Tag: ಶಿವರಾಜ್ ಪಾಟೀಲ್

  • ವಿಜಯೇಂದ್ರ‌ ಮುಂದಿನ‌ ಮುಖ್ಯಮಂತ್ರಿ ಎಂದ ಶಾಸಕ ಶಿವರಾಜ್ ಪಾಟೀಲ್

    ವಿಜಯೇಂದ್ರ‌ ಮುಂದಿನ‌ ಮುಖ್ಯಮಂತ್ರಿ ಎಂದ ಶಾಸಕ ಶಿವರಾಜ್ ಪಾಟೀಲ್

    ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ರಾಯಚೂರು ನಗರ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ್ ಪಾಟೀಲ್ (Shivraj Patil) ಹಾಡಿಹೊಗಳಿದ ವಿಡಿಯೋ ವೈರಲ್ ಆಗಿದೆ.

    ಲೋಕಸಭಾ ಚುನಾವಣೆ (MP Elections) ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ವೇಳೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೊಗಳಿದ್ದ ಡಾ.ಶಿವರಾಜ್ ಪಾಟೀಲ್ ಹೇಳಿಕೆ ಈಗ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    Shivaraj Patil

    ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಬೇಕು ಎಂಬ ಕಾರಣಕ್ಕೆ ಅಶೋಕ ಚಕ್ರವರ್ತಿಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ವಿಜಯೇಂದ್ರ ತಿರುಗಾಡುತ್ತಿದ್ದಾರೆ. ಈ ರಾಜ್ಯ ಕಂಡಂತ ಅತ್ಯಂತ ಕಿರಿಯ, ಮುತ್ಸದಿ ರಾಜಕಾರಣಿ ವಿಜಯೇಂದ್ರ ಎಂದು ವೇದಿಕೆ ಮೇಲೆ ಶಾಸಕ ಶಿವರಾಜ್ ಪಾಟೀಲ್ ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ.. ಭಕ್ತರಿಗೆ ಈಗಲೇ ಪ್ರವೇಶವಿಲ್ಲ: ವಕೀಲ ಸೋಹನ್‌ ಲಾಲ್‌ ಆರ್ಯ

  • ನಾನೇ ಮೋದಿ ನಾನೇ ದೇವ್ರು, ಮೋದಿ ಪಾದಿ ಯಾವ್ದೂ ಇಲ್ಲ – ಶಿವರಾಜ್ ಪಾಟೀಲ್ ಆಡಿಯೊ ವೈರಲ್

    ನಾನೇ ಮೋದಿ ನಾನೇ ದೇವ್ರು, ಮೋದಿ ಪಾದಿ ಯಾವ್ದೂ ಇಲ್ಲ – ಶಿವರಾಜ್ ಪಾಟೀಲ್ ಆಡಿಯೊ ವೈರಲ್

    ರಾಯಚೂರು: ಮೋದಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿರುವ ರಾಯಚೂರು (Raichur) ನಗರ ಬಿಜೆಪಿ ಶಾಸಕ (BJP MLA) ಡಾ. ಶಿವರಾಜ್ ಪಾಟೀಲ್ (Shivaraj Patil) ಆಡಿಯೋ (Audio) ಈಗ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಶಾಸಕರು ಮತ್ತೊಮ್ಮೆ ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಲ್ಲಿದ್ದಾರೆ.

    ಈಗ ಪ್ರಧಾನಿ ಮೋದಿ, ಶ್ರೀರಾಮುಲು ಬಗ್ಗೆ ಆಡಿರುವ ಮಾತುಗಳು ವೈರಲ್ ಆಗಿವೆ. ನಾನೇ ಮೋದಿ ನಾನೇ ದೇವರು. ಯಾವ ಮೋದಿ ಇಲ್ಲಾ ಪಾದಿ ಇಲ್ಲ. ನಾನು ಯಾರನ್ನೂ ಕೇರ್ ಮಾಡಲ್ಲ. ಸಿಂಗಲ್ ಮ್ಯಾನ್ ಆರ್ಮಿ ನಾನು. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನೂ ಕೂಡ ನಾನು ಕೇರ್ ಮಾಡಲ್ಲ ಎಂದಿರುವ ಶಿವರಾಜ್ ಪಾಟೀಲ್ ಸಂಭಾಷಣೆ ಆಡಿಯೋ ವೈರಲ್ ಆಗಿದೆ. ಏಮ್ಸ್ ಹೋರಾಟಗಾರ ಅಶೋಕ್ ಕುಮಾರ್ ಜೈನ್ ಜೊತೆ ಮಾತನಾಡಿದ್ದ 3 ನಿಮಿಷ 19 ಸೆಕೆಂಡುಗಳ ಆಡಿಯೋ ನಾಲ್ಕೂವರೆ ವರ್ಷದ ಬಳಿಕ ಈಗ ವೈರಲ್ ಆಗಿದೆ.

