Tag: ಭುವನೇಶ್ವರ್

  • ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ

    ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ

    ಭುವನೇಶ್ವರ್: ಒಡಿಶಾ (Odisha) ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ದಿನ ಮುಟ್ಟಿನ ರಜೆಯನ್ನು ಘೋಷಣೆ ಮಾಡಿದೆ.

    ಮಹಿಳೆಯರು ವಾರ್ಷಿಕವಾಗಿ ಪ್ರಸ್ತುತ ಪಡೆಯುವ 15 ದಿನಗಳ ಸಾಂದರ್ಭಿಕ ರಜೆ (CL) ಹೊರತಾಗಿ ವಾರ್ಷಿಕವಾಗಿ 12 ದಿನಗಳ ಹೆಚ್ಚುವರಿ ರಜೆ ಸಿಗಲಿದೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಮಹಿಳಾ ಉದ್ಯೋಗಿಗಳು ತಿಂಗಳಿಗೆ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆಗೆ ಅರ್ಹರಾಗಿರುತ್ತಾರೆ ಎಂದು ಸ್ವಾತಂತ್ರ‍್ಯ ದಿನದಂದು ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಘೋಷಣೆಯನ್ನು ಮಾಡಿದ್ದರು. ಅದರನ್ವಯ ಸರ್ಕಾರ ಈಗ ಜಾರಿ ಮಾಡಿದೆ. ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್‌

    ಹಿಂದಿನ ಬಿಜೆಡಿ ಸರ್ಕಾರವು ಕುಟುಂಬದ ಜವಾಬ್ದಾರಿಗಳು ಮತ್ತು ಮಹಿಳೆಯರ ವಿವಿಧ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಿತ್ತು. ಈಗ, ಮಹಿಳೆಯರಿಗೆ ಸಿಎಲ್‌ಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ

    ಒಡಿಶಾ ಸರ್ಕಾರದ ಎಲ್ಲಾ ಮಹಿಳಾ ಉದ್ಯೋಗಿಗಳು ಪ್ರಸ್ತುತ ಪಡೆಯುವ 15 ದಿನಗಳನ್ನು ಹೊರತುಪಡಿಸಿ ವಾರ್ಷಿಕವಾಗಿ ಹೆಚ್ಚುವರಿ ಸಿಎಲ್‌ಗಳನ್ನು ಪಡೆಯಬಹುದು ಎಂದು ಅಧಿಕೃತ ಟಿಪ್ಪಣಿಯಲ್ಲಿ ಸರ್ಕಾರ ಮಂಗಳವಾರ ತಿಳಿಸಿದೆ. ಈ ಕುರಿತು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ (Mohan Charan Majhi) ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

    ಈಗ, ಮಹಿಳಾ ಉದ್ಯೋಗಿಗಳಿಗೆ ಸಿಎಲ್‌ಗಳ ಸಂಖ್ಯೆ 27 ದಿನಗಳಾಗಿದ್ದು, ಪುರುಷರು 15 ದಿನಗಳ ಸಿಎಲ್ ಅರ್ಹರಾಗಿರುತ್ತಾರೆ. ಇದನ್ನೂ ಓದಿ: ಧಾರವಾಡ| ನದಿಯಲ್ಲಿ ಕೊಚ್ಚಿ ಹೋಯ್ತು ಕಾರು- ಮರ ಏರಿದ್ದ ಚಾಲಕನ ರಕ್ಷಣೆ

  • ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಭುವನೇಶ್ವರ್: ವಿಷಪೂರಿತ ಹಾವನ್ನು (Snake) ಹೆಂಡತಿ (Wife) ಮತ್ತು ಮಗಳು ಮಲಗಿದ್ದ ಕೋಣೆಗೆ ಬಿಟ್ಟು ಅವರನ್ನು ಕೊಲೆಗೈದಿದ್ದ ಆರೋಪಿಯನ್ನು ಒಡಿಶಾ (Odisha) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕೆ.ಗಣೇಶ್ (25) ಎಂದು ಗುರುತಿಸಲಾಗಿದೆ. ಆರೋಪಿ ಅಧೇಗಾಂವ್ ಗ್ರಾಮದ ತನ್ನ ಮನೆಯಲ್ಲಿ ಹೆಂಡತಿ ಬಸಂತಿ ಪತ್ರಾ (23) ಹಾಗೂ ತನ್ನ 2 ವರ್ಷದ ಮಗಳು ದೇಬಾಸ್ಮಿತಾ ಮಲಗಿದ್ದ ವೇಳೆ ಅವರನ್ನು ಕೊಲ್ಲುವ ಉದ್ದೇಶದಿಂದ ರೂಂ ಒಳಗೆ ಹಾವನ್ನು ಬಿಟ್ಟಿದ್ದ. ಬಳಿಕ ಆಕಸ್ಮಿಕವಾಗಿ ಹಾವು ಕಚ್ಚಿದೆ ಎಂಬಂತೆ ಬಿಂಬಿಸಿದ್ದ. ಇದನ್ನೂ ಓದಿ: ಡ್ರಗ್ಸ್‌ ಖರೀದಿಸಲು 74,000 ರೂ.ಗೆ ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಪೋಷಕರು – ಅಪ್ಪ-ಅಮ್ಮ ಅರೆಸ್ಟ್‌

    ಈ ಸಂಬಂಧ ಮೃತ ಮಹಿಳೆಯ ಮಾವ ಅನುಮಾನ ವ್ಯಕ್ತಪಡಿಸಿ, ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಇದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪೊಲೀಸರು ಭಾವಿಸಿದ್ದರು. ಬಳಿಕ ತನಿಖೆ ನಡೆಸಿ ಸಾಕ್ಷ್ಯ ಕಲೆಹಾಕಿ ಘಟನೆ ನಡೆದ ಒಂದು ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಅಕ್ಟೋಬರ್ 6 ರಂದು ಹಾವಾಡಿಗನಿಂದ, ಧಾರ್ಮಿಕ ಕಾರ್ಯಕ್ರಮಕ್ಕೆ ಎಂದು ಹಾವು ತಂದಿದ್ದ ಎಂದು ತಿಳಿದು ಬಂದಿದೆ. ಮೊದಲು ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದ. ಬಳಿಕ ತೀವ್ರ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ 2020ರಲ್ಲಿ ಕೇರಳದ ಕೊಲ್ಲಂನಲ್ಲಿ ಆಸ್ತಿಗಾಗಿ ವ್ಯಕ್ತಿಯೊಬ್ಬ ಪತ್ನಿಯನ್ನು ಇದೇ ಮಾದರಿಯಲ್ಲಿ ಕೊಲೆಗೈದು ಹಾವಿನ ದ್ವೇಷದ ಕಥೆ ಕಟ್ಟಿದ್ದ. ಬಳಿಕ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಅಂಚಲ್ ನಿವಾಸಿ ಸೂರಜ್ (27) ಕೊಲೆಗೈದ ಪತಿ ಹಾಗೂ ಸುರೇಶ್ ಕೊಲೆಗೆ ಸಹಕರಿಸಿದ ಹಾವಾಡಿಗನಾಗಿದ್ದ. ಎಸ್.ಉತ್ತರ (25) ಕೊಲೆಯಾದ ಮಹಿಳೆ ಆಗಿದ್ದಳು. ಇದನ್ನೂ ಓದಿ: ಮಥುರಾದ ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ- ಮೃತರ ಸಂಖ್ಯೆ 12ಕ್ಕೆ ಏರಿಕೆ

  • ಶಾಲೆಯಲ್ಲಿ ಕಂಪ್ಯೂಟರ್‌ ಕಳವು- ತಾಕತ್ತಿದ್ರೆ ನಮ್ಮನ್ನ ಹಿಡೀರಿ ಎಂದು ನಂಬರ್ ಬರೆದಿಟ್ಟ ಕಳ್ಳರು

    ಶಾಲೆಯಲ್ಲಿ ಕಂಪ್ಯೂಟರ್‌ ಕಳವು- ತಾಕತ್ತಿದ್ರೆ ನಮ್ಮನ್ನ ಹಿಡೀರಿ ಎಂದು ನಂಬರ್ ಬರೆದಿಟ್ಟ ಕಳ್ಳರು

    ಭುವನೇಶ್ವರ: ಬಾಲಿವುಡ್‍ ಸಿನಿಮಾ ಧೂಮ್‍ನಿಂದ ಪ್ರೇರಣೆಗೊಂಡ ಕಳ್ಳರ ಗುಂಪೊಂದು ಶಾಲೆಯ ಕಂಪ್ಯೂಟರ್‌ಗಳು ಹಾಗೂ ಜೆರಾಕ್ಸ್ ಯಂತ್ರಗಳನ್ನು ದೋಚಿ, ಬೋರ್ಡ್ ಮೇಲೆ ನಂಬರ್ ಬರೆದಿಟ್ಟು ಹೋದ ಘಟನೆ ಓಡಿಶಾದಲ್ಲಿ ನಡೆದಿದೆ.

    ಒಡಿಶಾದ ನಬರಂಗಪುರ ಜಿಲ್ಲೆಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಇಂದ್ರಾವತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಗೆ ನುಗ್ಗಿದ ತಂಡವು ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು, ಜೆರಾಕ್ಸ್ ಯಂತ್ರಗಳನ್ನು, ತೂಕದ ಯಂತ್ರಗಳು ಮತ್ತು ಧ್ವನಿ ಪೆಟ್ಟಿಗೆಯನ್ನು ದೋಚಿದ್ದಾರೆ.

    school Odisha

    ನಂತರ ಈ ಕಳ್ಳರ ಗುಂಪು ಸ್ಥಳದಿಂದ ಹೊರಡುವಾಗ ಬ್ಲ್ಯಾಕ್‍ಬೋರ್ಡ್ ಮೇಲೆ ಫೋನ್ ನಂಬರ್‌ನ್ನು ಹಾಕಿ, ನಿಮ್ಮ ಹತ್ತಿರ ಸಾಧ್ಯವಾದರೆ ನಮ್ಮನ್ನು ಹಿಡಿಯಿರಿ ಎಂದು ಬರೆಯುವ ಮೂಲಕ ಪೊಲೀಸರಿಗೆ ಸವಾಲು ಹಾಕಿ ಹೋಗಿದ್ದಾರೆ. ಅಷ್ಟೇ ಅಲ್ಲದೇ ಧೂಮ್ 4 ಶೀಘ್ರದಲ್ಲೇ ಬರುತ್ತದೆ ಎಂದು ಬರೆದು ಹೋಗಿದ್ದಾರೆ.

