Tag: ನಿತೀಶ್ ರಾಣಾ

  • ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

    ಸಿಕ್ಸ್‌ ಮೇಲೆ ಸಿಕ್ಸ್‌, ನೋಟ್‌ಬುಕ್ ಸ್ಟೈಲ್‌ ಸಂಭ್ರಮಾಚರಣೆ – ರಾಥಿಯನ್ನು ಬೆಂಡೆತ್ತಿ ಕಿಚಾಯಿಸಿದ ರಾಣಾ

    ನವದೆಹಲಿ: ದೆಹಲಿ ಪ್ರೀಮಿಯರ್‌ ಲೀಗ್‌ (Delhi Premier League) ಕ್ರಿಕೆಟಿನಲ್ಲಿ ಡೆಲ್ಲಿ ಸೂಪರ್‌ಸ್ಟಾರ್‌ ತಂಡದ ದಿಗ್ವೇಶ್‌ ರಾಥಿ (Digvesh Rathi) ಮತ್ತು ಡೆಲ್ಲಿ ಲಯನ್ಸ್‌ ತಂಡದ ನಾಯಕ ನಿತೀಶ್‌ ರಾಣಾ (Nitish Rana) ಪರಸ್ಪರ ಜಗಳಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದೆ.

    10ನೇ ಓವರ್‌ ಎಸೆಯುವಾಗ ನಿತೀಶ್‌ ರಾಣಾ ಕ್ರೀಸ್‌ನಲ್ಲಿ ಇದ್ದರು. ಈ ವೇಳೆ ರಾಥಿ ಬೌಲಿಂಗ್‌ ಮಾಡಲು ಓಡಿ ಬಂದಿದ್ದರೂ ಬಾಲ್‌ ಎಸೆಯಲಿಲ್ಲ. ಇದಕ್ಕೆ ಸಿಟ್ಟಾದ ರಾಣಾ ರಾಥಿ ಮತ್ತೊಮ್ಮೆ ಬಾಲ್‌ ಎಸೆಯಲು  ಬಂದಾಗ ಕೈ ಎತ್ತಿ ತಡೆದು ಬೌಲಿಂಗ್‌ ನಿಲ್ಲಿಸಿದರು. ನಂತರ ಎಸೆತವನ್ನು ರಿವರ್ಸ್‌ ಸ್ವೀಪ್‌ ಮೂಲಕ ಸಿಕ್ಸ್‌ಗೆ ಅಟ್ಟಿದರು.

    ಈ ಬೆನ್ನಲ್ಲೇ ರಾಣಾ ಅವರು ರಾಥಿ ಸ್ಟೈಲ್‌ನಲ್ಲಿ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿ ಕಿಚಾಯಿಸಿದರು. ಇದಕ್ಕೆ ರಾಥಿ ಸಿಟ್ಟಾಗಿ ಏನೋ ಹೇಳಿದ್ದಾರೆ. ರಾಥಿ ಮಾತಿಗೆ ಕೋಪಗೋಂಡ ರಾಣಾ ಜಗಳ ಮಾಡುತ್ತಾ ರಾಥಿ ಹತ್ತಿರ ಬಂದರು. ಈ ಸಮಯದಲ್ಲಿ ಉಳಿದ ಆಟಗಾರರು ಮತ್ತು ಅಂಪೈರ್‌ ಮಧ್ಯಪ್ರವೇಶಿಸಿ ರಾಣಾ ಅವರನ್ನು ತಡೆದರು. ಇದನ್ನೂ ಓದಿ: ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ನಿತೀಶ್‌ ರಾಣಾ ಅವರ ಅಜೇಯ ಶತಕ 134 ರನ್‌(55 ಎಸೆತ, 8 ಬೌಂಡರಿ, 15 ಸಿಕ್ಸ್‌) ನೆರವಿನಿಂದ ಡೆಲ್ಲಿ ಲಯನ್ಸ್‌ 3 ವಿಕೆಟ್‌ ನಷ್ಟಕ್ಕೆ 202 ರನ್‌ ಹೊಡೆದು 7 ವಿಕೆಟ್‌ಗಳ ಜಯ ಸಾಧಿಸಿತು. ಅದರಲ್ಲೂ ದಿಗ್ವೇಶ್‌ ರಾಥಿ ಎಸೆದ 11 ಎಸೆತದಲ್ಲಿ ರಾಣಾ 38 ರನ್‌ ಹೊಡೆದು ಬೆಂಡೆತ್ತಿದ್ದರು. ಇದನ್ನೂ ಓದಿ: 5 ಎಸೆತಗಳಲ್ಲಿ 5 ವಿಕೆಟ್ ಮತ್ತೆ ದಿಗ್ವೇಶ್‌ ರಾಥಿ ಕಮಾಲ್‌

    26 ವರ್ಷದ ದಿಗ್ವೇಶ್‌ ಈ ಬಾರಿಯ ಐಪಿಎಲ್‌ನಲ್ಲಿ ಕಮಾಲ್‌ ಮಾಡಿದ್ದರು. 13 ಪಂದ್ಯಗಳಲ್ಲಿ 14 ವಿಕೆಟ್‌ ಪಡೆದು ಮಿಂಚಿದ್ದರು. ಚೊಚ್ಚಲ ಐಪಿಎಲ್‌ ಆವೃತ್ತಿಯಲ್ಲಿ ಉದ್ಧಟತನ ತೋರಿದ್ದಕ್ಕೆ ದಿಗ್ವೇಶ್ ಅವರನ್ನು ಅಮಾನತು ಮಾಡಲಾಗಿತ್ತು. ವಿಕೆಟ್‌ ಪಡೆದ ನಂತರ ನೋಟ್‌ಬುಕ್ ಸಂಭ್ರಮಾಚರಣೆ ಮಾಡಿದ್ದಕ್ಕಾಗಿ ರಾಥಿ ಅವರಿಗೆ ದಂಡ ವಿಧಿಸಲಾಗಿತ್ತು.

  • ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಲಕ್ನೋ: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ ಸಿಕ್ಸರ್‌, ಬೌಂಡರಿ ಆಟದ ಹೊರತಾಗಿಯೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಕೆಕೆಆರ್‌ ವಿರುದ್ಧ 1 ರನ್‌ ರೋಚಕ ಜಯ ಸಾಧಿಸಿದೆ. ಈ ಮೂಲಕ ಲಕ್ನೋ ತಂಡ ಪ್ಲೆ ಆಫ್‌ಗೆ ಹಾರಿದೆ. ಕೆಕೆಆರ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    14ರ ಪೈಕಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು +0284 ರನ್‌ ರೇಟ್‌ನೊಂದಿಗೆ 17 ಅಂಕ ಪಡೆದು 3ನೇ ಸ್ಥಾನ ಪಡೆದುಕೊಂಡಿದೆ.

