ಬೆಂಗಳೂರು: ಕನ್ನಡ ಪರ ಹೋರಾಟಗಾರರ (Pro-Kannada Activist) ಮೇಲಿನ ಕೇಸನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (BK Hariprasad) ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಕನ್ನಡದಲ್ಲಿ ಫಲಕ (Nameboard) ಇರಬೇಕು ಎಂಬುದು ಸತ್ಯವೇ. ಕಾನೂನು ಕೈಗೆತ್ತಿಕೊಳ್ಳದೇ ಫಲಕಗಳನ್ನು ಬದಲಾಯಿಸಿ. ನಿಧಾನವಾಗಿ ಎಲ್ಲವೂ ಸರಿ ಹೋಗುತ್ತದೆ. ಕನ್ನಡ ಹೋರಾಟಗಾರರ ಮೇಲೆ, ನಮ್ಮ ಮೇಲೂ ಬಹಳಷ್ಟು ಕೇಸ್ಗಳೂ ಬಾಕಿ ಇವೆ. ನೆಲ, ಜಲ ಭಾಷೆಯ ವಿಚಾರದಲ್ಲಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ನಾನೂ ಕೂಡ ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು. ಇದನ್ನೂ ಓದಿ: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್
ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಈ ರೀತಿಯ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಸಂಸ್ಕೃತದಲ್ಲಿ ಬಹಳ ದೊಡ್ಡ ಭಾಷಣ ಬಿಗಿತಾರೆ. ಕೋಮುದ್ವೇಷ ಹರಡುವುದಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಯತ್ನ ಮಾಡುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಕದಡುವ ಕೆಲಸ ಮಾಡುತ್ತಿದೆ. ಬಿಜೆಪಿ ಸೂತ್ರಧಾರರ ಮನಸ್ಥಿತಿ ಈ ದೇಶದ ಮಹಿಳೆಯರ ವಿರುದ್ಧವಾಗಿದೆ. ತಕ್ಷಣವೇ ಸ್ವಯಂಪ್ರೇರಿತ ದೂರು ದಾಖಲಾಗಬೇಕಿತ್ತು. ಸಮುದಾಯದವರೆಲ್ಲ ದೂರು ಕೊಟ್ಟಮೇಲೆ ಎಫ್ಐಆರ್ ಆಗಿದೆ. ತಕ್ಷಣವೇ ಸರ್ಕಾರ ಕಲ್ಲಡ್ಕರನ್ನು ಬಂಧಿಸಬೇಕು. ಬಹಳ ಪ್ರಚೋದನಕಾರಿ ಎರಡು ಕೋಮಿನ ನಡುವೆ ದ್ವೇಷ ಬೆಳೆಸುವಂತಹ ಹೇಳಿಕೆ ಇದು ಎಂದು ಹರಿಹಾಯ್ದರು. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ
ಒದ್ದು ಒಳಗೆ ಹಾಕಿ ಎಂಬ ಭಾಷೆ ನಾವು ಉಪಯೋಗಿಸಲು ಆಗುವುದಿಲ್ಲ. ಆದರೆ ಕಾನೂನು ತಮಗೆ ಲೆಕ್ಕವೇ ಇಲ್ಲ ಎಂಬಂತೆ ಮಾತನಾಡಿದ್ದಾರೆ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂಗ್ಲಿಷ್ ಬೋರ್ಡ್ಗಳು ಉಡೀಸ್- ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