Tag: ಪೇಜಾವರ ಸ್ವಾಮೀಜಿ

  • ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    ಪೇಜಾವರ ಶ್ರೀ ಅಪಮಾನಿಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ: ಸಿಎಂ ವಿರುದ್ಧ ವಿಹೆಚ್‌ಪಿ ಕಿಡಿ

    – ಸಂವಿಧಾನದ ಬಗ್ಗೆ ಪೇಜಾವರ ಶ್ರೀಗಳು ಹೇಳಿಕೆ ನೀಡಿಲ್ಲ ಎಂದ ಎಂ.ಬಿ.ಪುರಾಣಿಕ್‌

    ಉಡುಪಿ: ಸಂವಿಧಾನ ಕುರಿತ ಪೇಜಾವರ ಶ್ರೀ (Pejawar Swamiji) ನೀಡಿದ್ದಾರೆ ಎನ್ನಲಾದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಾನು ಸಂವಿಧಾನ ಕುರಿತು ಮಾತನಾಡಿಲ್ಲ ಎಂದು ಪೇಜಾವರ ಶ್ರೀಗಳು ಸ್ಪಷ್ಟಪಡಿಸಿದರೂ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ವಿಶ್ವಹಿಂದೂ ಪರಿಷತ್ (Vishwa Hindu Parishad) ಮುಂದಾಗಿದೆ.

    ಉಡುಪಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡರು, ಪೇಜಾವರ ಶ್ರೀ ದೀನ-ದಲಿತ ಹಿಂದೂಗಳ ಸೇವೆ ಮಾಡುತ್ತಿದ್ದಾರೆ. ಶ್ರೀಗಳಿಗೆ ಮಾಡಿದ ಅವಮಾನ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಅವರಿಗೆ ನೋವಾದರೆ ಇಡೀ ಹಿಂದೂ ಸಮಾಜಕ್ಕೆ ನೋವಾದಂತೆ. ಮಠಗಳು ಹಿಂದೂ ಸಮಾಜದ ಅವಿಭಾಜ್ಯ ಅಂಗ. ಪೇಜಾವರ ಶ್ರೀಗಳ ಮಾತುಗಳನ್ನು ತಿರುಚಲಾಗಿದೆ, ಇದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    Siddaramaiah 13

    ಶ್ರೀಗಳು ಸಂವಿಧಾನ ಬದಲು ಮಾಡುವ ಹೇಳಿಕೆ ನೀಡಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ, ಇದರಿಂದ ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸುತ್ತೇವೆ. ಹಿಂದು ನಾಯಕರು ಮಾತನಾಡಿದರೆ ಸುಮೋಟೊ ಕೇಸು ದಾಖಲಿಸುತ್ತೀರಿ. ಬಿಜಾಪುರದ ಹೋರಾಟ ಸೇರಿದಂತೆ ರಾಜ್ಯಾದ್ಯಂತ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಲಾಗಿದೆ. ಹಿಂದುಗಳ ಬಗ್ಗೆ ತಾರತಮ್ಯ ಮಾಡುತ್ತಿದ್ದೀರಿ ಎಂದು ಬೇಸರ ಹೊರಹಾಕಿದ್ದಾರೆ.

    ಶ್ರೀಗಳ ಬಗ್ಗೆ ಅಪಚಾರ ಮಾಡುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಆಗಬೇಕು. ಸ್ವಾಮಿಗಳನ್ನು ಟಾರ್ಗೆಟ್ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಪೇಜಾವರ ಶ್ರೀಗಳಿಗೆ ಅವಮಾನ ಆದರೂ ಸರ್ಕಾರ ಸುಮ್ಮನೆ ಕುಳಿತಿದೆ. ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿದ್ದೇವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಮನವಿ ಕೊಟ್ಟಿದ್ದೇವೆ. ಕಾನೂನು ತಜ್ಞರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

  • ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    – ಪ್ರಾಣಪತಿಷ್ಠೆಯಂದು ಸೀಮಿತ ಜನಕ್ಕಷ್ಟೇ ಅವಕಾಶ

    ಉಡುಪಿ: ದೇಶದಲ್ಲಿ ರಾಮನ ಭಕ್ತರು, ಸಂತರು-ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ರಾಮ ಮಂದಿರದ (Ram Mandir) ಪ್ರಾಣ ಪ್ರತಿಷ್ಠೆಗೆ ಭಕ್ತರೆಲ್ಲಾ ಆಮಂತ್ರಿತರು. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಮಂತ್ರಣ ನೀಡಲು ಆಯ್ಕೆ ಮಾಡಿ ಆಹ್ವಾನ ಕೊಡಲಾಗಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavara Shree) ಹೇಳಿದರು.

    ಉಡುಪಿ (Udupi) ಪೇಜಾವರ ಮಠದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಮಿತ ಸ್ಥಳ ಇರುವುದರಿಂದ ಎಲ್ಲರೂ ಭಾಗಿಯಾಗಲು ಕಷ್ಟವಾಗಲಿದೆ. ಪ್ರತಿಷ್ಠಾಪನೆಯ ನಂತರ ಕೋಟ್ಯಂತರ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶ ಇದೆ. ಯಾವುದೇ ಗೊಂದಲಗಳು ಆಗದಿರಲಿ ಎಂಬುದು ಟ್ರಸ್ಟ್‌ನ ಉದ್ದೇಶ. ದೇಗುಲದ ಪ್ರತಿಷ್ಠಾಪನೆ ಆಗಿರುವುದರಿಂದ ಇದನ್ನು ಯಾವುದೋ ಮೈದಾನದಲ್ಲಿ ಕಾರ್ಯಕ್ರಮ ನೆರವೇರಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ

    ಜನವರಿ 22 ರಂದು ಮೈದಾನದಲ್ಲಿ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. ಮಂದಿರದ ಸ್ಥಳಾವಕಾಶ ಬಹಳ ಸೀಮಿತವಾಗಿದೆ. ಭಕ್ತರು ಯಾರೂ ತಪ್ಪು ತಿಳಿಯಬಾರದು. ಆಹ್ವಾನ ಇದ್ದವರು ಖಂಡಿತಾ ಭಾಗಿಯಾಗಬೇಕು. ಉಳಿದವರೆಲ್ಲರೂ ಮುಂದಿನ ದಿನದಲ್ಲಿ ಅಯೋಧ್ಯೆಗೆ (Ayodhya) ಬರಬೇಕು. ಅಯೋಧ್ಯೆಯಲ್ಲಿ ಅನೇಕ ಟೆಂಟ್, ಶೆಡ್ ತಯಾರಾಗಿದ್ದು, ಧನುರ್ಮಾಸ ಇರುವುದರಿಂದ ಹೊರಗೆ ಮಲಗಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

  • ಸಕಲ ಸಂತ ಸಮುದಾಯಕ್ಕೆ ಸಿಕ್ಕ ಪದ್ಮ ವಿಭೂಷಣ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಸಕಲ ಸಂತ ಸಮುದಾಯಕ್ಕೆ ಸಿಕ್ಕ ಪದ್ಮ ವಿಭೂಷಣ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉಡುಪಿ: ಉಡುಪಿ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು, ಇದು ಸಕಲ ಸಂತ ಸಮುದಾಯಕ್ಕೆ ಸಿಕ್ಕ ಮನ್ನಣೆ, ಗೌರವ ಅಂತ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಣ್ಣಿಸಿದ್ದಾರೆ.

    ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದು, ಗುರುಗಳಿಗೆ ಪ್ರಶಸ್ತಿ ಬಂದ ವಿಚಾರ ಕೇಳಿ ಸಂತೋಷವಾಗಿದೆ. ಗುರುಗಳು ಯಾವುದೇ ಬಗೆಯ ವಿಭೂಷಣವನ್ನು ಬದುಕಿನಲ್ಲಿ ಧರಿಸಿದವರಲ್ಲ. ಆದರೆ ಸರ್ಕಾರ ಇಂದು ವಿಭೂಷಣವನ್ನು ಸಮರ್ಪಿಸಿದೆ. ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

    udp pejawarasri 2

    ಗುರುಗಳ ಜೀವಿತಾವಧಿಯಲ್ಲೇ ಈ ಸುಯೋಗ ಬಂದಿದ್ದರೆ ಮತ್ತಷ್ಟು ಸಂತೋಷ ಆಗುತ್ತಿತ್ತು. ಶ್ರೀ ಮಠ ಈ ಪ್ರಶಸ್ತಿಯನ್ನು ಸ್ವಾಗತಿಸುತ್ತದೆ. ಇದು ಸಂತ ಸಮಾಜಕ್ಕೆ ದೊರಕಿದ ಗೌರವ. ಈ ಪುರಸ್ಕಾರ ಸಂತ ಸಮಾಜದ ಜವಾಬ್ದಾರಿ ಹೆಚ್ಚಿಸಿದೆ ಎಂದರು.

    ಪ್ರಶಸ್ತಿ ಘೋಷಣೆಯಾಗುವಾಗ ಪೇಜಾವರ ಶ್ರೀಗಳು ಮುಳುಬಾಗಿಲಿನಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿದ್ದ ನೂರಾರು ಜನ ಜಯಘೋಷ ಕೂಗಿದರು.

    ಗಣತಂತ್ರದ ಮುನ್ನಾ ದಿನವಾದ ಶನಿವಾರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್ ಮತ್ತು ಇತ್ತೀಚಿಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗೆ ಎರಡನೇ ಅತ್ಯುಚ್ಛ ಪುರಸ್ಕಾರ ಪದ್ಮವಿಭೂಷಣ (ಮರಣೋತ್ತರ) ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬಾಕ್ಸಿಂಗ್ ತಾರೆ ಮೇರಿಕೂಮ್‍ಗೂ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ. ಗೋವಾದ ಮಾಜಿ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್, ಪಿವಿ ಸಿಂಧೂಗೆ ಪದ್ಮಭೂಷಣ ಘೋಷಣೆಯಾಗಿದೆ.