    KKRvsLSG 2

    ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿ 1 ರನ್‌ ನಿಂದ ವಿರೋಚಿತ ಸೋಲನುಭವಿಸಿತು.

    KKRvsLSG 1

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಉತ್ತಮ ಆರಂಭ ಪಡೆದರೂ ಬಳಿಕ ಕೆಕೆಆರ್‌ ಬೌಲಿಂಗ್‌ ದಾಳಿಗೆ ತತ್ತರಿಸಿತು. ಮೊದಲ ವಿಕೆಟ್‌ ಪತನಕ್ಕೆ ಜೇಸನ್‌ ರಾಯ್‌, ವೆಂಕಟೇಶ್‌ ಅಯ್ಯರ್‌ ಜೋಡಿ 5.5 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಅಯ್ಯರ್‌ 24 ರನ್‌, ಜೇಸನ್‌ ರಾಯ್‌ 28 ಎಸೆತಗಳಲ್ಲಿ 45 ರನ್‌ ಗಳಿಸಿದರು. ಬಳಿಕ ನಿತೀಶ್‌ ರಾಣಾ, ರಹ್ಮದ್ದುಲ್ಲಾ ಗುರ್ಭಜ್‌ 10 ರನ್‌, ರಸ್ಸೆಲ್‌ 7 ರನ್‌ ಗಳಿಸಿ ಕೈಚೆಲ್ಲಿದರು. ಕೊನೆಯಲ್ಲಿ ರಿಂಕು ಸಿಂಗ್‌ ಹೋರಾಟ ಅರ್ಧ ಶತಕದ ಹೋರಾಟ ನಡೆಸಿದರೂ ತಂಡ ವಿರೋಚಿತ ಸೋಲಿಗೆ ಗುರಿಯಾಯಿತು. ರಿಂಕು ಸಿಂಗ್‌ 33 ಎಸೆತಗಳಲ್ಲಿ ಭರ್ಜರಿ 67 ರನ್‌ (6 ಬೌಂಡರಿ, 4 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

    KKRvsLSG 4

    ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟ ಎದುರಿಸಿತ್ತು. ಕ್ವಿಂಟನ್‌ ಡಿ ಕಾಕ್‌ 28 ರನ್‌ (27 ಎಸೆತ, 2 ಸಿಕ್ಸರ್‌), ಪ್ರೇರಕ್‌ ಮಂಕದ್‌ 26 ರನ್‌ (20 ಎಸೆತ, 5 ಬೌಂಡರಿ) ಗಳಿದರೂ, ನಿಧಾನಗತಿಯ ಬ್ಯಾಟಿಂಗ್‌ನಿಂದ ತಂಡ ಕಡಿಮೆ ರನ್‌ ದಾಖಲಿಸಿತ್ತು. ಮೊದಲ 10 ಓವರ್‌ಗಳಲ್ಲಿ 73 ರನ್‌ ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡಿತ್ತು. ನಂತರ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಿಕೋಲಸ್‌ ಪೂರನ್‌ ಭರ್ಜರಿ ಅರ್ಧಶತಕದ ಬ್ಯಾಟಿಂಗ್‌ನಿಂದ ತಂಡ 170ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    KKRvsLSG 3

    ಲಕ್ನೋ ತಂಡದ ಪರ ಡಿಕಾಕ್‌ 28 ರನ್‌, ಮಂಕದ್‌ 26 ರನ್‌, ಆಯುಷ್‌ ಬದೋನಿ 25 ರನ್‌ ಗಳಿಸಿದರೆ ನಿಕೋಲಸ್‌ ಪೂರನ್‌ 58 ರನ್‌ (30 ಎಸೆತ, 5 ಸಿಕ್ಸರ್‌, 4 ಬೌಂಡರಿ) ಚಚ್ಚಿದರು.

    KKRvsLSG 6

    ಕೆಕೆಆರ್‌ ವೈಭವ್‌ ಅರೋರಾ, ಶಾರ್ದೂಲ್‌ ಠಾಕೂರ್‌, ಸುನೀಲ್‌ ನರೇನ್‌ ತಲಾ 2 ವಿಕೆಟ್‌ ಕಿತ್ತರೆ, ಪರ ಹರ್ಷಿತ್‌ ರಾಣಾ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಬಿಗ್‌ ಹಿಂಟ್‌ ಕೊಟ್ಟ ಮಹಿ

    ನಿವೃತ್ತಿಯ ಬಗ್ಗೆ ಮತ್ತೊಮ್ಮೆ ಬಿಗ್‌ ಹಿಂಟ್‌ ಕೊಟ್ಟ ಮಹಿ

    ಚೆನ್ನೈ: ಸಿಎಸ್‌ಕೆ (CSK) ತಂಡದ ನಾಯಕ ಎಂ.ಎಸ್‌ ಧೋನಿ (MS Dhoni) ಭಾನುವಾರ‌ ನಡೆದ ಪಂದ್ಯದ ಬಳಿಕ ತಮ್ಮ ನಿವೃತ್ತಿಯ ಬಗ್ಗೆ ದೊಡ್ಡ ಹಿಂಟ್‌ ಕೊಟ್ಟಿದ್ದಾರೆ. ಈಗಾಗಲೇ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ಗುಡ್‌ಬೈ ಹೇಳಿರುವ ಮಹಿ ಪಾಲಿಗೆ ಈ ಬಾರಿಯ ಐಪಿಎಲ್‌ (IPL 2023) ಕೊನೆಯ ಟೂರ್ನಿಯಾಗಿದೆ.

