Tag: ಮೃತ ದೇಹ

  • ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

    ಮುಂಬೈ: ಕಟ್ಟಡದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಅಂಗಡಿಯೊಂದರಲ್ಲಿ ಮೃತ ದೇಹದ ಭಾಗಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

    ಕಳೆದೆರಡು ದಿನಗಳಿಂದ ಅಂಗಡಿಯಿಂದ ದುರ್ವಾಸನೆ ಬರುತ್ತಿತ್ತು. ಈ ಕುರಿತಾಗಿ ಮಹಾರಾಷ್ಟ್ರದ ನಾಸಿಕ್ ನಗರದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪರಿಶೀಲನೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

    ನಡೆದಿದ್ದೇನು?: ಮೂರ್ನಾಲ್ಕು ದಿನಗಳಿಂದ ಬೀಗ ಹಾಕಲಾಗಿದ್ದ ಅಂಗಡಿಯೊಂದರಿಂದ ದುರ್ನಾತ ಬರುತ್ತಿತ್ತು. ಅಕ್ಕಪಕ್ಕದವರಿಗೆ ಅನುಮಾನ ಉಂಟಾಗಿ ಪೊಲೀಸರಿಗೆ ಈ ವಿಷಯ ತಿಳಿಸಿದ್ದರು. ಆಗ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಗಡಿಯ ಬಾಗಿಲು ಒಡೆದು ನೆಲಮಾಳಿಗೆಯನ್ನು ಪರಿಶೀಲನೆ ಮಾಡಿದ್ದಾರೆ.

    Police Jeep

    ತುಂಬಿಡಲಾಗಿದ್ದ ಗುಜರಿ ವಸ್ತುಗಳ ಮಧ್ಯೆ ಒಂದು ಬಾಕ್ಸ್‌ನಲ್ಲಿ ಮನುಷ್ಯರ ಕಣ್ಣು, ಕಿವಿ, ಮೆದುಳು, ಮುಖದ ಕೆಲವು ಭಾಗಗಳು ಪತ್ತೆಯಾಗಿವೆ. ಮಾನವನ ದೇಹದ ಭಾಗಗಳನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಅಂಗಡಿಯ ಮಾಲೀಕನ ಇಬ್ಬರು ಪುತ್ರರು ವೈದ್ಯರಾಗಿದ್ದಾರೆ. ವೈದ್ಯಕೀಯ ಉದ್ದೇಶಗಳಿಗಾಗಿ ಸಂರಕ್ಷಿಸಿಟ್ಟಿರುವ ಸಾಧ್ಯತೆಯಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಮುಂಬೈ ನಾಕಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

  • ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

    ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ

    ರಾಯಪುರ: ತಂದೆಯೊಬ್ಬ 7 ವರ್ಷದ ತನ್ನ ಮೃತ ಮಗಳ ದೇಹವನ್ನು ಭುಜದ ಮೇಲೆ ಹೊತ್ತು 10 ಕಿ.ಮೀ ಸಾಗಿದ ಘಟನೆ ಶುಕ್ರವಾರ ಬೆಳಗ್ಗೆ ಸರ್ಗುಜಾ ಜಿಲ್ಲೆಯ ಲಖನ್‍ಪುರ್ ಗ್ರಾಮದಲ್ಲಿ ನಡೆದಿದೆ.

    ಘಟನೆ ವೀಡೀಯೋವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ದೃಶ್ಯವನ್ನು ಕಂಡ ಆರೋಗ್ಯ ಮಂತ್ರಿ ಟಿ.ಎಸ್ ಸಿಂಗ್ ದೇವ್ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ಕೈದಿ

    ವೀಡಿಯೋದಲ್ಲಿ ವ್ಯಕ್ತಿ ತನ್ನ ಹೆಗಲ ಮೇಲೆ ಶವವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಅಮದಲದಲ್ಲಿರುವ ಮನೆ ತಲುಪಲು ಕಾಲ್ನಡಿಗೆಯಲ್ಲಿ ಸುಮಾರು 10 ಕಿ.ಮೀ ದೂರ ಕ್ರಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಜಿಲ್ಲಾ ಕೇಂದ್ರವಾದ ಅಂಬಿಕಾಪುರದಲ್ಲಿದ್ದ ಆರೋಗ್ಯ ಸಚಿವ ಸಿಂಗ್ ದೇವ್ ಅವರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗೆ ಸೂಚಿಸಿದ್ದಾರೆ.

    ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವಿಡಿಯೋ ನೋಡಿದೆ. ಇದು ಗೊಂದಲದ ಸಂಗತಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಎಚ್‍ಒಗೆ ಹೇಳಿದ್ದೇನೆ. ಅಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು.

    mobile secret

    ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿ ಮನೆಯವರ ಮನವೊಲಿಸಿ ವಾಹನಕ್ಕಾಗಿ ಕಾಯಬೇಕು. ಅಂತಹ ಘಟನೆಗಳು ನಡೆಯದಂತೆ ಅವರು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

    ಅಧಿಕಾರಿಗಳ ಪ್ರಕಾರ, ಜಿಲ್ಲೆಯ ಲಖನ್‍ಪುರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಬಾಲಕಿ ಮೃತಪಟ್ಟಿದ್ದು, ಶವ ವಾಹನ ಬರುವ ಮುನ್ನ ಆಕೆಯ ತಂದೆ ಶವವನ್ನು ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು

    ಅಮದಾಳ ಗ್ರಾಮದವರಾದ ಈಶ್ವರ ದಾಸ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ಪುತ್ರಿ ಸುರೇಖಾಳನ್ನು ಬೆಳಗ್ಗೆ ಲಖನಪುರ ಸಿಎಚ್‍ಸಿಗೆ ಕರೆತಂದಿದ್ದರು.

