Tag: ಮಿಲನ ಪ್ರಕಾಶ್

  • ‘ಡೆವಿಲ್’ ಬಗೆಗಿನ ಮಾಹಿತಿ ಸುಳ್ಳು: ಅಧಿಕೃತವಾಗಿ ನಾವೇ ಹೇಳ್ತೀವಿ ಅಂದ ನಿರ್ದೇಶಕ

    ‘ಡೆವಿಲ್’ ಬಗೆಗಿನ ಮಾಹಿತಿ ಸುಳ್ಳು: ಅಧಿಕೃತವಾಗಿ ನಾವೇ ಹೇಳ್ತೀವಿ ಅಂದ ನಿರ್ದೇಶಕ

    ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ  ಎರಡು ತಿಂಗಳ ಹಿಂದೆ ಸರಳವಾಗಿ ನೆರವೇರಿತ್ತು. ಆದರೆ ಚಿತ್ರತಂಡ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿಲ್ಲ.

    Darshan1 1

    ಮೊದಮೊದಲು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.  ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ  ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದಾರೆ.

    Darshan1 2

    ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮುಹೂರ್ತ ಸದ್ದಿಲ್ಲದೇ ನಡೆಯುವ ಮೂಲಕ ನಿಜವಾಗಿತ್ತು.

     

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

  • Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಇಂದು ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮಹೂರ್ತ ಸದ್ದಿಲ್ಲದೇ ನಡೆದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಡಿ-57 ‘ ಎಂದು ಹೆಸರಿಟ್ಟು ಮಹೂರ್ತ ಮಾಡಲಾಗಿದೆ.

    Darshan 2

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

    Darshan 1

    ಸುದೀಪ್ – ದರ್ಶನ್ ಇಬ್ಬರಿಗೂ ಆಪ್ತರಾಗಿರೋ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಸಾರಥ್ಯದಲ್ಲಿ ದಿಗ್ಗಜರು 2 ಸಿನಿಮಾ ಬರುತ್ತಾ? ಇಬ್ಬರನ್ನೂ ಜೊತೆಯಾಗಿಸಿ ಸಿನಿಮಾ ಮಾಡ್ತಾರಾ? ಎಂಬ ಕೌತುಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

    darshan 1

    ಜ್ಯೂ.ಅಂಬರೀಶ್ – ಜ್ಯೂ.ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದರ್ಶನ್- ಸುದೀಪ್ (Sudeep) ಮತ್ತೆ ಒಂದೇ ವೇದಿಕೆಯಲ್ಲಿ ಜೊತೆಯಾಗಿರೋದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ಈ ಹಿಂದೆ ಅಂಬರೀಶ್ 60ನೇ ವರ್ಷದ ಬರ್ತ್‌ಡೇ ಕಾರ್ಯಕ್ರಮದಲ್ಲಿ ಕುಚಿಕು ಕುಚಿಕು ಡ್ಯಾನ್ಸ್ ಮಾಡಿ ಕಿಚ್ಚ-ದಚ್ಚು ಗಮನ ಸೆಳೆದಿದ್ದರು.

     

    2012ರಲ್ಲಿ ದರ್ಶನ್ ನಟನೆಯ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಸಂಪೂರ್ಣ ಸಹಕರಿಸಿದ್ದ ಕಿಚ್ಚ. ದರ್ಶನ್ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದರು. ಮುಂದೆ ಒಂದೊಳ್ಳೆ ಘಳಿಗೆ ಬಂದರೆ ಒಟ್ಟಿಗೆ ಆಕ್ಟ್ ಮಾಡೋದಾಗಿ ಇಬ್ಬರು ಹೇಳಿದ್ರು. ಅಂಬಿ ಇದ್ದಿದ್ರೆ ಇಷ್ಟೊತ್ತಿಗಾಗ್ಲೇ ಸುದೀಪ್-‌ ದರ್ಶನ್ ಒಂದಾಗುತ್ತಿದ್ದರು. ಇದೀಗ ಇಬ್ಬರನ್ನೂ ಒಂದಾಗಿಸೋ ಪ್ರಯತ್ನಗಳು ಜಾರಿಯಲ್ಲಿವೆ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನವನದ ಹಿರಿಯ ನಿರ್ಮಾಪಕ ಸಿ.ಜಯರಾಮ್ ಇನ್ನಿಲ್ಲ

    ಚಂದನವನದ ಹಿರಿಯ ನಿರ್ಮಾಪಕ ಸಿ.ಜಯರಾಮ್ ಇನ್ನಿಲ್ಲ

    ಬೆಂಗಳೂರು: ಆಟೋ ರಾಜ, ನಾ ನಿನ್ನ ಬಿಡಲಾರೆಯಂತಹ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ.

    auto raja

    ಸೆ.9ರ ಬೆಳಗಿನ ಜಾವ ಜಯರಾಮ್‍ರವರು ಕೊನೆಯುಸಿರೆಳೆದಿದ್ದು, ಇದೀಗ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವಾರು ಗಣ್ಯಾತಿ ಗಣ್ಯರು ಕಂಬನಿ ಮಿಡಿಯುತ್ತಿದ್ದಾರೆ. 70-80ರ ದಶಕದಲ್ಲಿ ಕನ್ನಡದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಅವರು ನಂತರ ಸಿನಿಮಾ ನಿರ್ಮಾಣದಿಂದ ದೂರ ಉಳಿದಿದ್ದರು. ಇದನ್ನೂ ಓದಿ: ಮುಂಬೈನಿಂದಲೇ ಕರೆ ಮಾಡಿ ವಕೀಲರ ಜೊತೆ ಅನುಶ್ರೀ ಮಾತು!

    na ninna bidalare

    ಶ್ರೀನಾಥ್ ಹಾಗೂ ಆರತಿ ಅಭಿನಯದ ಪಾವನ ಗಂಗ, ರಜನಿಕಾಂತ್ ಮತ್ತು ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ್ದ ಗಲಾಟೆ ಸಂಸಾರ, ಆನಂತ್ ನಾಗ್‍ರವರ ‘ನಾ ನಿನ್ನ ಬಿಡಲಾರೆ’, ಶಂಕರ್ ನಾಗ್ ನಟಿಸಿದ್ದ ಆಟೋ ರಾಜ ಹೀಗೆ ಹಲವಾರು ಹಿಟ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ಜಯರಾಮ್ ನೀಡಿದ್ದಾರೆ. ಅಲ್ಲದೇ ಜಯರಾಮ್‍ರವರು ಪಾರ್ವತಮ್ಮ ರಾಜ್‌ ಕುಮಾರ್‌ರವರ ಸಹೋದರಿಯನ್ನೇ ವಿವಾಹವಾಗಿದ್ದರು. ಇದನ್ನೂ ಓದಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಬರ್ತ್‍ಡೇ ಆಚರಿಸಿಕೊಂಡ ಡಾಬಾ ಮಾಲೀಕ

    prakash

    ಸದ್ಯ ಜಯರಾಮ್ ಅವರ ಪುತ್ರ ಮಿಲನ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡು ದೊಡ್ಡ ಹೆಸರು ಮಾಡಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಮಿಲನ, ವಂಶಿ, ವಿನಯ್ ರಾಜ್ ಕುಮಾರ್ ಅವರ ಸಿದ್ದಾರ್ಥ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತಾರಕ್, ಯಶ್ ಹಾಗೂ ವಿಜಯ್ ರಾಘವೇಂದ್ರರವರು ನಟಿಸಿರುವ ಗೋಕುಲ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

  • ದರ್ಶನ್ – ಪ್ರಕಾಶ್ ಪುನರ್ ಮಿಲನ!

    ದರ್ಶನ್ – ಪ್ರಕಾಶ್ ಪುನರ್ ಮಿಲನ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು ಕೊಂಚ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ಇನ್ನೇನು ಗೌರಿ ಗಣೇಶ ಹಬ್ಬ ಮುಗಿಯುತ್ತಲೇ ಆ ಚಿತ್ರದ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ. ರಾಬರ್ಟ್ ಜೊತೆಗೇ ಮತ್ತೊಂದಷ್ಟು ಚಿತ್ರಗಳೂ ಕೂಡಾ ದರ್ಶನ್ ಅವರ ಲಿಸ್ಟಿನಲ್ಲಿ ಸಾಲುಗಟ್ಟಿ ನಿಂತಿವೆ. ಹಾಗಿದ್ದರೂ ಕೂಡಾ ದರ್ಶನ್ ಮತ್ತೊಂದು ಚಿತ್ರವನ್ನೀಗ ಒಪ್ಪಿಕೊಂಡಿದ್ದಾರೆಂಬ ಮಾತುಗಳೂ ಕೇಳಿ ಬರುತ್ತಿವೆ.

    robert

    ವರ್ಷಗಳ ಹಿಂದೆ ದರ್ಶನ್ ಅಭಿನಯ ತಾರಕ್ ಚಿತ್ರ ತೆರೆ ಕಂಡಿತ್ತು. ಆ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಮಿಲನ ಪ್ರಕಾಶ್. ಆ ಕಾಲಕ್ಕೆ ದರ್ಶನ್ ಪಕ್ಕಾ ಮಾಸ್ ಚಿತ್ರಗಳತ್ತಲೇ ಹೆಚ್ಚಾಗಿ ಒತ್ತು ನೀಡಿದ್ದರು. ಅಂಥಾ ಹೊತ್ತಿನಲ್ಲಿಯೇ ದರ್ಶನ್ ಅಭಿಮಾನಿಗಳು ಬಹುಕಾಲದಿಂದ ಕಾಯುತ್ತಿದ್ದ ಫ್ಯಾಮಿಲಿ ಸಬ್ಜೆಕ್ಟಿನ ಕಥೆಯೊಂದಿಗೆ ಪ್ರಕಾಶ್ ಮೋಡಿ ಮಾಡಿದ್ದರು. ಈ ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಸೂಪರ್ ಹಿಟ್ ಆಗಿತ್ತು. ಅದರಲ್ಲಿನ ದರ್ಶನ್ ನಟನೆಯಂತೂ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿತ್ತು. ಹೀಗೆ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ಪ್ರಕಾಶ್ ದರ್ಶನ್ ಅವರ ಮತ್ತೊಂದು ಚಿತ್ರ ನಿರ್ದೇಶನ ಮಾಡೋದು ಗ್ಯಾರೆಂಟಿ ಎನ್ನಲಾಗುತ್ತಿದೆ.

