ತಮಿಳು ಸಿನಿಮಾಗಳ (Tamil Films) ಮೂಲಕ ಗುರುತಿಸಿಕೊಂಡಿರುವ ನಟ ವಿಶಾಲ್ (Vishal) ಮತ್ತೆ ಸುದ್ದಿಯಲ್ಲಿದ್ದಾರೆ. ವಿಶಾಲ್ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಇದೀಗ ಈ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಟನ ಮನೆಯ ಗಾಜು ಕೂಡ ಒಡೆದಿದೆ.
ಚೆನ್ನೈನ ಅಣ್ಣಾ ನಗರ್ ಪ್ರದೇಶದಲ್ಲಿ ವಿಶಾಲ್ ನಿವಾಸದಲ್ಲಿ (ಸೆ.26)ರಂದು ರಾತ್ರಿ ಕೆಂಪು ಬಣ್ಣದ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಲ್ಲು ಎಸೆದಿದ್ದಾರೆ. ಈ ವೇಳೆ ವಿಶಾಲ್ ಅವರು ಮನೆಯಲ್ಲಿ ಇರಲಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇದನ್ನೂ ಓದಿ:ಅನುಚಿತವಾಗಿ ವರ್ತಿಸಿದ ಅಭಿಮಾನಿಗೆ ನಟಿ ಸಾನಿಯಾ ದಂಡಂ ದಶಗುಣಂ
ನಟನ ಮನೆಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದರಿಂದ ಮನೆಯ ಕಿಟಕಿ ಗಾಜು ಒಡೆದು ಹೋಗಿದ್ದು, ಅದರ ಫೋಟೋ ಕೂಡ ವೈರಲ್ ಆಗಿದೆ. ವಿಶಾಲ್ ಮ್ಯಾನೇಜರ್ ಹರಿಕೃಷ್ಣ ಅವರು ಅಣ್ಣಾ ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಲ್ಲು ತೂರಾಟದ ಕೃತ್ಯವನ್ನು ಅಭಿಮಾನಿಗಳು ಖಂಡಿಸಿದ್ದಾರೆ. ಅಪರಾಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಹೇರಲಾಗುತ್ತಿದೆ. ತಮ್ಮ ಪಾಡಿಗೆ ತಾವು ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಿರುವ ನಟನ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು ಯಾಕೆ ಎಂಬ ಪ್ರಶ್ನೆ ಇದೀಗ ಅಭಿಮಾನಿಗಳಲ್ಲಿ ಮೂಡಿದೆ.