Tag: ಶ್ರೀಮುರಳಿ

  • ಜನ ಥಿಯೇಟರ್‌ಗೆ ಬಂದು ಸಿನಿಮಾ ನೋಡಿದ್ರೆ ನಮಗೆ ಖುಷಿ: ಶ್ರೀಮುರಳಿ

    ಜನ ಥಿಯೇಟರ್‌ಗೆ ಬಂದು ಸಿನಿಮಾ ನೋಡಿದ್ರೆ ನಮಗೆ ಖುಷಿ: ಶ್ರೀಮುರಳಿ

    ಹಾಸನ: ಮದಗಜ ಚಿತ್ರವನ್ನು ಅಭಿಮಾನಿಗಳು ಸ್ವೀಕರಿಸಿರುವುದು ಸಂತೋಷ ತಂದಿದೆ. ಜನ ಥಿಯೇಟರ್‌ಗೆ ಬಂದು ಸಿನಿಮಾ ನೋಡಿದ್ರೆ ನಮಗೆ ಖುಷಿ ಎಂದು  ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಅಭಿಪ್ರಾಯಪಟ್ಟಿದ್ದಾರೆ.

    SRIMURALI 1

    ಹಾಸನದಲ್ಲಿ ಮದಗಜ ಚಿತ್ರ ರಿಲೀಸ್ ಆಗಿರುವ ಚಿತ್ರಮಂದಿರಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿತ್ರಕ್ಕೆ ರಾಜ್ಯಾದ್ಯಂತ ಒಳ್ಳೇ ರೆಸ್ಪಾನ್ಸ್ ಸಿಕ್ಕಿದೆ. ಇಂದು ಅಭಿಮಾನಿಗಳ ದರ್ಶನಕ್ಕೆ ಹಾಸನಕ್ಕೆ ಬಂದಿದ್ದೇನೆ. ಜನರ ಪ್ರತಿಕ್ರಿಯೆ ಕಂಡು ತುಂಬಾ ಖುಷಿ ಆಗಿದೆ ಎಂದರು.

    SRIMURALI

    OTTಯಲ್ಲಿ ಸಿನೆಮಾ ರಿಲೀಸ್ ವಿಚಾರವಾಗಿ ಪ್ರತಿಕ್ರಿಯಿಸಿ, OTT ಒಂದು ಡಿಜಿಟಲ್ ಫ್ಲಾಟ್‍ಫಾರ್ಮ್, OTTಯಲ್ಲಿ ಸಿನೆಮಾಗಳು ತಡವಾಗಿ ಬರಲು ತಯಾರಿ ಮಾಡ್ಕೋಬೇಕು. ಜನ ಥಿಯೇಟರ್‌ಗೆ ಬಂದು ಸಿನೆಮಾ ನೋಡಿದ್ರೆ ನಮಗೆ ಖುಷಿ. OTTಯಲ್ಲಿ ನಾವ್ಯಾರು ಸಿನೆಮಾವನ್ನು ಬೇಗ ರಿಲೀಸ್ ಮಾಡುತ್ತಿಲ್ಲ. ಹಿರಿಯರು, ತಿಳಿದವರು ಬುದ್ಧಿವಂತರು ಈ ಬಗ್ಗೆ ಏನಾದರೂ ಒಂದು ಮಾಡಬೇಕು. ಅವರು ಏನೇ ಹೇಳಿದ್ರು ನಾವು ಅವರ ಜೊತೆ ನಿಲ್ಲುತ್ತೇವೆ. ರಿಲೀಸ್ ಮಾಡಬೇಡಿ, ಚೇಂಜ್ ಮಾಡಿ ಎಂದು ಹೇಳುವಷ್ಟು ದೊಡ್ಡವರಲ್ಲ ನಾವು. ಅಭಿಮಾನಿಗಳು ಥಿಯೇಟರ್‌ಗೆ ಬಂದು ಸಿನೆಮಾ ನೋಡುವ ವಿಚಾರವಾಗಿ ನಾವೆಲ್ಲ ಒಟ್ಟಿಗೆ ಇರುತ್ತೇವೆ ಎಂದರು.

    ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ಬಿಂಗ್ ಆಗಿ ರಿಲೀಸ್ ಆಗುವ ವಿಚಾರದ ಬಗ್ಗೆ ಮಾತನಾಡಿ, ಅದರ ಬಗ್ಗೆ ಏನು ಹೇಳಬೇಕು ತಿಳಿಯುತ್ತಿಲ್ಲ. ತುಂಬ ವರ್ಷದಿಂದ ಡಬ್ಬಿಂಗ್ ನಮ್ಮ ರಾಜ್ಯದಲ್ಲಿ ಇರಲಿಲ್ಲ. ಇತ್ತೀಚೆಗೆ ಡಬ್ಬಿಂಗ್ ಚಿತ್ರ ರಿಲೀಸ್ ಆಗುತ್ತಿದೆ. ಏನಾದರೂ ಅಭಿಮಾಮಾನಿಗಳು ಒಪ್ಪಬೇಕಲ್ವಾ, ಕರ್ನಾಟಕದಲ್ಲಿ ಅದು ಎಷ್ಟರ ಮಟ್ಟಿಗೆ ವರ್ಕ್ ಆಗುತ್ತಿದೆ ಗೊತ್ತಿಲ್ಲ. ಆದರೆ ಅದು ಡೇಂಜರ್. ನಾವು ಒಳ್ಳೊಳ್ಳೆ ಸಿನೆಮಾ ಮಾಡ್ಬೇಕು. ನಮ್ಮ ಅಡುಗೆ ಸರಿಯಾಗಿ ಇರಬೇಕು ಎಂದು ವ್ಯಂಗ್ಯವಾಡಿದರು.

  • ‘ಮದಗಜ’ ರೋರಿಂಗ್ ಫಸ್ಟ್ ಲುಕ್ ಟೀಸರ್ ಔಟ್

    ‘ಮದಗಜ’ ರೋರಿಂಗ್ ಫಸ್ಟ್ ಲುಕ್ ಟೀಸರ್ ಔಟ್

    – ಮುರಳಿ ಮಾಸ್ ಡೈಲಾಗ್ ಅಬ್ಬರ ಜೋರು

    ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಮದಗಜ’ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಸ್ಯಾಂಡಲ್‍ವುಡ್ ಮೋಸ್ಟ್ ಟ್ಯಾಲೆಂಡೆಡ್ ಡೈರೆಕ್ಟರ್ ಪ್ರಶಾಂತ್ ನೀಲ್ ‘ಮದಗಜ’ ಫಸ್ಟ್ ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    MADAGAJA 1

    ನಟ ಶ್ರೀಮುರುಳಿ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಫಸ್ಟ್ ಲುಕ್ ಟೀಸರ್ ಅಬ್ಬರ ಜೋರಾಗಿದ್ದು, ಅಭಿಮಾನಿ ಬಳಗಕ್ಕೆ ಸಖತ್ ಕಿಕ್ ಕೊಟ್ಟಿದೆ. ಸೋಶಿಯಲ್ ಮೀಡಿಯಾದಲ್ಲಿ ಫಸ್ಟ್ ಲುಕ್ ಟೀಸರ್ ಧೂಳೆಬ್ಬಿಸುತ್ತಿದ್ದು, ಎರಡೇ ಗಂಟೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

    ಟೀಸರ್‍ನಲ್ಲಿರುವ ಮಾಸ್ ಪಂಚಿಂಗ್ ಡೈಲಾಗ್ ಸಖತ್ ಕಿಕ್ ಕೊಡುತ್ತಿದ್ದು ರೋರಿಂಗ್ ಸ್ಟಾರ್ ಖಡಕ್ ಡೈಲಾಗ್ ಡೆಲಿವರಿಗೆ ಅಭಿಮಾನಿ ಬಳಗ ಫಿದಾ ಆಗಿದ್ದಾರೆ. ಶ್ರೀ ಮುರುಳಿ ಮಾಸ್ ಅವತಾರ ಕಮಾಲ್ ಮಾಡಿದ್ದು, ಡೈಲಾಗ್ ನಷ್ಟೇ ಕಿಕ್ ಕೊಡುತ್ತಿದೆ ಸಂಗೀತ ನಿರ್ದೇಶಕ ರವಿ ಬಸ್ರೂರು ಪವರ್ ಫುಲ್ ಹಿನ್ನೆಲ್ಲೆ ಸಂಗೀತ.

    ಪಕ್ಕಾ ಮಾಸ್ ಅಂಡ್ ಆಕ್ಷನ್ ಓರಿಯೆಂಟೆಡ್ ಮದಗಜ’ ಸಿನಿಮಾಕ್ಕೆ ಎಸ್. ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಎರಡು ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿರುವ ‘ಮದಗಜ’ ಚಿತ್ರತಂಡ ವಾರಣಾಸಿ ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿದೆ. ಚಿತ್ರದಲ್ಲಿ ರೋರಿಂಗ್ ಸ್ಟಾರ್‍ಗೆ ಜೋಡಿಯಾಗಿ ಸ್ಯಾಂಡಲ್‍ವುಡ್ ಚೆಲುವೆ ಆಶಿಕಾ ರಂಗನಾಥ್ ನಟಿಸಿದ್ದು, ನವೀನ್ ಕುಮಾರ್ ಛಾಯಾಗ್ರಹಣ ‘ಮದಗಜ’ ಚಿತ್ರಕ್ಕಿದೆ.

  • ಮನೆ ಹತ್ರ ಬಂದು ನಿರಾಶರಾಗಬೇಡಿ- ಅಭಿಮಾನಿಗಳಲ್ಲಿ ಮದಗಜ ಮನವಿ

    ಮನೆ ಹತ್ರ ಬಂದು ನಿರಾಶರಾಗಬೇಡಿ- ಅಭಿಮಾನಿಗಳಲ್ಲಿ ಮದಗಜ ಮನವಿ

    ಬೆಂಗಳೂರು: ಹುಟ್ಟುಹಬ್ಬದ ದಿನದಂದು ಮನೆಯ ಹತ್ತಿರ ಬಂದು ನಿರಾಶರಾಗಬೇಡಿ ಎಂದು ರೋರಿಂಗ್ ಸ್ಟಾರ್, ಮದಗಜ ಶ್ರೀಮುರಳಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನಾಳೆ ಶ್ರೀಮುರಳಿ ತಮ್ಮ 39ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    Srimurali 2

    ಈ ಬಾರಿ ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣ ಕೋವಿಡ್. ನಮ್ಮಿಂದ ಬೇರೆ ಯಾರಿಗೂ ಅನಾನುಕೂಲತೆಗಳು ಆಗುವುದ ಬೇಡ. ನಾನು ಕಾರಣಾಂತರಗಳಿಂದ ಮನೆಯಲ್ಲಿ ಇರುವುದಿಲ್ಲ. ಯಾರು ಸಹಿತ ಮನೆ ಹತ್ತಿರ ಬಂದು ಬೇಸರರಾಗಬೇಡಿ. ಯಾವ ಹಾರ, ಕೇಕ್, ಗಿಫ್ಟ್ ಗಳಿಗೆ ಖರ್ಚು ಮಾಡಬೇಡಿ. ಬದಲಾಗಿ ಹಸಿವಿರುವವರಿಗೆ ಕೈಯಲ್ಲಿ ಆದಷ್ಟು ಅನ್ನದಾನವನ್ನ ಮಾಡಿ ಎಂದು ಮುರಳಿ ಮನವಿ ಮಾಡಿಕೊಂಡಿದ್ದಾರೆ.

