Tag: ನವಜಾತ ಶಿಶುಗಳು

  • ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!

    ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!

    ದಾವಣಗೆರೆ: ನಾಲ್ಕೈದು ಜಿಲ್ಲೆಗಳ ಜೀವನಾಡಿಯಾಗಿರುವ ದಾವಣಗೆರೆ ಜಿಲ್ಲಾಸ್ಪತ್ರೆ (Davanagere District Hospital) ಇದೀಗ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 7 ತಿಂಗಳಲ್ಲಿ ನೂರಾರು ನವಜಾತ ಶಿಶುಗಳು ಹಾಗೂ ಗರ್ಭಿಣಿಯರು ಸಾವನ್ನಪ್ಪಿದ್ದಾರೆ.

    Davanagere Hospital 1

    ದಾವಣಗೆರೆ (Davanagere) ಜಿಲ್ಲಾಸ್ಪತ್ರೆ ಎಂದರೆ ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳ ಸಾವಿರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿದೆ ಎನ್ನುವ ಆತಂಕಕಾರಿ ವರದಿ ಕೇಳಿ ಬಂದಿದೆ. ಇದನ್ನೂ ಕೇಳಿದ ಆರೋಗ್ಯ ಸಚಿವರೇ ನಿಬ್ಬೆರಗಾಗಿದ್ದಾರೆ.

    ಹೌದು, ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 135 ನವಜಾತ ಶಿಶುಗಳು 28 ಗರ್ಭಿಣಿಯರು ಸಾವನ್ನಪ್ಪಿರುವ ವರದಿಯಾಗಿದೆ. ಅದರಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಐದು ಸಾವಾಗಿದ್ದರೆ, ಇನ್ನುಳಿದವರು ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದೆ. ಇದರಿಂದ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮುಂಚಿತವಾಗಿ ಗರ್ಭಿಣಿಯರನ್ನು ಕಳಿಸುವಂತೆ ಸೂಚನೆ ನೀಡಲಾಗಿದೆ.

    Davanagere Hospital

    ಇನ್ನೂ ಜಿಲ್ಲೆಯ ಪ್ರಾಥಮಿಕ ಹಾಗು ತಾಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾವಹಿಸುವಂತೆ ಡಿಹೆಚ್‌ಓ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಸಾವಿನ ಪ್ರಮಾಣ ಕಡಿಮೆ ಮಾಡಲು ಅಭಿಯಾನವನ್ನೇ ಹಮ್ಮಿಕೊಂಡಿದ್ದು, ಜಿಲ್ಲಾಸ್ಪತ್ರೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಕೂಡ ಹೆಚ್ಚಿದೆ. ಅಲ್ಲದೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಸಿಜೇರಿಯನ್ ಡೆಲಿವರಿಗಳು ಶೇ.75ರಷ್ಟು ಜಾಸ್ತಿ ಇದೆ. ಅದರ ಬಗ್ಗೆ ಕ್ರಮ ವಹಿಸುವಂತೆ ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    ಒಟ್ಟಾರೆ ಕಳೆದ 7 ತಿಂಗಳಲ್ಲಿ ಗರ್ಭಿಣಿಯರ ಹಾಗೂ ನವಜಾತ ಶಿಶುಗಳ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಇದರ ಬಗ್ಗೆ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಅಲ್ಲದೆ ಜಿಲ್ಲಾಸ್ಪತ್ರೆಯಲ್ಲಿ ಸರ್ಕಾರ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಿದರೆ ಬಡ ರೋಗಿಗಳ ಜೀವ ಉಳಿಸಿದಂತಾಗುತ್ತದೆ.