    RR NAGAR HOSPITAL 4

    60ರ ಆಸುಪಾಸಿನಲ್ಲಿ ಬಾಲಕಿಯ ಆಮ್ಲಜನಕದ ಪ್ರಮಾಣ ತೀರಾ ಕಡಿಮೆಯಾಗಿತ್ತು. ಆಕೆಯ ಪೋಷಕರ ಪ್ರಕಾರ, ಆಕೆ ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಅಗತ್ಯ ಚಿಕಿತ್ಸೆ ನೀಡಿದರು ಸಹ ಅವಳ ಸ್ಥಿತಿ ಹದಗೆಟ್ಟಿತು. ಬೆಳಿಗ್ಗೆ 7:30 ರ ಸುಮಾರಿಗೆ ಅವರು ಸಾವನ್ನಪ್ಪಿದರು ಎಂದು ಹೇಳಿದರು.

    t s singh deo

    ಡಾ ವಿನೋದ್ ಭಾರ್ಗವ್, ಗ್ರಾಮೀಣ ವೈದ್ಯಕೀಯ ಸಹಾಯಕ (ಆರ್‍ಎಮ್‍ಎ) ಆರೋಗ್ಯ ಕೇಂದ್ರದಲ್ಲಿ ಈ ಬಗ್ಗೆ ನನಗೆ ತಿಳಿಸಿದ್ದಾರೆ. ಶೀಘ್ರದಲ್ಲೇ ಶವ ಸಾಗಾಟ ವಾಹನ ಬರಲಿದೆ ಎಂದು ಕುಟುಂಬ ಸದಸ್ಯರಿಗೆ ತಿಳಿಸಿದ್ದೇವೆ. ಶವ ಸಾಗಾಟ ವಾಹನವು 9:20ರ ಸುಮಾರಿಗೆ ಬಂದಿತು. ಆದರೆ ಆ ಹೊತ್ತಿಗೆ ಅವರು ದೇಹದೊಂದಿಗೆ ಹೊರಟು ಹೋಗಿದ್ದರ ಎಂದು ತಿಳಿಸಿದರು.

  • ಮುಂಬೈ ಲೇಡೀಸ್ ಡಾನ್ಸ್ ಬಾರ್ ಮಾಲೀಕ ಉಡುಪಿಯಲ್ಲಿ ಕೊಲೆ

    ಮುಂಬೈ ಲೇಡೀಸ್ ಡಾನ್ಸ್ ಬಾರ್ ಮಾಲೀಕ ಉಡುಪಿಯಲ್ಲಿ ಕೊಲೆ

    ಉಡುಪಿ: ವಶಿಷ್ಟ ಯಾದವ್ ಎಂಬ ಉತ್ತರ ಪ್ರದೇಶ ಮೂಲದ ಬ್ಯುಸಿನೆಸ್ ಮ್ಯಾನ್ ಉಡುಪಿಯಲ್ಲಿ ಕೊಲೆಯಾಗಿದ್ದಾನೆ. ನವೀ ಮುಂಬೈನ ಕೋಟಿ ಕುಳ ರಾಜಕಾರಣಿಗಳು, ಮಾಫಿಯಾಗಳ ಜೊತೆ ನಂಟು ಬೆಳೆಸಿಕೊಂಡು ಹಣಕಾಸಿನಲ್ಲಿ ಬೆಳೆದಿದ್ದ ವಶಿಷ್ಟ ಯಾದವ್ ಶವವಾಗಿ ಬೆಳ್ಳಂಪಳ್ಳಿಯಲ್ಲಿ ಸಿಕ್ಕಿದ್ದು ಬಹಳ ನಿಗೂಢವಾಗಿತ್ತು.

    ಮುಂಬೈನ ಲೇಡಿಸ್ ಬಾರ್ ಓನರ್, ಕೋಟಿ ಕೋಟಿ ರೂ. ಬಾಳುವ ಈ ವ್ಯಕ್ತಿ ಉಡುಪಿಯ ನಿರ್ಜನ ಪ್ರದೇಶದಲ್ಲಿ ಹೆಣವಾಗಿದ್ದ. ನವೀ ಮುಂಬೈನ ರೌಡಿ ಕಂ ಉದ್ಯಮಿ ಕಂ ರಾಜಕೀಯ ಪುಡಾರಿ ಎಂಬ ವಿಚಾರ ಈಗ ಗೊತ್ತಾಗಿದೆ. ಫೆಬ್ರವರಿ 9 ರಂದು ಅಪರಚಿತ ಹೆಣವಾಗಿದ್ದ ಇತನ ಮೃತದೇಹದ ಗುರುತನನ್ನು ಇಂದು ಪತ್ತೆ ಮಾಡಲಾಗಿತ್ತು. ಈ ವೇಳೆ ವಶಿಷ್ಟ ನಟೋರಿಯಸ್ ರೌಡಿ ಎಂಬ ಸಂಗತಿ ಗೊತ್ತಾಗಿದೆ.

    UDUPI UDP MURDER a copy

    ಉಡುಪಿ ಜಲ್ಲೆಯ ಹಿರಿಯಡ್ಕ ಠಾಣಾ ವ್ಯಾಪ್ತಿಯ ಬೈರಂಪಳ್ಳಿ ಎಂಬ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈತನ ಹೆಣ ಪತ್ತೆಯಾಗಿತ್ತು. ಕತ್ತು ಬಿಗಿದು ಆತನನ್ನು ಕೊಲೆ ಮಾಡಲಾಗಿತ್ತು. ಮೃತದೇಹ ಪತ್ತೆಯಾದ ಬಳಿಕ ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

    ಘಟನೆ ಕುರಿತು ಸ್ಥಳೀಯ ರಮೇಶ್ ಶೆಟ್ಟಿ ಬೆಳ್ಳಂಪಳ್ಳಿ ಮಾತನಾಡಿ, ಬೆಳ್ಳಂಪಳ್ಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಬಿದ್ದಿರುವುದನ್ನು ಜೆಸಿಬಿಯ ಚಾಲಕ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದ. ನಂತರ ಮಣಿಪಾಲ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿತ್ತು ಎಂದಿದ್ದಾರೆ.

    UDUPI UDP MURDER b copy

    ವಶಿಷ್ಟನ ಬಂಧುಗಳೇ ಹೇಳುವ ಪ್ರಕಾರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್‍ಗೆ ಈತ ದೂರದ ಸಂಬಂಧಿಯಂತೆ. ಈತನಿಗೆ ಬಿಜೆಪಿ ಮತ್ತು ಶಿವಸೇನೆ ಪಕ್ಷದ ನಾಯಕರ ಒಡನಾಟ ಜೋರಿತ್ತು. ಮಹಾರಾಷ್ಟ್ರದಲ್ಲಿ ಸ್ವಾಭಿಮಾನ್ ಸಂಘಟನಾ ಎಂಬ ಹೊಸ ರಾಜಕೀಯ ಪಕ್ಷದಲ್ಲಿ ಈತ ಗುರುತಿಸಿಕೊಂಡಿದ್ದ. ಇಷ್ಟೆಲ್ಲಾ ಇರುವ ಈತನಿಗೆ ಏಳೆಂಟು ತಿಂಗಳ ಹಿಂದೆ ಉಡುಪಿಯ ಎಕೆಎಂಎಸ್ ಗ್ಯಾಂಗ್‍ನ ಸೈಫ್ ಮತ್ತು ಅಕ್ರಮ್ ಪರಿಚಯವಾಗುತ್ತದೆ. ಯಾದವ್ ಪತ್ನಿ ಗೀತಾ ಯಾದವ್ ಹೇಳುವಂತೆ ಹದಿನೈದು ದಿನದ ಹಿಂದೆ ವಶಿಷ್ಟ ಯಾದವ್ ಉಡುಪಿಗೆ ಬಂದಿದ್ದ. ಉಡುಪಿಯಲ್ಲಿ ತಾನು ಸೈಫ್ ಮತ್ತು ಅಕ್ರಂ ಜೊತೆಗಿರುವುದಾಗಿ ವಿಡಿಯೋ ಕಾಲ್ ಮಾಡಿದ್ದ. ಆದರೆ ವಶಿಷ್ಟ ಯಾದವ್ ಸಾವಿನ ನಂತರ ಸೈಫ್ ಮತ್ತು ಅಕ್ರಂ ಕಣ್ಮರೆಯಾಗಿದ್ದಾರೆ. ಪತ್ನಿ ನೀತಾಗೆ ಅವರ ಮೇಲೆಯೇ ಸಂಶಯ ಬಂದಿದೆ.

    Police Jeep 1 1

    ಮಾಧ್ಯಮಗಳ ಜೊತೆ ಮಾತನಾಡಿದ ನೀತಾ ಯಾದವ್, ಉಡುಪಿಗೆ ಬಂದ ನಂತರ ನಿರಂತರ ಫೋನ್ ಸಂಪರ್ಕದಲ್ಲಿ ಇದ್ದರು. ವಿಡಿಯೋ ಕಾಲ್ ಮಾಡಿದ ಸಂದರ್ಭ ಸೈಫುದ್ದೀನ್ ಮತ್ತು ಅಕ್ರಮ್ ಅವರನ್ನು ಪರಿಚಯಿಸಿದ್ದರು. ಆಮೇಲೆ ಏನೆಲ್ಲಾ ಬೆಳವಣಿಗೆ ಆಗಿದೆ ಎಂದು ತಿಳಿದಿಲ್ಲ. ಘಟನೆ ನಡೆದ ಮೇಲೆ ಅವರಿಬ್ಬರು ಸಂಪರ್ಕಕ್ಕೆ ಸಿಕ್ಕಿಲ್ಲ. ಪೊಲೀಸರು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಇತ್ತ ಈಗಾಗಲೇ ಹಲವು ಕೊಲೆ ಮತ್ತು ಕೊಲೆ ಯತ್ನದ ಪ್ರಕರಣಗಳಲ್ಲಿ ಸೈಪ್ ಮತ್ತು ಗ್ಯಾಂಗ್ ಶಾಮೀಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ.

  • ಮೇಲ್ಜಾತಿಯ ಜನ ದಾರಿ ನೀಡದ್ದಕ್ಕೆ ಸೇತುವೆ ಮೇಲಿಂದ ಶವ ಇಳಿಸಿದ್ರು

    ಮೇಲ್ಜಾತಿಯ ಜನ ದಾರಿ ನೀಡದ್ದಕ್ಕೆ ಸೇತುವೆ ಮೇಲಿಂದ ಶವ ಇಳಿಸಿದ್ರು

    ಚೆನ್ನೈ: ಮೇಲ್ವರ್ಗದ ಸಮುದಾಯದವರು ತಮ್ಮ ಜಮೀನಿನಲ್ಲಿ ಶವವನ್ನು ತೆಗೆದುಕೊಂಡು ಹೋಗಲು ದಾರಿ ನೀಡದ ಕಾರಣ ದಲಿತರು ಸೇತುವೆ ಮೇಲಿನಿಂದ ಹಗ್ಗ ಕಟ್ಟಿ ಶವ ಇಳಿಸಿದ್ದಾರೆ. ಈ ಅಮಾನವೀಯ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ವನಿಯಂಬಾಡಿ ತಾಲೂಕಿನಲ್ಲಿ ನಡೆದಿದೆ.

    46 ವರ್ಷದ ಎಸ್.ಕುಪ್ಪಂ ಎಂಬ ವ್ಯಕ್ತಿ ಸಾವನ್ನಪ್ಪಿದ್ದರು. ಅಂತ್ಯಕ್ರಿಯೆಯಾಗಿ ಶವವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಮೇಲ್ಜಾತಿಯ ಕೆಲವರು ತಮ್ಮ ಜಮೀನಿನಲ್ಲಿ ಶವವನ್ನು ತೆಗೆದುಕೊಂಡು ಹೋಗದಂತೆ ತಡೆದಿದ್ದಾರೆ. ಕೊನೆಗೆ ಕುಟುಂಬಸ್ಥರು ಸೇತುವೆ ಮೇಲಿಂದ ಶವವನ್ನು ಕೆಳಗೆ ಇಳಿಸಿದ್ದಾರೆ.

    Untitled 1

    ಈ ಗ್ರಾಮದಲ್ಲಿ ದಲಿತರಿಗೆ ಮೃತದೇಹವನ್ನು ಅಂತ್ಯಕ್ರಿಯೆ ಮಾಡಲು ಇರುವುದು ಒಂದೇ ಸ್ಮಶಾನ. ಶವವನ್ನು ತೆಗೆದುಕೊಂಡು ಹೋಗುವ ಮಾರ್ಗ ಮಧ್ಯೆ ಮೇಲ್ವರ್ಗದವರ ಕೃಷಿ ಜಮೀನನ್ನು ದಾಟಿಕೊಂಡು ಹೋಗಬೇಕು. ಮೇಲ್ವರ್ಗದ ಜನರು ತಮ್ಮ ಜಮೀನಿನಲ್ಲಿ ಶವ ತೆಗೆದುಕೊಂಡು ಹೋಗಲು ಅಡ್ಡಿಪಡಿಸುತ್ತಾರೆ. ಹೀಗಾಗಿ ಚಟ್ಟಕ್ಕೆ ಎರಡು ಕಡೆ ಹಗ್ಗ ಕಟ್ಟಿ ಕೆಲವರು ಮೇಲಿನಿಂದ ಇಳಿಸುತ್ತಾರೆ. ಕೆಳಗೆ ಕೆಲವರು ಶವವನ್ನು ಇಳಿಸಿಕೊಳ್ಳುತ್ತಾರೆ.

    ಶವವನ್ನು ಸೇತುವೆ ಮೇಲಿಂದ ಕೆಳಗಿಳಿಸುವ ದೃಶ್ಯಗಳನ್ನು ಕೆಲವರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸರು, ಈ ರೀತಿಯ ಘಟನೆ ನಡೆದಿದೆಯೇ ಎಂದು ತನಿಖೆ ನಡೆಸಲಾಗುವುದು. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

  • ಕೃಷ್ಣೆಯ ಆರ್ಭಟಕ್ಕೆ ಕೊಚ್ಚಿ ಹೋದ ನೂತನ ಸೇತುವೆ

    ಕೃಷ್ಣೆಯ ಆರ್ಭಟಕ್ಕೆ ಕೊಚ್ಚಿ ಹೋದ ನೂತನ ಸೇತುವೆ

    – ಮೂರು ದಿನಗಳ ಬಳಿಕ ತೇಲಿ ಬಂದ ಮೃತ ದೇಹ

    ಯಾದಗಿರಿ: ಕೃಷ್ಣಾ ನದಿಯ ಪ್ರವಾಹಕ್ಕೆ ಕೃಷ್ಣಾ ಹೈಡ್ರೋಪವರ್ ವತಿಯಿಂದ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ.

    ಸುರಪುರ ತಾಲೂಕಿನ ಬೆಂಚಿಗಡ್ಡಿ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಈ ಸೇತುವೆಯನ್ನು ನಿರ್ಮಾಣ ಮಾಡಿ ಕಳೆದ ವರ್ಷವಷ್ಟೇ ಉದ್ಘಾಟನೆ ಮಾಡಲಾಗಿತ್ತು. ಪಿಡಬ್ಲೂಡಿ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿದ್ದ ಸೇತುವೆಯನ್ನು ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಸದ್ಯ ಕೃಷ್ಣಾ ನದಿಯಿಂದ 5.60 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಸೇತುವೆ ಕೊಚ್ಚಿ ಹೋಗಿರುವುದರಿಂದ ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಕಡಿತವಾಗಿದ್ದು, ನಡುಗಡ್ಡೆಯಾಗಿ ಪರಿರ್ತನೆಯಾಗಿದೆ.

    YDR SETUVE a

    ಪ್ರತಿವರ್ಷವೂ ಮಳೆಯ ಸಂದರ್ಭದಲ್ಲಿ ನಡುಗಡ್ಡೆಯಾಗಿ ಪರಿವರ್ತನೆಯಾಗುತ್ತಿದ್ದ ನೀಲಕಂಠರಾಯನ ಗಡ್ಡಿ ಗ್ರಾಮಕ್ಕೆ ಸೇತುವೆ ನಿರ್ಮಾಣ ಮಾಡಿದ್ದರಿಂದ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದರು. ಆದರೆ ಅವರ ಸಂತಸ ಬಹುಬೇಗ ಮಾಯವಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರತಿವರ್ಷ ಸಮಸ್ಯೆ ಎದುರಾಗುತ್ತಿರುವುದನ್ನು ತಿಳಿದಿದ್ದ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಈ ಬಾರಿ ಕಳೆದ 2 ದಿನಗಳ ಹಿಂದೆಯಷ್ಟೇ ಗ್ರಾಮಸ್ಥರಿಗೆ ಆಹಾರ ಪೂರೈಕೆ ಮಾಡಿತ್ತು. ಸದ್ಯ ನೀರಿನ ಪ್ರಮಾಣ ಕಡಿಮೆ ಆಗಲು ಸರಿಸುಮಾರು 1 ತಿಂಗಳು ಅವಧಿ ಬೇಕಾಗುತ್ತದೆ ಎಂಬ ಮಾಹಿತಿ ಲಭಿಸಿದ್ದು, ಮುಂದಿನ ಅವಧಿಯಲ್ಲಿ ಗ್ರಾಮಸ್ಥರನ್ನು ಸಂಪರ್ಕ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕಿದೆ.

