Tag: ಪಬ್ಲಿಕ್ ಟಿವಿ Workers

  • ಜ್ವರ ಬರುತ್ತದೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ- ಅಲೆಮಾರಿಗಳು

    ಜ್ವರ ಬರುತ್ತದೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ- ಅಲೆಮಾರಿಗಳು

    ಮಂಡ್ಯ: ವ್ಯಾಕ್ಸಿನ್ ಹಾಕಿಸಿಕೊಂಡರೆ ಜ್ವರ ಬರುತ್ತದೆ, ಅದರಿಂದ ನಮ್ಮ ದುಡಿಮೆ ನಿಂತು ಹೋಗುತ್ತದೆ ಎಂಬ ಭಯದಿಂದ ಅಲೆಮಾರಿಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

    MND VACCINE 2

    ಮಂಡ್ಯಗೆ ಹೊಟ್ಟೆ ಪಾಡಿಗಾಗಿ 15 ಆಟೋಗಳ ಮೂಲಕ ಸುಮಾರು 50ಕ್ಕೂ ಹೆಚ್ಚು ಜನ ಕುಲುಮೆ ಕೆಲಸಕ್ಕೆ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗಗಳಿಂದ ಈ ಜನರು ಮಂಡ್ಯ ಭಾಗಕ್ಕೆ ಬಂದಿದ್ದಾರೆ. ಯಾಕೆ ನೀವು ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ ಎಂದರೆ, ನಾವು ಇಲ್ಲಿಗೆ ಕೂಲಿ ಮಾಡಲು ಬಂದಿದ್ದೇವೆ. ನಾವು ಲಸಿಕೆ ಹಾಕಿಸಿಕೊಂಡು ಜ್ವರ ಹಾಗೂ ಕೈ ನೋವು ಬಂದರೆ ನಮಗೆ ಕೆಲಸ ಮಾಡಲು ಆಗುವುದಿಲ್ಲ. ನಾವು ಆ ದಿನ ದುಡಿದು ಆ ದಿನ ತಿನ್ನುವವರು. ನಾವು ಕೆಲಸ ಮಾಡದೇ ಇದ್ದರೆ ನಮಗೆ ಯಾರು ಊಟ ಕೊಡುತ್ತಾರೆ, ಹೀಗಾಗಿ ನಾವು ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಇದನ್ನೂ ಓದಿ:ಉಸಿರಾಟ ತೊಂದರೆ- ಹರ್ಯಾಣ ಗೃಹ ಸಚಿವ ಆಸ್ಪತ್ರೆಗೆ ದಾಖಲು

    MND VACCINE 3

    ಕೇಂದ್ರ ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ಲಸಿಕೆ ನೀಡುವ ಕೆಲಸ ನಾವು ಮಾಡುತ್ತಿದ್ದೇವೆ ಎನ್ನುತ್ತಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಆಗುವುದಿಲ್ಲ. ಲಸಿಕೆ ಹಾಕಿಸಿಕೊಳ್ಳಿ ಎಂದು ಅಧಿಕಾರಿಗಳು ಜಾಗೃತಿ ಮೂಡಿಸಿ ಅವರಿಗೆ ಲಸಿಕೆ ನೀಡಬೇಕಿತ್ತು. ಆದರೆ ಇದುವರೆಗೂ ಅಧಿಕಾರಿಗಳು ಈ ಜನರ ಬಳಿಯೇ ಸುಳಿದಿಲ್ಲ. ಒಂದು ವೇಳೆ ಇವರಿಗೆ ಲಸಿಕೆ ನೀಡದಿದ್ದರೇ ಇವರಿಗೆ ಕೊರೊನಾ ತಗುಲಿ, ಮತ್ತಷ್ಟು ಕೊರೊನಾ ಹರಡುವ ಸಾಧ್ಯತೆ ಇದೆ. ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ – 70 ಲಕ್ಷ ವಸೂಲಿ ಮಾಡಿದ ಹು-ದಾ ಪಾಲಿಕೆ

  • ಕಡಲ ನಡುವೆ ರಕ್ಷಣೆಗಾಗಿ ಅಂಗಲಾಚುತ್ತಿರುವ 9 ಕಾರ್ಮಿಕರು

    ಕಡಲ ನಡುವೆ ರಕ್ಷಣೆಗಾಗಿ ಅಂಗಲಾಚುತ್ತಿರುವ 9 ಕಾರ್ಮಿಕರು

    ಉಡುಪಿ: ಇಲ್ಲಿನ ಎನ್‍ಎಂಪಿಟಿಯ ಕೋರಮಂಡಲ ಎಕ್ಸ್‍ಪ್ರೆಸ್ ಟಗ್‍ನ 9 ಮಂದಿ ಸಿಬ್ಬಂದಿ ಕಳೆದ ಮೂರು ದಿನದಿಂದ ಸಮುದ್ರದಲ್ಲೇ ಸಿಲುಕಿಕೊಂಡಿದ್ದಾರೆ. ಸಮುದ್ರದಲ್ಲಿ ಗಾಳಿ ಇರುವ ಕಾರಣ ಇನ್ನೂ ಕೂಡಾ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿಲ್ಲ. ಈ ನಡುವೆ ಟಗ್‍ನಲ್ಲಿರುವ ಸಿಬ್ಬಂದಿ ಅಪಾಯದಲ್ಲಿರುವ ಸ್ಥಿತಿ ವಿವರಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಶುಕ್ರವಾರ ಬೆಳಗ್ಗೆ 11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್‍ಪ್ರೆಸ್ ಟಗ್, ಶನಿವಾರ ಬೆಳಗ್ಗೆ 8.30ಕ್ಕೆ ಕಾಪು ಲೈಟ್ ಹೌಸ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಡಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿದೆ. ತಮ್ಮನ್ನು ರಕ್ಷಿಸುವಂತೆ 9 ಮಂದಿ ಸಿಬ್ಬಂದಿ ಎಲ್ಲರಲ್ಲಿ ಅಂಗಲಾಚುತ್ತಿದ್ದಾರೆ. ವೀಡಿಯೋಗಳನ್ನು ಮಾಡಿ ಕಳುಹಿಸಿರುವ ಸಿಬ್ಬಂದಿ, ಅಪಾಯದಲ್ಲಿರುವುದನ್ನು ದಡದಲ್ಲಿರುವವರಿಗೆ ಮನವರಿಕೆ ಮಾಡಿದ್ದಾರೆ. ಜೀವಭಯ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    FotoJet 16 7

    ಟಗ್‍ನಲ್ಲಿರುವ 9 ಮಂದಿ ಸಿಬ್ಬಂದಿ 40 ಗಂಟೆಗಳನ್ನು ಈಗಾಗಲೇ ಸಮುದ್ರ ಮಧ್ಯದಲ್ಲೇ ಕಳೆದಿದ್ದಾರೆ. ಟಗ್‍ನಲ್ಲಿ ಇರುವ ನೀರು, ಆಹಾರ ಪದಾರ್ಥಗಳು ಖಾಲಿಯಾಗುತ್ತಿದೆ. ಮಳೆ, ಗಾಳಿ ಮತ್ತು ಜೀವ ಭಯದಿಂದ ಎಲ್ಲರೂ ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಟಗ್‍ನಲ್ಲಿರುವ ಸಿಬ್ಬಂದಿ ದೂರವಾಣಿಯ ಮೂಲಕ ಮಾತನಾಡಿ, ಕೋಸ್ಟ್ ಗಾರ್ಡ್ ಹಡಗು ನಮಗಿಂತ ದೂರದ 2 ಮೈಲಿಯಲ್ಲಿ ನಿಂತುಕೊಂಡಿದೆ. ಯಾವಾಗ ನಮ್ಮನ್ನು ರಕ್ಷಿಸುತ್ತಾರೆ ಎನ್ನುವುದನ್ನು ಜೀವ ಕೈಯ್ಯಲ್ಲಿ ಹಿಡಿದು ಕಾಯುತ್ತಿದ್ದೇವೆ. ದಯವಿಟ್ಟು ನಮ್ಮನ್ನು ಬದುಕಿಸಲು ಯಾವುದಾದರೂ ಪ್ರಯತ್ನವನ್ನು ಮಾಡಿ ಎಂದು ದಡದಲ್ಲಿರುವ ಬೋಟ್ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕರಾವಳಿ ಕಾವಲು ಪಡೆ ಎಸ್ಪಿ ಚೇತನ್, ಮಂಗಳೂರಿಗೆ ನೇವಿ ಹೆಲಿಕಾಪ್ಟರ್ ಬಂದಿದೆ. ಹವಾಮಾನ ನೋಡಿಕೊಂಡು ರಕ್ಷಣಾ ಕಾರ್ಯ ಆರಂಭಿಸುತ್ತಾರೆ. ನಮ್ಮ ಅಥವಾ ಕೋಸ್ಟ್ ಗಾರ್ಡ್ ಬಂಡೆ ಸಮೀಪ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

    FotoJet 17 7

    ಅರಬ್ಬೀ ಸಮುದ್ರದಲ್ಲಿ ಆರೇಳು ಮೀಟರ್ ಅಲೆಗಳು ಏಳುತ್ತಿರುವ ಕಾರಣ, ಬೋಟ್ ಬೃಹತ್ ಬಂಡೆಯಲ್ಲಿ ಸಿಲುಕಿದ ಕಾರಣ ರಕ್ಷಣೆ ವಿಳಂಬವಾಗಿದೆ.

  • ಕೂಲಿಕಾರ್ಮಿಕ ಜೀವ ಬಲಿಪಡೆದ ಜವರಾಯ – ದುಡಿಯಲು ಹೊರಟವರು ಮಸಣಕ್ಕೆ

    ಕೂಲಿಕಾರ್ಮಿಕ ಜೀವ ಬಲಿಪಡೆದ ಜವರಾಯ – ದುಡಿಯಲು ಹೊರಟವರು ಮಸಣಕ್ಕೆ

    ಯಾದಗಿರಿ: ತುತ್ತು ಅನ್ನಕ್ಕಾಗಿ ಊರಿಂದ ಊರಿಗೆ ದುಡಿಯಲು ಹೋದ ಅಮಾಯಕ ಜೀವಗಳನ್ನು ಜವರಾಯ ಬಲಿ ಪಡೆದುಕೊಂಡಿದ್ದಾನೆ. ಟಂಟಂ ಮತ್ತು ಟ್ಯಾಂಕರ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

    FotoJet 5 47

    ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಎಂ ಕೊಳ್ಳೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40), ದೇವಿಂದ್ರಮ್ಮ (70) ಎಂಬವರು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದು, ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    FotoJet 6 30

    ಮೃತರೆಲ್ಲರೂ ವಡಗೇರಾ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದು, ಟಂಟಂ ವಾಹನದಲ್ಲಿ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಅಪಘಾತ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.