Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೇಕೆದಾಟು ಯೋಜನೆ ಅಸ್ತು- ತಡೆಕೋರುವಂತೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

Public TV
Last updated: November 27, 2018 7:20 pm
Public TV
Share
3 Min Read
MODI PALANISWAMY
SHARE

ಚೆನ್ನೈ: ಮೇಕೆದಾಟು ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಒಪ್ಪಿಗೆ ಸೂಚಿಸಿದ್ದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡು ವಿರೋಧದ ನಡುವೆಯೂ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿತ್ತು. ಅಲ್ಲದೇ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ಮಾಡಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಮತ್ತೆ ಕ್ಯಾತೆ ಎತ್ತಿದೆ.

modi palaniswami 647 022417092324 0

ಕೇಂದ್ರ ಜಲಸಂಪನ್ಮೂಲ ಇಲಾಖೆ ಯೋಜನೆಗೆ ಅಸ್ತು ಎಂದ ಬೆನ್ನಲ್ಲೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮೇಕೆದಾಟು ಯೋಜನೆಯನ್ನು ತಡೆ ಹಿಡಿಯುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ಸೂಚಿಸಿದೆ. ಆದರೆ ಇದು ತಮಿಳುನಾಡು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯನ್ನು ಕರ್ನಾಟಕ ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿಲ್ಲ. ಇದರಿಂದಾಗಿ ಕಾವೇರಿ ಜಲಾನಯನ ಪ್ರದೇಶಕ್ಕೂ ಹಾನಿಯಾಗುತ್ತದೆ. ಇದಲ್ಲದೇ ಕಾವೇರಿ ನ್ಯಾಯಾಧೀಕರಣ ವಿರುದ್ಧದ ನಿಲುವಾಗಿದೆ. ಹೀಗಾಗಿ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

mekedatu 2

ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ. ಇದನ್ನೂ ಓದಿ: ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ

KRS 3

ತಮಿಳುನಾಡು ವಿರೋಧ ಯಾಕೆ?
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧೀಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು.

2007ರಲ್ಲಿ ನ್ಯಾಯಾಧೀಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈಗ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

mekedatu

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Central GovernmentchennaiCM Palaniswamymekedatu projectPublic TVtamilnaduಕೇಂದ್ರ ಸರ್ಕಾರಚೆನ್ನೈತಮಿಳುನಾಡುಪಬ್ಲಿಕ್ ಟಿವಿಮುಖ್ಯಮಂತ್ರಿ ಪಳನಿಸ್ವಾಮಿಮೇಕೆದಾಟು ಯೋಜನೆ
Share This Article
Facebook Whatsapp Whatsapp Telegram

Cinema news

Ashwini Gowda Gilli
ಮಾಜಿ ಸ್ಪರ್ಧಿಗಳೆದುರು ಗಿಲ್ಲಿ ಬೆನ್ನಿಗೆ ನಿಂತ ಅಶ್ವಿನಿ ಗೌಡ
Cinema Latest Sandalwood Top Stories
Tiger Shroff Cinema Bollywood
ಮಸ್ತಿ-4 ನಿರ್ದೇಶಕನ ಜೊತೆ ಕೈಜೋಡಿಸಿದ ಟೈಗರ್ ಶ್ರಾಫ್?
Bollywood Cinema Latest Top Stories
Devara
ಜೂ.ಎನ್‌ಟಿಆರ್ ನಟನೆಯ ದೇವರ ಪಾರ್ಟ್-2 ನಿಂತೋಯ್ತಾ..?
Bollywood Cinema Districts Karnataka Latest Top Stories
pawan kalyan OG
ಪವನ್‌ ಕಲ್ಯಾಣ್ ಸಿನಿಮಾಗಳು ಸಾಲು ಸಾಲು ಸೋಲು – ಓಜಿ ಪಾರ್ಟ್-2ಗೆ ಸ್ಟಾರ್ಟ್ ಆಗಲ್ವಾ?
Cinema Latest Top Stories

You Might Also Like

siddaramaiah 1 5
Bengaluru City

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡಯಾತ್ರೆ

Public TV
By Public TV
31 minutes ago
kedarnath temple modi
Districts

ಉಡುಪಿ ಕಾರ್ಯಕ್ರಮಕ್ಕೆ ಭಾಗವಹಿಸುವ ಅವಕಾಶ ಸಿಕ್ಕಿದ್ದು ಗೌರವದ ವಿಷಯ: ಮೋದಿ

Public TV
By Public TV
43 minutes ago
Bengaluru University UT Khader
Bengaluru City

ಸ್ಪೀಕರ್ ಯು.ಟಿ.ಖಾದರ್‌ಗೆ ಬೆಂವಿವಿ ಗೌರವ ಡಾಕ್ಟರೇಟ್ – ರಾಜ್ಯಪಾಲರಿಂದ ಪ್ರದಾನ

Public TV
By Public TV
1 hour ago
DK Shivakumar Siddaramaiah
Bengaluru City

ಬೀದಿಗೆ ಬಿದ್ದ ಕುರ್ಚಿ ಕದನ – ನೇರಾನೇರ ಗುದ್ದಾಟಕ್ಕೆ ಇಳಿದ್ರಾ ಸಿದ್ದರಾಮಯ್ಯ, ಡಿಕೆಶಿ?

Public TV
By Public TV
1 hour ago
online fraud arrest
Crime

ಆನ್‌ಲೈನ್ ಮೂಲಕ 20 ಲಕ್ಷ ವಂಚನೆ; ಬೆಂಗಳೂರು ಮೂಲದ ದಂಪತಿ ಅರೆಸ್ಟ್‌

Public TV
By Public TV
2 hours ago
Montha Cyclone
Latest

ಬಂಗಾಳ ಕೊಲ್ಲಿಯಲ್ಲಿ `ದಿತ್ವಾಹ್’ ಚಂಡಮಾರುತ – ನ.30ಕ್ಕೆ ತಮಿಳುನಾಡು, ಆಂಧ್ರ, ಪುದುಚೇರಿ ತಲುಪುವ ಸಾಧ್ಯತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?