Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಇನ್ನೊಂದು ವಾರದಲ್ಲಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ – ಹೇಗಿರಲಿದೆ ಆಡಳಿತ ವ್ಯವಸ್ಥೆ?

Public TV
Last updated: September 1, 2021 3:38 pm
Public TV
Share
2 Min Read
Taliban Occupy Afghan Presidential Palace afghanistan e1629170397468
SHARE

ಕಾಬೂಲ್: ಅಮೇರಿಕ ಸೇನೆ ಸಂಪೂರ್ಣ ಖಾಲಿ ಮಾಡಿದ್ದು ಇನ್ನೊಂದು ವಾರದಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಆಡಳಿತ ಆರಂಭವಾಗಲಿದೆ. ಸರ್ಕಾರ ರಚನೆಗೆ ತಾಲಿಬಾನ್ ಸಿದ್ದತೆ ಮಾಡಿಕೊಳ್ಳುತ್ತಿದ್ದು ಈ ಬಗ್ಗೆ ಹಿರಿಯ ನಾಯಕರು ರೂಪುರೇಷೆಗಳನ್ನು ಸಿದ್ದಪಡಿಸುತ್ತಿದ್ದಾರೆ.

ಅಫ್ಘಾನ್‍ನಲ್ಲಿ ಇರಾನ್ ಮಾದರಿ ಅಧ್ಯಕ್ಷೀಯ ಆಡಳಿತ ಜಾರಿ ಮಾಡುವ ಉದ್ದೇಶವನ್ನು ತಾಲಿಬಾನ್ ನಾಯಕರು ಹೊಂದಿದ್ದು, ದೇಶದ ರಾಜಕೀಯ ಮತ್ತು ಧಾರ್ಮಿಕ ನಿರ್ಧಾರಗಳಿಗೆ ಅಧ್ಯಕ್ಷರೇ ಸಾರ್ವಭೌಮರಾಗಲಿದ್ದಾರೆ ಎನ್ನಲಾಗಿದೆ. ಅಫ್ಘಾನ್ ಹೊಸ ಅಧ್ಯಕ್ಷರು ಕಂದಹಾರ್ ನಿಂದ ಕಾಬೂಲ್ ಆಡಳಿತವನ್ನು ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

taliban 1

ತಾಲಿಬಾನ್ ಉಗ್ರರ ಹೊಸ ಸರ್ಕಾರದಲ್ಲಿ ನ್ಯಾಯಾಂಗ, ಆಂತರಿಕ ಭದ್ರತೆ, ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಹಣಕಾಸು, ಮಾಹಿತಿ ಪ್ರಸಾರ ಸೇರಿ 26 ಇಲಾಖೆಯ ಕ್ಯಾಬಿನೆಟ್ ಇರಲಿದೆ. ಇದನ್ನು ನಿಭಾಯಿಸಲು ಪ್ರಧಾನಮಂತ್ರಿ ರೂಪದ ಹುದ್ದೆಯನ್ನು ಸೃಷ್ಟಿಸಲು ತಾಲಿಬಾನಿಗಳು ಚಿಂತಿಸಿದ್ದಾರಂತೆ.

ತಾಲಿಬಾನ್ ಸಂಘಟನೆಯ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡಜಾದ್ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಹಿಬತುಲ್ಲಾ ಅಖುಂಡಜಾದ್ ಆಪ್ತ ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಅಥವಾ ತಾಲಿಬಾನ್ ಮತ್ತೊರ್ವ ಮುಖಂಡ ಮುಲ್ಲಾ ಒಮರ್ ಪುತ್ರ ಮುಲ್ಲಾ ಯಾಕೂಬ್ ಪ್ರಧಾನಿಯಾಗುವ ಸಾಧ್ಯತೆ ಎನ್ನಲಾಗುತ್ತಿದೆ. ಕ್ಯಾಬಿನೆಟ್ ನಲ್ಲಿ ಶೇ.42 ರಷ್ಟಿರುವ ಪಶ್ತೂನ್‍ಗಳು ಸೇರಿ ಇತರೆ ಜಾತಿಗೂ ಅವಕಾಶ ಸಿಗಬಹುದು ಎಂದು ವರದಿಯಾಗಿದೆ.

Taliban

ಇತರೆ ದೇಶಗಳೊಂದಿಗೆ ಸ್ನೇಹ ಸೌಹಾರ್ದತೆ ಕಾಪಾಡಿಕೊಳ್ಳಲು ದೃಷ್ಟಿಯಿಂದ ವಿದೇಶಾಂಗ ವ್ಯವಹಾರಗಳಿಗೆ ತಾಲಿಬಾನ್ ವಿಶೇಷ ಆದ್ಯತೆ ನೀಡಬಹುದು. ಈಗಾಗಲೇ ತಾಲಿಬಾನ್ ಮುಖಂಡರ ಜೊತೆಗೆ ಭಾರತ, ಇರಾನ್, ಕತಾರ್, ಪಾಕಿಸ್ತಾನ, ಚೀನಾ ಸೇರಿದಂತೆ ಹಲವು ದೇಶಗಳಿಂದ ಮಾತುಕತೆ ನಡೆಸುತ್ತಿವೆ. ಪಾಕಿಸ್ತಾನದಲ್ಲಿ ಮಾಜಿ ತಾಲಿಬಾನ್ ರಾಜತಾಂತ್ರಿಕ ಮುಹಮ್ಮದ್ ಜಹೀದ್ ಅಹ್ಮದ್ಜಾಯಿ ವಿದೇಶಾಂಗ ಸಚಿವರಾಗುವ ಸಾಧ್ಯತೆ ಇದ್ದು 72 ದೇಶಗಳಲ್ಲಿ ರಾಯಭಾರಿ ಕಚೇರಿ ತೆರೆಯಲು ತಾಲಿಬಾನ್ ಚಿಂತಿಸಿದೆ. ಇದನ್ನೂ ಓದಿ : ದೋಹಾದಲ್ಲಿ ಭಾರತ-ತಾಲಿಬಾನಿಗಳ ಮೊದಲ ಔಪಚಾರಿಕ ಮಾತುಕತೆ

ಅಬ್ದುಲ್ ಹಕೀಂ ಹಕ್ಕಾನಿ ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇದೆ. ಭ್ರಷ್ಟಾಚಾರ, ಅಪರಾಧ ಕೃತ್ಯಗಳು ನಿಭಾಯಿಸಲು ಸ್ಥಳೀಯ ಮಟ್ಟದ ನ್ಯಾಯಲಯ ಸ್ಥಾಪನೆ ಮಾಡಲಿದ್ದು, ಸ್ಥಳೀಯ ಕೋರ್ಟ್‍ಗಳ ಮೂಲಕ ನ್ಯಾಯದಾನ ಮಾಡಲು ತಾಲಿಬಾನ್ ನಿರ್ಧಾರ ಮಾಡಿದೆಯಂತೆ.

TALIBAN 4

ರಾಷ್ಟ್ರೀಯ ಧ್ವಜ ಮತ್ತು ಸಂವಿಧಾನದ ಬಗ್ಗೆ ಇನ್ನು ತಾಲಿಬಾನಿಗಳು ಒಮ್ಮತಕ್ಕೆ ಬಂದಿಲ್ಲ. ಹಳೆ ಸಂವಿಧಾನ ಅಥವಾ ರಾಷ್ಟ್ರ ಧ್ವಜ ಮುಂದುವರಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು ಹೊಸ ಧ್ವಜ ಮತ್ತು ಸಂವಿಧಾನದ ಬಗ್ಗೆ ನೂತನ ಕ್ಯಾಬಿನೆಟ್‍ನಿಂದಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ. ಇದನ್ನೂ ಓದಿ : ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

ಅಫ್ಘಾನ್‍ನಲ್ಲಿ ಮಹಿಳೆಯರಿಗೂ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಹಿಳೆಯರ ಹಕ್ಕುಗಳ ಬಗ್ಗೆ ತಾಲಿಬಾನ್ ಚಿಂತನೆ ಮಾಡಿದೆ. ಮಹಿಳೆಯರ ಹಕ್ಕುಗಳ ವಿಚಾರದಿಂದ ಜಾಗತಿಕ ಮಟ್ಟದಲ್ಲಿ ವಿರೋಧ ವ್ಯಕ್ತವಾಗುವ ಹಿನ್ನಲೆಯಲ್ಲಿ ಶಿಕ್ಷಣ ಉದ್ಯೋಗಗಳಲ್ಲಿ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಷರಿಯತ್ ಕಾನೂನು ಅಡಿಯಲ್ಲಿ ಮಹಿಳೆಯರಿಗೆ ಅವಕಾಶಕ್ಕೆ ಚಿಂತನೆ ನಡೆದಿದ್ದು ಈ ಮೂಲಕ ತಾಲಿಬಾನ್ ಬದಲಾಗಿದೆ ಎಂದು ಸಾಬೀತುಪಡಿಸುವ ಪ್ರಯತ್ನವೂ ನಡೆಯಲಿದೆ ಎನ್ನಲಾಗುತ್ತಿದೆ.

TAGGED:afghanistanirankannada newsTalibanಅಫ್ಘಾನಿಸ್ತಾನಆಡಳಿತಇರಾನ್ಕಾಬೂಲ್ತಾಲಿಬಾನ್ತಾಲಿಬಾನ್ ಉಗ್ರಗಾಮಿಗಳು
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
8 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
21 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
23 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
1 day ago

You Might Also Like

Basavaraju Shivaganga Channagiri
Davanagere

ಹಳಬರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಸಚಿವ ಸ್ಥಾನ ಕೊಟ್ರೆ ಕೆಲಸ ಮಾಡ್ತಾರೆ: ಶಿವಗಂಗಾ ಬಸವರಾಜ್

Public TV
By Public TV
5 minutes ago
Koppal Reddy Bail celebration
Districts

ಜನಾರ್ದನ ರೆಡ್ಡಿಗೆ ಜಾಮೀನು – ಗಂಗಾವತಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Public TV
By Public TV
12 minutes ago
siddhivinayak temple udupi
Latest

ಉಡುಪಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ 21 ದಿನದಿಂದ ಕರೆಂಟ್ ಇಲ್ಲ- ಮೆಸ್ಕಾಂ ವಿರುದ್ಧ ಭಕ್ತರ ಅಸಮಾಧಾನ

Public TV
By Public TV
14 minutes ago
BK Hariprasad
Latest

ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

Public TV
By Public TV
41 minutes ago
AS Ponnanna 1
Bengaluru City

ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

Public TV
By Public TV
1 hour ago
ct ravi 3
Chikkamagaluru

ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?