Tag: ತನ್ವೀರ್ ಸೇಠ್

  • ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

    ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಆಯ್ತು, ಈಗ ಖಾಸಗಿ ಶಾಲೆಗಳಿಗೂ ಅಂಕುಶ

    ಬೆಂಗಳೂರು: ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮುಂದಿನ ವರ್ಷದಿಂದ ಜಾರಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

    ಪಿಯುಸಿ ಬೋರ್ಡ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಈಗಾಗಲೇ ಕರಡು ಮಸೂದೆ ಸಿದ್ಧವಾಗಿದೆ. ಅಧಿವೇಶನದಲ್ಲಿ ಮಂಡಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಶುಲ್ಕ ನೀತಿ ಜಾರಿಗೆ ತರುತ್ತೇವೆ ಎಂದು ತಿಳಿಸಿದರು.

    ಒಂದು ವೇಳೆ ಶುಲ್ಕ ನಿಗದಿ ಮಾಡಿದ ಮೇಲೆ ಹೆಚ್ಚುವರಿ ಶುಲ್ಕ ಪಡೆದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಾತ್ರವಲ್ಲ ಹೆಚ್ಚುವರಿ ಶುಲ್ಕ ಮರು ಪಾವತಿ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    tanveer sait 1

     

    ಪರೀಕ್ಷಾ ಸಿದ್ಧತೆ: ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ತಯಾರಿ ನಡೆಸುತ್ತಿದ್ದು, ಮಾರ್ಚ್ 1-13 ದ್ವಿತಿಯ ಪಿಯುಸಿ ಹಾಗೂ ಮಾರ್ಚ್ 23 ರಿಂದ ಏಪ್ರಿಲ್ 6 ವರೆಗೆ ಪರೀಕ್ಷೆ ನಡೆಯಲಿದೆ. ಚುನಾವಣಾ ಆಯೋಗಕ್ಕೂ ಪರೀಕ್ಷಾ ವೇಳಾಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಕಳೆದ ವರ್ಷದಂತೆ ಈ ವರ್ಷವೂ ಕರ್ನಾಟಕ ಸೆಕ್ಯೂರ್ ಎಕ್ಸಾಂ ಸಿಸ್ಟಮ್ ಅಳವಡಿಸಲಾಗುತ್ತೆ ಎಂದು ಹೇಳಿದರು.

    ಒಂದೇ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣವಾಗುತ್ತದೆ ಎನ್ನುವ ಗೊಂದಲಕ್ಕೆ ತೆರೆ ಎಳೆದ ಸಚಿವರು, ಹಿಂದಿನ ವರ್ಷದಂತೆ ಎರಡೂ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣ ಮಾಡುತ್ತೇವೆ. ಪರೀಕ್ಷಾ ಅಕ್ರಮ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

    ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಪಿಯುಸಿ ಬೋರ್ಡ್ ಸಿಬ್ಬಂದಿಯನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ಹೋಬಳಿಗೆ ಒಂದು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸಿ ಖಾಸಗಿ ಶಾಲೆಗಳ ಸಮಾನ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದರು.

    school children 2

    ಶಿಕ್ಷಕರ ಬಡ್ತಿ: ಇದೇ ಮೊದಲ ಬಾರಿಗೆ ಬಡ್ತಿ ಮೀಸಲಾತಿ ನಿಯಮದಲ್ಲಿ ಈ ಬಾರಿ 11 ಸಾವಿರ ಶಿಕ್ಷಕರಿಗೆ ಬಡ್ತಿ ನೀಡುತ್ತಿದ್ದೇವೆ. 6-8 ತರಗತಿ ಶಿಕ್ಷಕರಿಗೆ ಹೈಸ್ಕೂಲ್ ಶಿಕ್ಷಕರಾಗಿ ಬಡ್ತಿ ನೀಡಲಾಗುತ್ತೆ. ಶಿಕ್ಷಕರಿಗೆ ಪರೀಕ್ಷೆ ನಡೆಸುವ ಮೂಲಕ ಬಡ್ತಿಗೆ ಆಯ್ಕೆ ಮಾಡಲಾಗುತ್ತದೆ. ಹೈಸ್ಕೂಲ್ ಶಿಕ್ಷಕರನ್ನು ಪಿಯುಸಿ ಉಪನ್ಯಾಸಕರಾಗಿ ಹಾಗೂ ಮುಖ್ಯೋಪಾಧ್ಯಾಯರಾಗಿ ಬಡ್ತಿ ನೀಡುವ ನಿರ್ಧಾರ ತೆಗೆದುಕೊಂಡಿವೆ ಎಂದರು.

    ಪ್ರಸ್ತುತ ನಡೆಯುತ್ತಿರುವ ಶಿಕ್ಷಕರ ನೇಮಕಾತಿ ಫೆಬ್ರವರಿಯಲ್ಲಿ ಮುಕ್ತಾಯವಾಗಲಿದ್ದು, ಜನವರಿಯಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತೆ ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ಮುಂದಿನ ಚುನಾವಣೆ ಕ್ಷೇತ್ರ ಕುರಿತು ಸ್ಪಷ್ಟಪಡಿಸಿದ ಅವರು, ಪ್ರಸ್ತುತ ನನ್ನ ಸ್ವಕ್ಷೇತ್ರ ಮೈಸೂರು ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಖಚಿತ ಪಡಿಸಿದರು.

    school children 1

    ಕಾಯ್ದೆ ಹಿನ್ನೆಲೆ: 1998-99 ಶುಲ್ಕ ನಿಗಧಿ ಮಾಡಲಾಗಿತ್ತು. ಇದರ ಅನ್ವಯ ಖಾಸಗಿ ಶಾಲೆಯೊಂದರ ಒಟ್ಟಾರೆ ಸಿಬ್ಬಂದಿಯ ಸಂಬಳ ಹಾಗೂ 30% ಹೆಚ್ಚುವರಿಯನ್ನು ಒಟ್ಟು ಮಾಡಿ ವಿದ್ಯಾರ್ಥಿಗಳ ಅನುಗುಣಕ್ಕೆ ಭಾಗಿಸಿದ ಮೊತ್ತವನ್ನು ಶುಲ್ಕವಾಗಿ ಪಡೆಯುವ ನಿಯಮ ರೂಪಿಸಲಾಗಿತ್ತು. ಇದರ ಅನ್ವಯ ಹೆಚ್ಚುವರಿ ಪಡೆದ 30% ಶುಲ್ಕದಲ್ಲಿ ಶಾಲೆಯ ಇನ್ನಿತರ ಖರ್ಚುಗಳು ಕರೆಂಟ್ ಬಿಲ್, ಬಾಡಿಗೆ ಇತ್ಯಾದಿಗಳನ್ನು ಮಾಡಬೇಕಿತ್ತು.

    ಸುಮಾರು 18- 19 ವರ್ಷಗಳಿಂದ ಶುಲ್ಕ ಪರಿಷ್ಕರಣೆ ಆಗಿರಲಿಲ್ಲ. ಆದರೆ ಹಿಂದಿನ ಶುಲ್ಕ ನಿಗಧಿಯನ್ನ ಗಾಳಿಗೆ ತೂರಿ ಮನಸೋ ಇಚ್ಛೆ ಖಾಸಗಿ ಶಾಲೆಗಳು ಶುಲ್ಕವನ್ನು ತೆಗೆದುಕೊಳ್ಳುತ್ತಿದ್ದವು. ಲಕ್ಷ ಲಕ್ಷ ಹಣವನ್ನು ಪೋಷಕರಿಂದ ಪಡೆಯುತ್ತಿದ್ದರು.

    school children 4

    ಖಾಸಗಿ ಶಾಲೆಗಳ ವಿರೋಧ: ಕಾಯ್ದೆಗೆ ಕೆಲವು ಮಧ್ಯಮ ವರ್ಗದ ಶಾಲೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಶಿಕ್ಷಣ ಇಲಾಖೆ 2015ರಲ್ಲಿ ಶುಲ್ಕ ಪರಿಷ್ಕರಣೆ ಸಂಬಂಧ ಕರಡು ರಚಿಸಿತ್ತು. ಇದರಲ್ಲಿ ಶಿಕ್ಷಕರ ಸಂಬಳ ಒಟ್ಟು ಮೊತ್ತ ಮತ್ತು ಗ್ರಾಮೀಣ ಪ್ರದೇಶಗಳಿಗೆ 50%, ಅರೆ ನಗರ ಪ್ರದೇಶಗಳಿಗೆ 60%, ನಗರ ಪಾಲಿಕೆಗಳಿಗೆ 75% ಹಾಗೂ ಬಿಬಿಎಂಪಿ ವಲಯಗಳಿಗೆ 100% ಶುಲ್ಕ ಹೆಚ್ಚಳ ಪಡೆಯುವ ಪ್ರಸ್ತಾಪ ಮಾಡಲಾಗಿತ್ತು. ಅಲ್ಲದೆ ಪ್ರತೀ ವರ್ಷ 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಅನೇಕ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಖಾಸಗಿ ಶಾಲೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಖಾಸಗಿ ಶಾಲೆಗಳು ಶುಲ್ಕ ವರ್ಗೀಕರಣ ಸರಿ ಇಲ್ಲ ಎಂದು ಆಕ್ಷೇಪಣೆ ಸಲ್ಲಿಸಿದ ಪರಿಣಾಮವಾಗಿ ಕಳೆದ ಎರಡು ವರ್ಷಗಳಿಂದ ಕರಡು ಮಸೂದೆ ಮಂಡನೆಯಾಗಿರಲಿಲ್ಲ.

    ಏನು ಲಾಭ?
    ಕಾಯ್ದೆ ಜಾರಿಯಾದರೆ ಖಾಸಗಿ ಶಾಲೆಗಳ ಧನದಾಹಿ ತನಕ್ಕೆ ಬ್ರೇಕ್ ಬೀಳಲಿದೆ. ಶಾಲೆಗಳು ಮನಸ್ಸಿಗೆ ಬಂದಂತೆ ಶುಲ್ಕ ಪಡೆಯಲು ಸಾಧ್ಯವಾಗುವುದಿಲ್ಲ. ಲಕ್ಷ ಲಕ್ಷ ರೂ. ಹಣ ಶುಲ್ಕ ಪಡಿಯುವ ಶಾಲೆಗಳಿಗೆ ಬ್ರೇಕ್ ಬೀಳುತ್ತದೆ. ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ತಕ್ಕಂತೆ ಶುಲ್ಕ ಪರಿಷ್ಕರಣೆ ಮಾಡಲಾಗುತ್ತೆ. ಏಕರೂಪ ಶುಲ್ಕ ಮಾಡಲು ಸಾಧ್ಯವಾಗದೇ ಇದ್ದರೂ ಮನ ಬಂದಂತೆ ಶುಲ್ಕ ಪಡಿಯುವ ಶಾಲೆಗಳಿಗೆ ಬ್ರೇಕ್ ಬೀಳುತ್ತದೆ.

    school children 3

    school children 5

     

  • ಆರ್ ಟಿಒ ನಿಯಮ ಉಲ್ಲಂಘಿಸಿದ ಸಚಿವ ತನ್ವೀರ್ ಸೇಠ್!

    ಆರ್ ಟಿಒ ನಿಯಮ ಉಲ್ಲಂಘಿಸಿದ ಸಚಿವ ತನ್ವೀರ್ ಸೇಠ್!

    ರಾಯಚೂರು: ಸರ್ಕಾರಿ ನಿಯಮಗಳನ್ನ ಜಾರಿಯಲ್ಲಿಡಬೇಕಾದ ಸರ್ಕಾರಿ ಅಧಿಕಾರಿಗಳು, ಮಂತ್ರಿಗಳೇ ನಿಯಮಗಳನ್ನ ಉಲ್ಲಂಘನೆ ಮಾಡಿದ್ರೆ ಸಾರ್ವಜನಿಕರು ಹೇಗೆ ತಾನೆ ಪಾಲನೆ ಮಾಡುತ್ತಾರೆ? ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಆರ್ ಟಿ ಒ ನಿಯಮಗಳನ್ನ ಉಲ್ಲಂಘಿಸಿದ್ದಾರೆ.

    ಸಚಿವ ತನ್ವೀರ್ ಸೇಠ್ ತಮ್ಮ ಕಾರಿನ ನಂಬರ್ ಪ್ಲೇಟ್ ಮೇಲೆ ಫ್ಯಾನ್ಸಿ ಸಂಖ್ಯೆಯನ್ನು ಬರೆಸಿದ್ದಾರೆ. ಅವರ ಸರ್ಕಾರಿ ಕಾರಿನ ಸಂಖ್ಯೆ ಕೆ.ಎ52 ಜಿಎ0009 ಇದ್ದು, ಸೊನ್ನೆಗಳನ್ನ ಚಿಕ್ಕದಾಗಿ ಬರೆದು 9 ಸಂಖ್ಯೆಯನ್ನ ದೊಡ್ಡದಾಗಿ ಬರೆಸಿದ್ದಾರೆ.

    TANVEER SAIT 2

    ಆರ್ ಟಿ ಒ ನಿಯಮದ ಪ್ರಕಾರ ಎಲ್ಲಾ ಅಂಕಿಗಳು ಸಮಾನ ಗಾತ್ರದಲ್ಲಿ ಒಂದೇ ಆಕಾರದಲ್ಲಿ ಇರಬೇಕು. ಕನ್ನಡದಲ್ಲಿ ಬರೆದ ಸಂಖ್ಯೆಗಳು ಸರಿಯಾಗಿದ್ದು, ಇಂಗ್ಲೀಷ್ ನಲ್ಲಿ ಬರೆದ ಸಂಖ್ಯೆಗಳಲ್ಲಿ ವ್ಯತ್ಯಾಸ ಮಾಡಿದ್ದಾರೆ. ಸಾರ್ವಜನಿಕರು ಈ ರೀತಿ ನಂಬರ್ ಪ್ಲೇಟ್ ಬರೆಸಿದರೆ ಆರ್ ಟಿ ಒ ಹಾಗೂ ಸಂಚಾರಿ ಪೊಲೀಸರು ಡಿಫೆಕ್ಟೀವ್ ನೇಮ್ ಪ್ಲೇಟ್ ಅಂತ 100 ರೂಪಾಯಿ ದಂಡ ಹಾಕ್ತಾರೆ. ಆದ್ರೆ ಇದೀಗ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಏನ್ ಮಾಡ್ತಾರೋ ನೋಡಬೇಕಿದೆ.

    TANVEER SAIT 5

    TANVEER SAIT 4

    TANVEER SAIT 3

    TANVEER SAIT 1

    23559939 1562443917154643 211613018382000796 n

    24058935 1574824855916549 8542569489485692722 n

  • ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮ

    ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮ

    ಬೆಂಗಳೂರು: ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ 62ನೇ ಅದ್ಧೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಎಂ ಅವರು ರಾಷ್ಟ್ರಧ್ವಜ ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ನಾಡ ಧ್ವಜಾರೋಹಣ ಹಾರಿಸಿದರು.

    ಸಿಎಂ ಅವರು ಬಿಳಿ ಬಣ್ಣದ ಪಾರಿವಾಳ, ರಾಜ್ಯೋತ್ಸವದ ಬಲೂನ್ ಹಾರಿ ಬಿಟ್ಟು ಸಮಾರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ಭಾಗಿಯಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಹಳದಿ, ಕೆಂಪು ಬಲೂನ್‍ಗಳನ್ನು ಹಾರಿಸಿದರು. ವಿವಿಧ ಶಾಲಾ ತಂಡಗಳು ಪಥ ಸಂಚಲನ ಮಾಡಿ ಸಿದ್ದರಾಮಯ್ಯ ಅವರಿಗೆ ಗೌರವ ವಂದನೆ ಸಲ್ಲಿಸಿದರು. ಇದೆ ವೇಳೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    FESTIVAL 2

    ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ “ಕನ್ನಡ ಸೌರಭ” ಸುಲಭ ಕನ್ನಡ ಕಲಿಗೆಗಾಗಿ ಇ ಕಲಿಕೆ ವೆಬ್ ಸೈಟ್ ಅನ್ನು ಸಿಎಂ ಅವರು ಬಿಡುಗಡೆ ಮಾಡಿದರು. ನಂತರ ಅರಬಿಂದೋ ಮೆಮೋರಿಯಲ್ ಶಾಲೆಯ 100 ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತಗೀತೆ ಗಾಯನ ನಡೆಯಿತು.

    ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿಎಂ, ವಿಶಾಲ ಕರ್ನಾಟಕದ ದಿನವನ್ನು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಣೆ ಮಾಡುತ್ತೇವೆ. ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಲಿಪಿ ಹಾಗೂ ದೀರ್ಘ ಇತಿಹಾಸ ಇದೆ. ಕನ್ನಡಿಗರು ಉದಾರಿಗಳು, ಬೇರೆ ಜನರನ್ನು ಪ್ರೀತಿಸುವ ಮನಸ್ಸು ಇರೋರು. ಭಾಷೆಯ ಬಗ್ಗೆ ಉದಾರವಾಗಿರಬೇಕಾಗಿಲ್ಲ, ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.

    ಕಳೆದ 61 ವರ್ಷಗಳಲ್ಲಿ ನಾಡಿನ ಅಭಿವೃದ್ದಿ ಸಾಕಷ್ಟು ಆಗಿದೆ. ಆದರೆ ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುವಲ್ಲಿ ಇನ್ನೂ ಯಶಸ್ಸು ಸಾಧಿಸಿಲ್ಲ. ಕರ್ನಾಟಕದಲ್ಲಿ ವಾಸಿಸುವವರೆಲ್ಲ ಕನ್ನಡಿಗರೇ, ಇಲ್ಲಿರುವವರೆಲ್ಲಾ ಕನ್ನಡ ಭಾಷೆ ಕಲಿಯಲೇಬೇಕು. ನಾನು ಮೊದಲು ಕನ್ನಡಿಗ ನಂತರ ಭಾರತೀಯ ಅನ್ನೋ ಭಾವನೆ ಬರಬೇಕು. ಯಾವ ಭಾಷೆಯಾದರೂ ಕಲಿಯಿರಿ. ಕನ್ನಡ ಕಲಿಯದೇ ಇರೋದು ಕನ್ನಡಕ್ಕೆ ಮಾಡಿದ ಅವಮಾನ ಆಗುತ್ತೆ. ಕನ್ನಡೇತರರಿಗೆ ಕನ್ನಡ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕಾದುದ್ದು, ಕನ್ನಡಿಗರ ಕರ್ತವ್ಯ ಎಂದರು.

    FESTIVAL 4

    ಇತ್ತೀಚೆಗೆ ಪೋಷಕರಲ್ಲಿ ಆಂಗ್ಲ ಭಾಷೆಯ ವ್ಯಾಮೋಹ ಹೆಚ್ಚಾಗಿದೆ. ಕನ್ನಡ ಭಾಷೆಯನ್ನು ಕಲಿಯೋದ್ರಿಂದ ಜ್ಞಾನ ಭಂಡಾರ ಜಾರಿ ಆಗುತ್ತೆ. ಪ್ರಾದೇಶಿಕ ಭಾಷೆ ಉಳಿವಿಗಾಗಿ ಪಿಎಂ ಸೇರಿದಂತೆ ಎಲ್ಲಾ ರಾಜ್ಯದ ಸಿಎಂಗಳಿಗೆ ಆಯಾ ರಾಜ್ಯಗಳ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡುವ ತಿದ್ದುಪಡಿ ಬರುವಂತೆ ಪತ್ರ ಬರೆದಿದ್ದೇವೆ. ಆದರೆ ಪ್ರಧಾನಿಗಳು ಯಾವುದಕ್ಕೂ ಪ್ರತಿಕ್ರಿಯಿಸಿಲ್ಲ ಎಂದು ಹೇಳಿದರು.

    ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ಕನ್ನಡ ನಾಡು ನುಡಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆ ಕಡ್ಡಾಯವಾಗಿ ಶಾಲೆಗಳಲ್ಲಿ ಕಲಿಯಬೇಕು ಅನ್ನೋ ಆದೇಶವನ್ನು ಸರ್ಕಾರ ಹೊರಡಿಸಿದೆ. ಗುರು ಚೇತನದ ಮೂಲಕ ಶಿಕ್ಷಕರಿಗೆ ತರಬೇತಿ ನೀಡುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ. ವಿಶ್ವಾಸ ಕಿರಣ ಕಾರ್ಯಕ್ರಮದ ಮೂಲಕ ರಜಾ ದಿನಗಳಲ್ಲಿ ಮಕ್ಕಳಿಗೆ ತರಬೇತಿ ನೀಡುವ ಕೆಲಸ ಮಾಡಿದ್ದೇವೆ. ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡಿದ್ದಾರೆ. ಜನವರಿ ಫೆಬ್ರವರಿಯಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿ ಮುಕ್ತಾಯವಾಗಲಿದೆ. ಅಷ್ಟೇ ಅಲ್ಲದೇ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಿತಿ ಶಿಫಾರಸ್ಸು ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

    FESTIVAL 6

    ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರು ನಾಗರೀಕರು ಬಂದಿರಲಿಲ್ಲ. ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಗೆ ಆಹ್ವಾನವಿದ್ದರೂ ಗೈರು ಹಾಜರಾಗಿದ್ದರು. ಇದರಿಂದ ಬಹುತೇಕ ಕ್ರೀಡಾಂಗಣ ಖಾಲಿ ಖಾಲಿ ಇತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿರುವ ಶಾಲಾ ಮಕ್ಕಳು ಮತ್ತು ಶಾಲಾ ಶಿಕ್ಷಕರು ಮಾತ್ರ ಪಾಲ್ಗೊಂಡಿದ್ದರು.

    ಕಾರ್ಯಕ್ರಮದಲ್ಲಿ ಇಂದು ನಿಧನರಾದ ಶಾಸಕ ಚಿಕ್ಕಮಾದು ಅವರಿಗೆ ಮಕ್ಕಳು ಮತ್ತು ಅಧಿಕಾರಿಗಳು ಎಲ್ಲರು ಎದ್ದು ನಿಂತು ಒಂದು ನಿಮಿಷ ಶ್ರದ್ಧಾಂಜಲಿ ಸಲ್ಲಿಸಿದರು.

    DNhfbRYUQAALdvL 1

    FESTIVAL 10 1

    FESTIVAL 11 1

    FESTIVAL 12 1

    DNhfbRYUEAAp2Iq 2

    FESTIVAL 13 1

    DNhfkjLUQAAPRY0

    FESTIVAL 14 1     FESTIVAL 30

  • ಬಿಎಸ್‍ವೈ ಎಲ್ಲಿಂದ ಸ್ಪರ್ಧಿಸಿದರೂ ಕಾಂಗ್ರೆಸ್‍ಗೆ ಏನು ವ್ಯತ್ಯಾಸವಾಗಲ್ಲ: ತನ್ವೀರ್ ಸೇಠ್

    ಬಿಎಸ್‍ವೈ ಎಲ್ಲಿಂದ ಸ್ಪರ್ಧಿಸಿದರೂ ಕಾಂಗ್ರೆಸ್‍ಗೆ ಏನು ವ್ಯತ್ಯಾಸವಾಗಲ್ಲ: ತನ್ವೀರ್ ಸೇಠ್

    ರಾಯಚೂರು: ಮುಂಬರುವ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಿಂದ ಸ್ಪರ್ಧಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ಏನು ವ್ಯತ್ಯಾಸವಾಗಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

    ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನ ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಡಿಎಆರ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಪರೇಡ್ ನಡೆಸಿದರು.

    ಈ ವೇಳೆ ಮಾತನಾಡಿದ ಅವರು, ಯಾರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು. ಯಾರೇ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸಿದರು ನಮಗೆ ಭಯವಿಲ್ಲ ಎಂದು ಹೇಳಿದರು.

    5 ಸಾವಿರ ಶಾಲೆಗಳು ಆರ್‍ಟಿಇ ಅನುದಾನದಿಂದಲೇ ನಡೆಯುತ್ತಿವೆ. ಆರ್‍ಟಿಇನಲ್ಲಿ ಕೂಡಲೇ ತಿದ್ದುಪಡಿ ತರಬೇಕಿದೆ. ಹೈ.ಕ. ಭಾಗದಲ್ಲಿ ಕಲಬುರಗಿಗೆ ಹೆಚ್ಚು ಆದ್ಯತೆ ಸಿಗುತ್ತಿದೆ. ಜನರಿಗೆ ಎಲ್ಲಿ ಸೌಲಭ್ಯಗಳ ಅವಶ್ಯಕತೆಯಿದೆ ಅಲ್ಲಿ ಸೌಲಭ್ಯ ಕೊಡಬೇಕು. ಏಮ್ಸ್ ವಿಚಾರದಲ್ಲಿ ರಾಯಚೂರು ಜಿಲ್ಲೆಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಶಿಕ್ಷಕರ ಮುಂದೆ ಸಂಧಿ ಪಾಠ – ವೇದಿಕೆಯಲ್ಲೇ ಶರವಣರ ಕಾಲೆಳೆದ ಸಿಎಂ

    ಶಿಕ್ಷಕರ ಮುಂದೆ ಸಂಧಿ ಪಾಠ – ವೇದಿಕೆಯಲ್ಲೇ ಶರವಣರ ಕಾಲೆಳೆದ ಸಿಎಂ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇವತ್ತು ಮತ್ತೊಮ್ಮೆ ಕನ್ನಡ ವ್ಯಾಕರಣ ಟೀಚರ್ ಆಗಿ, ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕರಿಗೆ ಸಂಧಿ ಬಗ್ಗೆ ಪಾಠ ಮಾಡಿದ್ದಾರೆ.

    ಶಿಕ್ಷಕರ ದಿನಾಚರಣೆಯ ಅಂಗವಾಗಿ ವಸಂತನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರ ಕುರಿತು ಮಾತನಾಡಿ, ನನ್ನ ಭಾಷಣದ ವೇಳೆ ಕೆಲವರು ಕನ್ನಡದ ಬಗ್ಗೆ ಭಾಷಣ ಮಾಡ್ತಾರೆ. ಮೊನ್ನೆ ಯಾರೋ ವಿಧಾನಸೌಧದಲ್ಲಿ ಕನ್ನಡ ಶಾಲೆ ಉಳಿಸಬೇಕು ಅಂತ ಮಾತಾಡುತ್ತಿದ್ದರು. ಅದಕ್ಕೆ ನಾನು ಸಂಧಿ ಅಂದ್ರೆ ಗೊತ್ತ ಅಂತ ಕೇಳಿದೆ ಅದಕ್ಕೆ ಆ ವ್ಯಕ್ತಿ ಇಲ್ಲ ಹೇಳಿದ್ದರು.

    ಈ ವೇಳೆ ವೇದಿಕೆ ಮೇಲೆ ಸಚಿವ ತನ್ವೀರ್ ಸೇಠ್ ಹಾಗೂ ಎಂಎಲ್‍ಸಿ ಶರವಣಗೆ ಸಂಧಿ ಪಾಠದ ವಿಚಾರ ಹೇಳುತ್ತಾ ಕಿಚಾಯಿಸಿದ ಸಿಎಂ, ನಿನಗೆ ಗೊತ್ತೇನಯ್ಯ ಸಂಧಿ ಅಂದ್ರೆ ಏನು ಅಂತ. ಅದಕ್ಕೆ ನಗುತ್ತಲೆ ಶರವಣ ಸುಮ್ಮನಾದ್ರು. ಬಳಿಕ ಸಿಎಂ ಅವರೇ ನಿನಗೆ ಗೊತ್ತಿಲ್ಲ ಬಿಡು ಅಂತ ಕಾಲೆಳೆದರು. ಶರವಣರನ್ನ ಮತ್ತೆ ಬಿಡದ ಸಿಎಂ ಎಷ್ಟು ಓದುದ್ದೀಯಾ ಅಂತ ಮರು ಪ್ರಶ್ನೆ ಮಾಡಿದ್ರು. ಅದಕ್ಕೆ ಶರವಣ ನಗುತ್ತಲೇ 10 ಕ್ಲಾಸ್ ಅಂದ್ರು.

    ಸಚಿವ ತನ್ವೀರ್ ಸೇಠ್ ಅವರಿಗೆ ಸಂಧಿ ಅಂದ್ರೆ ಗೊತ್ತಿಲ್ಲ. ಅವರು ಕಾನ್ವೆಂಟ್ ಓದಿದ್ದು ಅದಕ್ಕೆ ಅವರಿಗೂ ಗೊತ್ತಿಲ್ಲ ಅಂತ ಹೇಳಿದರು. ಸಿಎಂ ಮಾತು ಕೇಳಿ ಇಡೀ ಸಭೆ ನಗೆಗಡಲಲ್ಲಿ ತೇಲಿತು. ಬಳಿಕ ಸಿದ್ದರಾಮಯ್ಯ ಅವರೇ ಸಂಧಿ ಅಂದ್ರೆ ಏನು ಅನ್ನೋ ಪಾಠವನ್ನು ಶಿಕ್ಷಕರಿಗೆ ಹೇಳಿಕೊಟ್ರು.

    CM SIDDU

  • ಅಮಿತ್ ಶಾ, ಕಲ್ಲಡ್ಕ ಭಟ್ ವಿರುದ್ಧ ಸಚಿವ ತನ್ವೀರ್ ಸೇಠ್ ಹೀಗಂದ್ರು!

    ಅಮಿತ್ ಶಾ, ಕಲ್ಲಡ್ಕ ಭಟ್ ವಿರುದ್ಧ ಸಚಿವ ತನ್ವೀರ್ ಸೇಠ್ ಹೀಗಂದ್ರು!

    ರಾಯಚೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಾವ ಭ್ರಮೆಯಲ್ಲಿದ್ದಾರೋ ಗೊತ್ತಿಲ್ಲ, ಕನ್ನಡಿ ನೋಡಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ ಅಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತನ್ವೀರ್ ಸೇಠ್, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯ ಭ್ರಷ್ಟಾಚಾರಗಳನ್ನ ನೋಡಿಯೇ ಅಮಿತ್ ಶಾ ಮಾತನಾಡಿದ್ದಾರೆ ಎಂದರು.

    ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ್ ಶಿಕ್ಷಣ ಸಂಸ್ಥೆಗೆ ಶಿಕ್ಷಣ ಇಲಾಖೆ ಅನುದಾನ ನೀಡುತ್ತಿಲ್ಲ. ಸಂಸ್ಥೆಯ ಶಾಲೆಗಳು ಅನುದಾನಿತ ಶಾಲೆಗಳಲ್ಲ ಖಾಸಗಿ ಶಾಲೆಗಳು. ಮುಜರಾಯಿ ಇಲಾಖೆ ಬಿಸಿಯೂಟ ನೀಡುತ್ತಿತ್ತು ಈಗ ನಿಲ್ಲಿಸಿದೆ. ಶಿಕ್ಷಣ ಸಂಸ್ಥೆ ಶೈಕ್ಷಣಿಕ ಕೆಲಸಕ್ಕೆ ಮಾತ್ರ ಸೀಮಿತವಾಗಿರಬೇಕು. ಮಕ್ಕಳ ಮೂಲಕ ಹಿರಿತನದ ಮಾತು ಆಡಿಸುವುದು ಸರಿಯಲ್ಲ ಅಂತ ಅಸಮಧಾನ ವ್ಯಕ್ತಪಡಿಸಿದರು.

    ಆ ಸಂಸ್ಥೆಯ ಶಾಲೆಗೆ ಬಿಸಿಯೂಟ ಒದಗಿಸುವುದು ನಮಗೆ ಹೊರೆಯಲ್ಲ. ಅನುದಾನಕ್ಕೆ ಒಳಪಡಿಸಿಕೊಳ್ಳಲು ಮನವಿ ಮಾಡಲಿ. ಬಳಿಕ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಅಂತ ಸಚಿವರು ಹೇಳಿದ್ದಾರೆ.

    vlcsnap 2017 08 15 14h19m35s37 e1502787034811

  • ಚೀನಾ ನ್ಯೂ ಇಯರ್ ಮಾಡಲು ಮುಂದಾಗಿದ್ದು ತಪ್ಪಲ್ಲ- ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಸಚಿವ ತನ್ವೀರ್ ಸೇಠ್ ಬ್ಯಾಟಿಂಗ್

    ಚೀನಾ ನ್ಯೂ ಇಯರ್ ಮಾಡಲು ಮುಂದಾಗಿದ್ದು ತಪ್ಪಲ್ಲ- ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಸಚಿವ ತನ್ವೀರ್ ಸೇಠ್ ಬ್ಯಾಟಿಂಗ್

    ಬೆಂಗಳೂರು: ಚೀನಾ ನ್ಯೂ ಇಯರ್ ಆಚರಣೆಗೆ ಮುಂದಾಗಿದ್ದು ತಪ್ಪಲ್ಲ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳುವ ಮೂಲಕ ನಗರದ ಡೆಲ್ಲಿ ಪಬ್ಲಿಕ್ ಸ್ಕೂಲ್ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಚೀನಾ ದೇಶದ ನ್ಯೂ ಇಯರ್ ಆಚರಣೆ ಮಾಡುವುದು ತಪ್ಪಲ್ಲ. ಅದು ದೇಶ ವಿರೋಧಿ ನಡೆ ಅಲ್ಲ. ದೇಶಗಳು ಯಾವ ರೀತಿ ನ್ಯೂ ಇಯರ್ ಆಚರಿಸುತ್ತವೆ ಅನ್ನೋದು ತೋರಿಸೊ ಉದ್ದೇಶ ಅಷ್ಟೆ ಅಂತ ಅವರು ಹೇಳಿಕೆ ನೀಡಿದ್ದರು.

    ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ನಿಡಲು ಸಚಿವರು ಹಿಂದೇಟು ಹಾಕುತ್ತಿದ್ದು, ಇದರಲ್ಲಿ ಶಾಲೆಯದ್ದು ಏನೂ ತಪ್ಪಿಲ್ಲ ಅನ್ನೊ ಶಾಲೆಯ ಹೇಳಿಕೆಯನ್ನ ಪ್ರತಿಕ್ರಿಯೆ ರೂಪದಲ್ಲಿ ಕಳುಹಿಸಿದ್ದಾರೆ.

    ಶುಕ್ರವಾರ ಚೀನಾ ನ್ಯೂ ಇಯರ್ ಸೆಲೆಬ್ರೇಷನ್‍ಗಾಗಿ ಮಕ್ಕಳಿಗೆ ಚೀನಾ ಡ್ರೆಸ್ ಹಾಕಿಕೊಂಡು ಬರಬೇಕು. ಅಷ್ಟೇ ಅಲ್ಲದೇ ಊಟಕ್ಕೆ ನೂಡಲ್ಸ್, ಫ್ರೈಡ್ ರೈಸ್, ಮಂಚೂರಿಯಂತಹ ಚೈನೀಸ್ ಫುಡ್ ತರಬೇಕು ಎಂದು ಆಗಸ್ಟ್ 3ನೇ ತಾರೀಕಿನಂದು ಡೆಲ್ಲಿ ಪಬ್ಲಿಕ್ ಸ್ಕೂಲ್ ಸುತ್ತೋಲೆ ಹೊರಡಿಸಿತ್ತು.

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಉತ್ತರ ವಲಯ 4 ಬಿಇಓ ನಾರಾಯಣ, ಡೆಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ನಾಳಿನ ಚೀನಾ ನ್ಯೂ ಇಯರ್ ಕ್ರಾರ್ಯಕ್ರಮವನ್ನ ರದ್ದು ಮಾಡಿಸ್ತೀವಿ. ಕಾರ್ಯಕ್ರಮ ನಡೆಯುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಇದಕ್ಕೆ ನಮ್ಮ ಅನುಮತಿ ಪಡೆದಿಲ್ಲ. ಮಾಧ್ಯಮಗಳಲ್ಲಿ ನೋಡಿ ವಿಷಯ ಗೊತ್ತಾಗಿದೆ. ಶಾಲೆ ಹೊರಡಿಸಿರುವ ಸುತ್ತೋಲೆ ಗಮನಿಸಿದ್ದೇನೆ. ಕೂಡಲೇ ಕಾರ್ಯಕ್ರಮವನ್ನು ರದ್ದು ಮಾಡಿಸ್ತೀನಿ ಅಂತ ಹೇಳಿದ್ದರು.

    delhi public school 4

    delhi public school 3

    delhi public school 2

    delhi public school 1

  • ವೀರಶೈವ, ಲಿಂಗಾಯತ ಧರ್ಮದ ಪರವಿರೋಧ ಮಾತನಾಡುವುದು ಶೋಭೆಯಲ್ಲ: ತನ್ವೀರ್ ಸೇಠ್

    ವೀರಶೈವ, ಲಿಂಗಾಯತ ಧರ್ಮದ ಪರವಿರೋಧ ಮಾತನಾಡುವುದು ಶೋಭೆಯಲ್ಲ: ತನ್ವೀರ್ ಸೇಠ್

    ರಾಯಚೂರು: ಲಿಂಗಾಯತ ಮತ್ತು ವೀರಶೈವ ಧರ್ಮದ ಬಗ್ಗೆ ಪರವಿರೋಧ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ ಅಂತ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ತನ್ವೀರ್ ಸೇಠ್ ಧರ್ಮಗಳ ವಿಚಾರದಲ್ಲಿ ಸಂವಿಧಾನ ಸ್ಪಷ್ಟವಾಗಿದೆ. ಅದೇ ಸಂವಿಧಾನದಲ್ಲಿ ಇನ್ನೊಂದು ಧರ್ಮವನ್ನ ಗೌರವಿಸಬೇಕು ಅನ್ನೋದು ಇದೆ ಎಂದರು.

    ವೀರಶೈವ ಧರ್ಮಕ್ಕೆ ದೊಡ್ಡ ಇತಿಹಾಸವಿದೆ. ಬಸವಣ್ಣನವರ ತತ್ವ ಸಿದ್ದಾಂತ ನಾಡಿನ ಉದ್ದಕ್ಕೂ ಕೆಲಸ ಮಾಡಬೇಕಾದ್ರೆ ನಮ್ಮ ವರ್ತನೆ ಸಮಾಜದಲ್ಲಿ ಹೇಗಿರಬೇಕು ಅನ್ನೋದನ್ನ ಮೊದಲು ನೋಡಿಕೊಳ್ಳಬೇಕಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾರು ಯಾರ ಕಡೆ ಇದ್ದಾರೆ ಅನ್ನೋದನ್ನ ಹೇಳಲು ಆಗಲ್ಲ. ಧರ್ಮದ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ತೀರ್ಮಾನ ತೆಗೆದುಕೊಳ್ಳಬೇಕಿದೆ ಅಂತ ತನ್ವೀರ್ ಸೇಠ್ ತಿಳಿಸಿದರು.

    ಇನ್ನೂ ಗುಜರಾತ್ ಕಾಂಗ್ರೆಸ್ ಶಾಸಕರ ಪ್ರವಾಸದ ಬಗ್ಗೆ ಮಾತನಾಡಿ ಇವತ್ತಿನ ಚುನಾವಣಾ ವ್ಯವಸ್ಥೆ ನಮ್ಮ ಮತದಾರರನ್ನ ನಾವೇ ಕಾಪಾಡಲು ಸಾಧ್ಯವಿಲ್ಲದಷ್ಟು ಹಾಳಾಗಿದೆ. ಬಿಜೆಪಿಯ ಬೆದರಿಕೆ ರಾಜಕಾರಣ ಎಲ್ಲರಿಗೂ ಗೊತ್ತಿರುವುದೇ, ಜನರ ರಕ್ಷಣೆಗಿಂತ ಅಧಿಕಾರ ಪಡೆಯಲು ತಂತ್ರಗಾರಿಕೆ ನಡೆಯುತ್ತಿದೆ. ಚುನಾಯಿತ ಪ್ರತಿನಿಧಿಗಳು ಮಾರಾಟವಾಗುವುದನ್ನ ನೋಡುತ್ತಿದ್ದೇವೆ ಮತ ಚಲಾಯಿಸುವ ಹಕ್ಕು ನಮ್ಮದಾಗಿದ್ರೂ ಬೇರೆ ರೀತಿಯಲ್ಲಿ ಒತ್ತಡ ತರುತ್ತಿರುವುದರಿಂದ ಗುಜರಾತ್ ಶಾಸಕರು ನಮ್ಮ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದಾರೆ ಅವರು ಹೇಳಿದರು.

     

  • ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಗೆದ್ದಿದ್ದು ಕಂಚಿನ ಪದಕವಂತೆ!- ರಾಜ್ಯ ಪಠ್ಯಪುಸ್ತಕಗಳಲ್ಲಿ ತಪ್ಪುಗಳ ಸರಮಾಲೆ

    ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಗೆದ್ದಿದ್ದು ಕಂಚಿನ ಪದಕವಂತೆ!- ರಾಜ್ಯ ಪಠ್ಯಪುಸ್ತಕಗಳಲ್ಲಿ ತಪ್ಪುಗಳ ಸರಮಾಲೆ

    – 144 ಕೋಟಿ ರೂ. ನೀರಲ್ಲಿ ಹೋಮ

    ಬೆಂಗಳೂರು: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಜಾಗದಲ್ಲಿ ಸೈನಾ ನೆಹ್ವಾಲ್, ಷಟ್ಲರ್ ಸೈನಾ ನೆಹ್ವಾಲ್ ಜಾಗದಲ್ಲಿ ಸಾನಿಯಾ ಮಿರ್ಜಾ. ಷಟ್ಲರ್ ಪಿ.ವಿ.ಸಿಂಧು ಒಲಿಂಪಿಕ್ಸ್‍ನಲ್ಲಿ ಗೆದ್ದಿದ್ದು ಕಂಚಿನ ಪದಕವಂತೆ. ಇವು ಶಾಲಾ ಪಠ್ಯದಲ್ಲಿ ಕಂಡು ಬಂದ ತಪ್ಪುಗಳು. ಇವು ಸ್ಯಾಂಪಲ್ ಅಷ್ಟೇ. ಹುಡುಕುತ್ತಾ ಹೋದ್ರೆ ನೂರೆಂಟು ತಪ್ಪುಗಳು ಕಂಡುಬರುತ್ತೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ಕಲಿಯುತ್ತಿರುವುದು ಇದನ್ನೇ.

    ಹೌದು. ಸರ್ಕಾರ 144 ಕೋಟಿ ರೂ. ಖರ್ಚು ಮಾಡಿ 6 ಕೋಟಿ ಪಠ್ಯಪುಸ್ತಕ ಪ್ರಿಂಟ್ ಮಾಡಿದೆ. ಬರೋಬ್ಬರಿ 2 ವರ್ಷ, 185 ಪರಿಣಿತರು, 45 ಲಕ್ಷ ರೂ. ಖರ್ಚು- ಇಷ್ಟೆಲ್ಲಾ ಟೈಂ ಕೊಟ್ಟು ಇಷ್ಟೆಲ್ಲಾ ಮ್ಯಾನ್ ಪವರ್ ಕೊಟ್ಟು ಇಷ್ಟೆಲ್ಲಾ ಖರ್ಚು ಮಾಡಿಯೂ ಶಾಲಾ ಪಠ್ಯಪುಸ್ತಕದಲ್ಲಿ ತಪ್ಪುಗಳ ಸರಮಾಲೆಯೇ ಇದೆ. ನೂರೆಂಟು ತಪ್ಪುಗಳ ಜೊತೆಗೆ ಕಾಗದದ ಗುಣಮಟ್ಟವೂ ಕಳಪೆಯಾಗಿದೆ.

    textbook 1

    ಪಠ್ಯ ಪುಸ್ತಕದಲ್ಲಿ ಇರುವ ಲೋಪದೋಷಗಳು
    1. ಒಲಿಂಪಿಕ್ಸ್ ನಲ್ಲಿ ಪಿ.ವಿ ಸಿಂಧು ಗೆದ್ದಿರೋದು ಬೆಳ್ಳಿ ಪದಕ, ಆದ್ರೆ ಪುಸ್ತಕದಲ್ಲಿ ಕಂಚಿನ ಪದಕ ಅಂತ ತಪ್ಪು ಮಾಹಿತಿ ನೀಡಲಾಗಿದೆ.
    2. ಇಂಗ್ಲಿಷ್ ವಿಷಯದಲ್ಲಿ ಪಠ್ಯಗಳು ಇರೋದೆ 24, ರಾಷ್ಟ್ರಗೀತೆಯ ಬಗ್ಗೆ ಮಾಹಿತಿ ನೀಡಿರೋ ಪಠ್ಯವನ್ನ 25ನೇ ಪಠ್ಯ ಅಂತ ಮುದ್ರಿಸಲಾಗಿದೆ.
    4. ಪಠ್ಯಪುಸ್ತಕದ ಹಾಳೆಯ ಗುಣಮಟ್ಟ ಕಳಪೆ ಮಟ್ಟದ್ದು.
    5. ಕನ್ನಡ ಪಠ್ಯಪುಸ್ತಕದಲ್ಲಿ ಒಂದೇ ಅಧ್ಯಾಯದ ಹೆಸರು ಎರಡು ಬಾರಿ ಮುದ್ರಣವಾಗಿದೆ.
    6. ಗಣಿತ ಪಠ್ಯ ಪುಸ್ತಕದಲ್ಲಿ ಸಮಸ್ಯೆಗಳಿವೆ, ಆದರೆ ಅದಕ್ಕೆ ಉತ್ತರಗಳು ಸರಿ ಇಲ್ಲ.
    7. ಪಠ್ಯ ಪುಸ್ತಕದಲ್ಲಿ ವ್ಯಾಕರಣಗಳು ತಪ್ಪು, ಇಂಗ್ಲಿಷ್‍ನ ಪಠ್ಯದಲ್ಲಿ ಗ್ರಾಮರ್‍ಗಳು ತಪ್ಪಾಗಿದೆ.
    8. ಅಭ್ಯಾಸ ಚಿತ್ರಗಳನ್ನ ಪಠ್ಯದಲ್ಲಿ ಉಲ್ಟಾ ಪಲ್ಟಾ ನೀಡಲಾಗಿದೆ.
    9. ಕೆಲ ಪುಸ್ತಕದಲ್ಲಿ ಪೇಜ್ ಮುದ್ರಣವಾಗಿಲ್ಲ. ಖಾಲಿ ಖಾಲಿ ಹಾಗೇ ಇದೆ.

    shashikumar

    ರಾಜ್ಯ ಪಠ್ಯ ಪುಸ್ತಕದಲ್ಲಿ ಲೋಪದೋಷವಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದ್ದು, ಲೋಪದೋಷವಾಗಿರೋ ಪಠ್ಯ ಪುಸ್ತಕವನ್ನ ಕೂಡಲೇ ವಾಪಸ್ ಪಡೆಯಬೇಕು ಎಂದು ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಆಗ್ರಹಿಸಿದ್ದಾರೆ. ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಮುದ್ರಣ ಲೋಪವಿದ್ದು, ತಪ್ಪು ಮಾಹಿತಿಗಳನ್ನ ನೀಡಲಾಗಿದೆ. ಇದರಿಂದ ಮಕ್ಕಳ ಭವಿಷ್ಯ ಹಾಳಾಗುತ್ತೆ. ಕೂಡಲೇ ಲೋಪವಾಗಿರೋ ಪುಸ್ತಕಗಳನ್ನ ವಾಪಸ್ ಪಡೆದು ಸರಿಯಾದ ಪುಸ್ತಕ ನೀಡಬೇಕು. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ರಾಜೀನಾಮೆಯನ್ನ ಕೂಡಲೇ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

    textbook 2

    ಈ ಬಗ್ಗೆ ಪರಿಷತ್ ಸದಸ್ಯ ಅರುಣ್ ಶಹಾಪುರ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಪಠ್ಯ ಪುಸ್ತಕ ಲೋಪದೋಷಕ್ಕೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ. ಪರಿಷ್ಕರಣ ಸಮಿತಿಯ ಸಭೆಯಲ್ಲಿ ಲೋಪದೋಷಗಳು ಇವೆ ಅಂತ ಸ್ವತಃ ಶಿಕ್ಷಣ ಸಚಿವರು, ಅಧಿಕಾರಿಗಳು ಹೇಳಿದ್ರು. ಹೀಗಿದ್ರೂ ಸಿಎಂ ಸಿದ್ದರಾಮಯ್ಯ ಮುದ್ರಣ ಮಾಡುವಂತೆ ಸೂಚಿಸಿದ್ರು. ಹೀಗಾಗಿ ಇಷ್ಟು ದೊಡ್ಡ ಲೋಪಗಳು ಆಗಿದೆ. ಸರ್ಕಾರ ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ. ಈ ಕುರಿತು ಅಧ್ಯಾಯನ ಪೂರ್ವಕವಾಗಿ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ನಿರ್ಧಾರ ಮಾಡ್ತೀವಿ ಅಂದ್ರು.

    textbook 6

    ಶಿಕ್ಷಣ ಸಚಿವ ತನ್ವೀರ್ ಸೇಠ್ ಈ ಬಗ್ಗೆ ಸಮರ್ಥನೆ ನೀಡಿದ್ದು, ಪಠ್ಯ ಪುಸ್ತಕದಲ್ಲಿ ದೊಡ್ಡಮಟ್ಟದ ಲೋಪ ಆಗಿಲ್ಲ. ಪ್ರಿಂಟಿಂಗ್ ಮಿಸ್ಟೇಕ್ ಆಗಿರೋದು ಲೋಪ ದೋಷಕ್ಕೆ ಕಾರಣ. ಈಗಾಗಲೇ ಲೋಪ ದೋಷ ಕುರಿತು ವರದಿ ನೀಡಲು ಸೂಚಿಸಿದ್ದೇನೆ. ಕೆಲಸದ ಒತ್ತಡದಿಂದ ಕೆಲ ಪ್ರಮಾಣದ ತಪ್ಪು ಆಗಿರಬಹುದು. ಲೋಪವಾಗಿರುವ ಪಠ್ಯ ಪುಸ್ತಕ ಸರಿ ಮಾಡಿ ಹೊಸ ಪುಸ್ತಕ ನೀಡುತ್ತೇವೆ. ಪಠ್ಯ ಪುಸ್ತಕದಲ್ಲಿ ಆದ ಲೋಪ ದೋಷಗಳು ದೊಡ್ಡ ಮಟ್ಟದಲ್ಲ ಎಂದಿದ್ದಾರೆ.

    textbook 3

    textbook 5

  • ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಬೆಂಗಳೂರು: ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

    ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗುವ ವೆಬ್‍ಸೈಟ್ ಹೀಗಿದೆ:

    http://karresults.nic.in/                                                                                                                           http://kseeb.kar.nic.in/

    ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ.

    ಕಲಾ ವಿಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಳ್ಳಾರಿಯ ಕೊಟ್ಟೂರು ಹಿಂದೂ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಚೈತ್ರಾ ಬಿ. 589 ಅಂಕಗಳಿಸಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

    ಕಾಮರ್ಸ್ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಬೆಂಗಳೂರಿನ ವಿಜಯನಗರದ ಆರ್‍ಎನ್‍ಎಸ್ ಕಾಲೇಜಿನ ಶ್ರೀನಿಧಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಳಿಕೆಯ ಸತ್ಯಸಾಯಿ ಕಾಲೇಜಿನ ಸಾಯಿ ಸಮರ್ಥ್ 595 ಅಂಕಗಳಿಸಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಸೃಜನಾ ಎನ್ ಮತ್ತು ಕುಂದಾಪುರದ ಎಸ್‍ವಿ ಕಾಲೇಜಿನ ರಾಧಿಕಾ ಪೈ 596 ಅಂಕ ಗಳಿಸಿದ್ದಾರೆ.

    sslc