Tag: ಥೀಯೇಟರ್

  • ಥೀಯೇಟರ್‌ಗಳ ಸಾಮರ್ಥ್ಯ ಶೇ.50ಕ್ಕೆ ಇಳಿಸಿ- ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

    ಥೀಯೇಟರ್‌ಗಳ ಸಾಮರ್ಥ್ಯ ಶೇ.50ಕ್ಕೆ ಇಳಿಸಿ- ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ

    – ಪಾರ್ಕ್, ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿ
    – ಮದುವೆ ಮೇಲೂ ನಿಗಾ, ಹೆಚ್ಚು ಜನ ಸೇರದಂತೆ ಕ್ರಮ

    ಬೆಂಗಳೂರು: ಕ್ಲೋಸ್ಡ್ ಪ್ರದೇಶದಲ್ಲಿ ಹೆಚ್ಚು ಜನ ಸೇರುವುದರಿಂದ ಸೋಂಕು ಹೆಚ್ಚುತ್ತದೆ. ಹೀಗಾಗಿ ಸಿನಿಮಾ ಥಿಯೇಟರ್ ಗಳಲ್ಲಿ ಶೇ.50ರಷ್ಟು ಭರ್ತಿಗೆ ಇಳಿಸುವುದು ಹಾಗೂ ಪಾರ್ಕ್, ಜಿಮ್ ಸೇರಿದಂತೆ ಇತರೆ ಪ್ರದೇಶಗಳನ್ನು ಬಂದ್ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಅಪಾರ್ಟ್ ಮೆಂಟ್, ಕಾಮನ್ ಏರಿಯಾಗಳ ಮೇಲೆ ನಿಗಾ ವಹಿಸುವುದು, ಆಟದ ಮೈದಾನ, ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

    bbmp corona

    ಅಲ್ಲದೆ ಸಿನಿಮಾ ಹಾಲ್ ಗಳಲ್ಲಿ ಕೇಸ್ ಎಷ್ಟು ಬರುತ್ತಿದೆ ಎಂಬ ಮಾಹಿತಿ ಇಲ್ಲ. ಆದರೆ ಶೇ.100 ರಷ್ಟು ಜನರು ಕ್ಲೋಸ್ ಡೋರ್ ನಲ್ಲಿ ಇದ್ದಾಗ ಕೇಸ್ ಹೆಚ್ಚಳವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಥಿಯೇಟರ್‍ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲು ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ವಿವರಿಸಿದರು.

    ಮದುವೆ ಮಂಟಪಗಳಲ್ಲಿ ಹಲವು ಗೊಂದಲಗಳಿವೆ. ಇಡೀ ಮದುವೆಗೆ 200 ಜನರು ಮಾತ್ರ ಸೇರಬೇಕು. ಈ ಜವಾಬ್ದಾರಿ ಮದುವೆ ಮಾಡುವವರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ಮೇಲಿದೆ. ಕ್ಲೋಸ್ಡ್ ಏರಿಯಾದಲ್ಲಿ 200 ಜನ, ಓಪನ್ ಸ್ಪೇಸ್ ನಲ್ಲಿ 500 ಜನಕ್ಕೆ ಮಾತ್ರ ಅವಕಾಶವಿದೆ ಎಂದು ತಿಳಿಸಿದರು.

    HBL MASK 3

    ಮಾಲ್, ಅಂಗಡಿಗಳ ಮುಂದೆ ಮಾರ್ಷಲ್ ಕಾರ್ಯಚರಣೆ ಅಸಾಧ್ಯ. ಮಾಲ್ ಮಾಲೀಕರೇ ಜವಾಬ್ದಾರಿ ವಹಿಸಿಕೊಳ್ಳಬೇಕು. ಇವರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದರೆ ಕೊರೊನಾ ಕೇಸ್ ಹೆಚ್ಚಳವಾಗುತ್ತವೆ. ಹೀಗಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಎಕ್ಸಿಬ್ಯುಷನ್ ಗಳಲ್ಲಿ ನಿಯಮ ಪಾಲನೆ ಆಗುತ್ತಿಲ್ಲ. ಹೊರ ರಾಜ್ಯದಿಂದ ಬಂದವರು ನಿಯಮ ಉಲ್ಲಂಘನೆ ಮಾಡುತ್ತಿರುವ ಮಾಹಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಸೋಂಕು ಬಂದ ಕುಟುಂಬದಲ್ಲಿ ಎಲ್ಲರಿಗೂ ಪಾಸಿಟಿವ್ ಆಗುತ್ತಿದೆ. ಈ ಬಗ್ಗೆ ಗಮನ ಇರಲಿ, ಸೋಂಕಿತರು ಸರಿಯಾಗಿ ಹೋಮ್ ಐಸೋಲೇಶನ್ ಆಗದಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚೆ ನಡೆಯುತ್ತಿದೆ. ಶೇ.90 ರಷ್ಟು ಕೇಸ್ ಗಳು ಲಕ್ಷಣ ರಹಿತವಾಗಿವೆ. ಪಾಸಿಟಿವಿಟಿ ರೇಟ್ ಶೇ.1.36 ಇದೆ. 12 ಕ್ಲಸ್ಟರ್ ಗಳು ಬೆಂಗಳೂರಿನಲ್ಲಿವೆ ಎಂದು ಅವರು ಮಾಹಿತಿ ನೀಡಿದರು.

    CKD 4

    ಪ್ರಕರಣಗಳನ್ನು ಗುರುತಿಸುವ ಕೆಲಸ ವೇಗವಾಗಿ ನಡೆಯುತ್ತಿದೆ. ಐಎಲ್ ಐ ಸ್ಯಾರಿ ಕೇಸ್ ಗೆ ವಿಶೇಷ ಗಮನ ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗೆ ಹೊಸ ಕೆಲಸ ನೀಡಲಾಗಿದ್ದು, ಐಎಲ್ ಐ ಸ್ಯಾರಿ ಕೇಸ್ ಗಳ ಟೆಸ್ಟ್ ಹೆಚ್ಚಿಸಲು ಯೋಜಿಸಲಾಗಿದೆ. ಸಂಪರ್ಕ ಪತ್ತೆ ಹಚ್ಚಲು ಕ್ರಮ ವಹಿಸಲಾಗಿದ್ದು, ಕಂದಾಯ ಇಲಾಖೆ, ಇಂಜಿನಿಯರ್, ಟೀಚರ್ ಗಳನ್ನು ಬಳಕೆ ಮಾಡಿಕೊಂಡು ಒಂದು ಕೇಸ್ ಗೆ 15 ಜನರ ಗುರುತಿಸುವ ಕೆಲಸ ಆಗುತ್ತಿದೆ. ಪ್ರೈಮರಿ ಕಾಂಟ್ಯಾಕ್ಟ್ ನಲ್ಲಿ ಶೇ.50 ರಷ್ಟು ಜನ ಪಾಸಿಟಿವ್ ಆಗುತ್ತಿದ್ದಾರೆ ಎಂದು ತಿಳಿಸಿದರು.

    ರಾಜಧಾನಿಯಲ್ಲಿ 3 ಲಕ್ಷ ಜನರು ವ್ಯಾಕ್ಸಿನ್ ಪಡೆದಿದ್ದಾರೆ. ವ್ಯಾಕ್ಸಿನ್ ಕೆಲಸ ವೇಗ ಪಡೆದಿದೆ. 80 ಸಾವಿರ ಜನರಿಗೆ ಶೆಡ್ಯೂಲ್ ಮಾಡುತ್ತಿದ್ದೇವೆ. ಹೀಗಾಗಿ ಶೇಕಡಾವಾರು ಪ್ರಮಾಣ ಕಡಿಮೆ ಇದೆ. ಆದರೆ ವ್ಯಾಕ್ಸಿನ್ ಪಡೆಯುವವರ ಸಂಖ್ಯೆ ಕಡಿಮೆ ಆಗಿಲ್ಲ ಎಂದು ತಿಳಿಸಿದರು.

    CORONA 1

    ಅಂಬುಲೆನ್ಸ್, ಟಿಟಿಗಳ ಹಣ ಬಾಕಿ ಉಳಿದಿದೆ. ಸರ್ಕಾರ ಹಣ ಬಿಡುಗಡೆ ಮಾಡಿದಾಗ ಅಂಬುಲೆನ್ಸ್‍ಗಳ ಹಳೆ ಬಾಕಿ ಪಾವತಿ ಆಗಲಿದೆ. 198 ವಾರ್ಡ್ ಗೂ ಒಂದೊಂದು ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲೇ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ 3 ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತಿದೆ. ಸೋಮವಾರದಿಂದ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು. ಖಾಸಗಿ ಆಸ್ಪತ್ರೆ ಬಳಕೆ ಸದ್ಯ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

    5 ಕ್ಕಿಂತ ಹೆಚ್ಚು ಕೇಸ್ ಬಂದಾಗ ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗುತ್ತದೆ. ಒಟ್ಟು 12 ಕಡೆ ಈ ರೀತಿಯ ಕೇಸ್ ಬಿಟ್ಟು ಉಳಿದ ಎಲ್ಲವೂ ಸಿಂಗಲ್ ಕೇಸ್ ಗಳು. ಪಾಲಿಕೆ ಈಗಾಗಲೇ ಪ್ರಸ್ತಾವನೆ ಕೊಟ್ಟಿದೆ. ಉಳಿದ ಎಲ್ಲ ಕ್ರಮ ಸರ್ಕಾರ ಕೈಗೊಳ್ಳಬೇಕಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದರು.

    bbmp corona 1

    ಬಿಬಿಎಂಪಿ ಪ್ರಸ್ತಾವನೆ ಬಗ್ಗೆ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಮಾತನಾಡಿ, ಬಿಬಿಎಂಪಿಯಿಂದ ಮಾರ್ಗಸೂಚಿ ಕುರಿತು ಪ್ರಸ್ತಾವನೆ ಬಂದಿದೆಯಂತೆ. ನಾನು ಇನ್ನೂ ನೋಡಿಲ್ಲ. ಈ ಬಗ್ಗೆ ಇಂದು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ರಾಜ್ಯದ ವಿವಿಧ ಕಡೆ ಯಾವ ರೀತಿ ಬಿಗಿ ಕ್ರಮ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದರು.

  • ಮತ್ತೆ ಥೀಯೇಟರ್‌ಗೆ ಬಂದ ಟಗರನ್ನು ನೋಡಲು ಸಿದ್ಧವಾದ ಸಲಗ

    ಮತ್ತೆ ಥೀಯೇಟರ್‌ಗೆ ಬಂದ ಟಗರನ್ನು ನೋಡಲು ಸಿದ್ಧವಾದ ಸಲಗ

    ಬೆಂಗಳೂರು: ಮತ್ತೆ ಮರು ಬಿಡುಗಡೆಯಾಗಿರುವ ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ ಟಗರು ಸಿನಿಮಾ ನೋಡಲು ಭಾನುವಾರ ಸಲಗ ಚಿತ್ರದ ನಾಯಕ ದುನಿಯ ವಿಜಯ್ ಅವರು ಚಿತ್ರಮಂದಿರಕ್ಕೆ ಹೋಗುತ್ತಿದ್ದಾರೆ.

    ಕೊರೊನಾ ಕಾರಣದಿಂದ ಪ್ರದರ್ಶನಗಳನ್ನು ನಿಲ್ಲಿಸಿದ್ದ ಚಿತ್ರಮಂದಿರಗಳು ಸರ್ಕಾರದ ಆದೇಶದಂತೆ ಮತ್ತೆ ಚಿತ್ರಪ್ರದರ್ಶನ ಶುರು ಮಾಡಿವೆ. ಈ ಹಿಂದೆ ಹಿಟ್ ಆಗಿದ್ದ ಕೆಲ ಸಿನಿಮಾಗಳು ಮತ್ತೆ ಮರು ಬಿಡುಗಡೆಯಾಗುತ್ತೀವೆ. ಅಂತೆಯೇ 2018ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ ಸೂರಿ ನಿರ್ದೇಶನದ ಟಗರು ಚಿತ್ರ ಹಿಂದಿನಿಂದ ಮತ್ತೆ ತೆರೆಮೇಲೆ ಬರುತ್ತಿದೆ.

    https://www.instagram.com/p/CGr3lotgb6T/

    ಈ ವಿಚಾರವಾಗಿ  ಪೋಸ್ಟ್ ಹಾಕಿರುವ ದುನಿಯಾ ವಿಜಯ್ ಅವರು, ಕಳೆದ ಆರೇಳು ತಿಂಗಳಿನಿಂದ ಕೊರೊನಾ, ಐಸೋಲೇಶನ್, ಕ್ವಾರಂಟೈನ್, ಸೀಲ್‍ಡೌನ್ ಇದೇ ರೀತಿಯ ಪದಗಳನ್ನು ಕೇಳುತ್ತಿದ್ದ ನಮಗೆ ಈಗ ಮಾರ್ನಿಂಗ್ ಶೋ, ಮ್ಯಾಟ್ನಿ, ಲೇಟ್ ನೈಟ್ ಶೋ ಎಂಬ ಪದಗಳನ್ನು ಕೇಳುವ ಸಮಯ ಬಂದಿದೆ. ಕೊರೊನಾಗೆ ವ್ಯಾಕ್ಸಿನ್ ಇನ್ನೂ ಬಂದಿಲ್ಲ. ಆದರೆ ಜೀವನವೂ ನಡೆಯಬೇಕಿರುವುದರಿಂದ ಎಲ್ಲ ಉದ್ಯಮಗಳಂತೆ, ಕಳೆದೊಂದು ವಾರದಿಂದ ಸರ್ಕಾರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ಕನಸಿನ ಮನೆಗಳಾದ ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿವೆ ಎಂದಿದ್ದಾರೆ.

