Tag: ವಿಧಾನಪರಿಷತ್

  • ಇನ್ಸ್‌ಪೆಕ್ಟರ್‌ ಅಮಾನತು ಪ್ರಕರಣ – ಸಭಾಪತಿ ಹೊರಟ್ಟಿ ವಿರುದ್ಧ ಪ್ರತಿಭಟನೆ

    ಇನ್ಸ್‌ಪೆಕ್ಟರ್‌ ಅಮಾನತು ಪ್ರಕರಣ – ಸಭಾಪತಿ ಹೊರಟ್ಟಿ ವಿರುದ್ಧ ಪ್ರತಿಭಟನೆ

    ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್‌ ಅಮಾನತು ಖಂಡಿಸಿ ಹೊರಟ್ಟಿ ವಿರುದ್ಧ ಪ್ರತಿಭಟನೆ ನಡೆದಿದೆ.

    BASAVARJ HORATTI 1

    ಧಾರವಾಡದ ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯ ವಿವಾದ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಕೂಡಾ ವಾಲ್ಮೀಕಿ ಸಂಘದವರು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಸತಾರೆ ಅಮನತು ಖಂಡಿಸಿ ಧಾರವಾಡ ಗ್ರಾಮೀಣ ಠಾಣೆ ಎದುರು ವಾಲ್ಮೀಕಿ ಸಮಾಜದವರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ 8 ದಿನಗಳಲ್ಲಿ ಅಮಾನತು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

    BASAVARJ HORATTI

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬಸವರಾಜ ಹೊರಟ್ಟಿ, ಜ. 25ಕ್ಕೆ ನನ್ನ ಮೇಲೆ ದೂರು ದಾಖಲಾಗಿತ್ತು, ಈ ವಿಷಯದ ಬಗ್ಗೆ ಹೆಚ್ಚು ಗಮನಹರಿಸಿರಲಿಲ್ಲ ನಾನು ಸುಮ್ಮನಿದ್ದೆ. ಎಸ್‍ಪಿ ಆಗಮಿಸಿ ನನ್ನೊಂದಿಗೆ ಕ್ಷಮೆ ಕೇಳಿದ್ದರು, ನಾನು ಘಟನೆ ನಡೆದ ದಿನ ಧಾರವಾಡದಲ್ಲಿ ಇರಲಿಲ್ಲ. ನಾನು ಬೆಂಗಳೂರಿನಲ್ಲಿ ಇದ್ದರು ನನ್ನ ಮೇಲೆ ಅಟ್ರಾಸಿಟಿ ದೂರು ಹಾಕಲಾಗಿದೆ. ತಪ್ಪು ಮಾಡದವರ ಮೇಲೆ ಕ್ರಮ ಕೈಗೊಂಡು ಬಲಿಪಶು ಮಾಡುವುದು ಬೇಡ. ಹಿರಿಯ ಅಧಿಕಾರಿ ಹೇಳಿದಂತೆ ಕಿರಿಯ ಅಧಿಕಾರಿಗಳ ಮೇಲೆ ಕ್ರಮ ಸರಿಯಲ್ಲ. ಪೊಲೀಸ್ ಮಹಾ ನಿರ್ದೇಶಕರ ಜೊತೆ ಈ ಬಗ್ಗೆ ಮಾತನಾಡುತ್ತೇನೆ, ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

  • ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

    Basavaraj Horatti

    ಏನಿದು ಪ್ರಕರಣ:
    ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    session 6

    ಹೊರಟ್ಟಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು. ಆ ಬಳಿಕ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಈ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಈ ವೇಳೆ ಎಸ್‍ಪಿ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಎರಡು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

  • ಇಂದು ಪರಿಷತ್ ಚುನಾವಣೆ ಫಲಿತಾಂಶ – 3 ಪಕ್ಷಗಳಿಗೆ ಪ್ರತಿಷ್ಠೆಯ ಸಮರ

    ಇಂದು ಪರಿಷತ್ ಚುನಾವಣೆ ಫಲಿತಾಂಶ – 3 ಪಕ್ಷಗಳಿಗೆ ಪ್ರತಿಷ್ಠೆಯ ಸಮರ

    ಬೆಂಗಳೂರು: ಇಂದು ಮೇಲ್ಮನೆ ಚುನಾವಣೆಯ 25 ಸ್ಥಾನಗಳ ಚುನವಣಾ ಫಲಿತಾಂಶ ಹೊರಬೀಳಲಿದೆ. 20 ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಫಲಿತಾಂಶ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್ 10ರಂದು ಮತದಾನ ನಡೆದಿತ್ತು.

    MDK ELECTION RESULT

    1. ಕೊಡಗು
    – ಸುಜಾ ಕುಶಾಲಪ್ಪ, ಬಿಜೆಪಿ – ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಸಹೋದರ
    – ಮಂಥರ್ ಗೌಡ, ಕಾಂಗ್ರೆಸ್ – ಬಿಜೆಪಿಯ ಮಾಜಿ ಸಚಿವ ವಾಲೆ ಮಂಜು ಪುತ್ರ ಇದನ್ನೂ ಓದಿ: ತೀವ್ರ ಕುತೂಹಲ ಕೆರಳಿಸಿರುವ ಪರಿಷತ್ ಚುನಾವಣಾ ಫಲಿತಾಂಶ – ಇಂದು ಮತ ಏಣಿಕೆ

    MNG ELECTION RESULT

    2. ದಕ್ಷಿಣ ಕನ್ನಡ
    – ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ, – ಹಾಲಿ ಸಚಿವರು
    – ಮಂಜುನಾಥ ಭಂಡಾರಿ, ಕಾಂಗ್ರೆಸ್ – ಮಲ್ಲಿಕಾರ್ಜುನ ಖರ್ಗೆ ಕಟ್ಟಾ ಬೆಂಬಲಿಗರು

    CKM ELECTION RESULT

    3. ಚಿಕ್ಕಮಗಳೂರು
    -ಎಂ.ಕೆ.ಪ್ರಾಣೇಶ್, ಬಿಜೆಪಿ – ಹಾಲಿ ಉಪಸಭಾಪತಿ
    -ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ – ಸಿದ್ದರಾಮಯ್ಯ ಆಪ್ತ ವಲಯ, ಜೆಡಿಎಸ್ ಬೆಂಬಲವೂ ಇದೆ ಇದನ್ನೂ ಓದಿ: ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಬಜರಂಗ ದಳ

