Tag: Atishi

  • ದೆಹಲಿಗೆ ಕಲುಷಿತ ನೀರು ಪೂರೈಕೆ – ಸಿಎಂ ಮನೆ ಮುಂದೆ ಕೊಳಕು ನೀರು ಸುರಿದ ಸ್ವಾತಿ ಮಲಿವಾಲ್

    ದೆಹಲಿಗೆ ಕಲುಷಿತ ನೀರು ಪೂರೈಕೆ – ಸಿಎಂ ಮನೆ ಮುಂದೆ ಕೊಳಕು ನೀರು ಸುರಿದ ಸ್ವಾತಿ ಮಲಿವಾಲ್

    15 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಟ್ಯಾಂಕರ್‌ನೊಂದಿಗೆ ಬರೋದಾಗಿ ಎಚ್ಚರಿಕೆ 

    ನವದೆಹಲಿ: ರಾಷ್ಟ್ರ ರಾಜಧಾನಿಯ ನಿವಾಸಿಗಳಿಗೆ ಪೂರೈಕೆಯಾಗುತ್ತಿರುವ ನೀರಿನ ಸ್ಥಿತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷದ (AAP) ಸಂಸದೆ ಸ್ವಾತಿ ಮಲಿವಾಲ್ (Swati Maliwal), ಬಾಟಲಿಯಲ್ಲಿ ಕಲುಷಿತ ನೀರನ್ನು ತುಂಬಿಸಿ ದೆಹಲಿ ಸಿಎಂ ಅತಿಶಿಯವರ (Atishi) ನಿವಾಸದ ಹೊರಗೆ ಸುರಿದಿದ್ದಾರೆ.

    ದ್ವಾರಕಾ ನಿವಾಸಿಗಳ ಮನೆಗಳನ್ನು ಸಮೀಕ್ಷೆ ಮಾಡಿ, ಸರಬರಾಜಾಗುತ್ತಿರುವ ನೀರಿನ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲಾಗಿದೆ. ಜನರಿಗೆ ಕೊಳಕು, ದುರ್ವಾಸನೆಯ ನೀರು ಸರಬರಾಜು ಮಾಡಲಾಗುತ್ತಿದೆ. ಇದನ್ನು ಸಿಎಂ ಗಮನಕ್ಕೆ ತರಲು ಮನೆಯೊಂದರ ನಲ್ಲಿ ನೀರನ್ನು ಬಾಟಲಿಯಲ್ಲಿ ಸಂಗ್ರಹಿಸಿ ದೆಹಲಿ ಮುಖ್ಯಮಂತ್ರಿಯ ನಿವಾಸದ ಹೊರಗೆ ಸುರಿದಿದ್ದಾರೆ.

    ಬಳಿಕ ಮಾತನಾಡಿ, ಸಾಗರಪುರ, ದ್ವಾರಕಾದ ಜನರು ನೀರಿನ ಸಮಸ್ಯೆ ವಿಚಾರವಾಗಿ ನನಗೆ ಕರೆ ಮಾಡಿದ್ದರು. ನಾನು ಒಂದು ಮನೆಗೆ ಹೋದೆ, ಅಲ್ಲಿ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ನಾನು ಆ ಕಲುಷಿತ ನೀರನ್ನು ಬಾಟಲಿಯಲ್ಲಿ ತುಂಬಿಸಿ ಆ ನೀರನ್ನು ಇಲ್ಲಿಗೆ ತಂದಿದ್ದೇನೆ. ಜನರಿಗೆ 2015ರಿಂದಲೂ ಮುಂದಿನ ವರ್ಷ ಎಲ್ಲವೂ ಸರಿಹೋಗುತ್ತದೆ ಎಂದು ಕೇಳುತ್ತಲೇ ಇದ್ದೇವೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

    ಈ ಪ್ರದೇಶದಲ್ಲಿ ನೀರು ಪೂರೈಕೆಯ ಸ್ಥಿತಿ 15 ದಿನಗಳಲ್ಲಿ ಸುಧಾರಿಸದಿದ್ದರೆ, ಈಗ ಬಾಟಲಿಯಲ್ಲಿ ತಂದಿದ್ದೇನೆ. ಇನ್ನೂ ದುರ್ವಾಸನೆ ಬೀರುವ ನೀರಿನ ಟ್ಯಾಂಕರ್‌ನೊಂದಿಗೆ ಹಿಂತಿರುಗಿ ಬರುವುದಾಗಿ ಅವರು ಎಚ್ಚರಿಸಿದ್ದಾರೆ.

  • ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

    ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

    ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ (Delhi CM) ನಿವಾಸವನ್ನು ಬಿಜೆಪಿ (BJP) ಒತ್ತಡದಿಂದ ಬಲವಂತವಾಗಿ ಖಾಲಿ ಮಾಡಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ (AAP) ಆರೋಪಿಸಿದೆ.

    ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಎಎಪಿ ದೂರಿದೆ. ಈ ಆರೋಪವು ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಇದನ್ನೂ ಓದಿ: ಇವಿಎಂ ಹ್ಯಾಕ್‌ ಮಾಡಲಾಗಿದೆ: ಹರಿಯಾಣ ಸೋಲಿನ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

    Arvind Kejriwal Atishi Singh VK

    ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅತಿಶಿ ಅವರ ವಸ್ತುಗಳನ್ನು ಬಿಜೆಪಿ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಬಲವಂತವಾಗಿ ತೆಗೆಸಿದ್ದಾರೆ ಎಂದು ಎಎಪಿ ಆರೋಪಿಸಿದೆ. ಆದರೆ ಸಕ್ಸೇನಾ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

    ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್, ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದ್ದಾರೆ. ಇದನ್ನೂ ಓದಿ: ವೈಜಾಗ್ ಸ್ಟೀಲ್ ಪುನಶ್ಚೇತನ ವಿಚಾರ – ನಿರ್ಮಲಾ ಸೀತಾರಾಮನ್, ನಾಯ್ಡು ಜೊತೆಗೆ ಹೆಚ್‌ಡಿಕೆ ಚರ್ಚೆ

    ಮುಖ್ಯಮಂತ್ರಿ ಅತಿಶಿ ಅವರಿಗೆ ಈ ಮನೆಯನ್ನು (ಸಿವಿಲ್‌ ಲೈನ್ಸ್‌ನ 6, ಫ್ಲ್ಯಾಗ್‌ ಸ್ಟಾಪ್‌ ರಸ್ತೆಯಲ್ಲಿರುವ ಸಿಎಂ ನಿವಾಸ) ಇನ್ನೂ ಮಂಜೂರು ಮಾಡಿಲ್ಲ. ಅವರಿಗೆ ಮಂಜೂರು ಮಾಡಿದ ನಿವಾಸವು ಇನ್ನೂ 17 ಎಬಿ ಮಥುರಾ ರಸ್ತೆಯಾಗಿದೆ. ಎರಡು ಮನೆಗಳನ್ನು ಹೇಗೆ ಮಂಜೂರು ಮಾಡಲು ಸಾಧ್ಯ ಎಂದು ಗವರ್ನರ್‌ ಕಚೇರಿ ಮೂಲಗಳು ತಿಳಿಸಿವೆ.

  • ಮೋದಿ ತುಂಬಾ ಪವರ್‌ಫುಲ್, ಆದರೆ ದೇವರಲ್ಲ: ಮಾಜಿ ಸಿಎಂ ಕೇಜ್ರಿವಾಲ್ ವ್ಯಂಗ್ಯ

    ಮೋದಿ ತುಂಬಾ ಪವರ್‌ಫುಲ್, ಆದರೆ ದೇವರಲ್ಲ: ಮಾಜಿ ಸಿಎಂ ಕೇಜ್ರಿವಾಲ್ ವ್ಯಂಗ್ಯ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ತುಂಬಾ ಪವರ್‌ಫುಲ್, ಆದರೆ ದೇವರಲ್ಲ ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದರು.

    ಗುರುವಾರ ದೆಹಲಿ ವಿಧಾನಸಭೆಯಲ್ಲಿ ಎಎಪಿ (AAP) ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 41ನೇ ಸ್ಥಾನವನ್ನು ನೀಡಲಾಯಿತು. ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಗುರುವಾರ ದೆಹಲಿ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳು ಮನೀಷ್ ಸಿಸೋಡಿಯಾ (Manish Sisodia) ಮತ್ತು ನನ್ನನ್ನು ನೋಡಿ ದುಃಖಿತರಾಗಬೇಕು. ಪ್ರಧಾನಿ ಮೋದಿ ಅತ್ಯಂತ ಶಕ್ತಿಶಾಲಿ ವ್ಯಕ್ತಿ ಹಾಗೂ ಸಂಪನ್ಮೂಲ ವ್ಯಕ್ತಿ. ಆದರೆ ಮೋದಿ ದೇವರಲ್ಲ. ಇರುವ ದೇವರು ನಮ್ಮೊಂದಿಗಿದ್ದಾನೆ. ಇದರಿಂದ ನಾನು ಸುಪ್ರೀಂ ಕೋರ್ಟ್‌ಗೆ (Supreme Court) ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ನಟ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ – ಜೈಲಿನಲ್ಲೇ 7 ಗಂಟೆ ಡ್ರಿಲ್‌

    ಎಎಪಿಗೆ ಸಹಾಯ ಮಾಡಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೆಹಲಿಯಲ್ಲಿ ಆಡಳಿತವನ್ನು ಅಡ್ಡಿಪಡಿಸುವುದು ಬಿಜೆಪಿಯ (BJP) ಲೆಕ್ಕಾಚಾರವಾಗಿತ್ತು. ರಾಜಕೀಯ ನಡೆಯ ಭಾಗವಾಗಿ ಅವರ ಬಂಧನವಾಗಿದೆ. ರಾಜಕೀಯ ಸೇಡಿನ ಮೇಲೆ ಬಿಜೆಪಿ ಹೆಚ್ಚು ಗಮನಹರಿಸಿದೆ ಎಂದು ಕಿಡಿಕಾರಿದರು.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ದೆಹಲಿಯ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತಿದೆ ಮತ್ತು ಎಎಪಿ ನಾಯಕರನ್ನು ಸುಳ್ಳು ಆರೋಪಗಳೊಂದಿಗೆ ಗುರಿಯಾಗಿಸುವುದು ಅವರು ಉದ್ದೇಶ ಎಂದು ಆರೋಪಿಸಿದರು.

    ನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ದೆಹಲಿಯ ಪರಿಸ್ಥಿತಿಯನ್ನು ಹದೆಗಡುವಂತೆ ಮಾಡುವುದು ಬಿಜೆಪಿ ಸರ್ಕಾರ ಉದ್ದೇಶವಾಗಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ ಬಳಿಕ ದೆಹಲಿಯ ಕೆಲಸವನ್ನು ನಿಲ್ಲಿಸಿದ್ದಾರೆ. ಇದೀಗ ರಸ್ತೆಗಳು ಹಾಳಾಗಿವೆ. ಇಂದು ನಾನು ದೆಹಲಿ ವಿಶ್ವವಿದ್ಯಾಲಯದ ಮುಖ್ಯಮಂತ್ರಿ ಅತಿಶಿ ಅವರೊಂದಿಗೆ ದುರಸ್ತಿಯಾಗಬೇಕಿರುವ ರಸ್ತೆಯನ್ನು ಪರಿಶೀಲಿಸಿದ್ದೇನೆ. ಈ ರಸ್ತೆಯನ್ನು ಶೀಘ್ರದಲ್ಲೇ ದುರಸ್ತಿ ಮಾಡಲಾಗುವುದು, ಉಳಿದ ದೆಹಲಿಯ ರಸ್ತೆಗಳು ಕೂಡ ಶೀಘ್ರದಲ್ಲೇ ರಿಪೇರಿಯಾಗಲಿವೆ, ದೆಹಲಿಯ ಜನರು ಚಿಂತಿಸಬೇಕಾಗಿಲ್ಲ, ದೆಹಲಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ.

    ಮುಖ್ಯಮಂತ್ರಿಯಾಗಿ ಮೊದಲ ಕುರ್ಚಿಯನ್ನು ಹೊಂದಿದ್ದ ಕೇಜ್ರಿವಾಲ್‌ಗೆ ಅವರಿಗೆ ಗುರುವಾರ ನಡೆದ ವಿಧಾನಸಭೆಯಲ್ಲಿ 41ನೇ ಸ್ಥಾನವನ್ನು ನೀಡಲಾಗಿತ್ತು. ಜೊತೆಗೆ ಅವರ ಪಕ್ಕದ 40ನೇ ಸ್ಥಾನವನ್ನು ಮನೀಶ್ ಸಿಸೋಡಿಯಾ ಅವರಿಗೆ ನೀಡಲಾಗಿತ್ತು.ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ- ಸಾವಿನ ಸುತ್ತ ಅನುಮಾನದ ಹುತ್ತ

    ಹೊಸ ಅಬಕಾರಿ ನೀತಿ ಪ್ರಕರಣ ಆರೋಪದ ಮೇಲೆ ಜೈಲಿನಲ್ಲಿದ್ದ ಅರವಿಂದ್ ಕೇಜ್ರಿವಾಲ್ ಒತ್ತಡದಿಂದಾಗಿ ರಾಜೀನಾಮೆ ನೀಡಿದರು. ಇದೇ ಪ್ರಕರಣ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ನಾಯಕರನ್ನು ತಿಂಗಳುಗಟ್ಟಲೇ ವಿಚಾರಣೆ ನಡೆಸಲಾಗಿತ್ತು.

  • ಅಧಿಕಾರ ವಹಿಸಿಕೊಂಡ ಬಳಿಕ ಕೇಜ್ರಿವಾಲ್ ಕುರ್ಚಿಯಲ್ಲಿ ಕೂರದ ಅತಿಶಿ

    ಅಧಿಕಾರ ವಹಿಸಿಕೊಂಡ ಬಳಿಕ ಕೇಜ್ರಿವಾಲ್ ಕುರ್ಚಿಯಲ್ಲಿ ಕೂರದ ಅತಿಶಿ

    – ಕೇಜ್ರಿವಾಲರನ್ನು ಮತ್ತೆ ಈ ಸ್ಥಾನಕ್ಕೆ ತರಲು 4 ತಿಂಗಳು ಶ್ರಮಿಸುತ್ತೇನೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅತಿಶಿ ಸಿಂಗ್ (Atishi Singh) ಇಂದು (ಸೆ.23) ಸಚಿವಾಲಯಕ್ಕೆ ತೆರಳಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿ ಸ್ಥಾನದ ಕುರ್ಚಿಯಲ್ಲಿ ಕೂರದೇ ಪಕ್ಕದಲ್ಲಿ ಮತ್ತೊಂದು ಕುರ್ಚಿ ಹಾಕಿಕೊಂಡು ಕೂತು ಕಡತಗಳಿಗೆ ಸಹಿ ಹಾಕುವ ಮೂಲಕ ಸಿಎಂ (CM) ಆಗಿ ಕೆಲಸ ಆರಂಭಿಸಿದ್ದಾರೆ.

    ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಮಾಯಣ (Ramayana) ಮಹಾಕಾವ್ಯವನ್ನು ಉದಾಹರಣೆಯಾಗಿ ನೀಡಿ ಶ್ರೀರಾಮ ವನವಾಸಕ್ಕೆ ಹೋದಾಗ ಸಹೋದರ ಭರತ ರಾಮನ ಪಾದುಕೆಯನ್ನು ಸಿಂಹಾಸನದ ಮೇಲಿಟ್ಟು ಆಡಳಿತವನ್ನು ನಡೆಸಿದರು. ಅದೇ ರೀತಿ ನಾನು ಕೇಜ್ರಿವಾಲ್ ಸ್ಥಾನದಲ್ಲಿ ಕೂರುವುದಿಲ್ಲ. ಅವರನ್ನು ಮತ್ತೆ ಈ ಸ್ಥಾನಕ್ಕೆ ತರಲು ನಾಲ್ಕು ತಿಂಗಳು ಶ್ರಮಿಸುತ್ತೇನೆ ಎಂದರು.ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಈ ಕುರ್ಚಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ. ಅವರು ಹಿಂದಿರುಗುವವರೆಗೆ ಕಾಯುತ್ತದೆ ಎಂದು ಹೇಳಿದರು.

    ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಬಿಜೆಪಿಯ ಸುಷ್ಮಾ ಸ್ವರಾಜ್ ನಂತರ ಅತಿಶಿ ದೆಹಲಿಯ ಎಂಟನೇ ಮತ್ತು ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಅಕ್ರಮ ಅಬಕಾರಿ ನೀತಿಯಲ್ಲಿ ಬಂಧನವಾದ ಬಳಿಕ ಜಾಮೀನಿನ ಮೇಲೆ ಹೊರಬಂದ ಅರವಿಂದ್ ಕೇಜ್ರಿವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ (Virendra Sachdeva) ಅವರು ಅರವಿಂದ್ ಕೇಜ್ರಿವಾಲ್‌ಗೆ ಮೀಸಲಾದ ಖಾಲಿ ಕುರ್ಚಿಯನ್ನು ಪಕ್ಕದಲ್ಲಿ ಇರಿಸಿರುವ ಅತಿಶಿಯ ಇಂಗಿತವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಚ್‌ದೇವ ಅವರು ಈ ಕೃತ್ಯವನ್ನು ಸಾಂವಿಧಾನಿಕ ನಿಯಮಗಳ ಉಲ್ಲಂಘನೆ ಮತ್ತು ಮುಖ್ಯಮಂತ್ರಿ ಕಚೇರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.ಇದನ್ನೂ ಓದಿ: ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ

    ಮುಖ್ಯಮಂತ್ರಿಗಳ ಟೇಬಲ್‌ನಲ್ಲಿ ಎರಡು ಕುರ್ಚಿಗಳನ್ನು ಇಡುವುದು ಸಂವಿಧಾನ, ನಿಯಮಗಳು ಮತ್ತು ಮುಖ್ಯಮಂತ್ರಿ ಕಚೇರಿಗೆ ಅಗೌರವವಾಗಿದೆ. ಇದು ಅತಿಶಿ ಹೇಳುವಂತೆ ಇದು ಆದರ್ಶವಾದ ಕ್ರಿಯೆಯಲ್ಲ, ಆದರೆ ಇದು ಸ್ಪಷ್ಟವಾದ ಅಸ್ಪಷ್ಟತೆಯಾಗಿದೆ. ಅತಿಶಿ ಅವರು ಮುಖ್ಯಮಂತ್ರಿ ಕಚೇರಿಯ ಘನತೆಗೆ ಅಗೌರವ ತೋರಿದ್ದಾರೆ ಮತ್ತು ಈ ವರ್ತನೆಯಿಂದ ದೆಹಲಿಯ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಚ್‌ದೇವ ಟೀಕಿಸಿದ್ದಾರೆ.

  • ದೆಹಲಿ ನೂತನ ಸಿಎಂ ಆಗಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕಾರ

    ದೆಹಲಿ ನೂತನ ಸಿಎಂ ಆಗಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ (Aam Aadmi Party) ಅತಿಶಿ ಸಿಂಗ್ ((Atishi Singh) ಇಂದು (ಸೆ.21) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸೆ.21ರಂದು ಶನಿವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ (Oath Taking Ceremony) ನಡೆಯಲಿದ್ದು, ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

    ಈ ಮೊದಲು ಸೆ.26-27ರ ವಿಶೇಷ ಅಧಿವೇಶನ ವೇಳೆ ಪ್ರಮಾಣ ವಚನ ಸ್ವೀಕರಿಸಲು ಚಿಂತಿಸಿತ್ತು. ಆದರೆ ಲೆಫ್ಟಿನೆಂಟ್ ಗವರ್ನರ್ ಸಲಹೆ ಮೇರೆಗೆ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಬಿಜೆಪಿಯ ಸುಷ್ಮಾ ಸ್ವರಾಜ್ (Sushma Swaraj), ಕಾಂಗ್ರೆಸ್‌ನ ಶೈಲಾ ದೀಕ್ಷಿತ್ (Sheila Dikshit) ಬಳಿಕ ಎಎಪಿಯ (AAP) ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿ (Woman Chief Minister) ಹಾಗೂ ದೆಹಲಿಯ ಅತಿ ಕಿರಿಯ ಮುಖ್ಯಮಂತ್ರಿಯಾಗಲಿದ್ದಾರೆ (Youngest Chief Minister).

    ಎಎಪಿ ಆರಂಭದಲ್ಲಿ ಅತಿಶಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕೆಂದು ಯೋಜಿಸಿತ್ತು. ಬಳಿಕ ಮಂತ್ರಿಮಂಡಲದೊಂದಿಗೆ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಲಾಗಿದೆ. ಹಿಂದಿನ ಅರವಿಂದ್ ಕೇಜ್ರಿವಾಲ್ (Arvind Kejrival) ಸರ್ಕಾರದಲ್ಲಿ ಸಚಿವರಾಗಿದ್ದ ಎಎಪಿ ನಾಯಕರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರು ಸಚಿವರಾಗಿ ಮುಂದುವರೆಯಲಿದ್ದು, ಪಕ್ಷದ ಇಬ್ಬರು ಶಾಸಕರನ್ನು ಸಹ ಹೊಸ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲಾಗುವುದು. ಶಾಸಕ ಮುಖೇಶ್ ಅಹ್ಲಾವತ್ ಅವರು ಹೊಸದಾಗಿ ಅತಿಶಿ ಅವರ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

    ಮಂಗಳವಾರ ಹುದ್ದೆಗೆ ರಾಜೀನಾಮೆ ನೀಡಿದ ಅರವಿಂದ್ ಕೇಜ್ರಿವಾಲ್ ಅವರಿಂದ ಅತಿಶಿ ಅಧಿಕಾರ ಸ್ವೀಕರಿಸಲಿದ್ದಾರೆ. ಅತಿಶಿ ದೆಹಲಿ ಅಸೆಂಬ್ಲಿಯಲ್ಲಿ ಕಲ್ಕಾಜಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ ಮತ್ತು ದೆಹಲಿ ಸರ್ಕಾರದಲ್ಲಿ ಅತಿ ಹೆಚ್ಚು ಖಾತೆಗಳನ್ನು ಹೊಂದಿದ್ದಾರೆ.ಇದನ್ನೂ ಓದಿ: ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ

  • ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

    ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಜ್ರಿವಾಲ್‌ಗೆ ದೆಹಲಿ ಸಚಿವರು ಸಾಥ್ ನೀಡಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ (Atishi) ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ಯುವಕ ಪಾರು

    ATISHI 1

    ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (AAP) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

    ನಾನು ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ತಮ್ಮ ಭಾಷಣದಲ್ಲಿ ಕೇಜ್ರಿವಾಲ್ ಗುಡುಗಿದ್ದರು. ಇದನ್ನೂ ಓದಿ: ದೇಶದಲ್ಲಿ ಅ.1 ರವರೆಗೆ ‘ಬುಲ್ಡೋಜರ್‌ ಕಾರ್ಯಾಚರಣೆ’ಗೆ ಸುಪ್ರೀಂ ತಡೆ

  • ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ನವದೆಹಲಿ: ಆಮ್‌ ಆದ್ಮಿ ಪಕ್ಷದ ನಾಯಕರೂ ಆಗಿರುವ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. 48 ಗಂಟೆಗಳ ಒಳಗಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇನ್ನೂ 24 ಗಂಟೆ ಬಾಕಿ ಉಳಿದಿದೆ. ಈ ನಡುವೆ ದೆಹಲಿಯ ಸಿಎಂ ಗದ್ದುಗೆಗೆ ಪೈಪೋಟಿ ಶುರುವಾಗಿದೆ.

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Liquor Policy Case) ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇದೇ ಸೆಪ್ಟೆಂಬರ್‌ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆ ಬಳಿಕ ಮೊದಲ ಭಾಷಣ ಮಾಡಿದ ಕೇಜ್ರಿವಾಲ್‌ ರಾಜೀನಾಮೆ ಘೋಷಿಸಿದರು. ಅಲ್ಲದೇ ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ನಡುವೆ ಆಪ್‌ನಲ್ಲೇ ಇರುವ ದಿಗ್ಗಜ ನಾಯಕರ ನಡುವೆ ಪೈಪೋಟಿ ಶುರುವಾಗಿದೆ.

    Arvind Kejriwal Out From Jail

    ಸದ್ಯ ಸಿಎಂ ರೇಸ್‌ನಲ್ಲಿ ಸಚಿವೆ ಅತಿಶಿ (Atishi), ಮೂರು ಬಾರಿ ಶಾಸಕರಾಗಿರುವ ಸೌರಭ್ ಭಾರದ್ವಾಜ್, ರಾಘವ್‌ ಛಡ್ಡಾ, ಕೈಲಾಶ್‌ ಗೆಹ್ಲೋಟ್‌ ಹಾಗೂ ಸಂಜಯ್‌ ಸಿಂಗ್‌ ಅವರ ಹೆಸರು ಕೇಳಿಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ದೆಹಲಿಗೆ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: Viral Video | ಜಮ್ಮು-ಕಾಶ್ಮೀರದಲ್ಲಿ ಉಗ್ರರು ಸೇನೆ ನಡುವೆ ಗುಂಡಿನ ಚಕಮಕಿ – ರಕ್ಷಣೆಗಾಗಿ ಓಡಿದ ಭಯೋತ್ಪಾದಕ!

    2025ರ ಫೆಬ್ರವರಿಯಲ್ಲಿ ದೆಹಲಿ ಚುನಾವಣೆ:
    ಮುಂದಿನ ನವೆಂಬರ್‌ನಲ್ಲೇ ಮಹಾರಾಷ್ಟ್ರ ಚುನಾವಣೆಯ ಜೊತೆಗೆ ದೆಹಲಿ ಚುನಾವಣೆ ನಡೆಸುವಂತೆ ಕೇಜ್ರಿವಾಲ್‌ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದ್ರೆ ಆಯೋಗ ಮನವಿ ತಿರಸ್ಕರಿಸಿದ್ದು, 2025ರ ಫೆಬ್ರವರಿಯಲ್ಲಿ ದೆಹಲಿಯ ವಿಧಾನಸಭಾ ಚುನಾವಣೆ ನಡೆಯಲಿದೆ.

    AAP Rally arvind kejriwal

    ಈ ನಡುವೆ ಮಾತನಾಡಿರುವ ಸಿಎಂ ಕೇಜ್ರಿವಾಲ್‌, ಮಾಡಿ ಡಿಸಿಎಂ ಮನೀಶ್ ಸಿಸೋಡಿಯಾ ಅವರೊಂದಿಗೆ ನಾನು ಜನರ ಬಳಿಗೆ ಹೋಗುತ್ತೇನೆ. ಜನರ ತೀರ್ಪು ಪಡೆದ ನಂತರವೇ ಕಚೇರಿಗೆ ಮರಳುತ್ತೇನೆ ಎಂದು ಗುಡುಗಿದ್ದಾರೆ. ಇದನ್ನೂಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    Atishi Arvind Kejriwal 1

    ಕೇಸ್‌ ಹಾಕಿದ್ರೆ ರಾಜೀನಾಮೆ ಕೊಡಬೇಡಿ:
    ಭಾನುವಾರ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕೇಜ್ರಿವಾಲ್‌, ಪ್ರಜಾಪ್ರಭುತ್ವ ಉಳಿಸುವ ಉದ್ದೇಶದಿಂದ ಈ ಹಿಂದೆ ಬಂಧನಕ್ಕೊಳಗಾಗಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ ಎಂದ ಅವರು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಉಲ್ಲೇಖಿಸಿದ್ದರು. ನಾನು ಬಿಜೆಪಿಯೇತರರಿಗೆ ಮನವಿ ಮಾಡಲು ಬಯಸುತ್ತೇನೆ, ಅವರು ನಿಮ್ಮ ವಿರುದ್ಧ ಪ್ರಕರಣ ದಾಖಲಿಸಿದರೆ ರಾಜೀನಾಮೆ ನೀಡಬೇಡಿ. ಇದು ಅವರ ಹೊಸ ಆಟ ಎಂದು ಕರೆ ನೀಡಿದ್ದರು.

    ಇದು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಗಿಂತ ಹೆಚ್ಚು ಸರ್ವಾಧಿಕಾರಿ ಆಡಳಿತವಾಗಿದೆ. ಕೇಂದ್ರ ಸರ್ಕಾರ ಏನೇ ಪಿತೂರಿ ಮಾಡಿದರೂ ನಮ್ಮ ಸಂಕಲ್ಪ ಮುರಿಯಲು ಸಾಧ್ಯವಿಲ್ಲ, ರಾಷ್ಟ್ರಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಮುಂಬೈ ಮೂಲದ ಮಾಡೆಲ್‍ಗೆ ಕಿರುಕುಳ – ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್

  • ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

    ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಮಳೆ ಸುರಿದಿದ್ದು, ಶುಕ್ರವಾರ ಸುರಿದ ಭಾರೀ (Rain) ಮಳೆಯಿಂದಾಗಿ ಮೃಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ದೆಹಲಿ ಸರ್ಕಾರವು (Delhi Government) ಭಾನುವಾರ ಘೋಷಿಸಿದೆ.

    ಕಂದಾಯ ಇಲಾಖೆಗೆ ಅಧಿಕೃತ ಸಂವಹನದಲ್ಲಿ ದೆಹಲಿ ಹಣಕಾಸು ಸಚಿವ ಅತಿಶಿ (Atishi), ಜೂನ್ 28 ರಂದು ಸುರಿದ ವಿಪರೀತ ಮಳೆಗೆ ಸಾವು-ನೋವುಗಳು ಸಂಭವಿಸಿದೆ. ಹೀಗಾಗಿ ಭಾರೀ ಮಳೆಗೆ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    Minister Atishi

    ಈ ಸಂಬಂಧ ಅತಿಶಿ ತಮ್ಮ ಎಕ್ಸ್‌ ಖಾತೆಯಲ್ಲಿ, ಜೂನ್ 28 ರಂದು ಹಲವು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. 24 ಗಂಟೆಗಳಲ್ಲಿ 228 ಮಿ.ಮೀ ತೀವ್ರ ಮಳೆಯ ನಂತರ, ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಾಗುವುದು. ಈ ಪರಿಹಾರವು ಮೃತರ ಕುಟುಂಬಗಳಿಗೆ ತ್ವರಿತವಾಗಿ ತಲುಪುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಎಲ್ಲೆಲ್ಲಿ ಏನೇನಾಗಿದೆ..?: ಎರಡು ದಿನಗಳ ಮುಂಗಾರು ಮಳೆಗೆ ಸುಮಾರು 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಾಯುವ್ಯ ದೆಹಲಿಯ ಬದ್ಲಿಯಲ್ಲಿ ಶನಿವಾರ ಇಬ್ಬರು ಬಾಲಕರು ನೀರು ತುಂಬಿದ್ದ ಅಂಡರ್‌ಪಾಸ್‌ನಲ್ಲಿ ಮುಳುಗಿ ಸಾವನ್ನಪ್ಪಿರುವುದು ಸೇರಿದಂತೆ ಕೆಲವು ಪ್ರಮುಖ ಘಟನೆಗಳು ನಡೆದಿದೆ. ಶುಕ್ರವಾರ ಸುರಿದ ಭಾರೀ ಮಳೆಗೆ ಅಂಡರ್‌ಪಾಸ್‌ ಜಲಾವೃತವಾಗಿತ್ತು.

    DELHI RAINS 2

    ಓಖ್ಲಾದಲ್ಲಿ 60 ವರ್ಷದ ವ್ಯಕ್ತಿ ದಿಗ್ವಿಜಯ್ ಕುಮಾರ್ ಚೌಧರಿ ಜಲಾವೃತಗೊಂಡ ಅಂಡರ್‌ಪಾಸ್‌ನಲ್ಲಿ ತನ್ನ ಸ್ಕೂಟರ್‌ನೊಂದಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಲ್ಲದೆ ಜೂನ್ 28 ರಂದು ಸರಿದ ಭಾರೀ ಮಳೆಗೆ ವಸಂತ ವಿಹಾರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋಡೆಯ ಅವಶೇಷಗಳಿಂದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಆರೋಗ್ಯ – ಆಪ್‌ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

    ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಆರೋಗ್ಯ – ಆಪ್‌ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಸಮರ್ಪಕ ನೀರಿನ ಪೂರೈಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿಗೆ ಉಪವಾಸ ಸತ್ಯಾಗ್ರಹ (Hunger Strike0 ಆರಂಭಿಸಿರುವ ಸಚಿವೆ ಅತಿಶಿ (Minister Atishi) ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಮಂಗಳವಾರ ನಸುಕಿನ ಜಾವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು (ಮಂಗಳವಾರ) ಮುಂಜಾನೆ ಅತಿಶಿ ಅವರನ್ನು ರಾಷ್ಟ್ರ ರಾಜಧಾನಿಯ ಲೋಕನಾಯಕ ಜೈ ಪ್ರಕಾಶ್ (LNJP) ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಶಿ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 5ನೇ ದಿನಕ್ಕೆ ಕಾಲಿಟ್ಟಿದೆ. ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    Delhi Water Crisis 2

    ವೈದರ ಸಲಹೆ ತಿರಸ್ಕಾರ:
    ಉಪವಾಸ ಸತ್ಯಾಗ್ರಹ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಆದರೂ ವೈದ್ಯರ ಸಲಹೆ ತಿರಸ್ಕರಿಸಿದ ಸಚಿವೆ ಅತಿಶಿ ಆರೋಗ್ಯ (Health) ಹದಗೆಟ್ಟಿದ್ದರೂ, ಹರಿಯಾಣವು (Haryana) ದೆಹಲಿಯ ನ್ಯಾಯಯುತವಾದ ನೀರನ್ನು (Delhi Water Crisis) ಬಿಡುಗಡೆ ಮಾಡುವವರೆಗೆ ಅನಿರ್ದಿಷ್ಟ ಉಪವಾಸ ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದರು. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸ ಮುಂದುವರಿಸುತ್ತೇನೆ ಎಂದು ಅತಿಶಿ ಕಳೆದ ಒಂದು ದಿನದ ಹಿಂದೆಯಷ್ಟೇ ಕೂಗಿ ಹೇಳಿದ್ದರು.

    ಈ ನಡುವೆ ದೆಹಲಿ ಕ್ಯಾಬಿನೆಟ್ ಮಂತ್ರಿಗಳು ಜಂಗ್ಪುರದ ಉಪವಾಸ ಸತ್ಯಾಗ್ರಹ ಸ್ಥಳದಲ್ಲಿ ಸಭೆ ನಡೆಸಿದ್ದರು ಮತ್ತು ಪರಿಹಾರ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದರು. ಎಎಪಿ ಅತಿಶಿ ಅವರ ಉಪವಾಸ ಬೆಂಬಲಿಸಿ ಕ್ಯಾಂಡಲ್‌ಲೈಟ್ ಮೆರವಣಿಗೆ ಮಾಡಲು ಘೋಷಿಸಲಾಗಿದೆ.

    Delhi Water Crisis 3

    ಬೇಡಿಕೆಯೇನು?
    ರಾಷ್ಟ್ರ ರಾಜಧಾನಿಗೆ ಸಮರ್ಪಕ ನೀರಿನ ಪೂರೈಸುವಂತೆ ಆಗ್ರಹಿಸಿ ಇದೇ ತಿಂಗಳ ಜೂನ್‌ 22ರಂದು ಸಚಿವೆ ಅತಿಶಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ದೆಹಲಿಗೆ ಒಟ್ಟು 1005 MGD ನೀರಿನ ಅಗತ್ಯವಿದೆ, ಅದರಲ್ಲಿ 613 MGD ಹರಿಯಾಣದ ಮೂಲವಾಗಿದೆ. ಕಳೆದ ಕೆಲ ವಾರಗಳಲ್ಲಿ ಈ ಮಟ್ಟದ ನೀರಿನ ಪೂರೈಕೆಯು ಗಣನೀಯವಾಗಿ ಕಡಿಮೆಯಾಗಿದೆ. ಕೇವಲ 513 MGD ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು MGD ನೀರು 28,500 ಜನರ ಬಳಕೆಗೆ ಬರಲಿದೆ. ಹರಿಯಾಣ 100 MGD ಕಡಿಮೆ ನೀರನ್ನು ನೀಡಿದರೆ 28 ಲಕ್ಷಕ್ಕೂ ಹೆಚ್ಚು ಜನರಿಗೆ ದಿನದ ನೀರಿನ ಕೊರತೆಯಾಗಲಿದೆ ಹಾಗಾಗಿ ಸಮರ್ಪಕವಾಗಿ ನೀರು ಪೂರೈಕೆ ಆಗಬೇಕು ಎಂಬುದು ಅವರ ಆಗ್ರಹವಾಗಿದೆ.