    sushma swaraj arun jaitley

    ಪಬ್ಲಿಕ್ ಟಿವಿಯ `ಪಬ್ಲಿಕ್ ಹೀರೋ’ ಆಗಿದ್ದ ಉತ್ತರ ಕನ್ನಡ ಜಿಲ್ಲೆ ಆಂಕೋಲ ತಾಲೂಕಿನ ಹೊನ್ನಳ್ಳಿಯ ಅರಣ್ಯ ಪ್ರೇಮಿ ಹಾಲಕ್ಕಿ ಸಮುದಾಯದ ತುಳಸಿ ಗೌಡ, ಅಕ್ಷರ ಸಂತ ದಕ್ಷಿಣ ಕನ್ನಡದ ಅಕ್ಷರ ಸಂತ, ಕಿತ್ತಳೆ ಹಣ್ಣು ಮಾರಿ ಹರೇಕಳದ ನ್ಯೂಪಡ್ಪು ಗ್ರಾಮದಲ್ಲಿ ಶಾಲೆ ಕಟ್ಟಿಸಿದ ಹಾಜಬ್ಬ, ವಿಜಯ ಸಂಕೇಶ್ವರ್, ಕೆ ವಿ ಸಂಪತ್ ಕುಮಾರ್, ಕ್ರೀಡಾಪಟು ಎಂಪಿ ಗಣೇಶ್ ಸೇರಿ 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

  • ವೈಚಾರಿಕ ಭಿನ್ನಾಭಿಪ್ರಾಯದ ನಡುವೆ ನಮ್ಮ ಬಾಂಧವ್ಯ ಚೆನ್ನಾಗಿತ್ತು: ಶ್ರೀನಿವಾಸಪ್ರಸಾದ್

    ವೈಚಾರಿಕ ಭಿನ್ನಾಭಿಪ್ರಾಯದ ನಡುವೆ ನಮ್ಮ ಬಾಂಧವ್ಯ ಚೆನ್ನಾಗಿತ್ತು: ಶ್ರೀನಿವಾಸಪ್ರಸಾದ್

    – ಹಿಂದೂ ಧರ್ಮ ಸಮರ್ಥನೆ ಮಾಡಿಕೊಳ್ಳುವ ಮೊದಲಿಗರಾಗಿದ್ದರು
    – ಎಲ್ಲವನ್ನೂ ನೇರವಾಗಿ ಹೇಳುತ್ತಿದ್ದರು

    ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮೈಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಂತಾಪ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳು ಕಟ್ಟಾ ಹಿಂದೂವಾದಿಗಳಾಗಿದ್ದರು. ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಹೆಚ್ಚಾಗಿತ್ತು. ಅಸ್ಪೃಶ್ಯತೆ ನಿವಾರಣೆ ವಿಚಾರವಾಗಿ ನಮಗೂ ಅವರಿಗೂ ಸೈದ್ಧಾಂತಿಕ ವಿರೋಧ ಇತ್ತು. ಗೋ ಹತ್ಯೆ ನಿಷೇಧ, ರಾಮಜನ್ಮ ಭೂಮಿ ವಿಚಾರದಲ್ಲಿ ಪೇಜಾವರ ಶ್ರೀ ಆಂದೋಲನ ಮಾಡಿದವರು ಎಂದು ಸ್ಮರಿಸಿದರು.

    ಅಸ್ಪೃಶ್ಯತೆ ವಿಚಾರವಾಗಿ ರಾಷ್ಟ್ರವ್ಯಾಪಿ ಚಳುವಳಿ ಆಗಬೇಕು. ಎಲ್ಲಾ ಮಠಾಧೀಪತಿಗಳು ಒಂದು ದಿನ ಉಪವಾಸ ಮಾಡಬೇಕೆನ್ನುವುದು ನನ್ನ ಆಗ್ರಹವಾಗಿತ್ತು. ಆದರೆ ಅದಕ್ಕೆ ಸ್ವಾಮೀಜಿ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ. ಆದರೂ ವ್ಯಕ್ತಿಗತವಾಗಿ ನಮ್ಮಿಬ್ಬರ ಬಾಂಧವ್ಯ ಚೆನ್ನಾಗಿತ್ತು. ಹಿಂದೂ ಧರ್ಮ ಗಂಗಾನದಿಯ ಹಾಗೆ. ಮೂಲದಲ್ಲಿ ಶುದ್ಧವಾಗಿದೆ, ಹರಿಯುವ ವೇಳೆ ಜನ ಮಲೀನ ಮಾಡುತ್ತಾರೆಂದು ಸ್ವಾಮೀಜಿ ಹೇಳಿದ್ದರು ಎಂದು ನೆನೆದರು.

    x1080

    ಸಾರ್ಥಕ, ಹೋರಾಟ, ಚಿಂತನೆಯ ಬದುಕು ಅವರದ್ದು. ದೇಶ ಒಬ್ಬ ಮಹಾನ್ ಚಿಂತಕನನ್ನು ಕಳೆದುಕೊಂಡಿದೆ. ರಾಷ್ಟ್ರದ ಧರ್ಮ ಸಂಸತ್ತಿನ ಕಾರ್ಯಕ್ರಮ ಆಯೋಜನೆ ಮಾಡಿದ ಕೀರ್ತಿ ಅವರದ್ದು. ಉಡುಪಿಯಲ್ಲಿ ವಿಶ್ವ ಹಿಂದೂ ಸಮ್ಮೇಳನವನ್ನು ದೊಡ್ಡ ಮಟ್ಟದಲ್ಲಿ ಮಾಡಿದ್ದರು. ಅನೇಕ ಬಾರಿ ಅವರ ಬಳಿ ನಾನು ಮಾತುಕತೆ ನಡೆಸಿದ್ದೇನೆ ಮಠಕ್ಕೆ ಹೋಗಿದ್ದೇನೆ. ಅವರೂ ನಮ್ಮ ಮನೆಗೆ ಬಂದಿದ್ದಾರೆ. ಅವರು ಹಿಂದೂ ಧರ್ಮ ಸಮರ್ಥನೆ ಮಾಡಿಕೊಳ್ಳುವ ಮೊದಲಿಗರಾಗಿದ್ದರು. ಅಯೋಧ್ಯೆಗಾಗಿ ದೊಡ್ಡ ಆಂದೋಲನ ಮಾಡಿದರು. ನಾನು ಅವರ ಬಳಿ ಮೆಚ್ಚುವ ಗುಣವೆಂದರೆ ಎಲ್ಲವನ್ನೂ ನೇರವಾಗಿ ಹೇಳುವುದು. ಹೀಗಾಗಿ ಅಂತಹ ಮಹಾನ್ ಚೇತನವನ್ನು ಕಳೆದುಕೊಂಡಿದ್ದು ಸಾಕಷ್ಟು ದುಃಖವಾಗಿದೆ ಎಂದರು.

  • ಪೇಜಾವರ ಶ್ರೀಗಳ ನಿಧನಕ್ಕೆ ಯದುವೀರ್, ಗಣಪತಿ ಶ್ರೀ ಸಂತಾಪ – ಕೃಷ್ಣಧಾಮ, ಪೇಜಾವರ ಧಾಮದಲ್ಲಿ ನೀರವ ಮೌನ

    ಪೇಜಾವರ ಶ್ರೀಗಳ ನಿಧನಕ್ಕೆ ಯದುವೀರ್, ಗಣಪತಿ ಶ್ರೀ ಸಂತಾಪ – ಕೃಷ್ಣಧಾಮ, ಪೇಜಾವರ ಧಾಮದಲ್ಲಿ ನೀರವ ಮೌನ

    ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಟದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಸಂತಾಪ ಹಂಚಿಕೊಂಡಿದ್ದಾರೆ.

    ವಿಶ್ವೇಶ್ವ ತೀರ್ಥ ಶ್ರೀಪಾದರು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ವೈಯಕ್ತಿಕ ಜೀವನ ತ್ಯಜಿಸಿ 80 ವರ್ಷ ಕೃಷ್ಣನ ಸೇವೆ ಮಾಡಿದ್ದಾರೆ. ಸಮಾಜ ಸುಧಾರಣೆಗೆ ತಮ್ಮ ಜೀವನ ಮುಡುಪಿಟ್ಟಿದ್ದರು. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಚಾಮುಂಡೇಶ್ವರಿ ನೀಡಲಿ ಎಂದು ಸಂತಾಪ ಸೂಚಿಸಿ ಪೇಜಾವರ ಸ್ವಾಮೀಜಿ ಮತ್ತು ಜಯಚಾಮರಾಜ ಒಡೆಯರ್ ಅವರ ಜೊತೆಗಿರುವ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಇತ್ತ ಮೈಸೂರಿನ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳು ಕೂಡ ಪೇಜಾವರ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ವಿಶ್ವೇಶತೀರ್ಥರು 7ನೇ ವರ್ಷಕ್ಕೆ ದೀಕ್ಷೆ ಪಡೆದರು. ನಮಗೆ 11 ವರ್ಷ ಆಗಿದ್ದಾಗ, ಅವರಿಗೆ 19 ವರ್ಷವಾಗಿತ್ತು. ಮೈಸೂರಿನ ಮಹಾರಾಜ ಶ್ರೀ ಜಯ ಚಾಮರಾಜ ಒಡೆಯರ್ ದೇವಾಲಯ ಕಟ್ಟಿಸಿದ್ದರು. ಆಗ ನಾವಿಬ್ಬರೂ ಭೇಟಿಯಾಗಿದ್ದೆವು. ಅಂದಿನಿಂದಲೂ ನಿಕಟ ಸಂಪರ್ಕವಿತ್ತು. ಪೇಜಾವರ ಶ್ರೀಪಾದರು ಸಾಮಾಜಿಕ, ಧಾರ್ಮಿಕವಾಗಿ ಅಪಾರ ಸಾಧನೆ ಮಾಡಿದ್ದು, ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಮುಸ್ಲಿಂ, ಕ್ರೈಸ್ತರು, ದಲಿತರನ್ನು ಒಳಗೊಳ್ಳುತ್ತಿದ್ದರು. ಯತಿಗಳಿಗೆ ಜೀವಿತಾವಧಿ ಲೆಕ್ಕವಿಲ್ಲ, ದೇಹಕ್ಕೆ ಮಾತ್ರ ವಯಸ್ಸಾಗಿತ್ತು ಎಂದು ತಿಳಿಸಿದ್ದಾರೆ.