    SMG ELECTION RESULT

    4. ಶಿವಮೊಗ್ಗ
    -ಡಿ.ಎಸ್.ಅರುಣ್, ಬಿಜೆಪಿ – ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ಪುತ್ರ
    -ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ

    DWD ELECTION RESULT

    5. ಧಾರವಾಡ
    -ಪ್ರದೀಪ್ ಶೆಟ್ಟರ್, ಬಿಜೆಪಿ – ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹೋದರ
    -ಸಲೀಂ ಅಹ್ಮದ್, ಕಾಂಗ್ರೆಸ್ – ಕೆಪಿಸಿಸಿ ಕಾರ್ಯಾಧ್ಯಕ್ಷ

    BLG ELECTION RESULT

    6. ಬೆಳಗಾವಿ
    -ಮಹಾಂತೇಶ್ ಕವಟಗಿಮಠ, ಬಿಜೆಪಿ – ಹಾಲಿ ಸದಸ್ಯ
    -ಚನ್ನರಾಜ್ ಹಟ್ಟಿ ಬಿ ಹಟ್ಟಿಹೊಳಿ, ಕಾಂಗ್ರೆಸ್ – ಕಾಂಗ್ರೆಸ್ ಪ್ರಭಾವಿ ನಾಯಕಿ ಹೆಬ್ಬಾಳ್ಕರ್ ಸಹೋದರ
    -ಲಖನ್ ಜಾರಕಿಹೊಳಿ, ಪಕ್ಷೇತರ – ರಮೇಶ್, ಸತೀಶ್ ಮತ್ತು ಬಾಲಚಂದ್ರ ಜಾರಕಿಹೊಳಿಯವರ ಕಿರಿಯ ಸಹೋದರ

    BIJ ELECTION RESULT

    7. ವಿಜಯಪುರ
    -ಪಿ.ಎಚ್.ಪೂಜಾರ್, ಬಿಜೆಪಿ – ಮಾಜಿ ಶಾಸಕ
    -ಸುನೀಲ್ ಗೌಡ ಪಾಟೀಲ್, ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ

    HSN ELECTION RESULT

    8. ಹಾಸನ
    -ಸೂರಜ್ ರೇವಣ್ಣ, ಜೆಡಿಎಸ್ – ಮಾಜಿ ಸಚಿವ ಎಚ್.ಡಿ ರೇವಣ್ಣ ಪುತ್ರ, ಪ್ರಜ್ವಲ್ ರೇವಣ್ಣ ಸಹೋದರ
    -ವಿಶ್ವನಾಥ್, ಬಿಜೆಪಿ
    -ಎಂ.ಶಂಕರ್, ಕಾಂಗ್ರೆಸ್

    MND ELECTION RESULT

    9. ಮಂಡ್ಯ
    -ಅಪ್ಪಾಜಿ ಗೌಡ, ಜೆಡಿಎಸ್ – ಹಾಲಿ ಪರಿಷತ್ ಸದಸ್ಯ
    -ದಿನೇಶ್ ಗೂಳಿಗೌಡ, ಕಾಂಗ್ರೆಸ್ – ಸಚಿವ ಎಸ್.ಟಿ.ಸೋಮಶೇಖರ್ ಒಎಸ್‍ಡಿ ಆಗಿದ್ದವರು
    -ಮಂಜು ಕೆ.ಆರ್.ಪೇಟೆ, ಬಿಜೆಪಿ

    BNG RURAL RESULT

    10. ಬೆಂಗಳೂರು ಗ್ರಾಮಾಂತರ
    -ಎಸ್.ರವಿ ಕಾಂಗ್ರೆಸ್ – ಹಾಲಿ ಪರಿಷತ್ ಸದಸ್ಯ
    -ರಮೇಶ್ ಗೌಡ, ಜೆಡಿಎಸ್ – ಹಾಲಿ ಪರಿಷತ್ ಸದಸ್ಯ
    -ಬಿ.ಎಂ.ನಾರಾಯಣ ಸ್ವಾಮಿ, ಬಿಜೆಪಿ

    BNG CITY

    11. ಬೆಂಗಳೂರು ನಗರ
    -ಗೋಪಿನಾಥ್ ರೆಡ್ಡಿ, ಬಿಜೆಪಿ – ಈಸಲ ಎಸ್ಟಿ ಸೋಮಶೇಖರ್, ಬೈರತಿ ಬಸವರಾಜು ಸಪೋರ್ಟ್
    -ಯೂಸುಫ್ ಷರೀಫ್, ಕಾಂಗ್ರೆಸ್ – ಡಿಕೆಶಿ ಪ್ರತಿಷ್ಠೆ, ಅತ್ಯಂತ ಸಿರಿವಂತ ಅಭ್ಯರ್ಥಿ

  • 116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 116 ಕೋಟಿ ರೂಪಾಯಿ ಆಸ್ತಿ ಒಡೆಯ ಬಿ.ಸೋಮಶೇಖರ್ ಕಣಕ್ಕಿಳಿದಿದ್ದಾರೆ.

    ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸೋಮಶೇಖರ್ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಇವರು ನೆಲೆಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿದ್ದಾರೆ. ಇವರಿಗೆ ಪತ್ನಿ ಮಂಜುಳಾ ಹಾಗೂ ಮೂವರು ಮಕ್ಕಳು ಇದ್ದಾರೆ.

    shomashekar

    ಸೋಮಶೇಖರ್ ಅವರ ಹೆಸರಲ್ಲಿ 35 ಕೋಟಿ ರೂ. ಚರಾಸ್ತಿ ಹಾಗೂ 80 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಐದು ಬ್ಯಾಂಕುಗಳಲ್ಲಿ 6.32 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. 28.52 ಕೋಟಿ ಹಣವನ್ನು ಉದ್ಯಮದಲ್ಲಿ ತೊಡಗಿಸಿದ್ದಾರೆ. ಇದರಲ್ಲಿ ಬಹುತೇಕ ಹಣವನ್ನು ಜಮೀನು ಮುಂಗಡ ನೀಡಿದ್ದಾರೆ. 30 ಲಕ್ಷ ಮೌಲ್ಯದ ರೇಂಜ್ ರೋವರ್ ಕಾರು, ಪತ್ನಿಗೆ ಇನ್ನೊವಾ ಕಾರು ಇದೆ. ಇದನ್ನೂ ಓದಿ: ಅಕಾಲಿಕ ಮಳೆ – ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ಕರೆದ ಸಿಎಂ

    ಸೋಮಶೇಖರ್ ಅವರ ಪತ್ನಿ ಮಂಜುಳಾ ಅವರ ಬಳಿಯೂ 1.4 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್, 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇವೆ. 22.4 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಪ್ರಸ್ತುತ ಸೋಮಶೇಖರ್ ಅವರ ಬಳಿ 116 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಇವರ ಪತ್ನಿಯೂ ಕೂಡ 23 ಕೋಟಿ ರೂ. ಆಸ್ತಿಯ ಒಡತಿ ಎಂದು ಘೋಷಿಸಿಕೊಂಡಿದ್ದಾರೆ.

    shomashekar 1

    ಅದು ಅಲ್ಲದೇ ಮಂಜುಳಾ ಅವರು 91 ಲಕ್ಷ ಹಾಗೂ ಸೋಮಶೇಖರ್ 71 ಲಕ್ಷ ರೂ. ಸಾಲ ಮಾಡಿದ್ದಾರೆಂದು ಇಂದು ಸಲ್ಲಿಸಿರುವ ನಾಮಪತ್ರದ ಆಸ್ತಿ ವಿವರಣೆಯಲ್ಲಿ ಘೋಷಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆ

  • ಸೋನಿಯಾಗಾಂಧಿ ಭೇಟಿಯಾದ ಡಿಕೆಶಿ – ಸಂಜೆ ವೇಳೆಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ ಘೋಷಣೆ

    ಸೋನಿಯಾಗಾಂಧಿ ಭೇಟಿಯಾದ ಡಿಕೆಶಿ – ಸಂಜೆ ವೇಳೆಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ ಘೋಷಣೆ

    ನವದೆಹಲಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಸಂಜೆ ಬಳಿಕ ಒಂದೆರಡು ಕ್ಷೇತ್ರಗಳನ್ನು ಹೊರತುಪಡಿಸಿ ಬಹುತೇಕ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಿಸಬಹುದು ಎಂದು ಮೂಲಗಳು ಹೇಳಿವೆ.

    DK Shivakumar 1 1

    ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಭೇಟಿ ಮಾಡಿದ್ದ ಡಿ.ಕೆ ಶಿವಕುಮಾರ್ ಇಂದು ಸೋನಿಯಾಗಾಂಧಿ ಭೇಟಿಯಾಗಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ.

    ಸೋನಿಯಾಗಾಂಧಿ ಭೇಟಿ ವೇಳೆ ಕೋಲಾರ, ಮೈಸೂರು ಮತ್ತು ಬೆಂಗಳೂರಿನಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇರುವ ಗೊಂದಲಗಳ ಬಗ್ಗೆ ಚರ್ಚಿಸಿದ್ದು ಬಾಕಿ ಉಳಿದ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಒಂದೊಂದು ಹೆಸರುಗಳನ್ನು ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಂಸತ್ ಚುನಾವಣೆ ವೇಳೆ ಜೆಡಿಎಸ್ ಬೆಂಬಲಿಸಿ ತಪ್ಪು ಮಾಡಿದ್ದೇವೆ: MLC ಗೋಪಾಲಸ್ವಾಮಿ

    ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಸೋನಿಯಾ ಗಾಂಧಿ ಭೇಟಿ ಮಾಡಿ ಹಲವು ವಿಷಯ ಚರ್ಚಿಸಿದ್ದೇನೆ, ವಿಧಾನ ಪರಿಷತ್ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಅವರು ರಾಜ್ಯ ಉಸ್ತುವಾರಿ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಪ್ರಕಟಿಸುತ್ತಾರೆ, 2-3 ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಒಂದೇ ಬಾರಿಗೆ ಪ್ರಕಟ ಆಗುತ್ತೆ. ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೊಂದಣಿ ಬಗ್ಗೆ ಮತ್ತು ಪಕ್ಷ ಸಂಘಟನೆ ಬಗ್ಗೆ ಸೋನಿಯಾ ಗಾಂಧಿ ಜೊತೆ ಚರ್ಚಿಸಿದ್ದೇನೆ ಎಂದರು.

    ಮೂಲಗಳ ಪ್ರಕಾರ ಬೆಂಗಳೂರು ಗ್ರಾಮಾಂತರದಿಂದ ಎಸ್.ರವಿ, ಶಿವಮೊಗ್ಗದಿಂದ ಪ್ರಸನ್ನ ಕುಮಾರ್, ಚಿಕ್ಕಮಗಳೂರುನಿಂದ ಗಾಯಿತ್ರಿ ಶಾಂತೇಗೌಡ, ತುಮಕೂರುನಿಂದ ರಾಜೇಂದ್ರ, ಚಿತ್ರದುರ್ಗ ದಾವಣಗೆರೆಯಿಂದ ಸೋಮಶೇಖರ್, ಮಂಡ್ಯದಿಂದ ದಿನೇಶ್ ಗೂಳಿ ಗೌಡ, ಕೊಡಗುನಿಂದ ಮಂಥರ್ ಗೌಡ, ಹಾಸನದಿಂದ ಶಂಕರ್, ಕೊಪ್ಪಳ – ರಾಯಚೂರಿನಿಂದ ಶರಣೇಗೌಡ ಬಯ್ಯಾಪುರ, ಧಾರವಾಡದಿಂದ (ದ್ವಿ ಸದಸ್ಯ ಸ್ಥಾನ) ಸಲೀಂ ಅಹಮ್ಮದ್, ಬೆಳಗಾವಿಯಿಂದ (ದ್ವಿ ಸದಸ್ಯ ಸ್ಥಾನ)ಚನ್ನರಾಜು, ಗದಗನಿಂದ ಆರ್.ಎಸ್ ಪಾಟೀಲ್, ಉತ್ತರ ಕನ್ನಡದಿಂದ ಭೀಮಣ್ಣ ನಾಯಕ ಹೆಸರು ಬಹುತೇಕ ಖಚಿತವಾಗಿದೆ.

  • ಪರಿಷತ್‍ನಲ್ಲಿ ನಿದ್ರೆ ಮಾಡೋರಿಗೆ ಹಾಡು ಹೇಳಿ ಎಬ್ಬಿಸಿದ ಜೆಡಿಎಸ್ ಸದಸ್ಯ ಭೋಜೇಗೌಡ

    ಪರಿಷತ್‍ನಲ್ಲಿ ನಿದ್ರೆ ಮಾಡೋರಿಗೆ ಹಾಡು ಹೇಳಿ ಎಬ್ಬಿಸಿದ ಜೆಡಿಎಸ್ ಸದಸ್ಯ ಭೋಜೇಗೌಡ

    -ಪರಿಸರ ವಾದಿಗಳ ವಿರುದ್ಧ ಕಿಡಿ

    ಬೆಂಗಳೂರು: ವಿಧಾನಪರಿಷತ್‍ನಲ್ಲಿ ಚರ್ಚೆಯ ಸಂದರ್ಭದಲ್ಲಿ ನಿದ್ದೆ ಮಾಡುತ್ತಿದ್ದವರನ್ನು ನೋಡಿ ವಿಧಾನಪರಿಷತ್ ಜೆಡಿಎಸ್ ಸದಸ್ಯ ಭೋಜೇಗೌಡರು ಏರು ಕಂಠದಲ್ಲಿ ದಾಸರ ಪದ ಹಾಡುವ ಮೂಲಕ ನಿದ್ದೆಯಿಂದ ಎಬ್ಬಿಸುವ ಕೆಲಸ ಮಾಡಿದ್ದಾರೆ.

    BOOJEGOWDA

    ನಿಯಮ 330 ಅಡಿ ನಡೆಯುತ್ತಿದ್ದ ಚರ್ಚೆ ವೇಳೆ ಫಾರೂಕ್ ಅವರೊಂದಿಗೆ ಮಾತನಾಡುತ್ತಿದ್ದ ಭೋಜೇಗೌಡರು, ಇದ್ದಕ್ಕಿದ್ದಂತೆ ಗಾಯನ ಶುರುಮಾಡಿಕೊಂಡರು. ರಾಗವಾಗಿ ಹಾಡು ಶುರು ಮಾಡಿದ ಭೋಜೇಗೌಡರು ಏರು ಕಂಠದಲ್ಲಿ ದಾಸರ ಪದ ಹಾಡಿ, ಬಹಳ ಜನ ನಿದ್ದೆ ಮಾಡ್ತಿದ್ರು ಅದಕ್ಕೆ ಹಾಡಿದೆ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ವಿಮಾನದ ಟಿಕೆಟ್‍ಗಿಂತ ಬಸ್‍ಗಳ ಟಿಕೆಟ್ ದರ ಜಾಸ್ತಿ ಇದೆ: ರಮೇಶ್ ಕುಮಾರ್

    VIDANAPARISHATH

    88 ಲಕ್ಷ ಜೀವರಾಶಿಗಳ ದಾಟಿ ಬಂದ ಈ ಶರೀರ, ತಾನಲ್ಲ ತನ್ನದಲ್ಲ ಎಂದು ದಾಸರ ಪದ ಭೋಜೇಗೌಡರು ಹಾಡುತ್ತಿದ್ದಂತೆ, ಬಿಜೆಪಿ ಸದಸ್ಯರಿಂದ ಒನ್ಸ್ ಮೋರ್ ಎಂಬ ಬೇಡಿಕೆ ಕೇಳಿಬಂತು. ಈ ವೇಳೆ ಮತ್ತೆ ರಾಗವಾಗಿ ಕೀರ್ತನೆ ಹಾಡಲು ಭೋಜೇಗೌಡರು ಆರಂಭಿಸಿದರು. ಈ ಸಂದರ್ಭ ಮತ್ತೆ ಶುರು ಮಾಡಬೇಡಿ ಎಂದು ಸಭಾಪತಿ ಹೊರಟ್ಟಿ ತಮಾಷೆ ಮಾಡಿದರು.

    BOOJEGOWDA 1

    ಮಂಗಳೂರು, ಕರಾವಳಿ, ಉಳ್ಳಾಲ ಸುರತ್ಕಲ್ ಭಾಗದಲ್ಲಿ ಅಸಮರ್ಪಕ ಒಳಚರಂಡಿಯಿಂದ ತೀವ್ರ ಸಮಸ್ಯೆ ಇದೆ ಎಂದು ತಮ್ಮ ಭಾಗದ ಸಮಸ್ಯೆಗಳನ್ನು ಪರಿಷತ್‍ನಲ್ಲಿ ಮಂಡಿಸಿದರು. ಇದಲ್ಲದೆ ಮಂಗಳೂರು, ಕರಾವಳಿ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕಾ ಪ್ರದೇಶಗಳಿವೆ ಇದರಿಂದ ಪರಿಸರ ನಾಶವಾಗುತ್ತಿದೆ. ಈ ಬಗ್ಗೆ ಮಾತನಾಡದೆ ಸುಮ್ಮನಿರುವ ಇವರೆಲ್ಲ ಪರಿಸರ ವಾದಿಗಳಲ್ಲ, ಪರಿಸರ ವ್ಯಾಧಿಗಳು. ನನ್ನ ಬಗ್ಗೆ ಏನು ಬೇಕಾದ್ರೂ ಬರೀರಿ, ಪರಿಸರ ವ್ಯಾಧಿಗಳಿಂದಾಗಿಯೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಪರಿಸರ ವಾದಿಗಳ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಬಸ್ಸಿನಲ್ಲಿ ‘ಗೀತ ಗೋವಿಂದಂ’ ಸೀನ್ – ನಿದ್ದೆಗೆ ಜಾರಿದ್ದ ಯುವತಿಗೆ ಮುತ್ತಿಟ್ಟ ಅಪರಿಚಿತ ಯುವಕ!

  • ರಾಜಕೀಯ ಗುರುಗಳ ಸಾವಿನಿಂದ ತುಂಬಾ ನೋವಾಗಿದೆ: ಬೆಳ್ಳಿಪ್ರಕಾಶ್

    ರಾಜಕೀಯ ಗುರುಗಳ ಸಾವಿನಿಂದ ತುಂಬಾ ನೋವಾಗಿದೆ: ಬೆಳ್ಳಿಪ್ರಕಾಶ್

    ಚಿಕ್ಕಮಗಳೂರು: ನನ್ನ ರಾಜಕೀಯ ಗುರುಗಳ ಸಾವಿನಿಂದ ನನಗೆ ತುಂಬಾ ನೋವಾಗಿದೆ ಎಂದು ಕಡೂರು ಶಾಸಕ ಬೆಳ್ಳಿಪ್ರಕಾಶ್ ಬೇಸರ ವ್ಯಕ್ತಪಡಿಸಿದ್ದಾರೆ.

    ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮೇಗೌಡರು ನನ್ನ ರಾಜಕೀಯ ಗುರುಗಳು. ಅವರ ಸಾವಿನಿಂದ ನನಗೆ ತುಂಬಾ ನೋವಾಗಿದೆ. 13 ವರ್ಷಗಳಿಂದ ಅವರ ಜೊತೆ ಒಡನಾಟವಿತ್ತು ಎಂದು ತಿಳಿಸಿದರು.

    CKM 1 1

    ರಾಜಕೀಯ ವಿಚಾರವಾಗಿ ಬೆಂಬಲಿಸುತ್ತಿದ್ದರು. ನನ್ನ ರಾಜಕೀಯಕ್ಕೆ ತರಲು ಪ್ರಯತ್ನ ಮಾಡಿದ್ರು. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ. ಇವರ ಸಾವಿನಿಂದ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಉಪಸಭಾಪತಿ ಎಸ್. ಎಲ್ ಧರ್ಮೇಗೌಡರ ರಾಜಕೀಯ ಪಯಣ ಹೀಗಿತ್ತು

    ಧರ್ಮೇಗೌಡರು ಮಧ್ಯರಾತ್ರಿ 12 ಗಂಟೆಯ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯಿಂದ ಧರ್ಮೇಗೌಡರ ದೇಹ ಛಿದ್ರಛಿದ್ರವಾಗಿದ್ದು, 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿದೆ. ಪರಿಷತ್ ನಲ್ಲಿ ನಡೆದ ಗಲಾಟೆಯಿಂದ ನೊಂದಿದ್ದಾರೆ ಎಂದು ಹೇಳಲಾಗಿದೆ. ಮನೆಯ ಆಸ್ತಿ, ಹಣಕಾಸು ವಿಚಾರವಾಗಿ ಡೆತ್ ನೋಟಿನಲ್ಲಿ ಬರೆದಿರುವ ಧರ್ಮೇಗೌಡರು ಪತ್ನಿ, ಮಗ ಹಾಗೂ ಮಗಳಲ್ಲಿ ಕ್ಷಮೆ ಕೇಳಿದ್ದಾರೆ. ಅಲ್ಲದೆ ಅರ್ಧಕ್ಕೆ ನಿಲ್ಲಿಸಿದ್ದ ಮನೆಯನ್ನು ಪೂರ್ಣಗೊಳಿಸುವಂತೆ ಡೆತ್‍ನೋಟ್ ನಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ರೈಲ್ವೇ ಟ್ರ್ಯಾಕ್ ಬಳಿ ಕಾರು ನಿಲ್ಲಿಸಲು ಹೇಳಿ ಡ್ರೈವರ್ ವಾಪಸ್ ಕಳಿಸಿದ್ರು ಧರ್ಮೇಗೌಡ!

    BELLIPRAKASH 1

    ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸ್ವಗ್ರಾಮ ಸರ್ಪನಹಳ್ಳಿಯಲ್ಲಿ ತಂದೆಯ ಸಮಾಧಿ ಪಕ್ಕದಲ್ಲೇ ಸಂಜೆ ಉಪಸಭಾಪತಿಗಳ ಅಂತ್ಯಕ್ರಿಯೆ ನಡೆಯಲಿದೆ. ಸದ್ಯ ತೋಟದ ಮನೆ ಆವರಣದಲ್ಲಿ ಅಂತಿಮದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಕುಟುಂಬದ ಸದಸ್ಯರು ತೋಟದ ಮನೆ ಆವರಣದಲ್ಲಿ ಎರಡು ಜೆಸಿಬಿಗಳಿಂದ ಸ್ಥಳ ಸಿದ್ಧತೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಮೃತದೇಹ ಸರಪನಹಳ್ಳಿಗೆ ಬರೋ ನಿರೀಕ್ಷೆ ಇದ್ದು, ಆ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕೆ ರೆಡಿ ಮಾಡಲಾಗುತ್ತಿದೆ.

    https://www.youtube.com/watch?v=jETdpSkvaGM&ab_channel=PublicTV%7C%E0%B2%AA%E0%B2%AC%E0%B3%8D%E0%B2%B2%E0%B2%BF%E0%B2%95%E0%B3%8D%E0%B2%9F%E0%B2%BF%E0%B2%B5%E0%B2%BF

  • ಉಪಸಭಾಪತಿ ಎಸ್. ಎಲ್ ಧರ್ಮೇಗೌಡರ ರಾಜಕೀಯ ಪಯಣ ಹೀಗಿತ್ತು

    ಉಪಸಭಾಪತಿ ಎಸ್. ಎಲ್ ಧರ್ಮೇಗೌಡರ ರಾಜಕೀಯ ಪಯಣ ಹೀಗಿತ್ತು

    ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ರೈಲಿಗೆ ತಲೆಕೊಡುವ ಮೂಲಕ ಆತ್ಮಹತ್ಮೆಗೆ ಶರಣಾಗಿದ್ದು, ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರ ನಿಧನಕ್ಕೆ ಇದೀಗ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ.

    ಹುಟ್ಟು ಹಾಗೂ ರಾಜಕೀಯ ಹಿನ್ನೆಲೆ
    ಎಸ್ ಎಲ್ ಧರ್ಮೆಗೌಡ ಅವರು ಮಾಜಿ ಶಾಸಕ ಲಕ್ಷ್ಮಯ್ಯ ಅವರ ಪುತ್ರ. ಧರ್ಮೆಗೌಡ ಅವರ ತಂದೆ ಲಕ್ಷ್ಮಯ್ಯ ಜನತಾ ಪರಿವಾರದ ಹಿರಿಯ ನಾಯಕರಾಗಿದ್ದರು. ಲಕ್ಷ್ಮಯ್ಯ 1983, 1985 ಹಾಗೂ 1994 ಹೀಗೆ ಒಟ್ಟು 3 ಬಾರಿ ಬೀರೂರಿನಿಂದ ಶಾಸಕರಾಗಿದ್ದರು.