    Delhi Water Crisis 1

    ಕಳೆದ ಶುಕ್ರವಾರವೂ ಸಹ ಹರಿಯಾಣವು ದೆಹಲಿಗೆ 110 ಎಂಜಿಡಿ ಕಡಿಮೆ ನೀರನ್ನು ಕಳುಹಿಸಿದೆ, ನಾನು ದೆಹಲಿಯ ನೀರಿನ ಸರಿಯಾದ ಪಾಲನ್ನು ಪಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರನ್ನು ನಿರ್ಲಕ್ಷಿಸಿದೆ. ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ನನಗೆ ಬೇರೆ ದಾರಿಯೇ ಇಲ್ಲ ಎಂದು ಅತಿಶಿ ಹೇಳಿದ್ದರು.

  • ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ನವದೆಹಲಿ: ನೀರಿನ ಬಿಕ್ಕಟ್ಟು ಇತ್ಯರ್ಥಪಡಿಸಲು (Delhi Water Crisis) ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸದ ಹಿನ್ನೆಲೆ ಸಚಿವೆ ಅತಿಶಿ ಆರಂಭಿಸಿರುವ ಉಪವಾಸ ಸತ್ಯಾಗ್ರಹ (Hunger Strike) ಎರಡನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿಯ 28 ಲಕ್ಷ ಜನರಿಗೆ ಹರಿಯಾಣದಿಂದ ತಮ್ಮ ಪಾಲಿನ ನೀರು ಸಿಗದವರೆಗೂ ಉಪವಾಸ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

    ದೆಹಲಿಯಲ್ಲಿ ನೀರಿನ ಕೊರತೆಯಾಗಿದ್ದು ನಿಗದಿತ ಪ್ರಮಾಣದ ನೀರು ಬಿಡದೇ ಹರಿಯಾಣ ಮತ್ತು ಹಿಮಾಚಲಪ್ರದೇಶ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ಮೋದಿ ಅವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಅತಿಶಿ (Atishi) ಆಗ್ರಹಿಸುತ್ತಿದ್ದಾರೆ.

    Delhi Water Crisis 3

    ಎರಡನೇ ದಿನ ಉಪವಾಸ ಆರಂಭಕ್ಕೂ ಮುನ್ನ ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು ಹೋರಾಟ ಮುಂದುವರಿಸುವುದಾಗಿ ಹೇಳಿದರು. ದೆಹಲಿಗೆ ಒಟ್ಟು 1005 MGD ನೀರಿನ ಅಗತ್ಯವಿದೆ, ಅದರಲ್ಲಿ 613 MGD ಹರಿಯಾಣದ ಮೂಲವಾಗಿದೆ. ಕಳೆದ ಕೆಲ ವಾರಗಳಲ್ಲಿ ಈ ಮಟ್ಟದ ನೀರಿನ ಪೂರೈಕೆಯು ಗಣನೀಯವಾಗಿ ಕಡಿಮೆಯಾಗಿದೆ. ಕೇವಲ 513 MGD ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು MGD ನೀರು 28,500 ಜನರ ಬಳಕೆಗೆ ಬರಲಿದೆ. ಹರಿಯಾಣ 100 MGD ಕಡಿಮೆ ನೀರನ್ನು ನೀಡಿದರೆ 28 ಲಕ್ಷಕ್ಕೂ ಹೆಚ್ಚು ಜನರಿಗೆ ದಿನದ ನೀರಿನ ಕೊರತೆಯಾಗಲಿದೆ. ಇದನ್ನೂ ಓದಿ: ಹಣಕಾಸು ಆಯೋಗದ ಶಿಫಾರಸಿನ ಅನುದಾನವನ್ನು ಕರ್ನಾಟಕಕ್ಕೆ ನೀಡಿ – ಕೇಂದ್ರದ ಮುಂದೆ ರಾಜ್ಯ ಸರ್ಕಾರ ಡಿಮ್ಯಾಂಡ್!

    Delhi Water Crisis 1

    ಶುಕ್ರವಾರ ಹರಿಯಾಣವು ದೆಹಲಿಗೆ 110 ಎಂಜಿಡಿ ಕಡಿಮೆ ನೀರನ್ನು ಕಳುಹಿಸಿದೆ, ನಾನು ದೆಹಲಿಯ ನೀರಿನ ಸರಿಯಾದ ಪಾಲನ್ನು ಪಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರನ್ನು ನಿರ್ಲಕ್ಷಿಸಿದೆ. ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ನನಗೆ ಬೇರೆ ದಾರಿಯೇ ಇಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಉಪವಾಸ ಸತ್ಯಾಗ್ರಹದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ನೀರು ಪೂರೈಕೆಯ ವಿಷಯದಲ್ಲಿ ನಡೆಯುತ್ತಿರುವ ತಾರತಮ್ಯದ ಆರೋಪಗಳನ್ನು ಅವರು ನಿರಾಕರಿಸಿದರು. ನೀರಿನ ಬಿಕ್ಕಟ್ಟನ್ನು ʻಅಸಮರ್ಪಕ ಮತ್ತು ಅಸಮರ್ಥʼ ಎಂದು ಆಪ್‌ ಸರ್ಕಾರವನ್ನು ದೂಷಿಸಿದರು. ಈ ನಡುವೆ ದೆಹಲಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ದೆಹಲಿಯ ಜಲ ಬೋರ್ಡ್ ಎದರು ಪ್ರತಿಭಟನೆ ನಡೆಸಿದರು. ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಲಾಯಿತು. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