    Srimurali A

    ನಿಮ್ಮನ್ನು ನೋಡಲು ಆಗದ ಬೇಸರ ನನಗೂ ಇದೆ. ಹಾಗಾಗಿ ಅಭಿಮಾನಿ ದೇವದೇ ಆದಷ್ಟು ಬೇಗ ಎಲ್ಲವೂ ಸುಧಾರಿಸಿಕೊಂಡ ನಂತರ ಸಿಗೋಣ. ನಿಮ್ಮ ಪ್ರೀತಿ, ಆಕ್ಕರೆಯನ್ನು ನಾನು ತಿರಸ್ಕರಿಸುವುದಿಲ್ಲ. ನಿಮ್ಮ ಅಭಿಮಾನ, ಪ್ರೀತಿ, ಹಾರೈಕೆ ನನಗೆ ಇಂದು, ಎಂದೆಂದೂ ಬೇಕು. ಅದಕ್ಕೆ ನೀವು ಮಾಡಬೇಕಾಗಿರುವುದು ಏನೆಂದರೆ, ನೀವು ಇರುವ ಕಡೆಯಿಂದಲೇ ನನ್ನನ್ನು ಹಾರೈಸಿ, ಆಶೀರ್ವದಿಸಿ. ಅದೇ ನೀವು ನನಗೆ ಹುಟ್ಟು ಹಬ್ಬದಂದು ಕೊಡುವ ಬಹುದೊಡ್ಡ ಕಾಣಿಕೆ ಎಂದು ಶ್ರೀಮುರಳಿ ಹೇಳಿದ್ದಾರೆ.

  • ಗಡಿ ಜಿಲ್ಲೆಯಲ್ಲಿ ಶ್ರೀಮುರಳಿಯ ಬೆನ್ನಟ್ಟಿದ ಎದುರಾಳಿಗಳು

    ಗಡಿ ಜಿಲ್ಲೆಯಲ್ಲಿ ಶ್ರೀಮುರಳಿಯ ಬೆನ್ನಟ್ಟಿದ ಎದುರಾಳಿಗಳು

    ಚಾಮರಾಜನಗರ: ನಟ ಶ್ರೀಮುರಳಿ ಅಭಿನಯದ ‘ಮದಗಜ’ ಸಿನಿಮಾದ ಚಿತ್ರೀಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

    ಹಳ್ಳಿ ವಾತಾವರಣದ ಚಿತ್ರೀಕರಣಕ್ಕೆ ಪೂರಕವಾದ್ದರಿಂದ ಈ ಸ್ಥಳದಲ್ಲಿ ಶೂಟಿಂಗ್ ಮಾಡಲಾಗುತ್ತಿದೆ. ‘ಮದಗಜ’ ಚಿತ್ರದ ಶೇ.25ರಷ್ಟು ಶೂಟಿಂಗ್ ವಾರಣಾಸಿಯಲ್ಲಿ ಮುಗಿದಿದೆ. ಈಗ ಶ್ರೀಮುರಳಿ ಗ್ರಾಮದೊಳಗೆ ಬೈಕಿನಲ್ಲಿ ಸಂಚಾರ ಮಾಡುವ ಮತ್ತು ಎದುರಾಳಿಗಳು ನಟನನ್ನ ಹಿಂಬಾಲಿಸುವ ದೃಶ್ಯ ಹಂಗಳ ಗ್ರಾಮದಲ್ಲಿ ಚಿತ್ರೀಕರಣ ಮಾಡಲಾಯಿತು.

    cng 1

    ಈ ವೇಳೆ ಸಾಕಷ್ಟು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ನಿಂತಿದ್ದು, ಎಲ್ಲರಿಗೂ ಶ್ರೀಮುರುಳಿ ವಿಶ್ ಮಾಡಿದರು. ‘ಮದಗಜ’ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಉಮಾಪತಿ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ಆಶಿಕಾ ರಂಗನಾಥ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

    3

    ಎರಡು ದಿನಗಳ ಹಿಂದೆಯಷ್ಟೆ ‘ಮದಗಜ’ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿತ್ತು. ಈ ವೇಳೆ ಯಾರೊಬ್ಬರಿಗೂ ಸುಳಿವು ನೀಡದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಮದಗಜ’ ಶೂಟಿಂಗ್ ಸೆಟ್‍ಗೆ ಎಂಟ್ರಿ ಕೊಟ್ಟಿದ್ದರು. ಈ ಸಮಯ ಚಿತ್ರತಂಡದವರ ಜೊತೆ ದರ್ಶನ್ ಫೋಟೋ ತೆಗೆಸಿಕೊಂಡು ಖುಷಿಪಟ್ಟಿದ್ದರು.

    ದರ್ಶನ್ ಶೂಟಿಂಗ್ ಸೆಟ್‍ಗೆ ಭೇಟಿ ನೀಡಿದ್ದ ಬಗ್ಗೆ ನಟ ಶ್ರೀಮುರಳಿ ಸೋಶಿಯಲ್ ಮೀಡಿಯಾದಲ್ಲಿ ಹರ್ಷ ವ್ಯಕ್ತಪಡಿಸಿದ್ದರು. ‘ಸಖತ್ ಟೈಂ’ ಎಂದು ನಟ ಶ್ರೀಮುರಳಿ ಟ್ವೀಟ್ ಮಾಡಿದ್ದರು.

