Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

Bengaluru City

ಈಶ್ವರಪ್ಪ vs ಡಿಕೆಶಿ ವಾಕ್ಸಮರ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸದನದ ಕದನ

Public TV
Last updated: February 16, 2022 8:21 pm
Public TV
Share
3 Min Read
KS Eshwarappa dk shivakumar
SHARE

ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ಅಕ್ಷರಶಃ ರಣರಂಗವಾಗಿತ್ತು. ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪದ ವೇಳೆ ಈಶ್ವರಪ್ಪ ವರ್ಸಸ್ ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ವೈಯುಕ್ತಿಕ ವಾಕ್ಸಮರವೂ ನಡೆಯಿತು.

ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ ಹೋದ ಡಿಕೆಶಿ ಈಶ್ವರಪ್ಪಗೆ ಮಾತನಾಡಲು ಬಿಡಬೇಡಿ ಎಂದು ಹೇಳಿದ್ರು. ಆಗ ಸಿಟ್ಟಿಗೆದ್ದ ಈಶ್ವರಪ್ಪ ಸದನ ನಿಮ್ಮ ಅಪ್ಪನದ್ದಾ ಎಂದು ಪ್ರಶ್ನಿಸಿದ್ರು. ಆಗ ಸದನದಲ್ಲಿ ಗದ್ದಲ ಹೆಚ್ಚಾದಾಗ ಕಲಾಪವನ್ನು ಮುಂದೂಡಿದ್ದರೂ ಈಶ್ವರಪ್ಪ-ಡಿಕೆಶಿ ನಡುವೆ ಒಂದು ಹಂತಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಬಳಿಕ ಯಡಿಯೂರಪ್ಪ ಮಧ್ಯಪ್ರವೇಶದ ಬಳಿಕ ವಾತಾವರಣ ತಿಳಿಯಾಯ್ತು. ಇದನ್ನೂ ಓದಿ:  ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ

ಶೇಮ್‌ ಶೇಮ್‌ ಈಶ್ವರಪ್ಪ ಘೋಷಣೆ!: ಇವತ್ತು ಈಶ್ವರಪ್ಪ ಹೇಳಿಕೆ ವಿರುದ್ಧ ನಿಲುವಳಿ ಸೂಚನೆ ಮಂಡನೆಯ ಪ್ರಾಥಮಿಕ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ರು. ಈಶ್ವರಪ್ಪ 2006ರಿಂದಲೂ ಸಚಿವರಾಗಿದ್ದರು, ಅವರು ಜವಾಬ್ದಾರಿಯಿಂದ ಹೇಳಿಕೆ ಕೊಡ್ತಾರೆ ಅಂದ್ಕೊಂಡಿದ್ದೆ. ರಾಷ್ಟ್ರಧ್ವಜದ ಬಗ್ಗೆ ಬಹಳ ಅಗೌರವವಾಗಿ ಹೇಳಿಕೆ ಕೊಟ್ಟಿದ್ದಾರೆ. ಸಂವಿಧಾನದ ಆರ್ಟಿಕಲ್ 51(1) ಪ್ರಕಾರ ಪ್ರತಿಯೊಬ್ಬರು ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು. ಆದ್ರೆ ಕೆಂಪು ಕೋಟೆಯಲ್ಲೂ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ಐಪಿಸಿ ಪ್ರಕಾರ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ರೆ, ಸಂವಿಧಾನಕ್ಕೆ ಅಗೌರವ ಮಾಡಿದ್ರೆ, ರಾಷ್ಟ್ರಗೀತೆಗೆ ಅಗೌರವ ಮಾಡಿದ್ರೆ ಅದು ದೇಶ ದ್ರೋಹ. 3 ರಿಂದ 5 ವರ್ಷ ಜೈಲು ಶಿಕ್ಷೆ ಇದೆ. ಆದ್ರೆ ಈಶ್ವರಪ್ಪ ವಿರುದ್ಧ ಸರ್ಕಾರ ಏನೂ ಕ್ರಮ ತೆಗೆದುಕೊಂಡಿಲ್ಲ. ನನ್ನ ಪ್ರಕಾರ ಈಶ್ವರಪ್ಪ ಅವರನ್ನು ಮಂತ್ರಿಮಂಡಲದಿಂದ ಸಿಎಂ ಅಮಾನತು ಮಾಡಬೇಕಿತ್ತು. ಮಂತ್ರಿಯಾಗಿರಲು ಈಶ್ವರಪ್ಪ ಅರ್ಹರಲ್ಲ. ಮುಖ್ಯಮಂತ್ರಿಗಳೇ ಸ್ವಯಂಪ್ರೇರಿತರಾಗಿ ಅವರನ್ನ ಅಮಾನತು ಮಾಡಿ, ಮೊಕದ್ದಮೆ ದಾಖಲು ಮಾಡಿ ಎಂದು ಆಗ್ರಹಿಸಿದ್ರು. ಆಗ ಕಾಂಗ್ರೆಸ್ ಶಾಸಕರು ಶೇಮ್ ಶೇಮ್ ಈಶ್ವರಪ್ಪ ಎಂದು ಛೇಡಿಸಿದ್ರು.

ನೀನು ಜೈಲಿಗೆ ಹೋಗಿ ಬಂದವನು!: ಆದ್ರೆ ಸಿದ್ದರಾಮಯ್ಯ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಕಾನೂನು ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದ್ರು. ಭಗವದ್ ಧ್ವಜ ಹಾರಿಸಬಹುದು ಅಂತಾ ಹೇಳಿದ್ದಾರೆ, ನಾನೇ ಹಾರಿಸುತ್ತೇನೆ ಅಂತಾ ಹೇಳಿಲ್ಲ. ಕೆಂಪು ಕೋಟೆ ಮೇಲೆ ಧ್ವಜ ಹಾರಿಸುತ್ತೇನೆ ಅಂದಿಲ್ಲ. ಈಶ್ವರಪ್ಪ ಎಲ್ಲಿ ಅಪಮಾನ ಮಾಡಿದ್ದಾರೆ..? ಬಂದೂಕು ಕೈಯಲ್ಲಿ ಕೊಟ್ಟು ಬಾವುಟ ಹಾರಿಸಬೇಡಿ ಅಂದಾಗ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಹುಬ್ಬಳ್ಳಿಯಿಂದ ಕಾಶ್ಮೀರದವರೆಗೆ ಬಾವುಟ ಹಾರಿಸಿದ ಪಕ್ಷ ಬಿಜೆಪಿ. ಈಶ್ವರಪ್ಪ ಹೇಗೆ ದೇಶ ದ್ರೋಹಿ ಆಗ್ತಾರೆ..? ಇದು ನಿಲುವಳಿ ಸೂಚನೆ ವ್ಯಾಪ್ತಿಗೆ ಬರಲ್ಲ, ತಿರಸ್ಕಾರ ಮಾಡಿ ಎಂದು ಮಾಧುಸ್ವಾಮಿ ಮನವಿ ಮಾಡಿದ್ರು. ಆಗ ಈಶ್ವರಪ್ಪ ದೇಶದ್ರೋಹಿ ಅಂತಾ ಡಿಕೆಶಿ ಕೂಗಿದ್ದೇ ತಡ ಎದ್ದು ನಿಂತ ಈಶ್ವರಪ್ಪ ಆಕ್ರೋಶ ಹೊರ ಹಾಕಿದ್ರು. ನಾನಲ್ಲ ರಾಷ್ಟ್ರದ್ರೋಹಿ. ನೀನು. ನೀನು ಜೈಲಿಗೆ ಹೋಗಿ ಬಂದವನು, ಬೇಲ್‌ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ. ನೀನು ನನಗೆ ಹೇಳಬೇಡ ಅಂತಾ ಡಿ.ಕೆ.ಶಿ ವಿರುದ್ಧ ಏಕವಚನದಲ್ಲಿ ವಾಕ್ಸಮರ ನಡೆಸಿದ್ರು.

BSY ಸಮಾಧಾನ: ಆ ವೇಳೆ ಈಶ್ವರಪ್ಪ ಮಾತನಾಡುವ ಮೊದಲು ಚರ್ಚೆಗೆ ಅವಕಾಶ ಕೊಡಿ ಅಂತಾ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಆ ವೇಳೆ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಬಳಿಗೆ ಹೋಗಿ ಈಶ್ವರಪ್ಪಗೆ ಅವಕಾಶ ಕೊಡಬೇಡಿ ಅಂದ್ರು. ತಕ್ಷಣವೇ ಸಿಟ್ಟಿಗೆದ್ದ ಈಶ್ವರಪ್ಪ ನಿಮ್ಮಪ್ಪನದಾ ಸದನ ಅಂತಾ ಡಿಕೆಶಿ ವಿರುದ್ಧ ಗರಂ ಆದ್ರು. ಹಾಗೆ ಹೇಳಿದ್ದೇ ತಡ ಡಿಕೆಶಿ ಸದನದ ಬಾವಿಗಿಳಿದು ಈಶ್ವರಪ್ಪ ಬಳಿ ಹೋಗಿ ಮಾತಿನ ಚಕಮಕಿ ನಡೆಸಿದ್ರು. ಆಗ ಸ್ಪೀಕರ್ ಕಲಾಪವನ್ನ ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ರು. ಆದರೂ ಸದನದ ಬಾವಿಯಿಂದಲೇ ಈಶ್ವರಪ್ಪ ಜೊತೆ ಡಿಕೆಶಿ, ಕಾಂಗ್ರೆಸ್ ಶಾಸಕರು ವಾಗ್ವಾದಕ್ಕಿಳಿದಿದ್ದರು. ಕಡೆಗೆ ಯಡಿಯೂರಪ್ಪ ಬಂದು ಎರಡು ಕಡೆಯ ಶಾಸಕರನ್ನು ಸಮಾಧಾನಪಡಿಸಿದ್ರು.

TAGGED:bengaluruDK ShivakumareshwarappaKarnataka Assemblynational flagಈಶ್ವರಪ್ಪಈಶ್ವರಪ್ಪ ಡಿಕೆಶಿ ವಾಕ್ಸಮರಕರ್ನಾಟಕ ವಿಧಾನಸಭೆಡಿಕೆ ಶಿವಕುಮಾರ್ಬೆಂಗಳೂರುರಾಷ್ಟ್ರಧ್ವಜ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
1 hour ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
2 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
3 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
3 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
4 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?