Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?

Kodagu

ಲೋಕ ಕಲ್ಯಾಣಕ್ಕಾಗಿಯೇ ಜನ್ಮ ತಾಳಿದ ಮಹಾನದಿ ಈ‌ ಕಾವೇರಿ – ಪುರಾಣ ಪುಣ್ಯಕಥೆ ನಿಮಗೆ ಗೊತ್ತೆ?

Public TV
Last updated: October 17, 2025 4:42 pm
Public TV
Share
3 Min Read
Theerthodbhava
SHARE

ಮಾತೆ ಕಾವೇರಿ ತಲಕಾವೇರಿಯಲ್ಲಿ (Talacauvery) ಹುಟ್ಟಿ ಲೋಕ ಕಲ್ಯಾಣಕ್ಕಾಗಿ ನದಿಯಾಗಿ ಹೇಗೆ ಹರಿದಳು ಎಂಬುದರ ಬಗ್ಗೆ ‌ಹಲವರಿಗೆ ಇಂದಿಗೂ ಕುತೂಹಲ ಇದೆ. ಕಾವೇರಿ ಜನ್ಮ ತಾಳಿದ ಹಿನ್ನೆಲೆ ನೋಡುವುದಾದ್ರೆ ಅದಕ್ಕೊಂದು ಪೌರಾಣಿಕ ಕಥೆ ಇದೆ. ಬನ್ನಿ ತಿಳಿಯೋಣ…

ಪುರಾಣ ಹೇಳುವಂತೆ, ತಲಕಾವೇರಿ ಸಮೀಪದ ಬ್ರಹ್ಮಗಿರಿ ಬೆಟ್ಟದಲ್ಲಿ (Brahmagiri Hill) ಕವೇರನೆಂಬ ಮುನಿ ವಾಸವಾಗಿದ್ದಋಂತೆ. ಅವನಿಗೊಬ್ಬಳು ಪುತ್ರಿ ಬೇಕೆಂಬ ಅಭಿಲಾಷೆ ಉಂಟಾಗಿ ಬ್ರಹ್ಮನನ್ನ ಕುರಿತು ತಪಸ್ಸು ಮಾಡುತ್ತಿದ್ದರ ಮಾಡತೊಡಗಿದ. ತಪಸ್ಸಿಗೆ ಮೆಚ್ಚಿದ ಬ್ರಹ್ಮ ತನ್ನ ಮಾನಸ ಪುತ್ರಿ ಲೋಪಾಮುದ್ರೆಯನ್ನ ದತ್ತು ಮಗಳಾಗಿ ನೀಡಿದರಂತೆ. ಲೋಪಾಮುದ್ರೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆಯತೊಡಗಿದಳು. ಹೀಗೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆದಿದ್ದರಿಂದ ಆಕೆ ಕಾವೇರಿಯಾದಳು.

Cauvery Theerthodbhava

ಒಮ್ಮೆ ಕವೇರನ ಆಶ್ರಮಕ್ಕೆ ಬಂದ ಅಗಸ್ತ್ಯ ಮುನಿಗಳು ಕಾವೇರಿಯನ್ನು ಕಂಡು ಮನಸೋತು ಆಕೆಯನ್ನು ವಿವಾಹವಾಗುವ ಇಚ್ಛೆ ವ್ಯಕ್ತಪಡಿಸಿದ್ದರಂತೆ. ನನ್ನನ್ನು ನೀವು ಉಪೇಕ್ಷಿಸಿ ಎಲ್ಲೂ ಹೋಗಬಾರದು ಹಾಗೊಂದು ವೇಳೆ ನನ್ನನ್ನ ಒಬ್ಬಂಟಿಯಾಗಿ ಬಿಟ್ಟು ಹೋದದ್ದೇ ಆದರೆ ನಾನು ನದಿಯಾಗಿ ಹರಿದುಹೋಗುವುದಾಗಿ ಹೇಳಿದ್ದಳು. ಕಾವೇರಿಯ (Maa Cauvery) ಷರತ್ತಿಗೆ ಒಪ್ಪಿದ ಅಗಸ್ತ್ಯ ಮುನಿಗಳು ಆಕೆಯನ್ನ ವಿವಾಹವಾಗಿ ತನ್ನ ಆಶ್ರಮಕ್ಕೆ ಕರೆದೊಯ್ದಿದ್ದರು.

