Tag: ಬ್ಲೂ ಮೂನ್

  • ಆಗಸದಲ್ಲಿಂದು ಅಪರೂಪದ ನೀಲಿಚಂದ್ರ – ಏನಿದು ಬ್ಲೂ ಮೂನ್? ಖಗೋಳ ತಜ್ಞರು, ಜ್ಯೋತಿಷಿಗಳು ಹೇಳೋದು ಏನು?

    ಆಗಸದಲ್ಲಿಂದು ಅಪರೂಪದ ನೀಲಿಚಂದ್ರ – ಏನಿದು ಬ್ಲೂ ಮೂನ್? ಖಗೋಳ ತಜ್ಞರು, ಜ್ಯೋತಿಷಿಗಳು ಹೇಳೋದು ಏನು?

    ಬೆಂಗಳೂರು: ನೀಲಿಯಾಕಾಶದಲ್ಲಿ ಇಂದು ಅಪರೂಪದಲ್ಲಿ ಅಪರೂಪವಾದ ಬ್ಲೂ ಮೂನ್ ಕಾಣಿಸಲಿದೆ. ಬ್ಲೂಮೂನ್‍ನ ಕಣ್ತುಂಬಿಕೊಳ್ಳುವ ತವಕ ಜನರಲ್ಲಿ ಮನೆ ಮಾಡಿದೆ. ಅಷ್ಟಕ್ಕೂ ಏನಿದು ಬ್ಲೂಮೂನ್? ಯಾವಾಗ ನೀಲಿಚಂದ್ರ ಗೋಚರಿಸ್ತಾನೆ? ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಉತ್ತರ.

    ಏನಿದು ಬ್ಲೂ ಮೂನ್?
    ಇಂದು ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ರಾತ್ರಿ 8.19ಕ್ಕೆ ಸರಿಯಾಗಿ ಬ್ಲೂ ಮೂನ್ ಗೋಚರವಾಗಲಿದೆ. ಸಾಮಾನ್ಯವಾಗಿ ತಿಂಗಳಿಗೆ ಒಂದು ಹುಣ್ಣಿಮೆ ಬರುತ್ತದೆ. ಆದರೆ ಈ ಬಾರಿ ಒಂದೇ ತಿಂಗಳಿನಲ್ಲಿ ಎರಡು ಹುಣ್ಣಿಮೆ ಬಂದಿದೆ. ತಿಂಗಳ ಎರಡನೇ ಹುಣ್ಣಿಮೆಯಂದು ಕಾಣುವ ಚಂದ್ರನನ್ನು ಬ್ಲೂ ಮೂನ್ ಎಂದು ಕರೆಯುತ್ತಾರೆ. ಬ್ಲೂ ಮೂನ್ ಎಂದಾಕ್ಷಣ ಚಂದ್ರ ನೀಲಿ ಬಣ್ಣದಲ್ಲಿ ಕಾಣುತ್ತಾನೆ ಎಂದರ್ಥವಲ್ಲ. ಅ.1 ರಂದು ಮೊದಲ ಹುಣ್ಣಿಮೆ ಬಂದಿದ್ದರೆ ಅ.31ರಂದು ಇಂದು ಎರಡನೇ ಹುಣ್ಣಿಮೆ ಬಂದಿದೆ.

    Blue Moon 2

    ಎಷ್ಟು ಅವಧಿ ಬೇಕು?
    ಗ್ರಗೋರಿಯನ್ ಕ್ಯಾಲೆಂಡರ್ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ ನಡುವಿನ ಅವಧಿ 29 ದಿನ, 44 ನಿಮಿಷ 38 ಸೆಕೆಂಡ್ ಆಗಿರುತ್ತದೆ. 30 ದಿನ ತುಂಬಲು ಬಾಕಿ ಉಳಿದ ಸಮವೆಲ್ಲ ಸೇರಿ ಕೊನೆಗೆ ಒಂದು ತಿಂಗಳಿನಲ್ಲಿ 2 ಹುಣ್ಣಿಮೆ ಬರುತ್ತದೆ. ಸಾಮಾನ್ಯವಾಗಿ ಎರಡು-ಮೂರು ವರ್ಷಕ್ಕೊಮ್ಮೆ ಈ ವಿದ್ಯಮಾನ ಘಟಿಸುತ್ತದೆ. ಈ ಹಿಂದೆ 2018ರಲ್ಲಿ ಬ್ಲೂ ಮೂನ್ ಗೋಚರಿಸಿತ್ತು. 31 ದಿನಗಳು ಇರುವ ತಿಂಗಳಿನಲ್ಲಿ ಬ್ಲೂ ಮೂನ್ ಸಾಮಾನ್ಯವಾಗಿ ಗೋಚರಿಸುತ್ತದೆ. ಆದರೆ 30 ದಿನಗಳಲ್ಲಿ ಬ್ಲೂ ಮೂನ್ ಗೋಚರಿಸುವುದು ಅಪರೂಪ.

    Blue Moon

    ಖಗೋಳ ತಜ್ಞರು ಏನು ಹೇಳುತ್ತಾರೆ?
    ಇದು ಖಗೋಳದಲ್ಲಿ ಸಹಜ ಪ್ರಕ್ರಿಯೆಯಾಗಿದ್ದು ಸ್ವಾಭಾವಿಕ ಹುಣ್ಣಿಮೆ. ಆದರೆ ಅಪರೂಪ ಅಷ್ಟೇ. ಎಲ್ಲಾ ಹುಣ್ಣಿಮೆಯ ರೀತಿಯೇ ಈ ಹುಣ್ಣಿಮೆ ಕೂಡ. ಬ್ಲೂಮೂನ್ ಎಂದಾಕ್ಷಣ ಇಂದು ಚಂದಿರನ ಬಣ್ಣ ನೀಲಿ ಇರುವುದಿಲ್ಲ. ಬ್ಲೂಮೂನ್‍ಗೂ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಬ್ಲಿಕ್ ಟಿವಿಗೆ ಪ್ಲಾನಿಟೋರಿಯಂ ಹಿರಿಯ ವಿಜ್ಞಾನಿ ಡಾ.ಆನಂದ್ ಹೇಳಿದ್ದಾರೆ.

    Blue Moon 1

    ಜ್ಯೋತಿಷಿಗಳು ಏನ್ ಹೇಳುತ್ತಾರೆ?
    ಈ ಬಾರಿಯ ಬ್ಲೂ ಮೂನ್ ಶುಭಕಾರಕವಾಗಿದ್ದು ನೀಲಚಂದ್ರನ ದರ್ಶನದಿಂದ ಲೋಕ ಕ್ಷೇಮ. ಶಾಂತಿ, ನೆಮ್ಮದಿ ದಯಪಾಲಿಸುತ್ತದೆ. ಆದರೆ ಕೆಲವು ಜನರಿಗೆ ಈ ಬ್ಲೂ ಮೂನ್ ಬಾಧಕಾರಕವಾಗಲಿದೆ. ಶೀಘ್ರವೇ ಕೋವಿಡ್‍ನಿಂದ ಜಗತ್ತಿಗೆ ಮುಕ್ತಿ ಸಿಗಲಿದೆ ಎಂದು ಗವಿ ಗಂಗಾಧರ ದೇವಾಲಯದ ಅರ್ಚಕರಾದ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ.

    ಈ ಬಾರಿಯ ಹುಣ್ಣಿಮೆಯಿಂದ ಒಂದಿಷ್ಟು ಜನಕ್ಕೆ, ಒಂದಿಷ್ಟು ರಾಶಿಯವರಿಗೆ ಸಮಸ್ಯೆಯಾಗಬಹುದು. ದೇವಿ ಅಥವಾ ಪರಶಿವನ ಆರಾಧನೆಯಿಂದ ಒಳಿತಾಗಲಿದೆ. ಮುಂಬರುವ ದಿನಗಳಲ್ಲಿ ಪ್ರಕೃತಿಯ ವೈಪರೀತ್ಯ ಆಗಲಿದೆ. ಕೋವಿಡ್ ಮಹಾಮಾರಿಯಿಂದ ಸದ್ಯದಲ್ಲೇ ಮುಕ್ತಿ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮಹರ್ಷಿ ಆನಂದ ಗುರೂಜಿ ತಿಳಿಸಿದ್ದಾರೆ.

    ಹಿಂದಿನ ದಿನವೇ ದುರಂತ:
    ಬ್ಲೂ ಮೂನ್ ಹಿಂದಿನ ದಿನವೇ ವಿಶ್ವದ ಹಲವೆಡೆ ಸಾವು ನೋವು ಸಂಭವಿಸಿದೆ. ತೀವ್ರ ಭೂಕಂಪಕ್ಕೆ ಟರ್ಕಿ, ಗ್ರೀಸ್, ಬಲ್ಗೇರಿಯಾ ತತ್ತರಗೊಂಡಿದ್ದು ನೋಡನೋಡುತ್ತಲೇ ಕಟ್ಟಡಗಳು ಧರೆಗೆ ಬಿದ್ದಿದೆ. 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ. ಮಿನಿ ಸುನಾಮಿಯಿಂದ ಟರ್ಕಿಯ ನಗರಗಳಿಗೆ ನೀರು ನುಗ್ಗಿದೆ. ಗ್ರೀಸ್ ರಾಜಧಾನಿ ಅಥೆನ್ಸ್, ಸಮೋವಾ ದ್ವೀಪ ಸಮೂಹ ಮತ್ತು ಬಲ್ಗೇರಿಯಾದಲ್ಲಿಯೂ ಭೂಮಿ ಕಂಪಿಸಿದ್ದು, ಜನ ಮನೆಗಳಿಂದ ಓಡೋಡಿ ಬಂದಿದ್ದಾರೆ.

  • ಅಕ್ಟೋಬರ್ 31ಕ್ಕೆ ‘ಬ್ಲೂ ಮೂನ್’ ವಿದ್ಯಮಾನ- ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆ

    ಅಕ್ಟೋಬರ್ 31ಕ್ಕೆ ‘ಬ್ಲೂ ಮೂನ್’ ವಿದ್ಯಮಾನ- ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆ

    ಬೆಂಗಳೂರು: ಅಕ್ಟೋಬರ್ 31ಕ್ಕೆ ನಭೋಮಂಡದಲ್ಲಿ ಬ್ಲೂ ಮೂನ್ ವಿದ್ಯಮಾನ ಜರುಗಲಿದೆ. ಬ್ಲೂ ಮೂನ್ ಅಂದ್ರೆ ಚಂದಿರ ನೀಲಿ ಬಣ್ಣಕ್ಕೆ ಬದಲಾಗಲ್ಲ. ಚಂದ್ರನ ಮೂಲ ಬಣ್ಣವಾಗಿರುವ ನೀಲಿ ಬಣ್ಣದಲ್ಲೇ ಚಂದ್ರನಿರಲಿದ್ದಾನೆ.

    Blue Moon 1

    ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆಗಳು ಬರುವ ಪ್ರಾಕೃತಿಕ ವಿದ್ಯಮಾನವನ್ನೇ ಬ್ಲೂಮೂನ್ ಅಂತಾ ಕರೆಯುತ್ತಾರೆ. ಪ್ರತಿ 2 ಅಥವಾ 3 ವರ್ಷಕ್ಕೊಮ್ಮೆ ಒಂದೇ ತಿಂಗಳಲ್ಲಿ 2 ಬಾರಿ ಹುಣ್ಣಿಮೆ ಸಂಭವಿಸುತ್ತದೆ. ಈ ರೀತಿ ಒಂದೇ ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಸಂಭವಿಸುವ ವಿಶೇಷತೆಯನ್ನ ಬ್ಲೂಮೂನ್ ಎಂದು ಹೇಳಲಾಗುತ್ತದೆ. ಖಗೋಳ ಶಾಸ್ತ್ರದ ಪ್ರಕಾರ 29.531 ದಿನ ಅಥವಾ 29 ದಿನ, 12 ಗಂಟೆ 44 ನಿಮಿಷ, 38 ಸೆಕೆಂಡುಗಳಿಗೆ ಒಂದು ಚಂದ್ರಮಾನ ತಿಂಗಳು ಅಂತಾ ಪರಿಗಣಿಸಲಾಗುತ್ತದೆ. ಹೀಗಾಗಿ 2-3 ವರ್ಷಗಳಿಗೆ ಒಮ್ಮೆ 31 ದಿನ ಇರುವ ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಸಂಭವಿಸುತ್ತದೆ.

    blue moon tree

    ಈ ತಿಂಗಳು ಅಕ್ಟೋಬರ್ 1ರಂದು ಹುಣ್ಣಿಮೆ ಘಟಿಸಿತ್ತು. ಈಗ ಇದೇ ತಿಂಗಳು ಅಕ್ಟೋಬರ್ 31ಕ್ಕೆ ಇನ್ನೊಂದು ಹುಣ್ಣಿಮೆ ಘಟಿಸುತ್ತಿದೆ. 2018ರಲ್ಲಿ ಕೂಡಾ ಬ್ಲೂಮೂನ್ ಸಂಭವಿಸಿತ್ತು. ಈಗ 2020 ಅಕ್ಟೋಬರ್ ನಲ್ಲಿ ಸಂಭವಿಸುತ್ತಿದೆ. ಮುಂದಿನ ಬ್ಲೂಮೂನ್ 2023ರ ಆಗಸ್ಟ್ 31ಕ್ಕೆ ಸಂಭವಿಸಲಿದೆ ಅನ್ನೋದು ವಿಜ್ಞಾನಿಗಳ ಮಾತಾಗಿದೆ. ಹಾಗಾಗಿ ಇದೊಂದು ಸಾಮಾನ್ಯ ವಿದ್ಯಮಾನ. ಸೌರವ್ಯೂಹದ ಸಾಮಾನ್ಯ ಪ್ರಕ್ರಿಯೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

    Blue Moon 2

    ಚಂದ್ರ ಮತ್ತು ಸೂರ್ಯ ಗ್ರಹಣ ಕೂಡಾ ವಿಜ್ಞಾನಿಗಳ ಪ್ರಕಾರ, ಸಾಮಾನ್ಯ ಪ್ರಕ್ರಿಯೆ. ಆದರೆ ಗ್ರಹಣ ಕಾಲ ಮತ್ತು ನಂತರದಲ್ಲಿ ಆಗುವ ಅನಾಹುತಗಳನ್ನ ಮಾನವ ಸಂಕುಲ ಅನುಭವಿಸಿಕೊಂಡು ಬರುತ್ತಿದೆ. ಸೂರ್ಯ ಗ್ರಹಣವಾದ್ರೆ, ರವಿ ಅಗ್ನಿಕಾರಕ ಆಗಿರೋದರಿಂದ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತವೆ. ಚಂದ್ರಗ್ರಹಣವಾದ್ರೆ ಶಶಿ ಜಲಕಾರಕನಾಗಿರೋದ್ರಿಂದ ಜಲಪ್ರಳಯಕ್ಕೆ ಆಗುತ್ತೆ. ಈಗ ಅಕ್ಟೋಬರ್ 31ರಂದು ನಡೆಯಲಿರುವ ವಿಸ್ಮಯ ಚಂದ್ರನಿಗೆ ಸಂಬಂಧಿಸಿರೋದ್ರಿಂದ ಜಲಾಸುರ ಮತ್ತೆ ಆರ್ಭಟಿಸಲಿದ್ದಾನೆ ಎಂಬುವುದು ಜ್ಯೋತಿಷಿಗಳ ಮಾತು.