    ಈ ಘಟನೆ ನಡೆದಾಗ ಶಾಲೆಗೆ ರಜೆ ಇದ್ದರಿಂದ ಮರುದಿನ ಸಿಬ್ಬಂದಿ ಕೆಲಸಕ್ಕೆ ಬಂದಾಗ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯ ಬಾಗಿಲು ಮುರಿದಿರುವುದನ್ನು ಗಮನಿಸಿದ್ದಾರೆ. ಇದರ ಜೊತೆಗೆ ಅಲ್ಲಿದ್ದ ಬಹುತೇಕ ಉಪಕರಣಗಳು ಕಾಣೆಯಾಗಿತ್ತು. ಇದರಿಂದಾಗಿ ಆತ ಶಾಲೆಯ ಅಧಿಕಾರಿಗಳಿಗೆ ಘಟನೆಯ ಕುರಿತು ತಿಳಿಸಿದ್ದಾನೆ. ಇದನ್ನೂ ಓದಿ: 6 ವಾರಗಳ ಗರ್ಭಿಣಿಯಾಗಿದ್ದ 10ರ ಬಾಲಕಿಗೆ ಇಂಡಿಯಾನದಲ್ಲಿ ಗರ್ಭಪಾತ

    CRIME 2

    ಈ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ಖತಿಗುಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಳ್ಳರು ಬ್ಲ್ಯಾಕ್‍ಬೋರ್ಡ್ ಮೇಳೆ ನಮೂದಿಸಿದ ನಂಬರ್‍ಗಳು ಪೊಲೀಸರ ದಾರಿ ತಪ್ಪಿಸಲು ಅಥವಾ ಪೊಲೀಸರ ತನಿಖೆಗೆ ಸಹಾಯವಾಗಲೋ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ನೆರೆ ಮನೆಯವನಿಂದ 4ರ ಬಾಲಕಿಯ ಮೇಲೆ ಅತ್ಯಾಚಾರ

    Live Tv
    [brid partner=56869869 player=32851 video=960834 autoplay=true]

  • ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಭುವನೇಶ್ವರ್: ಒಡಿಶಾದ ಕಟಕ್ ಜಿಲ್ಲೆಯ ಉಪವಿಭಾಗ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸ್‍ಡಿಜೆಎಮ್) ನ್ಯಾಯಾಲಯವು ರಾಜ್ಯದ ಖ್ಯಾತ ನಟಿ ವರ್ಷಾ ಪ್ರಿಯದರ್ಶಿನಿಗೆ ನಟ ಮತ್ತು ಲೋಕಸಭಾ ಸಂಸದ ಅನುಭವ್ ಮೊಹಂತಿ ಅವರ ಮನೆಯನ್ನು ಖಾಲಿ ಮಾಡುವಂತೆ ಆದೇಶಿಸಿದೆ.

    court order law

    ಈ ವೇಳೆ ಪ್ರತಿ ತಿಂಗಳು 10 ರಂದು ಅಥವಾ ಅದಕ್ಕೂ ಮೊದಲು ಪ್ರಿಯದರ್ಶಿನಿ ಅವರಿಗೆ ಅನುಭವ್ ಮೊಹಂತಿಯವರು 30 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚಿಸಿದೆ. ಇತ್ತೀಚೆಗೆ ಒಡಿಶಾ ಹೈಕೋರ್ಟ್, ಅನುಭವ್ ಮೊಹಾಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಅವರ ಸಾಂಪ್ರದಾಯಿಕ ಚಿತ್ರವನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವೀಡಿಯೋವನ್ನು ಅಪ್‍ಲೋಡ್ ಮಾಡದಂತೆ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    BRIBE

    ಅನುಭವ್ ಮೊಹಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಯಾರು? ಅವರ ಖಾಸಗಿ ಜೀವನ ಏಕೆ ನ್ಯಾಯಾಲಯದ ಮೆಟ್ಟಿಲೇರಿತು? ಒಡಿಸ್ಸಿ ಚಲನಚಿತ್ರಗಳ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಪಡೆದ ನಂತರ, ಅನುಭವ್ ಮೊಹಾಂತಿ ಅವರು 2014 ರಲ್ಲಿ ರಾಜ್ಯದ ಜನಪ್ರಿಯ ನಟಿ ವರ್ಷಾ ಪ್ರಿಯದರ್ಶಿನಿ ಅವರನ್ನು ವಿವಾಹವಾಗಿದ್ದರು. ಅದರ ನಂತರ ನಟ ಮತ್ತು ನಟಿ ಇಬ್ಬರೂ ದಾಪಂತ್ಯ ಜೀವನ ಚೆನ್ನಾಗಿಯೇ ಇತ್ತು. ಕೆಲವು ದಿನಗಳ ನಂತರ ಅವರ ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಲಾರಭಿಸಿತು. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    DIVORCE

