Tag: Puneet Rajkumar

  • 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    – 6 ಸಾವಿರ ಅನಕ್ಷರಸ್ಥ ಖೈದಿಗಳಿಗೆ ಜೈಲಲ್ಲೇ ಶಿಕ್ಷಣ, ಇಂದಿನಿಂದಲೇ ಜಾರಿ

    ಚಿಕ್ಕಮಗಳೂರು: ನಟ ಪುನೀತ್ ರಾಜ್‍ಕುಮಾರ್ ಸಮಾಧಿ ಬಳಿ ಈಗಲೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದರೆ ಜನ ಮುಗಿಬೀಳುತ್ತಾರೆ. ಹಾಗಾಗಿ, ಕುಟುಂಬದ ಎಲ್ಲ ವಿಧಿ-ವಿಧಾನ ಮುಗಿದ ಬಳಿಕ ಸುತ್ತಲೂ ಬೇಲಿ ಹಾಕಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

    Araga Jnanendra 2

    ಚಿಕ್ಕಮಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐದಾರು ದಿನದಲ್ಲಿ ಎಲ್ಲ ಕೆಲಸ ಮುಗಿಸಿ ಪುನೀತ್ ಸಮಾಧಿಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದರು.

    ಬೆಳಗಾವಿಯಲ್ಲಿ ಎಂಇಎಸ್ ಅವಹೇಳನಕಾರಿ ಪೋಸ್ಟ್ ಬಗ್ಗೆ ಮಾತನಾಡಿದ ಅವರು, ಅದೇ ಅವರಿಗೆ ಜೀವಾಳ. ಎಂಇಎಸ್ ಪದೇ-ಪದೇ ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಇದೇ ರೀತಿ ಮಾಡಿ ಅದು ಮೂಲೆಗುಂಪಾಗಿದೆ. ಅದು ಮಹಾರಾಷ್ಟ್ರದಲ್ಲೂ ಇಲ್ಲ. ಭಾಷೆ ಬಗ್ಗೆ ಭಾವೋದ್ವೇಗ ಉಂಟುಮಾಡಿ ಚುನಾವಣೆ ಗೆಲ್ಲಬಹುದು. ಇದರಿಂದ ರಾಜಕಾರಣ ಮಾಡಬಹುದು ಎಂದು ಭಾವಿಸಿದ್ದಾರೆ. ಎಂಇಎಸ್ ಗೆ ಈಗಾಗಲೇ ಇತಿಶ್ರೀ ಹಾಡಲಾಗಿದೆ. ಬೆಳಗಾವಿ ಕಾರ್ಪೋರೇಷನ್ ಬಿಜೆಪಿಗೆ ಹಿಡಿತಕ್ಕೆ ಬಂದಿದ್ದು, ಎಂಇಎಸ್ ನ ಮೂಲೆ ಗುಂಪು ಮಾಡಲಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

    Araga Jnanendra

    ಇದೇ ವೇಳೆ, ಜೈಲಿನ ಖೈದಿಗಳಿಗೆ ಶಿಕ್ಷಣದ ಬಗ್ಗೆ ಮಾತನಾಡಿದ ಅವರು, ರಾಜ್ಯದ 50 ಜೈಲುಗಳಲ್ಲಿ ಹೆಬ್ಬೆಟ್ಟು ಒತ್ತುವವರು ಇದ್ದಾರೆ. ಜೈಲಿನಲ್ಲಿ ಸುಮಾರು ಆರು ಸಾವಿರ ಅನಕ್ಷರಸ್ಥರಿದ್ದಾರೆ. ಅವರಿಗೆ ಅಕ್ಷರ ಕಲಿಸುವ ಕೆಲಸವನ್ನು ಆಂದೋಲನದ ರೀತಿ ಮಾಡುತ್ತಿದ್ದೇವೆ ಎಂದರು.

    ಇಂದು ಗೃಹ ಇಲಾಖೆಯಿಂದ ಕನ್ನಡದಲ್ಲಿ ಸಂಜ್ಞೆಯನ್ನು ಕೊಡುವಂತಹ ಪದ್ಧತಿ ಜಾರಿಗೆ ತಂದಿದ್ದೇವೆ. ಇಷ್ಟು ದಿನ ಹಿಂದಿ ಮತ್ತು ಇಂಗ್ಲೀಷ್‍ನಲ್ಲಿ ಮಾತ್ರ ಸಂಜ್ಞೆಯನ್ನು ಕೊಡುವ ಪದ್ಧತಿ ಇತ್ತು. ಇವತ್ತಿನಿಂದ ಕನ್ನಡದಲ್ಲಿ ಕೊಡುತ್ತಿದ್ದೇವೆ. ಕಳೆದ ಒಂದು ವರ್ಷದ ಹಿಂದಿನಿಂದಲೂ ಕನ್ನಡದಲ್ಲಿ ತರ್ಜುಮೆ ಮಾಡಿ ತಯಾರು ಮಾಡಿ ಇಟ್ಟಿದ್ದರು. ಅದನ್ನು ಜಾರಿಗೆ ತರಲೇಬೇಕೆಂದು ಯೋಚನೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಿ ಇಂದಿನಿಂದ ಜಾರಿಗೆ ತರುತ್ತಿದ್ದೇವೆ ಎಂದು ತಿಳಿಸಿದರು.