  • ಪಾತ್ರೆ ತೊಳ್ದಿಲ್ಲಾ ಅಂದ್ರೆ ಊಟ ಇಲ್ವಂತೆ- ಕಷ್ಟ ಹೇಳ್ಕೊಂಡ ಶ್ರೀಮುರಳಿ

    ಪಾತ್ರೆ ತೊಳ್ದಿಲ್ಲಾ ಅಂದ್ರೆ ಊಟ ಇಲ್ವಂತೆ- ಕಷ್ಟ ಹೇಳ್ಕೊಂಡ ಶ್ರೀಮುರಳಿ

    ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

    sriimurali 4

    ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ ಇಷ್ಟಪಟ್ಟು ಮಾಡುತ್ತಿದ್ದಾರೆ.

    sriimurali 2

    ಅದೇ ರೀತಿ ಇದೀಗ ಶ್ರೀಮುರಳಿಯವರಿಗೆ ಈ ಸಂಕಷ್ಟ ಎದುರಾಗಿದ್ದು, ಹೋಮ್ ರೂಲ್ಸ್ ಫಾಲೋ ಮಾಡಲೇಬೇಕಾಗಿದೆ. ಸಿನಿಮಾ ಕೆಲಸಗಳಲ್ಲಿ ಸದಾ ಬ್ಯುಸಿಯಾಗಿರುತ್ತಿದ್ದ ಶ್ರೀಮುರಳಿಯವರಿಗೆ ಇದೀಗ ಪತ್ನಿ, ಮಕ್ಕಳು, ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ಸಿಕ್ಕಿದ್ದು, ಇದನ್ನು ಅಷ್ಟೇ ಎಂಜಾಯ್ ಮಾಡುತ್ತಿದ್ದಾರೆ. ಇದರೊಂದಿಗೆ ಕಷ್ಟವನ್ನು ಪಡುತ್ತಿದ್ದಾರೆ.

    sriimurali 37

    ತಾವು ಕಷ್ಟ ಪಡುತ್ತಿರುವುದರ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ಸದ್ಯಕ್ಕೆ ಹೋಮ್ ರೂಲ್ಸ್, ಊಟ ಬೇಕು ಅಂದ್ರೆ ಪಾತ್ರೆ ತೊಳೆಯಲೇಬೇಕು. ಇಲ್ಲಾ ಅಂದ್ರೆ ನನ್ನ ಹೆಂಡತಿ ವಿದ್ಯಾ ಗುರ್ ಅಂತಾರೆ. ಆದರೆ ಈ ಕೆಲಸದಿಂದ ಬೆವರು ಕಿತ್ಗೊಂಡು ಬರುತ್ತೆ ಎಂದು ಪಾತ್ರೆ ತೊಳೆಯುವ ಫೋಟೋ ಹಾಕಿದ್ದಾರೆ. ಈ ಮೂಲಕ ಮನೆಗೆಲಸವನ್ನು ಮಾಡುತ್ತಿರುವುದಾಗಿ ಹೇಳಿದ್ದಾರೆ.

    ಶ್ರೀ ಮುರಳಿ ಪೋಸ್ಟ್ ಗೆ ಅವರ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದು, ಲವ್ಡ್ ಇಟ್, ಎಂಜಾಯ್ ಬ್ರದರ್. ಅತ್ತಿಗೆ ರಾಕ್, ಬ್ರದರ್ ಶಾಕ್ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಅಭಿಮಾನಿ ಕ್ಯೂಟ್ ಕಪಲ್, ಬೆಸ್ಟ್ ಟುಗೆದರ್ ಎಂದು ಕಮೆಂಟ್ ಮಾಡಿದ್ದಾರೆ. ಹೀಗೆ ಅವರ ಅಭಿಮಾನಿಗಳು ಮನೆಗೆಲಸ ಮಾಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    madagaja

    ನಟ ಶ್ರೀ ಮುರಳಿ ಅಭಿನಯದ ಮದಗಜ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದು, ಶ್ರೀ ಮುರುಳಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದರು. ಚಿತ್ರ ತಂಡ ಉತ್ತರ ಪ್ರದೇಶದಲ್ಲಿ ಅಘೋರಿಗಳ ಮಧ್ಯೆ ಶೂಟಿಂಗ್‍ಗೂ ತೆರಳಿತ್ತು. ನಂತರ ಈ ಚಿತ್ರಕ್ಕೆ ನಾಯಕಿ ಆಯ್ಕೆ ಬಗ್ಗೆ ಸಹ ಕುತೂಹಲ ಮೂಡಿತ್ತು. ಆಶಿಕಾ ರಂಗನಾಥ್ ಆಯ್ಕೆಯಾಗುವ ಮೂಲಕ ಕುತೂಹಲಕ್ಕೆ ತೆರೆಬಿತ್ತು. ಚಿತ್ರೀಕರಣ ಭರದಿಂದ ಸಾಗಿರುವಾಗಲೇ ಕೊರೊನಾ ವಕ್ಕರಿಸಿ, ಲಾಕ್‍ಡೌನ್ ಜಾರಿಯಾಯಿತು. ಹೀಗಾಗಿ ಮನೆಯಲ್ಲೇ ಕಾಲ ಕಳೆಯುವ ಸ್ಥಿತಿ ಬಂದೊದಗಿದೆ. ಈ ಸಮಯವನ್ನೂ ಎಂಜಾಯ್ ಮಾಡುತ್ತಿರುವ ಶ್ರೀಮುರಳಿ, ಮನೆ ಕೆಲಸದಲ್ಲಿ ಪತ್ನಿಗೆ ಸಹಾಯ ಮಾಡುತ್ತಿದ್ದಾರೆ. ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ.

