Tag: ಭಕ್ತರು

  • `ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

    `ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

    ಚಿಕ್ಕೋಡಿ: `ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ ಅಂತ ಸೆಪ್ಟೆಂಬರ್ 8 ರಂದು ದೇವರನ್ನ ನೋಡಲು 21 ಭಕ್ತರು ದೇಹತ್ಯಾಗ ಮಾಡಲು ಹೊರಟಿದ್ದ ಭಕ್ತಿಯ ಪರಕಾಷ್ಠೆಯ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ.

    ಸೆಪ್ಟೆಂಬರ್ 08 ರಂದು ಪ್ರಾಣತ್ಯಾಗ ಮಾಡೋದಕ್ಕೆ 10ಕ್ಕೂ ಹೆಚ್ಚು ಭಕ್ತರು (Devotees) ಮುಂದಾಗಿದ್ದದ್ದು ಆಧುನಿಕ ಯುಗದಲ್ಲಿ ಮೂಢನಂಬಿಕೆ ಪದ್ಧತಿ ಇನ್ನು ಜೀವಂತವಾಗಿದಿಯಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಅನಂತಪುರ ಗ್ರಾಮದ ಇರಕರ ಕುಟುಂಬದ 4 ಜನ ಸೇರಿದಂತೆ 10ಕ್ಕೂ ಹೆಚ್ಚು ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಹರಿಯಾಣದ ವಿವಾದತ್ಮಕ ಸಂತ ರಾಮಪಾಲ ಅನುಯಾಯಿಗಳು ದೇಹತ್ಯಾಗ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್

    Devotees 1

    2014ರ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಂತ ರಾಮಪಾಲ ಅವರ ಪುಸ್ತಕ ಓದಿ ಹಾಗೂ ಪ್ರವಚನ ಕೇಳಿ ಅನಂತಪುರ ಗ್ರಾಮದ ಇರಕರ ಕುಟುಂಬದ, ತುಕಾರಾಮ, ಸಾವಿತ್ರಿ, ರಮೇಶ್, ವೈಷ್ಣವಿ ಪ್ರಾಣತ್ಯಾಗಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್‌ – ವಿಚಾರಣೆ ಶುರು

    ಇರಕರ ಕುಟುಂಬ ಹಾಗೂ ಉತ್ತರ ಪ್ರದೇಶದ 17 ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಿಕ್ಕೋಡಿ ಉಪ ವಿಬಾಗಾಧಿಕಾರಿ ಸುಭಾಷ ಸಂಪಗಾಂವಿ ಹಾಗೂ ಪೊಲೀಸರು ಮತ್ತು ಮಠಾಧೀಶರಿಂದ ಭಕ್ತರ ಮನವೊಲಿಕೆ ಮಾಡಿದ ಬಳಿಕ ಸಧ್ಯ ದೇಹತ್ಯಾಗ ‌ನಿರ್ಧಾರದಿಂದ ಭಕ್ತರು ಹಿಂದೆ ಸರಿದಿದ್ದಾರೆ.

  • ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    ಲಿಂಗೈಕ್ಯರಾದ ಶರಣಬಸಪ್ಪ ಅಪ್ಪ ಅಂತಿಮ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

    – ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

    ಕಲಬುರಗಿ: ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ (Sharnbaswappa Appa) ಅವರು ಗುರುವಾರ ರಾತ್ರಿ ಲಿಂಗೈಕ್ಯರಾದರು. ಶರಣಬಸವೇಶ್ವರ ಮಹಾಮನೆಯ ಮುಂಭಾಗ ಅಪ್ಪಾಜೀ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.

    ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕದ ಕುಗ್ರಾಮಗಳಿಂದ ಭಕ್ತ ಸಾಗರವೇ ದೇವಸ್ಥಾನಕ್ಕೆ ಹರಿದು ಬರುತ್ತಿದೆ. ಇದನ್ನೂ ಓದಿ: ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

    Sharanabasappa Appa 2

    ಸರತಿ ಸಾಲಿನಲ್ಲಿ ನಿಂತು ಲಕ್ಷಾಂತರ ಭಕ್ತರು ಅಪ್ಪಾಜಿಯ ದರ್ಶನ ಪಡೆದು ಕಣ್ಣೀರು ಹಾಕುತ್ತಿದ್ದಾರೆ. ‘ದಾಸೋಹ, ಶಿಕ್ಷಣ ಕ್ರಾಂತಿ ಮಾಡಿದ ಅಪ್ಪ ಅವರನ್ನು ಕಳೆದುಕೊಂಡು ನಾವು ಬಡವಾಗಿದ್ದೇವೆ. ಇಂತಹ ದೇವರನ್ನು ಕಳೆದುಕೊಂಡಿದ್ದು ನಮಗೆ ಬಹಳ ದುಃಖ ತರಿಸಿದೆ’ ನೊಂದು ಮಾತನಾಡಿದ್ದಾರೆ.

    ಇತ್ತ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೂಜ್ಯ ಅಪ್ಪ ಅವರ ಸಮಾಧಿ ಬಳಿ ಇಂದು 5 ಗಂಟೆಗೆ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಪಂಚ ಪೀಠ ಮತ್ತು ಬಸವಾದಿ ಶರಣರ ತತ್ವದ ಪ್ರಕಾರ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಂತ್ಯಕ್ರಿಯೆ ಸಮಾಧಿಯನ್ನು ಉದ್ದ 16 ಪಾದ, ಅಂಗುಲ 9 ಪಾದ, ಮೂಲ 3 ಪಾದ ಅಂಗುಲ ಕ್ರಿಯಾ ಸಮಾದಿ ನಿರ್ಮಾಣ ಮಾಡಲಾಗಿದೆ. ಪೂಜ್ಯ ಅಪ್ಪಾಜಿ ಅವರ ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವ ಪತ್ರೆ, 5050 ವಿಭೂತಿ ಬಳಕೆ ಮಾಡಲಾಗುವುದು. ಅಂತಿಮ ನಮನ ಸಲ್ಲಿಸಲು ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಮಠಾಧೀಶರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

  • UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

    UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

    ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ (Barabanki) ದೇವಾಲಯವೊಂದರಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ. ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಇಂದು (ಸೋಮವಾರ) ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ (Awsaneshwar Mahadev Temple) ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ತಗಡಿನ ಶೆಡ್‌ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ

    UP Temple Stampede 2

    ಕೆಲವರಿಗೆ ನೇರವಾಗಿ ವಿದ್ಯುತ್‌ ಶಾಕ್‌ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕು ನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸಮೀಪದ ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ತಿಳಿಸಿದ್ದಾರೆ.  ಇದನ್ನೂ ಓದಿ: Mann ki Baat: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಮೋದಿ ಪ್ರಶಂಸೆ

    ಘಟನೆ ತಿಳಿದ ಸಿಎಂ ಯೋಗಿ ಆದಿತ್ಯನಾಥ್‌ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತ್ವರಿತ ಪರಿಹಾರ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.  ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

  • ವಿಜೃಂಭಣೆಯಿಂದ ನೆರವೇರಿದ ಮಳೆ ದೇವರು ಖ್ಯಾತಿಯ ಋಷ್ಯಶೃಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    ವಿಜೃಂಭಣೆಯಿಂದ ನೆರವೇರಿದ ಮಳೆ ದೇವರು ಖ್ಯಾತಿಯ ಋಷ್ಯಶೃಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    ಚಿಕ್ಕಮಗಳೂರು: ಮಳೆ ದೇವರೆಂದೇ ಪ್ರಸಿದ್ಧಿಯಾಗಿರುವ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿಯ ವಾರ್ಷಿಕ ಮಹಾರಥೋತ್ಸವವು (Rishyasringeshwara Maha Rathotsava) ವಿಜೃಂಭಣೆಯಿಂದ ನೆರವೇರಿದೆ.

    ಇತಿಹಾಸ ಪ್ರಸಿದ್ಧ ಈ ದೇವಸ್ಥಾನದ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿಯನ್ನು ಮಳೆ ದೇವರೆಂದೆ ಸ್ಥಳೀಯರು ಹಾಗೂ ರಾಜ್ಯ-ದೇಶದಾದ್ಯಂತ ಭಕ್ತರು ನಂಬಿದ್ದಾರೆ. ಮಳೆ ಇಲ್ಲದ ಬರಗಾಲದ ಸಂದರ್ಭದಲ್ಲಿ ಇಲ್ಲಿಗೆ ಬಂದು ಪೂಜೆ ಸಲ್ಲಿಸಿದರೆ ಮಳೆಯಾಗುವ ಪ್ರತೀತಿಯೂ ಇದೆ. ಹೀಗಾಗಿ ಪುರಾತನ ಕಾಲದಿಂದಲೂ ಎಲ್ಲಾ ಪೂಜಾ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದು ಮಹಾರಥೋತ್ಸವವೂ ನಡೆಯುತ್ತಿದೆ. ಇದನ್ನೂ ಓದಿ: ಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ಸಂಪನ್ನ

    ಸೋಮವಾರ ಜಾತ್ರಾ ಧ್ವಜಾರೋಹಣ ನಡೆದಿದ್ದು ಇಂದು ಮಹಾರಥೋತ್ಸವ ನಡೆದಿದೆ. ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಧನ್ಯರಾಗಿದ್ದಾರೆ. ಜಾತ್ರಾ ಮಹಾರಥೋತ್ಸವವು ವಿಜೃಂಭಣೆಯಿಂದ ನಡೆದಿದ್ದು ರಥೋತ್ಸವದ ನಂತರ ಕಿಗ್ಗಾ ಸುತ್ತಮುತ್ತಲಿನ ಊರುಗಳಲ್ಲಿ ಜಾತ್ರೆಯ ಹಬ್ಬವು ನಡೆಯಲಿದೆ. ಬೆಳಗ್ಗೆ ಸ್ವಲ್ಪ ದೂರದವರೆಗೆ ಎಳೆದ ಬ್ರಹ್ಮರಥವನ್ನು ರಾತ್ರಿ ಭಕ್ತಾಧಿಗಳು ಪೂರ್ಣವಾಗಿ ರಾಜಾಬೀದಿಗಳಲ್ಲಿ ಎಳೆದು ಸ್ವಾಮಿಯನ್ನು ದೇವಾಲಯಕ್ಕೆ ಹಿಂತಿರುಗಿಸಲಾಗುತ್ತದೆ.

    ನಂತರ ತಮ್ಮ ಮನೆಗಳಲ್ಲಿ ಹಬ್ಬದೂಟ ಮಾಡಿ ಸಂಬಂಧಿಕರು, ಸ್ನೇಹಿತರೊಡನೆ ಊಟ ಮಾಡುತ್ತಾರೆ. ಊರ ಜಾತ್ರೆಗೆ ಹೊರ ಊರಗಳಲ್ಲಿ ಕೆಲಸದ ನಿಮಿತ್ತ ನೆಲಸಿರುವ ಎಲ್ಲರೂ ಬಂದು ಊರಿನ ದೇವರ ದರ್ಶನ ಮಾಡಿ ನಮಸ್ಕರಿಸಿ ಹೋಗುವುದು ವಾಡಿಕೆ. ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸಂದರ್ಭದಲ್ಲಿ ಸರ್ಕಾರವೇ ಇಲ್ಲಿ ಪೂಜೆ ಸಲ್ಲಿಸುತ್ತದೆ. ಈ ದೇವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೆಚ್ಚಿನ ಧೈವಗಳಲ್ಲೊಂದು.  ಇದನ್ನೂ ಓದಿ: ವಕ್ಫ್ ಆಸ್ತಿಯಲ್ಲಿ ಬಡವರಿಗಾಗಿ ಶಾಲೆ, ಆಸ್ಪತ್ರೆ ಮನೆ ಕಟ್ಟಿಸ್ತೇವೆ – ಸಿಎಂ ಯೋಗಿ

  • ಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ಸಂಪನ್ನ

    ಯಡಿಯೂರು ಸಿದ್ದಲಿಂಗೇಶ್ವರ ಜಾತ್ರೆ ಸಂಪನ್ನ

    ತುಮಕೂರು: ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವ (Yediyur siddhalingeshwara Rathotsava) ಶನಿವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.

    ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದಲೇ ಸ್ವಾಮಿ ಗದ್ದುಗೆಗೆ ವಿಶೇಷ ಅಭಿಷೇಕ, ಅಲಂಕಾರ ಮತ್ತು ಪೂಜೆಗಳು ನಡೆಯಿತು. 12 ಗಂಟೆಗೆ ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮೀಜಿ ಬಾಳೆಹೊನ್ನೂರು ಶಾಖಾಮಠದ ರೇಣುಕ ಶಿವಾಚಾರ್ಯ, ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಂದಿಧ್ವಜ ಪೂಜೆಯ ನಂತರ ಷಟ್‌ಸ್ಥಲ ಧ್ವಜ ಹರಾಜು ಪ್ರಕ್ರಿಯೆ ನಡೆದು ಮೈಸೂರಿನ ದೀಪಕ್ ಸದಾಶಿವಯ್ಯ ಪಡೆದುಕೊಂಡರು.

    ಸಿದ್ಧಲಿಂಗೇಶ್ವರ ಸ್ವಾಮಿ ನಿರ್ವಿಕಲ್ಪ ಸಮಾಧಿಯಾದ ಅಭಿಜಿನ್ ಮುಹೂರ್ತದಲ್ಲಿ ರಥಬೀದಿಯಲ್ಲಿ ರಥೋತ್ಸವ ಪ್ರಾರಂಭವಾಗಿದ್ದು, ಸಾವಿರಾರು ಭಕ್ತರು ತೇರು ಎಳೆದು ಸಂಭ್ರಮಿಸಿದರು. ಧವನ, ಬಾಳೆಹಣ್ಣು ಮತ್ತು ಕರಿಮೆಣಸನ್ನು ರಥಕ್ಕೆ ತೂರಿ ಹರಕೆ ಸಮರ್ಪಿಸಿದರು. ಇದನ್ನೂ ಓದಿ: ವಕ್ಫ್ ಆಸ್ತಿಯಲ್ಲಿ ಬಡವರಿಗಾಗಿ ಶಾಲೆ, ಆಸ್ಪತ್ರೆ ಮನೆ ಕಟ್ಟಿಸ್ತೇವೆ – ಸಿಎಂ ಯೋಗಿ

    ಬಿಸಿಲಿನ ಝಳ ಹೆಚ್ಚಾಗಿದ್ದರೂ, ಅಸಂಖ್ಯಾತ ಭಕ್ತರ ದಾಹ ಮತ್ತು ಹಸಿವು ತಣಿಸಲು ದೇವಾಲಯ ಸಿಬ್ಬಂದಿ, ದಾಸೋಹ ಮಹಾಮನೆ ಸೇರಿದಂತೆ ನೂರಾರು ಕಡೆ ಅರವಂಟಿಕೆ ನಡೆಸಲಾಗಿತ್ತು. ನೀರುಮಜ್ಜಿಗೆ, ಪಾನಕ, ಹೆಸರುಬೇಳೆ ಕೊಸಂಬರಿ, ವಿವಿಧ ಬಗೆಯ ಭಕ್ಯಗಳನ್ನು ವಿತರಿಸಿದರು. ಇದನ್ನೂ ಓದಿ: L2: ಎಂಪುರಾನ್‌ ನಿರ್ದೇಶಕ ಪೃಥ್ವಿರಾಜ್‌ಗೆ ಐಟಿ ನೋಟಿಸ್‌ – ಸಂಭಾವನೆ ವಿವರ ನೀಡುವಂತೆ ಸೂಚನೆ

  • ಮಂತ್ರಾಲಯ ರಾಯರ ಮಠದ ಹೆಸರಿನಲ್ಲಿ ವಂಚಕರ ಜಾಲ – ನಕಲಿ ಯುಪಿಐ ಐಡಿಗಳ ಮೂಲಕ ಭಕ್ತರಿಗೆ ವಂಚನೆ

    ಮಂತ್ರಾಲಯ ರಾಯರ ಮಠದ ಹೆಸರಿನಲ್ಲಿ ವಂಚಕರ ಜಾಲ – ನಕಲಿ ಯುಪಿಐ ಐಡಿಗಳ ಮೂಲಕ ಭಕ್ತರಿಗೆ ವಂಚನೆ

    ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ (Mantralaya) ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನುಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಭಕ್ತರು ಜಾಗೃತರಾಗಿರಲು ಸೂಚಿಸಿದೆ.

    ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದು, ಭಕ್ತರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಫೇಕ್ ಯುಪಿಐ ಐಡಿಗಳ (Fake UPI Id) ಮೂಲಕ ಹಣ ಹಾಕಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಜಾಲದಿಂದ ಭಕ್ತರು ಹಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮೈಸೂರು| ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ!

    ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ. ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಬುಕ್ ಮಾಡುವಂತೆ ತಿಳಿಸಿದೆ.ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಶಿ ವಂಚಕರ ಜಾಲದ ಬಗ್ಗೆ ಪ್ರಕಟಣೆ ಹೊರಡಿಸಿ ಭಕ್ತರು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ನಡೆಯುವ ಅಮೃತ ಸ್ನಾನದ ವಿಶೇಷತೆ, ಹಿನ್ನೆಲೆ ಏನು?

  • Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ (Hindu Temple) ಭಕ್ತರ ಮೇಲೆ ಖಲಿಸ್ತಾನಿ ಉಗ್ರರು (Khalistani supporters) ಎನ್ನಲಾದ ಗುಂಪೊಂದು ದಾಳಿ ನಡೆಸಿದೆ.

    ಖಲಿಸ್ತಾನಿ ಧ್ವಜ (Khalistani Flag) ಹಿಡಿದ ಉಗ್ರರು ಎನ್ನಲಾದ ಗುಂಪು ದೇವಸ್ಥಾನಕ್ಕೆ ಲಗ್ಗೆಯಿಟ್ಟು ಭಕ್ತರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದೆ. ಈ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ವೀಡಿಯೋನಲ್ಲಿ ಖಲಿಸ್ತಾನಿ ಧ್ವಜ ಹಿಡಿದ ಗುಂಪು ದೊಣ್ಣೆ ಹಿಡಿದು ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದನ್ನೂ ಓದಿ: ಅಮೆರಿಕದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡೋದು 7 ರಾಜ್ಯದ ಜನತೆ! – ಏನಿದು Swing States? ಯಾಕೆ ಇಷ್ಟೊಂದು ಮಹತ್ವ?

    ಹಿಂಸಾಚಾರದ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹಿಂಸಾಚಾರ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ನರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದರಲ್ಲದೇ, ಸಮುದಾಯವನ್ನು ರಕ್ಷಿಸಲು ತತ್ವರಿತವಾಗಿ ಸ್ಪಂಧಿಸಿದ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.

    Khalistani

    ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಯುವ ಮೊದಲು 1984ರ ಸಿಖ್ ವಿರೋಧಿ ದಂಗೆಯನ್ನು ಸ್ಮರಿಸಲು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಭಕ್ತರ ಮೇಲೆ ಹಲ್ಲೆ ನಡೆಸಿದೆ. ಇದನ್ನೂ ಓದಿ: ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಇನ್ನೂ ಇತ್ತೀಚೆಗೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿತ್ತು. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿತು. ಈ ವರದಿಯಲ್ಲಿ ಭಾರತವನ್ನು ಸೈಬರ್‌ ದಾಳಿಯ ಪಟ್ಟಿಗೆ ಕೆನಡಾ ಸರ್ಕಾರ ಸೇರಿಸಿರುವುದಾಗಿ ಉಲ್ಲೇಖವಾಗಿತ್ತು.

  • ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿ: ಧಾರಾಕಾರ ಮಳೆ (Rain) ಸುರಿದ ಪರಿಣಾಮ ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದೆ.

    Haveri Mutt Rain

    ಪಂಡರಾಪುರಕ್ಕೆ ತೆರಳುತ್ತಿದ್ದ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದ 30 ಭಕ್ತರು ಭಾನುವಾರ ತಡರಾತ್ರಿ ಬರದೂರಿನ ಹೊರವಲಯದಲ್ಲಿರುವ ರಾಮಲಿಂಗ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮಠ ಜಲಾವೃತಗೊಂಡು ಭಕ್ತರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?

    ಸ್ಥಳಕ್ಕೆ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಭಕ್ತರನ್ನು ರಕ್ಷಿಸಿದ್ದಾರೆ. ಭಾರಿ ಪ್ರಮಾಣದ ನೀರಿನಿಂದ ಗ್ರಾಮಸ್ಥರಿಗೆ ದಿಕ್ಕು ತೋಚದಂತಾಗಿದೆ. ಇದನ್ನೂ ಓದಿ: ಧಾರವಾಡ| ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳಗಳು

  • ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    ತಿರುಪತಿ ಲಡ್ಡು ಟೇಸ್ಟ್‌ ಸೂಪರ್‌: ಲಡ್ಡು ಸವಿದು ಖುಷಿ ಹಂಚಿಕೊಂಡ ಭಕ್ತರು

    – ನಮ್ಮ ಕೆಎಂಎಫ್‌, ನಮ್ಮ ಹೆಮ್ಮೆ.. ‘ನಂದಿನಿ’ ತುಪ್ಪ ಬಳಸಿ ಸ್ವಾಧಿಷ್ಟ ಲಡ್ಡು ತಯಾರಿಸಿ ಎಂದ ಕನ್ನಡಿಗ ಭಕ್ತ

    ಅಮರಾವತಿ: ನಂದಿನಿ ತುಪ್ಪ ಬಳಸಿ ತಯಾರಿಸಲಾಗುತ್ತಿರುವ ತಿರುಪತಿ ಲಡ್ಡು (Tirupati Laddu Row) ಸವಿದು ಭಕ್ತರು ಖುಷಿ ವ್ಯಕ್ತಪಡಿಸಿದ್ದಾರೆ. ಪ್ರಸಾದಕ್ಕೆ ಕಲಬೆರಕೆ, ಅಪವಿತ್ರ ವಿವಾದದ ಬೆನ್ನಲ್ಲೇ ದೇವಾಲಯ ಶುದ್ಧೀಕರಿಸಲಾಗಿದ್ದು, ಹೆಚ್ಚೆಚ್ಚು ಜನರು ತಿರುಪತಿಗೆ ಆಗಮಿಸಿ ಶ್ರೀ ವೆಂಕಟರಮಣದ ದರ್ಶನ ಪಡೆಯುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದ ತೆಗೆದುಕೊಳ್ಳುತ್ತಿದ್ದಾರೆ.

    ಬೆಂಗಳೂರಿನಿಂದ (Bengaluru) ತಿರುಪತಿ ದೇವಾಲಯಕ್ಕೆ (Tirupati Temple) ಬಂದಿದ್ದ ಜಗದೀಶ್‌ ಮಾತನಾಡಿ, ಲಡ್ಡುನಲ್ಲಿ ಏನೇನೊ ಕಲಬೆರಕೆ ಮಾಡಲಾಗಿದೆ ಅಂತಾರೆ. ಸದ್ಯಕ್ಕೆ ಏನೂ ಇಲ್ಲ, ಎಲ್ಲಾ ಬದಲಾಗಿದೆ. ಲಡ್ಡು ಟೇಸ್ಟ್‌ ಮಾಡಿದ್ದೇವೆ. ತುಂಬಾ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

    tirupati laddu

    ಮತ್ತೊಬ್ಬರು ಭಕ್ತರು, ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್‌ ಸೂಪರ್‌ ಆಗಿದೆ. ನಮ್ಮ ಕೆಎಂಎಫ್‌.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ.

    ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಕರ್ನಾಟಕದವರೇ ಆದ ಇನ್ನೊಬ್ಬರು ಭಕ್ತರು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

    ಲಡ್ಡು ಟೇಸ್ಟ್‌ ಬಹಳ ಚೆನ್ನಾಗಿದೆ. ತಾಜಾ ತುಪ್ಪದ್ದೇ ಆಗಿದೆ. ಮೊದಲು ಇದ್ದ ಟೇಸ್ಟ್‌ ಥರಾನೆ ಇದೆ ಲಡ್ಡು. ತಿಂದು ಬಹಳ ಖುಷಿಯಾಯಿತು ನಮಗೆ. ನನ್ನ ಬರ್ತ್‌ಡೇ ಸೆಲಬ್ರೇಷನ್‌ ಇಲ್ಲೇ ಆಯಿತು ಎಂದು ಕುಟುಂಬ ಸಮೇತರಾಗಿ ತಿರುಪತಿಗೆ ಆಗಮಿಸಿದ್ದ ಭಕ್ತೆಯೊಬ್ಬರು ಸಂತಸ ವ್ಯಕ್ತಪಡಿಸಿದರು.

  • ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ಶ್ರಾವಣ ಸೋಮವಾರ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ – 7 ಭಕ್ತರು ಸಾವು

    ಪಾಟ್ನಾ: ಕೆಲ ದಿನಗಳ ಹಿಂದೆಯಷ್ಟೇ ಹತ್ರಾಸ್‌ನ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಅದೇ ರೀತಿಯ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಜಿಹಾನಾಬಾದ್‌ ಜಿಲ್ಲೆಯ ದೇವಸ್ಥಾನವೊಂದರಲ್ಲಿ (Bihar Temple) ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಲಘು ಲಾಠಿ ಪ್ರಹಾರ ಮಾಡಿದ ಪರಿಣಾಮ ಕಾಲ್ತುಳಿತ (Stampede) ಉಂಟಾಗಿ 3 ಮಹಿಳೆಯರು ಸೇರಿ 7 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ (Baba Sidheshwar Nath temple) ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    ಜೆಹಾನಾಬಾದ್‌ನ ಟೌನ್ ಇನ್ಸ್‌ಪೆಕ್ಟರ್ ದಿವಾಕರ್ ಕುಮಾರ್ ವಿಶ್ವಕರ್ಮ ಹೇಳುವಂತೆ, 7 ಮೃತದೇಹಗಳನ್ನು ಜೆಹಾನಾಬಾದ್‌ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರತಿ ವರ್ಷ ಪವಿತ್ರ ಶ್ರಾವಣ ಮಾಸದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ( Devotees) ದೇವಸ್ಥಾನಕ್ಕೆ ಆಗಮಿಸುತ್ತಾರೆ. ಅದೇ ರೀತಿ ಭಾನುವಾರ ತಡರಾತ್ರಿಯಿಂದಲೇ ಭಕ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಶಿವನಿಗೆ ಜಲಾಭಿಷೇಕ ಅರ್ಪಿಸಲು ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ನೂಕುನುಗ್ಗಲು ಶುರುವಾಗಿತ್ತು. ಜನಸಂದಣಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಬಲಪ್ರಯೋಗ ನಡೆಸಿದ್ದರಿಂದ ಕಾಲ್ತುಳಿತ ಉಂಟಾಗಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿರುವುದಾಗಿ ಹೇಳಿದ್ದಾರೆ.

    ಈ ವೇಳೆ ಆಡಳಿತದ ಅವ್ಯವಸ್ಥೆಯಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ದೇವಾಲಯದಲ್ಲಿ ಹಾಜರಿದ್ದವರು ದೂರಿದ್ದಾರೆ. ಕೆಲವು ಎನ್‌ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್) ಸ್ವಯಂಸೇವಕರು ಕ್ರೌಡ್ ಮ್ಯಾನೇಜ್‌ಮೆಂಟ್‌ನಲ್ಲಿ ತೊಡಗಿರುವ ಭಕ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿದ್ದರು. ಇದು ನೂಕುನುಗ್ಗಲಿಗೆ ಕಾರಣವಾಯಿತು ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?