    MS Dhoni 3

    ಭಾನುವಾರ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ನಡೆದ ಪಂದ್ಯದ ಬಳಿಕ ಚೆಪಾಕ್‌ನ ತವರು ಮೈದಾನದಲ್ಲಿ ನಡೆದ ಕೊನೆಯ ಪಂದ್ಯದ ಬಳಿಕ ವಿಶೇಷ ಲ್ಯಾಪ್ ಆಫ್ ಗೌರವ ಸಲ್ಲಿಸಲಾಯಿತು. ಚೆನ್ನೈ ತಂಡಕ್ಕಾಗಿ ಅನೇಕ ವರ್ಷಗಳಿಂದ ತನಗೆ ಮತ್ತು ತಂಡಕ್ಕೆ ನೀಡಿದ ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ರಿಂಕು, ರಾಣಾ ಬ್ಯಾಟಿಂಗ್‌ ಕಮಾಲ್‌ – ಕೋಲ್ಕತ್ತಾಗೆ 6 ವಿಕೆಟ್‌ಗಳ ಭರ್ಜರಿ ಜಯ

    MS Dhoni 1

    ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಚೆನ್ನೈ ಸೋತರೂ ಮೈದಾನದ ಸುತ್ತಲೂ ಹೋಗುವಾಗ ನಗುಮುಖದಿಂದಲೇ ಲ್ಯಾಕ್‌ಆಫ್‌ ಮಾಡಿದರು. ಇದೇ ವೇಳೆ ಅಭಿಮಾನಿಗಳಿಗೆ ಚೆಂಡು ಹಾಗೂ ಚೆನ್ನೈ ಜೆರ್ಸಿಯನ್ನು ಗಿಫ್ಟ್‌ ಮಾಡಿ, ತವರು ಮೈದಾನದಿಂದ ಹೊರನಡೆದರು. ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೆ ಆಫ್‌ ಪ್ರವೇಶಿಸಿದರೆ, ಮತ್ತೊಮ್ಮೆ ತವರಿಗೆ ಮರಳು ಸಾಧ್ಯತೆಗಳಿವೆ. ಇದನ್ನೂ ಓದಿ: 59 ರನ್‌ಗಳಿಗೆ ರಾಜಸ್ಥಾನ್‌ ಆಲೌಟ್‌ – RCBಗೆ 112 ರನ್‌ಗಳ ಭರ್ಜರಿ ಜಯ – ಪ್ಲೆ ಆಫ್‌ ಕನಸು ಜೀವಂತ

    MS Dhoni 4

    ಚೆನ್ನೈ 13 ರಲ್ಲಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ +0.381 ರನ್‌ರೇಟ್‌ನೊಂದಿಗೆ 15 ಅಂಕ ಪಡೆದು 2ನೇ ಸ್ಥಾನದಲ್ಲಿದೆ. 3 ಮತ್ತು 4ನೇ ಸ್ಥಾನದಲ್ಲಿ ಮುಂಬೈ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಕ್ರಮವಾಗಿ ಸ್ಥಾನ ಪಡೆದಿವೆ. ನಂತರದ ಸ್ಥಾನಗಳಲ್ಲಿ ಆರ್‌ಸಿಬಿ, ರಾಜಸ್ಥಾನ್‌ ರಾಯಲ್ಸ್‌, ಕೆಕೆಆರ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳೂ ಸಹ ಪ್ಲೆ ಆಫ್‌ ಹಾದಿಯಲ್ಲಿ ಪೈಪೋಟಿಗೆ ಬಿದ್ದಿವೆ.

    ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ 6 ವಿಕೆಟ್‌ ನಷ್ಟಕ್ಕೆ 144 ರನ್‌ ಗಳಿಸಿತ್ತು. 145 ರನ್‌ ಅಲ್ಪ ಮೊತ್ತದ ಗುರಿ ಪಡೆದ ಕೋಲ್ಕತ್ತಾ ನೈಟ್‌ರೈಡರ್ಸ್‌ 18.3 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿ ಗೆಲುವು ಸಾಧಿಸಿತು.

  • ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

    ನವದೆಹಲಿ: ಕೆಕೆಆರ್ (KKR) ತಂಡದ ಕ್ರಿಕೆಟಿಗ ನಿತೀಶ್ ರಾಣಾ (Nitish Rana)ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿ ಪೊಲೀಸರು (Delhi Police) ಓರ್ವನನ್ನು ಬಂಧಿಸಿದ್ದಾರೆ.

    KILLING CRIME

    ರಾಣಾ ಅವರ ಪತ್ನಿ ಸಾಚಿ ಮಾರ್ವಾ (Saachi Marwah) ಅವರು ದೆಹಲಿಯ ಕೀರ್ತಿ ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾರೆ. ಕೃತ್ಯವನ್ನು ಮುರ್ವಾ ಅವರು ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ನಾನು ಪೊಲೀಸರಿಗೆ ಫೋನ್‍ನಲ್ಲಿ ಮಾಹಿತಿ ನೀಡಿದಾಗ, ಸುರಕ್ಷಿತವಾಗಿ ಮನೆ ತಲುಪಿದ್ದೀರಾ? ಹೋಗಲಿ ಬಿಡಿ, ಮುಂದಿನ ಬಾರಿ ಇದೇ ರೀತಿ ನಡೆದರೆ ನಂಬರ್ ನೋಟ್ ಮಾಡಿಕೊಳ್ಳುವಂತೆ ಹೇಳಿದರು. ಅದಕ್ಕೆ ಪ್ರತಿಯಾಗಿ ಮಾರ್ವಾ ಅವರು ಮುಂದಿನ ಬಾರಿ ಅವರ ಫೋನ್ ನಂಬರ್‌ಗಳನ್ನು ತೆಗೆದುಕೊಳ್ಳುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.

    ಮಾರ್ವಾ ಅವರು ಆರ್ಕಿಟೆಕ್ಚರಲ್ ಡಿಸೈನರ್ ಆಗಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯಾಗಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

  • ತವರಿನಲ್ಲಿ ಸೇಡು ತೀರಿಸಿಕೊಳ್ಳಲು RCB ಕಾತರ – ಆದ್ರೆ KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ

    ತವರಿನಲ್ಲಿ ಸೇಡು ತೀರಿಸಿಕೊಳ್ಳಲು RCB ಕಾತರ – ಆದ್ರೆ KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ

    ಬೆಂಗಳೂರು: ಕಳೆದ ಬಾರಿ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌ (KKR) ವಿರುದ್ಧ 81 ರನ್‌ಗಳಿಂದ ಹೀನಾಯವಾಗಿ ಸೋತಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಇಂದು (ಏ.26) ತವರಿನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ.

    Shardul Thakur

    31 ಪಂದ್ಯಗಳಲ್ಲಿ ಮುಖಾಮುಖಿಯಾಗಿರುವ ಇತ್ತಂಡಗಳ ಪೈಕಿ ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೆಕೆಆರ್‌ 17 ಪಂದ್ಯಗಳಲ್ಲಿ ಜಯಗಳಿಸಿದೆ. 2023ರ ಆವೃತ್ತಿಯಲ್ಲಿ 7 ಪಂದ್ಯಗಳನ್ನಾಡಿರುವ ಆರ್‌ಸಿಬಿ 4 ರಲ್ಲಿ ಗೆದ್ದು, 8 ಅಂಕಗಳೊಂದಿಗೆ ಪ್ಲೆ ಆಫ್‌ ಕನಸು ಜೀವಂತವಿರಿಸಿಕೊಂಡಿದೆ. ಆದರೆ 7 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದು 4 ಅಂಕ ಗಳಿಸಿರುವ ಕೆಕೆಆರ್‌ ಪ್ಲೆ ಆಫ್‌ ಹಾದಿ ಕಠಿಣವಾಗಿಸಿಕೊಂಡಿದೆ. ಉಳಿದ 7 ಪಂದ್ಯಗಳಲ್ಲಿ ಕನಿಷ್ಠ 6 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇದನ್ನೂ ಓದಿ: IPL 2023: ಶಾರ್ದೂಲ್‌ ಬೆಂಕಿ ಬ್ಯಾಟಿಂಗ್‌, ವರುಣ್ ಮಿಂಚಿನ ಬೌಲಿಂಗ್‌ – RCBಗೆ ಹೀನಾಯ ಸೋಲು

    IPL 2023 RCB VS KKR 5

    KGF ಬಿಟ್ರೆ ಬ್ಯಾಟಿಂಗ್‌ನದ್ದೇ ಚಿಂತೆ:
    ಆರ್‌ಸಿಬಿ ತಂಡ 7 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್‌ ಗಳಿಸಿದೆ. ಅದರಲ್ಲೂ ಸಿಎಸ್‌ಕೆ (CSK) ವಿರುದ್ಧ ನಡೆದ ಪಂದ್ಯದಲ್ಲಿ ಚೇಸಿಂಗ್‌ನಲ್ಲಿ 218 ರನ್‌ ಸಿಡಿಸಿದ್ದು ವಿಶೇಷ. ಆದ್ರೆ ಆರ್‌ಸಿಬಿ ಪ್ರತಿ ಇನ್ನಿಂಗ್ಸ್‌ನಲ್ಲೂ KGF (ವಿರಾಟ್‌ ಕೊಹ್ಲಿ (Virat Kohli), ಗ್ಲೇನ್‌ ಮ್ಯಾಕ್ಸ್‌ವೆಲ್‌ ಹಾಗೂ ಫಾಫ್‌ ಡು ಪ್ಲೆಸಿಸ್‌) (Faf du Plessis) ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದಾರೆ. ಈ ಮೂವರನ್ನ ಬಿಟ್ಟರೆ, ಮಧ್ಯಮ ಕ್ರಮಾಂಕದಲ್ಲಿ ಸಂಪೂರ್ಣ ಬ್ಯಾಟಿಂಗ್‌ ವೈಫಲ್ಯ ಎದುರಿಸಬೇಕಾಗಿದೆ. ಕಳೆದ ಸೀಜನ್‌ನಲ್ಲಿ ಆರ್‌ಸಿಬಿ ಪರ ಅಬ್ಬರಿಸಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ತಂಡದಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡಿದ್ದ ದಿನೇಶ್‌ ಕಾರ್ತಿಕ್‌ ಕಳಪೆ ಫಾರ್ಮ್‌ನಿಂದ ಟೀಕೆಗೆ ಗುರಿಯಾಗಿದ್ದಾರೆ.

    IPL 2023 RCB VS KKR 7

    ಇನ್ನೂ ಪ್ರತಿ ಪಂದ್ಯದಲ್ಲೂ ಆರಂಭಿಕರ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿರುವ ಕೆಕೆಆರ್‌ ಉತ್ತಮ ಸ್ಕೋರ್‌ ಗಳಿಸುತ್ತಿದೆಯಾದರೂ ಪಂದ್ಯ ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಈ ಪಂದ್ಯ ಇತ್ತಂಡಗಳಿಗೂ ನಿರ್ಣಾಯಕವಾಗಿದ್ದು, ಜಯ ಯಾರ ಪಾಲಿಕೆ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    IPL 2023 RCB VS KKR 4

    ಈಡನ್‌ ಗಾರ್ಡನ್‌ ಅಂಗಳದಲ್ಲಿ ಕಳೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 204‌ ರನ್‌ ಗಳಿಸಿತ್ತು. 205 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಕಳಪೆ ಬ್ಯಾಟಿಂಗ್‌ನಿಂದ 17.4 ಓವರ್‌ಗಳಲ್ಲೇ 123 ರನ್‌ಗಳಿಗೆ ಸರ್ವಪತನ ಕಂಡಿತ್ತು.

  • ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    ರಂಗೇರಿಸಿದ ರಹಾನೆ, ಧೂಳೆಬ್ಬಿಸಿದ ದುಬೆ – ಚೆನ್ನೈ ಸೂಪರ್‌ ಕಿಂಗ್ಸ್‌ಗೆ 49 ರನ್‌ಗಳ ಭರ್ಜರಿ ಜಯ

    – ರನ್‌ ಹೊಳೆಯಲ್ಲಿ ತೇಲಾಡಿದ ಕಿಂಗ್ಸ್‌

    ಕೋಲ್ಕತ್ತಾ: ಅಜಿಂಕ್ಯಾ ರಹಾನೆ (Ajinkya Rahane), ಶಿವಂ ದುಬೆ (Shivam Dube), ಡಿವೋನ್‌ ಕಾನ್ವೆ (Devon Conway) ಭರ್ಜರಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ 49 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    KKRvsCSK 5

    ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು 20 ಓವರ್‌ಗಳಲ್ಲಿ ಭರ್ಜರಿ 235 ರನ್‌ ಸಿಡಿಸಿತ್ತು. 236 ರನ್‌ಗಳ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    KKRvsCSK

    ಚೇಸಿಂಗ್‌ ಆರಂಭಿಸಿದ ಕೆಕೆಆರ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನ ಕಳೆದುಕೊಂಡಿತ್ತು. ನಾರಾಯಣ್‌ ಜಗದೀಶನ್‌ 1 ರನ್‌ ಗಳಿಸಿದರೆ, ಸುನೀಲ್‌ ನರೇನ್‌ ಶೂನ್ಯ ಸುತ್ತಿದರು. ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ವೆಂಕಟೇಶ್‌ ಅಯ್ಯರ್‌ (Venkatesh Iyer) ಕೇವಲ 20 ರನ್‌, ನಾಯಕ ನಿತೀಶ್‌ ರಾಣಾ 27 ರನ್‌ ಗಳಿಸಿ ವಿಕೆಟ್‌ ಕೈಚೆಲ್ಲಿದರು. ಇದರಿಂದ ತಂಡಕ್ಕೆ ಸೋಲು ಖಚಿತವಾಗಿತ್ತು. ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಭರ್ಜರಿ ಫಿಫ್ಟಿ; ಬೆಂಗ್ಳೂರಿನಲ್ಲಿ RCB ʻಹಸಿರು ಕ್ರಾಂತಿʼ- ರಾಯಲ್ಸ್‌ ವಿರುದ್ಧ 7 ರನ್‌ ರೋಚಕ ಜಯ

    KKRvsCSK 7

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಜೋಡಿ 37 ಎಸೆತಗಳಲ್ಲಿ 65 ರನ್‌ ಸಿಡಿಸಿತ್ತು. ಇವರಿಬ್ಬರ ಸ್ಫೋಟಕ ಬ್ಯಾಟಿಂಗ್‌ನಿಂದ ತಂಡ ಚೇತರಿಕೆ ಕಂಡಿತ್ತು. ಆದರೆ ಜೇಸನ್‌ ರಾಯ್‌ (Jason Roy) ಔಟಾಗುತ್ತಿದ್ದಂತೆ ರನ್‌ ವೇಗವೂ ಕಡಿಮೆಯಾಯಿತು. ರಿಂಕು ಸಿಂಗ್‌ ಏಕಾಂಗಿ ಹೋರಾಟ ನಡೆಸಬೇಕಾಯಿತು. ಜೇಸನ್‌ ರಾಯ್‌ 26 ಎಸೆತಗಳಲ್ಲಿ 61 ರನ್‌ ಗಳಿಸಿದರೆ, ಕೊನೆಯವರೆಗೂ ಹೋರಾಡಿದ ರಿಂಕು ಸಿಂಗ್‌ (Rinku Singh) 33 ಎಸೆತಗಳಲ್ಲಿ 53 ರನ್‌ (3 ಬೌಂಡರಿ, 4 ಸಿಕ್ಸರ್)‌ ಗಳಿಸಿ ಅಜೇಯರಾಗುಳಿದರು. ಆ್ಯಂಡ್ರೆ ರಸ್ಸೆಲ್‌ 9 ರನ್‌, ಡೇವಿಡ್‌ ವೈಸ್‌ 1 ರನ್‌, ಉಮೇಶ್‌ ಯಾದವ್‌ 4 ರನ್‌ ಗಳಿಸಿದರು.

    KKRvsCSK 8

    ಚೆನ್ನೈ ಸೂಪರ್‌ ಕಿಂಗ್ಸ್‌ ಪರ ತುಶಾರ್‌ ದೇಶ್‌ಪಾಂಡೆ ಹಾಗೂ ಮಹೀಶ್‌ ತೀಕ್ಷಣ ತಲಾ 2 ವಿಕೆಟ್‌ ಕಿತ್ತರೆ, ಆಕಾಶ್‌ ಸಿಂಗ್‌, ಮೊಯಿನ್‌ ಅಲಿ, ರವೀಂದ್ರ ಜಡೇಜಾ ಹಾಗೂ ಮಥೀಶ ಪತಿರಾಣಾ ತಲಾ ಒಂದೊಂದು ವಿಕೆಟ್‌ ಗಳಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ʻಕಾಂತಾರʼ ಸಾಂಗ್‌ – RCB ಗೆಲುವಿಗೆ ದೈವ ಕಾರಣ ಅಂದ್ರು ಫ್ಯಾನ್ಸ್‌

    KKRvsCSK 6

    ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಅಜಿಂಕ್ಯಾ ರಹಾನೆ, ಶಿವಂ ದುಬೆ, ಡಿವೋನ್‌ ಕಾನ್ವೆ ಅವರ ಅಮೋಘ ಪ್ರದರ್ಶನದಂದಾಗಿ ದಾಖಲೆಯ ಮೊತ್ತ ಪೇರಿಸಿತು. ಚೆನ್ನೈ ತಂಡದ ಅಗ್ರ ಕ್ರಮಾಂಕದ ಎಲ್ಲಾ ಆಟಗಾರರೂ ಅಬ್ಬರದ ಪ್ರದರ್ಶನ ನೀಡಿದರು. ಅದರಲ್ಲೂ ಅಜಿಂಕ್ಯಾ ರಹಾನೆ ಹಾಗೂ ಶಿವಂ ದುಬೆ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲರ್‌ಗಳನ್ನು ಧೂಳಿಪಟ ಮಾಡಿದರು. ಈ ಜೋಡಿ ಕೇವಲ 32 ಎಸೆತಗಳಲ್ಲಿ 85 ರನ್‌ಗಳ ಜೊತೆಯಾಟ ನೀಡುವ ಮೂಲಕ ಸಿಎಸ್‌ಕೆ ತಂಡ ಬೃಹತ್ ಮೊತ್ತ ಗಳಿಸಲು ಕಾರಣವಾದರು. ಇದಕ್ಕೂ ಮುನ್ನ ಆರಂಭಿಕರಾದ ಡಿವೋನ್‌ ಕಾನ್ವೆ ಹಾಗೂ ಋತುರಾಜ್‌ ಗಾಯಕ್ವಾಡ್‌ 45 ಎಸೆತಗಳಲ್ಲಿ 73 ರನ್‌ ಸಿಡಿಸಿದ್ದರು.

    KKRvsCSK 9

    ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ಔಟಾದರು. ನಂತರ ಅರ್ಧ ಶತಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ (4 ಬೌಂಡರಿ, 3 ಸಿಕ್ಸರ್‌) ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲೇ 50 ರನ್‌ (5 ಸಿಕ್ಸರ್‌, 2 ಬೌಂಡರಿ) ಗಳಿಸಿ ಚಚ್ಚಿದರು. ಆದರೆ ಅಜಿಂಕ್ಯಾ ರಹಾನೆ ಕೊನೆಯ ವರೆಗೂ ವಿಕೆಟ್ ಕಳೆದುಕೊಳ್ಳದೇ ಕೆಕೆಆರ್‌ ಬೌಲರ್‌ಗಳನ್ನ ಚೆಂಡಾಡಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ (5 ಸಿಕ್ಸರ್‌, 6 ಬೌಂಡರಿ) ಬಾರಿಸಿ ಅಜೇಯರಾಗುಳಿದರು.

    KKRvsCSK 3

    ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳಲ್ಲಿ ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂ.ಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ಈ ಪಂದ್ಯದಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿತು. ಇದು ಈ ವರ್ಷದ ಐಪಿಎಲ್‌ನಲ್ಲಿ ಬೃಹತ್‌ ಮೊತ್ತ ಎಂಬ ದಾಖಲೆ ಸಹ ಬರೆಯಿತು.

    ಕೆಕೆಆರ್‌ ಪರ ಕುಲ್ವಂತ್ ಖೇಜ್ರೋಲಿಯಾ 2 ವಿಕೆಟ್‌ ಕಿತ್ತರೆ, ವರುಣ್‌ ಚಕ್ರವರ್ತಿ ಹಾಗೂ ಸುಯಶ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2023: ಇಶಾನ್‌ ಕಿಶನ್‌ ಶೈನ್‌, ಅಯ್ಯರ್‌ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ

    IPL 2023: ಇಶಾನ್‌ ಕಿಶನ್‌ ಶೈನ್‌, ಅಯ್ಯರ್‌ ಶತಕದಾಟ ವ್ಯರ್ಥ – ಮುಂಬೈಗೆ 5 ವಿಕೆಟ್‌ಗಳ ಜಯ

    ಮುಂಬೈ: ಇಶಾನ್‌ ಕಿಶನ್‌ (Ishan Kishan) ಹಾಗೂ ಸೂರ್ಯಕುಮಾರ್‌ ಯಾದವ್‌ (Suryakumar Yadav) ಭರ್ಜರಿ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್‌, ಕೋಲ್ಕತ್ತಾ ನೈಟ್‌ರೈಡರ್ಸ್‌ (KolkataKnight Riders) ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.

    ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ (KKR) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 185 ರನ್‌ ಗಳಿಸಿತು. 186 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಮುಂಬೈ ಇಂಡಿಯನ್ಸ್‌ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ 17.4 ಓವರ್‌ಗಳಲ್ಲೇ 186 ರನ್‌ ಗಳಿಸಿ ಗೆದ್ದು ಬೀಗಿತು.

    KKSvsMI 3

    ಬೃಹತ್‌ ಮೊತ್ತದ ಗುರಿ ಪಡೆದ ಮುಂಬೈ ಇಂಡಿಯನ್ಸ್‌ ತಂಡ ಸ್ಫೋಟಕ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ಇಶಾನ್‌ ಕಿಶನ್‌ ಜೋಡಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿ ಕೆಕೆಆರ್‌ ಬೌಲರ್‌ಗಳನ್ನ ಚೆಂಡಾಡಿದರು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 4.5 ಓವರ್‌ಗಳಲ್ಲಿ 65 ರನ್‌ ಸಿಡಿಸಿತ್ತು. ಈ ವೇಳೆ ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 20 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೆ 25 ಎಸೆತಗಳಲ್ಲಿ ಸ್ಫೋಟಕ 58 ರನ್‌ (5 ಬೌಂಡರಿ, 5 ಸಿಕ್ಸರ್)‌ ಚಚ್ಚಿದ ಇಶಾನ್‌ ಕಿಶನ್‌ ಸಹ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು.

    KKSvsMI 5

    ನಂತರ 3ನೇ ವಿಕೆಟ್‌ಗೆ ಜೊತೆಯಾದ ಮಿಸ್ಟರ್‌ 360 ಸೂರ್ಯಕುಮಾರ್‌ ಯಾದವ್‌ (Suryakumar Yadav), ತಿಲಕ್‌ ವರ್ಮಾ ಸಹ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡದ ಗೆಲುವಿಗೆ ನೆರವಾದರು. ಕಳೆದ ಮೂರು ಪಂದ್ಯಗಳಲ್ಲೂ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಸೂರ್ಯಕುಮಾರ್‌ ಯಾದವ್‌, ಈ ಪಂದ್ಯದಲ್ಲಿ ಉತ್ತಮ ಫಾರ್ಮ್‌ ಸಾಬೀತುಪಡಿಸಿದ್ರು. ಸೂರ್ಯ ಕೇವಲ 25 ಎಸೆತಗಳಲ್ಲಿ 43 ರನ್‌ (3 ಸಿಕ್ಸರ್‌, 4 ಬೌಂಡರಿ) ಗಳಿದರೆ, ತಿಲಕ್‌ ವರ್ಮಾ 30 ರನ್‌ (25 ಎಸೆತ, 1 ಸಿಕ್ಸರ್‌, 3 ಬೌಂಡರಿ) ಬಾರಿಸಿದರು. ಈ ನಡುವೆ ನೆಹಾಲ್ ವಧೇರಾ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು.

    KKSvsMI 6

    ಕೊನೆಯಲ್ಲಿ ಟಿಮ್‌ ಡೇವಿಡ್‌ 13 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿ ಸಹಿತ 24 ರನ್‌ ಚಚ್ಚಿದರೆ, ಕ್ಯಾಮರೂನ್‌ ಗ್ರೀನ್‌ 1 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಕೆಕೆಆರ್‌ ಪರ ಸುಯಶ್‌ ಸರ್ಮಾ 2 ವಿಕೆಟ್‌ ಕಿತ್ತರೆ, ಶಾರ್ದೂಲ್‌ ಠಾಕೂರ್‌, ವರುಣ್‌ ಚಕ್ರವರ್ತಿ ಹಾಗೂ ಲಾಕಿ ಫರ್ಗುಸನ್ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: 9 ಸಿಕ್ಸ್‌, 5 ಬೌಂಡರಿ – IPLನಲ್ಲಿ ವೇಗದ ಶತಕ ಸಿಡಿಸಿ ಮೆರೆದಾಡಿದ ವೆಂಕಟೇಶ್‌ ಅಯ್ಯರ್‌

    Venkatesh Iyer 3

    ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ಪರ ವೆಂಕಟೇಶ್ ಅಯ್ಯರ್ (Venkatesh Iyer) ಏಕಾಂಗಿ ಹೋರಾಟ ನಡೆಸಿದರು. ಆರಂಭಿಕರಾಗಿ ಕಣಕ್ಕಿಳಿದ ರಹಮಾನುಲ್ಲಾ ಗುರ್ಬಾಜ್, ನಾರಾಯಣ್‌ ಜಗದೀಶನ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು. 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ವೆಂಕಟೇಶ್‌ ಅಯ್ಯರ್‌ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದರು. ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಅಯ್ಯರ್‌ ಮುಂಬೈ ಬೌಲರ್‌ಗಳನ್ನ ಬೆಂಡೆತ್ತಿದರು. ಕೇವಲ 51 ಎಸೆತಗಳನ್ನು ಎದುರಿಸಿ ಸ್ಫೋಟಕ 104 ರನ್‌ (9 ಸಿಕ್ಸರ್‌, 6 ಬೌಂಡರಿ) ಸಿಡಿಸಿದರು. ವೆಂಕಟೇಶ್ ಐಯ್ಯರ್ ಸಿಡಿಸಿದ ಈ ಶತಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಕಳೆದ 15 ವರ್ಷಗಳಲ್ಲಿಯೇ ಮೊದಲ ಶತಕವಾಗಿದೆ. ಈ ಮೂಲಕ ಕೆಕೆಆರ್ ಫ್ರಾಂಚೈಸಿಯ ಸುದೀರ್ಘ ಕಾಲದ ಶತಕದ ಬರವನ್ನು ನೀಗಿಸಿದರು.

    KKSvsMI 4

    ನಂತರ ಕಣಕ್ಕಿಳಿದರವರಲ್ಲಿ ಯಾರೊಬ್ಬರು ಉತ್ತಮ ಪ್ರದರ್ಶನ ತೋರದೇ ಇದ್ದರಿಂದ ಕೆಕೆಆರ್‌ ತಂಡ 185 ರನ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಾಯಕ ನಿತೀಶ್‌ ರಾಣಾ 5 ರನ್‌, ಶಾರ್ದೂಲ್‌ ಠಾಕೂರ್‌ 13 ರನ್‌, ರಿಂಕು ಸಿಂಗ್‌ 18 ರನ್‌ ಗಳಿಸಿದ್ರೆ, ಕೊನೆಯಲ್ಲಿ ಆ್ಯಂಡ್ರೆ ರಸ್ಸೆಲ್‌ 21 ರನ್‌ (11 ಎಸೆತ, 3 ಬೌಂಡರಿ, 1‌ ಸಿಕ್ಸರ್), ಸುನೀಲ್‌ ನರೇನ್‌ 2 ರನ್‌ ಗಳಿಸಿ ಅಜೇಯರಾಗುಳಿದರು.

    Mumbai Indians 2 1

    ಇನ್ನೂ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್‌ ಪರ ಹೃತಿಕ್‌ ಶೋಕೀನ್‌ 2 ವಿಕೆಟ್‌ ಪಡೆದರೆ, ಕ್ಯಾಮರೂನ್ ಗ್ರೀನ್, ದುವಾನ್‌ ಜಾನ್ಸೆನ್‌, ಪಿಯೂಷ್‌ ಚಾವ್ಲಾ ಹಾಗೂ ರಿಲೇ ಮೆರೆದಿಥ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್‌
    ಕೋಲ್ಕತ್ತಾ ನೈಟ್‌ರೈಡರ್ಸ್‌ – 20 ಓವರ್‌ – 185/6
    ಮುಂಬೈ ಇಂಡಿಯನ್ಸ್‌ – 17.4 ಓವರ್‌ – 186/5

  • IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

    ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

    Andre Russell

    ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

    Andre Russell Venkatesh Iyer

    ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

    IPL 2023 Shikhar Dhawan

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

    IPL 2023 PBKSvsKKR 4

    ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

    IPL 2023 PBKSvsKKR 2

    ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

    ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    Sam Curran

    ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

  • ಕೆಕೆಆರ್ ಆಟಗಾರ ನಿತೀಶ್ ರಾಣಾಗೆ ಕೊರೊನಾ ಸೋಂಕು ದೃಢ

    ಕೆಕೆಆರ್ ಆಟಗಾರ ನಿತೀಶ್ ರಾಣಾಗೆ ಕೊರೊನಾ ಸೋಂಕು ದೃಢ

    – ಗೋವಾದಲ್ಲಿ ರಜಾದಿನ ಕಳೆದು ತಂಡ ಸೇರಿದ್ದ ರಾಣಾ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಎಂಟು ದಿನ ಮುನ್ನ ಕೋಲ್ಕತ್ತಾ ತಂಡದ ಆಟಗಾರ ನಿತೀಶ್ ರಾಣಾ ಕೊರೊನಾ ಸೋಂಕಿತರಾಗಿದ್ದಾರೆ. ಎರಡು ದಿನದ ಹಿಂದೆಯೇ ಕೋವಿಡ್ ದೃಢವಾಗಿದ್ದು, ಆದ್ರೆ ಇದುವರೆಗೂ ಬಿಸಿಸಿಐ ಮತ್ತು ಕೆಕೆಆರ್ ಈ ಮಾಹಿತಿಯನ್ನ ಅಧಿಕೃತವಾಗಿಸಿಲ್ಲ.

    Nitish Rana 2

    ಸದ್ಯ ಮುಂಬೈನ ಹೋಟೆಲ್ ನಲ್ಲಿ ನಿತೀಶ್ ರಾಣಾ ಕ್ವಾರಂಟೈನ್ ನಲ್ಲಿದ್ದಾರೆ ಎಂದು ವರದಿಯಾಗಿದೆ. ವೈದ್ಯರ ತಂಡವೊಂದು ನಿತೀಶ್ ಆರೋಗ್ಯದ ಕಾಳಜಿ ತೆಗೆದುಕೊಂಡಿದೆ. 14ನೇ ಆವೃತ್ತಿಯ ಐಪಿಎಲ್ ಏಪ್ರಿಲ್ 9ರಿಂದ ಆರಂಭವಾಗಲಿದ್ದು, ಮೇ 30ರಂದು ಫೈನಲ್ ಮ್ಯಾಚ್ ನಡೆಯಲಿದೆ. ಮೊದಲ ಪಂದ್ಯವನ್ನ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಆಡಲಿವೆ. ಏಪ್ರಿಲ್ 11ರಂದು ಕೆಕೆಆರ್ ಮೊದಲ ಪಂದ್ಯವನ್ನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

    Nitish Rana 1

    254 ರನ್: ಕಳೆದ ಸೀಸನ್ ನಲ್ಲಿ ಕೆಕೆಆರ ಪರ ಆಡಿದ್ದ ನಿತೀಶ್ ರಾಣಾ, 14 ಪಂದ್ಯಗಳಲ್ಲಿ 254 ರನ್ ಕಲೆ ಹಾಕಿದ್ದರು. ಐಪಿಎಲ್ ನಲ್ಲಿ ಇದುವರೆಗೂ 60 ಪಂದ್ಯಗಳನ್ನಾಡಿರುವ ರಾಣಾ, 1,437 ರನ್ ಪೇರಿಸಿದ್ದಾರೆ. ಸರಾಸರಿ 28.17 ಮತ್ತು ಸ್ಟ್ರೈಕ್ ರೇಟ್ 135.56 ಇದೆ.

    Nitish Rana 3

    ವಿಜಯ್ ಹಜಾರೆ ಟ್ರೋಫಿಯಲ್ಲಿ ಟಾಪ್ 5 ಸ್ಕೋರರ್: ನಿತೀಶ್ ರಾಣಾ ವಿಜಯ್ ಹಜಾರೆ ಟ್ರೋಫಿಯಲ್ಲಿ 5ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ದೆಹಲಿಯ ಪರವಾಗಿ ಆಡಿದ್ದ ರಾಣಾ, ಏಳು ಪಂದ್ಯಗಳಲ್ಲಿ 66.33ರ ಸರಾಸರಿಯಲ್ಲಿ 398 ರನ್ ಕಲೆ ಹಾಕಿದ್ದಾರೆ. ಒಂದು ಶತಕ, ಎರಡು ಅರ್ಧ ಶತಕ ದಾಖಲಿಸಿದ್ದಾರೆ. ಸ್ಟ್ರೈಕ್ ರೇಟ್ 97.78 ಇದೆ.

  • ಪಂದ್ಯದಲ್ಲಿ ನಿಂದಿಸಿದ ರಾಣಾಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಕೊಹ್ಲಿ!

    ಪಂದ್ಯದಲ್ಲಿ ನಿಂದಿಸಿದ ರಾಣಾಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಕೊಹ್ಲಿ!

    ಕೋಲ್ಕತ್ತಾ: ಆರ್‌ಸಿಬಿ ಹಾಗೂ ಕೆಕೆಆರ್ ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ್ದ ನಿತೀಶ್ ರಾಣಾ ಅವರಿಗೆ ಕ್ಯಾಪ್ಟನ್ ಕೊಹ್ಲಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಇದೀಗ ರಾಣಾ ಆ ಉಡುಗೊರೆಯ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

    ರಾಣಾ ಒಂದೇ ಓವರಿನಲ್ಲಿ ಎಬಿಡಿ ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಿದ್ದರು. ಯುವ ಆಟಗಾರ ನಿತೀಶ್ ರಾಣಾ ಅವರ ಅತ್ಯುತ್ತಮ ಪ್ರದರ್ಶನ ನೋಡಿ ಖುಷಿಯಾದ ಕೊಹ್ಲಿ ಪಂದ್ಯದ ನಂತರ ಅವರಿಗೆ ತಮ್ಮ ಬ್ಯಾಟ್ ಗಿಫ್ಟ್ ಆಗಿ ನೀಡಿದ್ದಾರೆ.

    ರಾಣಾ ಒಂದು ಓವರ್ ಎಸೆದು 11 ರನ್ ನೀಡಿ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ವಿಕೆಟ್ ಪಡೆದಿದ್ದರು. 2 ವಿಕೆಟ್ ಕಳೆದು ಕೊಂಡು 127 ರನ್ ಗಳಿಸಿದ್ದ ಆರ್‌ಸಿಬಿ ಹಠಾತ್ ಎರಡು ವಿಕೆಟ್ ಕಳೆದುಕೊಂಡ ಪರಿಣಾಮ 14.3 ಓವರ್ ಗಳಲ್ಲಿ 127 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

    Nitish rana Virat Kohli

    ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ತನ್ನ ಬೌಲಿಂಗ್ ನಲ್ಲಿ ಔಟ್ ಆದ ಕೊಹ್ಲಿಯನ್ನು ರಾಣಾ ನಿಂದಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಒಬ್ಬ ಕಿರಿಯ ಆಟಗಾರ ಭಾರತ ತಂಡದ ನಾಯಕನನ್ನು ನಿಂದಿಸಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು.

    ಕ್ರಿಕೆಟ್ ಪ್ರೇಮಿಗಳು ನಿಂದಿಸಿದ ವಿಚಾರವನ್ನು ಇಟ್ಟುಕೊಂಡು ಟೀಕೆ ಮಾಡುತ್ತಿದ್ದರೆ ಪಂದ್ಯ ಮುಗಿದ ಬಳಿಕ ಕೊಹ್ಲಿ ರಾಣಾ ಅವರನ್ನು ಪ್ರೋತ್ಸಾಹಿಸಿ ತಮ್ಮ ಬ್ಯಾಟ್ ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ನಿಮ್ಮ ಮುಂದಿನ ಭವಿಷ್ಯ ಚೆನ್ನಾಗಿರಲಿ ಎಂದು ಶುಭ ಹಾರೈಸಿದ್ದಾರೆ.

    ಸದ್ಯ ರಾಣಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಕೊಹ್ಲಿ ನೀಡಿದ ಬ್ಯಾಟ್‍ನ ಫೋಟೋವನ್ನು ಹಾಕಿ ಅದಕ್ಕೆ “ಕ್ರಿಕೆಟ್ ದಿಗ್ಗಜರು ಹೊಗಳಿದ್ದಾರೆ. ಇದರಿಂದ ಇನ್ನಷ್ಟು ಹೆಚ್ಚು ಪರಿಶ್ರಮಪಟ್ಟು ಆಡಲು ಮನಸ್ಸಾಗುತ್ತದೆ. ಧನ್ಯವಾದಗಳು ವಿರಾಟ್ ಅಣ್ಣ” ಎಂದು ರಾಣಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.