Tag: Industries

  • ನದಿಗೆ ಪೈಪ್ ಇಟ್ಟು ಕಾರ್ಖಾನೆಗಳಿಂದ ತುಂಗಾ ನೀರು ಗುಳುಂ – ಅಕ್ರಮ ಗೊತ್ತಿದ್ರೂ ಅಧಿಕಾರಿಗಳು ಮಾತ್ರ ಸೈಲೆಂಟ್

    ನದಿಗೆ ಪೈಪ್ ಇಟ್ಟು ಕಾರ್ಖಾನೆಗಳಿಂದ ತುಂಗಾ ನೀರು ಗುಳುಂ – ಅಕ್ರಮ ಗೊತ್ತಿದ್ರೂ ಅಧಿಕಾರಿಗಳು ಮಾತ್ರ ಸೈಲೆಂಟ್

    ಕೊಪ್ಪಳ: ಬಳ್ಳಾರಿ, ಕೊಪ್ಪಳ ರಾಯಚೂರು ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿದ್ದು ಇದಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

    ತುಂಗಭದ್ರಾ ಜಲಾಶಯದಲ್ಲಿ ಕಾರ್ಖಾನೆಗಳು ಮೋಟಾರ್ ಅಳವಡಿಸಿ ಹಗಲು ರಾತ್ರಿ ಎನ್ನದೇ ನೀರು ಕಳ್ಳತನ ಮಾಡುತ್ತಿದಾರೆ. ಇದಕ್ಕೆ ಪುಷ್ಠಿ ಎನ್ನುವಂತೆ ತುಂಗೆಯ ಹಿನ್ನೀರಿನಲ್ಲಿ ದೊಡ್ಡ ದೊಡ್ಡ ಪೈಪ್ ಅಳವಡಿಸಿ ನೀರು ಕದಿಯಲಾಗುತ್ತಿದೆ.

    ಕೊಪ್ಪಳ ತಾಲೂಕಿನ ಕಿರ್ಲೋಸ್ಕರ್, ಹೊಸಪೇಟೆ ಸ್ಟೀಲ್ ಕಂಪನಿಗಳು ಸೇರಿದಂತೆ ಹಲವು ಕಾರ್ಖಾನೆಗಳಿಗೆ ನೀರು ಹೋಗುತ್ತಿದೆ. ಇದಕ್ಕೆ ನೇರವಾಗಿ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    kpl water theft 3

    ಕಳೆದ ನವೆಂಬರ್‍ನಲ್ಲಿ ಮುನಿರಾಬಾದ್‍ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಎರಡನೇ ಬೆಳೆಗೆ ನೀರಿಲ್ಲ ಎಂದು ತೀರ್ಮಾನಿಸಿ ರೈತರಿಗೆ ಜನಪ್ರತಿನಿಧಿಗಳು ಶಾಕ್ ನೀಡಿದ್ದರು. ಆದರೆ ಈ ಕಡೆ ಕಾರ್ಖಾನೆಗಳಿಗೆ ನೀರು ಹೋಗುತ್ತಿರುವುದುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಸದ್ಯ ತುಂಗಭದ್ರಾ ಡ್ಯಾಂನಲ್ಲಿ 36 ಟಿಎಂಸಿ ನೀರಿದ್ದು, ಇದೇ ರೀತಿ ಕಾರ್ಖಾನೆಗಳು ನೀರು ಕದಿಯುತ್ತಿದ್ದರೆ ಬೇಸಿಗೆಯಲ್ಲಿ ಮೂರು ಜಿಲ್ಲೆಯ ಜನರಿಗೆ ನೀರಿನ ಸಮಸ್ಯೆಯಾಗುವ ಸಾಧ್ಯತೆಯಿದೆ. ಕಾರ್ಖಾನೆಗಳು ನೀರನ್ನು ಕಳ್ಳತನ ಮಾಡುತ್ತಿದ್ದರೂ ಅಧಿಕಾರಿಗಳು ಬಂದ್ ಮಾಡುವ ಕೆಲಸ ಮಾಡುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿಕೆಶಿ ಮನೇಲಿ ತಿಂಡಿ ತಿಂದ್ದಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆನೋ ಅಂತ ಗೊತ್ತಿಲ್ಲ: ಕೆ.ಜೆ.ಜಾರ್ಜ್

    ಡಿಕೆಶಿ ಮನೇಲಿ ತಿಂಡಿ ತಿಂದ್ದಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆನೋ ಅಂತ ಗೊತ್ತಿಲ್ಲ: ಕೆ.ಜೆ.ಜಾರ್ಜ್

    ಕೋಲಾರ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆಯಲ್ಲಿ ತಿಂಡಿ ಮಾಡಿದ್ದು ಬೆಳ್ಳಿ ತಟ್ಟೆಯೋ, ಯಾವ ತಟ್ಟೆಯೋ ಅಂತಾ ಗೊತ್ತಿಲ್ಲ ಎಂದು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ವೇಮಗಲ್ ಹಾಗೂ ನರಸಾಪುರ ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಸಚಿವ ಡಿ.ಕೆ.ಶಿವಕುಮಾರ್ ಮನೆಯಲ್ಲಿ ತಿಂಡಿ ಮಾಡಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆ ಅಂತಾ ಗೊತ್ತಿಲ್ಲ. ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕರು. ಅವರಿಗೆ ಒಂದು ಸ್ಥಾನ ಇದೆ. ಹೀಗಾಗಿ ಬ್ರೇಕ್ ಫಾಸ್ಟ್‍ಗೆ ಹೋದ ಕಡೆಯೆಲ್ಲೆಲ್ಲಾ ಅವರನ್ನ ಕರೆಯಲು ಸಾಧ್ಯವಿಲ್ಲ. ನಿನ್ನೆ ಸಭೆ ನಡೆದಿಲ್ಲ. ಸಚಿವರುಗಳ ಮುಖಾಮುಖಿ ಚರ್ಚೆ ಅಷ್ಟೇ ಎನ್ನುವ ಮೂಲಕ ಸಿದ್ದರಾಮಯ್ಯನವರ ಗೈರಿಗೆ ಸಮಾಜಾಯಿಸಿ ನೀಡಿದರು.

    vlcsnap 2018 10 05 14h45m59s587

    ಪಿ.ಆರ್.ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಎಸಿಬಿ ಕೆಲಸ ಯಾರು ತಪ್ಪು ಮಾಡುತ್ತಾರೋ ಅವರು ಶಿಕ್ಷೆ ಅನುಭವಿಸುತ್ತಾರೆ. ಎಸಿಬಿ ಅಧಿಕಾರಿಗಳು ಸ್ವತಂತ್ರವಾಗಿ ಕ್ರಮ ಕೈಗೊಳ್ಳಲಿ ಎಂದರು.  ಇದನ್ನೂ ಓದಿ: ಡಿಕೆಶಿ ನಿವಾಸದಲ್ಲಿ ಬೆಳ್ಳಿ ತಟ್ಟೆ, ಕಪ್ ಗಳಲ್ಲಿ ಉಪಹಾರ ಸೇವಿಸಿದ ಕೈ ನಾಯಕರು

    ಸಿಎಂ ಕುಮಾರಸ್ವಾಮಿ ದೆಹಲಿ ಭೇಟಿಯಲ್ಲಿ ವಿಶೇಷ ಏನು ಇಲ್ಲ. ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಎಚ್‍ಡಿಕೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ನಾನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಲ್ಲ ಎಂದು ತಿಳಿಸಿದರು.

    rameela new

    ಇದೇ ವೇಳೆ ಬಿಬಿಎಂಪಿ ಉಪಮೇಯರ್ ರಮೀಳಾ ನಿಧನಕ್ಕೆ ಸಂತಾಪ ಸೂಚಿಸಿದ ಜಾರ್ಜ್, ರಮೀಳಾ ಅವರ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿ ಕೊಡಲಿ, ಅವರು ಒಳ್ಳೆಯ ಲೀಡರ್ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿವೃದ್ಧಿ ಎಲ್ಲಿ ಆಗಿದೆ: ಕೇಂದ್ರದ ವಿರುದ್ಧ ಮನಮೋಹನ್ ಸಿಂಗ್ ಗರಂ

