ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ತಾನು ಕೆಲಸ ಮಾಡುತ್ತಿದ್ದ ಟೈಲರ್ ಅಂಗಡಿಯಲ್ಲಿ ಮಾಲೀಕ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊರವಲಯ ನೆಲಮಂಗಲ ಸಮೀಪದ ಚಿಕ್ಕಬಿದರಕಲ್ಲಿನಲ್ಲಿ ಸೋಮವಾರ ನಡೆದಿದೆ.
ಸ್ವಾಮಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸ್ವಾಮಿ ಟೇಲರಿಂಗ್ ಕೆಲಸ ಮಾಡಿಕೊಂಡಿದ್ದು, ಸಾಲಗಾರರ ಕಾಟದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಸ್ವಾಮಿ ಪುತ್ರ ಕೂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಅಲ್ಲದೆ ಲಕ್ಷ್ಮೀ ವೆಂಕಟೇಶ್ವರ ಅಂಗಡಿಯವರು ಹಣದ ವಿಚಾರದಲ್ಲಿ ಕಾಟ ನೀಡುತ್ತಿದ್ದರೂ ಎಂದು ಸ್ವಾಮಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.