    tagaru 2

    ಜೊತೆಗೆ ಭಯ ಆತಂಕ ಎಲ್ಲದರ ನಡುವೆಯೂ ಒಂದಷ್ಟು ಸಿನಿಮಾ ಪ್ರೇಮಿಗಳು ಥೀಯೇಟರ್‍ಗೆ ಬಂದು ಸಿನಿಮಾ ನೋಡಿದ್ದಾರೆ. ಅವರೆಲ್ಲರಿಗೂ ನನ್ನ ಮನಃಪೂರ್ವಕ ವಂದನೆಗಳು. ನನ್ನ `ಸಲಗ’ ಸಿನಿಮಾದ ನಿರ್ಮಾಪಕರಾದ ಕೆಪಿ ಶ್ರೀಕಾಂತ್ ನಿರ್ಮಾಣದ ಗೆಳೆಯ ಸೂರಿ ನಿರ್ದೇಶನದ ಚಿತ್ರರಂಗದ ನಾಯಕ, ನನ್ನ ಪಾಲಿಗೆ ಅಣ್ಣನ ಸಮಾನರಾದ ಶಿವರಾಜ್‍ಕುಮಾರ್ ಗೆಳೆಯ ಡಾಲಿ ಧನಂಜಯ ನಟನೆಯ ಬ್ಲಾಕ್ ಬಸ್ಟರ್ ಸಿನಿಮಾ `ಟಗರು’ ಇಂದಿನಿಂದ ಮರು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

    cini salaga

    ಚಿತ್ರ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯನ್ನು ದೋಚಲಿ ಎಂದು ಹಾರೈಸುತ್ತಾ ಭಾನುವಾರ ಅಂದರೆ ಅಕ್ಟೋಬರ್ 25ರ ಮಧ್ಯಾಹ್ನ 1.15ರ ಪ್ರದರ್ಶನಕ್ಕೆ ಅಭಿಮಾನಿಗಳ ಜತೆ ಸಿನಿಮಾ ನೋಡಲು ಮೈಸೂರು ರಸ್ತೆಯಲ್ಲಿರುವ ಸಿರ್ಸಿ ಸರ್ಕಲ್ ಬಳಿಯ ಗೋಪಾಲನ್ ಸಿನಿಮಾಸ್‍ಗೆ ಬರುತ್ತಿದ್ದೇನೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ದುಕೊಂಡು ಸಿನಿಮಾ ನೋಡಲು ಆರಂಭಿಸೋಣ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಖುಷಿ ಮತ್ತು ಸಂತೋಷವನ್ನು ಅನುಭವಿಸೋಣ ಎಂದು ಹೇಳಿದ್ದಾರೆ.

  • ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಮೈಸೂರು: ನಮ್ಮದು ದೊಡ್ಡ ಬಜೆಟ್ ಸಿನಿಮಾವಾಗಿದ್ದು, ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಹೀಗಾಗಿ ಸದ್ಯ ಚಿತ್ರ ಬಿಡುಗಡೆ ಮಾಡಲ್ಲ ಎಂದು ‘ಸಲಗ’ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಹೇಳಿದ್ದಾರೆ.

    dali dhananjay salaga 3

    ಚಿತ್ರಮಂದಿರ ತೆರೆಯಲು ಸರ್ಕಾರದಿಂದ ಅನುಮತಿ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅರ್ಧ ಪ್ರೇಕ್ಷಕರರಿಗಾಗಿ ಸಲಗ ಚಿತ್ರ ಬಿಡುಗಡೆ ಮಾಡಲ್ಲ. ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಇದಕ್ಕೆ ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ಸಲಗ ಚಿತ್ರ ತೆರೆಗೆ ಬರಲಿದೆ ಎಂದು ಹೇಳಿದರು.

    cini salaga

    ಆಕ್ಟಿವ್ ಪ್ರೋಡ್ಯೂಸರ್ ಟೀಂನಿಂದ ಸೋಮವಾರ ಸಭೆ ಕರೆದಿದ್ದೇವೆ. ಆ ಟೀಂನಲ್ಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್ ಹಾಗೂ ಯುವರತ್ನ ಮೊದಲಾದ ಚಿತ್ರಗಳ ನಿರ್ಮಾಪಕರಿದ್ದಾರೆ. ಎಲ್ಲರು ಒಟ್ಟಾಗಿ ಕುಳಿತು ನಿರ್ಧಾರ ಮಾಡ್ತೀವಿ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದರೆ ದೊಡ್ಡ ಬಜೆಟ್‍ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಆನ್‍ಲೈನ್ ಫ್ಲಾಟ್‍ಫಾರ್ಮ್(ಓಟಿಟಿ) ವೇದಿಕೆಗಳು ದೊಡ್ಡ ಬಜೆಟ್ ಸಿನಿಮಾಗಳಿಗೆ ಸರಿ ಹೊಂದುವುದಿಲ್ಲ ಎಂದು ತಿಳಿಸಿದರು.

    salaga 1

    ಕೇಂದ್ರ ಸರ್ಕಾರ ಅನ್‍ಲಾಕ್ 5ರ ಮಾರ್ಗಸೂಚಿಯನ್ನು ಬುಧವಾರ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ. ಹಾಗೇ ಸರ್ಕಾರ ಮೈಕ್ರೋ ಲೆವಲ್ ಕಂಟೈನ್‍ಮೆಂಟ್ ಝೋನ್ ಮಾಡಲು ಜಿಲ್ಲಾಡಳಿತಗಳಿಗೆ ಅವಕಾಶ ನೀಡಿದೆ.

