ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ!

Public TV
1 Min Read
MNG KALLU THORDE AV

ಮಂಗಳೂರು: ಬಿಜೆಪಿ ವಿಜಯೋತ್ಸವದ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ಕರಾವಳಿ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಅಡ್ಯಾರ್ ಪದವು ಮಸೀದಿ ಬಳಿ ಈ ಘಟನೆ ನಡೆದಿದ್ದು, ಭಿನ್ನಕೋಮಿನ ಯುವಕರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗುವೆ.

ಘಟನೆಯಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

vlcsnap 2018 05 16 08h02m16s95

ಸುಮಾರು 50ಕ್ಕೂ ಅಧಿಕ ಯುವಕರಿಂದ ಈ ದಾಳಿ ನಡೆದಿದೆ. ಘಟನೆಯಲ್ಲಿ ಹಿಂದೂ ಧಾರ್ಮಿಕ ಕೇಂದ್ರದ ಮೇಲೆಯೂ ಕಲ್ಲು ತೂರಾಟ ಮಾಡಲಾಗಿದೆ. ಒಟ್ಟಿನಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಈ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *