Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ಯೋಜನೆ ಅಸ್ತು- ತಡೆಕೋರುವಂತೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೇಕೆದಾಟು ಯೋಜನೆ ಅಸ್ತು- ತಡೆಕೋರುವಂತೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

Latest

ಮೇಕೆದಾಟು ಯೋಜನೆ ಅಸ್ತು- ತಡೆಕೋರುವಂತೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

Public TV
Last updated: November 27, 2018 7:20 pm
Public TV
Share
3 Min Read
MODI PALANISWAMY
SHARE

ಚೆನ್ನೈ: ಮೇಕೆದಾಟು ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಒಪ್ಪಿಗೆ ಸೂಚಿಸಿದ್ದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡು ವಿರೋಧದ ನಡುವೆಯೂ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿತ್ತು. ಅಲ್ಲದೇ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ಮಾಡಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಮತ್ತೆ ಕ್ಯಾತೆ ಎತ್ತಿದೆ.

modi palaniswami 647 022417092324 0

ಕೇಂದ್ರ ಜಲಸಂಪನ್ಮೂಲ ಇಲಾಖೆ ಯೋಜನೆಗೆ ಅಸ್ತು ಎಂದ ಬೆನ್ನಲ್ಲೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮೇಕೆದಾಟು ಯೋಜನೆಯನ್ನು ತಡೆ ಹಿಡಿಯುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ಸೂಚಿಸಿದೆ. ಆದರೆ ಇದು ತಮಿಳುನಾಡು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯನ್ನು ಕರ್ನಾಟಕ ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿಲ್ಲ. ಇದರಿಂದಾಗಿ ಕಾವೇರಿ ಜಲಾನಯನ ಪ್ರದೇಶಕ್ಕೂ ಹಾನಿಯಾಗುತ್ತದೆ. ಇದಲ್ಲದೇ ಕಾವೇರಿ ನ್ಯಾಯಾಧೀಕರಣ ವಿರುದ್ಧದ ನಿಲುವಾಗಿದೆ. ಹೀಗಾಗಿ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

mekedatu 2

ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ. ಇದನ್ನೂ ಓದಿ: ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ

KRS 3

ತಮಿಳುನಾಡು ವಿರೋಧ ಯಾಕೆ?
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧೀಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು.

2007ರಲ್ಲಿ ನ್ಯಾಯಾಧೀಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈಗ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

mekedatu

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Central GovernmentchennaiCM Palaniswamymekedatu projectPublic TVtamilnaduಕೇಂದ್ರ ಸರ್ಕಾರಚೆನ್ನೈತಮಿಳುನಾಡುಪಬ್ಲಿಕ್ ಟಿವಿಮುಖ್ಯಮಂತ್ರಿ ಪಳನಿಸ್ವಾಮಿಮೇಕೆದಾಟು ಯೋಜನೆ
Share This Article
Facebook Whatsapp Whatsapp Telegram

Cinema news

Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema
gilli Ashwini Gowda BBK12
ಕೆಲ್ಸ ಮಾಡದೇ ಕೆಲ್ಸ ಮಾಡ್ಸೋಕೆ ನಿಂತ ಗಿಲ್ಲಿ – ಕಿಚನ್ ವಾರ್‌ನಲ್ಲಿ ಕ್ಯಾಪ್ಟನ್‌ Vs ಅಶ್ವಿನಿ
Cinema Latest Sandalwood Top Stories TV Shows
Alpha Men Love Violence Rawa Rawa Video Song released Hemanth Kumar Anand Kumar Vijay Anoop Seelin J 2
ಆಲ್ಫಾ ಚಿತ್ರದ ರಾವ ರಾವ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Sandalwood
1 1
ಹಿನ್ನೋಟ: ಧುರಂಧರ್‌, ಕಾಂತಾರದಿಂದ ಹೌಸ್‌ಫುಲ್‌ವರೆಗೆ – 2025ರಲ್ಲಿ ತೆರೆಕಂಡ 10 ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾಗಳಿವು!
Cinema Latest Main Post Special

You Might Also Like

MQ 9B Sea Guardian Drones
Latest

ಸಶಸ್ತ್ರ ಪಡೆಗಳ ಸಾಮರ್ಥ್ಯ ಬಲಪಡಿಸಲು ಮುಂದಾದ ಸರ್ಕಾರ – 79,000 ಕೋಟಿ ಮೌಲ್ಯದ ಪ್ರಸ್ತಾವನೆಗೆ ಅಸ್ತು

Public TV
By Public TV
19 seconds ago
Dr. Shalini Rajneesh the Chief Secretary of Karnataka recently participated in the 5th National Conference of Chief Secretaries
Bengaluru City

5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ – ಏಕೈಕ ಮಹಿಳಾ ಅಧಿಕಾರಿಯಾಗಿ ಕರ್ನಾಟಕ ಪ್ರತಿನಿಧಿಸಿದ ಶಾಲಿನಿ ರಜನೀಶ್

Public TV
By Public TV
11 minutes ago
Street Dog
Latest

ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ `ರಾಯ್ತಾ’ ತಯಾರಿ – ಸೇವಿಸಿದ್ದ 200 ಜನಕ್ಕೆ ರೇಬೀಸ್ ಲಸಿಕೆ

Public TV
By Public TV
48 minutes ago
DVG DRUGS ARREST
Crime

ದಾವಣಗೆರೆಯಲ್ಲಿ ಮಾದಕ ಮಾರ್ಜಾಲ – ಸಚಿವರ ಆಪ್ತರ ಬಂಧನ

Public TV
By Public TV
58 minutes ago
pub party
Bengaluru City

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಗೈಡ್‌ಲೈನ್ಸ್ – ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ

Public TV
By Public TV
2 hours ago
Tourists coming to Chikkamagaluru for New Year celebrations Temporary restrictions on 22 tourist spots 1
Chikkamagaluru

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?