    Shivaraj Patil 1

    ಸೋತರೂ ಚಿಂತೆಯಿಲ್ಲಾ, ಗೆದ್ದರೂ ಚಿಂತೆಯಿಲ್ಲಾ, ಎದ್ದರೂ ಚಿಂತೆಯಿಲ್ಲಾ, ಮಲ್ಕೊಂಡರೂ ಚಿಂತೆಯಿಲ್ಲಾ ನನಗೆ. ಚಿಂತೆಯಿಲ್ಲದಿರುವ ಮನುಷ್ಯ ನಾನು. ನಾನೇ ದೇವರು ಎಲ್ಲರೂ ನನ್ನ ಕಾಲಿಗೆ ನಮಸ್ಕಾರ ಮಾಡಬೇಕು. ನಾನು ಯಾರನ್ನೂ ಕೇರ್ ಮಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು

    ನನಗೆ ಯಾವ ರೈಟ್ ಇಲ್ಲಾ ಲೆಫ್ಟ್ ಇಲ್ಲಾ. ಸಿಂಗಲ್ ಮ್ಯಾನ್ ಆರ್ಮಿ ನಾನು. ನನ್ನ ಕೈ, ನನ್ನ ಕಾಲು, ಯಾವ ಮೋದಿ ಇಲ್ಲಾ, ಅವನ್ಯಾರು ಟ್ರಂಪ್ ಇಲ್ಲಾ. ಯಾವ ಬದನೆಕಾಯಿ ಸಹ ಕೇಳಂಗಿಲ್ಲ. ನಾನೇ ದೇವರು. ನಾನೇ ಎಲ್ಲಾ. ನಾನಿದ್ರೆ ಜಗತ್ತು. ಸೋಮಶೇಖರ್ ರೆಡ್ಡಿ, ಶ್ರೀರಾಮುಲು ಬಗ್ಗೆ ನನ್ನ ಮುಂದೆ ಹೇಳಿದ್ರೆ ಹೇಗೆ ಎಂದು ಮಾತನಾಡಿದ್ದಾರೆ.

    Shivaraj Patil 2

    ಆಡಿಯೋ ವೈರಲ್ ಆಗಿರುವುದು ಬಿಜೆಪಿ ಪಾಳಯದಲ್ಲಿ ಇರುಸುಮುರುಸಿಗೆ ಕಾರಣವಾಗಿದ್ದರೆ, ಸಾರ್ವಜನಿಕ ವಲಯದಲ್ಲಿ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ – ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

  • ಕುರಾನ್ ಮಾತ್ರವಲ್ಲ, ಭಗವದ್ಗೀತೆ ಕೂಡಾ ಜಿಹಾದ್ ಕಲಿಸುತ್ತದೆ: ಶಿವರಾಜ್ ಪಾಟೀಲ್

    ಕುರಾನ್ ಮಾತ್ರವಲ್ಲ, ಭಗವದ್ಗೀತೆ ಕೂಡಾ ಜಿಹಾದ್ ಕಲಿಸುತ್ತದೆ: ಶಿವರಾಜ್ ಪಾಟೀಲ್

    ನವದೆಹಲಿ: ಜಿಹಾದ್ (Jihad) ಪರಿಕಲ್ಪನೆ ಕೇವಲ ಇಸ್ಲಾಂ (Islam) ಧರ್ಮದಲ್ಲಿ ಮಾತ್ರವಲ್ಲ, ಭಗವದ್ಗೀತೆ (Bhagavad Gita) ಹಾಗೂ ಕ್ರಿಶ್ಚಿಯನ್ ಧರ್ಮದಲ್ಲೂ (Christianity) ಇದೆ. ಶ್ರೀಕೃಷ್ಣನೂ (Lord Krishna) ಅರ್ಜುನನಿಗೆ (Arjun) ಜಿಹಾದ್ ಬೋಧಿಸಿದ್ದಾನೆ ಎಂದು ಕಾಂಗ್ರೆಸ್‌ನ (Congress) ಹಿರಿಯ ನಾಯಕ ಶಿವರಾಜ್ ಪಾಟೀಲ್ (Shivraj Patil) ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮೊಹ್ಸಿನಾ ಕಿದ್ವಾಯಿ ಅವರ ಜೀವನಚರಿತ್ರೆ ಬಿಡುಗಡೆ ಸಮಾರಂಭದ ವೇಳೆ ಮಾತನಾಡಿದ ಶಿವರಾಜ್ ಪಾಟೀಲ್, ಸರಿಯಾದ ಉದ್ದೇಶ ಹೊಂದಿದ್ದರೂ, ಸರಿಯಾದ ಕೆಲಸ ಮಾಡುತ್ತಿದ್ದರೂ ಜನರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ. ಈ ವೇಳೆ ಜಿಹಾದ್ ಪರಿಕಲ್ಪನೆ ಹುಟ್ಟಿಕೊಳ್ಳುತ್ತದೆ. ಜಿಹಾದ್ ಇಸ್ಲಾಂ ಧರ್ಮದಲ್ಲಿ ಇದೆ ಎಂಬುದಾಗಿ ಭಾರೀ ಚರ್ಚೆಯಾಗುತ್ತಿದೆ. ಆದರೆ ಕುರಾನ್‌ನಲ್ಲಿ ಮಾತ್ರವಲ್ಲ, ಮಹಾಭಾರತದ ಗೀತೆಯಲ್ಲೂ ಇದೆ, ಕ್ರಿಶ್ಚಿಯನ್ ಧರ್ಮದಲ್ಲೂ ಇದೆ ಎಂದು ಹೇಳಿದ್ದಾರೆ.

    ಜನರಿಗೆ ಎಲ್ಲವನ್ನೂ ವಿವರಿಸಿದ ಬಳಿಕವೂ ಅರ್ಥವಾಗುವುದಿಲ್ಲ. ಬದಲಿಗೆ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಬರುತ್ತಾರೆ. ಈ ವೇಳೆ ನಿಮ್ಮಿಂದ ಓಡಿ ಹೋಗಲು ಸಾಧ್ಯವಿಲ್ಲ. ಇದನ್ನು ಜಿಹಾದ್ ಎಂದು ಕರೆಯಲು ಸಾಧ್ಯವಿಲ್ಲ. ಇದನ್ನು ತಪ್ಪು ಎಂದೂ ಹೇಳಲೂ ಸಾಧ್ಯವಿಲ್ಲ. ಇದನ್ನೇ ನಾವು ಅರ್ಥ ಮಾಡಿಕೊಳ್ಳಬೇಕು. ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಜನರಿಗೆ ಅರ್ಥ ಮಾಡಿಸುವಂತಹ ಪರಿಕಲ್ಪನೆ ಇರಬಾರದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – 4 ತಿಂಗಳು ಹಿಂದೆ ಬಿದ್ದ ನಮ್ಮ ಮೆಟ್ರೋ ಕಾಮಗಾರಿ

    Shivraj Patil 1

    ಪಾಟೀಲ್ ಹೇಳಿಕೆಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ, ಎಎಪಿಯಲ್ಲಿ ಗೋಪಾಲ್ ಇಟಾಲಿಯಾ, ಹಾಗೂ ರಾಜೇಂದ್ರ ಪಾಲ್ ಬಳಿಕ ಇದೀಗ ಕಾಂಗ್ರೆಸ್‌ನ ಶಿವರಾಜ್ ಪಾಟೀಲ್ ಶ್ರೀಕೃಷ್ಣ ಅರ್ಜುನನಿಗೆ ಜಿಹಾದ್ ಪ್ರವಚನ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರು ಈ ಹೇಳಿಕೆ ನೀಡುವ ಮೂಲಕ ಹಿಂದೂ ದ್ವೇಷ ಹಾಗೂ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪವಾಗಲು

    Live Tv
    [brid partner=56869869 player=32851 video=960834 autoplay=true]

  • ಬಿರುಗಾಳಿ ಎಬ್ಬಿಸಿದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ: ತೆಲಂಗಾಣದಲ್ಲಿ ಟಿಆರ್‌ಎಸ್ ಭರ್ಜರಿ ಪ್ರಚಾರ

    ಬಿರುಗಾಳಿ ಎಬ್ಬಿಸಿದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಹೇಳಿಕೆ: ತೆಲಂಗಾಣದಲ್ಲಿ ಟಿಆರ್‌ಎಸ್ ಭರ್ಜರಿ ಪ್ರಚಾರ

    ರಾಯಚೂರು: ತೆಲಂಗಾಣದ ನಾರಾಯಣಪೇಟೆ ಕ್ಷೇತ್ರದ ಟಿಆರ್‌ಎಸ್ ಪಕ್ಷದ ಶಾಸಕ ಎಸ್‌ ಆರ್‌ ರೆಡ್ಡಿ ಹಾಗೂ ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಮಧ್ಯೆ ಜಟಾಪಟಿ ಪೈಪೋಟಿ ಶುರುವಾಗಿದೆ. ರಾಜ್ಯವಾಗಲಿ, ಕ್ಷೇತ್ರವಾಗಲಿ, ಪಕ್ಷವಾಗಲಿ ಒಂದಕ್ಕೊಂದು ಸಂಬಂಧವೇ ಇಲ್ಲದಿದ್ದರೂ ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನ ಮಾಡುತ್ತಾ, ಒಬ್ಬರನ್ನೊಬ್ಬರು ಸೋಲಿಸಲು ಸಜ್ಜಾಗಿದ್ದಾರೆ.

    ರಾಯಚೂರು ನಗರದಲ್ಲಿ ಪ್ರತಿಷ್ಠಿತ ನವೋದಯ ಮೆಡಿಕಲ್ ಕಾಲೇಜು ನಡೆಸುತ್ತಿರುವ ಎಸ್‌ ಆರ್‌ ರೆಡ್ಡಿ ತೆಲಂಗಾಣದ ನಾರಾಯಣಪೇಟೆ ಕ್ಷೇತ್ರದ ಟಿಆರ್‌ಎಸ್ ಪಕ್ಷದ ಶಾಸಕ. ಡಾ.ಶಿವರಾಜ್ ಪಾಟೀಲ್ ಮೂಲತಃ ಕಾರ್ಡಿಯಾಲಾಜಿಸ್ಟ್ ಆಗಿದ್ದವರು ಈಗ ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ.‌ ಈ ಇಬ್ಬರು ಶಾಸಕರಿಗೆ ರಾಜಕೀಯ ಕಾರಣಕ್ಕೆ ಯಾವುದೇ ಪೈಪೋಟಿಯಿಲ್ಲ. ಆದರೆ ಒಬ್ಬರನ್ನೊಬ್ಬರು ಸೋಲಿಸಲು ಸಜ್ಜಾಗಿದ್ದಾರೆ. ಇದಕ್ಕೆ ಕಾರಣ ಕೇಳಿದರೆ ನಿಮಗೂ ಅಚ್ಚರಿಯಾಗಬಹುದು. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್‌ ವಕ್ತಾರ

    bjp flag

    ಈ ಹಿಂದೆ ಪಶುಸಂಗೋಪ‌ನಾ ಸಚಿವ ಪ್ರಭುಚೌಹಾಣ್ ರಾಯಚೂರಿಗೆ ಬಂದಾಗ ಸಚಿವರ ಗಮನ ಸೆಳೆಯಲು ಶಾಸಕ ಶಿವರಾಜ್ ಪಾಟೀಲ್ ನಮ್ಮ ಅಭಿವೃದ್ಧಿಯನ್ನ ಕಡೆಗಣಿಸುವುದಾದರೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಅಂತ ಹೇಳಿದ್ದರು. ಈ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದೆ ತಡ. ತೆಲಂಗಾಣ ಸರ್ಕಾರ ಬಿಜೆಪಿ ವಿರುದ್ದ ಧ್ವನಿ ಎತ್ತಲು ಈ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡಿತು. ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪಾದಯಾತ್ರೆಗೆ‌ ಟಾಂಗ್ ಕೊಡಲು ತೆಲಂಗಾಣ ಸಚಿವ ಕೆ ಟಿ ರಾಮ್ ರಾವ್ ಶಿವರಾಜ್ ಪಾಟೀಲ್ ಹೇಳಿಕೆಯನ್ನೇ ಬಳಸಿಕೊಂಡರು. ಹೀಗಾಗಿ ಮುಜುಗರಕ್ಕೊಳಗಾದ ಬಿಜೆಪಿ ಹೈಕಮಾಂಡ್ ಶಿವರಾಜ್ ಪಾಟೀಲ್ ಅವರನ್ನ ತರಾಟೆಗೆ ತೆಗೆದುಕೊಂಡು, ತೆಲಂಗಾಣಕ್ಕೆ ಹೋಗಿ ಡ್ಯಾಮೇಜ್ ತುಂಬಲು ತಾಕೀತು ಮಾಡಿತ್ತು. ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು

    trs flag

    ತೆಲಂಗಾಣದಲ್ಲಿ ಭಾಷಣ ಮಾಡಿದ ಶಿವರಾಜ್ ಪಾಟೀಲ್ ಎಸ್‌ಆರ್‌ ರೆಡ್ಡಿ ವಿರುದ್ದ ಹರಿಹಾಯ್ದು ಮುಂದಿನ ಚುನಾವಣೆಯಲ್ಲಿ ಮನೆಗೆ ಕಳುಹಿಸಲು ಮನೆಮನೆಗೆ ತೆರಳುತ್ತೇವೆ ಅಂತ ಆಕ್ರೋಶ ವ್ಯಕ್ತಪಡಿಸಿ ಬಂದಿದ್ದರು. ಶಿವರಾಜ್ ಪಾಟೀಲ್ ಭಾಷಣದಿಂದ ಆಕ್ರೋಶಗೊಂಡಿರುವ ಎಸ್‌ಆರ್‌ ರೆಡ್ಡಿ ಈಗ ಶಿವರಾಜ್ ಪಾಟೀಲ್‌ ವಿರುದ್ದ ಸೇಡಿಗೆ ಮುಂದಾಗಿದ್ದಾರೆ. ತೆಲಂಗಾಣದಲ್ಲಿ ರಾಯಚೂರು ಅಭಿವೃದ್ಧಿ ಬಗ್ಗೆ ಸುಳ್ಳುಗಳ ಮಳೆ ಸುರಿಸಿದ್ದಾರೆ. ನನ್ನ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಿದ್ದಾರೆ, ನಾನು ಸಮ್ಮನಿರಲ್ಲ ಅಂತ ಎಸ್ ಆರ್ ರೆಡ್ಡಿ ಗುಡುಗಿದ್ದಾರೆ.

    ಒಟ್ಟಿನಲ್ಲಿ ಶಾಸಕ ಶಿವರಾಜ್ ಪಾಟೀಲ್ ಆಡಿದ ಒಂದು ಮಾತು ಈಗ ಜಿಲ್ಲೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಜಿಲ್ಲೆಯ ಜನರ ಆಕ್ರೋಶದ ಜೊತೆ ಹೈಕಮಾಡ್ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೇ ತೆಲಂಗಾಣದಲ್ಲಿ ಟಿಆರ್‌ಎಸ್‌ ಪಕ್ಷ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

  • ಶಿವರಾಜ್ ಪಾಟೀಲ್‌ರಿಂದ ಗುತ್ತಿಗೆದಾರರಿಗೆ ಪರ್ಸೆಂಟೇಜ್ ಕಿರಿಕಿರಿಯಿದೆ: ರವಿ ಬೋಸರಾಜು ಆರೋಪ

    ಶಿವರಾಜ್ ಪಾಟೀಲ್‌ರಿಂದ ಗುತ್ತಿಗೆದಾರರಿಗೆ ಪರ್ಸೆಂಟೇಜ್ ಕಿರಿಕಿರಿಯಿದೆ: ರವಿ ಬೋಸರಾಜು ಆರೋಪ

    ರಾಯಚೂರು: ರಾಯಚೂರು ನಗರ ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್‌ರಿಂದ ಇಲ್ಲಿನ ಗುತ್ತಿಗೆದಾರರಿಗೆ ಪರ್ಸೆಂಟೇಜ್ ಕಿರಿಕಿರಿಯಿದೆ ಎಂದು ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಗಂಭೀರ ಆರೋಪ ಮಾಡಿದ್ದಾರೆ.

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯಂತಹ ಪ್ರಕರಣಗಳು ರಾಯಚೂರಿನಲ್ಲಿಯೂ ನಡೆಯುವ ಆತಂಕವಿದೆ. ಕಾಮಗಾರಿ ಪರ್ಸೆಂಟೇಜ್ ಕಮಿಷನ್ ಹಾವಳಿ ರಾಯಚೂರಲ್ಲೂ ತಾಂಡವವಾಡುತ್ತಿದೆ. ಶಿವರಾಜ್ ಪಾಟೀಲ್ 40 ರಿಂದ 50 ಪರ್ಸೆಂಟೇಜ್ ಕೇಳುತ್ತಿದ್ದಾರೆ. ಲಾಭದಾಯಕ ಕಾಮಗಾರಿಗಳು ಶಾಸಕರ ಸಹೋದರರೇ ಮಾಡುತ್ತಿದ್ದಾರೆ. ಅಪೆಂಡೆಕ್ಸ್ ಸಿ ನಾನ್ ಪ್ಲಾನ್ಡ್ ಎಕ್ಸ್ಪೆಂಡಿಚರ್ ಅಡಿ ಬಿಜೆಪಿ ಕಾರ್ಯಕರ್ತರಿಗೆ, ಗುತ್ತಿಗೆದಾರರಿಗೆ ಕೆಲಸ ಕೊಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನೈತಿಕ ಸ್ಥೈರ್ಯ ಕುಗ್ಗಿಸೋದು ಕಾಂಗ್ರೆಸ್ ಕನಸು: ಕೆಜಿ ಬೋಪಯ್ಯ

    Ravi Boseraju

    ಅನುದಾನವೇ ಇಲ್ಲದ ಕೆಲಸ ಮಾಡುವ ಕಾರ್ಯಕರ್ತರು ಹಾಗೂ ಗುತ್ತಿಗೆದಾರರು ಶಾಸಕರ ಹಿಂದೆ ಅಲೆದಾಡುವಂತಾಗಿದೆ. ಬಿಲ್ ನಿಲ್ಲಿಸಿ ಅವರನ್ನು ಹಿಡಿದಿಟ್ಟುಕೊಳ್ಳುತ್ತಿದ್ದಾರೆ. ಹೀಗಾಗಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಂತೆ ಇಲ್ಲೂ ಅನಾಹುತಗಳಾಗುವ ಭಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಪಡೆದು ತಿಪ್ಪೆ ಸಾರಿಸುವುದಲ್ಲ, ಬಂಧಿಸಿ ಜೈಲಿಗಟ್ಟಬೇಕು: ಕಾಂಗ್ರೆಸ್‌

    ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿಯೂ ಶಾಸಕರು ಹಲವರಿಗೆ 3-4 ಕೋಟಿ ರೂ.ಯ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ರಾಯಚೂರು ನಗರಾಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಕಾಮಗಾರಿ ಎಲ್ಲಿ ನಡೆದಿವೆ ಎಂಬುವುದು ಯಾರಿಗೂ ಗೊತ್ತಿಲ್ಲ. ಇದರ ಬಗ್ಗೆ ಈ ಹಿಂದೆ ನೇರವಾಗಿ ಆರೋಪ ಮಾಡಿದಾಗಲೂ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅವರ ತಪ್ಪು ಒಪ್ಪಿಕೊಂಡಂತೆ ಕಾಣುತ್ತಿದೆ ಎಂದು ರವಿ ಬೋಸರಾಜು ಆರೋಪಿಸಿದ್ದಾರೆ.

  • ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು ಎಂದು ವಿಧಾನಸಭೆಯಲ್ಲಿ ಶಾಸಕ ರಾಜುಗೌಡ ಆಕ್ರೋಶ ಹೊರಹಾಕಿದ್ದಾರೆ.

    SESSION SIDDARAMAIAIH

    ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ಮೀಸಲಾತಿ ನೀಡದ ವಿಚಾರವಾಗಿ ಶೂನ್ಯವೇಳೆಯಲ್ಲಿ ಶಿವರಾಜ್ ಪಾಟೀಲ್ ಪ್ರಸ್ತಾಪ ಮಾಡಿದರು. ರಾಯಚೂರು ನವೋದಯ ವೈದ್ಯಕೀಯ ಕಾಲೇಜು ಮಂಡಳಿ 371-ಜೆ ಕುತ್ತು ತರುವಂತೆ ನಡೆದುಕೊಂಡಿದೆ. ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಕೊಡುವುದಕ್ಕೆ ಆಗಲ್ಲ ಎಂದು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಧ್ವನಿಗೂಡಿಸಿದ ಶಾಸಕ ರಾಜುಗೌಡ, ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು 371ಜೆ ನಮಗೆ ಹೋರಾಟದಿಂದ ಬಂದಿರುವುದು, ಇದನ್ನು ಪಡೆದುಕೊಳ್ಳಲು ಬಲಿದಾನ ಆಗಿದೆ ನಮ್ಮ ಸೌಲಭ್ಯ ತೆಗೆದುಕೊಂಡು ನಮ್ಮ ಮಕ್ಕಳಿಗೆ ಮೀಸಲಾತಿ ಕೊಡಲ್ಲ ಅಂದ್ರೆ ಹೇಗೆ? ಪ್ರಶ್ನಿಸಿದರು. ಇದನ್ನೂ ಓದಿ: ಜನ ಆಡಳಿತ ಪಕ್ಷದಲ್ಲಿ ಏನಾಗ್ತಿದೆ ಅಂತ ನೋಡ್ತಿದ್ದಾರೆ: ಯುಟಿ ಖಾದರ್

    SHIVARJ PATIL

    ನಮ್ಮ ಕ್ಷೇತ್ರದಲ್ಲಿ ನಾವು ಜನರ ಮುಂದೆ ಹೇಗೆ ಮುಖ ತೋರಿಸುವುದು? ಸರ್ಕಾರದ ವಕೀಲರು ಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಈ ಬಗ್ಗೆ ಸದನ ಸಮಿತಿ ರಚನೆ ಮಾಡಿ ಎಂದು ರಾಜುಗೌಡ ಆಗ್ರಹಿಸಿದರು.  ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಹೈಕಮಾಂಡ್‍ನಿಂದ ಡಿಕೆಶಿಗೆ ಟಾಸ್ಕ್

    ಇದಕ್ಕೆ ಉತ್ತರಿಸಿದ ಸಚಿವ ಡಾ.ಸುಧಾಕರ್, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಬಳಿಕ ಪ್ರವೇಶಾತಿ ಮಾಡಿಸಿಕೊಂಡಿದ್ದಾರೆ. ಇಂದು ಕೋರ್ಟ್‍ಲ್ಲಿ ಕೇಸ್ ಸಹ ಇದೆ. ಅಡ್ವೋಕೇಟ್ ಜನರಲ್ ಖುದ್ದು ಇಂದು ಕೋರ್ಟ್‍ಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಹೈದ್ರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.

  • ಪಕ್ಷದ ವಿರುದ್ದ ಯತ್ನಾಳ್ ಇನ್ನೊಮ್ಮೆ ಮಾತಾಡಿ ನೋಡಲಿ: ಶಾಸಕ ಶಿವರಾಜ್ ಪಾಟೀಲ್

    ಪಕ್ಷದ ವಿರುದ್ದ ಯತ್ನಾಳ್ ಇನ್ನೊಮ್ಮೆ ಮಾತಾಡಿ ನೋಡಲಿ: ಶಾಸಕ ಶಿವರಾಜ್ ಪಾಟೀಲ್

    ರಾಯಚೂರು: ಪದೇ ಪದೇ ಪಕ್ಷದ ವಿರುದ್ದ ಯತ್ನಾಳ್ ಯಾಕ್ ಮಾತಾಡ್ತಾರೋ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಹೀಗೇ ಮಾತಾಡಲಿ ನೋಡೋಣ, ಏನ್ ಆಗುತ್ತೆ ಅಂತಾ ಗೊತ್ತಾಗುತ್ತೆ ಅಂತ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.

    bgk yatnal 2

    ರಾಯಚೂರಿನಲ್ಲಿ ಮಾತನಾಡಿದ ಶಾಸಕ ಡಾ.ಶಿವರಾಜ್ ಪಾಟೀಲ್, ನಮ್ಮದು ಶಿಸ್ತಿನ ಪಕ್ಷ, ಯತ್ನಾಳ್ ಸೀನಿಯರ್ ಲೀಡರ್ ಆಗಿದ್ರೂ ಈಗಾಗಲೇ ನೋಟೀಸ್ ಕೊಡಲಾಗಿದೆ. ಯತ್ನಾಳ್ ಮಾತಾಡಿದ್ರೆ ಏನೂ ಆಗಲ್ಲ. ವಿಜಯೇಂದ್ರ ಯಾವುದರಲ್ಲಿಯೂ ಹಸ್ತಕ್ಷೇಪ ಮಾಡ್ತಿಲ್ಲ. ನಮಗೆ ವಿಜಯೇಂದ್ರ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ವಿಜಯೇಂದ್ರನಿಂದ ಕೇವಲ ಯತ್ನಾಳ್ ಗೆ ಮಾತ್ರ ಸಮಸ್ಯೆ ಆಗಿದೆ ಅಂತ ಶಿವರಾಜ್ ಪಾಟೀಲ್ ಟಾಂಗ್ ನೀಡಿದರು.

    Umesh Katti

    ಬಿಪಿಎಲ್ ಕಾರ್ಡಿಗೆ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಮಾನದಂಡ ಆಗಬಾರದು. ನಾನು ಆ ವಿಷಯವನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನಗೆ ಅದರ ಬಗ್ಗೆ ಸಮಗ್ರ ಮಾಹಿತಿ ಇಲ್ಲ. ಟಿವಿ ಹಾಗೂ ಬೈಕ್ ಲಕ್ಸುರಿ ಆಗಿ ಉಳಿದಿಲ್ಲ ಎಂದರು. ಮೊಬೈಲ್, ಟಿವಿ ಹಾಗೂ ಬೈಕ್ ನಮ್ಮ ದುಡಿಮೆಯ ಭಾಗವಾಗಿದೆ. ದುಡಿಮೆ ಮಾಡಲಿಕ್ಕೆ ಅವು ನಮ್ಮ ಸಲಿಕೆ, ಗುದ್ದಲಿಯಂತೆ ಆಗಿದೆ. ಹಾಗಾಗಿ ಈ ರೀತಿಯ ಮಾನದಂಡಗಳು ಸರಿ ಅಲ್ಲ. ಇದರ ಬಗ್ಗೆ ನನ್ನ ವಿರೋಧವಿದೆ ಅಂತ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿದರು.

  • ತೀವ್ರ ಕುತೂಹಲ ಸೃಷ್ಟಿಸಿದೆ ಶಿವರಾಜ್ ಪಾಟೀಲ್, ಎಂ.ಬಿ ಪಾಟೀಲ್ ಭೇಟಿ!

    ತೀವ್ರ ಕುತೂಹಲ ಸೃಷ್ಟಿಸಿದೆ ಶಿವರಾಜ್ ಪಾಟೀಲ್, ಎಂ.ಬಿ ಪಾಟೀಲ್ ಭೇಟಿ!

    ಬೆಂಗಳೂರು: ನನ್ನ ಹಾಗೂ ಎಂ.ಬಿ ಪಾಟೀಲ್ ರ ಸಂಬಂಧ ಪಕ್ಷಗಳನ್ನು ಮೀರಿದ್ದು. ಚುನಾವಣೆಯಲ್ಲಿ ಗೆದ್ದ ಬಳಿಕ ಭೇಟಿಯಾಗಿರಲಿಲ್ಲ. ಹಾಗಾಗಿ ಭೇಟಿ ಮಾಡಿದ್ದೇನೆ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಅಂತ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.

    ಇಂದು ಸದಾಶಿವ ನಗರದಲ್ಲಿರೋ ಮಾಜಿ ಸಚಿವ ಎಂ.ಬಿ ಪಾಟೀಲ್ ಮನೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಪಾಟೀಲ್, ಮಂತ್ರಿ ಆಗಿದ್ದಾಗ ನಮ್ಮ ಭಾಗದಲ್ಲಿ ಅನೇಕ ಕೆಲಸ ಮಾಡಿದ್ದಾರೆ. ಇದೊಂದು ಕರ್ಟಸಿ ಭೇಟಿ ಅಷ್ಟೆ. ಇದು ರಾಜಕೀಯ ಭೇಟಿಯಲ್ಲ. ಬಿಜೆಪಿಗೆ ಅಹ್ವಾನ ಮಾಡಲು ಬಂದಿಲ್ಲ. ಈಗಿನ ಕಾಂಗ್ರೆಸ್ ಗಲಾಟೆಗೂ ನನಗೂ ಸಂಬಂಧವಿಲ್ಲ ಅಂದ್ರು.

    vlcsnap 2018 06 10 15h06m03s83

    ಇದೇ ವೇಳೆ ಎಂ.ಬಿ ಪಾಟೀಲ್ ಅವರ ಮನವೊಲಿಸಲು ಬಂದಿದ್ದೀರಾ ಅಂತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಯಾರ ಮನವೊಲಿಸಲು ಬಂದಿಲ್ಲ. ಅದಕ್ಕೆಲ್ಲ ಪಕ್ಷದಲ್ಲಿ ಹಿರಿಯರಿದ್ದಾರೆ. ಕೇವಲ ಸೌಜನ್ಯದ ಭೇಟಿ ಅಷ್ಟೆ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ರು.

    ಒಟ್ಟಿನಲ್ಲಿ ರಾಜಕೀಯ ಬೆಳವಣಿಗೆಗಳ ಮಧ್ಯೆ ರಾಯಚೂರು ನಗರದ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್, ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಅವರನ್ನು ಭೇಟಿ ಮಾಡಿರುವುದು ಇದೀಗ ತೀವ್ರ ಕುತೂಹಲ ಸೃಷ್ಟಿಸಿದೆ.

    ಇತ್ತ ಸಚಿವ ಸ್ಥಾನ ಕೈ ತಪ್ಪಿದ್ರ ಬಗ್ಗೆ ನಾನು ಸಿದ್ದರಾಮಯ್ಯ ಅವರ ಬಳಿಗೆ ಹೋಗಿ ಹೇಳಿದ್ದೆ. ಏನಾಯ್ತು ಅಂತ ಕೇಳಿದ್ರು ಅಷ್ಟೇ. ಆಮೇಲೆ ಫೋನ್ ಮಾಡ್ಲಿಲ್ಲ ಅಂತ ಮಾಜಿ ಸಚಿವ ಎಂಬಿ ಪಾಟೀಲ್ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ.

  • ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

    ಅಂಗವಿಕಲ ಜಿಮ್ ಪಟು ಬಾಳಲ್ಲಿ ಬೆಳಕು

    ರಾಯಚೂರು: ಜಿಲ್ಲೆಯ ರಾಂಪೂರದ ಅಂಗವಿಕಲ ಜಿಮ್ ಪಟು ವೆಂಕಟೇಶ್ ತನ್ನ ಕಾಲ ಮೇಲೆ ತಾನು ನಿಲ್ಲಲು ಪರದಾಡುತ್ತಿದ್ದರು. ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ವೆಂಕಟೇಶ್ ಜಿಮ್ ಮುಂದುವರೆಸಲು ಹಾಗೂ ಉದ್ಯೋಗವಿಲ್ಲದೆ ಕಟ್ಟಿಗೆ ಕಡಿದು ಜೀವನ ಸಾಗಿಸುತ್ತಿದ್ದರು.

    ಬೆಳಕು ಕಾರ್ಯಕ್ರಮದಲ್ಲಿ ಮಾತು ಕೊಟ್ಟಂತೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ವೆಂಕಟೇಶ್‍ಗೆ ಹಣಕಾಸಿನ ಸಹಾಯ ಮಾಡಿದ್ದಾರೆ. ಈಗ ವೆಂಕಟೇಶ್ ಗಣೇಶನ ಮೂರ್ತಿಗಳನ್ನ ಮಾಡಿ ತನ್ನ ಜೀವನ ಸಾಗಿಸುತ್ತಿದ್ದಾರೆ. ಸ್ನೇಹಿತರೊಂದಿಗೆ ಪಾರ್ಟನರ್ ಶಿಪ್ ನಲ್ಲಿ ಗಣೇಶನ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

    ಗಣೇಶ ಮೂರ್ತಿಗಳ ಆರ್ಡರ್‍ಗಳು ಸಿಗುತ್ತಿದ್ದು, ತನ್ನ ಜೀವನ ಕಟ್ಟಿಕೊಂಡಿದ್ದಾರೆ. ಪರಿಶಿಷ್ಠ ವರ್ಗದ ಅಂಗವಿಕಲರಿಗೆ ಮೀಸಲಾದ ಅನುದಾನದ ಪಟ್ಟಿಯಲ್ಲೂ ವೆಂಕಟೇಶ್ ಆಯ್ಕೆಯಾಗಿದ್ದು, ಸದ್ಯದಲ್ಲೆ ವೆಂಕಟೇಶ್ ಬ್ಯಾಂಕ್ ಅಕೌಂಟಿಗೆ 50 ಸಾವಿರ ಹಣ ಜಮಾ ಆಗಲಿದೆ.

    rcr impact 2

  • ಸಾಮೂಹಿಕ ವಿವಾಹದಲ್ಲಿ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ವರನಿಗೆ ಶಾಸಕರಿಂದ ಚಿಕಿತ್ಸೆ

    ಸಾಮೂಹಿಕ ವಿವಾಹದಲ್ಲಿ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ವರನಿಗೆ ಶಾಸಕರಿಂದ ಚಿಕಿತ್ಸೆ

    ರಾಯಚೂರು: ಇಂದು ರಾಯಚೂರಿನ ಬೋಳಮಾನದೊಡ್ಡಿಯಲ್ಲಿ ನಡೆದ ಸಾಮೂಹಿಕ ವಿವಾಹ ನಡೆಯುವ ವೇಳೆ ವರನೊಬ್ಬ ಬಿಸಿಲಿನ ತಾಪಕ್ಕೆ ಕುಸಿದು ಬೀಳುವ ಮೂಲಕ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

    RCR 9 4 17 SAMUHIKA VIVAHA 8

    ಬೋಳಮಾನದೊಡ್ಡಿ ಗ್ರಾಮದಲ್ಲಿ ವೆಂಕಟರಮಣ ದೇವಾಲಯದಲ್ಲಿ ನವರತ್ನ ಯುವಕ ಸಂಘ ಆಯೋಜಿಸಿದ್ದ 60 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಯಚೂರು ನಗರ ಶಾಸಕ ವೈದ್ಯ ಡಾ.ಶಿವರಾಜ್ ಪಾಟೀಲ್ ಕೂಡಲೇ ಕುಸಿದು ಬಿದ್ದ ವರ ಶಿವಕುಮಾರ್‍ಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿದರು. ಸದ್ಯ ಶಿವಕುಮಾರ್ ಚೇತರಿಸಿಕೊಂಡಿದ್ದಾರೆ.

    RCR 9 4 17 SAMUHIKA VIVAHA 7

    ವಿವಿಧ ಜಾತಿ ಧರ್ಮಕ್ಕೆ ಸೇರಿದ ಜೋಡಿಗಳ ಮದುವೆಯನ್ನ ಸರಳ ಹಾಗೂ ಸುಂದರವಾಗಿ ಆಯೋಜಿಸಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನವದಾಂಪತ್ಯಕ್ಕೆ ಕಾಲಿಟ್ಟ ಜೋಡಿಗೆ ಸರ್ಕಾರದ ಅನುದಾನ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರಾಯಚೂರಿನ ಕಿಲ್ಲೆ ಬೃಹನ್‍ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿ, ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

    RCR 9 4 17 SAMUHIKA VIVAHA 1

    RCR 9 4 17 SAMUHIKA VIVAHA 2

    RCR 9 4 17 SAMUHIKA VIVAHA 4

    RCR 9 4 17 SAMUHIKA VIVAHA 5

    RCR 9 4 17 SAMUHIKA VIVAHA 6