    ಅನುಭವ್ ಮೊಹಾಂತಿ ಅವರು 2016 ರಲ್ಲಿ ತಮ್ಮ ಪತ್ನಿ ವರ್ಷಾ ವಿರುದ್ಧ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮದುವೆಯಾಗಿ 2 ವರ್ಷಗಳು ಕಳೆದಿವೆ. ಆದರೆ ನನ್ನ ಪತ್ನಿ ಲೈಂಗಿಕ ಸಂಬಂಧ ಬೆಳೆಸಲು ಮತ್ತು ಸಹಜ ವೈವಾಹಿಕ ಜೀವನಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ವರ್ಷ ಅವರು ಸಹ ಪತಿ ಅನುಭವ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅವರು ಮದ್ಯವ್ಯಸನಿಯಾಗಿದ್ದು, ಇತರ ಮಹಿಳೆಯರೊಂದಿಗೆ ಅನೈತಿಕ ಸಂಬಂಧಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

    ಅನುಭವ್ ಮೊಹಾಂತಿ ಒಡಿಯಾ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ಜನಪ್ರಿಯ ನಟರಾಗಿ ಪರಿಚಿತರಾದವರು, ನಂತರ ಅವರು 2013 ರಲ್ಲಿ ರಾಜ್ಯದ ಆಡಳಿತ ಪಕ್ಷವಾದ ಬಿಜು ಜನತಾದೊಂದಿಗೆ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಒಡಿಶಾ ಸರ್ಕಾರವು ಮೊಹಾಂತಿ ಅವರನ್ನು ರಾಜ್ಯಸಭಾ ಸಂಸದರನ್ನಾಗಿ ಮಾಡಿತು. 2019 ರಲ್ಲಿ, ಮೊಹಾಂತಿ ಅವರನ್ನು ಕೇಂದ್ರದ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತೆಗೆದುಕೊಳ್ಳುವ ಮೂಲಕ ಚುನಾವಣೆಯಲ್ಲಿ ಕಣಕ್ಕಿಳಿಸಲಾಯಿತು. ಅದರಲ್ಲಿ ಅವರು ಗೆಲುವು ಪಡೆದರು. ಆದಾಗ್ಯೂ, ಕೌಟುಂಬಿಕ ಕಲಹಗಳಿಂದಾಗಿ ಮೊಹಾಂತಿಯವರ ರಾಜಕೀಯ ಜೀವನವು ನಿರಂತರ ವಿವಾದದಲ್ಲಿ ಉಳಿಯಿತು.

    SOCIAL MEDIA

    ಈ ಕುರಿತು ಅವರ ವೈಯಕ್ತಿಕ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದ ಅನುಭವ್ ಮೊಹಂತಿ ಕಳೆದ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ವೈಯಕ್ತಿಕ ಜೀವನವನ್ನು ಜನರಿಗೆ ತಿಳಿಸಲು ಪ್ರಯತ್ನಿಸಿದ್ದಾರೆ. ಆದರೆ ಸಂಸದರು ತಮ್ಮ ಪತ್ನಿಯೊಂದಿಗಿನ ಲೈಂಗಿಕ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಮಾಡುವ ಮೂಲಕ ಪ್ರಸ್ತಾಪಿಸಿದ್ದಾರೆ. ಮೊಹಂತಿ ಮಾತನಾಡಿ, ಕಳೆದ 8 ವರ್ಷಗಳಿಂದ ಕೌಟುಂಬಿಕ ಕಲಹದ ನಡುವೆ ಪತ್ನಿ ವರ್ಷಾ ಪ್ರಿಯದರ್ಶಿನಿ ಜತೆ ದೈಹಿಕ ಸಂಬಂಧ ಹೊಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ನನ್ನ ಇಡೀ ಕುಟುಂಬ ಮತ್ತು ನಾನು ಹೆಂಡತಿಯ ಕಾರಣದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇನೆ. ಇದರಿಂದ ನನ್ನ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ನಾನು ನನ್ನ ಹೆಂಡತಿಯಿಂದ ವಿಚ್ಛೇದನವನ್ನು ಬಯಸುತ್ತೇನೆ ಆದರೆ ಇದೀಗ ಈ ನಿರ್ಧಾರವು ನ್ಯಾಯಾಲಯದಲ್ಲಿದೆ ಎಂದಿದ್ದರು.

  • ಇಂಧನ ಬೆಲೆ ಏರಿಕೆ ವಿರೋಧಿಸಿ ಸೈಕಲ್ ಏರಿ ಬಂದ ವರ

    ಇಂಧನ ಬೆಲೆ ಏರಿಕೆ ವಿರೋಧಿಸಿ ಸೈಕಲ್ ಏರಿ ಬಂದ ವರ

    ಭುವನೇಶ್ವರ್: ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಪ್ರತಿಭಟನೆಗಾಗಿ ವರನೊಬ್ಬ ಮದುವೆಗೆ ಸೈಕಲ್‍ನಲ್ಲಿ ಬಂದ ಘಟನೆ ಒಡಿಶಾದ ಭುವನೇಶ್ವರ್‌ದಲ್ಲಿ ನಡೆದಿದೆ.