    Araga Jnanendra 3

    ಜೈಲಿನಲ್ಲಿರುವ ಅನಕ್ಷರಸ್ಥರಿಗೆ ಅಕ್ಷರ ಕಲಿಸೋದಕ್ಕೂ ಸರ್ಕಾರ ಮುಂದಾಗಿದೆ. ಅದಕ್ಕೆ ವಯಸ್ಕರ ಶಿಕ್ಷಣ ಸಮಿತಿ ಅವರು ಹಾಗೂ ಜೈಲಿನಲ್ಲಿರುವ ವಿದ್ಯಾವಂತ ಖೈದಿಗಳಿಗೆ ಸಂಬಳ ನೀಡಿ ನೇಮಕ ಮಾಡಿಕೊಂಡಿದ್ದು, ಇರುವಷ್ಟು ದಿನವೂ ತರಗತಿ ನಡೆಸಿ ಓದು ಬರಹ ಕಲಿತು ಖೈದಿಗಳು ಹೊರ ಹೋಗಬೇಕಾಗುತ್ತೆ. ಈ ರೀತಿಯ ಕೆಲಸವನ್ನ ಇಂದಿನಿಂದ ಬಂದಿಖಾನೆ ಇಲಾಖೆ ಜಾರಿಗೆ ತಂದಿದೆ ಎಂದರು. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ

  • ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

    ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

    ಆನೇಕಲ್: ನಟ ಪುನೀತ್ ರಾಜ್‍ಕುಮಾರ್ ಅವರಂತೆಯೇ ನಿಧನ ನಂತರ ತಾನೂ ನೇತ್ರ ದಾನ ಮಾಡುವುದಕ್ಕಾಗಿ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಶ್ಯಾನುಬೋಗನಹಳ್ಳಿಯಲ್ಲಿ ನಡೆದಿದೆ.

    puneeth rajkuma 2

    ರಾಜೇಂದ್ರ (40) ನೇಣಿಗೆ ಶರಣಾದ ಅಭಿಮಾನಿ. ಪುನೀತ್ ರಾಜಕುಮಾರರಂತೆಯೇ ತನ್ನ ಕಣ್ಣನ್ನು ದಾನ ಮಾಡಿ ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಭಾನುವಾರ ಸಂಜೆ ಸಾವನ್ನಪ್ಪಿದ ರಾಜೇಂದ್ರನ ಮೃತದೇಹವನ್ನು ಕಂಡ ಸಂಬಂಧಿಗಳು ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ನಟ ಪುನೀತ್ ಸಾವಿನಿಂದ ಕಂಗಾಲಾಗಿದ್ದ ರಾಜೇಂದ್ರ, ಇದೇ ದುಃಖದಲ್ಲಿ ಪುನೀತ್ ಕಣ್ಣು ದಾನ ಮಾಡಿದ್ದನ್ನು ಆದರ್ಶವಾಗಿ ತೆಗೆದುಕೊಂಡು ವಿಷಯವನ್ನು ಮನೆಯವರಿಗೆ ತಿಳಿಸುತ್ತಲೇ ಇದ್ದ. ವರ್ಷದ ಹಿಂದೆ ಮದುವೆಯಾಗಿದ್ದ ರಾಜೇಂದ್ರ ತಮ್ಮ ನೆಚ್ಚಿನ ನಾಯಕನ ಮಾದರಿಯನ್ನು ಜೀವಂತವಾಗಿಡಲು ಜೀವ ಬಿಟ್ಟಿದ್ದಾನೆ ಎಂದು ಸಹೋದರ ಲೋಹಿತ್ ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

     

    PUNEETH DEADBODY 2

    ಭಾನುವಾರ ಮಧ್ಯಾಹ್ನ ತನ್ನ ತಾಯಿಯೊಂದಿಗೆ ನೇತ್ರದಾನ ಮಾಡಿದ ನೆಚ್ಚಿನ ನಟನ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದ. ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಇಂಥ ನೋವು ಯಾರಿಗೂ ಬರಬಾರದು: ಶಿವರಾಜ್‌ ಕುಮಾರ್

    ಇಂಥ ನೋವು ಯಾರಿಗೂ ಬರಬಾರದು: ಶಿವರಾಜ್‌ ಕುಮಾರ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ವಿಧಿವಶರಾಗಿ ಇಂದಿಗೆ ನಾಲ್ಕು ದಿನ ಕಳೆದಿದೆ. ನಾಳೆ 5ನೇ ದಿನವಾಗಿರುವುದರಿಂದ ಪುನೀತ್ ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿ ಹಾಲು ತುಪ್ಪ ಕಾರ್ಯನೆರವೇರಿಸಲಿದ್ದಾರೆ. ಈ ಮಧ್ಯೆ ನಟ ಶಿವರಾಜ್ ಕುಮಾರ್ ತಮ್ಮನೊಗೆ ಹಾಲು ತುಪ್ಪ ಮಾಡುವ ನೋವು ಯಾರಿಗೂ ಬರಬಾರದು ಎಂದು ತಮ್ಮ ಅಳನ್ನು ತೊಡಿಕೊಂಡಿದ್ದಾರೆ.