    Darshan Tarak 15 1

    ಇದಕ್ಕೆ ದರ್ಶನ್ ಕಡೆಯಿಂದಲೇ ಒಪ್ಪಿಗೆ ಸಿಕ್ಕಿದೆಯಂತೆ. ಪ್ರಕಾಶ್ ಕೂಡಾ ಸಮರ್ಥ ತಂಡದೊಂದಿಗೆ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳಲು ತಯಾರಾಗಿದ್ದಾರೆ. ಸದ್ಯದಲ್ಲಿಯೇ ಟೈಟಲ್ ಲಾಂಚ್ ಮಾಡಿ, ಈ ಚಿತ್ರವನ್ನು ಅಧಿಕೃತಗೊಳಿಸಿ ನಂತರ ಉಳಿದ ಕೆಲಸ ಮಾಡೋ ನಿರ್ಧಾರ ಅವರದ್ದು. ಹಾಗಂತ ಈ ಚಿತ್ರ ಈ ಕೂಡಲೇ ಶುರುವಾಗುತ್ತೆ ಅಂತೇನಲ್ಲ. ದರ್ಶನ್ ಈಗ ರಾಬರ್ಟ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅದಾದ ನಂತರ ಒಡೆಯ ಮತ್ತು ವೀರ ಮದಕರಿ ನಾಯಕ ಚಿತ್ರಗಳು ಅವರಿಗಾಗಿ ಕಾದಿವೆ. ಇದಾದ ನಂತರ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರ ಶುರುವಾಗಲಿದೆಯಂತೆ.

  • ಮತ್ತೆ ಜೊತೆಯಾಗಲಿದ್ದಾರೆ ಚಾಲೆಂಜಿಂಗ್ ಸ್ಟಾರ್, ಮಿಲನ ಪ್ರಕಾಶ್

    ಮತ್ತೆ ಜೊತೆಯಾಗಲಿದ್ದಾರೆ ಚಾಲೆಂಜಿಂಗ್ ಸ್ಟಾರ್, ಮಿಲನ ಪ್ರಕಾಶ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮಿಲನ ಪ್ರಕಾಶ್ ಅವರು ಮತ್ತೊಂದು ಸಿನಿಮಾ ಮಾಡಲು ಮುಂದಾಗಿದ್ದಾರೆ.

    ಈ ಹಿಂದೆ ತಾರಕ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದ ಪ್ರಕಾಶ್ ಅವರು ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಬೇಕೆಂಬ ಯೋಜನೆಯಲ್ಲಿದ್ದಾರೆ. ಇಬ್ಬರು ಜೊತೆಯಲ್ಲಿ ಮಾಡುತ್ತಿರುವುದು 2 ನೇ ಸಿನಿಮಾವಾಗಿದ್ದು, ನಿದೇರ್ಶಕರಾದ ಪ್ರಕಾಶ್ ಅವರ ಸಮ್ಮುಖದಲ್ಲಿ ಚಿತ್ರದ ಕಥೆಯ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಕಥೆ ವಿಭಿನ್ನ ರೀತಿಯಲ್ಲಿದ್ದು, ಬೇಗನೆ ಚಿತ್ರದ ಟೈಟಲ್ ಹಾಗೂ ಸಿನಿಮಾವನ್ನು ತಿಳಿಸುವುದಾಗಿ ಹೇಳಿದ್ದಾರೆ.

    Master

    ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು, ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ.

    ಸದ್ಯಕ್ಕೆ ದಚ್ಚು `ಒಡೆಯ’ ಸಿನಿಮಾದ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿದ್ದರು. ಅಪಘಾತವಾದ ಮರುದಿನದಿಂದ ಒಡೆಯ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ಶುರುವಾಗಬೇಕಿತ್ತು. ಆದ್ರೆ ಅದನ್ನು ಮುಂದೂಡಲಾಗಿತ್ತು. ಆದರೆ ವಿಶ್ರಾಂತಿಯ ಜೊತೆಗೆ `ಯಜಮಾನ’ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಅಂದ್ರೆ ನವೆಂಬರ್ 20ರಿಂದ ದರ್ಶನ್ ಚಿತ್ರೀಕರಣಕ್ಕೆ ಎಂಟ್ರಿಯಾಗಲಿದ್ದಾರೆ.

    dpcopy 1541508234

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv