Tag: ಮಲೆ ಮಹದೇಶ್ವರ

  • ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಚಾಮರಾಜನಗರ: ಮಲೆ ಮಹದೇಶ್ವರ (Male Mahadeshwar Hills) ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆಯ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಜಿಲ್ಲೆಯ ಹುಲಿ ಸುರಕ್ಷಿತ ಅರಣ್ಯ ಹಾಗೂ ವನ್ಯಜೀವಿಧಾಮಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಿದೆ. ಜಿಲ್ಲೆಯ ಅರಣ್ಯಗಳಲ್ಲಿ ಗಸ್ತು ತೀವ್ರಗೊಳಿಸಿರುವುದಲ್ಲದೆ ಕಾಡಿನೊಳಗೆ ಜಾನುವಾರುಗಳನ್ನು ಬಿಡುವುದಕ್ಕೆ ತಡೆ ನೀಡಲಾಗಿದೆ.

    ಕರ್ನಾಟಕ ರಾಜ್ಯದಲ್ಲೇ ಎರಡು ಹುಲಿ ಸುರಕ್ಷಿತ ಅರಣ್ಯ ಹಾಗೂ ಎರಡು ವನ್ಯಜೀವಿಧಾಮಗಳನ್ನು ಹೊಂದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರಕ್ಕಿದೆ. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿ ಹುಲಿಗಳ ನಾಡು ಎಂಬ ಖ್ಯಾತಿಗೂ ಚಾಮರಾಜನಗರ ಭಾಜನವಾಗಿದೆ. ಇತ್ತೀಚಿಗೆ ಆಶಾದಾಯಕವಾಗಿ ಹುಲಿಗಳ ಸಂಖ್ಯೆ ವೃದ್ಧಿಸುತ್ತಿದ್ದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 5 ಹುಲಿಗಳಿಗೆ ವಿಷಪ್ರಾಶಾನ ಮಾಡಿ ಕೊಂದು ಹಾಕಿರುವುದು ಹುಲಿಗಳ ಸಂತತಿ ವೃದ್ಧಿಗೆ ಭಾರೀ ಪೆಟ್ಟು ಬಿದ್ದಿದೆ.ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

    ಈ ಕರಾಳ ಘಟನೆಯ ನಂತರ ಎಚ್ಚೆತ್ತಿರುವ ಅರಣ್ಯ ಇಲಾಖೆ ಜಿಲ್ಲೆಯ ಬಂಡೀಪುರ ಹಾಗು ಬಿಳಿಗಿರಿರಂಗನ ಹುಲಿ ಸಂರಕ್ಷಿತ ಪ್ರದೇಶ, ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿಧಾಮಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಿದೆ. ಈ ಅರಣ್ಯಗಳಲ್ಲಿ ಗಸ್ತು ತೀವ್ರಗೊಳಿಸಲಾಗಿದೆ. ಕಾಡಂಚಿನ ಗ್ರಾಮಸ್ಥರು ಜಾನುವಾರುಗಳನ್ನು ಅರಣ್ಯದೊಳಗೆ ಮೇಯಲು ಬಿಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ತಮಿಳುನಾಡು ಗಡಿ ಭಾಗದ ಹಳ್ಳಿಗಳಿಂದ ಬರುವ ಜಾನುವಾರುಗಳಿಗೂ ಕಡಿವಾಣ ಹಾಕಲಾಗಿದೆ.

    ಹುಲಿಗಳ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖಾ ತಂಡ ಜು.10ರೊಳಗೆ ವರದಿ ನೀಡುವ ನಿರೀಕ್ಷೆಯಿದೆ. ಅರಣ್ಯದಂಚಿನಲ್ಲಿ ಸಮರ್ಪಕ ಆನೆ ಕಂದಕ, ಸೋಲಾರ್ ಬೇಲಿ ಹಾಗೂ ರೈಲ್ವೇ ಬ್ಯಾರಿಕೇಡ್ ಅಳವಡಿಸುವ ಮೂಲಕ ಮಾನವ, ವನ್ಯಜೀವಿ ಸಂಘರ್ಷ ತಡೆಗಟ್ಟಲು ಅರಣ್ಯ ಇಲಾಖೆ ಮುಂದಾಗಬೇಕಿದೆ.ಇದನ್ನೂ ಓದಿ: ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ – ಟೆಕ್ಕಿ ಪತಿಯನ್ನೇ ಹತ್ಯೆಗೈದ ಪತ್ನಿ!

  • ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

    -ಭಕ್ತರಿಂದ 62 ಗ್ರಾಂ ಚಿನ್ನ, 2.513 ಕೆಜಿ ಬೆಳ್ಳಿ ಅರ್ಪಣೆ

    ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ (Male Mahadeshwara Temple) ಮತ್ತೆ ಕೋಟ್ಯಧೀಶನಾಗಿದ್ದಾನೆ.

    ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಹಣ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಭಕ್ತರು ಮಲೆ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

    ಬಿಗಿ ಬಂದೋಬಸ್ತ್‌ನಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ ಹಾಗೂ ಕಾರ್ತಿಕ ಸೋಮವಾರ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು. ಈ ಹಿನ್ನೆಲೆ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ – ತಾಯಂದಿರು, ಅವರ ಪ್ರೇಮಿಗಳು ಅರೆಸ್ಟ್‌

  • ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದ ರಾಘವೇಂದ್ರ ರಾಜ ಕುಮಾರ್

    ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದ ರಾಘವೇಂದ್ರ ರಾಜ ಕುಮಾರ್

    ಡಾ.ರಾಜಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ (Raghavendra Rajkumar) ಇಂದು ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwar) ಆಗಮಿಸಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಆಗಾಗ್ಗೆ ಬರುತ್ತೆ. ಈ ಬಾರಿ ಕುಟುಂಬ ಸಮೇತ ರಾಘವೇಂದ್ರ ರಾಜಕುಮಾರ್ ಆಗಮಿಸಿದ್ದರು.

    Raghavendra Rajkumar 2

    ಮಾದಪ್ಪನ ಸನ್ನಿಧಿಯಲ್ಲಿ ರಾಘವೇಂದ್ರ ರಾಜಕುಮಾರ್‍ ಅವರ ಕಿರಿಯ ಪುತ್ರ ಯುವ ರಾಜಕುಮಾರ್ (Yuvarajkumar), ಪತ್ನಿ ಮಂಗಳಾ ಕೂಡ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮಾದಪ್ಪನ ದರ್ಶನ ಪಡೆದರು. ಎಲ್ಲರೂ ಪೂಜೆ ಸಲ್ಲಿಸಿ ದಾಸೋಹ ಭವನದಲ್ಲಿ ಪ್ರಸಾದ ಸೇವಿಸಿದರು.

     

    ಈ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜಕುಮಾರ್ ‘ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ನಾನು ಬಂದಿರಲಿಲ್ಲ. ಪುತ್ರ ಯುವ ರಾಜಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೀತಿದೆ. ಅದಕ್ಕಾಗಿ ಮಾದಪ್ಪನ ದರ್ಶನ ಪಡೆಯಲು ಬಂದಿದ್ದೇವೆ. ಈ ಜಾಗ ತುಂಬಾ ಚೆನ್ನಾಗಿದೆ. ಮಲೆ ಮಹದೇಶ್ವರ ತಾಣ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಂದು ಸಲವಾದರೂ ಇಲ್ಲಿಗೆ ಬರಬೇಕು ಅಂತ ಅನ್ನಿಸಿದೆ. ಇನ್ಮೇಲೆ ಮಾದಪ್ಪನ ದರ್ಶನ ಪಡೆಯಲು ಬರ್ತಿನಿ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಚಿತ್ರಾನ್ನ ತಿನ್ನಿಸಿ 10,000 ನಗದು, ಮೊಬೈಲ್ ದೋಚಿ ಪರಾರಿ!

    ಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಚಿತ್ರಾನ್ನ ತಿನ್ನಿಸಿ 10,000 ನಗದು, ಮೊಬೈಲ್ ದೋಚಿ ಪರಾರಿ!

    ಚಾಮರಾಜನಗರ: ವೃದ್ಧೆ ಒಬ್ಬರಿಗೆ ಚಿತ್ರಾನ್ನ ತಿನ್ನಿಸಿ 10 ಸಾವಿರ ರೂ. ಹಾಗೂ ಮೊಬೈಲ್ ದೋಚಿ ಪರಾರಿಯಾದ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Mahadeshwara Hill) ನಡೆದಿದೆ.

    ಬೆಂಗಳೂರು (Bengaluru) ಮೂಲದ ರತ್ಮಮ್ಮ (70) ವಂಚನೆಗೊಳಗಾದ ವೃದ್ಧೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ರತ್ನಮ್ಮ ದೇವರ ದರ್ಶನ ಮುಗಿಸಿ ರಂಗಮಂದಿರದಲ್ಲಿ ಮಲಗಿದ್ದರು. ಈ ವೇಳೆ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಬಂದು ಮಾತಾಡಿಸಿದ್ದಾರೆ. ಬಳಿಕ ಪರಿಚಯ ಮಾಡಿಕೊಂಡು ಜೊತೆಗೆ ಮಲಗಿದ್ದಾರೆ. ಬಳಿಕ ತಿಂಡಿಯಲ್ಲಿ ಮತ್ತು ಬರಿಸುವ ಔಷಧಿ ಬೆರಸಿ ಕೊಟ್ಟು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ

    ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆ ಮಾತಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: NCERT ಪಠ್ಯಕ್ರಮ ನಿರ್ಧಾರ ಮಂಡಳಿಯಲ್ಲಿ ಸುಧಾಮೂರ್ತಿಗೆ ಸ್ಥಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಚಾಮರಾಜನಗರ: ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ, ಉಘೇ ಮಾದಪ್ಪ ಎನ್ನುವ ಜಯಕಾರ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರೆದ ಮಹಿಳೆಯರು, ಈ ಎಲ್ಲ ಸಂಭ್ರಮ ಮಲೆ ಮಹದೇಶ್ವರನ (Male Mahadeshwara) ದೀಪಾವಳಿ (Deepavali) ರಥೋತ್ಸವದಲ್ಲಿ ಕಂಡುಬಂದಿದೆ.

    Mahadeshwara Hills

    ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ (Mahadeshwara Hill) ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿಂದು ಮಾದಪ್ಪನ ದೀಪಾವಳಿ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು.  ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ

    Mahadeshwara Hill 2

    ಉಘೇ, ಉಘೇ, ಮಾದಪ್ಪ ಎನ್ನುತ್ತಾ, ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

    Mahadeshwara Hill 3

    ರಾಜ್ಯದ ಮೂಲೆ, ಮೂಲೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೇ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಕೋಟ್ಯಧೀಶನಾದ ಮಾದಪ್ಪ- ಹುಂಡಿಯಲ್ಲಿ 2 ಕೋಟಿ 66 ಸಾವಿರ ರೂ. ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಾದಪ್ಪ- ಹುಂಡಿಯಲ್ಲಿ 2 ಕೋಟಿ 66 ಸಾವಿರ ರೂ. ಸಂಗ್ರಹ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2 ಕೋಟಿ 16 ಸಾವಿರ ರೂ. ಸಂಗ್ರಹವಾಗಿದೆ.

    Male Mahadeshwara 5 large

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.

    MALEMAHADESHWARA HILLS

    ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಭಕ್ತರು ಆಗಮಿಸಿದ್ದರು. ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ ನಗದು, 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

    male mahadeshwara 2male mahadeshwara 2

    ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ: ಜೊಮ್ಯಾಟೊಗೆ ಶಾಕ್ – ಲೇಟ್ ಮಾಡಿ ಆರ್ಡರ್ ಕ್ಯಾನ್ಸಲ್ ಆದ್ರೆ ದಂಡದ ಜೊತೆ ಊಟನೂ ಫ್ರೀ ಕೊಡ್ಬೇಕು

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಕೋಟ್ಯಧೀಶನಾದ ಮಾದಪ್ಪ- ಹುಂಡಿಯಲ್ಲಿ 2 ಕೋಟಿಗೂ ಹೆಚ್ಚು ಹಣ ಸಂಗ್ರಹ

    ಮತ್ತೆ ಕೋಟ್ಯಧೀಶನಾದ ಮಾದಪ್ಪ- ಹುಂಡಿಯಲ್ಲಿ 2 ಕೋಟಿಗೂ ಹೆಚ್ಚು ಹಣ ಸಂಗ್ರಹ

    ಚಾಮರಾಜನಗರ: ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಎರಡು ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.

    CNG MALE MAHADESHWARA HILLS

    ಹುಂಡಿ ಎಣಿಕೆ ಕಾರ್ಯ ನಡೆದು ಕಳೆದ 35 ದಿನಗಳ ಅವಧಿಯಲ್ಲಿ 2,03,25,354 ಕೋಟಿ ರೂ. ನಗದು ಸಂಗ್ರಹವಾಗಿದೆ. ಈ ಪೈಕಿ ನಾಣ್ಯಗಳ ರೂಪದಲ್ಲೇ 12 ಲಕ್ಷ ರೂಪಾಯಿ ಕಾಣಿಕೆಯಾಗಿ ಬಂದಿರುವುದು ವಿಶೇಷವಾಗಿದೆ. ನಗದು ಹಣದ ಜೊತೆಗೆ 110 ಗ್ರಾಂ ಚಿನ್ನ, 3.560 ಕೆಜಿ ಬೆಳ್ಳಿಯನ್ನು ಸಹ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ

    CNG MALE MAHADESHWARA HILLS 1

    ಇತ್ತೀಚಿನ ದಿನಗಳಲ್ಲಿ ಮಹದೇಶ್ವರನ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವುದು ಸಹ ಹುಂಡಿಯಲ್ಲಿ ಕಾಣಿಕೆ ಮೊತ್ತ ಹೆಚ್ಚಲು ಕಾರಣವಾಗಿದೆ.

    Live Tv

  • ಸೆಲ್ಫಿ ಹುಚ್ಚಿಗೆ ಬಿದ್ದು ನೀರುಪಾಲಾದ ವಿದ್ಯಾರ್ಥಿ!

    ಸೆಲ್ಫಿ ಹುಚ್ಚಿಗೆ ಬಿದ್ದು ನೀರುಪಾಲಾದ ವಿದ್ಯಾರ್ಥಿ!

    ಚಾಮರಾಜನಗರ: ಸೆಲ್ಫಿ ಹುಚ್ಚಿಗೆ ವಿದ್ಯಾರ್ಥಿಯೊಬ್ಬ ಫೋಟೋ ಕ್ಲಿಕ್ಕಿಸಿಕೊಳ್ಳುವ ವೇಳೆ ಹೊಗೆನಕಲ್ ಜಲಪಾತದಲ್ಲಿ ಬಿದ್ದು ನೀರುಪಾಲಾಗಿದ್ದಾನೆ.

    ಮೈಸೂರು ಮೂಲದ ಸಂಗಮೇಶ್, ಮಗ ಉಮಾಶಂಕರ್(19) ನರ್ಸಿಂಗ್ ವಿದ್ಯಾರ್ಥಿ ಮೃತ ದುರ್ದೈವಿ. ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಅವರೊಟ್ಟಿವೆ ರಜೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು

    Student Chamarajanagar Malai Mahadeshwara Mysore

    ಈ ವೇಳೆ ಸೆಲ್ಫಿ ಹುಚ್ಚಿನಿಂದಾಗಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಜಲಪಾತದ ಬಳಿ ತೆರಳಿದ್ದ ಉಮಾಶಂಕರ್ ಕಾಲುಜಾರಿ ನೀರುಪಾಲಾಗಿದ್ದಾನೆ.

    IPHONE 2

    ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್ ಸ್ನೇಹಿತರು ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿದ್ದಾನೆ. ಆಗ ಸ್ನೇಹಿತರನ್ನು ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲ್ಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನೂ ಓದಿ: 2.18 ಕೋಟಿ ರೂ. ವಂಚಿಸಿ 3 ವರ್ಷಗಳಲ್ಲಿ 5 ಮರ್ಸಿಡಿಸ್ ಕಾರು ಖರೀದಿಸಿದ!

    ಮಲೆ ಮಹದೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್

    ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್

    ಚಾಮರಾಜನಗರ: ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿ, ಕ್ಲಬ್ ನಡೆಸುತ್ತಿದ್ದ ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿಯನ್ನು ಬಂಧಿಸಿರುವ ಘಟನೆ ನಗರಸ ಕರಿನಂಜನಪುರ ಬಳಿ ನಡೆದಿದೆ.

    ಮೀಸಲು ಪಡೆಯ ಎಎಸ್‌ಐ ಪ್ರದೀಪ್, ಹೆಡ್ ಕಾನ್‌ಸ್ಟೇಬಲ್ ಮರಿಸ್ವಾಮಿ, ಚಾಮರಾಜನಗರ ತಹಸೀಲ್ದಾರ್ ಚಾಲಕ ಕಮಲೇಶ್ ಸೇರಿದಂತೆ 20 ಮಂದಿಯನ್ನು ಜಿಲ್ಲಾ ಪೊಲೀಸ್ ವಿಶೇಷ ತಂಡ ಬಂಧಿಸಿ, 29 ಸಾವಿರ ರೂ.ವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    MONEY

    7 ಮಂದಿ ಭಕ್ತರ ಬಂಧನ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜೂಜಾಡುತ್ತಿದ್ದ 7 ಮಂದಿ ಭಕ್ತರನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ತಲಕಾಡು ಗ್ರಾಮದ ಶಿವಾನಂದಸ್ವಾಮಿ, ನಾಗೇಂದ್ರ ಕುಮಾರ್, ವಿಜಯ್, ಮಹದೇವಪ್ಪ, ಬಸವರಾಜು ಕೃಷ್ಣ, ಸಂತೋಷ್ ಕುಮಾರ್ ಬಂಧಿತ ಆರೋಪಿಗಳು. ಇದನ್ನೂ ಓದಿ: ಪೊಲೀಸರು ಲಂಚ ಪಡೆದರೆ ಕೆಲ್ಸ ಆಗುತ್ತೆ, ಬೇರೆಯವರು ಹಣ ಪಡೆದ್ರೂ ಏನೂ ಮಾಡಲ್ಲ: ಪೊಲೀಸ್

    POLICE JEEP

    ಮಲೆ ಮಹದೇಶ್ವರ ಬೆಟ್ಟದ ಸಾಲೂರು ಸ್ಮಾರಕ ಭವನದ ಹಿಂಭಾಗ ಅಕ್ರಮವಾಗಿ ಜೂಜಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೊಲೀಸರು ದಾಳಿ ನಡೆಸಿ ಜೂಜಾಡುತ್ತಿದ್ದ 7 ಜನರನ್ನು ಬಂಧಿಸಿ ಪಣಕ್ಕಿಟ್ಟಿದ್ದ 26,750 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮೇಘನಾ ಮನೆಯಲ್ಲಿ ಕ್ರಿಸ್‍ಮಸ್‍ಗೆ ಭರ್ಜರಿ ತಯಾರಿ – ಕಲರ್ ಫುಲ್ ಲೈಟಿಂಗ್ಸ್ ನೋಡಿ ರಾಯನ್ ಖುಷ್

  • ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

    ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

    – 56 ದಿನಗಳಲ್ಲಿ 2.62 ಕೋಟಿ ಸಂಗ್ರಹ

    ಚಾಮರಾಜನಗರ: ಕೊರೊನಾ ಕಾಲದಲ್ಲೂ ನಾಡಿನ ಪ್ರಮುಖ ದೇವಾಲಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದ್ದು, ಬರೋಬ್ಬರಿ 2.62 ಕೋಟಿ ರೂ. ಸಂಗ್ರಹವಾಗಿದೆ.

    male mahadehswara hill 5

    ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ಗುರುವಾರ ಬೆಳಗ್ಗೆ 7.30ರಿಂದ ರಾತ್ರಿ 11.30ರ ವರೆಗು ನಡೆದಿದ್ದು, ದೇವಾಲಯ ತೆರೆದಿದ್ದ ಒಟ್ಟು 56 ದಿನಗಳಲ್ಲಿ 2,62,76,718 ರೂ. ಸಂಗ್ರಹವಾಗಿದೆ. 170 ಗ್ರಾಂ ಚಿನ್ನ, 3.7 ಕೆಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

    ಯಾವುದೇ ಸೇವೆಗೆ, ರಥೋತ್ಸವಕ್ಕೆ ಅವಕಾಶ ಇಲ್ಲದಾಗಿಯೂ ಭಕ್ತರು ದೇವರ ದರ್ಶನ ಮಾತ್ರ ಪಡೆದು ಕಾಣಿಕೆ ರೂಪದಲ್ಲಿ ಹಣದ ಹೊಳೆಯನ್ನೇ ಹರಿಸಿದ್ದಾರೆ. ಕೊರೊನಾ ಹಿನ್ನೆಲೆ ವಿವಿಧ ಸೇವೆ ಹಾಗೂ ರಥೋತ್ಸವಗಳನ್ನು ರದ್ದುಪಡಿಸಲಾಗಿತ್ತು. ಆದರೂ ಭಾರೀ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.