    PUNEET

    ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುನೀತ್ ಹೋಗಿದ್ದೆ ಒಂದು ದೊಡ್ಡ ಸಂಕಟವಾಗಿದೆ. ಅವನು ಹುಟ್ಟಬೇಕಾದರೆ ನನಗೆ 13 ವರ್ಷವಾಗಿತ್ತು. ನಾನು ಎತ್ತಿ ಆಡಿಸಿ ಬೆಳೆಸಿದ ಮಗು, ಅವನಿಗೆ ಹಾಲು ತುಪ್ಪ ಮಾಡುವುದು ಎಷ್ಟು ಸರಿ ಅಂತ ನಮಗೆ ಅರ್ಥ ಆಗುತ್ತಿಲ್ಲ. ಆ ನೋವು ಯಾರಿಗೆ ಬರಬಾರದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    puneeth rajkumar 5 1

    ನಾಳೆ ಹಾಲು ತುಪ್ಪ ಆದ ಮೇಲೆ ಅಭಿಮಾನಿಗಳಿಗೆ ನೋಡಲು ಅವಕಾಶ ಮಾಡಲು ಸಿಎಂ ಜೊತೆ ಮಾತನಾಡಿತ್ತೇವೆ. ಸಿಎಂ ಸಹ ಈ ಬಗ್ಗೆ ಹೇಳುತ್ತಿದ್ದರು. ನಾಳೆ ಹಾಲು ತುಪ್ಪ ಮಾಡುವಾಗ ಅಭಿಮಾನಿಗಳನ್ನು ಬಿಡಲು ಆಗುವುದಿಲ್ಲ. ಆದರೆ ಕಾರ್ಯನೆರವೇರಿದ ಬಳಿಕ ಆದಷ್ಟು ಬೇಗ ಅಭಿಮಾನಿಗಳಿಗೆ ಸಮಾಧಿ ವೀಕ್ಷಿಸಲು ಅನುಕೂಲ ಮಾಡಿಕೊಡುತ್ತೇವೆ. ಅಭಿಮಾನಿಗಳು ನಮಗಿಂತ ಹತ್ತು ಪಟ್ಟು ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಅಭಿಮಾನಿಗಳ ಪ್ರೀತಿ ಪಡೆಯಲು ಮಕ್ಕಳು, ಕುಟುಂಬದವರು ಎಷ್ಟು ಪುಣ್ಯ ಮಾಡಿದ್ದೇವೋ. ಅಪ್ಪಾಜಿಯವರು ಅಷ್ಟು ಪ್ರೀತಿ ಗಳಿಸಿ ಕೊಟ್ಟು ಹೋಗಿದ್ದಾರೆ. ಪುನೀತ್ ಕೂಡ ಅಷ್ಟೇ ಪ್ರೀತಿ ಗಳಿಸಿಕೊಂಡು ಹೋಗಿದ್ದಾನೆ. ಅಭಿಮಾನಿಗಳು ಬೇರೆ ತರಹದ ಕೆಟ್ಟ ನಿರ್ಧಾರ ತೆಗೆದುಕೊಳ್ಳಬೇಡಿ. ಅಪ್ಪು ನಿಧನದ ಬಳಿಕ ಎಷ್ಟೋ ಫ್ಯಾನ್ಸ್ ಜೀವ ಬಿಟ್ಟಿದ್ದಾರಂತೆ ಅಂತ ಗೊತ್ತಾಯಿತು ದಯವಿಟ್ಟು ಯಾರು ಅಂತಹ ನಿರ್ಧಾರ ಕೈಗೊಳ್ಳಬೇಡಿ ನಿಮ್ಮ ಫ್ಯಾಮಿಲಿಗೆ ನಿಮ್ಮ ಜೀವ ಮುಖ್ಯವಾಗಿರುತ್ತದೆ ಎಂದರು.

  • ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಉಡುಪಿ: ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿಗೆ ಅವಕಾಶವಿಲ್ಲ. ಅವಕಾಶ ಇಲ್ಲದ ಕಾರಣ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಸಾಧ್ಯವಾಗಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

    puneeth 4

    ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಸರ್ಕಾರ ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡು ಶ್ರದ್ಧಾಂಜಲಿ ಅರ್ಪಿಸಿದೆ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂತು. ಆದರೆ ಅದಕ್ಕೆ ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನು ಪರಿಗಣಿಸುತ್ತೇವೆ. ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇವರು ಎಂದು ನಾವು ತಿಳಿದುಕೊಂಡಿದ್ದೆವು, ನಮ್ಮ ನೋವನ್ನು ಯಾರ ಬಳಿ ಹೇಳೋದು: ಸೆಕ್ಯೂರಿಟಿ ಕಣ್ಣೀರು

    rajyotsava award

    ಪುನೀತ್‍ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ರಾಜ್ಯ ಸರ್ಕಾರದ ಜಾಹಿರಾತುಗಳಿಗೆ ಪುನೀತ್ ಸಂಭಾವನೆ ಪಡೆಯುತ್ತಿರಲಿಲ್ಲ. ಎಲ್ಲವೂ ಸರ್ಕಾರದ ಗಮನದಲ್ಲಿದೆ. ಸೂಕ್ತ ಗೌರವ, ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸುತ್ತೇವೆ. ಕಾರ್ಯಕ್ರಮದ ಚೌಕಟ್ಟಿನ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

  • ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಕಣ್ಣನ್ನು ನಾಲ್ವರಿಗೆ ಅಳವಡಿಸಿದ್ದೇವೆ ಎಂದು ನಾರಾಯಣ ನೇತ್ರಾಲಯ ಡಾ. ಭುಜಂಗಶೆಟ್ಟಿ ಅವರು ಹೇಳಿದ್ದಾರೆ.

    bhujanga shetty

     

    ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಹೃದಯ ಸ್ತಂಭದಿಂದ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಆದರೆ ಸತ್ತ ಮೇಲೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮಾನವೀಯತೆ ಮೆರೆದಿದ್ದಾರೆ. ಇದೀಗ ಪುನೀತ್ ಅವರ ಕಣ್ಣು ನಾಲ್ವರ ಅಂಧಕಾರವನ್ನು ದೂರ ಮಾಡಿದೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    puneeth rajkumar 5 1

    ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾರಾಯಣ ನೇತ್ರಾಲಯ ಡಾ.ಭುಜಂಗಶೆಟ್ಟಿ ಅವರು, ರಾಜ್ ಕುಮಾರ್ ಕುಟುಂಬದವರಿಗೆ ವಂದನೆ ಹೇಳೋಕೆ ಬಯಸುತ್ತೇನೆ. ಮೊದಲಿಗೆ ರಾಜ್‍ಕುಮಾರ್ ಅವರು ಬಂದು ನೇತ್ರಾದಾನ ಶುರು ಮಾಡಿದರು. ಬಳಿಕ ಪಾರ್ವತಮ್ಮನವರು, ಇದೀಗ ಪುನೀತ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಹೀಗಾಗಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್?

    Puneeth Rajkumar Natasaarvabhowma

    ಶನಿವಾರವೇ ಅಪರೇಷನ್ ಮಾಡಿ ಪುನೀತ್ ಅವರ ಕಣ್ಣನ್ನು ಬೇರೆಯವರಿಗೆ ನೀಡಿದ್ದೇವೆ. ಸಾಮಾನ್ಯವಾಗಿ ಕಣ್ಣುದಾನ ಮಾಡಿದರೆ ಇಬ್ಬರಿಗೆ ಕೊಡುತ್ತೇವೆ. ಆದರೆ ಅಪ್ಪು ಕಣ್ಣುಗಳನ್ನು ನಾಲ್ಕು ಜನರಿಗೆ ಅಳವಡಿಸಿದ್ದೇವೆ. ಕರ್ನಿಯಾದ ಮುಂಭಾಗ ಮತ್ತು ಹಿಂಭಾಗದ ಪದರವನ್ನು ಎರಡು ಭಾಗವಾಗಿ ಮಾಡಿ ನಾಲ್ಕು ಜನರಿಗೆ ಕೊಟ್ಟಿದ್ದೇವೆ. ಅಂದರೆ ಕಣ್ಣಿನ ಮುಂದಿನ ಭಾಗ ಮತ್ತು ಬ್ಯಾಕ್ ಪೋಷನ್ ಬೇರ್ಪಡಿಸಿ ಅವಶ್ಯಕತೆ ಇರುವ ನಾಲ್ವರಿಗೆ ಕೊಟ್ಟಿದ್ದೇವೆ. ಒಬ್ಬರ ಕಣ್ಣನ್ನು ಒಂದೇ ದಿನ, ನಾಲ್ವರಿಗೆ ಕೊಟ್ಟಿರುವುದು ಇದೇ ಮೊದಲಾಗಿದೆ. ನಾಲ್ವರು ಇದೀಗ ತುಂಬಾ ಚೆನ್ನಾಗಿದ್ದಾರೆ. ಇದಕ್ಕೆ ಕಣ್ಣು ತುಂಬಾ ಚೆನ್ನಾಗಿ ಇರಬೇಕಾಗುತ್ತದೆ. ಪುನೀತ್ ಕಣ್ಣು ತುಂಬಾ ಚೆನ್ನಾಗಿದ್ದ ಕಾರಣ ಇದನ್ನು ನಾಲ್ವರಿಗೆ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.

    puneeth 5

    ಐದು ಜನರ ತಂಡದ ಡಾಕ್ಟರ್‌ಗಳು ಆಪರೇಷನ್ ಅನ್ನು ಮಾಡಿದ್ದಾರೆ. ಈ ಮೊದಲು ಈ ರೀತಿಯ ಆಪರೇಷನ್ ಅನ್ನು ಬೇರೆ, ಬೇರೆ ದಿನ ಮಾಡಲಾಗುತ್ತಿತ್ತು. ಆದರೆ ಅಪ್ಪು ಕಣ್ಣಿಗೆ ಪೂರಕವಾದ ನಾಲ್ವರ ಕಣ್ಣುಗಳಿಗೆ ಮ್ಯಾಚ್ ಆಗಬೇಕು. ಇದೀಗ ಒಬ್ಬ ಯುವತಿ, ಮೂವರು ಯುವಕರಿಗೆ ಅಪ್ಪು ಕಣ್ಣು ನೀಡಲಾಗಿದೆ. ಬೆಳಗ್ಗೆ ಹನ್ನೊಂದು ಗಂಟೆಯಿಂದ ಸಂಜೆ ಆರು ಗಂಟೆ ತನಕ ಆಪರೇಷನ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

  • ಅಪ್ಪು ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್?

    ಅಪ್ಪು ಹುಟ್ಟುಹಬ್ಬಕ್ಕೆ ಜೇಮ್ಸ್ ಸಿನಿಮಾ ರಿಲೀಸ್?

    ಬೆಂಗಳೂರು: ಕೊನೆಯದಾಗಿ ಪುನೀತ್ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಪ್ಲಾನ್ ಮಾಡಲಾಗುತ್ತಿದೆ.

    james web 2

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಹಲೋಕ ತ್ಯಜಿಸುವ ಮುನ್ನ ಕೊನೆಯದಾಗಿ ನಟಿಸಿರುವ ಸಿನಿಮಾ ಜೇಮ್ಸ್. ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್ ಕಂಪ್ಲೀಟ್ ಮಾಡಿದ್ದಾರೆ. ಜೊತೆಗೆ ಹಾಡಿನ ಚಿತ್ರೀಕರಣಕ್ಕೆ ಪೈಲೆಟ್ ಶೂಟ್ ಕೂಡ ಮಾಡಿದ್ದ ಅಪ್ಪು, ತಮ್ಮ ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

    james web 3

    ಸದ್ಯ ಜೇಮ್ಸ್ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಕೂಡ ಶುರು ಮಾಡಿತ್ತು. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಶೇಕಡಾ 90 ರಷ್ಟು ಕಂಪ್ಲೀಟ್ ಆಗಿದ್ದು, ಕೇವಲ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಆ ಹಾಡನ್ನು ಗ್ರಾಫಿಕ್ಸ್ ಮೂಲಕ ಮಾಡಲು ನಿರ್ಧರಿಸಲಾಗಿದೆ. ಸಿನಿಮಾ ಡಬ್ಬಿಂಗ್ ಕೆಲಸ ಅರ್ಧ ಮಾಡಿದ್ದಾರೆ ಅವರ ವಾಯ್ಸ್ ಕೂಡ ರೆಕಾರ್ಡ್ ಮಾಡಿ ಕೊಟ್ಟಿದ್ದಾರೆ. ಜೇಮ್ಸ್ ಸಿನಿಮಾಗೆ ಪುನೀತ್ ಅವರು ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

  • ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

    ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಅಪ್ಪು ನಟನೆಯ `ರಾಜಕುಮಾರ’ ಚಿತ್ರವನ್ನು ಇಂದು ಮರು ಬಿಡುಗಡೆಯಾಗಿದೆ.

    puneeth rajkumar priya anand

    ಪುನೀತ್ ರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅವರು ಅಭಿನಯಿಸಿರುವ ಸಾಕಷ್ಟು ಸಿನಿಮಾಗಳು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದರ ಜೊತೆಗೆ ಯಶಸ್ವಿ ಪ್ರದರ್ಶನ ಕಂಡಿದೆ. ಪುನೀತ್ ನಟಿಸಿದ್ದ ಹಲವಾರು ಹಿಟ್ ಸಿನಿಮಾಗಳಲ್ಲಿ ಪ್ರೇಕ್ಷಕರ ಮನಮುಟ್ಟಿದ ಸಿನಿಮಾಗಳಲ್ಲಿ ರಾಜಕುಮಾರ ಚಿತ್ರ ಕೂಡ ಒಂದಾಗಿದೆ. ಸದ್ಯ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಬೆಂಗಳೂರಿನ ಶ್ರೀನಿವಾಸ ಥಿಯೇಟರ್‌ನಲ್ಲಿ ರಾಜಕುಮಾರ ಸಿನಿಮಾ ಮರು ಬಿಡುಗಡೆಯಾಗಿದೆ.

    puneeth rajkumar priya anand main

    `ರಾಜಕುಮಾರ’ ಚಿತ್ರವನ್ನು ಅಭಿಮಾನಿ ದೇವರುಗಳಿಗಾಗಿ ಉಚಿತವಾಗಿ ಪ್ರದರ್ಶಿಸಲಾಗುತ್ತಿದೆ. ಸಿನಿಮಾ ವೀಕ್ಷಿಸಲು ಥಿಯೇಟರ್‍ಗೆ ಬಂದ ಅಭಿಮಾನಿಗಳು ಥಿಯೇಟರ್ ಬಳಿ ಇದ್ದ ಪುನೀತ್ ಕಟೌಟ್‍ಗೆ ಹಾಲಿನ ಅಭಿಷೇಕ ಮಾಡಿ, ಚಿತ್ರ ಆರಂಭಕ್ಕೂ ಮುನ್ನ 2 ನಿಮಿಷ ಮೌನಾಚರಣೆ ಮಾಡಿದ್ದಾರೆ. ಇದೇ ವೇಳೆ ಅವನಿಲ್ಲ, ಮತ್ತೆ ಬರಲ್ಲ, ಇದೇ ಲಾಸ್ಟ್ ಶೋ, ಇದೇ ನಮ್ಮ ಕೊನೆ ಸಿನಿಮಾ, ಇನ್ನು ಸಿನಿಮಾ ನೋಡಲ್ಲ ಎಂದು ಅಪ್ಪು ನೆನೆದು ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    PUNEETH

    ನಟ ಪವರ್ ಸ್ಟಾರ್ ಪುನೀತ್‍ರಾಜ್ ಕುಮಾರ್ ಶುಕ್ರವಾರ ಹೃದಯ ಕಂಪನದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸದ್ಯ ಪುನೀತ್ ರಾಜ್‍ಕುಮಾರ್ ಅವರ ಸಮಾಧಿ ನೋಡಲು ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಆದರೆ ಸದ್ಯ 2 ದಿನಗಳ ಕಾಲ ಸಾರ್ವಜನಿಕರಿಗೆ ಸಮಾಧಿ ಬಳಿ ಪ್ರವೇಶವನ್ನು ನಿಷೇಧಿಸಲಾಗಿದೆ. ಮಂಗಳವಾರ ಹಾಲು-ತುಪ್ಪ ಕಾರ್ಯದ ಬಳಿಕ ಸಾರ್ವಜನಿಕರು ಪುನೀತ್ ಸಮಾಧಿ ವೀಕ್ಷಿಸಲು ಅವಕಾಶ ಕಲ್ಪಿಸಿ ಕೊಡುವ ಸಾಧ್ಯತೆಯಿದೆ. ಇದನ್ನೂ ಓದಿ: ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

  • ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ ನಾಲ್ಕು ದಿನ ಕಳೆದಿದ್ದು, 5ನೇ ದಿನದ ಹಾಲು ತುಪ್ಪ ಕಾರ್ಯ ಮುಗಿಯುವವರೆಗೂ ಸಮಾಧಿ ವೀಕ್ಷಣೆಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ನಾಳೆ ಸಮಾಧಿ ವೀಕ್ಷಣೆಗಾಗಿ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ಸಾಧ್ಯತೆ ಇರುವ ಕಾರಣ ಸದ್ಯ ಕಂಠೀರವ ಸ್ಟೂಡಿಯೋ ಬಳಿ ಪೊಲೀಸರು ಬಿಗಿ ಭದ್ರತೆಗೊಳಿಸಿದ್ದಾರೆ.

    puneeth rajkumar 1 7

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮಣ್ಣಲ್ಲಿ ಮಣ್ಣಾಗಿ ಒಂದು ದಿನ ಕಳೆದಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋ ಪ್ರವೇಶವನ್ನು ನಿಷೇಧಿಸಲಾಗಿದೆ. ಈಗಾಗಲೇ ಪುನೀತ್ ಅವರ ಅನೇಕ ಅಭಿಮಾನಿಗಳು ಕಂಠೀರವ ಸ್ಟುಡಿಯೋಸ್ ಬಳಿ ಬಂದು ವಾಪಾಸ್ ಆಗುತ್ತಿದ್ದಾರೆ. ಇದನ್ನೂ ಓದಿ: ಅಪ್ಪುರನ್ನು ಪ್ರತಿ ದಿನವೂ ಆರಾಧಿಸೋಣ: ರಮ್ಯಾ

    puneeth 1

    ನಾಳೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಹಾಲುತುಪ್ಪ ಕಾರ್ಯನೆರವೇರಿಸಲಿದ್ದು, ಕೇವಲ ವಿಐಪಿಗಳು ಹಾಗೂ ಕುಟುಂಬ ಸದಸ್ಯರನ್ನ ಹೊರತುಪಡಿಸಿ ಬೇರೆ ಯಾರೂ ಸಹ ಕಂಠೀರವ ಸ್ಟುಡಿಯೋ ಒಳಗೆ ಬರುವಂತಿಲ್ಲ. ಹೀಗಾಗಿ ಕಂಠೀರವ ಸ್ಟುಡಿಯೋ ಬಳಿ ಸಂಪೂರ್ಣ ಬ್ಯಾರಿಗೇಡ್ ಹಾಕಿ ಆರ್‌ಎಎಫ್ ಕಮಾಂಡೋ ಪಡೆ, ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

    puneeth 2

    ಈ ಮಧ್ಯೆ ಅಭಿಮಾನಿಯೊಬ್ಬರು ದಿವಂಗತ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಕಲು ಸುಗಂಧರಾಜ ಹಾಗೂ ಚೆಂಡುಹೂವಿನ ಹಾರವನ್ನು ತಂದಿದ್ದಾರೆ. ಆದರೆ ಒಳಗೆ ಹೋಗಲು ಅವಕಾಶ ಇಲ್ಲದ ಹಿನ್ನೆಲೆ ಪೋಲಿಸ್ ಸಿಬ್ಬಂದಿಗೆ ಹೂ ಕೊಟ್ಟು ಹೋಗಿದ್ದಾರೆ.

  • ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. ಇದೀಗ ಪುನೀತ್ ಅವರ ಆತ್ಮೀಯ ಗೆಳೆಯ ಕಾಲಿವುಡ್ ನಟ ವಿಶಾಲ್ ಅಷ್ಟು ಮಕ್ಕಳ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

    PUNEET

    ಹೌದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪುನೀತ್ ಒಳ್ಳೆಯ ನಟ ಮಾತ್ರ ಅಲ್ಲ, ಒಳ್ಳೆಯ ಸ್ನೇಹಿತ, ಒಳ್ಳೆಯ ವ್ಯಕ್ತಿ. ಇಂದು ನಮ್ಮ ನಡುವೆ ಅವರಿಲ್ಲ ಅನ್ನೋದನ್ನು ಇನ್ನೂ ಊಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಆಗಿಲ್ಲ. ಅವರ ಸಾವು ಚಿತ್ರರಂಗಕ್ಕಷ್ಟೇ ಅಲ್ಲ ಸಮಾಜಕ್ಕೆ, ಕುಟುಂಬಕ್ಕೆ ಹಾಗೂ ಅವರ ಜೊತೆ ಇದ್ದವರಿಗೆ ದೊಡ್ಡ ನಷ್ಟ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

    vishal 2

    ಪುನೀತ್ 1,800 ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥಶ್ರಮ, ವೃದ್ಧಾಶ್ರಮ ನಡೆಸುವುದರ ಜೊತೆಗೆ ತಮ್ಮ ಸಾವಿನ ಬಳಿಕವೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದನ್ನೆಲ್ಲ ನೆನೆಸಿಕೊಳ್ಳುವಾಗ, ಪುನೀತ್ ಇಲ್ಲ ಅನ್ನೋದನ್ನು ನಂಬಲು ಆಗುತ್ತಿಲ್ಲ. ಪುನೀತ್ ಅಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ಪುನೀತ್‍ನನ್ನು ನೋಡಿದಾಗ, ಪುನೀತ್‍ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದಾರೆ.

    puneeth rajkumar 1 7

    ಅಪ್ಪು 1,800 ಮಕ್ಕಳನ್ನು ಓದಿಸುತ್ತಿದ್ದರು. ಅಪ್ಪು ಅಗಲಿಕೆ ಬಳಿಕ ಆ ಮಕ್ಕಳ ಗತಿ ಏನು ಎಂಬ ಕೊರಗೂ ಎಲ್ಲರನ್ನೂ ಕಾಡಿತ್ತು. ಆದರೆ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಇದೀಗ ತಮಿಳು ನಟ ವಿಶಾಲ್, ಪುನೀತ್ ನಿರ್ವಹಿಸುತ್ತಿದ್ದ ಜವಾಬ್ದಾರಿ ಹೊರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

  • ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

    ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಹಠಾತ್ ನಿಧನ ನಂತರ ಹೃದಯಾಘಾತ ಮತ್ತು ಹೃದಯ ಸ್ತಂಭನ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಹೃದಯಾಘಾತದ ಬಗ್ಗೆ ವೈದ್ಯರು ಸಾಕಷ್ಟು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ಕುರಿತು ಜಯದೇವ ಹೃದ್ರೋಗ ಆಸ್ಪತ್ರೆಯ ಡಾ. ಸಿ.ಎನ್.ಮಂಜುನಾಥ್ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    puneeth rajkumar 1 7

    ಡಾ. ಸಿ.ಎನ್.ಮಂಜುನಾಥ್ ಅವರು ಹೇಳಿದ್ದೇನು..?
    ಪುನೀತ್ ರಾಜ್‍ಕುಮಾರ್ ಅವರು ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿದ್ದರು. ದೈಹಿಕ ಫಿಟ್‍ನೆಸ್ ಕೂಡ ಚೆನ್ನಾಗಿತ್ತು. ಜೀವನಶೈಲಿ, ಆಹಾರ ಪದ್ಧತಿ ಉತ್ತಮವಾಗಿತ್ತು. ಅವರಿಗೆ ಹೀಗಾಗಿದ್ದು ಶಾಕ್ ಎನಿಸುತ್ತಿದೆ. ಇದನ್ನೂ ಓದಿ: ಪುನೀತ್ ನಿಧನ- ಶೀಘ್ರವೇ ಜಿಮ್, ಫಿಟ್‌ನೆಸ್‌ ಸೆಂಟರ್‌ಗಳಿಗೆ ಗೈಡ್ ಲೈನ್ಸ್

    ದೇಶದಲ್ಲಿ ಸಾವಿರಾರು ಜನರಿಗೆ ಹೃದಯಾಘಾತವಾಗುತ್ತೆ. ಅವರಲ್ಲಿ ಶೇ. 99 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋಗುತ್ತಾರೆ. ಆದರೆ ಪುನೀತ್ ಅವರಿಗೆ ಆ ಅವಕಾಶ ಸಿಗಲಿಲ್ಲ. ಅದು ಬಹಳ ನೋವಿನ ಸಂಗತಿ.

    heart attack

    ಕೆಲವರಿಗೆ ಹೃದಯಾಘಾತ ಆದ ಸಂದರ್ಭದಲ್ಲಿ ಕೆಲವೇ ನಿಮಿಷಗಳಲ್ಲಿ ಹೃದಯದ ಬಡಿತ ನಿಂತು ಹೋಗುತ್ತೆ. ಸಾಮಾನ್ಯವಾಗಿ ಎಲ್ಲರಿಗೂ ಒಂದು ನಿಮಿಷದಲ್ಲಿ 70-80 ಬಾರಿ ಹೃದಯ ಬಡಿದುಕೊಳ್ಳುತ್ತೆ. ಸ್ವಲ್ಪ ಗಾಬರಿಯಾದರೆ 90-95 ಬಾರಿ ಬಡಿದುಕೊಳ್ಳಬಹುದು. ಹಠಾತ್ ಹೃದಯಾಘಾತ ಆದಾಗ ಕೆಲವರಿಗೆ 300, 400, 500 ತನಕವೂ ಹೃದಯ ಬಡಿದುಕೊಳ್ಳುತ್ತೆ. ಆಗ ಹೃದಯ ಅಲುಗಾಡುತ್ತೆ. ಹೃದಯದಿಂದ ಹೊರಗಡೆ ರಕ್ತವೇ ಬರುವುದಿಲ್ಲ. ಅದನ್ನು ನಾವು ವೈದ್ಯಕೀಯ ಪರಿಭಾಷೆಯಲ್ಲಿ ‘ವೆಂಟ್ರಿಕ್ಯುಲರ್ ಫಿಬ್ರಿಲೇಷನ್’ ಅಂತ ಕರೆಯುತ್ತೇವೆ. ಆಗ ಹೃದಯದ ಬಡಿತ ನಿಂತು ಹೋದಾಗ ‘ಡಿಸಿ ಶಾಕ್’ ಎಂಬ ಉಪಕರಣವನ್ನು ಎದೆಯ ಮೇಲಿಟ್ಟು ಶಾಕ್ ಕೊಟ್ಟರೆ, ಹೃದಯ ಮತ್ತೆ ಚಲನೆ ಆರಂಭಿಸುತ್ತೆ. ಅದಕ್ಕಾಗಿ ರೋಗಿ ತುರ್ತು ನಿಗಾ ಘಟಕದಲ್ಲೇ ಇರಬೇಕು. ಇದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

