Tag: ಫೈನಲ್

  • ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲೇ ಉಳಿಯಲಿದೆ ಟೀಂ ಇಂಡಿಯಾ

    ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲೇ ಉಳಿಯಲಿದೆ ಟೀಂ ಇಂಡಿಯಾ

    ಲಂಡನ್: ಸೆಮಿಫೈನಲ್ ಸೋತು ಹಲವು ವಿಮರ್ಶೆಗಳನ್ನು ಎದುರಿಸುತ್ತಿರುವ ಟೀಂ ಇಂಡಿಯಾ ಸದ್ಯ ವಿಶ್ವಕಪ್ ಫೈನಲ್ ಪಂದ್ಯದವರೆಗೂ ಇಂಗ್ಲೆಂಡ್‍ನಲ್ಲಿ ಉಳಿಯಲಿದೆ.

    ಹೌದು, ಬಿಸಿಸಿಐ ಸಮಿತಿ ಟೀಂ ಇಂಡಿಯಾ ಆಟಗಾರರು, ಸಿಬ್ಬಂದಿಗೆ ಟಿಕೆಟ್ ಕಾಯ್ದಿರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಟಗಾರರು ಇಂಗ್ಲೆಂಡ್‍ನಲ್ಲೇ ಉಳಿಯಲಿದ್ದಾರೆ. ಈಗಾಗಲೇ ಕೆಲ ಆಟಗಾರರು ಮ್ಯಾಂಚೆಸ್ಟರ್ ನಿಂದ ಲಂಡನ್‍ಗೆ ಬಂದಿದ್ದು, ಇನ್ನು ಕೆಲ ಆಟಗಾರರು ಮ್ಯಾಂಚೆಸ್ಟರ್ ನಲ್ಲೇ ಉಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರದಂದು ಎಲ್ಲ ಆಟಗಾರರು ಲಂಡನ್‍ಗೆ ತಲುಪಲಿದ್ದು, ಆ ಬಳಿಕ ಒಟ್ಟಾಗಿ ತವರಿಗೆ ಮರಳಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    bcci

    ಇತ್ತ ಟೀಂ ಇಂಡಿಯಾ ಖಚಿತವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಲಿದೆ ಎಂಬ ನಂಬಿಕೆ ಹೊಂದಿದ್ದ ಅಭಿಮಾನಿಗಳು ಟಿಕೆಟ್ ಖರೀದಿ ಮಾಡಿದ್ದರು. ಆದರೆ ಸೆಮಿಫೈನಲ್‍ನಲ್ಲೇ ತಂಡ ಹೊರ ನಡೆದ ಪರಿಣಾಮ ಈಗ ಅಭಿಮಾನಿಗಳು ಟಿಕೆಟ್ ರೀ ಸೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮ ವರದಿಯೊಂದರ ಅನ್ವಯ ಫೈನಲ್ ಪಂದ್ಯದ ಶೇ.80 ಟಿಕೆಟ್‍ಗಳನ್ನು ಟೀಂ ಇಂಡಿಯಾ ಅಭಿಮಾನಿಗಳೇ ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

    ಸದ್ಯ ಐಸಿಸಿ ಟಿಕೆಟ್ ರೀ ಸೇಲ್ ಮಾಡಲು ಇಷ್ಟಪಡುತ್ತಿಲ್ಲ ಎನ್ನಲಾಗಿದೆ. ವಿಶ್ವಕಪ್ ಟೂರ್ನಿಯ ಫೈನಲ್ ಭಾಗವಾಗಿ ನಡೆಯುವ ಪಂದ್ಯ ಭಾನುವಾರ ನಡೆಯಲಿದ್ದು, ಇಂಗ್ಲೆಂಡ್-ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗುತ್ತಿದೆ. ಈ ಬಾರಿ ಇತ್ತಂಡಗಳಲ್ಲಿ ಯಾವುದೇ ತಂಡ ವಿಶ್ವಕಪ್ ಗೆದ್ದರೂ ಕೂಡ ಇತಿಹಾಸ ಸೃಷ್ಟಿಯಾಗಲಿದೆ. ಯಾವುದೇ ತಂಡ ಗೆದ್ದರೂ ಕೂಡ ಚೊಚ್ಚಲ ವಿಶ್ವಕಪ್ ಗೆದ್ದ ಸಾಧನೆ ಮಾಡಲಿದೆ.

  • ಫೈನಲ್ ಪ್ರವೇಶಿಸಲಿರುವ 2 ತಂಡಗಳ ಬಗ್ಗೆ ಪೀಟರ್ಸನ್ ಭವಿಷ್ಯ

    ಫೈನಲ್ ಪ್ರವೇಶಿಸಲಿರುವ 2 ತಂಡಗಳ ಬಗ್ಗೆ ಪೀಟರ್ಸನ್ ಭವಿಷ್ಯ

    ಲಂಡನ್: 2019ರ ವಿಶ್ವಕಪ್ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಮುಗಿದಿದ್ದು, ಇಂಗ್ಲೆಂಡ್‍ನ ಮಾಜಿ ಆಟಗಾರ ಕೇವಿನ್ ಪೀಟರ್ಸನ್ ಫೈನಲ್‍ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಮಂಗಳವಾರ ನಡೆಯಲಿರಿವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೆಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮುಖಾಮುಖಿ ಆಗಲಿವೆ. ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್‍ನಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಸೆಣಸಲಿವೆ.

    https://twitter.com/KP24/status/1147602245942435840

    ಈಗ ಸೆಮಿಫೈನಲ್ ಹಂತದಲ್ಲೇ ಫೈನಲ್ ಪಂದ್ಯದ ಬಗ್ಗೆ ಮಾತನಾಡಿರುವ ಪೀಟರ್ಸನ್, ನಾವು ಸೆಮಿಫೈನಲ್‍ನಲ್ಲಿ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುತ್ತೇವೆ. ಭಾನುವಾರ ಭಾರತ ಇಂಗ್ಲೆಂಡ್ ನಡುವೆ ಫೈನಲ್ ಪಂದ್ಯ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಭಾರತ ರವೀಂದ್ರ ಜಡೇಜಾ ಅವರನ್ನು ಸೆಮಿಫೈನಲ್‍ನಲ್ಲಿ ಆಡಬೇಕು. ಕುಲದೀಪ್ ಯಾದವ್ ಅವರ ಬದಲು ಮೊಹಮ್ಮದ್ ಶಮಿ ಆಡಬೇಕು ಮತ್ತು ದಿನೇಶ್ ಕಾರ್ತಿಕ್ ಬದಲು ಜಡೇಜಾ ಅವರನ್ನು ಆಡಿಸಬೇಕು ಎಂದಿದ್ದಾರೆ. ಆದರೂ ಇಂಗ್ಲೆಂಡ್‍ಗೆ ಈ ಪಂದ್ಯ ಸುಲಭವಾಗಿರಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

    https://twitter.com/KP24/status/1147464976828964864

    ವಿಶ್ವಕಪ್ ಟೂರ್ನಿಯಲ್ಲಿ ಕೇವಿನ್ ಪೀಟರ್ಸನ್ ಭವಿಷ್ಯ ಹೇಳುತ್ತಿರುವುದು ಇದೇ ಮೊದಲೇನಲ್ಲ. ವಿಶ್ವಕಪ್‍ನಲ್ಲಿ ಭಾರತ ಎಲ್ಲ ಪಂದ್ಯಗಳನ್ನು ಗೆಲ್ಲುತ್ತಿದ್ದಾಗ ಲೀಗ್ ಹಂತದಲ್ಲಿ ಭಾರತವನ್ನು ಸೋಲಿಸಿದ ತಂಡ ವಿಶ್ವಕಪ್ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದರು. ನಂತರ ಇಂಗ್ಲೆಂಡ್ ಭಾರತವನ್ನು ಸೋಲಿಸಿತ್ತು.

    ಭಾರತ ಲೀಗ್ ಹಂತದಲ್ಲಿ ಆಡಿದ 9 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಒಂದರಲ್ಲಿ ಸೋತು 15 ಅಂಕದೊಂದಿಗೆ ಅಗ್ರ ಸ್ಥಾನದಲ್ಲಿದೆ. 11 ಅಂಕಗಳಿಸಿರುವ ನ್ಯೂಜಿಲೆಂಡ್ 4ನೇ ಸ್ಥಾನದಲ್ಲಿದೆ. ಲೀಗ್ ಹಂತದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಮಳೆಯ ಕಾರಣ ಒಂದು ಎಸೆತ ಕಾಣದೇ ರದ್ದಾಗಿತ್ತು. ಲೀಗ್ ಹಂತದಲ್ಲಿ ಒಂದು ಬಾರಿಯೂ ಮುಖಾಮುಖಿಯಾಗದ ತಂಡಗಳು ನಾಳೆ ಸೆಮಿಫೈನಲ್‍ನಲ್ಲಿ ಸೆಣಸಲಿವೆ.

    KOHLI

    ಈ ಪಂದ್ಯದಲ್ಲಿ 11 ವರ್ಷದ ನಂತರ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮುಖಾಮುಖಿಯಾಗಲಿದ್ದಾರೆ. 2008ರಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಈ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಭಾರತ ಭರ್ಜರಿ ಜಯಸಾಧಿಸಿತ್ತು. ಬರೋಬ್ಬರಿ 11 ವರ್ಷಗಳ ಬಳಿಕ ಮತ್ತೆ ಈ ಇಬ್ಬರು ನಾಯಕರು ತಂಡದ ಜವಾಬ್ದಾರಿಯೊಂದಿಗೆ ಹೋರಾಟಕ್ಕೆ ಸಿದ್ಧವಾಗಿದ್ದಾರೆ.

  • ಮದುವೆ ಮನೆಯಲ್ಲಿ ಐಪಿಎಲ್ ಹವಾ – ಕುಣಿದು ಕುಪ್ಪಳಿಸಿದ ಅತಿಥಿಗಳು

    ಮದುವೆ ಮನೆಯಲ್ಲಿ ಐಪಿಎಲ್ ಹವಾ – ಕುಣಿದು ಕುಪ್ಪಳಿಸಿದ ಅತಿಥಿಗಳು

    ನವದೆಹಲಿ: ಮದುವೆ ಮನೆ ಎಂದರೆ ಅಲ್ಲಿ ವಧು – ವರರೇ ಆಕರ್ಷಣೆಯ ಕೇಂದ್ರ ಬಿಂದು ಆಗಿರುತ್ತಾರೆ. ಆದರೆ ಇಲ್ಲೊಂದು ಮದುವೆಯಲ್ಲಿ ಮನೆಯವರು ಮತ್ತು ಅತಿಥಿಗಳು ವಧು ವರರನ್ನು ನೋಡುವುದನ್ನು ಬಿಟ್ಟು ಐಪಿಎಲ್ ಫೈನಲ್ ನೋಡಿ ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಕಳೆದ ಭಾನುವಾರ ನಡೆದ ಐಪಿಎಲ್ 12 ರ ಅವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಮದುವೆ ಮನೆಯಲ್ಲಿ ರಿಸೆಪ್ಷನ್ ನಡೆಯುತ್ತಿರುವಾಗ ದೊಡ್ಡ ಟಿವಿಯಲ್ಲಿ ಪ್ರಸಾರ ಮಾಡಲಾಗಿತ್ತು.

    ಕೊನೆಯ ಓವರಿನಲ್ಲಿ ಪಂದ್ಯ ತಿರುವು ಪಡೆದಕೊಂಡ ಕಾರಣ ಅತಿಥಿಗಳು ಕುತೂಹಲದಿಂದ ಪಂದ್ಯ ವೀಕ್ಷಿಸುತ್ತಿದ್ದರು. ಕೊನೆಯ ಎಸೆತದಲ್ಲಿ ಮುಂಬೈ ತಂಡ ಗೆದ್ದ ಕೂಡಲೇ ಅತಿಥಿಗಳು ಎದ್ದು ನಿಂತು ಗಟ್ಟಿ ಮೇಳದವರು ಬಾರಿಸಿದ ಸಂಗೀತಕ್ಕೆ ಕುಣಿದು ಕುಪ್ಪಳಿಸಿದ್ದಾರೆ.

  • ನಿಜವಾಗಿ ಧೋನಿಯ ರನೌಟ್ ಆಗಿದ್ರಾ – ಪಂದ್ಯಕ್ಕೆ ತಿರುವು ಕೊಟ್ಟ 2 ನಿಮಿಷದ ವಿಡಿಯೋ ನೋಡಿ

    ನಿಜವಾಗಿ ಧೋನಿಯ ರನೌಟ್ ಆಗಿದ್ರಾ – ಪಂದ್ಯಕ್ಕೆ ತಿರುವು ಕೊಟ್ಟ 2 ನಿಮಿಷದ ವಿಡಿಯೋ ನೋಡಿ

    ಹೈದಾರಬಾದ್: ಮುಂಬೈ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಧೋನಿ ರನೌಟ್ ಆಗದೇ ಇದ್ದರೆ ಚೆನ್ನೈ ಚಾಂಪಿಯನ್ ಆಗಿ ಹೊರ ಹೊಮ್ಮುತಿತ್ತಾ ಎನ್ನುವ ಚರ್ಚೆ ಈಗ ಜೋರಾಗಿದೆ.

    ಹೌದು. 12.3ನೇ ಓವರ್ ನಲ್ಲಿ ಚೆನ್ನೈ ತಂಡ 3 ವಿಕೆಟ್ ಕಳೆದುಕೊಂಡು 81 ರನ್ ಗಳಿಸಿ ಸುಭದ್ರವಾಗಿತ್ತು. ಹಾರ್ದಿಕ್ ಪಾಂಡ್ಯ ಎಸೆದ 13ನೇ ಓವರಿನ 4 ಎಸೆತವನ್ನು ವಾಟ್ಸನ್ ಎಡಗಡೆ ಹೊಡೆದು ಸಿಂಗಲ್ ರನ್ ಓಡಿದರು. ಈ ವೇಳೆ ಮಾಲಿಂಗ ಸರಿಯಾಗಿ ಪಾಂಡ್ಯ ಅವರ ಕೈಗೆ ಥ್ರೋ ಮಾಡದ ಕಾರಣ ಧೋನಿ ಮತ್ತೊಂದು ರನ್ ಗಾಗಿ ಓಡಿದರು.

    ಈ ಸಂದರ್ಭದಲ್ಲಿ ಬಾಲ್ ಮಿಡ್ ಆಫ್ ನಲ್ಲಿ ಫೀಲ್ಡ್ ಮಾಡುತ್ತಿದ್ದ ಇಶಾನ್ ಕಿಶನ್ ಕೈ ಸೇರಿತ್ತು. ಕೂಡಲೇ ಅವರು ನೇರವಾಗಿ ವಿಕೆಟ್‍ಗೆ ಥ್ರೋ ಮಾಡಿ ಬೇಲ್ಸ್ ಹಾರಿಸಿದರು. ಬಹಳ ಕಷ್ಟದ ತೀರ್ಮಾನ ಮೂರನೇ ಅಂಪೈರ್ ನಿಗೆಲ್ ಲಾಂಗ್ ಹಲವು ಕೋನಗಳಿಂದ ಪರಿಶೀಲಿಸಿ ಕೊನೆಗೆ 2 ರನ್ ಗಳಿಸಿದ್ದ ಧೋನಿ ಔಟ್ ಎಂದು ತೀರ್ಪು ನೀಡಿದರು.

    ಬ್ಯಾಟ್ ಮೂಲಕ ಕ್ರೀಸ್ ಮುಟ್ಟುತ್ತಿದ್ದಾಗ ವಿಕೆಟಿನಲ್ಲಿರುವ ದೀಪ ಮೊಳಗಿದ ಹಿನ್ನೆಲೆಯಲ್ಲಿ ಈ ತೀರ್ಪಿನ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಧೋನಿ ಔಟ್ ಆಗದೇ ಇದ್ದರೂ ಮೂರನೇ ಅಂಪೈರ್ ತಪ್ಪು ನಿರ್ಧಾರ ಪ್ರಕಟಿಸಿದ್ದಾರೆ ಎಂದು ಧೋನಿ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

    https://twitter.com/Atheist_Krishna/status/1127818025128714241

    ವೀಕ್ಷಕ ವಿವರಣೆಗಾರರು ಟಿವಿ ರಿಪ್ಲೇ ಪ್ರಸಾರಗೊಂಡ ಆರಂಭದಲ್ಲಿ ಧೋನಿ ಸೇಫ್ ಎಂದೇ ಹೇಳಿದ್ದರು. ನಂತರ ಇದು ಬಹಳ ಕ್ಲಿಷ್ಟಕರ ಸನ್ನಿವೇಶ. ಇಡೀ ಫಲಿತಾಂಶವನ್ನು ಬದಲಾಯಿಸಬಲ್ಲ ತೀರ್ಪು ಇದಾಗಬಹುದು ಎಂದು ಊಹಿಸಿದ್ದರು. ಹೀಗಾಗಿ ಈ ತೀರ್ಪು ಪ್ರಕಟಿಸಲು ಅಂಪೈರ್ 2 ನಿಮಿಷ ತೆಗೆದುಕೊಂಡು ಅಂತಿಮವಾಗಿ ಔಟ್ ಎಂದು ಪ್ರಕಟಿಸಿದರು.

    ಒಂದು ವೇಳೆ ಧೋನಿ ಔಟಾಗದೇ ಇದ್ದರೆ ಪಂದ್ಯದ ಫಲಿತಾಂಶವೇ ಬದಲಾಗುತಿತ್ತು. ಈ ಬಾರಿ ಧೋನಿ ಅದೃಷ್ಟ ಕೈ ಕೊಟ್ಟಿತ್ತು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇನ್ನು ಕೆಲವರು ಅಂಪೈರ್ ಸಹಾಯದಿಂದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿದೆ ಎಂದು ಬರೆದು ನಿಗೆಲ್ ಲಾಂಗ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

  • ಐಪಿಎಲ್ ಫೈನಲ್ ಹೈದರಾಬಾದ್‍ಗೆ ಶಿಫ್ಟ್ ಬೆನ್ನಲ್ಲೇ ಕ್ರೀಡಾಂಗಣಕ್ಕೆ ಹಾನಿ

    ಐಪಿಎಲ್ ಫೈನಲ್ ಹೈದರಾಬಾದ್‍ಗೆ ಶಿಫ್ಟ್ ಬೆನ್ನಲ್ಲೇ ಕ್ರೀಡಾಂಗಣಕ್ಕೆ ಹಾನಿ

    ಹೈದರಾಬಾದ್: ಐಪಿಎಲ್ 2019ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಆಯೋಜಿಸಲು ಅವಕಾಶ ಪಡೆದ ಬೆನ್ನಲ್ಲೇ ಆಂಧ್ರಪ್ರದೇಶ್ ಕ್ರಿಕೆಟ್ ಸಂಸ್ಥೆಗೆ ಕಹಿ ಅನುಭವ ಆಗಿದ್ದು, ರಭಸದಿಂದ ಬೀಸಿದ ಗಾಳಿಯಿಂದಾಗಿ ರಾಜೀವ್ ಗಾಂಧಿ ಕ್ರೀಡಾಂಗಣಕ್ಕೆ ಹಾನಿಯಾಗಿದೆ.

    ಹೈದರಾಬಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆ ಬೀಸಿದ ಗಾಳಿಯಿಂದ ಕ್ರೀಡಾಂಗಣದಲ್ಲಿ ನೆರಳಿನ ವ್ಯವಸ್ಥೆಗೆ ಹಾಕಿದ್ದ ಶೀಟ್‍ಗಳು ಹಾರಿ ಹೋಗಿದೆ. ಸದ್ಯ ಕ್ರೀಡಾಂಗಣದ ಅಧಿಕಾರಿಗಳಿಗೆ 2 ಸಮಸ್ಯೆಗಳು ಎದುರಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆ ಮುಂದುವರಿಯುವ ಸೂಚನೆ ಸಿಕ್ಕಿದ್ದರಿಂದ ಕ್ರೀಡಾಂಗಣದಲ್ಲಿ ಮತ್ತೆ ಹಾನಿಯಾಗದಂತೆ ತಡೆಯುವುದು ಹಾಗೂ ಹಾನಿಯಾಗಿರುವುದನ್ನು ನಿಗದಿತ ಅವಧಿಯ ಒಳಗಡೆ ಸರಿಪಡಿಸುವ ಕಾರ್ಯ ನಡೆಸಬೇಕಿದೆ.

    Rajiv Gandhi stadium

    ಇತ್ತ ಏಪ್ರಿಲ್ 29 ರಂದು ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ನಡುವಿನ ಪಂದ್ಯ ನಡೆಯಲಿದ್ದು, ಮೇ 12 ರಂದು ಫೈನಲ್ ಪಂದ್ಯ ನಡೆಯಲಿದೆ. ಪರಿಣಾಮ ಕ್ರೀಡಾಂಗಣದ ಅಧಿಕಾರಿಗಳಿಗೆ ಪುನರ್ ವ್ಯವಸ್ತೆ ಕಲ್ಪಿಸಲು ಕಡಿಮೆ ಅವಧಿ ಸಿಕ್ಕಿದೆ.

    ಸೋಮವಾರ ಬಿಸಿಸಿಐ ಫೈನಲ್ ಪಂದ್ಯವನ್ನು ಚೆನ್ನೈ ಬದಲಾಗಿ ಹೈದರಾಬಾದ್‍ಗೆ ಶಿಫ್ಟ್ ಮಾಡಿತ್ತು. ಚಿದಂಬರಂ ಸ್ಟೇಡಿಯಂನಲ್ಲಿರುವ ಮೂರು ಕಡೆ ಪ್ರೇಕ್ಷಕರ ಸ್ಟ್ಯಾಂಡ್ ಗಳಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾಗಿತ್ತು. ಪರಿಣಾಮ ಬಿಸಿಸಿಐ ಅನಿವಾರ್ಯವಾಗಿ ಈ ಬಾರಿ ಫೈನಲ್ ಪಂದ್ಯವನ್ನು ಹೈದರಾಬಾದಿಗೆ ಶಿಫ್ಟ್ ಮಾಡಿತ್ತು.

    ipl

  • ಐಪಿಎಲ್ ಫೈನಲ್ ಚೆನ್ನೈನಿಂದ ಹೈದರಾಬಾದ್‍ಗೆ ಶಿಫ್ಟ್

    ಐಪಿಎಲ್ ಫೈನಲ್ ಚೆನ್ನೈನಿಂದ ಹೈದರಾಬಾದ್‍ಗೆ ಶಿಫ್ಟ್

    ಮುಂಬೈ: 2019ರ ಇಂಡಿಯನ್ ಪ್ರೀಮಿಯರ್ ಲೀಗ್‍ನ ಫೈನಲ್ ಪಂದ್ಯ ಚೆನ್ನೈ ಬದಲಾಗಿ ಹೈದರಾಬಾದ್‍ನಲ್ಲಿ ನಡೆಯಲಿದೆ. ಮೇ 12 ರಂದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

    ಕಳೆದ ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ತಂಡದ ತವರಿನಲ್ಲಿ ಟೂರ್ನಿಯ ಫೈನಲ್ ಪಂದ್ಯ ನಡೆಸಲಾಗುತ್ತದೆ. ಆದರೆ ಚಿದಂಬರಂ ಸ್ಟೇಡಿಯಂನಲ್ಲಿರುವ ಮೂರು ಕಡೆ ಪ್ರೇಕ್ಷಕರ ಸ್ಟ್ಯಾಂಡ್ ಗಳಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ತಮಿಳುನಾಡು ಕ್ರಿಕೆಟ್ ಸಂಸ್ಥೆ ವಿಫಲವಾಗಿತ್ತು. ಇದರಿಂದಾಗಿ ಬಿಸಿಸಿಐ ಅನಿವಾರ್ಯವಾಗಿ ಈ ಬಾರಿ ಫೈನಲ್ ಪಂದ್ಯವನ್ನು ಹೈದರಾಬಾದಿಗೆ ಶಿಫ್ಟ್ ಮಾಡಿದೆ.

    ಟೂರ್ನಿಯ ಆರಂಭಿಕ ಪಂದ್ಯವನ್ನು ಚೆನ್ನೈ ತಂಡ ತವರಿನಲ್ಲಿ ಆಯೋಜನೆ ಮಾಡಿತ್ತು. ಆದರೆ ಫೈನಲ್ ಪಂದ್ಯ ನಡೆಸಲು ಬೇಕಾದ ಅನುಮತಿಯನ್ನು ಪಡೆದುಕೊಳ್ಳಲು ವಿಫಲವಾಗಿತ್ತು. ಇತ್ತ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮೇ 8 ರಂದು ಹಾಗೂ 2ನೇ ಕ್ವಾಲಿಫೈರ್ ಪಂದ್ಯ ಮೇ 10 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಚೆನ್ನೈ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆದರೆ ಮೊದಲ ಕ್ವಾಲಿಫೈಯರ್ ಚೆನ್ನೈನಲ್ಲಿ ನಡೆಯಲಿದೆ.

    bcci

  • ಫೈನಲ್ ತಲುಪಿದ ಹನುಮಂತನಿಗೆ ಲತಾ ಹಂಸಲೇಖರಿಂದ ಗಿಫ್ಟ್

    ಫೈನಲ್ ತಲುಪಿದ ಹನುಮಂತನಿಗೆ ಲತಾ ಹಂಸಲೇಖರಿಂದ ಗಿಫ್ಟ್

    ಬೆಂಗಳೂರು: ಹಾವೇರಿ ಜಿಲ್ಲೆಯ ಕುರಿಗಾಯಿ ಹನುಮಂತ ಎಂತಲೇ ಖ್ಯಾತಿ ಪಡೆದಿರುವ ಹನುಮಂತ ಅವರು ಸರಿಗಮಪ ಸೀಸನ್ 15ರ ಫೈನಲ್ ಹಂತ ತಲುಪಿದ್ದಾರೆ. ಫೈನಲ್ ಹಂತ ತಲುಪಿದ ಹನುಮಂತ ಅವರಿಗೆ ವಿಶೇಷ ಉಡುಗೊರೆ ಸಿಕ್ಕಿದೆ.

    ಸರಿಗಮಪ ಕಾರ್ಯಕ್ರಮದಲ್ಲಿ ಫೈನಲ್ ಗೆ ಹೋದ ಹನುಮಂತ ಅವರಿಗೆ ಹಾರ್ಮೋನಿಯಂ ಉಡುಗೊರೆ ಸಿಕ್ಕಿದೆ. ಹನುಮಂತ ಅವರು ಸೆಮಿ ಫೈನಲ್ ನಲ್ಲಿ ‘ಜೋಗಿ’ ಸಿನಿಮಾದ ‘ಬೇಡುವೇನು ವರವನ್ನು..’ ಹಾಡನ್ನು ಹಾಡಿದ್ದರು.  ತಮ್ಮ ಗಾಯನ ಪ್ರತಿಭೆ ಮೂಲಕ ಹನುಮಂತ ಅವರು ಸೆಮಿ ಫೈನಲ್ ನಲ್ಲಿಯೇ ಪ್ಲಾಟಿನಮ್ ಟಿಕೆಟ್ ಪಡೆದು ಫೈನಲ್ ಗೆ ಹೋಗಿದ್ದರು.

    2 1550502900

    ಹನುಮಂತ ಅವರಿಗೆ ನಾದಬ್ರಹ್ಮ ಹಂಸಲೇಖ ಅವರ ಪತ್ನಿ ಲತಾ ಅವರ ಕಡೆಯಿಂದ ಉಡುಗೊರೆಯಾಗಿ ಹಾರ್ಮೋನಿಯಂ ಸಿಕ್ಕಿದೆ. ಕಳೆದ ವಾರದ ಸಂಚಿಕೆಗೆ ಬಂದಿದ್ದ ಲತಾ ಹಂಸಲೇಖ ಅವರು ತಮ್ಮ ಕೈಯಾರೇ ಹನುಮಂತ ಅವರಿಗೆ ಹಾರ್ಮೋನಿಯಂ ನೀಡಿ ಶುಭಾಶಯ ತಿಳಿಸಿದ್ದರು.

    ಲತಾ ಹಂಸಲೇಖ ಅವರು ಈ ಹಿಂದೆ ಅಂದರೆ ಸರಿಗಮಪ ಸೀಸನ್ 14ರ ಅತಿ ಕಿರಿಯ ಸ್ಪರ್ಧಿಯಾಗಿದ್ದ ನೇಹಾಗೆ ಚಿನ್ನದ ಉಂಗುರ ನೀಡಿದ್ದರು. ಈ ಹಿಂದೆ ಹನುಮಂತ ಅವರಿಗೆ ಕಾರ್ಯಕ್ರಮದ ತೀರ್ಪುಗಾರರಾದ ವಿಜಯ್ ಪ್ರಕಾಶ್ ಅವರು ಇಯರ್ ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದರು.

    1copy 1550502893

    ಸರಿಗಮಪ ಕಾರ್ಯಕ್ರಮದ ಅಂತಿಮದಲ್ಲಿ ಕೀರ್ತನ್, ವಿಜೇತ್, ಸಾಸ್ವಿನಿ, ನಿಹಾಲ್, ಋತ್ವಿಕ್ ಹಾಗೂ ಹನುಮಂತ ಒಟ್ಟು ಆರು ಸ್ಪರ್ಧಿಗಳು ಫೈನಲ್ ಹಂತ ತಲುಪಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

    ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

    ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು.

    ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಅನುಜಾ ಪಾಟೀಲ್ 3 ವಿಕೆಟ್, ದೀಪ್ತಿ ಶರ್ಮಾ, ಪೂನಂ ಯಾದವ್, ರಾಧ ಯಾದವ್ ತಲಾ 2 ವಿಕೆಟ್ ಪಡೆದರು.

    ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಸ್ಮೃತಿ ಮಂದಾನ 9 ಬೌಂಡರಿ 3 ಸಿಕ್ಸರ್ ನೆರವಿನಿಂದ 83 ರನ್ ಸಿಡಿಸಿ ಮಿಂಚಿದರು. ಉಳಿದಂತೆ ನಾಯಕಿ ಹರ್ಮನ್ ಪ್ರೀತ್ ಕೌರ್ ತಲಾ 3 ಬೌಂಡರಿ, ಸಿಕ್ಸರ್ ಗಳ ಮೂಲಕ ಕೇವಲ 27 ಎಸೆತಗಳಲ್ಲಿ 43 ರನ್ ಕಲೆಹಾಕಿದ್ರು. ನಿಗದಿತ 20 ಓವರ್ ಗಳಲ್ಲಿ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿತ್ತು. ಬಲಿಷ್ಠ ಆಸೀಸ್ ತಂಡವನ್ನ ಮಣಿಸಿದ ಟೀಂ ಇಂಡಿಯಾ ಗ್ರೂಪ್ ಬಿ ಯಲ್ಲಿ ಟಾಪ್ ಸ್ಥಾನ ಪಡೆಯಿತು.

    ಪಂದ್ಯದಲ್ಲಿ 82 ರನ್ ಗಳಿಸಿದ ಸ್ಮೃತಿ ಮಂದಾನ ಒಂದು ಸಾವಿರ ರನ್ ಪೂರೈಸಿದರು. ಈ ಮೂಲಕ ಭಾರತದ ಪರ ವೇಗವಾಗಿ ಒಂದು ಸಾವಿರ ರನ್ ಪೂರೈಸಿದ ಆಟಗಾರ್ತಿ ಎಂಬ ಹೆಗ್ಗಳಿಕೆ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

    ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

    ನವದೆಹಲಿ: ಭಾರತದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯ ಎಂದು ಉಂಟಾಗುತ್ತಿರುವ ವಿವಾದಗಳ ಕುರಿತು ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಫಿಫಾ ಫುಟ್ಬಾಲ್ ಫೈನಲ್ ಪ್ರವೇಶಿಸಿರುವ ಕ್ರೊವೇಷಿಯಾ ದೇಶವನ್ನು ಉದಾಹರಣೆಯಾಗಿ ನೀಡಿ ಚಿಂತನೆ ಬದಲಾಯಿಲು ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್, ಕೇವಲ 50 ಲಕ್ಷ ಜನಸಂಖ್ಯೆ ಹೊಂದಿರುವ ಕ್ರೊವೇಷಿಯಾ ಫಿಫಾ ಫುಟ್ಬಾಲ್ ಫೈನಲ್ ಆಡುತ್ತಿದ್ದು, 135 ಕೋಟಿ ಜನಸಂಖ್ಯೆ ಹೊಂದಿರುವ ನಾವು ಹಿಂದೂ, ಮುಸ್ಲಿಂ ಎಂದು ಆಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹರ್ಭಜನ್ ತಮ್ಮ ಟ್ವೀಟ್ ನಲ್ಲಿ ನಿಮ್ಮ ಯೋಚನೆಯನ್ನು ಬದಲಾಯಿಸಿ, ದೇಶ ಬದಲಾಗುತ್ತದೆ ಎಂಬ ಹ್ಯಾಷ್ ಟ್ಯಾಗನ್ನು ಬಳಸಿದ್ದಾರೆ.

    ಸದ್ಯ ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ನಲ್ಲಿ ಫ್ರಾನ್ಸ್ ಹಾಗೂ ಕ್ರೊವೇಷಿಯಾ ಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿಗಾಗಿ ಸೆಣಸಲಿದೆ. ಇನ್ನು ಫಾನ್ಸ್ ಎರಡನೇ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ಪುನರಾವರ್ತನೆ ಮಾಡಲು ಸಿದ್ಧವಾಗಿದ್ದರೆ, ಕ್ರೊವೇಷಿಯಾ ತಂಡ ಮೊದಲ ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ.

    ಅಂದಹಾಗೇ 1998 ರ ಫಿಫಾ ವಿಶ್ವಕಪ್ ಫೈನಲ್ ನಲ್ಲೂ ಫ್ರಾನ್ಸ್, ಬ್ರೆಜಿಲ್  ತಂಡವನ್ನು ಮಣಿಸಿ ವಿಶ್ವಕಪ್ ಗೆದ್ದಿತ್ತು, ಈ ವೇಳೆ ಪ್ರಾನ್ಸ್ ತಂಡದ ನಾಯಕರಾಗಿದ್ದ ಡೈಡಿಯರ್ ದೆಶ್ಚಾಂಪ್ಸ್ ಇಂದು ತಂಡದ ಕೋಚ್ ಆಗಿದ್ದರೆ.

  • ಲಾಸ್ಟ್ ಬಾಲ್ ಫಿನಿಶ್: ಮೊದಲ ಏಷ್ಯಾಕಪ್ ಗೆ ಮುತ್ತಿಟ್ಟ ಬಾಂಗ್ಲಾ ವನಿತೆಯರು

    ಲಾಸ್ಟ್ ಬಾಲ್ ಫಿನಿಶ್: ಮೊದಲ ಏಷ್ಯಾಕಪ್ ಗೆ ಮುತ್ತಿಟ್ಟ ಬಾಂಗ್ಲಾ ವನಿತೆಯರು

    ಕೌಲಾಲಂಪುರ: ಮಲೇಷಿಯಾದಲ್ಲಿ ನಡೆದ ಏಷ್ಯಾ ಕಪ್ ಟಿ-20 ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದ್ದು, ಈ ಮೂಲಕ ಮೊದಲ ಬಾರಿಗೆ ಏಷ್ಯಾಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.

    ಟೀಂ ಇಂಡಿಯಾ ನೀಡಿದ್ದ 113 ರನ್‍ಗಳ ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾ ಪರ ನಿಗರ್ ಸುಲ್ತಾನಾ (27) ಹಾಗೂ ರುಮಾನಾ ಅಹ್ಮದ್ (23) ಇಬ್ಬರ ಉತ್ತಮ ಆಟದ ನೆರವಿನಿಂದ ಮೂರು ವಿಕೆಟ್ ಅಂತರದ ಗೆಲುವು ಪಡೆಯಿತು. ಕೊನೆಯ ಓವರ್ ನಲ್ಲಿ ತಂಡದ ಗೆಲುವಿಗೆ 9 ರನ್‍ಗಳ ಅವಶ್ಯಕತೆಯಿತ್ತು. ಈ ವೇಳೆ ಟೀಂ ಇಂಡಿಯಾ ಕ್ಯಾಪ್ಟನ್ ಎಸೆದ ಓವರ್ ನ ಕೊನೆಯ ಎಸೆತದಲ್ಲಿ ಎರಡು ರನ್ ಸಿಡಿಸಿದ ಜಹನ್ಸಾ ಆಲಂ ಬಾಂಗ್ಲಾ ಗೆಲುವಿನ ನಗೆ ಬೀರಲು ಕಾರಣರಾದರು. ಭಾರತದ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಪೂನಂ ಯಾದವ್ 4 ಓವರ್ ಗಳಲ್ಲಿ 9 ರನ್ ನೀಡಿ 4 ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ನಾಯಕಿ ಹರ್ಮನ್‍ ಪ್ರೀತ್ ಕೌರ್ ಅವರ ಏಕಾಂಗಿಯಾಗಿ ಹೋರಾಟ ನಡೆಸಿ ಅರ್ಧಶತಕ (56) ಸಿಡಿಸಿ ತಂಡ ಗೌರವ ಮೊತ್ತ ಗಳಿಸಲು ಕಾರಣರಾಗಿದ್ದರು. ಇನ್ನುಳಿದಂತೆ ತಂಡದ ಪರ ವೇದಾ ಕೃಷ್ಣಮೂರ್ತಿ (11), ಮಿಥಾಲಿ ರಾಜ್ (11) ಹಾಗೂ ಅಂತಿಮ ಹಂತದಲ್ಲಿ ಜೂಲನ್ ಗೋಸ್ವಾಮಿ (10) ರನ್ ಗಳಿಸಿದರು. ಸ್ಮೃತಿ ಮಂದಣ್ಣ (7), ದೀಪ್ತಿ ಶರ್ಮಾ (4), ಅನುಜಾ ಪಾಟೀಲ್ (3), ತನಿಯ ಭಾಟಿಯಾ (3), ಶಿಖಾ ಪಾಂಡೆ (1) ವೈಫಲ್ಯ ಅನುಭವಿಸಿದರು. ಇನ್ನು ಬಾಂಗ್ಲಾದೇಶದ ಪರ ರುಮಾನಾ ಅಹ್ಮದ್ ಮತ್ತು ಖದಿಜಾ ಟುಲ್ ಕುಬ್ರಾ ತಲಾ 2 ವಿಕೆಟ್ ಪಡೆದಿದ್ದು, ಜಹನ್ಸಾ ಆಲಂ ಮತ್ತು ಸಲ್ಮಾ ಕುಟನ್ ತಲಾ 1 ವಿಕೆಟ್ ಪಡೆದರು.

    ಗಾಯದ ಸಮಸ್ಯೆಯಿಂದ ಪಂದ್ಯಕ್ಕೆ ಅಲಭ್ಯರಾಗಿದ್ದ ಟೀಂ ಇಂಡಿಯಾ ವೇಗಿ ಶಿಖಾ ಪಾಂಡೆ ಭಾರತಕ್ಕೆ ಪಂದ್ಯದಲ್ಲಿ ಹಿನ್ನಡೆ ಉಂಟಾಗಲು ಪ್ರಮುಖ ಕಾರಣವಾಯಿತು. ಫೈನಲ್ ಪಂದ್ಯದ ಸೋಲಿನೊಂದಿಗೆ ಟೀಂ ಇಂಡಿಯಾ ಮಹಿಳಾ ತಂಡ ವಾರದ ಅವಧಿಯಲ್ಲಿ ಎರಡನೇ ಭಾರಿಗೆ ಬಾಂಗ್ಲಾ ವಿರುದ್ಧ ಸೋಲಿನ ಕಹಿ ಅನುಭವಿಸಿದೆ. ಭಾರತದ ಸ್ಫೋಟಕ ಆಟಗಾರ್ತಿ ಮಿಥಾಲಿ ರಾಜ್ ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳಲ್ಲಿ ವೈಪಲ್ಯ ಅನುಭವಿಸಿದ್ದರು.