ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಸಹಕಾರಿ ಬ್ಯಾಂಕ್ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ.
ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ 50 ಸಾವಿರ ರೂಪಾಯಿವರೆಗಿನ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತದೆ. ಇನ್ನು ದೊಡ್ಡ ರೈತರಿಗೆ 5 ಸಾವಿರ ರೂಪಾಯಿವರೆಗೆ ಸಾಲ ಪರಿಹಾರ ನೀಡಲಾಗುತ್ತದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೃಷಿ ವೆಚ್ಚ ಮತ್ತು ಸಾಲದ ಒತ್ತಡದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಈ ಯೋಜನೆಯಿಂದ ಸುಮಾರು 14.22 ಲಕ್ಷ ರೈತರಿಗೆ ಲಾಭವಾಗಲಿದ್ದು, ಸರ್ಕಾರ 2,044 ಕೋಟಿ ರೂಪಾಯಿ ವೆಚ್ಚ ಮಾಡಲಿದೆ ಎಂದು ಮುಖ್ಯಮಂತ್ರಿ ವಿಜಯ್ ತಿಳಿಸಿದ್ದಾರೆ.
ಇದೇ ವೇಳೆ, ಕರ್ನಾಟಕದ ಮೇಕೆದಾಟು ಯೋಜನೆ ಕುರಿತು ಮುಖ್ಯಮಂತ್ರಿ ವಿಜಯ್ ಉನ್ನತ ಮಟ್ಟದ ಸಭೆ ನಡೆಸಿದರು. ಕಾವೇರಿ ನೀರಿನ ಹಕ್ಕು ರಕ್ಷಣೆಗಾಗಿ ಕಾನೂನು ಹೋರಾಟವನ್ನು ಮತ್ತಷ್ಟು ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