  • 7 ನವಜಾತ ಶಿಶುಗಳ ಸಾವು ಪ್ರಕರಣ; ಆಸ್ಪತ್ರೆಯ ಮಾಲೀಕ, ವೈದ್ಯ ಅರೆಸ್ಟ್‌

    7 ನವಜಾತ ಶಿಶುಗಳ ಸಾವು ಪ್ರಕರಣ; ಆಸ್ಪತ್ರೆಯ ಮಾಲೀಕ, ವೈದ್ಯ ಅರೆಸ್ಟ್‌

    ನವದೆಹಲಿ: ಇಲ್ಲಿನ ಆಸ್ಪತ್ರೆಯೊಂದರಲ್ಲಿ (Delhi Hospital) ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು (Newborn Babies) ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಬಂಧಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಪರಾರಿಯಾಗಿದ್ದರು. ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ

    6 newborns killed in massive fire at Delhi childrens hospital

    ಎರಡು ಅಂತಸ್ತಿನ ಕಟ್ಟಡದಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಲೇನ್ ಕಿರಿದಾಗಿದ್ದು, ಓವರ್ ಹೆಡ್ ತಂತಿಗಳಿಂದ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಗ್ನಿಶಾಮಕ ದಳದವರು ಸವಾಲುಗಳನ್ನು ಎದುರಿಸಿದರು.

    ನಾವು ಎದುರಿಸಿದ ಮತ್ತೊಂದು ಸವಾಲೆಂದರೆ ಯಾವುದೇ ನೀರಿನ ಮೂಲವಿರಲಿಲ್ಲ. ನೇತಾಡುತ್ತಿದ್ದ ವಿದ್ಯುತ್ ತಂತಿಗಳು ದೊಡ್ಡ ಸಮಸ್ಯೆಯಾಗಿದ್ದವು ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಆಯೋಗದ ತಂಡವು ಆಸ್ಪತ್ರೆಗೆ ಭೇಟಿ ನೀಡಲಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆಯಿಂದ ಯುವಕರಿಗೆ 100% ಉದ್ಯೋಗವಕಾಶ: ಅನುರಾಗ್ ಠಾಕೂರ್

    ಮಕ್ಕಳ ಆಸ್ಪತ್ರೆಗೆ ಭಾರೀ ಬೆಂಕಿ ಹೊತ್ತಿಕೊಂಡಿರುವುದನ್ನು ಕಂಡ ಜನರು ಕಾಂಪೌಂಡ್ ಗೋಡೆ ಹತ್ತಿ ಧಾವಿಸಿದ್ದರು. ನವಜಾತ ಶಿಶುಗಳನ್ನು ರಕ್ಷಿಸಲು ಕಟ್ಟಡದ ಹಿಂಭಾಗದಿಂದ ಹತ್ತಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

  • ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಕಾಲು ಕಚ್ಚಿ ತಿಂದ ಇಲಿಗಳು..!

    ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಕಾಲು ಕಚ್ಚಿ ತಿಂದ ಇಲಿಗಳು..!

    – ತನಿಖೆಗೆ ಆಡಳಿತ ಮಂಡಳಿ ಆದೇಶ

    ಭೋಪಾಲ್: ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆಗೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.

    rat

    ಈ ಸಂಬಂಧ ಆಸ್ಪತ್ರೆಯ ಅಧೀಕ್ಷಕ ಡಾ. ಪ್ರಮೇಂದ್ರ ಠಾಕೂರ್ ಪ್ರತಿಕ್ರಿಯಿಸಿ, ಸರ್ಕಾರದ ಅಧೀನದಲ್ಲಿರುವ ಮಹಾರಾಜ ಯಶವಂತರಾವ್(ಎಂವೈ) ಆಸ್ಪತ್ರೆಯಲ್ಲಿ ಇಲಿಗಳು ನವಜಾತ ಶಿಶುಗಳ ಕಾಲುಗಳನ್ನು ಕಚ್ಚಿ ತಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಆದರೆ ಹೆಚ್ಚಿನ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ. ಈ ಸಂಬಂಧ ತನಿಖೆ ಮಾಡುವುದಾಗಿ ಠಾಕೂರ್ ಹೇಳಿದ್ದಾರೆ.