    Swim Theatre

    ಈ ಲಾಕ್‍ಡೌನ್ 2020 ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ. ರಾಜ್ಯ/ಕೇಂದ್ರ ಸರ್ಕಾರ ಯಾವುದೇ ಲೋಕಲ್ ಲಾಕ್‍ಡೌನ್ ಮಾಡುತ್ತಿಲ್ಲ. ಜಲ್ಲಾಡಳಿತಗಳು ಕಂಟೈನ್‍ಮೆಂಟ್ ಪ್ರದೇಶಗಳಲ್ಲಿ ಮೈಕ್ರೋ ಲೆವಲ್ ಝೋನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕಂಟೈನ್‍ಮೆಂಟ್ ಝೋನ್ ಗಳಲ್ಲಿ ಅವಶ್ಯಕ ಸೇವೆಗಳನ್ನು ಹೊರತುಪಡಿಸಿದ ಇನ್ನುಳಿದ ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧವಿದೆ. ಅಂತರಾಜ್ಯ ಮತ್ತು ಅಂತರ್ ಜಿಲ್ಲೆ ಪ್ರಯಾಣದ ಮೇಲೆ ಯಾವುದೇ ನಿಬಂಧನೆಗಳಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

  • ದಚ್ಚು ಫ್ಯಾನ್ಸ್ ಕೈಬಿಡಲ್ಲ – ಕೋಟಿ ಕೋಟಿ ಆಫರ್ ತಿರಸ್ಕರಿಸಿದ ‘ರಾಬರ್ಟ್’ ನಿರ್ಮಾಪಕ

    ದಚ್ಚು ಫ್ಯಾನ್ಸ್ ಕೈಬಿಡಲ್ಲ – ಕೋಟಿ ಕೋಟಿ ಆಫರ್ ತಿರಸ್ಕರಿಸಿದ ‘ರಾಬರ್ಟ್’ ನಿರ್ಮಾಪಕ

    ಬೆಂಗಳೂರು: ದರ್ಶನ್ ಫ್ಯಾನ್ಸ್ ರಾಬರ್ಟ್ ಚಿತ್ರವನ್ನು ಕೈಬಿಡಲ್ಲ ಥೀಯೇಟರ್ ಗೆ ಬಂದು ಸಿನಿಮಾ ನೋಡುತ್ತಾರೆ ಎಂದು ಚಿತ್ರದ ನಿರ್ದೇಶಕ ಉಮಾಪತಿ ಅವರು ಅಮೆಜಾನ್ ಕಂಪನಿ ನೀಡಿದ ಭಾರೀ ಆಫರ್ ತಿರಸ್ಕರಿಸಿದ್ದಾರೆ.

    ಹೌದು ಇನ್ನೇನು ಬಂದೇ ಬಿಟ್ಟಿತು ರಾಬರ್ಟ್ ಎಂದು ದಚ್ಚು ಅಭಿಮಾನಿಗಳು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದರು. ಆದರೆ ಕೊರೊನಾ ಮಾರಿ ಅದಕ್ಕೆ ಅಡ್ಡಗಾಲು ಹಾಕಿತ್ತು. ಇಂದು ನಾಳೆ ಎನ್ನುತ್ತಾ ಈಗ ಮುಂದ್ಯಾವಾಗ ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ. ಈ ನಡುವೆಯೇ ರಾಬರ್ಟ್ ಸಿನಿಮಾವನ್ನೂ ಆನ್‍ಲೈನ್‍ನಲ್ಲೇ ರಿಲೀಸ್ ಮಾಡಿ ಎನ್ನುವ ಬೇಡಿಕೆ ಬಂದಿತ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕೋಟಿ ಕೋಟಿ ಕೊಡುತ್ತೇವೆ ನಮಗೆ ರಾಬರ್ಟ್ ಕೊಡಿ ಎಂದು ಅಮೆಜಾನ್ ಫ್ರೈಮ್ ಅವರು ಬೇಡಿಕೆ ಇಟ್ಟಿದ್ದಾರೆ.

    robert 1024x586 2

    ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾ ಕ್ರಿಮಿಯಿಂದ ಎಲ್ಲವೂ ಉಲ್ಟಾ ಪಲ್ಟಾ ಆಯಿತು. ಈ ಮೂಲಕ ವರ್ಷದಿಂದ ಕಾಯುತ್ತಿದ್ದ ಅಭಿಮಾನಿಗಗಳಿಗೆ ನಿರಾಸೆಯಾಗಿತ್ತು. ಈ ನಡುವೆಯೇ ರಾಬರ್ಟ್ ಸಿನಿಮಾವನ್ನು ಆನ್‍ಲೈನ್ ಅಲ್ಲಿ ಬಿಡುಗಡೆ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಈ ಸುದ್ದಿಯನ್ನು ಉಮಾಪತಿ ಸುಳ್ಳು ಎಂದು ಹೇಳಿದ್ದಾರೆ.

    Darshan Robert

    ಈ ಬಗ್ಗೆ ಮಾತನಾಡಿರುವ ಚಿತ್ರದ ನಿರ್ಮಾಪಕ ಉಮಾಪತಿ ಅವರು, ಅಮೆಜಾನ್ ಚಾನೆಲ್‍ನಿಂದ ನಮ್ಮ ರಾಬರ್ಟ್ ಸಿನಿಮಾಕ್ಕೆ ಆಫರ್ ಬಂದಿದ್ದು ನಿಜ. 70 ಕೋಟಿಗೆ ಅವರು ಬೇಡಿಕೆ ಇಟ್ಟಿದ್ದೂ ಸತ್ಯ. ಆದರೆ ನಾವು ಒಪ್ಪಲಿಲ್ಲ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವವರೆಗೂ ಓಟಿಟಿ ಫ್ಲಾಟ್‍ಫಾರ್ಮ್‍ಗಳಲ್ಲಿ ರಾಬರ್ಟ್ ರಿಲೀಸ್ ಮಾಡಲ್ಲ. ಲೇಟಾದರೂ ಪರವಾಗಿಲ್ಲ. ಥೀಯೇಟರ್ ನಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ರಾಜಾರೋಷವಾಗಿ ಹೇಳಿದ್ದಾರೆ.

    ROBERT DARSHAN 3

    ಕೊರೊನಾ ಮುಗಿದ ಮೇಲೆ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದೇ ಬರುತ್ತಾರೆ ಎನ್ನುವ ಬಲವಾದ ನಂಬಿಕೆ ಇದೆ. ದರ್ಶನ್ ಅಭಿಮಾನಿಗಳು ಯಾವುದೇ ಕಾರಣಕ್ಕೂ ಸಿನಿಮಾ ಕೈ ಬಿಡುವುದಿಲ್ಲ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವುದಕ್ಕೆ ಮುಗಿಬೀಳುತ್ತಾರೆ. ಅಂದಹಾಗೆ ಈಗಾಗಲೇ ನಮ್ಮ ಚಿತ್ರಕ್ಕೆ ಹಾಕಿದ ಬಂಡವಾಳ ಹಲವು ಮೂಲಗಳಿಂದ ವಾಪಸ್ ಬಂದಿದೆ. ಇನ್ನು ಮುಂದೆ ಬರುವುದೆಲ್ಲವೂ ಲಾಭವೇ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ರಿಲೀಸ್‍ಗೂ ಮೊದಲೇ ದಾಖಲೆ ಲೆಕ್ಕದಲ್ಲಿ ಲಾಭದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

    amazon prime video 1 e1588951693587

    ಸಿನಿಮಾ ರಿಲೀಸ್‍ಗೆ ರೆಡಿಯಾಗಿ ತಿಂಗಳುಗಳೇ ಕಳೆದಿವೆ. ಹಲವು ಬಾರಿ ರಿಲೀಸ್ ಡೇಟ್ ಕೂಡ ಹೊರಬಿದ್ದಿತ್ತು. ಅಷ್ಟರಲ್ಲಿ ಕೊರೊನಾದಿಂದ ಥೀಯೇಟರ್ ಗಳು ಬಂದ್ ಅದವು. ಈಗ ರಾಬರ್ಟ್ ಸಿನಿಮಾವನ್ನು ಕೊಳ್ಳಲು ಅಮೆಜಾನ್ ಮುಂದಾಗಿದೆ. ಭರ್ತಿ 70 ಕೋಟಿ ಅಫರ್ ನೀಡಿದೆ. ಇದು ಹಾಕಿದ ಬಂಡವಾಳಕ್ಕೆ ಹೆಚ್ಚು ಕಮ್ಮಿ ಡಬಲ್ ದುಡ್ಡು. ಜೊತೆಗೆ ಎಷ್ಟೆಷ್ಟು ಜನರು ನೋಡುತ್ತಾರೊ, ಅಷ್ಟಷ್ಟು ಹಣ ನಿರ್ಮಾಪಕರು ಮತ್ತು ಚಾನೆಲ್ ನಡುವೆ ಹಂಚಿಕೆಯಾಗುತ್ತದೆ. ಆದರೆ ರಾಬರ್ಟ್‍ನ ಖಡಕ್ ನಿರ್ಮಾಪಕ ಉಮಾಪತಿ ಈ ವ್ಯವಹಾರಕ್ಕೆ ಬಿಲ್‍ಕುಲ್ ಒಪ್ಪಿಗೆ ಸೂಚಿಸಿಲ್ಲ.