    ವೈಯಕ್ತಿಕ ಜೀವನ:
    ಧರ್ಮೇಗೌಡ ಅವರಿಗೆ 65 ವರ್ಷವಾಗಿತ್ತು. ಇವರು ಪತ್ನಿ ಹೆಸರು ಮಮತಾ. ಈ ದಂಪತಿಗೆ ಮಗ ಸೋನಾಲ್, ಮಗಳು ಸಲೋನಿ ಇದ್ದಾರೆ. ರಾಜಕೀಯ ಮಾತ್ರವಲ್ಲದೇ ಧರ್ಮೇಗೌಡ ಇತ್ತೀಚೆಗೆ ಕೃಷಿ ಬಗ್ಗೆ ಹೆಚ್ಚು ಆಕರ್ಷಿತರಾಗಿದ್ದರು. ಕೃಷಿಯ ಕುರಿತಾಗಿ ಹೆಚ್ಚಿನ ಗಮನ ಮತ್ತು ಆಸಕ್ತಿಯನ್ನು ತೋರಿಸುತ್ತಿದ್ದರು.

    SL DHARMEGOWDA

    ರಾಜಕೀಯ ಬದುಕು:
    ಧರ್ಮೇಗೌಡ ಅವರು ಬಿಳಕಲ್ ಹಳ್ಳಿ ಗ್ರಾಮಪಂಚಾಯತ್ ಸದಸ್ಯರಾಗಿ ರಾಜಕೀಯ ಬದುಕನ್ನು ಆರಂಭಿಸಿದ್ದರು. ನಂತರ ಚಿಕ್ಕಮಗಳೂರು ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಆಯ್ಕೆಯಾದರು. ಚಿಕ್ಕಮಗಳೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿಯೂ ಧರ್ಮೇಗೌಡ ಅವರು ಸೇವೆ ಸಲ್ಲಿಸಿದ್ದಾರೆ. ಉದ್ದೇಬೋರನಹಳ್ಳಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಬಿಳೇಕಲ್ಲಹಳ್ಳಿ ಎಂಪಿಸಿಎಸ್ ಅಧ್ಯಕ್ಷರಾಗಿದ್ದರು. ಹಾಸನ ಹಾಲು ಒಕ್ಕೂಟ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾಗಿದ್ದರು.

    ಚಿಕ್ಕಮಗಳೂರಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ, ರಾಜ್ಯ ವಿಮಾ ಸಹಕಾರ ಸಂಘದ ನಿರ್ದೇಶಕ, ದೆಹಲಿಯ ಕ್ರಿಬ್ಕೋ ಸಂಸ್ಥೆಯ ನಿರ್ದೇಶಕ, ನ್ಯಾಫೆಡ್ ಸಂಸ್ಥೆ ನಿರ್ದೇಶಕ, ಇಂಡಿಯನ್ ಪೋಟಾಸ್ ಲಿಮಿಟೆಡ್ ನಿರ್ದೇಶಕ, ತಾಲೂಕು ಪಂಚಾಯತ್ ಸದಸ್ಯ, ಜಿಲ್ಲಾಪಂಚಾಯತ್ 2 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬೀರೂರು ವಿಧಾನಸಭಾ ಕ್ಷೇತ್ರದ ಸದಸ್ಯರಾಗಿದ್ದರು ಹಾಗೂ ಒಂದು ಬಾರಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

    CKM 5

    ದೇವೆಗೌಡ ಅವರ ಕುಟುಂಬದ ಒಡನಾಟ:
    ಧರ್ಮೇಗೌಡ ಅವರು ದೇವೇಗೌಡರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೆ ಆಪ್ತ ಸ್ನೇಹಿತರಾಗಿದ್ದರು. ಅದೇ ಕಾರಣಕ್ಕೆ ಅವರನ್ನ ವಿಧಾನಪರಿಷತ್ ಸದಸ್ಯರನ್ನಾಗಿ ಕುಮಾರಸ್ವಾಮಿ ಆಯ್ಕೆ ಮಾಡಿದ್ದರು. ಕುಮಾರಸ್ವಾಮಿ ಜೊತೆಗಿನ ಸ್ನೇಹವೇ ಧರ್ಮೆಗೌಡ ಅವರಿಗೆ ಉಪ ಸಭಾಪತಿ ಸ್ಥಾನವು ಒಲಿಯುವಂತೆ ಮಾಡಿತ್ತು.

    ಮೈತ್ರಿ ಸರ್ಕಾರದಲ್ಲಿ ಒಲಿದಿದ್ದ ಉಪಸಭಾಪತಿ ಸ್ಥಾನ:
    ಮೊದಲು ಸಭಾಪತಿಗೆ ದೇವೇಗೌಡರು ಮತ್ತು ಸಿದ್ದರಾಮಯ್ಯ ಪಟ್ಟು ಹಿಡಿಯುತ್ತಾರೆ. ಇಬ್ಬರ ಹಠ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿತ್ತದೆ. ಸಭಾಪತಿ ಸ್ಥಾನಕ್ಕೆ ಇಬ್ಬರು ನಾಯಕರು ಸೂಚಿಸಿದ ಹೆಸರುಗಳನ್ನ ಹೈಕಮಾಂಡ್ ತಿರಸ್ಕರಿಸುತ್ತಾರೆ. ಆಗ ಇಬ್ಬರ ಹೆಸರು ಬೇಡ, ಕಾಂಗ್ರೆಸ್ಸಿಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟರೆ ಹೈಕಮಾಂಡ್ ಸೂಚಿಸಿದ ವ್ಯಕ್ತಿ ಸಭಾಪತಿ ಆಗ್ತಾರೆ. ಜೆಡಿಎಸ್ ಗೆ ಉಪಸಭಾಪತಿ ಎಂದು ತೀರ್ಮಾನದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಇನ್ನೊಂದು ದಾಳ ಉರುಳಿಸ್ತಾರೆ. ಆಗ ಆಪ್ತ ಸ್ನೇಹಿತ ಧರ್ಮೇಗೌಡರ ಹೆಸರನ್ನು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪಿಸ್ತಾರೆ. ಹೀಗಾಗಿ ಅಂತಿಮವಾಗಿ ಹೆಚ್ ಡಿಕೆ ಹೇಳಿದ ಧರ್ಮೇಗೌಡರೇ ಉಪಸಭಾಪತಿ ಆಗಿ ನೇಮಕವಾಗುತ್ತಾರೆ.

    DHARMEGOWDA 1

    ಪರಿಷತ್ ನಲ್ಲಿ ನಡೆದ ಗಲಾಟೆ :
    ಡಿಸೆಂಬರ್ 16 ರಂದು ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಧರ್ಮೇಗೌಡ ಬೇಸತ್ತಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಪರಿಷತ್ ಗಲಾಟೆ ಬಳಿಕ ಸಭಾಪತಿ ಮೇಲೆ, ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ನಡೆ ಎಲ್ಲರ ಗಮನ ಸೆಳೆದಿತ್ತು. ಆದ್ರೆ ಉಪಸಭಾಪತಿ ಧರ್ಮೇಗೌಡ ಒಬ್ಬಂಟಿಯಾಗಿದ್ದರು. ಅಂದೇ ಮಾನಸಿಕವಾಗಿ ಧರ್ಮೇಗೌಡ ಕುಸಿದಿದ್ದರು. ಉಪಸಭಾಪತಿ ಗೌಜು ಗದ್ದಲದಲ್ಲಿ ಧರ್ಮೇಗೌಡರ ಮಾನಸಿಕ ತುಮುಲಗಳನ್ನು ಯಾರೂ ಗಮನಿಸಲಿಲ್ಲ.

    ಪರಿಷತ್ ಕಲಾಪದ ಅಂದು ನಡೆದಿದ್ದು:
    ವಿಶೇಷ ಅಧಿವೇಶನ ವಿಧಾನಮಂಡಲದ ಇತಿಹಾಸದ ಪುಟಗಳಲ್ಲಿ ಕರಾಳ ಅಧ್ಯಾಯವಾಗಿತ್ತು. ಕಲಾಪದ ಬೆಲ್ ಮುಗಿಯುವ ಮುನ್ನವೇ ಪುಂಡರಂತೆ ಪರಸ್ಪರ ನೂಕಾಟ, ಕೂಗಾಟ, ತಳ್ಳಾಟ, ಎಳೆದಾಟ ಸದಸ್ಯರು ಶುರು ಮಾಡಿದ್ದರು. ಬೆಲ್ ಮುಗಿಯುವ ಮುನ್ನವೇ ಉಪ ಸಭಾಪತಿ ಪೀಠದಲ್ಲಿ ಧರ್ಮೇಗೌಡ ಕುಳಿತಿದ್ದರು. ಉಪಸಭಾಪತಿಯವ್ರನ್ನು ಕೈ ಸದಸ್ಯರು ದರದರನೇ ಎಳೆದು ಹಾಕಲು ಮುಂದಾಗಿದ್ದರು. ಇದನ್ನು ತಡೆದು ಉಪ ಸಭಾಪತಿ ಅವರನ್ನು ಖುರ್ಚಿಯಲ್ಲೇ ಕೂತಿರುವಂತೆ ನೋಡಿಕೊಳ್ಳಲು ಬಿಜೆಪಿ-ಜೆಡಿಎಸ್ ಸದಸ್ಯರು ಕಸರತ್ತು ನಡೆಸಿದ್ದರು. ಈ ವೇಳೆ ಸದಸ್ಯರ ನಡುವೆ ಜಂಗಿ ಕುಸ್ತಿ ಪ್ರಾರಂಭವಾಗಿತ್ತು.

    CKM 5

    ಆತ್ಮಹತ್ಯೆಯ ಸುತ್ತ ಅನುಮಾನ:
    ಕಳೆದ 25 ವರ್ಷದಿಂದ ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸಿದ್ದ ಧರ್ಮೇಗೌಡ, ಚಿಕ್ಕಮಗಳೂರು ಸಹಕಾರಿ ಧುರೀಣ ರಲ್ಲಿ ಪ್ರಮುಖರೆನ್ನಿಸಿಕೊಂಡಿದ್ದವರು ಇಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಸಭಾಪತಿ ಆತ್ಮಹತ್ಯೆ ಸುತ್ತ ಅನುಮಾನದ ಆವರಿಸಿದೆ. ರಾಜಕೀಯ ಕಾರಣನಾ? ವೈಯಕ್ತಿಕ ಕಾರಣವಾ? ಮೊನ್ನೆ ಪರಿಷತ್ ಗಲಾಟೆ ವೇಳೆಯೂ ಮಾನಸಿಕವಾಗಿ ಕುಸಿದಿದ್ದ ಧರ್ಮೇಗೌಡರು ಯಾರ ಮೇಲೂ ದೂರದೇ ಮೌನಕ್ಕೆ ಶರಣಾಗಿದ್ದರು. ಪರಿಷತ್ ಒಳಗೆ ಗಲಾಟೆ ಆದ ಬಳಿಕ ರಾಜಕೀಯ ಕಿತ್ತಾಟದ ಬಗ್ಗೆ ಅಸಮಾಧಾನಗೊಂಡಿದ್ದರು. ಧರ್ಮೇಗೌಡ ಅವರು 2004 ರಲ್ಲಿ ಬೀರೂರಿನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ವಿಂಗಡನೆ ನಂತರ ನೀರೂರು ಕ್ಷೇತ್ರ ಇಲ್ಲವಾದ ನಂತರ ಚುನಾವಣಾ ರಾಜಕಾರಣದಿಂದ ದೂರವಾಗಿದ್ದರು. ಈ ಬಾರಿ ಡಿಸಿಸಿ ಬ್ಯಾಂಕ್ ಚುನಾವಣೆಯ ಹಿಡಿತ ಕಳೆದುಕೊಂಡ ನಂತರ ಮಾನಸಿಕ ಖಿನ್ನತೆ ಗೆ ಒಳಗಾಗಿದ್ದರು. ಡಿಸಿಸಿ ಬ್ಯಾಂಕ್ ಚುನಾವಣೆ ಸೋಲಿನ ನಂತರ 1 ದಿನ ಒಬ್ಬರೇ ತೋಟದ ಮನೆಯಲ್ಲಿ ಕಳೆದಿದ್ದರು.

  • ರೈಲ್ವೇ ಟ್ರ್ಯಾಕ್ ಬಳಿ ಕಾರು ನಿಲ್ಲಿಸಲು ಹೇಳಿ ಡ್ರೈವರ್ ವಾಪಸ್ ಕಳಿಸಿದ್ರು ಧರ್ಮೇಗೌಡ!

    ರೈಲ್ವೇ ಟ್ರ್ಯಾಕ್ ಬಳಿ ಕಾರು ನಿಲ್ಲಿಸಲು ಹೇಳಿ ಡ್ರೈವರ್ ವಾಪಸ್ ಕಳಿಸಿದ್ರು ಧರ್ಮೇಗೌಡ!

    – ಆಸ್ತಿ ವಿಚಾರ, ಪರಿಷತ್‍ನಲ್ಲಿ ನಡೆದಿದ್ದ ಗಲಾಟೆಯಿಂದ ಬೇಸರ
    – ಡೆತ್‍ನೋಟ್ ನಲ್ಲಿ ಪತ್ನಿ, ಮಗ, ಮಗಳಲ್ಲಿ ಕ್ಷಮೆ

    ಚಿಕ್ಕಮಗಳೂರು: ರೈಲಿಗೆ ತಲೆಕೊಟ್ಟು ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರ ಹಾಗೂ ಇತ್ತೀಚೆಗೆ ಪರಿಷತ್ ನಲ್ಲಿ ನಡೆದಿದ್ದ ಗಲಾಟೆಯಿಂದ ಧರ್ಮೇಗೌಡ ನೊಂದಿದ್ದರು ಎಂದು ಹೇಳಳಾಗುತ್ತಿದೆ. ಈ ಎಲ್ಲಾ ವಿಚಾರಗಳನ್ನು ಅವರು ತಮ್ಮ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

    DHARMEGOWDA 3

    ಎಸ್.ಎಲ್ ಧರ್ಮೇಗೌಡ ಅವರು ನಿನ್ನೆ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಕಾರಿನಲ್ಲಿ ಬಂದಿದ್ದ ಧರ್ಮೇಗೌಡ, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನ ನಿಲ್ಲಿಸಲು ಡ್ರೈವರಿಗೆ ಸೂಚನೆ ನೀಡಿದ್ದಾರೆ.

    CKM 5

    ಇತ್ತ ರೈಲ್ವೆ ಹಳಿಯತ್ತ ಬರುವಾಗ ಹಳ್ಳಿಗರನ್ನ ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು. ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

    DHARMEGOWDA 2

    ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಂದ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದ್ದು, ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿದೆ. ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ, ಹಣಕಾಸು ವಿಚಾರ ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದಾರೆ.

    CKM CT RAVI

  • ‘ಚಿಣಿಮಿಣಿ’ ಉಲ್ಲೇಖಿಸಿದ ನಾರಾಯಣಸ್ವಾಮಿ – ನಗೆಗಡಲಲ್ಲಿ ತೇಲಿದ ಸದಸ್ಯರು

    ‘ಚಿಣಿಮಿಣಿ’ ಉಲ್ಲೇಖಿಸಿದ ನಾರಾಯಣಸ್ವಾಮಿ – ನಗೆಗಡಲಲ್ಲಿ ತೇಲಿದ ಸದಸ್ಯರು

    ಬೆಂಗಳೂರು: ಒಂದೊಂದು ಸಾರಿ ಒಂದೊಂದು ಪದಗಳು ಸಿಕ್ಕಾಪಟ್ಟೆ ಹೆಸರು ಮಾಡಿ ಬಿಡುತ್ತವೆ. ಆ ಹೆಸರು ಮಾಡಿದ ಪದಗಳು ಹೊಸ ಹೊಸ ಪದಗಳ ಸೃಷ್ಟಿಗೂ ಕಾರಣವಾಗಿ ಬಿಡುತ್ತವೆ. ಇತ್ತೀಚೆಗೆ ಫೇಮಸ್ ಆಗಿದ್ದ ಪದದಿಂದ ಈಗ ಹೊಸ ಪದವೊಂದು ಸೃಷ್ಟಿಯಾಗಿ ಪ್ರಚಾರ ಆಗ್ತಿದೆ. ಈ ಹೊಸ ಪದ ಸೃಷ್ಟಿಯಾಗಿದ್ದು, ವಿಧಾನ ಪರಿಷತ್ ನ ಕಲಾಪದಲ್ಲಿ.

    ಕಲಾಪದಲ್ಲಿ ಮಂಗಳೂರು ಬಾಂಬ್ ಪ್ರಕರಣವನ್ನು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ಪ್ರಸ್ತಾಪ ಮಾಡಿದ್ರು. ವಿಮಾನ ನಿಲ್ದಾಣದಲ್ಲಿ ಇರಿಸಲಾಗಿದ್ದು ಬಾಂಬ್ ಮಾದರಿಯ ವಸ್ತುವಿನಲ್ಲಿ ‘ಚಿಣಿಮಿಣಿ’ ಪದಾರ್ಥ ಇತ್ತು ಎಂದ ನಾರಾಯಣಸ್ವಾಮಿ ಚರ್ಚೆ ವೇಳೆ ಹೇಳಿದ್ರು. ಈ ಪದ ಕೇಳಿದ ಕೂಡಲೇ ಸದನ ನಗೆಗಡಲಲ್ಲಿ ತೇಲಿತು.

    Mangaluru Airport Live Bomb 1 copy

    ಅಷ್ಟಕ್ಕೂ ಅ ಹೊಸ ಪದ ಸೃಷ್ಟಿ ಆಗಲು ಕೋರ್ಟ್ ಆದೇಶವೇ ಕಾರಣ. ಭಾರೀ ಟ್ರೋಲ್ ಆಗುತ್ತಿದ್ದ ಆ ಪದವನ್ನು ಬಳಕೆ ಮಾಡಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

    ತಡೆಯಾಜ್ಞೆಯ ಹಿನ್ನೆಲೆಯಲ್ಲಿ ಸದನದಲ್ಲೂ ಕೂಡಾ ಆ ಪದವನ್ನು ಬಳಸಲು ನಾರಾಯಣಸ್ವಾಮಿ ಹಿಂದೇಟು ಹಾಕಿದರು. ಆ ಪದಕ್ಕೆ ಬದಲಾಗಿ ಚಿಣಿಮಿಣಿ ರೀತಿಯ ಪದಾರ್ಥ ಇತ್ತು ಅಂತ ಬಳಕೆ ಮಾಡಿದರು.