    Yaduveer Wadiyar a

    ಪೇಜಾವರ ಶ್ರೀ ಅಸ್ತಂಗತ ಹಿನ್ನೆಲೆಯಲ್ಲಿ ಮೈಸೂರು ಶ್ರೀಕೃಷ್ಣಧಾಮದಲ್ಲಿ ನೀರವ ಮೌನ ಆವರಿಸಿತ್ತು. ಮಠದ ಒಳಾವರಣದಲ್ಲಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು. ಪೇಜಾವರ ಶ್ರೀಗಳು ಮೈಸೂರಿನಲ್ಲೇ ಕೊನೆಯ ಚಾತುರ್ಮಾಸ ವ್ರತ ಆಚರಿಸಿದ್ದರು. ಮೈಸೂರಿನಲ್ಲಿ ಒಟ್ಟು ಮೂರು ಬಾರಿ ಚಾತುರ್ಮಾಸ ಆಚರಣೆ ಮಾಡಿದ್ದರು. 2003, 2012, 2019ರಲ್ಲಿ ಚಾತುರ್ಮಾಸ ಆಚರಣೆ ಮಾಡಿದ್ದರು. ಒಮ್ಮೆ ಅಖಿಲ ಭಾರತ ಮಾಧ್ವ ಮಹಾಮಂಡಲ ಸಭೆ ಕೂಡ ಇಲ್ಲಿ ಆಯೋಜನೆ ಮಾಡಿದ್ದರು.

    ಮೈಸೂರಿನ ಒಡನಾಟದ ಬಗ್ಗೆ ಶ್ರೀ ಕೃಷ್ಣಧಾಮದ ಮೇಲ್ವಿಚಾರಕ ರಘುರಾಮ್ ರಾವ್ ಈ ಬಗ್ಗೆ ಮಾಹಿತಿ ನೀಡಿ, ಮೈಸೂರು ಮತ್ತು ಪೇಜಾವರ ಸ್ವಾಮೀಜಿ ಅವರದ್ದು ತಂದೆ-ಮಕ್ಕಳ ಸಂಬಂಧ. ಕೃಷ್ಣ ಮಠದಷ್ಟೇ ಸಂತೋಷದಿಂದ ಇಲ್ಲಿ ವಾಸ್ತವ್ಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ಇನ್ನೂ ಜೆಪಿ ನಗರದಲ್ಲಿನ ಪೇಜಾವರ ಧಾಮ ಎಂಬ ವೃದ್ಧಾಶ್ರಮದಲ್ಲೂ ನೀರವ ಮೌನ ಆವರಿಸಿತ್ತು. 2016 ರಲ್ಲಿ ಸ್ವಾಮೀಜಿಗಳು ಶ್ರೀ ಮಠದಿಂದ ಈ ವೃದ್ಧ ಶ್ರಮ ಸ್ಥಾಪಿಸಿದ್ದರು. ಬಹು ಅಚ್ಚುಕಟ್ಟಾಗಿ ಈ ವೃದ್ಧ ಶ್ರಮ ನಡೆಯುತ್ತಿದೆ. ಈಗ ಸದ್ಯಕ್ಕೆ ವೃದ್ಧಶ್ರಮದಲ್ಲಿ 40 ಜನ ಇದ್ದಾರೆ. ಸ್ವಾಮೀಜಿ ಗಳ ನಿಧನದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿ ನೀರವ ಮೌನ ಆವರಿಸಿತ್ತು.

  • ಪೇಜಾವರಶ್ರೀ ಹೆಸರು ಮುದ್ರಿಸಿ ಕ್ರೈಸ್ತ ಮತಾಂತರ: ಶಿಷ್ಯವರ್ಗ ಆಕ್ರೋಶ

    ಪೇಜಾವರಶ್ರೀ ಹೆಸರು ಮುದ್ರಿಸಿ ಕ್ರೈಸ್ತ ಮತಾಂತರ: ಶಿಷ್ಯವರ್ಗ ಆಕ್ರೋಶ

    ಉಡುಪಿ: ಕ್ರೈಸ್ತಮತ ಪ್ರಚಾರಕ ವಸಂತ ಪೈ ಪೇಜಾವರ ಸ್ವಾಮೀಜಿಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಉಡುಪಿಯಲ್ಲಿರುವ ಸ್ವಾಮೀಜಿ ಶಿಷ್ಯ ವರ್ಗವು ಆಕ್ರೋಶ ವ್ಯಕ್ತಪಡಿಸಿದೆ.

    ಬೆಂಗಳೂರಿನಲ್ಲಿ ವಸಂತ ಪೈ ಹೆಸರಿನಲ್ಲಿ ಕೆಲವು ಪೋಸ್ಟರ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಗೋಡೆಗಳಿಗೂ ಅಂಟಿಸಿ ಪ್ರಚಾರ ಮಾಡಲಾಗುತ್ತಿದೆ. ಜೆ.ಪಿ.ನಗರದ, ರಾಯಲ್ ಪ್ರೀಸ್ಟ್ ವುಡ್ ಚರ್ಚ್ ನ ಈ ಪ್ರಕಟಣೆ ಪ್ರಕಾರ ವಸಂತ ಪೈ ಪೇಜಾವರ ಶ್ರೀಗಳ ಸಹೋದರನಂತೆ. ಆತನೇ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾನಂತೆ. ಉಡುಪಿಯ ಕೃಷ್ಣಮಠದ ಹಸರನ್ನೂ ಈ ಭಿತ್ತಿಪತ್ರದಲ್ಲಿ ಬಳಸಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

    ವಸಂತ ಪೈ ಪೇಜಾವರ ಸ್ವಾಮೀಜಿಗಳ ಸಹೋದರನೇ ಅಲ್ಲ. ಆ ವ್ಯಕ್ತಿ ಯಾರೆಂದು ಪೇಜಾವರ ಸ್ವಾಮೀಜಿಗೂ ತಿಳಿದಿಲ್ಲ. ಈ ರೀತಿಯ ವಾಮಮಾರ್ಗ ಬಳಸಿ ಕ್ರೈಸ್ತ ಮತ ಪ್ರಚಾರ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು ಗುಡುಗಿದ್ದಾರೆ.

    UDP pejawar swamiji

    ಪೇಜಾವರ ಸ್ವಾಮೀಜಿ ಜೀವನಪರ್ಯಂತ ಗೋಹತ್ಯೆ, ಮತಾಂತರ, ಜಿಹಾದಿ ಉಗ್ರವಾದದಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ನಡೆಸಿದವರು. ತಿರುಪತಿಯಲ್ಲೂ ಮತಾಂತರದ ಕುತಂತ್ರಗಳು ನಡೆದಾಗ ದೇಶಾದ್ಯಂತ ಸಾಧು ಸಂತರನ್ನು ಸಂಘಟಿಸಿ ಹೋರಾಡಿದವರು. ಶ್ರೀಗಳ ಹೆಸರನ್ನು ಬಳಸಿ ಹಿಂದೂ ಸಮಾಜವನ್ನು ಒಡೆಯಲು ಕುತಂತ್ರ ನಡೆಯುತ್ತಿದೆ ಎಂದು ಹಿಂದೂ ಮುಖಂಡ ವಾಸುದೇವ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ವಾಮೀಜಿಗಳ ಹೆಸರನ್ನೇ ತಮ್ಮ ಮತಪ್ರಚಾರಕ್ಕೆ ಬಳಸಿಕೊಳ್ಳುವ ತಂತ್ರವು ಸಾಮಾಜಿಕ ಜಾಲತಾಣಗಳ ಮೂಲಕ ನಮ್ಮ ಗಮನಕ್ಕೆ ಬಂದಿದೆ. ವಸಂತ ಪೈ ಹಾಗೂ ಆತನ ಹಿಂದೆ ಇರುವ ವ್ಯಕ್ತಿಗಳ ವಿರುದ್ಧ ಹೋರಾಟ ನಡೆಸಲಾಗುವುದು. ಪೊಲೀಸರು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಾಸುದೇವ ಭಟ್ ಒತ್ತಾಯಿಸಿದ್ದಾರೆ.

    UDP A

  • ನವಬೃಂದಾವನ ಧ್ವಂಸ ಖಂಡಿಸಿದ ಉಡುಪಿಯ ಅಷ್ಟಮಠಾಧೀಶರು

    ನವಬೃಂದಾವನ ಧ್ವಂಸ ಖಂಡಿಸಿದ ಉಡುಪಿಯ ಅಷ್ಟಮಠಾಧೀಶರು

    ಉಡುಪಿ: ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ಬೃಂದಾವನ ಕೆಡವಿರುವ ಪ್ರಕರಣ ಸಾಕಷ್ಟು ವಿವಾದ ಸೃಷ್ಟಿಸಿದೆ. ಘಟನೆಯನ್ನು ಉಡುಪಿಯ ಅಷ್ಟಮಠಾಧೀಶರು ಖಂಡಿಸಿದ್ದಾರೆ.

    ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶತೀರ್ಥರು ಮಾತನಾಡಿ, ಈ ಕೃತ್ಯದಿಂದ ಕರ್ನಾಟಕಕ್ಕೆ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ. ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ. ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್

    Pejawara Sri B

    ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ತಕ್ಷಣವೇ ನವಬೃಂದಾವನ ಸ್ಥಳಕ್ಕೆ ಭೇಟಿ ನೀಡುತ್ತೇವೆ ಎಂದು ಹೇಳಿದರು.

    ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಇಂದು ಬೆಳಗ್ಗೆ ಆಘಾತಕಾರಿ ಸುದ್ದಿಯನ್ನು ಕೇಳಿದ್ದೇವೆ. ಇದು ನೋವವನ್ನು ಉಂಟು ಮಾಡಿದೆ. ಈ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

    UDP palimaru Shree

    ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಪ್ರಕರಣವನ್ನು ಹಿಂದೂ ಸಮಾಜ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.

    ಏನಿದು ಪ್ರಕರಣ?:
    ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    KPL BORUDHVAN DWSHA A

    ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ತಹಶೀಲ್ದಾರ್ ವೀರೇಶ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

  • ರಾಮಜನ್ಮಭೂಮಿ, ಗಂಗಾ ಶುದ್ಧೀಕರಣ ಬಗ್ಗೆ ಪ್ರಧಾನಿ ಮೋದಿ, ಪೇಜಾವರ ಸ್ವಾಮೀಜಿ ಮಾತುಕತೆ

    ರಾಮಜನ್ಮಭೂಮಿ, ಗಂಗಾ ಶುದ್ಧೀಕರಣ ಬಗ್ಗೆ ಪ್ರಧಾನಿ ಮೋದಿ, ಪೇಜಾವರ ಸ್ವಾಮೀಜಿ ಮಾತುಕತೆ

    ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿರುವ ಪ್ರಧಾನಿ ಕಚೇರಿಗೆ ತೆರಳಿದ ಸ್ವಾಮೀಜಿಯವರನ್ನು ಪ್ರಧಾನಿ ಮೋದಿ ಗೌರವದಿಂದ ಸ್ವಾಗತಿಸಿದ್ದಾರೆ.

    ಸುಮಾರು ಅರ್ಧ ಗಂಟೆಗಳ ಕಾಲ ಇಬ್ಬರ ನಡುವೆ ಮಾತುಕತೆ ನಡೆದಿದೆ. ಐದು ವರ್ಷಗಳ ಆಡಳಿತಕ್ಕೆ ಸ್ವಾಮೀಜಿ ಈ ಸಂದರ್ಭ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ರಾಮ ಜನ್ಮಭೂಮಿ ವಿವಾದ, ಗಂಗಾ ನದಿ ಶುದ್ಧೀಕರಣ ಕುರಿತಾದ ಅಭಿಪ್ರಾಯವನ್ನು ಸ್ವಾಮೀಜಿ ಪ್ರಧಾನಿ ಬಳಿ ವ್ಯಕ್ತಪಡಿಸಿದ್ದಾರೆ. ಮುಂದಿನ ಐದು ವರ್ಷಗಳ ಆಡಳಿತಕ್ಕೆ ಸ್ವಾಮೀಜಿ ಶುಭಕೋರಿದ್ದಾರೆ. ಗುರು ಪೂರ್ಣಿಮೆ ದಿನ ನಿಮ್ಮ ಭೇಟಿಯಾದದ್ದು ನಮ್ಮ ಸುಯೋಗ ಎಂದಿದ್ದಾರೆ.

    ಸ್ವಾಮೀಜಿ ಭೇಟಿ ನಂತರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ವಿಶೇಷ ದಿನದಂದು ಗುರುಗಳ ಭೇಟಿಯಿಂದ ಮನಸ್ಸಿಗೆ ಖುಷಿಯಾಗಿದೆ. ಶ್ರೀಗಳಿಂದ ಸಿಕ್ಕ ಆಶೀರ್ವಾದ ದೊಡ್ಡದು. ಪೇಜಾವರಶ್ರೀಗಳಿಂದ ಕಲಿಯುವಂತದ್ದು ಸಾಕಷ್ಟಿದೆ. ಸ್ವಾಮೀಜಿಗಳ ಮಹತ್ವಾಕಾಂಕ್ಷೆಯ ಕಲ್ಪನೆಗಳನ್ನು ಮೋದಿ ಹೊಗಳಿ ಟ್ವೀಟ್ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ನಡೆಸಿದ ಅರ್ಧಗಂಟೆ ಮಾತುಕತೆಯ ಸವಿವರವನ್ನು ರಾಜ್ಯಕ್ಕೆ ಬಂದ ನಂತರ ಕೊಡುವುದಾಗಿ ಸ್ವಾಮೀಜಿ ಹೇಳಿದ್ದಾರೆ.

    Pejawara Sri A

  • ವಿದ್ಯಾಪ್ರಸನ್ನ ಶ್ರೀಗಳಿಂದ ಉಪವಾಸ ಹೋರಾಟ

    ವಿದ್ಯಾಪ್ರಸನ್ನ ಶ್ರೀಗಳಿಂದ ಉಪವಾಸ ಹೋರಾಟ

    ಉಡುಪಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಜಟಾಪಟಿಯಲ್ಲಿ ವಿದ್ಯಾಪ್ರಸನ್ನ ಸುಬ್ರಹ್ಮಣ್ಯ ಶ್ರೀಗಳು ಉಪವಾಸ ಶುರು ಮಾಡಿದ್ದು, ನ್ಯಾಯ ಸಿಗುವವರೆಗೆ ಅನ್ನಾಹಾರ ತ್ಯಜಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀಗಳು ಕೂಡಲೇ ಉಪವಾಸ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕುಕ್ಕೆ ದೇವಸ್ಥಾನದ ಕಿರುಕುಳದಿಂದ ಸ್ವಾಮಿಗಳು ಬೇಸರಪಟ್ಟಿದ್ದಾರೆ. ಇವತ್ತಿನಿಂದ ಅವರು ಉಪವಾಸ ಆರಂಭ ಮಾಡಿದ್ದಾರೆ. ಇದನ್ನು ಕೇಳಿ ನನಗೆ ಕಳವಳ ಆಗಿದೆ ಅಂತ ಹೇಳಿದರು.

    PEJAWAR SWAMY

    ಉಪವಾಸದ ವಿಚಾರ ತಿಳಿದು ನಮಗೆ ಬಹಳ ಬೇಸರವಾಗಿದೆ. ನವರಾತ್ರಿ ಮಹೋತ್ಸವ ಸಂದರ್ಭ ಉಪವಾಸ ಮಾಡುವುದು ಸರಿಯಲ್ಲ. ಶ್ರೀಗಳು ಉಪವಾಸವನ್ನು ಕೂಡಲೇ ಸ್ಥಗಿತಗೊಳಿಸಬೇಕು. ದಸರಾ ಮುಗಿದ ಕೂಡಲೇ ನಾನು ಸುಬ್ರಹ್ಮಣ್ಯಕ್ಕೆ ಬರುತ್ತೇನೆ. ದೇವಸ್ಥಾನ ಮತ್ತು ಮಠದ ಪರಸ್ಪರ ಸಂಘರ್ಷ ಬಗೆಹರಿಸಲು ಪ್ರಯತ್ನಪಡುತ್ತೇನೆ. ಮಠದಲ್ಲಿ ಸರ್ಪಸಂಸ್ಕಾರ ಮಾಡಿದ್ದರಿಂದ ದೇವಸ್ಥಾನಕ್ಕೆ ಏನು ತೊಂದರೆಯಾಗಿದೆ. ಸಾರ್ವಜನಿಕರಿಗೆ – ಭಕ್ತರಿಗೆ ಏನು ನಷ್ಟ ಆಗಿದೆ? ಎಂಬ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಅನಾವಶ್ಯಕ ಗೊಂದಲ ಸಮಾಜದಲ್ಲಿ ನಡೆಯುವುದು ಸರಿಯಲ್ಲ. ದೇವಸ್ಥಾನ ಮತ್ತು ಮಠ ಹಿಂದೆ ಜೊತೆಗೆ ಇತ್ತು. ಸರ್ಪ ಸಂಸ್ಕಾರ ಮತ್ತಿತರ ಸೇವೆಗಳು ಎಲ್ಲೇ ಆದರೂ ಫಲ ದೇವರಿಗೆ ಸಲ್ಲುತ್ತದೆ. ದೇವರ ಸೇವೆ ವಿಚಾರದಲ್ಲಿ ಯಾರು ಯಾರಿಗೂ ಒತ್ತಡ ಹೇರಬಾರದು. ಭಕ್ತರಿಗೆ ಸ್ವಾತಂತ್ರ್ಯವಿದೆ, ಅವರು ಎಲ್ಲಿ ಬೇಕಾದರೂ ಸೇವೆ ನೀಡಬಹುದು ಎಂದರು.

    SWAMIJI

    ಯತಿಗಳು ಉಪವಾಸ ಮಾಡಿದರೆ ಹಿಂದೂ ಸಮಾಜಕ್ಕೆ ನಷ್ಟ ಎಂದು ಆತಂಕ ವ್ಯಕ್ತಪಡಿಸಿದರು. ಐದು ದಿನದ ನಂತರ ಸಂಧಾನ ಫಲಿಸದಿದ್ದರೆ ಮುಖ್ಯಮಂತ್ರಿಗಳನ್ನು ಸಂಪರ್ಕಿಸುತ್ತೇನೆ. ಎಲ್ಲ ವಿಚಾರ, ಗೊಂದಲಗಳನ್ನು ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತರುತ್ತೇನೆ. ಅವರೂ ಒಬ್ಬ ಕುಕ್ಕೆಯ ಭಕ್ತರಾಗಿ ಸಮಸ್ಯೆ ಬಗೆಹರಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಪೇಜಾವರ ಸ್ವಾಮೀಜಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೇಜಾವರ ಶ್ರೀ ಸನ್ಯಾಸಿಗಳು, ಅವರು ಟಿವಿ ನೋಡದ ಕಾರಣ ಕೇಂದ್ರದ ಯೋಜನೆಗಳ ಅರಿವಿಲ್ಲ: ಕರಂದ್ಲಾಜೆ

    ಪೇಜಾವರ ಶ್ರೀ ಸನ್ಯಾಸಿಗಳು, ಅವರು ಟಿವಿ ನೋಡದ ಕಾರಣ ಕೇಂದ್ರದ ಯೋಜನೆಗಳ ಅರಿವಿಲ್ಲ: ಕರಂದ್ಲಾಜೆ

    ಮಂಗಳೂರು: ಪೇಜಾವರ ಸ್ವಾಮೀಜಿ ಸನ್ಯಾಸಿಗಳು. ಅವರು ಟಿವಿ ನೋಡೋದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅರಿವಿಲ್ಲ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಮಂಗಳೂರಿನಲ್ಲಿ ಹೇಳಿದ್ದಾರೆ.

    ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಪಕ್ಷದ ಹಿರಿಯರಿಂದ ಸ್ವಾಮಿಗಳಿಗೆ ಮನವರಿಕೆ ಮಾಡಲಾಗುತ್ತದೆ. ಪೇಜಾವರ ಸ್ವಾಮೀಜಿಗಳನ್ನು ಭೇಟಿಯಾಗುವವರು ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡದೇ ಇರೋದರಿಂದ ಅವರು ತಪ್ಪು ಅಭಿಪ್ರಾಯ ಹೊಂದಿರಬಹುದು ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

    ಇನ್ನೂ ಇತ್ತೀಚೆಗೆ ಉಡುಪಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದನದ ವ್ಯಾಪಾರಿ ಹಸನಬ್ಬ ಸಾವು ಪ್ರಕರಣದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಸುಳ್ಳು ಆರೋಪದ ಮೂಲಕ ಬಂಧಿಸಲಾಗಿದೆ ಎಂದು ಆರೋಪಿಸಿದರು.

    Mng Shobha

    ಆರೋಪಿಗಳ ಜೊತೆ ಮತ್ತು ಎಸ್ಪಿ ಜೊತೆ ಮಾತನಾಡಿದ್ದು, ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ನಾಳೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

    ನರೇಂದ್ರ ಮೋದಿಯವರ ಸರ್ಕಾರ ಬಂದು ನಾಲ್ಕು ವರ್ಷವಾದರು, ಚುನಾವಣೆ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತರುವುದಾಗಿ ಭರವಸೆ ನೀಡಿ ಈಡೇರಿಸಿಲ್ಲ ಎಂದು ಮಂತ್ರಾಲಯದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮೋದಿಯವರ ಅಚ್ಛೇ ದಿನ್ ಇನ್ನೂ ಪರಿಣಾಮಕಾರಿ ಆಗಬೇಕಿದೆ: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