    ಇಬ್ಬರು ವೈದ್ಯರು ಮತ್ತು ಆಡಳಿತಾಧಿಕಾರಿಯನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಠಾಕೂರ್ ತಿಳಿಸಿದ್ದಾರೆ.

    baby 2 1

  • ಸರ್ಕಾರಿ ನರ್ಸ್ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ- ಇದು ರಾಜ್ಯವನ್ನೇ ಬೆಚ್ಚಿಬೀಳಿಸುವ ದಂಧೆ

    ಸರ್ಕಾರಿ ನರ್ಸ್ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ- ಇದು ರಾಜ್ಯವನ್ನೇ ಬೆಚ್ಚಿಬೀಳಿಸುವ ದಂಧೆ

    ಕಲಬುರಗಿ: ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಇನ್ನೂ ಇದೆಯಾ ಎಂಬ ಪ್ರಶ್ನೆ ಇದೀಗ ಮತ್ತೆ ಶುರುವಾಗಿದೆ. ಯಾಕಂದ್ರೆ ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದ ಪಿಎಚ್‍ಸಿ ಕೇಂದ್ರದ ಸ್ಟಾಫ್ ನರ್ಸ್ ಕವಿತಾ ಮನೆಯಲ್ಲಿ ಎರಡು ನವಜಾತ ಅವಳಿ-ಜವಳಿ ಹೆಣ್ಣು ಶಿಶುಗಳು ಪತ್ತೆಯಾಗಿವೆ.

    NURSE2

    ಮದುವೆಯಾಗಿ 15 ವರ್ಷ ಕಳೆದಿದ್ದರೂ ಕವಿತಾ ಅವರಿಗೆ ಮಕ್ಕಳಾಗಿಲ್ಲ. ಹೀಗಾಗಿ ಈ ಎರಡು ಶಿಶುಗಳನ್ನು ಖರೀದಿಸಿ ಸಾಕುತ್ತಿದ್ದಾರೆ ಎಂಬ ಮಾಹಿತಿಯಿದೆ. ಆದ್ರೆ ಈ ಶಿಶುಗಳನ್ನು ಎಲ್ಲಿಂದ ತರಲಾಯಿತ್ತು? ಎಷ್ಟು ಹಣ ಕೊಟ್ಟು ಖರೀದಿಸಿದ್ದರು ಎಂಬ ಹತ್ತು ಹಲವು ಪ್ರಶ್ನೆ ಇದೀಗ ಎದುರಾಗಿದೆ.

    NURSE 1

    ಮಕ್ಕಳ ಮಾರಾಟ ಶಂಕೆ ಹಿನ್ನಲೆಯಲ್ಲಿ ಚೈಲ್ಡ್ ಲೈನ್‍ಗೆ ಅನಾಮಧೆಯ ಕರೆ ಬಂದಿತ್ತು. ಕರೆ ಸ್ವೀಕರಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಮಕ್ಕಳ ರಕ್ಷಣೆ ಮಾಡಿದ್ದಾರೆ.

    NURSE 3

    ಹಲವು ವರ್ಷಗಳಿಂದ ಮಕ್ಕಳಾಗದ ಹಿನ್ನಲೆಯಲ್ಲಿ ಶಿಶುಗಳನ್ನ ತಂದಿಟ್ಟುಕೊಂಡಿರುವುದಾಗಿ ನರ್ಸ್ ಹೇಳಿಕೆ ನೀಡಿದ್ದರು. ಆದರೆ ಅಧಿಕಾರಿಗಳ ವಿಚಾರಣೆ ವೇಳೆ ನರ್ಸ್ ತದ್ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಒಮ್ಮೆ ಬೀದರ್‍ನಿಂದ ಮತ್ತೊಮ್ಮೆ ವಿಜಯಪುರದಿಂದ ಶಿಶುಗಳನ್ನ ತಂದಿರುವುದಾಗಿ ಹೇಳಿದ್ದಾರೆ. ನರ್ಸ್ ನ  ತದ್ವಿರುದ್ಧ ಹೇಳಿಕೆಯಿಂದ ಅಧಿಕಾರಿಗಳಿಗೆ ಅನುಮಾನ ಮೂಡಿದೆ.

    NURSE 2

    ಗಡಿ ಜಿಲ್ಲೆಗಳಲ್ಲಿ ಮಕ್ಕಳ ಮಾರಾಟ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಶಿಶುಗಳನ್ನ ಕಲಬುರಗಿಯ ಅಮುಲ್ಯ ಶಿಶುಗೃಹಕ್ಕೆ ಹಸ್ತಾಂತರ ಮಾಡಲಾಗಿದೆ. ಶಹಬಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    NURSE 4