    WhatsApp Image 2020 02 14 at 5.33.37 PM

  • 20ನೇ ಲವ್ ಆನಿವರ್ಸರಿ- ಶ್ರೀಮುರಳಿ ದಂಪತಿಯ ಫೋಟೋಶೂಟ್

    20ನೇ ಲವ್ ಆನಿವರ್ಸರಿ- ಶ್ರೀಮುರಳಿ ದಂಪತಿಯ ಫೋಟೋಶೂಟ್

    ಬೆಂಗಳೂರು: ಸಾಮಾನ್ಯವಾಗಿ ಮದುವೆಯಾದ ನಂತರ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಇದೀಗ ಸ್ಯಾಂಡಲ್‍ವುಡ್ ನಟ ಶ್ರೀಮುರಳಿ ತಮ್ಮ ಲವ್ ವಾರ್ಷಿಕೋತ್ಸವವನ್ನು ಸೆಲಬ್ರೇಷನ್ ಮಾಡಿ, ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

    ಹೌದು, ನಟ ಶ್ರೀಮುರಳಿ ತಮ್ಮ 20ನೇ ಲವ್ ಆನಿವರ್ಸರಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಅಂದರೆ 1999 ಡಿಸೆಂಬರ್ 30 ರಂದು ಶ್ರೀಮುರಳಿ ತಮ್ಮ ಪತ್ನಿ ವಿದ್ಯಾ ಅವರಿಗೆ ಪ್ರಪೋಸ್ ಮಾಡಿದ್ದರು. ಹೀಗಾಗಿ ಅದೇ ದಿನ ತಮ್ಮ ಪ್ರೀತಿಯ ವಾರ್ಷಿಕೋತ್ಸವವನ್ನು ಆಚರಣೆ ಮಾಡಿದ್ದಾರೆ.

    “1999ರಿಂದ ನೀವು ನನ್ನ ಪಕ್ಕದ್ದಲ್ಲಿದ್ದೀರಿ, ಹೀಗಾಗಿ ಜೀವನದಲ್ಲಿ ನಾನು ತುಂಬಾ ಸಂತೋಷದಿಂದ ಇದ್ದೇನೆ. ನನ್ನ ಕಾಲೇಜಿನ ಪ್ರಿಯತಮೆ, ನಮ್ಮ ಎರಡು ಮಕ್ಕಳ ತಾಯಿ, ನಿಮ್ಮೊಂದಿಗೆ ನಾನು 2 ದಶಕಗಳನ್ನು ಕಳೆದಿದ್ದೇನೆ. ನಿಜಕ್ಕೂ ಇದೊಂದು ಸುಂದರ ಪ್ರಯಾಣವಾಗಿದೆ. ನಾನು ಬದುಕಿರುವವರೆಗೂ ತುಂಬಾ ಪ್ರೀತಿಸುತ್ತೇನೆ. 20ನೇ ವಾರ್ಷಿಕೋತ್ಸವದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

    ಶ್ರೀಮುರಳಿ ಬಿಳಿ ಬಣ್ಣ ಕುರ್ತಾ ಧರಿಸಿದರೆ, ವಿದ್ಯಾ ಅವರು ಕೂಡ ಬಿಳಿ ಬಣ್ಣದ ಸೀರೆ ತೊಟ್ಟಿದ್ದರು. ಇಬ್ಬರು ತುಂಬಾ ಮುದ್ದಾಗಿ ಕಾಣಿಸುತ್ತಿದ್ದರು. ಶ್ರೀಮುರಳಿ ಮತ್ತು ವಿದ್ಯಾ ಇಬ್ಬರು 2008ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

    https://www.instagram.com/p/B6sjpJrnDfw/

  • ಮತ್ತೆ ಕೌಟುಂಬಿಕ ಚಿತ್ರಗಳ ‘ಭರಾಟೆ’ಗಿಳಿದರೇ ಚಂದ್ರ ಚಕೋರಿಯ ಹುಡುಗ?

    ಮತ್ತೆ ಕೌಟುಂಬಿಕ ಚಿತ್ರಗಳ ‘ಭರಾಟೆ’ಗಿಳಿದರೇ ಚಂದ್ರ ಚಕೋರಿಯ ಹುಡುಗ?

    ಬೆಂಗಳೂರು: ವರ್ಷಾಂತರಗಳ ಹಿಂದೆ ಚಂದ್ರಚಕೋರಿ ಎಂಬ ಕೌಟುಂಬಿಕ ಮೌಲ್ಯ ಸಾರುವ ಚಿತ್ರದ ಮೂಲಕವೇ ಶ್ರೀಮುರಳಿ ನಾಯಕನಾಗಿ ಆಗಮಿಸಿದ್ದರು. ಆ ನಂತರದಲ್ಲಿ ಒಂದಷ್ಟು ಏಳು ಬೀಳುಗಳನ್ನು ಕಾಣುತ್ತಲೇ ಬಂದಿದ್ದ ಅವರನ್ನು ಪಕ್ಕಾ ಮಾಸ್ ಇಮೇಜಿನೊಂದಿಗೆ ಗೆಲ್ಲುವಂತೆ ಮಾಡಿದ್ದು ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಉಗ್ರಂ. ಉಗ್ರಂ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸುತ್ತಲೇ ನರ್ತನ್ ನಿರ್ದೇಶನದ ಮಫ್ತಿ ತೆರೆ ಕಂಡಿತ್ತು. ಅದೂ ಸೂಪರ್ ಹಿಟ್ ಆಗುತ್ತಲೇ ಇದೀಗ ಶ್ರೀಮುರಳಿಯ ಭರಾಟೆ ಆರಂಭವಾಗಿದೆ.

    srimurali

    ಗಮನೀಯ ಅಂಶವೆಂದರೆ ಶ್ರೀಮುರಳಿ ಆರಂಭಿಕವಾಗಿ ಗೆದ್ದಿದ್ದೇ ಕೌಟುಂಬಿಕ ಚಿತ್ರದ ಮೂಲಕ. ಇದರೊಂದಿಗೆ ಆ ವರ್ಗದ ಪ್ರೇಕ್ಷಕರ ಮನ ಗೆದ್ದಿದ್ದ ಶ್ರೀಮುರಳಿ ಭರಾಟೆ ಮೂಲಕ ಮತ್ತೆ ಹಳೇ ಟ್ರ್ಯಾಕಿಗೆ ಮರಳಲಿದ್ದಾರಾ? ಇಂಥಾದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿರೋದು ಚಿತ್ರತಂಡ ಬಿಟ್ಟುಕೊಟ್ಟಿರೋ ಕೆಲ ಅಂಶಗಳು. ನಿರ್ದೇಶಕ ಚೇತನ್ ಕುಮಾರ್ ಇದರಲ್ಲಿ ಕೌಟುಂಬಿಕ ಕಥನವನ್ನೇ ಪ್ರಧಾನವಾಗಿ ಬಳಸಿಕೊಂಡಿದ್ದಾರಂತೆ. ಈ ಕಾರಣದಿಂದಲೇ ಹಲವಾರು ವರ್ಷಗಳ ನಂತರ ಶ್ರೀಮುರಳಿ ಮತ್ತೆ ಕೌಟುಂಬಿಕ ಚಿತ್ರದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

    Bharate 1

    ಭರಾಟೆ ಭಾರೀ ಆವೇಗದ ಪಕ್ಕಾ ಮಾಸ್ ಚಿತ್ರವೆಂಬ ವಿಚಾರ ಈಗಾಗಲೇ ಜಾಹೀರಾಗಿದೆ. ನಿರ್ದೇಶಕ ಚೇತನ್ ಕುಮಾರ್ ಇಂಥಾ ಮಾಸ್ ಕಥೆಯನ್ನು ಅದು ಹೇಗೆ ಕೌಟುಂಬಿಕ ಕಥನಕ್ಕೆ ಕನೆಕ್ಟ್ ಮಾಡಿದ್ದಾರೆಂಬ ಕುತೂಹಲ ಇದ್ದೇ ಇದೆ. ಆದರೆ ಈ ಬಗ್ಗೆ ಸ್ಪಷ್ಟವಾದ ವಿಚಾರಗಳನ್ನು ಚಿತ್ರತಂಡ ಹೇಳಿಕೊಂಡಿಲ್ಲವಾದರೂ ಭರಾಟೆ ಎಂಬುದು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರವೂ ಹೌದೆಂಬುದರಲ್ಲಿ ಯಾವ ಸಂಶಯವೂ ಇಲ್ಲ. ನಿರ್ಮಾಪಕ ಸುಪ್ರೀತ್ ಈ ಸಿನಿಮಾವನ್ನು ಅದ್ಧೂರಿಯಾಗಿಯೇ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಶ್ರೀಮುರಳಿ ಮತ್ತೆ ಕೌಟುಂಬಿಕ ಪ್ರೇಕ್ಷಕರನ್ನೂ ತಲುಪಿಕೊಳ್ಳುವ ಖುಷಿಯಲ್ಲಿದ್ದಾರೆ.

  • ಶ್ರೀಮುರಳಿ ವಿರುದ್ಧ ತೊಡೆತಟ್ಟಿರೋದು ಹದಿನೇಳು ಖಳರು!

    ಶ್ರೀಮುರಳಿ ವಿರುದ್ಧ ತೊಡೆತಟ್ಟಿರೋದು ಹದಿನೇಳು ಖಳರು!

    ಬೆಂಗಳೂರು: ಈ ಹಿಂದೆ ಬಹದ್ದೂರ್ ಮತ್ತು ಭರ್ಜರಿ ಎಂಬೆರಡು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿ ಗೆದ್ದಿರುವವರು ಚೇತನ್ ಕುಮಾರ್. ಈ ಎರಡೇ ಚಿತ್ರಗಳ ಮೂಲಕ ಯುವ ಮನಸುಗಳ ಡಾರ್ಲಿಂಗ್ ಅನ್ನಿಸಿಕೊಂಡಿರೋ ಚೇತನ್ ಪಾಲಿಗೆ ಪ್ರೇಕ್ಷಕರ ಆಕಾಂಕ್ಷೆಗಳೇನೆಂಬುದು ಸುಸ್ಪಷ್ಟ. ಈ ಬಾರಿ ಅವರದನ್ನು ಮತ್ತಷ್ಟು ಸ್ಪಷ್ಟವಾಗಿಸಿಕೊಂಡು ಫ್ಯಾಮಿಲಿ ಪ್ರೇಕ್ಷಕರನ್ನೂ ಸೆಳೆದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಈಗಾಗಲೇ ಕೆಂಡದಂಥಾ ನಿರೀಕ್ಷೆ ಹುಟ್ಟು ಹಾಕಿರೋ ಭರಾಟೆಯನ್ನು ಫ್ಯಾಮಿಲಿ ಪ್ಯಾಕೇಜ್ ಆಗಿಯೂ ರೂಪಿಸುವ ನಿಟ್ಟಿನಲ್ಲಿ ಚೇತನ್ ಶ್ರಮ ವಹಿಸಿದ್ದಾರೆ. ಈ ಚಿತ್ರ ಆ ಕಾರಣದಿಂದಲೇ ಕುಟುಂಬ ಸಮೇತವಾಗಿ ನೋಡಿ ಎಂಜಾಯ್ ಮಾಡುವಂತೆ ಮೂಡಿ ಬಂದಿದೆಯಂತೆ.

    BHARATE 3

    ಇದೊಂದು ಪಕ್ಕಾ ಮಾಸ್ ಕಥನ ಹೊಂದಿರೋ ಚಿತ್ರ. ಶ್ರೀಮುರಳಿ ಈ ಹಿಂದೆ ಎಂದೂ ನಟಿಸದ ಪಾತ್ರಕ್ಕಿಲ್ಲಿ ಜೀವ ತುಂಬಿದ್ದಾರೆ. ಆ ಛಾಯೆಯೇ ಕುಟುಂಬ ಸಮೇತರಾಗಿ ಪ್ರೇಕ್ಷಕರನ್ನೆಲ್ಲ ಚಿತ್ರಮಂದಿರದತ್ತ ಕರೆತರುವಷ್ಟು ಶಕ್ತವಾಗಿದೆ ಅನ್ನೋದು ಚಿತ್ರತಂಡದ ಭರವಸೆ. ಆದರೆ, ಇದರಲ್ಲಿರೋ ಮಾಸ್ ಸನ್ನಿವೇಶಗಳು ಮಾತ್ರ ಬೇರೆಯದ್ದೇ ದಿಕ್ಕಿನಲ್ಲಿವೆ. ಭರಾಟೆಯಲ್ಲಿ ಶ್ರೀಮುರಳಿ ವಿರುದ್ಧ ತೊಡೆತಟ್ಟಿರೋ ಖಳರ ಸಂಖ್ಯೆಯೇ ಇದೊಂದು ಭರ್ಜರಿ ಫೋರ್ಸ್ ಹೊಂದಿರುವ ಮಾಸ್ ಚಿತ್ರವೆಂಬುದಕ್ಕೆ ಪುರಾವೆಯಂತಿದೆ.

    Bharate 2 copy

    ಭರಾಟೆಯಲ್ಲಿ ಸಾಯಿಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಬ್ರದರ್ಸ್ ಖಳರಾಗಿ ಅಬ್ಬರಿಸಿದರೆ, ಅವರೊಂದಿಗೆ ಮತ್ತೆ ಹದಿನಾಲಕ್ಕು ಮಂದಿ ಖಳ ನಟರು ಚಿತ್ರ ವಿಚಿತ್ರವಾದ ಪಾತ್ರಗಳಲ್ಲಿ ಮಿಂಚಿದ್ದಾರೆ. ಈ ಹದಿನೇಳೂ ಪಾತ್ರಗಳೂ ಕೂಡಾ ಒಂದಕ್ಕೊಂದು ಭಿನ್ನವಾಗಿದೆ ಎಂಬುದು ಈಗಾಗಲೇ ಟ್ರೇಲರ್‍ಗಳ ಮೂಲಕವೇ ಸಾಬೀತಾಗಿದೆ. ಮಾಮೂಲಿಯಂತಾದರೆ ಒಂದು ಚಿತ್ರದಲ್ಲಿ ಒಂದಿಬ್ಬರು ಖಳರಿರುತ್ತಾರೆ. ಆದರೆ ಈ ಪಾಟಿ ಖಳ ನಟರಿದ್ದಾರೆಂಬುದೇ ಭರಾಟೆಯತ್ತ ಮಾಸ್ ಅಭಿರುಚಿಯ ಪ್ರೇಕ್ಷಕರೆಲ್ಲ ವಾಲಿಕೊಳ್ಳುವಂತಾಗಿದೆ. ಅಂತೂ ಭರಾಟೆ ಈ ವಾರವೇ ಬಿಡುಗಡೆಯಾಗಲಿದೆ. ಒಂದೆರಡು ದಿನ ಕಳೆಯುತ್ತಲೇ ಭರಾಟೆ ನಿಮ್ಮೆದುರು ಆರ್ಭಟಿಸಲಿದೆ.

  • ಪ್ರೀತಿ, ದ್ವೇಷಗಳ ಭರಾಟೆಯ ಟ್ರೈಲರ್ ನೋಡಿದ್ರೆ ಆಗುತ್ತೆ ರೋಮಾಂಚನ

    ಪ್ರೀತಿ, ದ್ವೇಷಗಳ ಭರಾಟೆಯ ಟ್ರೈಲರ್ ನೋಡಿದ್ರೆ ಆಗುತ್ತೆ ರೋಮಾಂಚನ

    -ಚಕಿತಗೊಳಿಸುತ್ತೆ ಭರಾಟೆಯಲ್ಲಿ ಶ್ರೀಮುರಳಿಯ ಅಬ್ಬರ

    ಬೆಂಗಳೂರು: ಚಂದನವನದಲ್ಲಿ ಸದ್ಯ ಸದ್ದು ಮಾಡುತ್ತಿರುವ ಚಿತ್ರ ಭರಾಟೆ. ಹಲವು ಹೊಸತನಗಳೊಂದಿಗೆ ಮೂಡಿಬಂದಿರುವ ಭರಾಟೆ ಬಿಡುಗಡೆಗೆ ಸಿದ್ಧಗೊಂಡಿದೆ. ಚಿತ್ರತಂಡ ಸಹ ಸಿನಿಮಾ ಪ್ರಚಾರದಲ್ಲಿ ತೊಡಗಿಕೊಂಡಿದೆ. ಟ್ರೈಲರ್, ಫೋಟೋ ಮತ್ತು ಹಾಡುಗಳ ಮೂಲಕ ತನ್ನತ್ತ ಸೆಳೆದುಕೊಂಡಿದ್ದ ಭರಾಟೆ ಇಂದು ಅಭಿಮಾನಿಗಳಿಗೆ ಮತ್ತೊಂದು ಟ್ರೈಲರ್ ಬಿಡುಗಡೆಗೊಳಿಸಿದೆ. ವೀಕೆಂಡ್ ಗೆ ಕನ್ನಡಾಭಿಮಾನಿಗಳಿಗೆ ಮಾಸ್ ಟ್ರೈಲರ್ ನ್ನು ಕಲರ್‍ಫುಲ್ ಬಾಡೂಟವಾಗಿ ಉಣಬಡಿಸಿದೆ.

    BHARATE 3

    ಭರಾಟೆಯ ಅಬ್ಬರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸಿನಿಮಾದ ಹಲವು ಆಯಾಮಗಳನ್ನು ತೋರಿಸಿರುವ ಚಿತ್ರತಂಡ ಎಲ್ಲಿಯೂ ಕಥೆಯ ಸಣ್ಣ ಎಳೆಯನ್ನು ಬಿಟ್ಟುಕೊಡದೇ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಕೆಲ ಫೋಟೋಗಳನ್ನು ರಿವೀಲ್ ಗೊಳಿಸುತ್ತಾ ಬಂದ ಚಿತ್ರತಂಡ ಇಂದು ಫ್ರೂಟ್ ಸಲಾಡ್ ನೀಡಿದೆ. ಟ್ರೈಲರ್ ಎಲ್ಲ ವರ್ಗದ ಜನರನ್ನು ಸೆಳೆಯುವ ಶಕ್ತಿ ಹೊಂದಿದೆ ಎಂಬ ಮಾತುಗಳೇ ಈಗಾಗಲೇ ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ.

    Bharate e1541143262865

    ಟ್ರೈಲರ್ ಮಾಸ್, ಫ್ಯಾಮಿಲಿ, ಲವ್, ಕಾಮಿಡಿ ಹದವಾದ ಮಿಶ್ರಣದಂತಿದ್ದು, ದೊಡ್ಡ ತಾರಾಬಳಗವನ್ನೇ ಭರಾಟೆ ಹೊಂದಿದೆ. ಬಹುತೇಕ ಚಿತ್ರದ ಎಲ್ಲ ಕಲಾವಿದರನ್ನು ಪರಿಚಯಿಸುವ ನಿರ್ದೇಶಕ ಪ್ರಯತ್ನ ಕಾಣಬಹುದಾಗಿದೆ. ಹಾಡುಗಳು, ಮ್ಯೂಸಿಕ್ ಒಂದು ರೀತಿ ನೋಡುಗನನ್ನು ಸಮ್ಮೋಹನಗೊಳಿಸುವಂತಿದೆ. ಚಿತ್ರದ ಸೆಟ್, ವಸ್ತ್ರಾಲಂಕಾರ ಎಲ್ಲವೂ ಭಿನ್ನವಾಗಿದ್ದು, ಯುವ ಆವೇಗದ ಕಥಾ ಹಂದರದ ಮೂಲಕವೇ ಪ್ರಸಿದ್ಧಿ ಪಡೆದಿರೋ ಚೇತನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಭರಾಟೆ ಕಥೆಯನ್ನಂತೂ ರೋರಿಂಗ್ ಸ್ಟಾರ್ ಶ್ರೀಮುರಳಿಯ ಇಮೇಜಿಗೆ ತಕ್ಕುದಾಗಿಯೇ ಅವರು ಹೊಸೆದಿದ್ದಾರೆ. ಅದಕ್ಕೆ ತಕ್ಕುದಾದಂಥಾ ದೃಶ್ಯ ರೂಪವನ್ನೂ ನೀಡಿದ್ದಾರೆ.

    ಭರಾಟೆಯಲ್ಲಿ ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ ಮೂವರು ಸಹೋದರರು ಒಂದೇ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದ್ದಾರೆ. ಮೂವರು ಖಡಕ್ ಡೈಲಾಗ್, ಖದರ್ ಭರಾಟೆಯಲ್ಲಿ ಅಬ್ಬರಿಸುತ್ತಿದೆ. ಕ್ಲೈಮಾಕ್ಸ್ ಸಾಹಸ ದೃಶ್ಯಕ್ಕೆ 10 ಜನ ವಿಲನ್ಸ್ ಗಳು ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಅಭಿನಯಿಸಿ ಆರ್ಭಟಿಸುತ್ತಿದ್ದಾರೆ. ಸಾಯಿಕುಮಾರ್, ರವಿಶಂಕರ್, ಅಯ್ಯಪ್ಪ, ಅವಿನಾಶ್, ಶರತ್ ಲೋಹಿತಾಶ್ವ, ಉಗ್ರಂ ಮಂಜು, ನೀನಾಸಂ ಅಶ್ವತ್ಥ್, ದೀಪಕ್, ರಾಜವಾಡೆ ಮತ್ತು ಮನಮೋಹನ್ ಕ್ಲೈಮ್ಯಾಕ್ಸ್ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ.