ಇಲಾಖೆಯನ್ನು ಮುಚ್ಚಿಬಿಡಿ ಎಂದ ಯತ್ನಾಳ್

    ಸಂವಿಧಾನದ ಪಾಲಕರು ರಾಜಕಾರಣಿಗಳನ್ನು ಭೇಟಿ ಮಾಡಿದರೆ, ಅದು ಜನರ ಮನಸ್ಸಿನಲ್ಲಿ ಅನುಮಾನವನ್ನು ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ನಮ್ಮ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಪ್ರತಿವಾದಿಯಾಗಿದೆ. ಮುಖ್ಯ ನ್ಯಾಯಮೂರ್ತಿಗಳು ಪ್ರಕರಣದಿಂದ ದೂರವಿರಬೇಕು. ಯಾಕೆಂದರೆ ಪ್ರಕರಣದ ಪ್ರತಿವಾದಿಯ ಜೊತೆ ಅವರ ನಂಟು ಬಹಿರಂಗವಾಗಿ ಕಾಣುತ್ತಿದೆ. ಪ್ರಕರಣದಲ್ಲಿ ನಮಗೆ ಸಿಜೆಐ ನ್ಯಾಯ ನೀಡಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಸಂಜಯ್‌ ರಾವತ್‌ ಕೇಳಿದ್ದಾರೆ.

    PM Narendra Modi CJI Chandrachud 1

    ನಮ್ಮ ಪ್ರಕರಣವನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ಸರ್ಕಾರದಿಂದ ಶಿವಸೇನೆ ಮತ್ತು ಎನ್‌ಸಿಪಿ ತತ್ತರಿಸುತ್ತಿವೆ. ನಮಗೆ ನ್ಯಾಯ ಸಿಗುತ್ತಿಲ್ಲ. ಮಹಾರಾಷ್ಟ್ರದ ಅಕ್ರಮ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಹೆಚ್ಚಿನ ಒಲವು ಹೊಂದಿದ್ದಾರೆ. ಪ್ರಧಾನಮಂತ್ರಿ ಮತ್ತು ಸಿಜೆಐ ನಡುವಿನ ನಂಟಿನಿಂದ ಮಹಾರಾಷ್ಟ್ರದ ಜನರ ಮನಸ್ಸಿನಲ್ಲಿ ಒಂದು ಸಂದೇಹ ವ್ಯಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

     

  • ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

    ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು (Article 370 Case) ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ (Supreme Court) ತನ್ನ ಆದೇಶವನ್ನು ಕಾಯ್ದಿರಿಸಿದೆ.

    ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರವನ್ನು ಪ್ರಶ್ನಿಸುವ ಒಂದು ಬ್ಯಾಚ್ ಅರ್ಜಿಗಳನ್ನು ಆಲಿಸಿತು.

    JAMMU KASHMIR

    ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ವಿಚಾರಣೆ ವೇಳೆ ಆರೋಪಿಸಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, 370 ನೇ ವಿಧಿಯನ್ನು ರದ್ದುಗೊಳಿಸಿರುವುದು ಅಧಿಕಾರದ ದುರುಪಯೋಗದ ಶ್ರೇಷ್ಠ ಉದಾಹರಣೆಯಾಗಿದೆ ಎಂದು ವಾದಿಸಿದ್ದರು.  ಇದನ್ನೂ ಓದಿ: ಹಿಂದೂ ಹೆಸರನ್ನು ನೀಡಿದವರೇ ವಿದೇಶಿಯರು: ಅಧೀರ್‌ ರಂಜನ್‌ ಚೌಧರಿ

    ಕೇಂದ್ರವು ಆರ್ಟಿಕಲ್ 370ರ ರದ್ದತಿಗೆ ಬೆಂಬಲವಾಗಿ ವಾದಿಸಿತು ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ ʼಸಾಂವಿಧಾನಿಕ ವಂಚನೆ ಎಸಗಿಲ್ಲ ಎಂದು ಪ್ರತಿಪಾದಿಸಿತು.

    ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ʼತಾತ್ಕಾಲಿಕ ಕ್ರಮʼ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಭವಿಷ್ಯದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ರಾಜ್ಯವಾಗಿ ಹಿಂತಿರುಗಿಸಿದರೆ, ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್-ಕುಮಾರ್ ಕಾಲ್‌ಶೀಟ್ ಕದನದ ನಡುವೆ ಚಂದ್ರಚೂಡ್‌ಗೆ ಸೂರಪ್ಪ ಬಾಬು ಕ್ಲಾಸ್

    ಸುದೀಪ್-ಕುಮಾರ್ ಕಾಲ್‌ಶೀಟ್ ಕದನದ ನಡುವೆ ಚಂದ್ರಚೂಡ್‌ಗೆ ಸೂರಪ್ಪ ಬಾಬು ಕ್ಲಾಸ್

    ಸ್ಯಾಂಡಲ್‌ವುಡ್ ನಟ ಸುದೀಪ್- ನಿರ್ಮಾಪಕ ಕುಮಾರ್ (Kumar) ಕಾಲ್‌ಶೀಟ್ ಕದನ ಸಂಧಾನದ ಹಂತದಲ್ಲಿದೆ. ಜುಲೈ 21ರ ಶುಕ್ರವಾರದಿಂದ ಸುದೀಪ್- ಕುಮಾರ್ ಸಂಧಾನಕ್ಕೆ ರವಿಚಂದ್ರನ್ ಎಂಟ್ರಿಯಾಗಿದೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ರವಿಚಂದ್ರನ್ ಪ್ರಕಟಿಸುವ ನಿರ್ಧಾರಕ್ಕೆ ಇಬ್ಬರು ಬದ್ಧರಾಗ್ತಾರಾ ಎಂಬ ಪ್ರಶ್ನೆಯ ನಡುವೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ‘ಕೋಟಿಗೊಬ್ಬ’ (Kotigobba) ನಿರ್ಮಾಪಕ ಸೂರಪ್ಪ ಬಾಬು (Soorappa Babu) ಅವರು ಪ್ರತಿಕಾಗೋಷ್ಠಿ ನಡೆಸಿ, ಚಂದ್ರಚೂಡ್ ಅವರ ವಿರುದ್ಧ ಕಿಡಿಕಾರಿದ್ದಾರೆ.  ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    N.Kumar and sudeep

    ಸುದೀಪ್ ವಿರುದ್ಧ ಕುಮಾರ್ ಮಾಡಿರುವ ಆರೋಪದ ಹಿಂದೆ ನಿರ್ಮಾಪಕ ಸೂರಪ್ಪ ಬಾಬು ಕೈವಾಡವಿದೆ ನಟ ಚಂದ್ರಚೂಡ್‌ ಅವರು ಈ ಹಿಂದೆ ಹೇಳಿದ್ದರು. ಸೂರಪ್ಪ ಬಾಬು ಒಬ್ಬ ಶಿಖಂಡಿ. ಕೋಟಿಗೊಬ್ಬ 2 ಸಿನಿಮಾದ ಸಂಭಾವನೆ 2.50 ಕೋಟಿ ರೂಪಾಯಿ, ಜಾಕ್ ಮಂಜು ಅವರಿಗೆ ಒಂದೂವರೆ ಕೋಟಿ ರೂಪಾಯಿ, ಕೋಟಿಗೊಬ್ಬ 3 ಸಿನಿಮಾದ 3.5 ಕೋಟಿ ಸೇರಿ ಒಟ್ಟು ಏಳು ಕೋಟಿ ಬಾಕಿ ಹಣವನ್ನು ಸೂರಪ್ಪ ಬಾಬು ಕೊಡಬೇಕಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಈ ಹಿಂದೆ ಆರೋಪಿಸಿದ್ದರು. ಕೋಟಿಗೊಬ್ಬ 3 ಸಿನಿಮಾ ರಿಲೀಸ್ ತಡವಾದಾಗ ಸೂರಪ್ಪ ಅವರ ಮಗಳು ಸುದೀಪ್‌ಗೆ ವಿನಂತಿಸಿದ್ದರು. ಅಂದು ನಾನು ಜೊತೆ ಇದ್ದೆ ಎಂದು ಚಂದ್ರಚೂಡ್ ಅವರು ಮಾತನಾಡಿದ್ದರು. ಈ ವಿಚಾರಕ್ಕೆ ನಿರ್ಮಾಪಕ ಸೂರಪ್ಪ ಬಾಬು ಪ್ರತಿಕ್ರಿಯೆ ನೀಡಿದ್ದಾರೆ.

    ಚಂದ್ರ ಚೂಡ್ (Chandrachud) ಅವರು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಹಕ್ಕಿಲ್ಲದೇ ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ನಾನು ಉತ್ತರ ಕೊಡಬೇಕಾಗಿರೋದು ನನಗೆ ಹಣ ಕೊಟ್ಟವರಿಗೆ ಹಾಗೂ ನನ್ನ ಮನೆಯವರಿಗೆ ಮಾತ್ರ. ನೀವು ಸತ್ಯ ಹರಿಶ್ಚಂದ್ರನ ತುಂಡು ಅಂತ ಅಂದ್ಕೊಂಡಿದ್ದಾರಾ ಅಂತಾ ಚಂದ್ರಚೂಡ್‌ಗೆ ಸೂರಪ್ಪ ಬಾಬು ಟಾಂಗ್ ಕೊಟ್ಟಿದ್ದಾರೆ.

    soorappa babu

    ನನ್ನ ಶಿಖಂಡಿ ಅಂತ ಚಂದ್ರಚೂಡ್ ಹೇಳ್ತಿದ್ದಾರೆ. ನನಗೆ ಹೆಂಡತಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ನಾನು 34 ವರ್ಷ ಆಯ್ತು ಚಿತ್ರರಂಗಕ್ಕೆ ಬಂದು. ಚಿತ್ರರಂಗಕ್ಕೆ ಬರುವ ಮುಂಚೆ ನಾನು ಕಾಫಿ ಲೋಟ ತೊಳೀತಿದ್ದೆ, ಈಗ ಕೋಟಿ ಕೋಟಿ ರೂಪಾಯಿ ಬಂಡವಾಳ ಹಾಕಿ ಸಿನಿಮಾ ಮಾಡ್ತಿದ್ದಿನಿ ಅಂತ ಹೆಮ್ಮೆ ಇದೆ. ವೀರ ಸ್ವಾಮಿ ಅವರು ಮೊದಲು ಒಂದು ಆಫೀಸಲ್ಲಿ ಕೆಲಸ ಮಾಡ್ತಿದ್ರು. ನಂತರ ಅವರೂ ದೊಡ್ಡ ನಿರ್ಮಾಪಕರಾಗಿದ್ರು. ಹಾಗೆ ನಾವೂ ಬೆಳೆದು ಬಂದ ದಾರಿ ಇತ್ತು.

    ಕುಮಾರ್ ಅವರ ಆರೋಪದ ಹಿಂದೆ ನಾನಿದ್ದೀನಿ ಅಂತಾ ಸುಳ್ಳು ಆರೋಪ ಮಾಡ್ತಿದ್ದಾರೆ. ಎಲ್ಲೋ ಕುತ್ಕೊಂಡು ಮನೆ ಹಾಳು ಮಾಡ್ತೀರಾ. ಕುಮಾರ್ ಅವರು ನನ್ನ ಸ್ನೇಹಿತ. 8 ತಿಂಗಳು ಅವೈಡ್ ಮಾಡಿದ್ದೆ, ಕುಮಾರ್ 2 ಸಲ ಸುಸೈಡ್ ಮಾಡಿಕೊಳ್ಳಲು ಪ್ರಯತ್ನಿಸಿದ್ದರು. ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು, ಯಾರಿಗಾದ್ರು ಗೊತ್ತಾ? ದೇವರ ಮೇಲೆ ಭಾರ ಹಾಕಿ ಎಲ್ಲಾ ಸರಿ ಹೋಗುತ್ತೆ ಅಂತಾ ಹೇಳಿದ್ದೆ, ಇಂಡಸ್ಟ್ರಿಯಲ್ಲಿ ಈಗಾಗಲೇ ಸಿನಿಮಾ ಇಲ್ಲದೇ ಸಾಯುತ್ತಾ ಇದ್ದೀವಿ? ಅದನ್ನ ಮತ್ತಷ್ಟು ಹಾಳು ಮಾಡಬೇಡಿ ಎಂದು ಸೂರಪ್ಪ ಬಾಬು ಹೇಳಿದ್ದಾರೆ. ಸುದೀಪ್ ಅವರು ನನ್ನ ಬಗ್ಗೆ ಏನೂ ಮಾತನಾಡಿಲ್ಲ. ಆದರೆ ನಮ್ಮ ಮಧ್ಯೆ ತಂದು ಇಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ:ಟಾಲಿವುಡ್‌ನಲ್ಲಿ ಕನ್ನಡತಿಯರ ದರ್ಬಾರ್- ತೆಲುಗು ನಟಿಯರ ಬಗ್ಗೆ ಅಲ್ಲು ಅರ್ಜುನ್ ಬೇಸರ

    ಇನ್ನೂ ಕುಮಾರ್- ಸುದೀಪ್ (Sudeep) ಸಂಧಾನದ ಬಗ್ಗೆ ಮೀಟಿಂಗ್ ನಡೆದಿದೆ. ಕಾಲ್‌ಶೀಟ್ ಕದನದಲ್ಲಿ ಇಬ್ಬರ ದಾಖಲೆಗಳನ್ನ ರವಿಚಂದ್ರನ್ ಅವರು ಪರಿಶೀಲನೆ ನಡೆಸಿದ್ದಾರೆ. ಕಳೆದ 3 ದಿನಗಳ ಸತತ ಮೀಟಿಂಗ್ ನಂತರ ರವಿಚಂದ್ರನ್ (Ravichandran) ಅವರ ಮಾತಿಗೆ ಸುದೀಪ್- ಕುಮಾರ್ ಇಬ್ಬರೂ ಆಲ್‌ಮೋಸ್ಟ್ ಓಕೆ ಅಂದಿದ್ದಾರೆ ಎಂಬುದು ಇನ್‌ಸೈಡ್ ಸ್ಟೋರಿ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗೂ ಅವಕಾಶ ನೀಡಿ: ಸಿಜೆಐಗೆ ಕಿರಣ್‌ ರಿಜಿಜು ಪತ್ರ

    ಕೊಲಿಜಿಯಂನಲ್ಲಿ ಸರ್ಕಾರಿ ಪ್ರತಿನಿಧಿಗೂ ಅವಕಾಶ ನೀಡಿ: ಸಿಜೆಐಗೆ ಕಿರಣ್‌ ರಿಜಿಜು ಪತ್ರ

    ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ. ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ (Collegium) ವ್ಯವಸ್ಥೆಯಲ್ಲಿ ಸರ್ಕಾರದ ಪ್ರತಿನಿಧಿಗೂ ಅವಕಾಶ ಕಲ್ಪಿಸಬೇಕೆಂದು ಕೋರಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು (Kiren Rijiju)  ಪತ್ರ ಬರೆದಿದ್ದಾರೆ.

    ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್‌ (CJI D.Y. Chandrachud)  ಅವರಿಗೆ ಪತ್ರ ಬರೆದಿದ್ದಾರೆ.

    DY ChandraChud 2

    ತಮ್ಮ ಪತ್ರದಲ್ಲಿ ರಿಜಿಜು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು(NJAC) 2015ರಲ್ಲಿ ರದ್ದು ಮಾಡುವಾಗ ನ್ಯಾಯಾಧೀಶರ ನೇಮಕ ಸಂಬಂಧದ ಪುನರ್‌ ರಚನೆಯ ಬಗ್ಗೆ ಸುಪ್ರೀಂ ಸಂವಿಧಾನಿಕ ಪೀಠ ಉಲ್ಲೇಖಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗುತ್ತಿದ್ದಂತೆ, ಇದು ಅತ್ಯಂತ ಅಪಾಯಕಾರಿ. ನ್ಯಾಯಾಂಗ ನೇಮಕಾತಿಗಳಲ್ಲಿ ಸಂಪೂರ್ಣವಾಗಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಟೀಕಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2,000 ರೂ.: ಪ್ರಿಯಾಂಕಾ ಗಾಂಧಿ 

    ಈ ಟೀಕೆಗೆ ಪ್ರತಿಕ್ರಿಯಿಸಿದ ಕಿರಣ್‌ ರಿಜಿಜು, ನ್ಯಾಯಾಲಯದ ನಿರ್ದೇಶನವನ್ನು ನೀವು ಗೌರವಿಸುತ್ತೀರಿ ಎಂದು ಭಾವಿಸುತ್ತೇವೆ. ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ನಿರ್ದೇಶನದಂತೆ ಪತ್ರ ಬರೆಯಲಾಗಿದೆ. ಸಾಂವಿಧಾನಿಕ ಪೀಠವು ಕೊಲಿಜಿಯಂ ವ್ಯವಸ್ಥೆಯ ಕಾರ್ಯವಿಧಾನವನ್ನು ಪುನರ್‌ ಚಿಸುವಂತೆ ಸೂಚಿಸಿತ್ತು ಎಂದು ತಿರುಗೇಟು ನೀಡಿದ್ದಾರೆ.

    Supreme Court

     

    ಕೊಲಿಜಿಯಂ ವ್ಯವಸ್ಥೆಯ ಮೂಲಕ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರ ಜೊತೆ ಐವರು ನ್ಯಾಯಾಧೀಶರು ಕೊಲಿಜಿಯಂ ಸದಸ್ಯರಾಗಿರುತ್ತಾರೆ. ಪ್ರಸ್ತುತ ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಕೆಎಂ ಜೋಸೆಫ್, ಎಂಆರ್ ಶಾ, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನಾ ಅವರನ್ನು ಕೊಲಿಜಿಯಂ ಒಳಗೊಂಡಿದೆ. ಇದನ್ನೂ ಓದಿ: ನೋಟು ನಿಷೇಧ – ಸಂಸತ್ತು ಇಲ್ಲದೇ ಪ್ರಜಾಪ್ರಭುತ್ವ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ನ್ಯಾ,ನಾಗರತ್ನ

    ಧನಕರ್‌ ಟೀಕೆ:
    83ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಪ್ರಜಾಪ್ರಭುತ್ವ ವ್ಯವ್ಯವಸ್ಥೆಯಲ್ಲಿ ಶಾಸನಗಳನ್ನು ರೂಪಿಸುವ ಸಂಸತ್ತೇ ಸಾರ್ವಭೌಮ. ಶಾಸನ ರಚನೆಯಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದರು.

    Jagdeep Dhankhar 1

     

    ಸಂಸತ್ತು ಸಂವಿಧಾನದ ‘ಮೂಲ ರಚನೆ’ಯನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ವಿಧಿಸಿರುವ ನಿರ್ಬಂಧವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಈ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್‌ ಅವರ ಸಮ್ಮುಖದಲ್ಲೇ ಕೊಲಿಜಿಯಂ ರದ್ದುಗೊಳಿಸಿದ ನಿರ್ಧಾರದ ವಿರುದ್ಧ ಧನಕರ್‌ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಸತ್‌ ಅಂಗೀಕರಿಸಿದ ಕಾನೂನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡುತ್ತದೆ. ಈ ರೀತಿ ಘಟನೆ ಪ್ರಪಂಚದಲ್ಲಿ ಎಲ್ಲೂ ಈವರೆಗೆ ನಡೆದಿಲ್ಲ ಎಂದು ನೇರವಾಗಿಯೇ ಹೇಳಿದ್ದರು.

    ಸಾಂವಿಧಾನಿಕ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸುವಾಗ ಇಡೀ ಸಂಸತ್ತು ಅವಿರೋಧವಾಗಿ ಎನ್‌ಜೆಎಸಿ ಕಾಯ್ದೆಯ ಪರ ಮತ ಹಾಕಿತ್ತು. ರಾಜ್ಯಸಭೆಯಲ್ಲೂ ಅವಿರೋಧವಾಗಿ ಅಂಗೀಕಾರವಾಗಿತ್ತು. ಒಬ್ಬರು ಮಾತ್ರ ಗೈರಾಗಿದ್ದರು ಎಂದು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k