    ತೇಲಿ ಬಂದ ಮೃತ ದೇಹ: ಕಳೆದ ಮೂರು ದಿನಗಳ ಹಿಂದೆ ಪಂಪ್ ಸೆಟ್ ತರಲು ಹೋಗಿ ಭೀಮಾ ನದಿಯಲ್ಲಿ ಕೊಚ್ಚಿ ಹೋಗಿದ್ದ ರೈತನ ಮೃತ ದೇಹ ನದಿಯಲ್ಲಿ ತೇಲಿ ಬಂದಿದೆ. ಯಾದಗಿರಿ ತಾಲೂಕಿನ ಕೋಳೂರು ಗ್ರಾಮದ ಸಾಹೇಬರೆಡ್ಡಿ ಮೃತ ರೈತರಾಗಿದ್ದು. ಮೂರು ದಿನಗಳ ಹಿಂದೆ ಭೀಮಾನದಿಯಲ್ಲಿ ಕೊಚ್ಚಿ ಹೋಗಿದ್ದರು. ಎರಡು ದಿನಗಳು ನಿರಂತರ ಶೋಧ ಕಾರ್ಯ ನಡೆಸಿದರು ಅವರ ಮೃತ ದೇಹ ಪತ್ತೆಯಾಗಿರಲಿಲ್ಲ. ಆದರೆ ಇಂದು ಬೆಳಗ್ಗೆ ನದಿಯಲ್ಲಿ ಮೃತ ದೇಹ ತೇಲಿ ಬಂದಿದೆ.

  • ಅಧ್ಯಯನಕ್ಕೆ ತರಿಸಿದ್ದ ಮೃತ ದೇಹಕ್ಕೆ ಪೂಜೆ ಸಲ್ಲಿಸಿದ ಮೆಡಿಕಲ್ ವಿದ್ಯಾರ್ಥಿಗಳು

    ಅಧ್ಯಯನಕ್ಕೆ ತರಿಸಿದ್ದ ಮೃತ ದೇಹಕ್ಕೆ ಪೂಜೆ ಸಲ್ಲಿಸಿದ ಮೆಡಿಕಲ್ ವಿದ್ಯಾರ್ಥಿಗಳು

    ತುಮಕೂರು: ಅಧ್ಯಯನದ ಉದ್ದೇಶದಿಂದ ತರಿಸಿಕೊಳ್ಳಲಾದ ಮೃತದೇಹಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಹಾರ ಹಾಕಿ ವಿಶೇಷವಾಗಿ ಬರಮಾಡಿಕೊಂಡ ಅಪರೂಪದ ಘಟನೆ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

    ಬೆಳಗಾವಿ ಹಾರೋಗೇರಿ ಪಟ್ಟಣದಿಂದ ತರಿಸಿಕೊಳ್ಳಲಾದ ವ್ಯಕ್ತಿಯೊಬ್ಬರ ಮೃತದೇಹಕ್ಕೆ ಶ್ರೀದೇವಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ ಹಣಮಂತ ಸಿದ್ದಪ್ಪ ಬೀರಾದಾರ ಪಾಟೀಲ (76) ಎಂಬುವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು.

    Still 02

    ಶ್ರೀದೇವಿ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಮನವಿಯಂತೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಎಸ್.ಜಿ.ವಿ. ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಹಾಗೂ ಹಾರೂಗೇರಿಯ ಶರಣ ವಿಚಾರ ವಾಹಿನಿಯ ಮುಖಾಂತರ ಪಾಟೀಲರ ಮೃತದೇಹವನ್ನು ತುಮಕೂರಿಗೆ ತರಿಸಿಕೊಳ್ಳಲಾಯಿತು.

    TMK BODY POOJE

    ಈ ವೇಳೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸಿ ಬಳಿಕ ಶರೀರ ರಚನಾ ವಿಭಾಗಕ್ಕೆ ಗೌರವಪೂರ್ವಕವಾಗಿ ಸಾಗಿಸಲಾಯ್ತು. ಮೃತಪಟ್ಟ ನಂತರ ತನ್ನ ದೇಹವನ್ನು ವೈದ್ಯಕೀಯ ಅಧ್ಯಯನಕ್ಕಾಗಿ ದಾನ ಮಾಡಬೇಕೆಂಬ ಇಂಗಿತವನ್ನು ಹಣಮಂತ ಸಿದ್ದಪ್ಪ ಬಿರಾದಾರ್ ಪಾಟೀಲ್ ಅವರು ಬದುಕಿದ್ದಾಗಲೇ ವ್ಯಕ್ತಪಡಿಸಿದ್ದರು.

  • ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆ ಸೆಲ್ಫಿ: ಸಿಬ್ಬಂದಿ ವಜಾ

    ಹೈದರಾಬಾದ್: ನಟ ಹಾಗೂ ರಾಜಕಾರಣಿ ನಂದಮೂರಿ ಹರಿಕೃಷ್ಣ ಅವರ ಮೃತ ದೇಹದ ಜೊತೆ ನಾಲ್ಕು ಜನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಕುರಿತು ಭಾರೀ ಟೀಕೆ ಕೇಳಿ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮಂಡಳಿ ನಾಲ್ವರನ್ನು ಕೆಲಸದಿಂದ ವಜಾಗೊಳಿಸಿದೆ.