    ಸುಭ್ರಾಂಶು ಸಮಲ್ ಸೈಕಲ್ ಮೇಲೆ ಬಂದ ವರ. ಈತನ ಕುಟುಂಬವು ಮದುವೆ ಮರವಣಿಗೆಗೆ ಭಾರೀ ವ್ಯವಸ್ಥೆ ಮಾಡಿತ್ತು. ಆದರೆ ದೇಶದಲ್ಲಿ ಹೆಚ್ಚುತ್ತಿರವ ಇಂಧನ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸಲು ಸುಭ್ರಾಂಶು ಸೈಕಲ್‍ನ್ನು ಬಳಸುವ ನಿರ್ಧಾರವನ್ನು ಮಾಡಿದ್ದಾನೆ.

    marriage

    ಇದರಂತೆ ಮದುವೆ ಬಟ್ಟೆಯನ್ನು ಧರಿಸಿ ಸೈಕಲ್‍ನಲ್ಲಿ ಸುಮಾರು ಒಂದು ಕಿ.ಮೀ ವರೆಗೆ ಸೈಕಲ್‍ನ್ನು ತುಳಿದು ಮಂಟಪಕ್ಕೆ ಬಂದಿದ್ದಾನೆ. ಅವನ ಜೊತೆಗೆ ಮದುವೆಗೆ ಆಗಮಿಸಿದ್ದ ಆತನ ಕುಟುಂಬ ಮತ್ತು ಸ್ನೇಹಿತರು ಕಾಲ್ನಡಿಗೆಯಲ್ಲೇ ಮದುವೆ ಮಂಟಪಕ್ಕೆ ತಲುಪಿದರು. ಇದನ್ನೂ ಓದಿ: ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ: ಶ್ರೀನಿವಾಸ್ ಪೂಜಾರಿ

    petrol

    ನಿರಂತರವಾಗಿ ಪೆಟ್ರೋಲ್ ಹಾಗೂ ಡಿಸೇಲ್‍ಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಹಲವಾರು ಜನರು ಹತಾಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಪ್ರತಿಭಟನೆ ನಡೆಯುತ್ತಿರುವುದು ಸಾಮಾನ್ಯ ಪ್ರತಿಕ್ರಿಯೆ ಆಗಿದೆ. ಆದರೆ ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಸರ್ಕಾರವನ್ನು ಗಮನ ಸೆಳೆಯುವುದು ಉದ್ದೇಶವಾಗಿದೆ ಎಂದು ಸುಭ್ರಾಂಶು ತಿಳಿಸಿದರು. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ವಶಕ್ಕೆ

  • ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಭುವನೇಶ್ವರ್: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಎರಚಿದ ಘಟನೆ ಒಡಿಶಾದಲ್ಲಿ ನಡೆದಿದೆ.

    web bjp logo 1538503012658

    ಒಡಿಶಾದ ಪುರಿಯ ಮಾರ್ಕೆಟ್ ಸ್ಕ್ವೇರ್ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕೇಂದ್ರ ಸಚಿವರು ನಗರದ ಶ್ರೀಮಂದಿರದಲ್ಲಿ ತ್ರಿಮೂರ್ತಿಗಳ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಈ ವೇಳೆ ಪೆಟ್ರೋಲ್, ಡೀಸೆಲ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದನ್ನು ಖಂಡಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯುಐ) ಕಾರ್ಯಕರ್ತರು ಅವರ ವಾಹನಕ್ಕೆ ಕಪ್ಪು ಮಸಿ ಎಸೆದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    Sanjeev Balyan car

    ಈ ಕುರಿತು ಎನ್‍ಎಸ್‍ಯುಐ ಒಡಿಶಾ ಅಧ್ಯಕ್ಷ ಯಾಶೀರ್ ನವಾಜ್ ಮಾತನಾಡಿ, ಪ್ರತಿಯೊಂದು ಕುಟುಂಬವು ಹಣದುಬ್ಬರ ಮತ್ತು ಎಲ್‍ಪಿಜಿ ಸಿಲಿಂಡರ್‌ಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೊಚ್ಚಿಗೆದ್ದಿವೆ. ಕುಟುಂಬ ನಿರ್ವಹಣೆಯ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವಾಗ ಆದಾಯವು ಕುಂಠಿತವಾಗಿದೆ. ಬಿಜೆಪಿ ಇತರ ಸಂಬಂಧವಿಲ್ಲದ ವಿಷಯಗಳ ಮೂಲಕ ಜನಸಾಮಾನ್ಯರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

    congress logo 1

    ಎನ್‍ಎಸ್‍ಯುಐ ಕಾರ್ಯಕರ್ತರು ಒಡಿಶಾಗೆ ಭೇಟಿ ನೀಡುವ ಯಾವುದೇ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡಿದ್ದಾರೆ. ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ವಿರುದ್ಧ ಪ್ರತಿಭಟಿಸುತ್ತಾರೆ ಎಂದು ಹೇಳಿದರು.

    ಇದಕ್ಕೂ ಮುನ್ನ, ಏರುತ್ತಿರುವ ಹಣದುಬ್ಬರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರ ಮೇಲೆಯೂ ಸಹ ಕಾಂಗ್ರೆಸ್‍ನ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಕಪ್ಪು ಮಸಿ ಎಸೆದು, ಕಪ್ಪು ಬಾವುಟವನ್ನು ಎಸೆದಿದ್ದರು.

  • ಮಗನ ಮುಂದೆಯೇ 79 ದಿನಗಳ ಕಾಲ ತಾಯಿಯ ಮೇಲೆ ನಿರಂತರ ಅತ್ಯಾಚಾರ

    ಮಗನ ಮುಂದೆಯೇ 79 ದಿನಗಳ ಕಾಲ ತಾಯಿಯ ಮೇಲೆ ನಿರಂತರ ಅತ್ಯಾಚಾರ

    ಭುವನೇಶ್ವರ್: ಮಹಿಳೆಯೊಬ್ಬರು ಎರಡೂವರೆ ವರ್ಷದ ಮಗನ ಮುಂದೆ ವ್ಯಕ್ತಿಯೊಬ್ಬನಿಂದ 79 ದಿನಗಳ ಕಾಲ ಸತತ ಅತ್ಯಾಚಾರಕ್ಕೊಳಗಾದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.

    ಪೊಲೀಸರು ಶುಕ್ರವಾರ ಸಂತ್ರಸ್ತೆ ಮತ್ತು ಮಗನನ್ನು ಆರೋಪಿ ಕೋಣೆಯಿಂದ ರಕ್ಷಿಸಿದ್ದಾರೆ. ಈ ವೇಳೆ ಆರೋಪಿಯು ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯಲು ಪೊಲೀಸರು ಜಾಲ ಬೀಸಿದ್ದಾರೆ. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

    police (1)

    2017 ರಲ್ಲಿ ವಿವಾಹವಾದ ಮಹಿಳೆ, ವರದಕ್ಷಿಣೆಗಾಗಿ ತನ್ನ ಅತ್ತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆರೋಪಿಯು ಮಹಿಳೆಯ ಕುಟುಂಬಕ್ಕೆ ಭಿನ್ನಾಭಿಪ್ರಾಯವನ್ನು ಬಗೆಹರಿಸುವದಾಗಿ ಭರವಸೆ ನೀಡಿ, ಮಹಿಳೆಯನ್ನು ಕರೆದುಕೊಂಡು ಹೋಗಲು ಸಿದ್ಧನಾಗಿದ್ದನು. ಆದರೆ ಅವರು ಆರೋಪಿ ಜೊತೆ ಹೋಗಲು ನಿರಾಕರಿಸಿದರು. ಈ ಹಿನ್ನೆಲೆ ಅತ್ತೆ ಮಹಿಳೆಯನ್ನು ಪ್ರಜ್ಞೆ ಹೋಗುವಂತೆ ಥಳಿಸಿ ವ್ಯಕ್ತಿಯ ಕೋಣೆಯಲ್ಲಿ ಕೂಡಿಟ್ಟಿದ್ದರು. ಪ್ರಜ್ಞೆ ಬಂದ ನಂತರದಲ್ಲಿ ಮಹಿಳೆ ತನ್ನ ಮಗನನ್ನು ಹುಡುಕಲು ಆರಂಭಿಸಿದ್ದು, ಮಗ ಆರೋಪಿಯ ಕೋಣೆಯಲ್ಲಿ ಸಿಕ್ಕಿದ್ದಾನೆ. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ಏಪ್ರಿಲ್ 28 ರಂದು ಆರೋಪಿಯು ತನ್ನ ಮೊಬೈಲ್ ಫೋನ್ ಅನ್ನು ಕೋಣೆಯಲ್ಲಿಯೇ ಬಿಟ್ಟು ಹೋಗಿರುವುದನ್ನು ಮಹಿಳೆ ಕಂಡುಕೊಂಡು ಕೂಡಲೇ ಪೋಷಕರಿಗೆ ಕರೆ ಮಾಡಿ ತನ್ನ ಕಷ್ಟವನ್ನು ವಿವರಿಸಿದ್ದಾರೆ. ಈ ವೇಳೆ ಮಹಿಳೆಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿಯು ಪರಾರಿಯಾಗಿದ್ದನು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Police Jeep

    ಮಹಿಳೆಯು ಎಫ್‍ಐಆರ್‌ನಲ್ಲಿ ತನ್ನ ಪತಿ, ಅವನ ಸಹೋದರ ಮತ್ತು ಅತ್ತೆ, ಮಾವನನ್ನು ಹೆಸರಿಸಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

  • ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್ ಮಾಡಿದ ಪ್ರಿನ್ಸಿಪಾಲ್ ಸಸ್ಪೆಂಡ್