    ಅಭಿವೃದ್ಧಿ ಎಲ್ಲಿ ಆಗಿದೆ: ಕೇಂದ್ರದ ವಿರುದ್ಧ ಮನಮೋಹನ್ ಸಿಂಗ್ ಗರಂ

    ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಎಲ್ಲಾ ರಂಗದಲ್ಲು ವಿಫಲವಾಗಿದೆ. ಅಭಿವೃದ್ಧಿ ಅಂತ ಹೇಳುತ್ತೆ ಆದ್ರೆ ಎಲ್ಲಿಯು ಅಭಿವೃದ್ಧಿ ಕಾಣುತ್ತಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಆರ್ಥಿಕ ನೀತಿಗಳು ಸಾಮಾನ್ಯ ಜನರ ಮೇಲೆ ಹೆಚ್ಚು ಪರಿಣಾಮಗಳನ್ನು ಬೀರುತ್ತದೆ. ಕೇಂದ್ರದ ನೋಟು ನಿಷೇಧ ಮತ್ತು ಜಿಎಸ್‍ಟಿ ಅನುಷ್ಠಾನದಲ್ಲಿ ಆಗಿರುವ ನ್ಯೂನತೆಗಳಿಂದ ಜನರು ಹೆಚ್ಚು ಸಮಸ್ಯೆಗೀಡಾಗಿದ್ದಾರೆ. ಸಾವಿರಾರು ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರದ ನಿರ್ಧಾರದಿಂದ ಮಧ್ಯಮ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳು ಅವನತಿಯತ್ತ ಹೋಗಿವೆ. ನಮ್ಮ ಸರ್ಕಾರ ಇದ್ದಾಗ ಪೆಟ್ರೋಲ್ ದರ ತುಂಬ ಕಡಿಮೆಯಿತ್ತು. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದೆ. ಹೆಚ್ಚು ತೆರಿಗೆಯನ್ನು ಪಡೆಯುತ್ತಿರುವ ಕೇಂದ್ರ ಸರ್ಕಾರ ದೇಶದ ಜನರಿಗೆ ಉತ್ತರಿಸಬೇಕಾಗಿದೆ ಎಂದು ಕಿಡಿಕಾರಿದರು.

    ಕಳೆದ 4 ವರ್ಷಗಳಿಂದ ಮೋದಿಯವರು ಕಾಂಗ್ರೆಸ್ ಸರ್ಕಾರವನ್ನ ತೆಗಳುವ ಕೆಲಸ ಬಿಟ್ರೆ ಬೇರೆನೂ ಮಾಡಿಲ್ಲ. ದೇಶದ ಕೃಷಿ ಬೆಳವಣಿಗೆಗೆ ಒತ್ತು ನೀಡದೇ ಇರುವುದರಿಂದ ಆ ಕ್ಷೇತ್ರದ ಬೆಳವಣಿಗೆ ಹಿನ್ನೆಡೆ ಕಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬೆಂಗಳೂರಿನಲ್ಲಿ ಯುವಕರ ಸಂಖ್ಯೆ ಜಾಸ್ತಿ ಇದೆ, ದೇಶದ ಸ್ಟಾರ್ಟ್ ಅಪ್ ಕ್ಯಾಪಿಟಲ್. ಟೆಂಡರ್ ಶ್ಯೂರ್ ರಸ್ತೆಗಳು ಪ್ರಪಂಚದಲ್ಲಿಯೇ ಹೆಸರು ಮಾಡಿದೆ. ಮೆಟ್ರೊಗಾಗಿ ಹೆಚ್ಚಿನ ಅನುದಾನವನ್ನ ರಾಜ್ಯ ಸರ್ಕಾರ ನೀಡಿದೆ. ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಕೈಗಾರಿಕೆಗಳು ಬೆಂಗಳೂರಿನಲ್ಲಿ ಸ್ಥಾಪನೆಯಾಗಲು ಒತ್ತು ನೀಡಿದೆ. ಗುಜರಾತ್‍ಗಿಂತ ಕೈಗಾರಿಕೆಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂದೆ ಇದೆ. ಉದ್ಯೋಗ ಸೃಷ್ಟಿಯಲ್ಲೂ ಸಹ ದೇಶಕ್ಕೆ ಬೆಂಗಳೂರು ಮಾದರಿಯಾಗಿದೆ. ನಾವು ಮಾಡಿರುವ ಒಳ್ಳೆಯ ಕೆಲಸಗಳು ಬಿಜೆಪಿಯವರ ಕಣ್ಣಿಗೆ ಕಂಡಿಲ್ಲ ಎಂದು ಲೇವಡಿಮಾಡಿದರು.