  • ಸಾರ್ವಜನಿಕವಾಗಿ ಫಸ್ಟ್ ಟೈಂ ನೋವನ್ನು ತೋಡಿಕೊಂಡ ಗಾಯಕ ರಘು ದೀಕ್ಷಿತ್

    ಸಾರ್ವಜನಿಕವಾಗಿ ಫಸ್ಟ್ ಟೈಂ ನೋವನ್ನು ತೋಡಿಕೊಂಡ ಗಾಯಕ ರಘು ದೀಕ್ಷಿತ್

    ಬೆಂಗಳೂರು: ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ಸಾರ್ವಜನಿಕವಾಗಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ಹೀಗೆ ಸಾರ್ವಜನಿಕವಾಗಿ ರಘು ದೀಕ್ಷಿತ್ ತಮ್ಮ ನೋವನ್ನು ತೋಡಿಕೊಳ್ಳಲು ಕಾರಣ, ಅವರು ಇತ್ತೀಚೆಗೆ ಸಂಗೀತ ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ. ಹೌದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅಭಿನಯದ ಲವ್ ಮಾಕ್ಟೇಲ್ ಚಿತ್ರವನ್ನು ಕೆಲ ಚಿತ್ರಮಂದಿರಗಳಿಂದ ತೆಗೆದು ಹಾಕಿರುವುದಕ್ಕೆ ಬೇಸರಗೊಂಡ ರಘು ದೀಕ್ಷಿತ್ ವಿಡಿಯೋ ಮಾಡುವ ಮೂಲಕ ತಮ್ಮ ನೋವನ್ನು ಹೊರ ಹಾಕಿದ್ದಾರೆ.

    ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮಾತನಾಡಿರುವ ರಘು ಅವರು, ನಾನು ಸಾರ್ವಜನಿಕವಾಗಿ ಯಾವತ್ತು ತನ್ನ ನೋವನ್ನು ಹಂಚಿಕೊಂಡಿರಲಿಲ್ಲ. ಆದರೆ ಅನಿರ್ವಾಯ ಕಾರಣದಿಂದ ಇಂದು ಈ ವಿಡಿಯೋ ಮಾಡಿ ತನ್ನ ನೋವನ್ನು ಹಂಚಿಕೊಳ್ಳುತ್ತಿದ್ದೇನೆ. ಇದಕ್ಕೆ ಕಾರಣ ಕಳೆದ ಶುಕ್ರವಾರ 150 ಚಿತ್ರಮಂದಿರದಲ್ಲಿ ತೆರೆಕಂಡ ಲವ್ ಮಾಕ್ಟೇಲ್ ಚಿತ್ರ ಇಂದು ಕೇವಲ ಬೆಂಗಳೂರಿನ ಶಾರದಾ ಥೀಯೇಟರ್‍ನಲ್ಲಿ ಮಾತ್ರ ಪ್ರದರ್ಶನ ಕಾಣುತ್ತಿದೆ. ಇದನ್ನು ಓದಿ: ಕಿಚ್ಚನ ಮನಸ್ಸಿಗೂ ಹಿಡಿಸಿದ ‘ಲವ್ ಮಾಕ್ಟೇಲ್’!