    ನಂದಮೂರಿ ಹರಿಕೃಷ್ಣ ಮೃತ ದೇಹದ ಜೊತೆಗಿನ ಸೆಲ್ಫಿ ಫೋಟೋ ನೋಡಿದ್ದ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಅಮಾನವೀಯವಾಗಿ ನಡೆದುಕೊಂಡ ಆಸ್ಪತ್ರೆಯ ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಒತ್ತಾಯಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿ, ಸಾರ್ವಜನಿಕರಲ್ಲಿ ಕ್ಷಮೆ ಕೇಳಿದೆ.

    harikrishna 1

    ನಡೆದದ್ದು ಏನು?
    ಆಗಸ್ಟ್ 29ರಂದು ತೆಲಂಗಾಣದ ನಲ್ಗೊಂಡ ಬಳಿ ಬೀಕರ ಅಪಘಾತ ಸಂಭವಿಸಿ, ನಂದಮೂರಿ ಹರಿಕೃಷ್ಣ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

    ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಒಬ್ಬ ಪುರುಷ ಹಾಗೂ ಮೂವರು ಮಹಿಳಾ ಸಿಬ್ಬಂದಿ ಮೃತ ದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನಲ್ಲಿ ಮಳೆಗೆ 14 ಮಂದಿ ಬಲಿ- ಒಂದೇ ದಿನ ನಾಲ್ವರ ಮೃತದೇಹ ಪತ್ತೆ, 5 ಮಂದಿಗೆ ಶೋಧ

    ಕೊಡಗಿನಲ್ಲಿ ಮಳೆಗೆ 14 ಮಂದಿ ಬಲಿ- ಒಂದೇ ದಿನ ನಾಲ್ವರ ಮೃತದೇಹ ಪತ್ತೆ, 5 ಮಂದಿಗೆ ಶೋಧ

    – ಇಂದು ನಿರಾಶ್ರಿತ ಯುವತಿಯ ವಿವಾಹ

    ಕೊಡಗು: ಮಹಾಮಳೆ ಈವರೆಗೆ ಒಟ್ಟು 14 ಮಂದಿಯನ್ನು ಬಲಿ ಪಡೆದಿದೆ. ಶನಿವಾರ ಒಂದೇ ದಿನ 4 ಮೃತದೇಹಗಳು ಪತ್ತೆಯಾಗಿದೆ. ರಣಮಳೆಯ ಪ್ರವಾಹಕ್ಕೆ ನಲುಗಿಹೋಗಿದ್ದ ಕೊಡಗು ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಹೀಗಿರುವಾಗಲೇ ಮಡಿಕೇರಿಗೆ ಮತ್ತೆ ಮಳೆಯಯಾಗುವ ಎಚ್ಚರಿಕೆ ರವಾನೆಯಾಗಿದೆ.

    ಕೊಡಗಿನಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಮಡಿಕೇರಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಆ ರಣಭೀಕರ ಮಳೆ ಸೃಷ್ಠಿಸಿದ ಅವಾಂತರ ಅಷ್ಟಿಷ್ಟಲ್ಲ. ಯಾಕೆಂದರೆ ಜಲಪ್ರಳಯದಿಂದ ಸತ್ತವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಕೃತಿ ವಿಕೋಪದಲ್ಲಿ ಸಿಲುಕಿ ಸಾವನ್ನಪ್ಪಿದ್ದ ನಾಲ್ಕು ಮಂದಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ಮಡಿಕೇರಿ ತಾಲೂಕಿನ ಮಕ್ಕಂದೂರು ಸಮೀಪ ಉದಯಗಿರಿಯಲ್ಲಿ ಬಾಬು ಎಂಬವರ ಮೃತದೇಹವನ್ನು ಗರುಡ ತಂಡದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಹೆಬ್ಬೆಟ್ಟಗೇರಿಯ ನಿವಾಸಿ ಚಂದ್ರಪ್ಪರ ಮೃತದೇಹವನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ಪತ್ತೆ ಹಚ್ಚಿದರು. ಹಟ್ಟಿಹೊಳೆಯ ಫ್ರಾನ್ಸಿಸ್, ಕಾಟಕೇರಿಯಲ್ಲಿ ಗಿಲ್ಬರ್ಟ್ ಎಂಬವವರ ಮೃತದೇಹ ಸಹ ಪತ್ತೆಯಾಗಿದೆ.

    Mdk Rain Rescue 3

    ಮಹಾಮಳೆಯಿಂದ ಅದೆಷ್ಟು ಮಂದಿ ನಾಪತ್ತೆಯಾಗಿದ್ದಾರೆ ಅನ್ನೋ ಮಾಹಿತಿ ಯಾರಿಗೂ ನಿಖರವಾಗಿ ಸಿಕ್ಕಿಲ್ಲ. ಕುಟುಂಬಸ್ಥರು, ಸಂಬಂಧಿಕರು ಕೊಟ್ಟ ಮಾಹಿತಿಯನ್ವಯ 5 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಡಿಕೇರಿ ತಾಲೂಕಿನ 34 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ನಿರಾಶ್ರಿತರ ಶಿಬಿರದಲ್ಲಿರುವ ನಾಲ್ಕು ಸಾವಿರ ಜನರಿಗೆ ಶೀಘ್ರವೇ ತಾತ್ಕಾಲಿಕ ಶೆಡ್ ಮತ್ತು ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಆಶ್ರಯ ನಿರ್ಮಾಣ ಮಾಡಿಕೊಡಲಾಗುವುದು ಎಂದು ಕೊಡಗು ಡಿಸಿ ಶ್ರೀ ವಿದ್ಯಾ ಹೇಳಿದ್ದಾರೆ.

    ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡು ಪರಿಹಾರ ಕೇಂದ್ರ ಸೇರಿ ಮದುವೆಯ ಕನಸು ಕಮರಿ ಹೋಗಿದ್ದ ಇಬ್ಬರೂ ಯುವತಿಯರ ಮೊಗದಲ್ಲಿ ಮಂದಹಾಸ ಮೂಡಿದೆ. ಇಂದು ಮಂಜುಳ ಎಂಬ ಯುವತಿಯ ಮದುವೆ ನಡೆಯಲಿದೆ. ನಗರದ ಓಂಕಾರ ಸದನದಲ್ಲಿರೋ ಕಾಳಜಿ ಕೇಂದ್ರದಲ್ಲಿ ಮದುವೆ ತಯಾರಿ ನಡೆದಿದೆ. ಮೆಹೆಂದಿ ಶಾಸ್ತ್ರ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಹಲವರು ಭಾಗಿಯಾಗಿದ್ದರು.

    Mdk Rain Rescue 1

    ಇತ್ತ ಮಡಿಕೇರಿಯಿಂದ ಮೈಸೂರು ತೆರಳುವ ರಸ್ತೆಯಲ್ಲಿ ಬಿದ್ದಿದ್ದ ಮಣ್ಣು ತೆರವು ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಎಂದಿನಂತೆ ವಾಹನಗಳು ಸಂಚರಿಸುತ್ತಿವೆ. ಮಡಿಕೇರಿಯಿಂದ ಮಂಗಳೂರು ರಸ್ತೆ ಬದಿಯಲ್ಲಿ ಹಲವೆಡೆ ಗುಡ್ಡಗಳು ಕುಸಿದಿರುವ ಹಿನ್ನೆಲೆ ಸದ್ಯ ಲಘು ವಾಹನ ಸಂಚರಿಸಲು ಅನುಮತಿ ನೀಡಲಾಗಿದೆ. ಆದ್ರೆ ಪ್ರವಾಹ ಪೀಡಿತ ಕೊಡಗು ನಿಧಾನಕ್ಕೆ ಸಹಜ ಸ್ಥಿತಿಗೆ ಮರಳುತ್ತಿರೋ ಹೊತ್ತಲ್ಲಿ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ರವಾನಿಸಿದೆ. ಇನ್ನು ಮೂರು ದಿನ ಕರಾವಳಿ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಎಚ್ಚರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೇ ಕುಟುಂಬದ ನಾಲ್ವರ ಮೃತ ದೇಹಗಳು ಮನೆಯ ಹಿಂಬದಿಯ ಗುಂಡಿಯಲ್ಲಿ ಪತ್ತೆ!

    ಒಂದೇ ಕುಟುಂಬದ ನಾಲ್ವರ ಮೃತ ದೇಹಗಳು ಮನೆಯ ಹಿಂಬದಿಯ ಗುಂಡಿಯಲ್ಲಿ ಪತ್ತೆ!

    ತಿರುವನಂತಪುರಂ: ನಾಪತ್ತೆಯಾಗಿದ್ದ ಕೇರಳ ಕುಟುಂಬದ ನಾಲ್ಕು ಸದಸ್ಯರ ಮೃತದೇಹಗಳು ಅವರ ಮನೆಯ ಹಿಂಬದಿಯ ಗುಂಡಿಯಲ್ಲಿ ಪತ್ತೆಯಾಗಿದೆ.

    ಘಟನೆ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದ್ದು, ಮೃತ ಪಟ್ಟವರನ್ನು ಕೃಷ್ಣನ್ (52), ಪತ್ನಿ ಸುಶೀಲಾ (50) ಹಾಗೂ ಅವರ ಮಗಳು ಹರ್ಷ (21), ಮಗ ಅರ್ಜುನ್(19) ಎಂದು ಗುರುತಿಸಲಾಗಿದ್ದು, ಕಳೆದ ನಾಲ್ಕು ದಿನಗಳಿಂದಲೂ ನಾಪತ್ತೆಯಾಗಿದ್ದ ಇವರ ಶವ ಮನೆಯ ಹಿಂಭಾಗದಲ್ಲಿ ಗುಂಡಿಯಲ್ಲಿ ಹೂಳಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಮೃತಪಟ್ಟವರು ಮುಂಡನ್ಮುಡಿಯಲ್ಲಿರುವ ರಬ್ಬರ್ ಎಸ್ಟೇಟ್‍ನಲ್ಲಿ ವಾಸವಾಗಿದ್ದರು. ಕೃಷ್ಣನ್ ರಬ್ಬರ್ ತೋಟವನ್ನು ಹೊಂದಿದ್ದು, ಅವರು ವಾಮಾಚಾರ ಅಭ್ಯಾಸ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಈ ಘಟನೆ ಕುರಿತು ಪೊಲೀಸರು ಸ್ಥಳೀಯರನ್ನು ವಿಚಾರಣೆ ಮಾಡಿದಾಗ ನಾಲ್ಕು ದಿನಗಳಿಂದ ಅವರು ಕಾಣೆಯಾಗಿದ್ದರು ಎಂದು ಹೇಳಿದ್ದಾರೆ. ಹಾಗಾಗಿ ಪೊಲೀಸರು ಮನೆಯ ಸುತ್ತಮುತ್ತಲೂ ಪರಿಶೀಲಿಸಿದಾಗ ಒಂದರ ಮೇಲೊಂದರಂತೆ ಬಿದ್ದಿರುವ ಕೊಳೆತ ಮೃತದೇಹಗಳು ಪತ್ತೆಯಾಗಿವೆ. ಈ ಕೃತ್ಯ ಭಾನುವಾರ ನಡೆದಿದ್ದು, ಮನೆಯಲ್ಲಿ ಸುತ್ತಿಗೆ ಮತ್ತು ಚಾಕು ಸಿಕ್ಕಿದೆ.

    ಬುಧವಾರ ಮನೆಗೆ ಕುಟುಂಬದ ಸಂಬಂಧಿಕರು ಬಂದಿದ್ದು, ಆ ಸಂದರ್ಭದಲ್ಲಿ ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈಗ ಮರಣೋತ್ತರ ಪರೀಕ್ಷೆಗೆಂದು ಮೃತ ದೇಹಗಳನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಮೃತ ದೇಹಗಳ ಮೇಲೆ ಆಗಿರುವ ಗಾಯಗಳನ್ನು ನೋಡಿದರೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

  • ಬಸ್‍ನಡಿ ಸಿಲುಕಿ 70 ಕಿ.ಮೀ ಬಂತು ಶವ- ಗಾಬರಿಯಲ್ಲಿ ಬೇರೆ ಬಸ್‍ಗೆ ಶವ ಹಾಕಿದ ಚಾಲಕ

    ಬಸ್‍ನಡಿ ಸಿಲುಕಿ 70 ಕಿ.ಮೀ ಬಂತು ಶವ- ಗಾಬರಿಯಲ್ಲಿ ಬೇರೆ ಬಸ್‍ಗೆ ಶವ ಹಾಕಿದ ಚಾಲಕ

    ಬೆಂಗಳೂರು: ಬಸ್ಸಿನಡಿಗೆ ಸಿಲುಕಿದ್ದ ವ್ಯಕ್ತಿ ದೇಹವನ್ನು ಚಾಲಕ 70 ಕಿ.ಮೀ ಎಳೆದು ತಂದಿದ್ದ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದ್ದು, ಚಾಲಕನನ್ನ ಕೃತ್ಯ ನಡೆದ ಸ್ಥಳಕ್ಕೆ ಪೊಲೀಸರು ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ.

    ಬಸ್ ಚಾಲಕ ಮೊಯಿದ್ದೀನ್ ಎಂಬಾತನಿಂದ ಈ ಅಪಘಾತ ನಡೆದಿದೆ. ಕೆಎಸ್‍ಆರ್‍ಟಿಸಿ ಬಸ್ ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿರುವಾಗ ಅಪರಿಚಿತ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದೆ. ನಂತರ ಬಸ್ ನಡಿ ಸಿಲುಕಿದ ವ್ಯಕ್ತಿಯ ಶವವನ್ನು ಶಾಂತಿನಗರ ಡಿಪೋವರೆಗೆ ಎಳೆದುಕೊಂಡು ಹೋಗಿದೆ.

    ಫೆಬ್ರವರಿ 4ರ ಬೆಳಗ್ಗೆ ಈ ಘಟನೆ ನಡೆದಿದ್ದು, ಶಾಂತಿನಗರದ ಕೆಎಸ್‍ಆರ್‍ ಟಿಸಿ ಬಸ್ ಡಿಪೋದಲ್ಲಿ ಮೃತ ದೇಹ ಪತ್ತೆಯಾಗಿದೆ. ನಂತರ ಸಿಸಿಟಿವಿ ಮೂಲಕ ಪೊಲೀಸರು ಪರಿಶೀಲನೆ ನಡೆಸಿ ಆರೋಪಿ ಚಾಲಕನನ್ನು ಪತ್ತೆ ಮಾಡಿದ್ದಾರೆ.

    SHANTHINAGAR BUS ACCIDENT 1

    ನಡೆದಿದ್ದೇನು?: ಬಸ್ ತಮಿಳುನಾಡು, ಮೈಸೂರು, ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ಬಂದಿದ್ದು, ಚಾಲಕನಿಗೆ ಅಘಘಾತವಾಗಿರುವುದರ ಬಗ್ಗೆ ತಿಳಿದಿರಲಿಲ್ಲ. ಶಾಂತಿನಗರ ಡಿಪೋದಲ್ಲಿ ಬಸ್ ನೋಡಿದಾಗ ಚಾಲಕನಿಗೆ ಅಪಘಾತ ಆಗಿರೋದು ಗೊತ್ತಾಗಿದೆ. ಚಾಲಕ ಹೆಣವನ್ನು ಕಂಡು ಗಾಬರಿಗೊಂಡಿದ್ದು, ಬೇರೊಂದು ಬಸ್‍ಗೆ ಹೆಣವನ್ನು ಹಾಕಿ ಹೋಗಿದ್ದಾನೆ. ಬೆಳಗ್ಗೆ ಒಂಭತ್ತು ಗಂಟೆಗೆ ಹೆಣ ಬಸ್‍ನಲ್ಲಿ ಇರೋದು ಪತ್ತೆಯಾಗಿದ್ದು, ಶಾಂತಿನಗರ ಡಿಪೋ ಸಿಸಿಟಿವಿ ಪರಿಶೀಲಿಸಿದಾಗ ಮೊಯಿದ್ದೀನಿ ಮಾಡಿದ ಕುತಂತ್ರ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    SHANTHINAGAR BUS ACCIDENT 2

    ಸದ್ಯ ಮೋಯಿದ್ದೀನ್ ಪೊಲೀಸರ ಕಸ್ಟಡಿಯಲ್ಲಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ. ತನಿಖೆ ವೇಳೆ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಚನ್ನಪಟ್ಟಣದಿಂದ ವ್ಯಕ್ತಿ ದೇಹ ಎಳೆದು ತಂದಿರುವ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾನೆ.

    ಸದ್ಯ ವಿಲ್ಸನ್ ಗಾರ್ಡನ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

    SHANTHINAGAR BUS ACCIDENT 3

    SHANTHINAGAR BUS ACCIDENT 4