Tag: ಚಕ್ರವರ್ತಿ ಸೂಲಿಬೆಲೆ

  • ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ

    ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ

    ಬೆಂಗಳೂರು: ಕುಮಾರಸ್ವಾಮಿ ಆರ್‌ಎಸ್‌ಎಸ್‌ಗೆ ಬೈಯುವುದು ಹೊಸದೆನಲ್ಲ. ಯಾವಾಗ ಮಾಧ್ಯಮಗಳಲ್ಲಿ ತನ್ನ ಪ್ರಚಾರ ಕಡಿಮೆಯಾಗುತ್ತಿದೆ ಎಂದು ಅನಿಸಿದಾಗ ಮಾಜಿ ಸಿಎಂ ಕುಮಾರಸ್ವಾಮಿ ಆರ್‌ಎಸ್‌ಎಸ್‌, ಮೋದಿಯನ್ನು ಬೈಯುತ್ತಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

    ಕೇಂದ್ರದಲ್ಲಿ ಇರುವುದು ಆರ್‌ಎಸ್‌ಎಸ್‌ ಸರ್ಕಾರ, ಆರ್‌ಎಸ್‌ಎಸ್‌ಗೆ ಸೇರಿದ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್‌ ರಾಷ್ಟ್ರೀಯತೆಯನ್ನು ಬೆಳೆಸುತ್ತದೆ ಎನ್ನುವುದು ನಿಜ. ಹಾಗೆಂದ ಮಾತ್ರಕ್ಕೆ ರಾಷ್ಟ್ರೀಯತೆ ಚಿಂತನೆಯನ್ನು ಬೆಳೆಸಿಕೊಂಡಿದವರು ಎಲ್ಲ ಆರ್‌ಎಸ್‌ಎಸ್‌ನವರು ಎಂದು ಹೇಗೆ ಹೇಳುತ್ತಾರೆ ಎಂದು ಪ್ರಶ್ನಿಸಿದರು.

    ರಾಷ್ಟ್ರೀಯತೆಯ ಚಿಂತನೆಯನ್ನು ಹೊಂದಿದರೆ ಯಾವುದೇ ಸಮಸ್ಯೆ ಇಲ್ಲ. ಆಟೋ ಡ್ರೈವರ್ ಅವರನ್ನು ತೆಗೆದುಕೊಂಡರೆ ಆತನೂ ರಾಷ್ಟ್ರೀಯವಾದಿ ಎಂದು ಹೇಳುತ್ತಾನೆ. ಅದೇ ರೀತಿಯಾಗಿ ಐಪಿಎಸ್, ಐಎಎಸ್‍ನಲ್ಲೂ ರಾಷ್ಟ್ರೀಯ ಚಿಂತನೆಯನ್ನು ಬೆಳೆಸಿದವರು ಇರುತ್ತಾರೆ. ಜನರಿಗೆ ಎಲ್ಲವೂ ಗೊತ್ತಿದೆ. ಯಾವುದು ಸರಿ ಇದೆಯೋ ಅದನ್ನು ಜನ ಒಪ್ಪುತ್ತಾರೆ ಎಂದು ತಿರುಗೇಟು ನೀಡಿದರು.

    ರಾಷ್ಟ್ರೀಯ ಗೌರವ ಇಟ್ಟುಕೊಂಡರೆ ಜನರು ಹೆಮ್ಮೆ ಪಡುತ್ತಾರೆ. ಹೀಗಿರುವಾಗ ಕುಮಾರಸ್ವಾಮಿ ಅವರಿಗೆ ರಾಷ್ಟ್ರೀಯತೆ ವಿಚಾರ ಬಂದಾಗ ಹೊಟ್ಟೆ ಉರಿ ಯಾಕೆ? ನಾನು ಭಾರತದ ಪರ ಎಂದು ಹೇಳಿದರೆ ತಪ್ಪೇನು ಎಂದು ಅವರು ಪ್ರಶ್ನಿಸಿದರು. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ 

    ನರೇಂದ್ರ ಮೋದಿ ಆರ್‌ಎಸ್‌ಎಸ್‌ ಕೈಗೊಂಬೆ ಎಂಬ ಎಚ್‍ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಸೂಲಿಬೆಲೆ, ಮನಮೋಹನ್ ಸಿಂಗ್ ಸೋನಿಯಾ ಗಾಂಧಿ ಅವರ ಕೈಗೊಂಬೆಯಾಗಿದ್ದರು. ಆದರೆ ಅವರು ಸೋನಿಯಾ ಗಾಂಧಿ ಅವರ ವಿಚಾರಧಾರೆಯ ಕೈಗೊಂಬೆಯಾಗಿರಲ್ಲ. ಅವರು ವ್ಯಕ್ತಿಯ ಕೈಗೊಂಬೆಯಾಗಿದ್ದರು. ಆದರೆ ಆರ್‌ಎಸ್‌ಎಸ್‌ ಎನ್ನುವುದು ವ್ಯಕ್ತಿಯ ಕೈಗೊಂಬೆಯಲ್ಲ. ಅದೊಂದು ವಿಚಾರಧಾರೆ. ಒಂದು ವ್ಯಕ್ತಿಯನ್ನು ಅನುಸರಿಸಿ, ಒಂದು ಪರಿವಾರವನ್ನು ಅನುಸರಿಸಿ, ಅದಕ್ಕೆ ಜೀತ ಮಾಡಿಕೊಂಡು ಸಿಎಂ, ಪಿಎಂ ಆಗಿದ್ದೇನೆ ಎಂದು ಹೇಳುವುದು ತಪ್ಪಲ್ಲ ಅನ್ನುವುದಾದರೆ ಇಡೀ ರಾಷ್ಟ್ರ ಒಪ್ಪಿರುವ ಚಿಂತನೆಯಿಂದ ನಾನು ಬಂದಿದ್ದೇನೆ ಎಂದು ಹೇಳಿದರೆ ಅದು ಯಾಕೆ ತಪ್ಪಾಗಬೇಕು ಎಂದು ಪ್ರಶ್ನಿಸಿ ತಿರುಗೇಟು ನೀಡಿದರು.

  • ಸಾಮೂಹಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿ- ಚಕ್ರವರ್ತಿ ಸೂಲಿಬೆಲೆ ಒತ್ತಾಯ

    ಸಾಮೂಹಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿ- ಚಕ್ರವರ್ತಿ ಸೂಲಿಬೆಲೆ ಒತ್ತಾಯ

    ವಿಜಯಪುರ: ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ಅವಕಾಶ ನೀಡಬೇಕು. ಕೆಲ ಷರತ್ತುಗಳನ್ನು ಹಾಕಿಯಾದರೂ ಹಬ್ಬದ ಆಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸುಲಿಬೆಲೆ ಒತ್ತಾಯಿಸಿದ್ದಾರೆ.

    bij chakravarthi sulibele

    ನಗರದ ಬಿಎಲ್‍ಡಿ ರಸ್ತೆಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಮನೆ ಮನೆಗೂ ಮಣ್ಣಿನ ಗಣಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ಭಯದಲ್ಲೇ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಲೇ ಇದ್ದಾರೆ. ಇದೇ ನೆಪದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸುವುದು ಸರಿಯಲ್ಲ. ಕಳೆದ ಬಾರಿಯೂ ಚೌತಿ ಆಚರಿಸಲಾಗಲಿಲ್ಲ. ಈ ವರ್ಷ ಚೌತಿ ಆಚರಣೆ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ

    ganesha 1 medium

    ಜನರಿಗೆ ಕೋವಿಡ್ ಎಚ್ಚರಿಕೆ ನೀಡಿಯೇ ಗಣೇಶ ಹಬ್ಬ ಆಚರಿಸಲು ಸರ್ಕಾರ ಅವಕಾಶ ನೀಡಬೇಕು. ಹಿಂದೂಗಳು ಎಚ್ಚರ ತಪ್ಪಿ ಹಬ್ಬ ಆಚರಿಸುವುದಿಲ್ಲ. ಎಚ್ಚರಿಕೆಯಿಂದಲೇ ಗಣೇಶ ಹಬ್ಬ ಆಚರಿಸುತ್ತೇವೆ ಎಂದರು.

    ಹಿಂದೂ ಧರ್ಮ ಪರಿಸರಕ್ಕೆ ಹಾನಿಯಾಗುವ ಕಾರ್ಯ ಯಾವತ್ತೂ ಮಾಡಿಲ್ಲ. ಆದರೆ ಹಿಂದೂಗಳ ಹಬ್ಬ ಬಂದರೆ ಆಘಾತ ಕಾದಿರುತ್ತದೆ. ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಗಣೇಶ ಹಬ್ಬಕ್ಕೆ ಹಾಡು ಹಚ್ಚಬೇಡಿ ಎನ್ನುತ್ತಾರೆ. ಹೀಗಾಗಿ ಹಿಂದೂಗಳಿಗೆ ಆತಂಕ ಇದ್ದೇ ಇದೆ ಎಂದರು.

  • ಯೋಧರ ನೆನಪಿಗಾಗಿ ಬೆಂಗಳೂರಿನಲ್ಲಿ ಸೈನ್ಯ ವನ – ಯುವಾ ಬ್ರಿಗೇಡ್ ಅಭಿಯಾನ

    ಯೋಧರ ನೆನಪಿಗಾಗಿ ಬೆಂಗಳೂರಿನಲ್ಲಿ ಸೈನ್ಯ ವನ – ಯುವಾ ಬ್ರಿಗೇಡ್ ಅಭಿಯಾನ

    ಬೆಂಗಳೂರು: ರಾಷ್ಟ್ರ ರಕ್ಷಣೆಗಾಗಿ ಪ್ರಾಣ ಕೊಟ್ಟ ಕರ್ನಾಟಕದ ಯೋಧರ ನೆನಪಿಗಾಗಿ ಯುವಾ ಬ್ರಿಗೇಡ್ ಇಂದು ಮೈಲಸಂದ್ರದಲ್ಲಿ ಸಸಿ ನೆಡುವ ಸೈನ್ಯ ವನ ಅಭಿಯಾನ ಪ್ರಾರಂಭಿಸಿದೆ.

    YUVABRIGADE 2

    50 ಸೈನಿಕ ದಂಪತಿ ಹಾಗೂ ಯುವಾ ಬ್ರಿಗೇಡ್ ಕಾರ್ಯಕರ್ತರು ಮೈಲಸಂದ್ರದ ಪಿಳೇಕಮ್ಮ ದೇಗುಲದ ಬಳಿ ಸಸಿ ನೆಟ್ಟು ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸ್ವಾತಂತ್ರಕ್ಕೆ 75 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಹುತಾತ್ಮ ಯೋಧರ ಹೆಸರಿನಲ್ಲಿ ಕಾಡೊಂದನ್ನು ನಿರ್ಮಿಸುವ ಯೋಜನೆ ಇದು ಎಂದು ಖುಷಿ ಹಂಚಿಕೊಂಡರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ 6-7 ತಿಂಗಳು ಅಧಿಕಾರ, 2022ರಲ್ಲಿ ಗಡ್ಡಧಾರಿ ಹೊಸ ಮುಖ್ಯಮಂತ್ರಿ: ಮೈಲಾರ ದೈವವಾಣಿ

    YUVABRIGADE 3

    ಸೈನ್ಯ ವನದ ವಿಶೇಷ ಏನೆಂದರೆ ಈ ಕಾಡಿನಲ್ಲಿ ಪ್ರತಿ ಮರಗಳಿಗೂ ಹುತಾತ್ಮ ಯೋಧರ ಹೆಸರಿಡಲಿದ್ದು, ಸ್ಮಾರಕಗಳು ಸೈನ್ಯಕ್ಕೆ ಸೇರಿದ ಮಾಹಿತಿಗಳನ್ನು ಒಳಗೊಂಡಿರಲಿದೆ. ಮುಂದೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೈನ್ಯವನವನ್ನು ನಿರ್ಮಿಸುವ ಯೋಜನೆ ಯುವಾ ಬ್ರಿಗೇಡಿನದ್ದಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

  • ಕನ್ನಡ ಶಾಲೆಗೆ ಹೊಸ ರೂಪಕೊಟ್ಟ ಯುವ ಬ್ರಿಗೇಡ್ ತಂಡ

    ಕನ್ನಡ ಶಾಲೆಗೆ ಹೊಸ ರೂಪಕೊಟ್ಟ ಯುವ ಬ್ರಿಗೇಡ್ ತಂಡ

    – ಯುವಕರ ನಡೆಗೆ ಪ್ರಶಂಸೆ

    ಬೆಂಗಳೂರು: ರಾಜ್ಯದ ಗಡಿಭಾಗವಾದ ಆನೇಕಲ್ ತಾಲೂಕಿನ ಸೊಲೂರು ಗ್ರಾಮದ ಕನ್ನಡ ಶಾಲೆಗೆ ಹೊಸ ರೂಪ ಕೊಟ್ಟು ನವೀಕರಿಸುವ ಮೂಲಕ ಶಕ್ತಿ ಸೇವಾ ಟ್ರಸ್ಟ್ ಹಾಗೂ ವಿವೇಕಾನಂದ ಯುವ ಬ್ರಿಗೇಡ್ ತಂಡದ ಯುವಕರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ಶಾಲೆಯ ನೂತನ ಕಟ್ಟಡವನ್ನ ಉದ್ಘಾಟನೆ ಮಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೊಲೂರಿನ ವಿನೋಬ ಭಾವೆ ಸರ್ಕಾರಿ ಶಾಲೆ ಭೇಟಿ ಕೊಟ್ಟು ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿದರು. ಸುಮಾರು 35 ಲಕ್ಷ ವೆಚ್ಚ ಮಾಡಿ ಶಾಲೆಯ ಮೊದಲ ಮಹಡಿಯಲ್ಲಿ ಮೂರು ಅತ್ಯಾಧುನಿಕ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಅತ್ಯಾಧುನಿಕ ಶೌಚಾಲಯವನ್ನು ನಿರ್ಮಿಸಲಾಗಿದೆ. ಹೀಗಾಗಿ ಖುದ್ದು ಸಚಿವರೇ ಶಾಲೆಯನ್ನು ವೀಕ್ಷಣೆ ಮಾಡಿ ಯುವ ಬ್ರಿಗೇಡ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

    ANNEKAL 2

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಗಡಿಭಾಗದ ಕನ್ನಡ ಶಾಲೆಗಳು ನಿಜಕ್ಕೂ ಶೋಚನೀಯ ಸ್ಥಿತಿಯಲ್ಲಿದ್ದು ಅವುಗಳನ್ನು ಅಭಿವೃದ್ಧಿ ಮಾಡುವ ಮೂಲಕ ಕನ್ನಡ ಶಾಲೆಗಳನ್ನು ಉನ್ನತೀಕರಿಸುವ ಕೆಲಸ ಇಂದು ಸೊಲೂರಿನಲ್ಲಿ ನಡೆದಿದೆ. ಚಕ್ರವರ್ತಿ ಸೂಲಿಬೆಲೆಯವರ ಯುವ ಬ್ರಿಗೇಡ್ ಸದಸ್ಯರು ರಾಜ್ಯದ ಹಲವು ಕಡೆಗಳಲ್ಲಿ ಕೈಗಾರಿಕೆಗಳ ಜೊತೆಗೂಡಿ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಸಮಾಜದ ಮೇಲಿನ ಕಳಕಳಿ ಇದೇ ರೀತಿ ಮುಂದುವರಿಯಲಿ ಎಂದರು.

    ANNEKAL 1

    ಭಗವಾನ್ ಅವರ ವಿವಾದಾತ್ಮಕ ಪುಸ್ತಕದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಕುಮಾರ್, ಚರ್ಚೆ ಬೇಡ ಭಗವಾನ್ ಪುಸ್ತಕ ಖರೀದಿ ಮಾಡಿಲ್ಲ. ಈ ಬಗ್ಗೆ ಫೇಸ್‍ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.

    ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸೋಲೂರಿನ ಸರ್ಕಾರಿ ಶಾಲಾ ಕಟ್ಟ ತೀರಾ ಕೆಟ್ಟ ಸ್ಥಿತಿಯಲ್ಲಿತ್ತು. ನಮ್ಮ ಸದಸ್ಯರೊಬ್ಬರು ಇದನ್ನು ನಮ್ಮ ಗಮನಕ್ಕೆ ತಂದರು. ನಾವು ಕಂಪನಿಯ ಅಡಿಯಲ್ಲಿ 22 ಲಕ್ಷ ಹಾಗೂ ನಮ್ಮ ಯುವ ಬ್ರಿಗೇಡ್ ಸದಸ್ಯರು ಸಾಮಾಜಿಕ ಜಾಲತಾಣದ ಮೂಲಕ ಹಣವನ್ನು ದಾನಿಗಳಿಂದ ಸಂಗ್ರಹಿಸಿ ಒಟ್ಟು 35 ಲಕ್ಷ ವೆಚ್ಚ ಮಾಡಿ ಸರ್ಕಾರಿ ಶಾಲೆಗೆ ಮೂರು ಹೊಸ ಕಟ್ಟಡ ನಿರ್ಮಿಸಿ ಹೊಸ ರೂಪವನ್ನು ನೀಡಿದ್ದೇವೆ. ಶಿಕ್ಷಣ ಸಚಿವರು ನೂತನ ಕಟ್ಟಡವನ್ನು ಉದ್ಘಾಟನೆ ಮಾಡಿರುವುದು ನಿಜಕ್ಕೂ ಇನ್ನು ಹೆಚ್ಚು ಸಂತಸ ನೀಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

  • ಸೂಲಿಬೆಲೆ, ತೇಜಸ್ವಿ ವಿರುದ್ಧ ಕೆಟ್ಟ ಪದ ಬಳಸಿ ಬೇಳೂರು ವಾಗ್ದಾಳಿ

    ಸೂಲಿಬೆಲೆ, ತೇಜಸ್ವಿ ವಿರುದ್ಧ ಕೆಟ್ಟ ಪದ ಬಳಸಿ ಬೇಳೂರು ವಾಗ್ದಾಳಿ

    ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕೆಟ್ಟ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದಾರೆ.

    ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಜೊತೆಗೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದರು ಕೂಡ ಪ್ರತಿಕ್ರಿಯಿಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಕೇವಲ ಬಿಜೆಪಿ ಸರ್ಕಾರವನ್ನು ಹೊಗಳುವುದೇ ಕೆಲಸವಾಗಿದೆ ಎಂದು ಟೀಕಿಸಿದ್ದಾರೆ.

    PM Modi

    ಜನರನ್ನು ಪ್ರಚೋದನೆ ಮಾಡುವುದು ಇವರ ಕೆಲಸವಾಗಿದೆ. ಮೋದಿ, ಮೋದಿ ಎನ್ನುವ ಇವರು ಮೋದಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಸೈನಿಕ ಸಾವನ್ನಪ್ಪಿಲ್ಲವೇ ಎಂದು ಚಕ್ರವರ್ತಿ ಸೂಲಿಬೆಲೆಗೆ ಪ್ರಶ್ನಿಸಿದ್ದಾರೆ. ಅನಂತ್ ಕುಮಾರ್ ಅವರಂತಹ ದಿಟ್ಟ ನಾಯಕನ ಕ್ಷೇತ್ರದಲ್ಲಿ ಆಯ್ಕೆಯಾಗಿ ಬಂದ ತೇಜಸ್ವಿ ಸೂರ್ಯ ಏನಾದರೂ ಸಾಧಿಸುತ್ತಾರೆ ಎಂದುಕೊಂಡಿದ್ದೆವು. ಆದರೆ ಈರುಳ್ಳಿ ಬೆಲೆ ಗಗನಕ್ಕೇರಿದ್ದರು ತುಟಿ ಬಿಚ್ಚದ ಸಂಸದರು ಇವರು ಎಂದು ಟೀಕಿಸಿದ್ದಾರೆ.

    ಇದೇನಾ ಮೋದಿಯವರ ಅಚ್ಚೇದಿನ್, ನಿಮ್ಮದು ಉತ್ತಮ ಸರ್ಕಾರನಾ ಎಂದು ಪ್ರಶ್ನಿಸಿದ್ದಾರೆ. ನಿಮ್ಮದು ಕೂಡ ದರಿದ್ರ ಸರ್ಕಾರನೇ ಎಂದು ಬೇಳೂರು ಹೇಳಿದ್ದಾರೆ. ಇನ್ನು ನಲಪಾಡ್ ಅಪಘಾತ ಮಾಡಿದರೆ ಜೈಲಿಗೆ ಹಾಕಿ ಎನ್ನುವ ಇವರು ಸಚಿವ ಆರ್. ಅಶೋಕ್ ಪುತ್ರ ಅಪಘಾತ ಮಾಡಿದರೆ ಏನು ಹೇಳುತ್ತಾರೆ. ಅಶೋಕ್ ಮತ್ತು ಸಿ.ಟಿ. ರವಿ ಈಗೇನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

    ashok

  • ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ದೇಶಭಕ್ತ, ಯುಗಪುರುಷರಲ್ಲ- ಹೆಚ್‍ಡಿಕೆ

    ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ದೇಶಭಕ್ತ, ಯುಗಪುರುಷರಲ್ಲ- ಹೆಚ್‍ಡಿಕೆ

    ಬೆಂಗಳೂರು: ಹಿಂದೂ ನಾಯಕರ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರು ಹಿಂದೂ ನಾಯಕರ ಕೊಲೆಗೆ ಸಂಚು ರೂಪಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಲೇಪನ ಬೇಡ. ಉದ್ದೇಶ ಪೂರ್ವಕವಾಗಿ ಒಂದು ಧರ್ಮವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಅಂತ ಹೇಳಿದ್ದಾರೆ.

    TEJASVI SULIBELE copy

    ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರು ಕೂಡ ಅಲ್ಲ. ಹೀಗಿದ್ದರೂ ಅವರನ್ನು ಹುತಾತ್ಮ ಮಾಡಲು ಹೋರಟಿದ್ದೀರಾ ಅಂತ ಪ್ರಶ್ನೆ ಮಾಡಿದರು. ಸಂಸದ ತೇಜಸ್ವಿ ಸೂರ್ಯ ಬಗ್ಗೆ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ತೇಜಸ್ವಿ ಸೂರ್ಯ ಕೊಡುಗೆ ಬೆಂಗಳೂರಿಗೆ ಏನು?, ಏನ್ ಸಾಧನೆ ಮಾಡಿದ್ದಾರೆ ಅಂತ ಇವರನ್ನು ಕೊಲ್ಲೋಕೆ ಹೋಗುತ್ತಾರೆ ಎಂದು ಉಡಾಫೆಯಾಗಿ ಮಾತನಾಡಿದರು.

    ಯಾರೋ ತಪ್ಪು ಮಾಡಿದ್ರು ಅಂತ ಒಂದು ಸಮುದಾಯದ ಮೇಲೆ ತಪ್ಪು ಹೊರಿಸಬೇಡಿ. ಉದ್ದೇಶಪೂರ್ವಕವಾಗಿ ಒಂದು ಸಮುದಾಯ ಟಾರ್ಗೆಟ್ ಮಾಡಬೇಡಿ. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಿ ಎಂದು ಇದೇ ವೇಳೆ ಕುಮಾರಸ್ವಾಮಿ ಒತ್ತಾಯಿಸಿದರು. ಇದನ್ನೂ ಓದಿ: ಸಮಾಜದ್ರೋಹಿ ಶಕ್ತಿಗಳನ್ನು ಯಾರೂ ಬೆಂಬಲಿಸಲ್ಲ: ಯು.ಟಿ.ಖಾದರ್

    CCB

    ಏನಿದು ಪ್ರಕರಣ?:
    ದೇಶಾದ್ಯಂತ ಪೌರತ್ವ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಡಿಸೆಂಬರ್ 22ರಂದು ನಗರದ ಟೌನ್ ಹಾಲ್ ನಲ್ಲಿ ಸಿಎಎ ಪರ ಜನಜಾಗೃತಿ ಹೊರಟಿದ್ದ ವರುಣ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಿಂಬದಿಯಿಂದ ಎರಡು ಬೈಕ್ ನಲ್ಲಿ ಬಂದಿದ್ದ ಆರೋಪಿಗಳು ರಾಡ್ ಹಾಗೂ ಲಾಂಗ್ ಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    CCB 5

    ಬಂಧಿತ ಎಸ್‍ಡಿ ಪಿಐ ಕಾರ್ಯಕರ್ತರಾದ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ವಿಚಾರಣೆ ನಡೆಸಿದಾಗ, ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇಲ್ಲ. ಆರೋಪಿಗಳಿಗೂ ವರುಣ್ ಗೂ ಸಂಬಂಧವೇ ಇಲ್ಲ. ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಆತನ ಹತ್ಯೆಗೆ ಮುಂದಾಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಅಲ್ಲದೆ ಜನಜಾಗೃತಿ ರ್ಯಾಲಿ ವೇಳೆ ಕಲ್ಲು ಕೂಡ ತೂರಲಾಗಿತ್ತು. ಕಲ್ಲುಗಳನ್ನು ತೂರಿ ಗುಂಪು ಚದುರಿಸುವ ಪ್ಲಾನ್ ಮಾಡಲಾಗಿತ್ತು. ಜನ ಚದುರುತ್ತಿದ್ದಂತೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಆಲೋಚಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

  • ಎಲ್ಲೇ ಸಿಎಎ ವಿರುದ್ಧ ಗಲಾಟೆಯಾದ್ರೂ ಎಸ್‍ಡಿಪಿಐ ಹೆಸರು ಹೇಳ್ತಾರೆ: ಮುಜಾಹೀದ್ದಿನ್ ಪಾಷ

    ಎಲ್ಲೇ ಸಿಎಎ ವಿರುದ್ಧ ಗಲಾಟೆಯಾದ್ರೂ ಎಸ್‍ಡಿಪಿಐ ಹೆಸರು ಹೇಳ್ತಾರೆ: ಮುಜಾಹೀದ್ದಿನ್ ಪಾಷ

    ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿ ಸೂರ್ಯ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರು ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅವರು ಯಾರಾದರೂ ಕಾನೂನಿನ ರೀತಿಯ ಕ್ರಮ ಕೈಗೊಳ್ಳಬೇಕು. ಆದರೆ ಸಿಎಎ ಹಾಗೂ ಎನ್.ಸಿ.ಆರ್ ವಿಚಾರವಾಗಿ ಎಲ್ಲೇ ಗಲಾಟೆ ನಡೆದರೂ ಅದು ಎಸ್‍ಡಿಪಿಐ ಅವರು ಮಾಡಿದ್ದು ಎಂದು ಹೇಳುತ್ತಾರೆ ಎಂದು ಎಸ್‍ಡಿಪಿಐ ಪಕ್ಷದ ಬಿಬಿಎಂಪಿ ಸದಸ್ಯ ಮುಜಾಹೀದ್ದಿನ್ ಪಾಷ ಬೇಸರ ವ್ಯಕ್ತಪಡಿಸಿದ್ದಾರೆ.

    sdpi

    ಇದು ರಾಜಕೀಯ, ನಮ್ಮ ಪಕ್ಷದವರು, ಸಂಘಟನೆಯವರು ಈ ರೀತಿ ಯಾವುದೇ ಕೆಲಸದಲ್ಲಿ ಭಾಗಿಯಾಗಿಲ್ಲ. ವರುಣ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿರುವುದು ಯಾರು ಎಂದು ನಮಗೆ ಗೊತ್ತಿಲ್ಲ. ಈಗಾಗಲೇ ನಾನು ಅವರು ನಮ್ಮ ಸಂಘಟನೆಯ ಕಾರ್ಯಕರ್ತರಾ, ಅಲ್ವಾ ಎಂದು ಹೇಳಲು ಆಗುವುದಿಲ್ಲ. ನನಗೆ ಅವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಬಿಜೆಪಿ ಮತ್ತು ಆರ್.ಎಸ್.ಎಸ್ ಅವರು ಸ್ವಾತಂತ್ರ್ಯ ಬಂದಾಗಿನಿಂದ ಯಾವೆಲ್ಲಾ ಒಳ್ಳೆಯ ಕೆಲಸ ಮಾಡಿದ್ದಾರೆ ಎಂಬುವುದು ಜನರಿಗೆ ತಿಳಿದಿದೆ ಎಂದು ಹೇಳಿದರು.

    ನಮ್ಮ ಪಕ್ಷದ ಮೇಲೆ ಬೇಕು ಎಂದೇ ಷಡ್ಯಂತ್ರ ಮಾಡುತ್ತಿದ್ದಾರೆ. ನಾವೂ ಯಾರಿಗೂ ಸಮಾಜ ದ್ರೋಹಿ ಕೆಲಸಕ್ಕೆ ತರಬೇತಿ ನೀಡಿಲ್ಲ. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು ಎಂದರು. ಇದನ್ನು ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

  • ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

    ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

    ಬೆಂಗಳೂರು: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ, ನಾವು ಕಾಳಿಯನ್ನು ಪೂಜೆ ಮಾಡುವವರು ಸಾವಿಗೆ ಹೆದರಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಮೇಲೆ ಕೊಲೆಯ ರೂಪಿಸಿದ ಸಂಚು ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆರೋಪಿಗಳ ಎಲ್ಲಾ ಪ್ರಯತ್ನ ಕೂಡ ಶೇಕಡ 100ರಷ್ಟು ವ್ಯರ್ಥ ಪ್ರಯತ್ನ. ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ. ಕಾಳಿಯನ್ನು ಅಂದರೆ ಮೃತ್ಯು ದೇವತೆಯನ್ನು ಪೂಜೆ ಮಾಡಿ ಬಂದು ಕುಳಿತ ನಮಗೆ ಮೃತ್ಯವಿನ ಹೆದರಿಕೆ ಖಂಡಿತವಾಗಿಯೂ ಇಲ್ಲ. ಈ ರಾಷ್ಟ್ರವನ್ನು ಕಟ್ಟುವಂತ ಕೆಲಸವನ್ನು ನಾವು ಮಾಡುತ್ತೇವೆ. ಅವರು ಏನೇ ಮಾಡಿದರೂ ಬಗ್ಗುವ ಜೀವ ನಮ್ಮದಲ್ಲ ಎಂದು ಆರೋಪಿಗಳಿಗೆ ಹೇಳಲು ನಾನು ಇಚ್ಛಿಸುತ್ತೇನೆ ಅಂತ ಪ್ರತಿಕ್ರಯಿಸಿದರು.

    chakravarti sulibele

    ಸಿಎಎ ಪರ ಜನಜಾಗೃತಿ ವೇಳೆ ದೊಡ್ಡ ಗಾತ್ರದ ಕಲ್ಲು ಬಂದು ನನ್ನ ಮೇಲೆ ಬಿತ್ತು. ಇಷ್ಟೆಲ್ಲ ಜನರ ನಡುವೆ ಗುರಿಯಿಟ್ಟು ನನಗೆ ಹೊಡೆಯಲು ಅವರಿಗೆ ಸಾಧ್ಯವಾಯ್ತಲ್ಲ ಎನ್ನುವುದೇ ಆಶ್ಚರ್ಯಕರ ಸಂಗತಿ. ನನ್ನ ಪ್ರಕಾರ ಆರೋಪಿಗಳು ಮೊದಲೇ ತಯಾರಿ ನಡೆಸಿಕೊಂಡು ಬಂದಿದ್ದರು. ಆದರೆ ಅಂದು ನನಗೆ ಏನೂ ಮಾಡಲು ಆಗಲಿಲ್ಲ ಎಂದು ಕಲ್ಲು ಹೊಡೆದಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರಿಗೆ ತಿಳಿಸಿದ್ದೆ. ಅವರು ನನಗೆ ಸಹಕರಿಸಿ ನನ್ನ ಮನೆ, ಕಚೇರಿಗೆ ಭದ್ರತೆ ಒದಗಿಸಿದ್ದರು. ಅವರಿಗೆ ಧನ್ಯವಾದ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

    sulibele 1

    ಕೊಲ್ಲಬೇಕೆನ್ನುವ ಮಾನಸಿಕತೆ ಇರುವುದು ಕ್ರಿಮಿನಲ್ ಸಂಗತಿ. ಇಂತಹ ಮನಸ್ಥಿತಿ ಇರುವವರನ್ನು ನಿಷೇಧಿಸುವುದು ಖಂಡಿತವಾಗಿಯು ಅಗತ್ಯವಾಗಿದೆ. ಅವರನ್ನು ಇಲ್ಲಿ ಬೀಡುಬಿಡಲು ಅವಕಾಶ ನೀಡಬಾರದು. ಕರ್ನಾಟಕ ತುಂಬಾ ಶಾಂತಿಯುತವಾದ ಸುಂದರ ಜಾಗ. ಯಾವುದಕ್ಕೂ ನಾವು ನಮ್ಮ ರಾಜ್ಯವನ್ನು ಕ್ರಿಮಿನಲ್ ಮನಸ್ಥಿತಿ ಇರುವವರ ನಾಡಾಗಲು ಬಿಡಬಾರದು. ಕಳೆದ ಮೂರ್ನಾಲ್ಕು ದಿನಗಳಿಂದ ನಾನು ವರದಿಗಳನ್ನು ನೋಡುತ್ತಿದ್ದೇನೆ. ಈ ರೀತಿ ಕೃತ್ಯಗಳಿಗೆ ಮೈಸೂರು, ಮಂಗಳೂರು, ಉಡುಪಿ ಹೀಗೆ ರಾಜ್ಯದ ಹಲವು ನಗರಗಳನ್ನು ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ. ಈ ಹೊಸ ಸರ್ಕಾರ ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಅವರನ್ನು ಮಟ್ಟಹಾಕಬೇಕು. ಯಾವುದೇ ಕಾರಣಕ್ಕೂ ಅವರನ್ನು ಇಲ್ಲಿ ಬೀಡುಬಿಡಲು ಅವಕಾಶ ನೀಡಬಾರದು ಎಂದು ಸೂಲಿಬೆಲೆ ಸರ್ಕಾರಕ್ಕೆ ಮನವಿ ಮಾಡಿದರು.

    CCB 7

    ಇದು ಕೊಲೆಯ ಮಾನಸಿಕತೆ. ಪ್ರತಿಭಟನೆ ಎನ್ನುವುದು ಕೇವಲ ಪ್ರತಿಭಟನೆ ಅಷ್ಟೇ. ಆದರೆ ಅದನ್ನು ಕೊಲೆ ಮಾಡುವ ಮಟ್ಟಕ್ಕೆ ತೆಗೆದುಕೊಂಡು ಹೋಗೋದು ಒಂದು ಕೆಟ್ಟ ಪ್ರಯತ್ನ, ಹುಚ್ಚುತನ. ಈ ರೀತಿ ಪ್ರಯತ್ನವನ್ನು ಬುಡದಿಂದಲೇ ಚಿವುಟಿ ಹಾಕಬೇಕು. ನನ್ನ ಪ್ರಕಾರ ದೇಶವನ್ನು ತುಂಡರಿಸಿ ಆದರೂ ಅಧಿಕಾರ ಪಡೆಯಬೇಕು ಎಂದು ಆಲೋಚಿಸುವವರು ನೀಚರು. ಅಧಿಕಾರಕ್ಕಾಗಿ ಈ ರೀತಿ ಕೊಲೆ ಯತ್ನಕ್ಕೆ ಪ್ರಯತ್ನಿಸುವವರು ಕೊಲೆ ಮಾಡುವವರಿಗಿಂತ ನೀಚರು. ಈ ರೀತಿ ನೀಚ ಪ್ರಯತ್ನ ಮಾಡಬಾರದಿತ್ತು. ಆದರೆ ಇನ್ನಾದರೂ ಇವರೆಲ್ಲ ತಿದ್ದುಕೊಂಡು ರಾಷ್ಟ್ರದ ಕುರಿತು ಕೆಲಸ ಮಾಡಲು ಮುಂದಾದರೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    sulibele

    ನಾನು ಘಟನೆ ನಡೆದ ದಿನ ಸುಮಾರು 10:30ರ ಹೊತ್ತಿಗೆ ಟೌನ್‍ಹಾಲ್‍ಗೆ ಬಂದೆ. ಆದರೆ ಅಲ್ಲಿನ ಮೆಟ್ಟಿಲ ಬಳಿ ಹೋಗದೇ ನೆರೆದಿದ್ದ ಜನರ ನಡುವೆ ಕುಳಿತೆ. ನಾನು ಅಲ್ಲಿ ಕುಳಿತ 10ರಿಂದ 15 ನಿಮಿಷ ಆಸುಪಾಸಿಗೆ ನನ್ನ ಮೇಲೆ ಕಲ್ಲು ಬಿತ್ತು. ಸುಮಾರು 50 ಅಡಿ ಅಂತರದಿಂದ ಕಲ್ಲು ಬಿದ್ದಿತ್ತು. ಆರೋಪಿಗಳು ನಮ್ಮವರ ನಡುವೆ ಇದ್ದುಕೊಂಡು ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ. ಆದರೆ ಕೊಲ್ಲುವವರಿಗಿಂತ ಕಾಯುವವನು ದೊಡ್ಡವನು. ಇಂತಹ ನೂರಾರು ಎಸ್‍ಡಿಪಿಐ(ಸೊಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ)ಗಳನ್ನ ಭಾರತ ನೋಡಿದೆ. ಅವರನ್ನೆಲ್ಲಾ ಮೆಟ್ಟಿ ನಿಲ್ಲುವ ಶಕ್ತಿ ಭಾರತಕ್ಕಿದೆ ಎಂದು ಸೂಲಿಬೆಲೆ ಹೇಳಿದರು.

  • ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸ್ತಿದೆ: ಸೂಲಿಬೆಲೆ

    ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸ್ತಿದೆ: ಸೂಲಿಬೆಲೆ

    ಹಾವೇರಿ: ದೇಶ ದ್ರೋಹಿಗಳು ಹಾಗೂ ದೇಶ ವಿರೋಧಿಗಳು ನನ್ನನ್ನು ಹತ್ಯೆ ಮಾಡಲು ಟಾರ್ಗೆಟ್ ಮಾಡಿರುವುದಕ್ಕೆ ಹೆಮ್ಮೆ ಅನಿಸುತ್ತದೆ ಎಂದು ಖ್ಯಾತ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

    ನಗರದ ವಿವೇಕಾನಂದ ಆಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸುವಂತ ಹಾಗೂ ತುಂಡು, ತುಂಡು ಮಾಡುವಂತಹ ವ್ಯಕ್ತಿಗಳು ನನ್ನನ್ನು ಕೊಲೆ ಮಾಡುತ್ತಾರೆ ಎಂಬುದು ಆಶ್ಚರ್ಯಕರ. ಇಂದು ಪೊಲೀಸ್ ಇಲಾಖೆ ಸೂಕ್ಷ್ಮವಾಗಿ ಆರು ಮಂದಿಯನ್ನು ಬಂಧಿಸಿದ್ದಾರೆ. ಅಂದು ನಡೆದ ಘಟನೆಯನ್ನ ಪೊಲೀಸ್ ಕಮಿಷನರ್ ಗೆ ತಿಳಿಸಿದ್ದೆ ಎಂದರು.

    TEJASVI SULIBELE copy

    ದೇಶದಲ್ಲಿ ಶಾಂತಿ, ಸುವ್ಯವಸ್ಥೆ ತೆಗೆದುಕೊಂಡು ಹೋಗುವಂತದ್ದು ಹಿಂದೂ ಸಮಾಜ ಪರವಾಗಿ ಹೋರಾಟ ಮಾಡಿದರೆ ಕೊಲೆ ಬೆದರಿಕೆಗಳು ಹೆಚ್ಚಾಗುತ್ತಿವೆ. ಇಂಥವರನ್ನು ಸರ್ಕಾರ ಸೂಕ್ತವಾಗಿ ವಿಚಾರಿಸಿಕೊಳ್ಳಬೇಕು. ದೇಶದಲ್ಲಿ ಇಂತಹ ಕೊಲೆಗಾರರು ಎಸ್‍ಡಿಪಿಐ ಹಾಗೂ ಕರ್ನಾಟಕದಲ್ಲಿ ಐಸಿಸ್ ನಂತಹ ಉಗ್ರ ಸಂಘಟನೆ ನಿರ್ಮಾಣ ಮಾಡಬೇಕು ಎಂಬ ಕನಸು ಇದೆ. ಆದರೆ ಇಂತಹ ಸಂಘಟನೆಗಳು ಹತ್ತಿಕ್ಕಲು ನಾವು ಅಡ್ಡಗಾಲು ಆಗಿದ್ದೇವೆ ಎಂದರು. ಇದನ್ನೂ ಓದಿ: ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

    ನಮ್ಮ ಅಕ್ಕನಿಗೆ ಕಲ್ಲು ಬಿದ್ದ ವಿಚಾರ ಹೇಳಿದ್ದೆ. ಆದರೆ ಅಪ್ಪ, ಅಮ್ಮನಿಗೆ ಹೇಳಿರಲಿಲ್ಲ. ಕೊನೆ ಉಸಿರು ಇರೋವರೆಗೂ ನಾನು ಹೇಗೆ ಸತ್ತರು ರಾಷ್ಟ್ರಕ್ಕಾಗಿ ಸಾಯ್ತೀನಿ ಎಂದು ಮಾರ್ಮಿಕವಾಗಿ ಹೇಳಿದರು.

  • ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

    ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

    – ಸಿಸಿಬಿಯಿಂದ ಆರು ಮಂದಿ ಅರೆಸ್ಟ್

    ಬೆಂಗಳೂರು: ಮಂಗಳೂರು ಮಾದರಿಯಲ್ಲೇ ಬೆಂಗಳೂರಲ್ಲೂ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಸಂಸದ ತೇಜಸ್ವಿ ಸೂರ್ಯ, ಸೂಲಿಬೆಲೆ ಮುಗಿಸಲು ಡಿ. 22ರಂದು ಟೌನ್‍ಹಾಲ್ ಬಳಿ ಪ್ಲಾನ್ ನಡೆದಿತ್ತು. ಈ ಮೂಲಕ ಎಸ್‍ಡಿಪಿಐ ಜನಸಂದಣಿ ಮಧ್ಯೆಯೇ ರಕ್ತಪಾತಕ್ಕೆ ಮುಹೂರ್ತ ಫಿಕ್ಸ್ ಮಾಡಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ.

    CCB 7

    ಬಹಿರಂಗವಾಗಿದ್ದು ಹೇಗೆ?
    ದೇಶಾದ್ಯಂತ ಪೌರತ್ವ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಸಿಎಎ ಪರ ಜನಜಾಗೃತಿ ಹೊರಟಿದ್ದ ವರುಣ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಿಂಬದಿಯಿಂದ ಎರಡು ಬೈಕ್ ನಲ್ಲಿ ಬಂದಿದ್ದ ಆರೋಪಿಗಳು ರಾಡ್ ಹಾಗೂ ಲಾಂಗ್ ಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಸ್ಫೋಟಕ ಸತ್ಯ ಬೆಳಕಿಗೆ ಬಂದಿದೆ.

    CCB 5

    ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ಬಂಧಿತ ಎಸ್‍ಡಿ ಪಿಐ ಕಾರ್ಯಕರ್ತರು. ಆರೋಪಿಗಳ ವಿಚಾರಣೆಯ ವೇಳೆ ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇಲ್ಲ. ಆರೋಪಿಗಳಿಗೂ ವರುಣ್ ಗೂ ಸಂಬಂಧವೇ ಇಲ್ಲ. ಸಿಎಎ ಪರವಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಆತನ ಹತ್ಯೆಗೆ ಮುಂದಾಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.

    ಜನಜಾಗೃತಿ ರ‍್ಯಾಲಿ ವೇಳೆ ಕಲ್ಲು ಕೂಡ ತೂರಲಾಗಿತ್ತು. ಕಲ್ಲುಗಳನ್ನು ತೂರಿ ಗುಂಪು ಚದುರಿಸುವ ಪ್ಲಾನ್ ಮಾಡಲಾಗಿತ್ತು. ಜನ ಚದುರುತ್ತಿದ್ದಂತೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಆಲೋಚಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ.

    CCB 1

    ಸಿಎಎ ಪರ ಸಭೆ ನಡೆದ ಸ್ಥಳದಲ್ಲಿ ಆರೋಪಿಗಳು ಏಳೆಂಟು ಕಲ್ಲುಗಳನ್ನು ಎಸೆದಿದ್ದರು. ಕಲ್ಲು ಬಿದ್ದಾಗ ಜನ ಚದುರುತ್ತಾರೆ ಆಗ ಒಬ್ಬಂಟಿಯಾಗುವ ಮುಖಂಡನನ್ನ ಕೊಲೆ ಮಾಡುವ ಪ್ಲಾನ್ ಮಾಡಿದ್ದರು. ಆರೋಪಿಗಳು ಎಸೆದ ಕಲ್ಲು ಬೇರೆ ಬೇರೆ ಕಡೆ ಬಿದ್ದಿದ್ದವು. ನಂತರ ಕೇಸರಿ ಬಟ್ಟೆ ಧರಿಸಿದ್ದ ಆರೋಪಿಗಳು ವರುಣ್ ನನ್ನು ಹಿಂಬಾಲಿಸಿದ್ದರು. ತಮ್ಮ ಇರುವಿಕೆ ಮರೆಮಾಚಲು ಮೊಬೈಲ್ ಆನ್ ಮಾಡಿ ಆರೋಪಿಗಳು ಮನೆಯಲ್ಲಿಯೇ ಬಿಟ್ಟು ಬಂದಿದ್ದರು. ಮುಖ ಚಹರೆ ಮರೆ ಮಾಚಲು ಹೆಲ್ಮೆಟ್ ಧರಿಸಿದ್ದರು. ಕೃತ್ಯಕ್ಕೆ ಬಳಸಿದ್ದ ವಾಹನಗಳ ನಂಬರ್ ಗಳನ್ನ ಕಪ್ಪು ಮಸಿ ಹಚ್ಚಿದ್ದರು. ಕೃತ್ಯದ ಸಮಯದಲ್ಲಿ ಎರಡರಿಂದ ಮೂರು ಟಿ ಶರ್ಟ್ ಧರಿಸಿದ್ದರು. ಕೃತ್ಯದ ನಂತರ ಎರಡು ಟಿ ಶರ್ಟ್ ಬಿಚ್ಚಿಹಾಕಿ ರಸ್ತೆ ಮಧ್ಯೆ ಪೆಟ್ರೋಲ್ ಹಾಕಿ ಸುಟ್ಟಿದ್ದರು. ಮಚ್ಚುಗಳನ್ನ ನೈಸ್ ರಸ್ತೆಯ ಅಂಚೆಪಾಳ್ಯ ಕೆರೆಗೆ ಬಿಸಾಕಿದ್ದರು. ಹೆಲ್ಮೆಟ್ ಗಳನ್ನ ರಾಮಮೂರ್ತಿನಗರದ ಹೊಂಡಕ್ಕೆ ಬಿಸಾಕಿದ್ದರು.

    CCB

    ಆರೋಪಿಗಳು ಎಸ್‍ಡಿಪಿಐ ನಿಂದ ತಿಂಗಳಿಗೆ ಹತ್ತು ಸಾವಿರ ಹಣ ಪಡೆಯುತ್ತಿದ್ದರು. ಅಲ್ಲದೆ ಸಮಾಜದಲ್ಲಿ ಸ್ವಾಸ್ಥ್ಯ ಹಾಳುಮಾಡುವಂತೆ ಸೂಚನೆ ಪಡೆದಿದ್ದರು ಎನ್ನುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.