ಒಂದು ದಿನ ಬೇಗ ಎದ್ದ ಅಗಸ್ತ್ಯ ಮುನಿಗಳು ನಿದ್ದೆಯಲ್ಲಿದ್ದ ಕಾವೇರಿಯನ್ನು ಹಾಗೇ ಬಿಟ್ಟು ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೋಗಿದ್ದರು. ಆದರೆ, ಎಚ್ಚರವಾದಾಗ ಸನಿಹದಲ್ಲಿ ಪತಿ ಇಲ್ಲದಿರುವುದನ್ನ ಕಂಡು ಕೋಪಗೊಂಡ ಕಾವೇರಿ, ಷರತ್ತು ಮೀರಿದ ಪತಿಯಿಂದ ದೂರವಾಗಿ ಅಲ್ಲೇ ಇದ್ದ ಕೊಳಕ್ಕೆ ಧುಮುಕಿ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರಿ, ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿದಳು ಎಂಬ ಪ್ರತೀತಿ ಇದೆ. ಹೀಗೆ ಲೋಕಕಲ್ಯಾಣಕ್ಕೆ ಹೊರಟ ಕಾವೇರಿ ಪ್ರತಿವರ್ಷ ತುಲಾ ಸಂಕ್ರಮಣದಂದು ಬ್ರಹ್ಮಕುಂಡಿಕೆಯಲ್ಲಿ ಜಲರೂಪಿಣಿಯಾಗಿ ದರ್ಶನ ನೀಡುತ್ತಾ ಬಂದಿದ್ದಾಳಂತೆ.

Cauvery Theerthodbhava 2

ತಲಕಾವೇರಿಯಲ್ಲಿ ಉಗಮವಾಗಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರ ಹರಿದು ಬಳಿಕ ರಾಜ್ಯದಲ್ಲಿ ಸುಮಾರು 381 ಕಿಮೀ ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿಮೀ ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುತ್ತಾಳೆ. ತಲಕಾವೇರಿಯಲ್ಲಿ ಬ್ರಹ್ಮಕುಂಡಿಕೆಯ ಪಕ್ಕದಲ್ಲಿಯೇ ಸ್ನಾನಕೊಳವಿದ್ದು, ನೂತನವಾಗಿ ವಿವಾಹವಾದವರು ಈ ಸ್ನಾನಕೊಳದಲ್ಲಿ ಕೈಕೈ ಹಿಡಿದು ನೀರಿನಲ್ಲಿ ಮೂರು ಬಾರಿ ಮುಳುಗಿ ತಲೆಗೆ ಪವಿತ್ರ ಜಲ ಹಾಕಿಸಿಕೊಂಡ್ರೆ ಜೀವನ ಪಾವನವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಅಗಸ್ತ್ಯೇಶ್ವರ ದೇವಾಲಯದ ಎಡಭಾಗದಲ್ಲಿರುವ ಬ್ರಹ್ಮಗಿರಿ ಬೆಟ್ಟವನ್ನೇರಲು ಸುಮಾರು 500 ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಈ ಮೆಟ್ಟಿಲೇರಿದ್ರೆ ಬ್ರಹ್ಮಗಿರಿಯ ಬೆಟ್ಟದ ಮೇಲ್ಭಾಗವನ್ನ ತಲುಪಬಹುದು. ಇಲ್ಲಿಂದ ನಿಂತು ನೋಡಿದ್ರೆ ಕಂಡುಬರುವ ನಿಸರ್ಗದ ಸುಂದರ ದೃಶ್ಯ ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಅಲ್ಲದೇ ಎದುರಿನ ಬಾಪುರೆ ಬೆಟ್ಟದಲ್ಲಿ ಕೆಟ್ಟು ನಿಂತ ಬೃಹತ್‌ಗಾಳಿ ಯಂತ್ರಗಳು ಸೋಜಿಗವನ್ನುಂಟು ಮಾಡುತ್ತವೆ. ಇನ್ನು ಭಾಗಮಂಡಲದಿಂದ ತಲಕಾವೇರಿಗೆ ತೆರಳುವ ರಸ್ತೆಯಲ್ಲಿ ಸಿಗುವ ವ್ಯೂ ಪಾಯಿಂಟ್, ಭೀಮನಕಲ್ಲು, ಸಲಾಂಕಟ್ಟೆ ಎಲ್ಲವೂ ಇತಿಹಾಸದ ಕಥೆ ಹೇಳುತ್ತವೆ.

Theerthodbhava at Talacauvery 2

ತೀರ್ಥೋದ್ಭವದ ಸಂದರ್ಭ ಹಿರಿಯರಿಗೆ ಪಿಂಡ ಪ್ರದಾನ ಮಾಡುವ ಕಾರ್ಯವೂ ನಡೆಯುತ್ತದೆ. ತುಲಾಸಂಕ್ರಮಣದ ಒಂದು ತಿಂಗಳ ಕಾಲ ಭಗಂಡೇಶ್ವರ ದೇವಾಲಯದ ಕೊಠಡಿಯೊಂದರಲ್ಲಿ ನಂದಾದೀಪ ಉರಿಸಲಾಗುತ್ತದೆ. ಭಕ್ತರು ತಾವು ತರುವ ತುಪ್ಪವನ್ನು ಈ ದೀಪಕ್ಕೆ ಹಾಕುತ್ತಾರೆ. ಹಾಗೆಯೇ ಅಕ್ಕಿಯನ್ನು ಕೂಡ ಇಲ್ಲಿನ ಅಕ್ಷಯ ಭಂಡಾರಕ್ಕೆ ಹಾಕಿ ತಮ್ಮ ಮನೆಯ ಕಣಜದಲ್ಲಿ ಸದಾ ಭತ್ತ ತುಂಬಿರುವಂತೆ ಬೇಡಿಕೊಳ್ಳುತ್ತಾರೆ. ಕಾವೇರಿ ತೀರ್ಥೋದ್ಭವದ ತುಲಾ ಸಂಕ್ರಮಣ ಜಾತ್ರೆಯಲ್ಲಿ ಎಲ್ಲರೂ ಭಾಗಿಯಾಗಿ ಸಂಭ್ರಮಿಸುತ್ತಾರೆ.

Thousands witness Cauvery Theerthodbhava at Talacauvery kodagu 1

ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ವರ್ಷಕ್ಕೊಮ್ಮೆ ತುಲಾ ಸಂಕ್ರಮಣದ ಪುಣ್ಯಕಾಲದಲ್ಲಿ ತೀರ್ಥರೂಪಿಣಿಯಾಗಿ ಉದ್ಭವಿಸಿ ತುಂಬಿ ಹರಿಯುವ ಕಾವೇರಿ ಮಾತೆಗೆ ವಿಶೇಷ ಮಹತ್ವ ಇದೆ. ಇದು ಕಾವೇರಿ ತುಲಾ ಸಂಕ್ರಮಣ ಜಾತ್ರೆ ಎಂದೇ ಜನಪ್ರಿಯ. ಕೊಡಗಿನವರಷ್ಟೇ ಅಲ್ಲದೆ ನಾಡಿನ ಹಾಗೂ ದೇಶ-ವಿದೇಶಗಳ ಜನರೆಲ್ಲಾ ಇಲ್ಲಿ ಆಗಮಿಸಿ ಕಾವೇರಿ ತೀರ್ಥದಲ್ಲಿ ಮುಳುಗೆದ್ದು ಪುನೀತರಾಗುವ ತುಲಾ ಸಂಕ್ರಮಣ ಜಾತ್ರೆಯನ್ನು ನೋಡುವುದೇ ಆನಂದ.

ಹಸಿರು ಕಾನನ, ಬೆಟ್ಟಗುಡ್ಡಗಳಿಂದ ಆವೃತಗೊಂಡು ಸದಾ ಮಂಜಿನ ಮುಸುಕಿನೊಂದಿಗೆ ಆಸ್ತಿಕ-ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನತ್ತ ಕೈಬೀಸಿ ಕರೆಯುವ ತಲಕಾವೇರಿಯ ಪ್ರಕೃತಿಯ ತಾಣದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಹರಿಯುವ ಮೂಲಕ ಭಕ್ತರನ್ನ ಪುನೀತಗೊಳಿಸುತ್ತಾಳೆ. ಮಡಿಕೇರಿಯಿಂದ 42 ಕಿ.ಮೀ. ದೂರದಲ್ಲಿರುವ ತಲಕಾವೇರಿ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು ಐದು ಸಾವಿರ ಅಡಿ ಎತ್ತರದಲ್ಲಿದೆ.

TAGGED:Cauvery TheerthodbhavaKodagumadikeriTalacauveryTheerthodbhavaಕೊಡಗುತಲಕಾವೇರಿತಲಕಾವೇರಿ ತೀರ್ಥೋದ್ಭವಮಡಿಕೇರಿಯದುವೀರ್ ಒಡೆಯರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
14 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
32 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
48 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
56 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?