    ಕೆಲವರಿಗೆ ಆಸ್ಪತ್ರೆಗೆ ಹೋಗುವಷ್ಟು ಸಮಯ ಕೂಡ ಇರುವುದಿಲ್ಲ. ಶೇ. 5ರಷ್ಟು ಮಂದಿಗೆ ಹೃದಯಾಘಾತವಾದ ಕೆಲವೇ ನಿಮಿಷಗಳಲ್ಲಿ (5-10 ನಿಮಿಷ) ಹೃದಯದ ಬಡಿತವೇ ನಿಂತು ಹೋಗುತ್ತೆ. ಹೃದಯದೊಳಗಡೆಯೂ ಕರೆಂಟ್ ಇದೆ. ಅದು ಆಫ್ ಆಗಿಬಿಡುತ್ತೆ. ಇದನ್ನೇ ನಾವು ದಿಢೀರ್ ಕಾರ್ಡಿಯಾಕ್ ಅರೆಸ್ಟ್(ಹೃದಯ ಸ್ತಂಭನ) ಎನ್ನುತ್ತೇವೆ. ಪುನೀತ್ ರಾಜ್‍ಕುಮಾರ್ ಅವರಿಗೆ ಹೃದಯಾಘಾತವಾಗಿರುವುದು ನಿಜ. ಆಸ್ಪತ್ರೆಗೆ ಬರುವಷ್ಟರಲ್ಲಿ ಅವರ ಹೃದಯದ ಬಡಿತ ನಿಂತು ಹೋಗಿತ್ತು, ಜೀವ ಇರಲಿಲ್ಲ.

    fitbeat heart rate

    ಎಷ್ಟೋ ಮಂದಿ ಹೃದಯಾಘಾತವಾಗಿ ನಮ್ಮ ಆಸ್ಪತ್ರೆಗೆ ದಾಖಲಾದಾಗ ಆಂಜಿಯೋಪ್ಲಾಸ್ಟಿಯಂತಹ ಸೂಕ್ತ ಚಿಕಿತ್ಸೆ ನೀಡುತ್ತೇವೆ. ಅವರು ನಮ್ಮೊಟ್ಟಿಗೆ ಚೆನ್ನಾಗಿಯೇ ಮಾತನಾಡಿರುತ್ತಾರೆ. ಇನ್ನೆರಡು ಮೂರು ದಿನದಲ್ಲಿ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಕೂಡ ಹೇಳಿರುತ್ತೇವೆ. ಇದಾದ ನಂತರ ಒಂದೆರಡು ನಿಮಿಷ ನಾವು ಕೊಠಡಿಗೆ ಹೋಗಿ ಬರುವಷ್ಟರಲ್ಲಿ ಮತ್ತೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿರುತ್ತಾರೆ. ಇದನ್ನು ನಾವು “ಎಲೆಕ್ಟ್ರಿಕಲ್ ಇನ್‍ಸ್ಟೆಬಿಲಿಟಿ” ಎಂದು ಕರೆಯುತ್ತೇವೆ.

    ಹೃದಯ ರಕ್ತನಾಳದಿಂದ ಹೃದಯಕ್ಕೆ ರಕ್ತ ಸರಬರಾಜಾಗುತ್ತಿರುತ್ತೆ. ಹೃದಯಾಘಾತವಾದಾಗ ರಕ್ತನಾಳ ಶೇ. 100 ರಷ್ಟು ಬ್ಲಾಕ್ ಆಗಿರಬೇಕು. ಶೇ. 60-70ರಷ್ಟು ಬ್ಲಾಕ್ ಆದಾಗ ಹೃದಯಾಘಾತವಾಗುವುದಿಲ್ಲ. ಆದರೆ ನಡೆಯುವಾಗ, ಊಟ ಮಾಡಿ ಎತ್ತರ ಪ್ರದೇಶದಲ್ಲಿ ಓಡಾಡುವಾಗ ಎದೆಯುರಿ, ಎದೆ ನೋವು ಕಾಣಿಸಿಕೊಳ್ಳಬಹುದು. ಇನ್ನೂ ಕೆಲವರಿಗೆ ಗಂಟಲು, ದವಡೆಯಲ್ಲಿ ನೋವು ಬರಬಹುದು. ಅದು ಹೃದಯಾಘಾತದ ಮುನ್ಸೂಚನೆ. ಆದರೆ ಎಲ್ಲರಿಗೂ ಈ ಮುನ್ಸೂಚನೆ ಸಿಗುವುದಿಲ್ಲ. ಶೇ. 10, 30, 50 ಹೀಗೆ.. ಕ್ರಮೇಣ ರಕ್ತನಾಳಗಳು ಬ್ಲಾಕ್ ಆಗುತ್ತಾ ಹೋದಾಗ ಹೃದಯಾಘಾತಕ್ಕೂ ಮುನ್ನ 3 ವಾರ ಅಥವಾ 3, 6 ತಿಂಗಳ ಅವಧಿಯಲ್ಲಿ ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡು ಮುನ್ಸೂಚನೆ ಸಿಗುತ್ತದೆ.

    PUNEETH 3 3

    ಕೆಲವರಿಗೆ ಹೃದಯಾಘಾತ ಆಗುವ 2 ನಿಮಿಷ ಮುಂಚೆಯೂ ಚೆನ್ನಾಗಿರುತ್ತಾರೆ. ಆಗ ರಕ್ತನಾಳ ಬ್ಲಾಕೇಜ್ ಆಗಿರುವುದಿಲ್ಲ. ಆದರೆ ರಕ್ತನಾಳದ ಒಳಗಡೆ ಕೊಲೆಸ್ಟ್ರಾಲ್ ಅಲ್ಸರ್ಸ್ ಅಂತ ಇರುತ್ತದೆ. ಅದು ಒಡೆದು ಹೋದರೆ, ಶೇ. 0 ಬ್ಲಾಕೇಜ್ ಇರುವುದು ಶೇ. 100 ಆಗಿಬಿಡುತ್ತದೆ. ಅದು ಯುವಕರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದು ಡಾ. ಸಿ.ಎನ್.ಮಂಜುನಾಥ್ ಹೇಳುತ್ತಾರೆ.