    https://www.instagram.com/p/B8QI93VgrB0/

    ಬುಕ್ ಮೈ ಶೋನಲ್ಲಿ 90% ವೋಟ್ ಕಂಡು ಜನ ಮತ್ತು ಮೀಡಿಯಾದಿಂದ ಒಳ್ಳೆ ಪ್ರತಿಕ್ರಿಯೆ ಬಂದರೂ ಚಿತ್ರಮಂದಿರ ತುಂಬಲಿಲ್ಲ. ನಿಧಾನಕ್ಕೆ ಜನ ಚಿತ್ರಮಂದಿರಕ್ಕೆ ಬರುತ್ತಿದ್ದರು. ಆದರೆ ಇಂದು ಕೇವಲ ಒಂದೇ ಒಂದು ಥೀಯೇಟರ್‍ನಲ್ಲಿ ಲವ್ ಮಾಕ್ಟೇಲ್ ಪ್ರದರ್ಶನಗೊಳ್ಳುತ್ತಿದೆ. ಬಹಳ ಒಳ್ಳೆಯ ಚಿತ್ರ ನಾನು ವೈಯಕ್ತಿಕ ಗ್ಯಾರೆಂಟಿ ಕೊಡುತ್ತೇನೆ. ಆ ಚಿತ್ರ ಇಷ್ಟವಾಗಿಲ್ಲ ಎಂದರೆ ಆ ದುಡ್ಡನ್ನು ನಾನು ವಾಪಸ್ ನೀಡುತ್ತೇನೆ ಎಂದು ವಿಡಿಯೋದಲ್ಲಿ ರಘು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇದನ್ನು ಓದಿ: ಹೃದಯ ತಟ್ಟುವ ಚಿತ್ರ ‘ಲವ್ ಮಾಕ್ಟೇಲ್’

    ನಾನು ನಿಮ್ಮ ದೊಡ್ಡ ಅಭಿಮಾನಿ ಎಂದು ಹೇಳುವವರು, ನಿಜವಾಗಿಯೂ ನೀವು ನಮ್ಮ ಅಭಿಮಾನಿಗಳಾದರೆ ಚಿತ್ರಮಂದಿರಕ್ಕೆ ಬಂದು ಚಿತ್ರನೋಡಿ. ಒಂದು ಒಳ್ಳೆಯ ಸಿನಿಮಾ ಮಾಡಿದ್ದೇವೆ ಒಳ್ಳೆ ಸಂಗೀತ ನೀಡಿದ್ದೇನೆ. ಈ ಚಿತ್ರವನ್ನು ನೀವು ಕುಟುಂಬ ಸಮೇತ ಮತ್ತು ಗೆಳೆಯರ ಸಮೇತ ಹೋಗಿ ನೋಡಿ. ಈ ಚಿತ್ರವನ್ನು ಗೆಲ್ಲಿಸಬೇಕು ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

    LOVE MOCKTAIL

    ಶಾರದಾ ಥೀಯೇಟರ್ ಅನ್ನು ನಾವೇಲ್ಲ ಸೇರಿ ತುಂಬಿಸಬೇಕು. ಟಿಕೆಟ್ ಸಿಗದ ರೀತಿ ಮಾಡಬೇಕು. ಆಗ ನಮಗೆ ಇನ್ನೊಂದು ಚಿತ್ರಮಂದಿರ ಸಿಗಬಹುದು. ದಯಮಾಡಿ ಕನ್ನಡ ಚಿತ್ರಗಳನ್ನು ಉಳಿಸಿ. ಈ ಚಿತ್ರಕ್ಕಿಂತ ಒಳ್ಳೆಯ ಸಿನಿಮಾ ಮಾಡಬೇಕು ಎಂದರೆ ನೀವು ನಮ್ಮನ್ನು ಗೆಲ್ಲಿಸಬೇಕು. ನೀವು ನಮ್ಮನ್ನು ಅನಾಥರನ್ನಾಗಿ ಮಾಡಿದರೆ ನಿಜವಾಗಿಯೂ ಕನ್ನಡ ಚಿತ್ರಗಳನ್ನು ಮಾಡಬಾರದು ಎನಿಸುತ್ತದೆ ಎಂದು ರಘು ದೀಕ್ಷಿತ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ‘ಲವ್ ಮಾಕ್ಟೇಲ್’ 4-5 ಪ್ರೀತಿಗಳ ಮಿಶ್ರಣ

    ಬೇರೆ ಭಾಷೆಯಲ್ಲಿ ಚಿತ್ರ ಬಂದರೆ ಜನ ಹೋಗಿ ನೋಡುತ್ತಾರೆ. ಆ ಚಿತ್ರಗಳು ಮೂರು ನಾಲ್ಕು ವಾರ ಪ್ರದರ್ಶನ ಕಾಣುತ್ತವೆ. ಇದೇ ಚಿತ್ರ ತೆಲುಗು ಮತ್ತು ತಮಿಳಿನಲ್ಲಿ ಬಂದಿದ್ದರೆ ನಾಲ್ಕು ಐದು ವಾರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿತ್ತು. ಆದರೆ ಕನ್ನಡದಲ್ಲಿ ರಿಲೀಸ್ ಆದರೆ ಜನ ನೋಡುವುದಿಲ್ಲ ಕನ್ನಡ ಚಿತ್ರ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಈ ಚಿತ್ರ ಗೆಲ್ಲಬೇಕು ಅದಕ್ಕೆ ನೀವು ಸಹಾಯ ಮಾಡಬೇಕು ಎಂದು ರಘು ದೀಕ್ಷಿತ್ ಕೇಳಿಕೊಂಡಿದ್ದಾರೆ.