    ಶ್ರೀವಲ್ಲಿ ಹಾಡಿಗೆ ಡ್ಯಾನ್ಸ್ ಮಾಡಿದ ಪ್ರಿನ್ಸಿಪಾಲ್ ಸಸ್ಪೆಂಡ್

    ಭುವನೇಶ್ವರ್: ತರಗತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಿ ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದ ಹಾಡಿಗೆ ನೃತ್ಯ ಮಾಡಿದ ಹಿನ್ನೆಲೆ ಮುಖ್ಯೋಪಾಧ್ಯಾಯಿನಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

    ಒಡಿಶಾದ ಗಂಜಾಂ ಜಿಲ್ಲೆಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಪಾಡಿ, ತೆಲುಗಿನ ಬ್ಲಾಕ್‍ಬಸ್ಟರ್ ಪುಷ್ಪ ಚಿತ್ರದ ಹಾಡಿಗೆ ತರಗತಿಯಲ್ಲಿ ಕೆಲವು ವಿದ್ಯಾರ್ಥಿಗಳೊಂದಿಗೆ ಸೇರಿ ನೃತ್ಯ ಮಾಡಿದ್ದಾರೆ. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರದಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಲ್ಪೆ ಕಡಲಲ್ಲಿ ಕರಿ ಸುಳಿಗಾಳಿ – ಆಗಸಕ್ಕೆ ಚಿಮ್ಮಿದ ಸಮುದ್ರದ ನೀರು

    police (1)

    ಶೇರಗಡ ಬ್ಲಾಕ್‍ನಲ್ಲಿರುವ ಬಾರಾಮುಂಡಲಿ ಪ್ರೌಢಶಾಲೆಯ ಸ್ಮಾರ್ಟ್ ತರಗತಿಯಲ್ಲಿ ಹಲವಾರು 10 ನೇ ತರಗತಿ ವಿದ್ಯಾರ್ಥಿಗಳು ಒಟ್ಟುಗೂಡಿದ್ದರು. ಕೊಠಡಿಯಲ್ಲಿದ್ದ ಕೆಲವು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‍ಗಳೊಂದಿಗೆ ಟಿವಿಯನ್ನು ಲಿಂಕ್ ಮಾಡಿರಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    class room

    14 ಮತ್ತು 24 ಸೆಕೆಂಡುಗಳ ಅವಧಿಯ ಎರಡು ನೃತ್ಯದ ವೀಡಿಯೋಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಅವರು ಅಲ್ಲು ಅರ್ಜುನ್ ಅಭಿನಯದ ಜನಪ್ರಿಯ ಗೀತೆಯಾದ ‘ಶ್ರೀವಲ್ಲಿ’ ಟ್ಯೂನ್‍ಗಳಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಇದನ್ನೂ ಓದಿ: ರಾಜ್ಯದಲ್ಲಿ ದೇಶದ್ರೋಹಿ ಶಕ್ತಿ ಇನ್ನೂ ಜೀವಂತ ಅನ್ನೋದಕ್ಕೆ ಛೋಟಾ ಪಾಕಿಸ್ತಾನ ಘೋಷಣೆಯೇ ಸಾಕ್ಷಿ: ಮುತಾಲಿಕ್

    Police Jeep

    ಶಾಲಾ ಪರಿವರ್ತನೆ ಯೋಜನೆಯಡಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ತರಗತಿಯಲ್ಲಿ ಅಳವಡಿಸಿದ್ದ ಎಲ್‍ಇಡಿ ಟಿವಿಯಲ್ಲಿ ಆ ಹಾಡನ್ನು ಹಾಕಿದ್ದರು ಎಂದು ತಿಳಿದು ಬಂದಿದೆ. ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಅವರನ್ನು ಬುಧವಾರದಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಬಿನಿತಾ ಸೇನಾಪತಿ ತಿಳಿಸಿದ್ದಾರೆ.

    ಈ ಕುರಿತು ವಿಚಾರಣೆ ನಡೆಯುತ್ತಿದ್ದು, ಕರ್ತವ್ಯ ಲೋಪವೆಸಗಿರುವ ಇನ್ನೂ ಕೆಲವು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಒಡಿಶಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮುಸ್ಲಿಂ ಮಹಿಳೆ

    ಒಡಿಶಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮುಸ್ಲಿಂ ಮಹಿಳೆ

    ಭುವನೇಶ್ವರ್: ಒಡಿಶಾ ನಗರಸಭೆಗೆ ಮೊದಲ ಮುಸ್ಲಿಂ ಮಹಿಳಾ ಅಧ್ಯಕ್ಷರಾಗಿ ಗುಲ್ಮಕಿ ದಲ್ವಾಜಿ ಹಬೀಬ್ ಅವರು ಚುನಾಯಿತರಾಗಿ ಇತಿಹಾಸ ನಿರ್ಮಿಸಿದ್ದಾರೆ.

    ಭದ್ರಕ್ ನಗರಸಭೆಯ 108 ವಾರ್ಡ್‍ಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇದೀಗ ಮುಸ್ಲಿಂ ಸಮುದಾಯದವರಾದ ಗುಲ್ಮಕಿ ದಲ್ವಾಜಿ ಹಬೀಬ್ ಅವರು ಮೊದಲ ಅಧ್ಯಕ್ಷರಾಗಿ ಆಗಿ ಆಯ್ಕೆಯಾಗಿದ್ದಾರೆ.

    elections 1 1

    ಗುಲ್ಮಕಿ ಅವರು ವ್ಯಾಪಾರ ಆಡಳಿತ ಪಧವೀಧರರಾಗಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುಲ್ಮಕಿ ಅವರು ಬಿಜೆಡಿಯ ಸಸ್ಮಿತಾ ಮಿಶ್ರಾ ಅವರನ್ನು 3,256 ಮತಗಳಿಂದ ಸೋಲಿಸಿದ್ದರು. ಪತಿ ಬಿಜೆಡಿ ನಾಯಕರಾಗಿದ್ದರೂ ರಾಜಕೀಯಕ್ಕೆ ಹೊಸಬರಾದ ಗುಲ್ಮಕಿ ಅವರು ಸ್ಥಳೀಯ ಜನರ ಪ್ರೋತ್ಸಾಹದ ನಂತರ ನಾಮಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಬ್ಯಾಂಕ್, ಎಟಿಎಂ ಬಾಗಿಲಿನಲ್ಲಿ ಮಲ ವಿಸರ್ಜನೆ ಮಾಡಿ ವಿಕೃತಿ

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆರಂಭದಲ್ಲಿ ನಾನು ಹೆದರುತ್ತಿದ್ದೆ. ಆದರೆ ಕ್ರಮೇಣ ಎಲ್ಲಾ ಸಮುದಾಯಗಳ ಜನರು ನನ್ನಂತಹ ವಿದ್ಯಾವಂತ ಮಹಿಳೆಯ ಮೇಲೆ ನಂಬಿಕೆ ಇಟ್ಟು ನನ್ನನ್ನು ಬೆಂಬಲಿಸಲು ಮುಂದೆ ಬಂದರು ಎಂದು ಹೇಳಿದರು.

    IndiaTvac4d78 bihar elections

    ಒಡಿಶಾ ಕರಾವಳಿಯಲ್ಲಿರುವ ಭದ್ರಕ್ ಪಟ್ಟಣವು ಎಲ್ಲಾ ಸಮುದಾಯಗಳ ಜನರನ್ನು ಹೊಂದಿದೆ. ಹಿಂದೂಗಳು ಶೇ.59.72, ಮುಸ್ಲಿಮರು ಶೇ.39.56, ಕ್ರೈಸ್ತರು ಶೇ.0.12, ಸಿಖ್ಖರು, ಬೌದ್ಧರು ಮತ್ತು ಜೈನರು ಶೇ 0.02 ಜನಸಂಖ್ಯೆಯಿದೆ. ಇದನ್ನೂ ಓದಿ: ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ

    ನಗರಸಭೆ ಹೇಗೆ ನಡೆಸುತ್ತೀರಿ ಎಂದು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಅವರು, ನಾನು ಉತ್ತಮ ರಾಜಕಾರಣಿಯಾಗಬಹುದು ಅಂತ ನಾನು ಭಾವಿಸುತ್ತೇನೆ. ನನ್ನ ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಕುಟುಂಬದ ಇತರರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ನನ್ನ ತಾಯಿಯ ಚಿಕ್ಕಪ್ಪ ಕೌನ್ಸಿಲರ್ ಆಗಿದ್ದರು. ನನ್ನ ತಾಯಿಯ ಚಿಕ್ಕಮ್ಮ ಅನೇಕ ವರ್ಷಗಳ ಹಿಂದೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

  • ಛೀ… 5 ವರ್ಷದ ಪುಟ್ಟ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ..!

    ಛೀ… 5 ವರ್ಷದ ಪುಟ್ಟ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ..!

    ಭುವನೇಶ್ವರ್: ಐದು ವರ್ಷದ ಪುಟ್ಟ ಬಾಲಕಿಯನ್ನ ಚಾಲಕ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

    ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇದನ್ನೂ ಓದಿ: ಪುಷ್ಪ ಸಿನಿಮಾ ನೋಡಿ 24 ವರ್ಷದ ಯುವಕನ ಬರ್ಬರ ಹತ್ಯೆ – ಮೂವರು ಅರೆಸ್ಟ್

    Ambulance 3 1

    ಬಾಲಕಿ ಪ್ರಸ್ತುತ ಕಟಕ್‍ನ ಎಸ್‍ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

    ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಸಿಂಗ್, ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೇ ಈ ಕೃತ್ಯವನ್ನ ಮಾಡಿದ್ದಾನೆ. ಆತ ಡ್ರೈವರ್ ವೃತ್ತಿ ಮಾಡುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಕೆಯ ಸ್ಥಿತಿ ಚಿಂತಜನಕವಾದ್ದರಿಂದ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

    RAPE STOP

    ಆರೋಪಿಯನ್ನು ಬಂಧಿಸಲು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆರೋಪಿ ಜಗತ್‍ಸಿಂಗ್‍ಪುರ ಜಿಲ್ಲೆಯವನು ಎಂದು ತಿಳಿದುಬಂದಿದೆ. ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.