ದಾವಣಗೆರೆ: ಟಾಕಿಸ್ ಒಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಪೀಠೋಪಕರಣಗಳು ಭಸ್ಮವಾದ ಘಟನೆ ಹರಿಹರ (Harihara) ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.
ಕಳೆದ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶ ಚಿತ್ರಮಂದಿರದಲ್ಲಿ ಈ ಅವಘಡ ಸಂಭವಿಸಿದೆ. ಇದರಿಂದ ಆಸನಗಳು ಸೇರಿದಂತೆ ಹಲವು ಪರಿಕರಗಳು ಸುಟ್ಟು ಭಸ್ಮವಾಗಿದೆ. ಇದರಿಂದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿದೆ. ಇದರಿಂದ ಆತಂಕಕ್ಕೊಳಗಾದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
- Advertisement
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರಮಂದಿರ ಬಂದ್ ಆಗಿದ್ದರಿಂದ ಅಲ್ಲಿ ಯಾರೂ ಜನ ಇರಲಿಲ್ಲ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.